ಪಾಳು ಮನೆಯಲ್ಲಿ ಅಪ್ರಾಪ್ತೆಯ ಭೀಕರ ಕೊಲೆ: ಭಾವಿ ಪತಿಯಿಂದಲೇ ನಡೀತು ಹತ್ಯೆ!; ಕಾರಣ ನಿಗೂಢ
ಬೆಂಗಳೂರು/ ಗದಗ, ಮಾರ್ಚ್ 17: ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನೇ ವ್ಯಕ್ತಿಯೋರ್ವ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಡೆದಿದೆ. ಯುವತಿ ಜೋಯಾಯಳ ಕತ್ತುಕೊಯ್ದು ಕೊಂದು ಶಬೀಲ್(20) ಪರಾರಿಯಾಗಿದ್ದು, ಬೆಳಗ್ಗೆ 6.30ರ ಸುಮಾರಿಗೆ ಘಟನೆ ನಡೆದಿದೆ. ಆರೋಪಿ ಶಬೀಲ್ ಕುಟುಂಬ ಸದಸ್ಯರಿಂದಲೇ ಪ್ರಕರಣ ಬೆಳಕಿಗೆ ಬಂದಿದ್ದು, ಡಿ.ಜೆ.ಹಳ್ಳಿ ಠಾಣೆ ಪೊಲೀಸರಿಂದ ಆರೋಪಿ ಶಬೀಲ್ಗಾಗಿ ಶೋಧ ಮುಂದುವರಿದಿದೆ. ಬಾಲಕಿ ಹತ್ಯೆಯಾಗಿರುವ ಬಗ್ಗೆ ಬೆಳಗ್ಗೆ 11 ಗಂಟೆಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಘಟನೆ ಬಗ್ಗೆ…