ಬೆಂಗಳೂರಲ್ಲಿ ವರುಣಾರ್ಭಟ: ನಗರದ ಹಲವೆಡೆ ಧಾರಾಕಾರ ಮಳೆ; ಸಂಚಾರ ಅಸ್ತವ್ಯಸ್ತ – Kannada News | Bengaluru Rain: Heavy Downpour Lashes Several Parts of City, Triggers Major Traffic Congestion

ಬೆಂಗಳೂರು, ಜೂನ್​​ 13: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ (Karnataka) ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಸಿಲಿಕಾನ್​ ಸಿಟಿಯ ವಾತಾವರಣ ಸಂಪೂರ್ಣ ಬದಲಾಗಿದೆ. ಸಂಜೆಯಾಗುತ್ತಿದ್ದಂತೆ ನಗರದ ಹಲವೆಡೆ ಧಾರಾಕಾರ ಮಳೆ (Rain) ಆರಂಭವಾಗಿದ್ದು, ಸಾರ್ವಜನಿಕರ ಜನಜೀವನ ಮತ್ತು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇನ್ನು ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಜಾಮ್​​ ಕೂಡ ಉಂಟಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ
  • ಮಳೆಯಿಂದ ಮಂದಗತಿಯಲ್ಲಿ ವಾಹನಗಳ ಸಂಚಾರ
  • ಫ್ಲೈಓವರ್, ಸ್ಕೈವಾಕ್ ಕೆಳಗೆ ಆಶ್ರಯ ಪಡೆದ ಸವಾರರು

ಎಲ್ಲೆಲ್ಲಿ ಮಳೆ?

ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್, ಕೋರಮಂಗಲ, ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಜಯನಗರ, ಜೆ.ಪಿ. ನಗರ, ಶಿವಾನಂದ ಸರ್ಕಲ್, ಗಾಂಧಿನಗರ ಬಜಾರ್, ಲಾಲ್ ಬಾಗ್, ಚಿಕ್ಕಪೇಟೆ ಸುತ್ತಮುತ್ತ ಮತ್ತು ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಮಳೆರಾಯ ಆರ್ಭಟಿಸಿದೆ. ಮಳೆಯಿಂದಾಗಿ ಗಾಂಧಿ ಬಜಾರ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಇದನ್ನೂ ಓದಿ: Karnataka Weather Forecast: ನಾಳೆಯಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣದ್ದೇ ಹಾವಳಿ!

ಮಳೆಯ ತೀವ್ರತೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನಗಳ ಸಂಚಾರ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ದಿಢೀರ್‌ ಆರಂಭವಾದ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಆಶ್ರಯಕ್ಕಾಗಿ ಫ್ಲೈ ಓವರ್‌ಗಳು ಮತ್ತು ಬಸ್ ನಿಲ್ದಾಣಗಳ ಕೆಳಗೆ ಆಶ್ರಯ ಪಡೆದಿರುವುದು ಕಂಡುಬಂತು.

ಇನ್ನು ನಿನ್ನೆ ತಡರಾತ್ರಿ ಕೂಡ ನಗರದಲ್ಲಿ ಸುರಿದ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿತ್ತು. ಎಲೆಕ್ಟ್ರಾನಿಕ್ ಸಿಟಿಯಲ್ಲಿ ರಾತ್ರಿ ಸುರಿದ ಮಳೆಗೆ ಬೆಂಗಳೂರು-ಹೊಸೂರು ರಸ್ತೆಯಲ್ಲಿ ಸಂಪೂರ್ಣವಾಗಿ ನೀರು ನಿಂತಿತ್ತು. ರಸ್ತೆ ಮೇಲೆ ನೀರು ನದಿಯಂತೆ ಹರಿದಿತ್ತು. ಹೆಣ್ಣೂರು-ಬಾಗಲೂರು ರಸ್ತೆಯೂ ಜಲಾವೃತವಾಗಿತ್ತು. ನ್ಯೂ ಏರ್ ರ್ಪೋರ್ಟ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

ರೈತರ ಮೊಗದಲ್ಲಿ ಮಂದಹಾಸ

ಇತ್ತ ಬೆಂಗಳೂರು ದಕ್ಷಿಣ ಜಿಲ್ಲೆ ರೇಷ್ಮೆನಗರಿ ರಾಮನಗರದಲ್ಲೂ ಧಾರಾಕಾರ ಮಳೆ ಸುರಿದಿದೆ. ಅರ್ಧಗಂಟೆ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವರದಿ: ನಟರಾಜ್​​ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 6:16 pm, Sat, 13 June 26

Source link

ಅಭಿಷೇಕ್ ಬ್ಯಾನರ್ಜಿ ನನ್ನ ಮಗನಿದ್ದಂತೆ; ಯು-ಟರ್ನ್ ಹೊಡೆದ ಕಲ್ಯಾಣ್ ಬ್ಯಾನರ್ಜಿ – Kannada News | Abhishek Banerjee is Like my son TMC Leader Kalyan Banerjees takes U turn

ನವದೆಹಲಿ, ಜೂನ್ 13: ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹಿರಿಯ ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee) ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ನಿನ್ನೆಯಷ್ಟೇ ವಾಗ್ದಾಳಿ ನಡೆಸಿದದರು. ನಿಮಗೆ ನಾನು ಬೇಕಾ ಅಥವಾ ಅಭಿಷೇಕ್ ಬ್ಯಾನರ್ಜಿ ಬೇಕಾ ಎಂದು ನಿರ್ಧರಿಸಿ ಎಂದು ಮಮತಾ ಬ್ಯಾನರ್ಜಿಗೆ ಸವಾಲು ಹಾಕಿದ್ದರು. ಆದರೆ, ಇಂದು ಯು-ಟರ್ನ್ ಹೊಡೆದಿರುವ ಅವರು ಅಭಿಷೇಕ್ ಬ್ಯಾನರ್ಜಿ ನನ್ನ ಮಗನಿದ್ದಂತೆ. ಆತ ತಪ್ಪು ಮಾಡಿದಾಗ ಕ್ಷಮಿಸುವುದು ನನ್ನ ಕರ್ತವ್ಯ ಎಂದಿದ್ದಾರೆ. ನಿನ್ನೆ ಅಭಿಷೇಕ್ ಬ್ಯಾನರ್ಜಿ ಕೂಡ ಕಲ್ಯಾಣ್ ಬ್ಯಾನರ್ಜಿಯ ಆರೋಪಗಳಿಗೆ ಪ್ರತಿಕ್ರಿಯಿಸುತ್ತಾ, ಕಲ್ಯಾಣ್ ಬ್ಯಾನರ್ಜಿ ನನ್ನ ತಂದೆಯಿದ್ದಂತೆ. ನಾನು ತಪ್ಪು ಮಾಡಿದಾಗ ಗದರುವ ಹಕ್ಕು ಅವರಿಗಿದೆ ಎಂದಿದ್ದರು.

ಟಿಎಂಸಿ ಪಕ್ಷದೊಳಗೆ ಆಂತರಿಕ ಭಿನ್ನಮತ ಹೆಚ್ಚಾಗುತ್ತಿದೆ ಎಂಬ ವರದಿಗಳ ನಡುವೆ ಇಂದು ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ ಕಲ್ಯಾಣ್ ಬ್ಯಾನರ್ಜಿ, “ಅಭಿಷೇಕ್ ನನ್ನ ಮಗನಿದ್ದಂತೆ. ಮಗ ಮಾಡುವ ಎಲ್ಲಾ ತಪ್ಪುಗಳನ್ನು ಕ್ಷಮಿಸುವುದು ತಂದೆಯ ಕೆಲಸ” ಎಂದು ಹೇಳಿದ್ದಾರೆ. ಈ ಮೂಲಕ ತಾವು ರಾಜಿಯಾಗಿದ್ದೇವೆ ಎಂದು ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ನಾನು ಬೇಕಾ, ಅಭಿಷೇಕ್ ಬ್ಯಾನರ್ಜಿ ಬೇಕಾ ನಿರ್ಧರಿಸಿ; ಮಮತಾಗೆ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಸವಾಲು

ನಿನ್ನೆ ಮಾತನಾಡಿದ್ದ ಕಲ್ಯಾಣ್ ಬ್ಯಾನರ್ಜಿ, “ಅಭಿಷೇಕ್ ಅಹಂಕಾರದ ವ್ಯಕ್ತಿ. ಅವನಿಂದಾಗಿಯೇ ಇಂದು ಪಕ್ಷವು ನಾಶವಾಗುತ್ತಿದೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಪ್ರತಿಯೊಬ್ಬರೂ ಇದನ್ನೇ ಹೇಳುತ್ತಿದ್ದಾರೆ. ನಾನು ಬೇಕಾ ಅಥವಾ ಅಭಿಷೇಕ್ ಬೇಕಾ ಎಂದು ಮಮತಾ ಬ್ಯಾನರ್ಜಿ ನಿರ್ಧರಿಸಬೇಕು” ಎಂದು ಕಲ್ಯಾಣ್ ಬ್ಯಾನರ್ಜಿ ಕಿಡಿಕಾರಿದ್ದರು.

ಕೊಲ್ಕತ್ತಾದ ಕಾಳೀಘಾಟ್‌ನಲ್ಲಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸದ ಮೇಲೆ ಅಪರಾಧ ತನಿಖಾ ಇಲಾಖೆ (CID) ಅಧಿಕಾರಿಗಳು ಶೋಧ ನಡೆಸಿದ ಕೆಲವು ಗಂಟೆಗಳ ನಂತರ ಕಲ್ಯಾಣ್ ಬ್ಯಾನರ್ಜಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ಇಂದು ಮುಂಜಾನೆ ಸುಮಾರು 3 ಗಂಟೆಗೆ ಪೊಲೀಸರು ಅಭಿಷೇಕ್ ಬ್ಯಾನರ್ಜಿ ಅವರ ನಿವಾಸಕ್ಕೆ ಆಗಮಿಸಿದ್ದರು. ನಂತರ ಬೀಗಗಳನ್ನು ಒಡೆಯಲು ವಿಪತ್ತು ನಿರ್ವಹಣಾ ತಂಡವನ್ನು ಕರೆಯಿಸಲಾಯಿತು ಎಂದು ಟಿಎಂಸಿ ರಾಜ್ಯಸಭಾ ಸಂಸದ ಸಾಗರಿಕಾ ಘೋಷ್ ಆರೋಪಿಸಿದ್ದಾರೆ. ಸುಮಾರು 90 ನಿಮಿಷಗಳ ಕಾಲ ನಡೆದ ಈ ಶೋಧ ಕಾರ್ಯದಲ್ಲಿ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ ಎಂದು ಸಾಗರಿಕಾ ಘೋಷ್ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ, ಅಭಿಷೇಕ್ ಅಲ್ಲ; ಟಿಎಂಸಿ ಬಂಡಾಯದ ನಡುವೆ ಶತ್ರುಘ್ನ ಸಿನ್ಹಾ ಹೇಳಿಕೆ

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಸುರಕ್ಷತೆಯು ತಮ್ಮ ನಾಯಕತ್ವದ ಮೇಲೆ ಅವಲಂಬಿತವಾಗಿದೆ ಮತ್ತು ಬಿಜೆಪಿಯ ದಾರಿ ತಪ್ಪಿಸುವ ಹೇಳಿಕೆಗಳಿಗೆ ಮರುಳಾಗಬೇಡಿ ಎಂದು ಮಮತಾ ಬ್ಯಾನರ್ಜಿ ಕರೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಾರ ಭವಿಷ್ಯ: ಜೂನ್ 14 ರಿಂದ 20 ರವರೆಗೆ ಈ 4 ರಾಶಿಯವರಿಗೆ ಒಲಿಯಲಿದೆ ಧನಲಕ್ಷ್ಮಿ ಯೋಗ! – Kannada News | Weekly Horoscope June 14 to 20: Planetary Changes to Bring Fortune for These Zodiac Signs

2026ರ ಜೂನ್ 14ರಿಂದ ಜೂನ್ 20ರವರೆಗೆ ಮೂರನೇ ವಾರವಾಗಿದ್ದು, ಈ ಅವಧಿಯಲ್ಲಿ ಸೂರ್ಯ ಮತ್ತು ಬುಧ ಮಿಥುನದಲ್ಲೂ, ಶುಕ್ರ ಮತ್ತು ಗುರು ಕರ್ಕಾಟಕದಲ್ಲೂ, ಶನಿ ಮೀನ ರಾಶಿಯಲ್ಲೂ ಸಂಚರಿಸುತ್ತಿದ್ದಾರೆ. ಸ್ವಕ್ಷೇತ್ರ ಹಾಗೂ ಉಚ್ಚಕ್ಷೇತ್ರದಲ್ಲಿ ಇರುವ ಗ್ರಹಗಳು ಶುಭಫಲವನ್ನು ನೀಡುವರು.

​ಮೇಷ ರಾಶಿ:

ಮಂಗಳನ ಸ್ವಕ್ಷೇತ್ರ ಸಂಚಾರದಿಂದ ಧೈರ್ಯ ಹೆಚ್ಚಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.

​ವೃಷಭ ರಾಶಿ:

ಧನಲಾಭದ ಯೋಗವಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಅಗತ್ಯ. ಕೌಟುಂಬಿಕ ಜೀವನದಲ್ಲಿ ಸಾಮರಸ್ಯವಿರಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ, ಪ್ರಮುಖ ನಿರ್ಧಾರಗಳನ್ನು ಯೋಚಿಸಿ ತೆಗೆದುಕೊಳ್ಳಿ.

​ಮಿಥುನ ರಾಶಿ:

ನಿಮ್ಮ ರಾಶಿಯಲ್ಲಿ ಸೂರ್ಯ-ಬುಧರ ಯುತಿಯಿಂದ ಬುದ್ಧಿಮತ್ತೆ ಮತ್ತು ಗೌರವ ಹೆಚ್ಚುತ್ತದೆ. ವ್ಯಾಪಾರದಲ್ಲಿ ಲಾಭದಾಯಕ ಅವಕಾಶಗಳು ಬರಲಿವೆ. ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ಸಿಗಲಿದ್ದು, ನೆಮ್ಮದಿಯ ವಾರವಿದು.

​ಕರ್ಕಾಟಕ ರಾಶಿ:

ಗುರು ಹಾಗೂ ಶುಕ್ರರ ಶುಭ ಸಂಚಾರದಿಂದ ಆಧ್ಯಾತ್ಮಿಕ ಚಿಂತನೆ ಹೆಚ್ಚುತ್ತದೆ. ಆಸ್ತಿ ಖರೀದಿ ಯೋಗವಿದೆ. ದೂರದ ಪ್ರಯಾಣದಿಂದ ಲಾಭವಾಗಲಿದ್ದು, ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗುವ ಸಾಧ್ಯತೆ ದಟ್ಟವಾಗಿದೆ.

​ಸಿಂಹ ರಾಶಿ:

ಚಂದ್ರ ಮತ್ತು ಕೇತುಗಳ ಪ್ರಭಾವದಿಂದ ಮನಸ್ಸಿನಲ್ಲಿ ಸಣ್ಣಗಿನ ಗೊಂದಲಗಳಿರಬಹುದು. ಆದಾಗ್ಯೂ, ಆರ್ಥಿಕವಾಗಿ ಆದಾಯದ ಮೂಲಗಳು ಹೆಚ್ಚಲಿವೆ. ಸ್ನೇಹಿತರ ಸಹಕಾರದಿಂದ ಬಾಕಿ ಉಳಿದ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ.

​ಕನ್ಯಾ ರಾಶಿ:

ಉದ್ಯೋಗಿಗಳಿಗೆ ಬಡ್ತಿ ಅಥವಾ ವರ್ಗಾವಣೆಯ ಶುಭ ಸೂಚನೆಗಳಿವೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದ್ದು, ಕೌಟುಂಬಿಕವಾಗಿ ಸಂತಸದ ವಾತಾವರಣವಿರುತ್ತದೆ.

​ತುಲಾ ರಾಶಿ:

ಭಾಗ್ಯಸ್ಥಾನದಲ್ಲಿ ಗ್ರಹಗಳ ಅನುಕೂಲತೆಯಿಂದ ಅಂದುಕೊಂಡ ಕಾರ್ಯಗಳು ಸಫಲವಾಗುತ್ತವೆ. ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದ್ದು, ಸಮಾಜದಲ್ಲಿ ಕೀರ್ತಿ ಲಭಿಸುತ್ತದೆ.

​ವೃಶ್ಚಿಕ ರಾಶಿ:

ಅಷ್ಟಮದಲ್ಲಿ ಸೂರ್ಯನಿರುವುದರಿಂದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಅನಗತ್ಯ ವಾದವಿವಾದಗಳಿಂದ ದೂರವಿರಿ. ಕಠಿಣ ಪರಿಶ್ರಮದಿಂದ ಮಾತ್ರ ಕೆಲಸಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯ, ತಾಳ್ಮೆ ಇರಲಿ.

​ಧನು ರಾಶಿ:

ಸಪ್ತಮ ಭಾವದ ಶುಭ ದೃಷ್ಟಿಯಿಂದ ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಲಾಭ ನಿರೀಕ್ಷಿಸಬಹುದು. ಸಾರ್ವಜನಿಕ ರಂಗದಲ್ಲಿ ಗುರುತಿಸಿಕೊಳ್ಳುವ ಅವಕಾಶಗಳು ಒದಗಿ ಬರಲಿವೆ.

​ಮಕರ ರಾಶಿ:

ಶತ್ರುಗಳ ಮೇಲಿನ ಜಯ ನಿಮ್ಮದಾಗಲಿದೆ. ಹಳೆಯ ಸಾಲಗಳಿಂದ ಮುಕ್ತಿ ಸಿಗುವ ಸಾಧ್ಯತೆ ಇದೆ. ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಮನ್ನಣೆ ದೊರೆಯಲಿದ್ದು, ದೈನಂದಿನ ಆದಾಯವು ಸ್ಥಿರವಾಗಿ ಮುಂದುವರಿಯುತ್ತದೆ.

​ಕುಂಭ ರಾಶಿ:

ರಾಹುವಿನ ಸಂಚಾರವಿದ್ದರೂ ಬುಧನ ಅನುಕೂಲತೆಯಿಂದ ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ ಕಂಡುಬರುತ್ತದೆ. ಹೊಸ ಹೂಡಿಕೆಗಳಿಗೆ ಈ ವಾರ ಸೂಕ್ತವಾಗಿದೆ. ಮಕ್ಕಳ ಕಡೆಯಿಂದ ಶುಭ ವಾರ್ತೆಗಳನ್ನು ಕೇಳುವಿರಿ.

​ಮೀನ ರಾಶಿ:

ನಿಮ್ಮ ರಾಶಿಯಲ್ಲಿ ಶನಿಯಿರುವುದರಿಂದ ಕೆಲಸದಲ್ಲಿ ಕೊಂಚ ವಿಳಂಬವಾಗಬಹುದು. ಆದರೆ ಸುಖಸ್ಥಾನದ ಗ್ರಹಬಲದಿಂದ ವಾಹನ ಅಥವಾ ಭೂಮಿ ಖರೀದಿಯ ಯೋಗವಿದೆ. ತಾಯಿಯ ಆರೋಗ್ಯದ ಕಡೆ ಗಮನವಿರಲಿ.

– ಲೋಹಿತ್ ಹೆಬ್ಬಾರ್

Source link

IND vs AFG: ಮೊದಲ ಏಕದಿನ ಪಂದ್ಯದ ನಡುವೆ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ – Kannada News | Harshit Rana Returns for IND vs AFG ODI: Kohli, Pandya Out, Rain Threatens Opener

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More

Source link

ಮಹಿಳೆಯರೇ… ಹಳೆಯ ನೈಟಿಗಳನ್ನು ಎಸೆಯುವ ಬದಲು ಈ ರೀತಿ ಮರು ಬಳಕೆ ಮಾಡಿ – Kannada News | Instead of throwing away old nighty, recycle that like this

ನೈಟಿ (nighty) ಆರಾಮದಾಯಕವಾದ ಉಡುಗೆಯಾಗಿದ್ದು, ಹೆಚ್ಚಿನ ಗ ಮನೆಯಲ್ಲಿ ನೈಟಿಗಳನ್ನೇ ಧರಿಸುತ್ತಾರೆ. ಈ ನೈಟಿಗಳನ್ನೇ ಧರಿಸಿ ಮನೆ ಕೆಲಸಗಳನ್ನು ಮಾಡುವುದರಿಂದ ಇವುಗಳು ಬೇಗನೇ ಹಳೆಯದಾಗಿಬಿಡುತ್ತದೆ. ಈ ಹಳೆಯದಾಗ ನೈಟಿಗಳನ್ನು ಬಹುತೇಕರು ವೇಸ್ಟ್‌ ಎಂದು ಎಸೆದು ಬಿಡುತ್ತಾರೆ. ಆದ್ರೆ ಏನು ಗೊತ್ತಾ, ಮನೆಯಲ್ಲಿರುವ ಕೆಲವೊಂದು ಹಳೆಯ ವಸ್ತುಗಳನ್ನು ಎಸೆಯದೆ ಅಲಂಕಾರಿಕ ವಸ್ತುಗಳನ್ನು ತಯಾರಿಸುವಂತೆ ಹಳೆಯ ನೈಟಿಗಳನ್ನು ಸಹ ಮರು ಬಳಕೆ ಮಾಡಬಹುದು. ಹಳೆಯ ನೈಟಿಗಳಿಂದ ಏನೆಲ್ಲಾ ಸೃಜನಶೀಲ ವಸ್ತುಗಳನ್ನು ತಯಾರಿಸಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಹಳೆಯ ನೈಟಿಯನ್ನು ಈ ರೀತಿ ಮರು ಬಳಕೆ ಮಾಡಿ:

ಕುಶನ್, ದಿಂಬಿನ ಕವರ್ ತಯಾರಿಸಿ:‌  ವರ್ಣಮಯ ಹೂವಿನ ಡಿಸೈನ್‌ಗಳನ್ನು ಹೊಂದಿರುವ ನೈಟಿಗಳಿಂದ ಸುಂದರವಾದ ಕುಶನ್‌ ಕವರ್‌, ದಿಂಬಿನ ಕವರ್‌ಗಳನ್ನು ತಯಾರಿಸಬಹುದು. ಹಳೆಯ ಬಟ್ಟೆಗಳ ಈ ಮರುಬಳಕೆಯು ನಿಮ್ಮ ಮನೆಯನ್ನು ಬಜೆಟ್ ಸ್ನೇಹಿ ರೀತಿಯಲ್ಲಿ ಅಲಂಕರಿಸಲು ಸುಲಭವಾದ ಮಾರ್ಗವಾಗಿದೆ.

ಸೊಗಸಾದ ಏಪ್ರನ್ ಮಾಡಿ: ಅಡುಗೆ ಮಾಡುವ ಸಂದರ್ಭದಲ್ಲಿ ಎಣ್ಣೆ, ಮಸಾಲೆಗಳು ಬಟ್ಟೆಗಳಿಗೆ ಚೆಲ್ಲುವ ಸಾಧ್ಯತೆ ಇರುತ್ತದೆ. ಹಾಗಾಗಿ ಅಡುಗೆ ಮಾಡುವಾಗ ಏಪ್ರನ್‌ ಇರಲೇಬೇಕು.  ಹೀಗಿರುವಾಗ ನೀವು ಹಳೆಯ ನೈಟಿಯಿಂದ ಈ ಏಪ್ರನ್‌ ತಯಾರಿಸಬಹುದು. ಹತ್ತಿ ನೈಟಿಗಳಿಂದ ಮಾಡಿದ ಏಪ್ರನ್‌ಗಳು ಅಡುಗೆ ಮಾಡುವಾಗ ವಿಶೇಷವಾಗಿ ಆರಾಮದಾಯಕವಾಗಿರುತ್ತದೆ.  ಏಪ್ರನ್‌ ಮುಂಭಾಗದಲ್ಲಿ ಸಣ್ಣ ಪಾಕೆಟ್ ಕೂಡ ಇಡಬಹುದು.

ಶೇಖರಣಾ ಚೀಲಗಳು: ಪ್ಲಾಸ್ಟಿಕ್‌ ಕವರ್‌ಗಳಲ್ಲಿ ಮೇಕಪ್, ಆಭರಣ ಸೇರಿದಂತೆ ಸಣ್ಣಪುಟ್ಟ ವಸ್ತುಗಳನ್ನು ಸಂಗ್ರಹಿಸಿಡುವ ಬದಲು ನೈಟಿಗಳಿಂದ ಪೌಚ್‌ ತಯಾರಿಸಿ ನಿಮ್ಮೆಲ್ಲಾ ವಸ್ತುಗಳನ್ನು ಅದರಲ್ಲಿಡಬಹುದು. ಅಲ್ಲದೆ ಹಳೆಯ ನೈಟಿಯನ್ನು ಬಳಸಿ ಹ್ಯಾಂಗಿಂಗ್ ಆರ್ಗನೈಸರ್ ಅನ್ನು ತಯಾರಿಸಬಹುದು. ಇದರಲ್ಲಿ ಬಾಚಣಿಗೆಗಳು, ಕೀಗಳು, ರಿಮೋಟ್‌ಗಳು, ಸ್ಟೇಷನರಿಗಳು ಅಥವಾ ಸಣ್ಣ ಗೃಹೋಪಯೋಗಿ ವಸ್ತುಗಳನ್ನು ಇಟ್ಟುಕೊಳ್ಳಬಹುದು.

ಇದನ್ನೂ ಓದಿ:  ಸ್ಮಾರ್ಟ್‌ ಟ್ರಿಕ್ಸ್‌ ಪಾಲಿಸುವ ಮೂಲಕ ಮಳೆಗಾಲದಲ್ಲಿ ಬಟ್ಟೆಗಳನ್ನು ಸುಲಭವಾಗಿ ಒಣಗಿಸಬುದು

ಡೈನಿಂಗ್‌ ಟೇಬಲ್ ರನ್ನರ್: ನೀವು ಹಳೆಯ ನೈಟಿಗಳಿಂದ ಡೈನಿಂಗ್‌ ಟೇಬಲ್‌ನ ಮಧ್ಯಭಾಗದಲ್ಲಿ ಹಾಸುವ ಉದ್ದವಾದ ಬಟ್ಟೆಯಾದ ಡೈನಿಂಗ್‌ ಟೇಬರ್‌ ರನ್ನರ್‌ ಅನ್ನು ತಯಾರಿಸಬಹುದು. ಹಳೆಯ ನೈಟಿ ಸುಂದರವಾದ ಮುದ್ರಣವನ್ನು ಹೊಂದಿದ್ದರೆ ಅದರಿಂದ ಟೇಬಲ್‌ ರನ್ನರ್‌ ಮಾಡಿ.  ಮತ್ತು ಅದರ ಅಂಚುಗಳ ಸುತ್ತಲೂ ಲೇಸ್ ಅಥವಾ ಟಸೆಲ್‌ಗಳನ್ನು ಸೇರಿಸಿದರೆ. ಇದು ನಿಮ್ಮ ಡೈನಿಂಗ್‌ ಟೇಬಲ್‌ ರಾಯಲ್‌ ಆಗಿ ಕಾಣುವಂತೆ ಮಾಡುತ್ತದೆ.

ಫ್ರಿಡ್ಜ್‌ ಟಾಪ್‌ ಕವರ್:‌ ಸುಂದರ ಡಿಸೈನ್‌ ಇರುವಂತಹ ಹಳೆಯ ನೈಟಿಗಳನ್ನು ಎಸೆಯುವ ಬದಲು ಅದರಿಂದ ನೀವು ಫ್ರಿಡ್ಜ್‌ ಟಾಪ್‌ ಕವರ್‌ಗಳನ್ನು ತಯಾರಿಸಬಹುದು. ಮಾರುಕಟ್ಟೆಯಲ್ಲಿ ಸಿಗುವಂತಹ ಈ ವಸ್ತುಗಳಿಗೆ ಸುಮ್ಮನೆ ದುಡ್ಡು ಖರ್ಚು ಮಾಡುವ ಬದಲು ಹಳೆಯ ನೈಟಿಗಳನ್ನು ಬಳಸಿ ನೀವೇ ಮನೆಯಲ್ಲಿ ಫ್ರಿಡ್ಜ್‌ ಟಾಪ್‌ ಕವರ್‌ ರೆಡಿ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ

ಕಲಬುರಗಿ, ಜೂನ್ 13: ರಾಜ್ಯಾದ್ಯಂತ ರಸಗೊಬ್ಬರ ಕೊರತೆ ಎದುರಾಗಿರುವಾಗಲೇ, ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟವಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಡಿಎಪಿ ಹೆಸರಿನಲ್ಲಿ ಮರಳು ಮತ್ತು ಮಣ್ಣು ಮಿಶ್ರಿತ ಕಳಪೆ ಗೊಬ್ಬರವನ್ನು ದುಪ್ಪಟ್ಟು ಬೆಲೆಗೆ ವಿತರಿಸಲಾಗುತ್ತಿದೆ ಎಂದು ರೈತರು ಟಿವಿ9ಗೆ ತಿಳಿಸಿದ್ದಾರೆ.

ರೈತರು ತಂದಿದ್ದ ಗೊಬ್ಬರದ ಮೂಟೆಗಳನ್ನು ಪರಿಶೀಲಿಸಿದಾಗ, ಕೆಲವಲ್ಲಿ ಕೇವಲ ಶೇ 20ರಷ್ಟು ಮಾತ್ರ ಗೊಬ್ಬರವಿತ್ತು ಎಂದು ತಿಳಿದುಬಂದಿದೆ. ಉಳಿದ ಶೇ 80ರಷ್ಟು ಮರಳು ಮತ್ತು ಮಣ್ಣು ಮಿಶ್ರಣವಾಗಿತ್ತು. ಇಂತಹ ಕಳಪೆ ಗೊಬ್ಬರವನ್ನು ಖರೀದಿಸಿ, ಮಣ್ಣಿಗೆ ಸುರಿಯುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಈ ಬಗ್ಗೆ ಕೃಷಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ತನಿಖೆ ನಡೆಸುವಲ್ಲಿ ವಿಫಲರಾಗಿದ್ದಾರೆ ಎಂದು ರೈತರು ದೂರಿದ್ದಾರೆ. ಜೆವರ್ಗಿ ಮತ್ತು ಚಂದ್ರಿಕಾ ಆಗ್ರೋ ಸಿಂಡಿಕೇಟ್‌ನಂತಹ ಅಂಗಡಿಗಳಿಂದ ಕಳಪೆ ಗೊಬ್ಬರ ಬಂದಿರುವುದು ಕಂಡುಬಂದಿದೆ. ರೈತರು ತಾವು ಖರೀದಿಸಿದ ಗೊಬ್ಬರವನ್ನು ಪ್ರಯೋಗಾಲಯಕ್ಕೆ ಕಳುಹಿಸಿ, ತಪ್ಪಿತಸ್ಥ ಅಂಗಡಿಗಳ ವಿರುದ್ಧ ಕೃಷಿ ಕಾಯಿದೆ 1985ರ ಅಡಿ ಕ್ರಮ ಜರುಗಿಸಿ, ಅಂಗಡಿಗಳನ್ನು ಸೀಜ್ ಮಾಡುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: 25 ಓವರ್‌ಗಳ ಪಂದ್ಯ; ಟಾಸ್ ಗೆದ್ದ ಗಿಲ್, ಟೀಂ ಇಂಡಿಯಾ ಪರ ಇಬ್ಬರ ಪಾದಾರ್ಪಣೆ – Kannada News | India vs Afghanistan ODI: Rain Delays, Gill Wins Toss, 25 Over Thriller and Debut

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮಳೆಯಿಂದಾಗಿ ಈ ಪಂದ್ಯದ ಟಾಸ್ ವಿಳಂಬವಾಯಿತು. ಅದೃಷ್ಟವಶಾತ್ ಮಳೆ ನಿಂತಿದ್ದು, ಪಂದ್ಯ ಆರಂಭವಾಗಿದೆ. ತಲಾ 25 ಓವರ್​ಗಳ ಪಂದ್ಯವನ್ನು ನಡೆಸಲು ತೀರ್ಮಾನಿಸಲಾಗಿದೆ. ಅಂದರೆ ಉಭಯ ತಂಡಗಳು ತಲಾ 25 ಓವರ್​ಗಳ ಇನ್ನಿಂಗ್ಸ್ ಆಡಲಿವೆ. ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ (Shubman Gill) ಬೌಲಿಂಗ್ ಆಯ್ದುಕೊಂಡಿದ್ದಾರೆ.

ಟಾಸ್ ಗೆದ್ದ ಟೀಂ ಇಂಡಿಯಾ

ವಾಸ್ತವವಾಗಿ ಈ ಮೊದಲೇ ನಿಗದಿಪಡಿಸಿದಂತೆ ಪಂದ್ಯದ ಟಾಸ್ ಮಧ್ಯಾಹ್ನ 1ಗಂಟೆಗೆ ನಡೆಯಬೇಕಿತ್ತು. ನಂತರ ಪಂದ್ಯ 1:30ಕ್ಕೆ ಆರಂಭವಾಗಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯದ ಟಾಸ್ ಸರಿಯಾದ ಸಮಯಕ್ಕೆ ನಡೆಯಲಿಲ್ಲ. ಅಂತಿಮವಾಗಿ ನಿಂತ ಕಾರಣ ಸಂಜೆ 5:15 ಕ್ಕೆ ಪಂದ್ಯದ ಟಾಸ್ ನಡೆಸಲಾಯಿತು. ಟಾಸ್ ಗೆದ್ದ ಶುಭ್​ಮನ್ ಗಿಲ್ ಬೌಲಿಂಗ್‌ ಆಯ್ದುಕೊಂಡರು. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಟೀಂ ಇಂಡಿಯಾ ಪರ ಇಬ್ಬರು ಆಟಗಾರರು ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅದರಂತೆ ಹರ್ಷ್ ದುಬೆ ಹಾಗೂ ಗುರ್ನೂರ್ ಬ್ರಾರ್​ಗೆ ಚೊಚ್ಚಲ ಪಂದ್ಯವನ್ನಾಡುವ ಅವಕಾಶ ಸಿಕ್ಕಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಟೀಂ ಇಂಡಿಯಾ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷ್ ದುಬೆ, ಗುರ್ನೂರ್ ಬ್ರಾರ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಜದ್ರಾನ್, ರಹಮಾನುಲ್ಲಾ ಗುರ್ಬಾಜ್, ಸೇದಿಕುಲ್ಲಾ ಅಟಲ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ರಶೀದ್ ಖಾನ್, ಮೊಹಮ್ಮದ್ ಸಲೀಮ್, ಎಎಮ್ ಗಜನ್ಫರ್ ಮತ್ತು ಜಿಯಾವುರ್ ರೆಹಮಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:29 pm, Sat, 13 June 26

Source link

Karnataka Weather Forecast: ನಾಳೆಯಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣದ್ದೇ ಹಾವಳಿ! – Kannada News | Karnataka Weather Forecast: Heavy Rain Alert Across Coastal and Interior Districts for Next 3 Days

ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ Image Credit source: Getty Images

ಬೆಂಗಳೂರು, ಜೂನ್ 13: ನಗರದಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ಬಳಿಕ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಿದೆ. ಅಂತೆಯೇ ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯ (Weather) ಅಬ್ಬರ ಜೋರಾಗಿರಲಿದ್ದು, ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.
  • ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
  • ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನದ ಬಳಿಕ ಮಳೆಯಾಗುವ ಮುನ್ಸೂಚನೆ ಇದೆ.

ಕರಾವಳಿಯಲ್ಲಿ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಮತ್ತು ಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗಬಹುದು.

ಮಲೆನಾಡಿನಲ್ಲೂ ಭಾರೀ ಮಳೆ

ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಮತ್ತು ರೈತರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:31 pm, Sat, 13 June 26

Source link

ಎಲ್ಲಾ ನಾವಿಕರು ಸೇಫ್; ಒಮಾನ್ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ಸುಳ್ಳೆಂದ ಭಾರತ – Kannada News | All crew members safe India Denies attack on another Indian crewed vessel targeted near Oman

ನವದೆಹಲಿ, ಜೂನ್ 13: ಒಮಾನ್ ಕರಾವಳಿಯ ಬಳಿ ಭಾರತೀಯ ನಾವಿಕರಿದ್ದ ಮತ್ತೊಂದು ವಾಣಿಜ್ಯ ಹಡಗಿನ ಮೇಲೆ ದಾಳಿಯಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ ತಳ್ಳಿಹಾಕಿದ್ದು, ಇವೆಲ್ಲವೂ ಸುಳ್ಳು ಸುದ್ದಿಗಳು ಎಂದು ಸ್ಪಷ್ಟಪಡಿಸಿದೆ. ಇತ್ತೀಚೆಗೆ ಒಮಾನ್ (Oman) ಸಮುದ್ರ ವಲಯದಲ್ಲಿ ಭಾರತೀಯ ಸಿಬ್ಬಂದಿಯಿದ್ದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದ ಬೆನ್ನಲ್ಲೇ, ಮತ್ತೊಂದು ಹಡಗು ಅಪಾಯಕ್ಕೆ ಸಿಲುಕಿದೆ ಎಂಬ ವದಂತಿಗಳು ಹರಡಿದ್ದವು. ಆದರೆ ವಿದೇಶಾಂಗ ಸಚಿವಾಲಯವು ಆ ಹಡಗಿನ ಕ್ಯಾಪ್ಟನ್ ಜೊತೆ ನೇರ ಸಂಪರ್ಕ ಸಾಧಿಸಿ, ನಾವಿಕರೆಲ್ಲರೂ ಕ್ಷೇಮವಾಗಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಿದೆ.

ಮಾರ್ಷಲ್ ಐಲ್ಯಾಂಡ್ಸ್ ಧ್ವಜದ ಅಡಿಯಲ್ಲಿ ಸಂಚರಿಸುತ್ತಿದ್ದ ‘ಎಂವಿ ಲಿಯಾಕಿ ಫ್ರೀಡಂ’ ಎಂಬ ತೈಲ ಮತ್ತು ರಾಸಾಯನಿಕ ಟ್ಯಾಂಕರ್ ಹಡಗು ಶುಕ್ರವಾರ ರಾತ್ರಿ ಒಮಾನ್ ಕೊಲ್ಲಿಯಲ್ಲಿ ವಿಎಚ್‌ಎಫ್ (ರೇಡಿಯೋ ಸಂಪರ್ಕ) ಕಳೆದುಕೊಂಡಿದೆ. ಆ ಹಡಗಿನ ಮೇಲೆ ದಾಳಿಯಾಗಿದೆ ಎಂದು ಕೆಲವು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದವು. ಇದರಲ್ಲಿ ಹಲವು ಭಾರತೀಯ ನಾವಿಕರಿದ್ದು, ಸಾವು-ನೋವಿನ ಭೀತಿ ವ್ಯಕ್ತವಾಗಿತ್ತು.

ಇದಕ್ಕೆ ವಿದೇಶಾಂಗ ಸಚಿವಾಲಯದ ಪ್ರತಿಕ್ರಿಯೆ ನೀಡಿದ್ದು, “ನಾವು ಲಿಯಾಕಿ ಫ್ರೀಡಂ ಹಡಗಿನ ಮಾಸ್ಟರ್ (ಕ್ಯಾಪ್ಟನ್) ಅವರೊಂದಿಗೆ ನೇರವಾಗಿ ಮಾತನಾಡಿದ್ದೇವೆ. ಹಡಗಿನಲ್ಲಿರುವ ಎಲ್ಲಾ ಸಿಬ್ಬಂದಿ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ದಾಳಿಯ ಮಾಹಿತಿ ಸುಳ್ಳು ಎಂಬುದನ್ನು ಅವರು ಖಚಿತಪಡಿಸಿದ್ದಾರೆ” ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ದಾಳಿ ಕೊನೆಗೊಳ್ಳಬೇಕು; 3 ಭಾರತೀಯರು ಸಾವನ್ನಪ್ಪಿದ ಒಮಾನ್ ಹಡಗಿನ ಮೇಲಿನ ಅಮೆರಿಕದ ದಾಳಿಗೆ ಭಾರತ ಖಂಡನೆ

ಸದ್ಯಕ್ಕೆ ಒಮಾನ್ ಕರಾವಳಿಯ ಬಳಿ ಭಾರತೀಯ ಸಿಬ್ಬಂದಿಯಿದ್ದ ಮೂರು ವಾಣಿಜ್ಯ ಹಡಗುಗಳ ಮೇಲೆ ಮಾತ್ರ ದಾಳಿ ನಡೆದಿರುವುದು ದೃಢಪಟ್ಟಿದೆ. ಜೂನ್ 8ರಂದು ಎಂಟಿ ಮರಿವೆಕ್ಸ್ ಎಂಬ ಪಲಾವ್ ಧ್ವಜದ ಹಡಗಿನಲ್ಲಿ 24 ಭಾರತೀಯರಿದ್ದರು. ಇವರನ್ನು ಒಮಾನ್ ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸಿದ್ದರು. ಜೂನ್ 10ರಂದು ಎಂಟಿ ಸೆಟ್ಟೆಬೆಲ್ಲೊ ಎಂಬ ಪಲಾವ್ ಧ್ವಜದ ಈ ಟ್ಯಾಂಕರ್ ಮೇಲಿನ ಭೀಕರ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ದುರಂತವಾಗಿ ಸಾವನ್ನಪ್ಪಿದ್ದರು.

ಜೂನ್ 11ರಂದು ಎಂಟಿ ಜಲವೀರ್ ಎಂಬ ಗಿನಿ-ಬಿಸೌ ಧ್ವಜದ ಈ ಹಡಗಿನಲ್ಲಿದ್ದ 20 ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು. ಭಾರತೀಯ ನಾವಿಕರ ಸಾವಿಗೆ ಕಾರಣವಾದ ಈ ಮಿಲಿಟರಿ ದಾಳಿಗಳ ವಿರುದ್ಧ ನವದೆಹಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಭಾರತ ಸರ್ಕಾರವು ನವದೆಹಲಿಯಲ್ಲಿರುವ ಅಮೆರಿಕದ ಉಪ ರಾಯಭಾರಿ ಜೇಸನ್ ಮೀಕ್ಸ್ ಅವರಿಗೆ ಕೇವಲ ಒಂದೇ ವಾರದಲ್ಲಿ ಎರಡು ಬಾರಿ ಸಮನ್ಸ್ ಜಾರಿ ಮಾಡಿದೆ. ವಾಣಿಜ್ಯ ಹಡಗುಗಳ ಸಂಚಾರ ಮಾರ್ಗ ಮುಕ್ತ ಮತ್ತು ಸುರಕ್ಷಿತವಾಗಿರಬೇಕು ಎಂದು ಭಾರತ ಪ್ರತಿಪಾದಿಸಿದೆ.

ಇದನ್ನೂ ಓದಿ: ಒಮಾನ್ ಕರಾವಳಿಯಲ್ಲಿ ಭಾರತೀಯರಿದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ, ನಾಪತ್ತೆಯಾಗಿದ್ದ ಮೂವರ ಸಾವು ದೃಢ

ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಶುಕ್ರವಾರ ತಡರಾತ್ರಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಮ್ಮ ತೀವ್ರ ಆಕ್ಷೇಪವನ್ನು ತಿಳಿಸಿದ್ದಾರೆ. “ವಾಣಿಜ್ಯ ಹಡಗುಗಳ ಮೇಲೆ ಇಂತಹ ಮಾರಣಾಂತಿಕ ದಾಳಿಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ” ಎಂದು ಎಸ್.​ ಜೈಶಂಕರ್ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಇದೇ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ದಾಳಿಗಳಿಗೆ ಇರಾನ್ ಕಾರಣ ಎಂದು ಆರೋಪಿಸಿದ್ದರೆ, ಇರಾನ್‌ನ ತೆಹ್ರಾನ್ ಆಡಳಿತವು ಈ ಆರೋಪಗಳನ್ನು ಸಂಪೂರ್ಣ ಆಧಾರರಹಿತ ಮತ್ತು ಜಾಗತಿಕ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಎಂದು ತಳ್ಳಿಹಾಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು, ಜೂನ್​ 13: ಬಿಡದಿ ಟೌನ್​ಶಿಪ್ ವಿವಾದ​ ಸದ್ಯ ಸಿಎಂ ಡಿಕೆ ಶಿವಕುಮಾರ್​ ಮತ್ತು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಮಧ್ಯೆ ಮತ್ತೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಈ ಬಗ್ಗೆ ಮಾತನಾಡಿರುವ ಹೆಚ್​​ಡಿ ಕುಮಾರಸ್ವಾಮಿ, ಬಿಡದಿ ಟೌನ್​ಶಿಪ್​​ ಎಂದರೆ ಲೂಟಿ ಸ್ಕೀಮ್​​​ ಡೌಟೇ ಬೇಡ ಎಂದು ಹೇಳಿದ್ದಾರೆ. ಬಿಡದಿ ಟೌನ್​ಶಿಪ್ ಅವರ ಕನಸಿನ ಕೂಸಲ್ಲ, ನನ್ನ ಕನಸಿನ ಕೂಸು. ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಅವತ್ತಿನ ನನ್ನ ಉದ್ದೇಶ ಬೇರೆ ಇತ್ತು, ಆದರೆ ಇವತ್ತಿನ ಉದ್ದೇಶ ಬೇರೆಯೇ ಇದೆ. ಎಲ್ಲದಕ್ಕೂ ಅಜ್ಜಯ್ಯ ಬಳಿ ಹೋಗ್ತೀರಿ, ಅಜ್ಜಯ್ಯ ಹೇಳಿದ್ದಾರಾ ಟೌನ್​ಶಿಪ್ ಮಾಡಿ ರೈತರ ಒಕ್ಕಲೆಬ್ಬಿಸಿ ಎಂದು. ಜೆಡಿಎಸ್​ನಿಂದ ಪ್ರತಿಭಟನೆ, ಕಾನೂನು ಹೋರಾಟಕ್ಕೆ ಸಿದ್ಧರಾಗಿದ್ದೇವೆ. 450 ದಿನದಿಂದ ಹೋರಾಟ ಮಾಡುತ್ತಿರುವವರ ಧ್ವನಿಯಾಗಿದ್ದೇವೆ ಅಷ್ಟೇ. ರೈತ ಮುಖಂಡರನ್ನು ಬಂಧಿಸುವಂತೆ ಕೆಲಸವಾಗುತ್ತಿದೆ. ಅಗತ್ಯವಿದ್ದರೆ ನಾನೇ ಹೋರಾಟಕ್ಕೆ ಹೋಗುವೆ ಎಂದು ಹೆಚ್​​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version