ವಿಳಂಬವಾದ್ರು ಬಿಜೆಪಿ ಮಹಿಳಾ ಮೀಸಲಾತಿ ಬಿಲ್ ಜಾರಿ ಮಾಡುತ್ತೆ: ಸಂಸದ ತೇಜಸ್ವಿ ಸೂರ್ಯ – Kannada News | BJP will enforce women’s reservation bill despite delay: MP Tejasvi Surya

ಬಿಜೆಪಿ ಸಂಸದ ತೇಜಸ್ವಿ ಸೂರ್ಯImage Credit source: tv9 kannada

ಬೆಂಗಳೂರು, ಏಪ್ರಿಲ್​ 19: ಮಹಿಳಾ ಮೀಸಲಿಗೆ (Women’s Reservation Bill) ಸೋಲು ಆಗಿರುವುದು ರಾಜ್ಯದಲ್ಲೂ ಕಿಚ್ಚು ಹಚ್ಚಿದೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮಣಿಯರು ಸಿಡಿದೆದಿದ್ದಾರೆ. ರಾಜ್ಯ ವಿವಿಧೆಡೆ ಪ್ರತಿಭಟನೆ ಮಾಡಲಾಗುತ್ತಿದೆ. ಬೆಂಗಳೂರಿನ ಜೆಪಿ ನಗರದ ಆರ್​.ವಿ.ಕಾಲೇಜು ಬಳಿ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಭಾಗಿಯಾಗಿದ್ದು, ಹೆಣ್ಣು ಮಕ್ಕಳು ನಮ್ಮ ಜೊತೆ‌ ಕೂರಬಾರದು ಅಂತ ಕಾಂಗ್ರೆಸ್ ವಿರೋಧ ಮಾಡುತ್ತಿದೆ. ನೂರಕ್ಕೆ ನೂರು ಈ ಬಿಲ್ ಜಾರಿ ಮಾಡುತ್ತೇವೆ. ಸ್ವಲ್ಪ ವಿಳಂಬ ಆಗಬಹುದು ಆದರೆ ಬಿಜೆಪಿ ಮಾಡುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​​ನ ಲಾಜಿಕ್ ಅರ್ಥ ಆಗುತ್ತಿಲ್ಲ ಎಂದ ತೇಜಸ್ವಿ ಸೂರ್ಯ

ಬಿಬಿಎಂಪಿ ತೆಗೆದು 5 ಮಹಾನಗರ ಪಾಲಿಕೆಗಳನ್ನಾಗಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಳ ಆಗಿದೆ ಅಂತಾ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಹೇಳುತ್ತಾರೆ. 198 ಇದ್ದ ವಾರ್ಡ್​​ಗಳನ್ನು ಜಿಬಿಎ ಮಾಡಿ 369ಕ್ಕೆ ಹೆಚ್ಚಿಸಿದ್ದಾರೆ. ಬೆಂಗಳೂರಿನಲ್ಲಿ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಡಿಲಿಮಿಟೇಶನ್ (ಕ್ಷೇತ್ರ ಮರು ವಿಂಗಡಣೆ) ಮಾಡಿದರೆ ತೊಂದರೆಯಿಲ್ಲ ಎನ್ನುವ ಕಾಂಗ್ರೆಸ್, ಸಂಸತ್ ಮಟ್ಟದಲ್ಲಿ ಮಾಡಿದರೆ ಇವರಿಗೆ ತೊಂದರೆ ಆಗುತ್ತಾ. ಇದರಲ್ಲಿ ಕಾಂಗ್ರೆಸ್ ಲಾಜಿಕ್ ಅರ್ಥ ಆಗುತ್ತಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮೂರು ವಿಧೇಯಕ ಮಿಕ್ಸ್ ಮಾಡಿದ್ದರಿಂದ ಬಿದ್ದೋಗಿದೆ: ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ; ಸಿಎಂ ಸಿದ್ದರಾಮಯ್ಯ

1992ರಿಂದ ಮಹಿಳಾ ಮೀಸಲಾತಿ ಬಿಲ್​ ಬಗ್ಗೆ ಚರ್ಚೆ ನಡೆಯುತ್ತಿದೆ. ಮೀಸಲಾತಿ ವಿಚಾರದಲ್ಲಿ ಆಗಿನಿಂದಲೂ ಬಿಜೆಪಿ ನಿಲುವು ಒಂದೇ ಇದೆ. ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಆದಷ್ಟು ಬೇಗ ಕೊಡಬೇಕು. ಇದು ಭಾರತೀಯ ಜನತಾ ಪಕ್ಷದ ನಿಲುವಾಗಿದೆ. ಲೋಕಸಭೆಯಲ್ಲಿ ಬಿಲ್ ಚರ್ಚೆಗೆ ಬಂದಾಗಲೆಲ್ಲಾ ಬಿಜೆಪಿ ಬೆಂಬಲಿಸಿದೆ ಎಂದರು.

ಮಹಿಳಾ ಮೀಸಲಾತಿ ಮಸೂದೆಯನ್ನ ಕಾಂಗ್ರೆಸ್ 1992ರಿಂದ ಸೋಲಿಸುತ್ತಾ ಬರುತ್ತಿದೆ

1992ರಿಂದ ಇಲ್ಲಿಯವರೆಗೆ ಮಹಿಳಾ ಮೀಸಲಾತಿ ಮಸೂದೆಯನ್ನ ಕಾಂಗ್ರೆಸ್ ಪಕ್ಷವು ಹೇಗಾದರೂ ಮಾಡಿ ಸೋಲಿಸುತ್ತಾ ಬರುತ್ತಿದೆ. ಲಾಲೂಪ್ರಸಾದ್​, ಮುಲಾಯಂ ಸಿಂಗ್ ಮೂಲಕ ಬಿಲ್ ಸೋಲಿಸಿದರು. ಅವರೆಲ್ಲಾ ಇನ್ನೊಮ್ಮೆ ಸೇರಿ ಲೋಕಸಭೆಯಲ್ಲಿ ಪ್ರತಿ ಹರಿದುಹಾಕಿದರು. ಬಿಜೆಪಿ ಸರ್ಕಾರ 2023ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಅಂಗೀಕಾರಗೊಳಿಸ್ತು. 40 ವರ್ಷದಿಂದ ಬಾಕಿ ಇದ್ದ ಬಿಲ್ 2023ರಲ್ಲಿ ಲೋಕಸಭೆಯಲ್ಲಿ ಬಿಲ್​ ಪಾಸ್ ಮಾಡಿ ಜಾರಿ ಮಾಡಿದ್ದು ಬಿಜೆಪಿ. ಬಿಜೆಪಿ ವಿಪಕ್ಷ ಆಗಿದ್ದಾಗೆಲ್ಲ ಮಹಿಳಾ ಮೀಸಲಾತಿಗೆ ಬೆಂಬಲಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ: ದೇಶದ ಮಹಿಳೆಯರ ಗೆಲುವು ಎಂದ ಕೈ; ನಾಯಕರ ಕೆಸರೆರಚಾಟ

2023ರಲ್ಲಿ ಬಿಲ್ ಪಾಸ್ ಆದಾಗ ಜಾರಿ ಮಾಡುವ ಉದ್ದೇಶ ಇತ್ತು. ಹೊಸ ಜನಗಣತಿ ಆಧಾರದ ಮೇಲೆ ಜಾರಿ ಮಾಡುವ ಉದ್ದೇಶ ಇತ್ತು. 2011ರ ಜನಗಣತಿ ಆಧಾರದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ನಿರ್ಧರಿಸಿತ್ತು. ಅದರಂತೆ ಜಾರಿಗೆ ಮುಂದಾಗಿದಕ್ಕೆ ಅದಕ್ಕೂ ಕಾಂಗ್ರೆಸ್​​ ಕಲ್ಲುಹಾಕಿದೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನೋಯ್ಡಾ ಹಿಂಸಾಚಾರದ ಮಾಸ್ಟರ್​ಮೈಂಡ್ ಆದಿತ್ಯ ಆನಂದ್ ಅರೆಸ್ಟ್​ – Kannada News | Key Planner of Noida Workers’ Stir arrested in Tamil Nadu

ನೋಯ್ಡಾ, ಏಪ್ರಿಲ್ 19: ನೋಯ್ಡಾದಲ್ಲಿ ಇತ್ತೀಚೆಗೆ ನಡೆದ ಭೀಕರ ಹಿಂಸಾಚಾರ(Violence) ಮತ್ತು ಬೆಂಕಿ ಹಚ್ಚುವಿಕೆ ಪ್ರಕರಣದ ತನಿಖೆ ನಡೆಸುತ್ತಿದ್ದ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF), ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆಯ ಪ್ರಮುಖ ಆರೋಪಿಯನ್ನು ಹೆಡೆಮುರಿ ಕಟ್ಟಿದೆ. ಹಿಂಸಾಚಾರದ ನಂತರ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆದಿತ್ಯ ಆನಂದ್ ಎಂಬಾತ ನೋಯ್ಡಾದಿಂದ ಚೆನ್ನೈಗೆ, ಅಲ್ಲಿಂದ ತಿರುಚ್ಚಿಗೆ ಪಲಾಯನ ಮಾಡಿದ್ದ. ಈತನ ಚಲನವಲನದ ಬಗ್ಗೆ ನಿಖರ ಮಾಹಿತಿ ಪಡೆದ STF ನೋಯ್ಡಾ ಘಟಕದ ತಂಡವು ತಮಿಳುನಾಡಿಗೆ ಹೋಗಿ ಆತನನ್ನು ಬಂಧಿಸಿದೆ.

ಏಪ್ರಿಲ್ 18 ರಂದು ಬೆಳಗಿನ ಜಾವ 1.40 ಗಂಟೆಗೆ, ತಿರುಚ್ಚಿ ರೈಲು ನಿಲ್ದಾಣದಲ್ಲಿ ಆದಿತ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಗೌತಮ್ ಬುದ್ಧ ನಗರದ ನ್ಯಾಯಾಲಯ ಈತನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಕೇವಲ ಎರಡು ದಿನಗಳಲ್ಲೇ ಈ ಕಾರ್ಯಾಚರಣೆ ನಡೆದಿದೆ.

ಆರೋಪಿ ಆದಿತ್ಯ ಆನಂದ್ ಹಿನ್ನೆಲೆ ಕೇಳಿ ಪೊಲೀಸರೇ ದಂಗಾಗಿದ್ದಾರೆ. ಈತ ಬಿಹಾರದ ವೈಶಾಲಿಯವನಾಗಿದ್ದು, ಜಮ್‌ಶೆಡ್‌ಪುರದಲ್ಲಿ ಬಿ.ಟೆಕ್ ಮುಗಿಸಿ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಮೊದಲು ಗುರುಗ್ರಾಮದಲ್ಲಿದ್ದ ಈತ ನಂತರ ನೋಯ್ಡಾಗೆ ಶಿಫ್ಟ್ ಆಗಿದ್ದ. ಇಂತಹ ಉನ್ನತ ಶಿಕ್ಷಣ ಪಡೆದ ವ್ಯಕ್ತಿಯೊಬ್ಬ ಇಷ್ಟೊಂದು ದೊಡ್ಡ ಮಟ್ಟದ ಹಿಂಸಾಚಾರಕ್ಕೆ ಸ್ಕೆಚ್ ಹಾಕಿದ್ದು ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಮತ್ತಷ್ಟು ಓದಿ: ನೇಪಾಳದಲ್ಲಿ ಮಿತಿ ಮೀರಿದ ಹಿಂಸಾಚಾರ; ಪ್ರತಿಭಟನಾಕಾರರಿಂದ ಮಾಜಿ ಪ್ರಧಾನಿಯ ಪತ್ನಿಯ ಸಜೀವ ದಹನ!

ತನಿಖೆಯ ವೇಳೆ ಬಯಲಾದ ಮಾಹಿತಿ ಪ್ರಕಾರ, ಮಾರ್ಚ್ 30 ಮತ್ತು ಏಪ್ರಿಲ್ 1 ರ ನಡುವೆ ನೋಯ್ಡಾದಲ್ಲಿ ಕೆಲವು ಸಂಘಟನೆಗಳ ಸದಸ್ಯರೊಂದಿಗೆ ರಹಸ್ಯ ಸಭೆಗಳು ನಡೆದಿದ್ದವು. ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡುವ ಸೋಗಿನಲ್ಲಿ, ನೋಯ್ಡಾದಲ್ಲಿ ಬೃಹತ್ ಪ್ರಮಾಣದ ಹಿಂಸಾಚಾರ ಮತ್ತು ಆಸ್ತಿಪಾಸ್ತಿಗೆ ಬೆಂಕಿ ಹಚ್ಚುವ ಸಂಚು ರೂಪಿಸಲಾಗಿತ್ತು. ಇದರ ಫಲವಾಗಿಯೇ ಏಪ್ರಿಲ್ 13 ರಂದು ನೋಯ್ಡಾ ಬೀದಿಗಳಲ್ಲಿ ಹಿಂಸಾಚಾರ ನಡೆದಿತ್ತು.

ಬಂಧಿತ ಆದಿತ್ಯನನ್ನು ತಮಿಳುನಾಡಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿರುವ STF, ಆತನನ್ನು ಸಾರಿಗೆ ಬಂಧನಕ್ಕೆ (Transit Remand) ಒಳಪಡಿಸಿದೆ. ಆತನನ್ನು ನೋಯ್ಡಾಗೆ ಕರೆತಂದ ನಂತರ ಜೈಲಿಗೆ ಕಳುಹಿಸಲಾಗುತ್ತದೆ. ಆದಿತ್ಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯ ಪೊಲೀಸರು ಈ ಜಾಲದ ಉಳಿದ ಕೊಂಡಿಗಳ ಪತ್ತೆಗೆ ಮುಂದಾಗಿದ್ದಾರೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದರೂ ಪ್ರವೃತ್ತಿಯಲ್ಲಿ ವಿಧ್ವಂಸಕ ಮನಸ್ಥಿತಿ ಹೊಂದಿದ್ದ ಆದಿತ್ಯನ ಬಂಧನವು ನೋಯ್ಡಾ ಹಿಂಸಾಚಾರದ ಹಿಂದಿರುವ ದೊಡ್ಡ ಪಿತೂರಿಯನ್ನು ಭೇದಿಸಲು ಪೊಲೀಸರಿಗೆ ಪ್ರಮುಖ ದಾರಿಯಾಗಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಈ ಘಟನೆಗಳು ಕೇವಲ ಸ್ವಯಂಪ್ರೇರಿತ ಹಿಂಸಾಚಾರವಲ್ಲ, ಆದರೆ ಯೋಜಿತ ಪಿತೂರಿ ಎಂದು ಶಂಕಿಸಲಾಗಿದೆ. ಈ ಸಂದರ್ಭದಲ್ಲಿ, ಪೊಲೀಸರು ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿದ್ದಾರೆ ಮತ್ತು ಪಿತೂರಿಯ ಕೋನದ ಬಗ್ಗೆ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದ್ದಾರೆ. ತನಿಖಾ ತಂಡಗಳು ವಿವಿಧ ಸ್ಥಳಗಳಿಂದ ನೂರಾರು ಸಿಸಿಟಿವಿ ಕ್ಯಾಮೆರಾಗಳಿಂದ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದು, ಅವುಗಳನ್ನು ಬಳಸಿಕೊಂಡು ಅವರು ದುಷ್ಕರ್ಮಿಗಳನ್ನು ಗುರುತಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ನರಸಿಂಹ’ ಬಳಿಕ ಈಗ ‘ಪರಶುರಾಮ’ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ – Kannada News | Hombale announced Mahavatar Parashuram animated movie released teaser

‘ಕೆಜಿಎಫ್’ (KGF), ‘ಕಾಂತಾರ’ ಸರಣಿ, ‘ಸಲಾರ್’ ಇನ್ನೂ ಕೆಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಹೊಂಬಾಳೆ ಫಿಲಮ್ಸ್ (Hombale Films), ಕಳೆದ ವರ್ಷ ವಿಶಿಷ್ಟ ಸಾಹಸವೊಂದನ್ನು ಮಾಡಿತು. ‘ಮಹಾವತಾರ ನರಸಿಂಹ’ ಅನಿಮೇಟೆಡ್ ಸಿನಿಮಾವನ್ನು ವಿತರಣೆ ಮಾಡಿತು. ಒಳ್ಳೆಯ ವಿತರಣೆ ಮತ್ತು ಮಾರುಕಟ್ಟೆ ತಂತ್ರಗಳಿಂದ ಹೇಗೆ ಒಂದು ಸಿನಿಮಾವನ್ನು ಅದ್ಧೂರಿಯಾಗಿ ಗೆಲ್ಲಿಸಬಹುದು ಎಂದು ತೋರಿಸಿಕೊಟ್ಟಿತು. ‘ಕ್ಲೀಮ್ ಪ್ರೊಡಕ್ಷನ್ಸ್’ ನಿರ್ಮಿಸಿದ್ದ ‘ಮಹಾವತಾರ ನರಸಿಂಹ’ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ಪ್ರೆಸೆಂಟ್ ಮಾಡಿತ್ತು. ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು. ಇದೀಗ ಅದೇ ‘ಮಹಾವತಾರ’ ಸರಣಿಯ ಎರಡನೇ ಸಿನಿಮಾವನ್ನು ಹೊಂಬಾಳೆ ಘೋಷಿಸಿದೆ. ಈ ಬಾರಿ ಹೊಂಬಾಳೆಯೂ ನಿರ್ಮಾಣ ಕ್ರಿಯೆಯಲ್ಲಿ ಭಾಗಿ ಆಗಲಿದೆ.

‘ಮಹಾವತಾರ ನರಸಿಂಹ’ ಬಿಡುಗಡೆ ಆದಾಗಲೇ ಈ ‘ಮಹಾವತಾರ’ ಸರಣಿ ಮುಂದುವರೆಯುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಅದರಂತೆ ಈಗ ‘ಮಹಾವತಾರ ಪರಶುರಾಮ’ ಸಿನಿಮಾವನ್ನು ಘೋಷಿಸಲಾಗಿದೆ. ‘ಯಾವಾಗ ಧರ್ಮ ಬೀಳುತ್ತದೆಯೋ ಆಗೆಲ್ಲ ‘ಪರಶು’ ಏಳುತ್ತದೆ’ ಎಂಬ ಕ್ಯಾಚಿ ಲೈನ್ ಜೊತೆಗೆ ಅನಿಮೇಟೆಡ್ ವಿಡಿಯೋ ಒಂದನ್ನು ಟೀಸರ್ ರೀತಿ ಬಿಡುಗಡೆ ಮಾಡಲಾಗಿದೆ. ಪೌರಾಣಿಕ ಕತೆಯಾದ ಪರಶುರಾಮನ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಸಿನಿಮಾ ಮುಂದಿನ ವರ್ಷ ಡಿಸೆಂಬರ್​​ನಲ್ಲಿ ತೆರೆಗೆ ಬರಲಿದೆ.

ಇದನ್ನೂ ಓದಿ:ಹೊಂಬಾಳೆ ಬಳಿಕ ರಾಜ್ ಬಿ ಶೆಟ್ಟಿಯಿಂದಲೂ ದೂರಾದರೇ ರಿಷಬ್?

‘ಮಹಾವತಾರ ಪರಶುರಾಮ’ ಸಿನಿಮಾವನ್ನು ಅಶ್ವಿನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ‘ಮಹಾವತಾರ ನರಸಿಂಹ’ ಸಿನಿಮಾವನ್ನೂ ಇದೇ ಅಶ್ವಿನ್ ಅವರೇ ನಿರ್ದೇಶಿಸಿದ್ದರು. ‘ಮಹಾವತಾರ ಪರಶುರಾಮ’ ಸಿನಿಮಾವನ್ನು ಹೊಂಬಾಳೆ ಮತ್ತು ಕ್ಲೀಮ್ ಜಂಟಿಯಾಗಿ ನಿರ್ಮಿಸುತ್ತಿದ್ದು, ವಿಜಯ್ ಕಿರಗಂದೂರು ಜೊತೆಗೆ ಶಿಲ್ಪಾ ಧವನ್ ಸಹ ಬಂಡವಾಳ ಹೂಡುತ್ತಿದ್ದಾರೆ. ಸಿನಿಮಾ, ಅನಿಮೇಟೆಡ್ ಸಿನಿಮಾ ಆಗಿರಲಿದ್ದು, ‘ಮಹಾವತಾರ ನರಸಿಂಹ’ ಸಿನಿಮಾಕ್ಕಿಂತಲೂ ತಾಂತ್ರಿಕವಾಗಿ ಇನ್ನಷ್ಟು ಗುಣಮಟ್ಟ ಹೊಂದಿರುವ ಸ್ಪಷ್ಟ ಸುಳಿವು ಟೀಸರ್​ನಿಂದ ಸಿಗುತ್ತಿದೆ.

ವಿಷ್ಣುವಿನ ಅವತಾರಗಳ ಕತೆಯನ್ನು ಅನಿಮೇಟೆಡ್ ಸಿನಿಮಾಗಳನ್ನಾಗಿ ನಿರ್ಮಿಸಲಾಗುತ್ತಿದ್ದು, ಈಗಾಗಲೇ ‘ಮಹಾವತಾರ ನರಸಿಂಹ’ ಸಿನಿಮಾ ಆಗಿ ಸೂಪರ್ ಹಿಟ್ ಆಗಿದೆ. ಇದೀಗ ‘ಮಹಾವತಾರ ಪರಶುರಾಮ’ ಸಿನಿಮಾ ಆಗುತ್ತಿದೆ. 2029 ಕ್ಕೆ ರಾಮನ ಕುರಿತಾದ ‘ಮಹಾವತಾರ ರಘುರಾಮ’, ಬಳಿಕ ಕೃಷ್ಣನ ಕುರಿತಾಗಿ ‘ಮಹಾವತಾರ ದ್ವಾರಕಾದೀಶ’, ‘ಮಹಾವತಾರ ಗೋಕುಲನಂದ’, ಬಳಿಕ ಕಲ್ಕಿ ಅವತಾರದ ಕುರಿತಾಗಿ ‘ಮಹಾವತಾರ ಕಲ್ಕಿ 1’ ಮತ್ತು ‘ಮಹಾವತಾರ ಕಲ್ಕಿ 2’ ಸಿನಿಮಾಗಳು ನಿರ್ಮಾಣ ಆಗಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಂದ್ಯಕ್ಕೆ ಕರೆದಿಲ್ಲವೆಂದು ಕ್ರಿಕೆಟ್ ಪಿಚ್ ಅನ್ನೇ ಉಳುಮೆ ಮಾಡಿದ ಭೂಪ! – Kannada News | Tractor Terror: Angry Local Ploughs Cricket Pitch Over Invitation Snub

ಕ್ರಿಕೆಟ್ ಅಂದ್ರೆ ಕ್ರೇಝ್, ಆದರೆ ಇಲ್ಲಿ ನಡೆದಿದ್ದು ಮಾತ್ರ ಕ್ರೇಝ್​ನ ಪರಮಾವಧಿ! ಪಂದ್ಯಕ್ಕೆ ಕರೆದಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಯುವಕನೊಬ್ಬ, ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕೇಳರಿಯದ ವಿಲಕ್ಷಣ ಕೃತ್ಯ ಎಸಗಿದ್ದಾನೆ. ಇಡೀ ಮೈದಾನ ಫೈನಲ್ ಪಂದ್ಯದ ಸಂಭ್ರಮದಲ್ಲಿದ್ದಾಗ, ದಿಢೀರನೆ ಟ್ರ್ಯಾಕ್ಟರ್‌ನೊಂದಿಗೆ ಎಂಟ್ರಿ ಕೊಟ್ಟ ಈ ಭೂಪ, ಇಡೀ ಪಿಚ್ ಅನ್ನೇ ಉಳುಮೆ ಮಾಡಿ ಆಯೋಜಕರಿಗೆ ಬಿಗ್ ಶಾಕ್ ನೀಡಿದ್ದಾನೆ. ಕ್ರೀಡಾ ಸ್ಫೂರ್ತಿಯೇ ಮರೆತ ಈ ಯುವಕನ ಹಠಕ್ಕೆ ಈಗ ಇಡೀ ಪಂದ್ಯಾವಳಿಯೇ ಬಲಿಯಾಗಿದೆ! ಇಂತಹದೊಂದು ವಿಧ್ವಂಸಕ ಕೃತ್ಯ ನಡೆದಿದ್ದು ಮಹಾರಾಷ್ಟದ ಜಳಗಾಂವ್ ಜಿಲ್ಲೆಯ ಧರಣಗಾಂವ್‌ನಲ್ಲಿ..!

ಘಟನೆಯ ವಿವರ:

ಧರಣಗಾಂವ್‌ನಲ್ಲಿ ‘ಜಳಗಾಂವ್ ರೂರಲ್ ಎಂಎಲ್ಎ ಕಪ್’ (Jalgaon Rural MLA Cup) ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯವು ಅತ್ಯಂತ ರೋಚಕವಾಗಿ ಸಾಗುತ್ತಿತ್ತು. ಆಟಗಾರರು ಮತ್ತು ಪ್ರೇಕ್ಷಕರು ಪಂದ್ಯದ ಸಂಭ್ರಮದಲ್ಲಿದ್ದಾಗ, ಇದ್ದಕ್ಕಿದ್ದಂತೆ ಯುವಕನೊಬ್ಬ ಟ್ರ್ಯಾಕ್ಟರ್‌ನೊಂದಿಗೆ ಮೈದಾನಕ್ಕೆ ನುಗ್ಗಿದ್ದಾನೆ.

ಅಲ್ಲದೆ ನೇರವಾಗಿ ಪಿಚ್​ನತ್ತ ಸಾಗಿದ ಯುವಕ, ಟ್ರ್ಯಾಕ್ಟರ್‌ಗೆ ಅಳವಡಿಸಿದ್ದ ನೇಗಿಲಿನಿಂದ ಪಿಚ್ ಅನ್ನು ಪೂರ್ತಿಯಾಗಿ ಉಳುಮೆ ಮಾಡಿ ಹಾಳುಗೆಡವಿದ್ದಾನೆ.

ವರದಿಗಳ ಪ್ರಕಾರ, ಈ ಕೃತ್ಯಕ್ಕೆ ಆಹ್ವಾನದ ವಿಚಾರವೇ ಮುಖ್ಯ ಕಾರಣ ಎನ್ನಲಾಗಿದೆ. ಪಂದ್ಯಾವಳಿಯ ಫೈನಲ್ ಪಂದ್ಯಕ್ಕೆ ಆತನನ್ನು ಅಥವಾ ಸ್ಥಳೀಯ ಪ್ರಮುಖ ನಾಯಕರೊಬ್ಬರನ್ನು ಆಹ್ವಾನಿಸದಿದ್ದಕ್ಕೆ ಕೋಪಗೊಂಡ ಯುವಕ ಈ ರೀತಿ ಪ್ರತಿಕ್ರಿಯಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಕೆಲ ಮೂಲಗಳ ಪ್ರಕಾರ, ಆಟಗಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸದಿದ್ದಕ್ಕೆ ಅಸಮಾಧಾನಗೊಂಡು ಆತ ಈ ವಿಧ್ವಂಸಕ ಕೃತ್ಯ ಎಸಗಿದ್ದಾನೆ.

ಆಮೇಲೇನಾಯ್ತು?

ಪಿಚ್ ಸಂಪೂರ್ಣವಾಗಿ ಹಾನಿಗೀಡಾದ ಕಾರಣ, ಅಂತಿಮ ಪಂದ್ಯವನ್ನು ತಕ್ಷಣವೇ ರದ್ದುಗೊಳಿಸಲಾಯಿತು. ಇದೀಗ ಪಿಚ್ ಮೇಲೆ ಟ್ರ್ಯಾಕ್ಟರ್ ಓಡಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಈ ಪಂದ್ಯಾವಳಿಗಾಗಿ  ಮೈದಾನವನ್ನು ಸಿದ್ಧಪಡಿಸಲು ದಿನಗಟ್ಟಲೆ ಶ್ರಮವಹಿಸಿದ್ದ ಆಯೋಜಕರು ಮತ್ತು ಆಟಗಾರರು ಈ ಘಟನೆಯಿಂದ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ‘ದುರಾದೃಷ್ಟ’ದ ದಾಖಲೆ ಬರೆದ ಇಶಾನ್ ಕಿಶನ್

ಸದ್ಯಕ್ಕೆ ಈ ಬಗ್ಗೆ ಅಧಿಕೃತವಾಗಿ ಪೊಲೀಸ್ ದೂರು ದಾಖಲಾಗಿರುವ ಬಗ್ಗೆ ವರದಿಯಾಗಿಲ್ಲವಾದರೂ, ಸ್ಥಳೀಯರಲ್ಲಿ ಈ ಘಟನೆಯು ತೀವ್ರ ಚರ್ಚೆಗೆ ಕಾರಣವಾಗಿದೆ.

Published On – 2:35 pm, Sun, 19 April 26

Source link

ಕೃಷಿಹೊಂಡದಲ್ಲಿ ಯುವಕರ ಶವ ಪತ್ತೆ: ಈಜಲು ಹೋಗಿ ಇಬ್ಬರು ಕಾರ್ಮಿಕರ ದುರಂತ ಅಂತ್ಯ? – Kannada News | Chikkamagaluru Tragedy: Two Labourers’ Bodies Found in Farm Pond at Bannuru

ಯುವಕರಿಬ್ಬರ ದಾರುಣ ಅಂತ್ಯImage Credit source: Tv9 Kannada

ಚಿಕ್ಕಮಗಳೂರು, ಏಪ್ರಿಲ್​​ 19: ತೀವ್ರ ಬಿಸಿಲಿನ ಪರಿಣಾಮ ಕೂಲ್​​ ಆಗೋಣ ಎಂದು ಸಿಕ್ಕ ಸಿಕ್ಕಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಈಜಲು ಹೋಗಿ ಭದ್ರಾ ಹಿನ್ನೀರಿನಲ್ಲಿ ನಿನ್ನೆಯಷ್ಟೇ ಯುವಕನೋರ್ವ ಮೃತಪಟ್ಟ ಘಟನೆ ಮಾಸುವ ಮುನ್ನವೇ ಕಾಫಿನಾಡು ಚಿಕ್ಕಮಗಳೂರಲ್ಲಿ (Chikkamagaluru) ಮತ್ತೊಂದು ಅವಘಡ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ರಮೇಶ್(27), ಮಹೇಶ್ (34) ಮೃತರಾಗಿದ್ದು, ಈಜಲು ತೆರಳಿ ಮುಳುಗಿ  ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೃತರು ಕೊಪ್ಪ ತಾಲೂಕಿನ ಜಯಪುರ ಗ್ರಾಮದವರಾಗಿದ್ದು, ಬನ್ನೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಕೃಷಿ ಹೊಂಡದ ಸಮೀಪ ಇವರ ಚಪ್ಪಲಿ ಪತ್ತೆಯಾಗಿದ್ದ ಹಿನ್ನೆಲೆ ನೀರಿನಲ್ಲಿ ಮುಳುಗಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷಿ ಹೊಂಡದಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಅಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು; ಬದುಕು ದುರಂತ ಅಂತ್ಯ

ಯುವಕನ ಶವ ಪತ್ತೆ

ನಿತಿನ್​​ ಮೃತದೇಹ ಪತ್ತೆ

ಮತ್ತೊಂದು ಕಡೆ ಎನ್​​.ಆರ್​​.ಪುರ ತಾಲೂಕಿನ ಹಂದೂರು ಬಳಿಯ ಸಿದ್ದರಾಮಯ್ಯ ಸೇತುವೆ ಬಳಿ ನಿನ್ನೆ ಸ್ನೇಹಿತರ ಜೊತೆ ಈಜಲು ತೆರಳಿ ಭದ್ರಾ ಹಿನ್ನೀರಿನಲ್ಲಿ  ನಾಪತ್ತೆಯಾಗಿದ್ದ ಯುವಕ ನಿತಿನ್‌(34) ಶವ ಪತ್ತೆಯಾಗಿದೆ. ಮೃತ ನಿತಿನ್​ ಶಿಗುವಾನೆ ಗ್ರಾಮದವರಾಗಿದ್ದು, ನಾಪತ್ತೆಯಾಗಿದ್ದ ನಿತಿನ್​​ಗಾಗಿ ಸತತ ಶೋಧ ಕಾರ್ಯಾಚರಣೆ ನಡೆಸಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಇಂದು ಬೆಳಿಗ್ಗೆ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಎನ್​​.ಆರ್​​.ಪುರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್? – Kannada News | Rajinikanth Jailer 2 OTT rights sold to record price Amazon Prime Video

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತ್ತು. ಈಗ ಅದರ ಮುಂದುವರಿದ ಭಾಗ ‘ಜೈಲರ್ 2’ (Jailer 2) ಮೇಲೆ ನಿರೀಕ್ಷೆ ಹೆಚ್ಚಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಬಿಡುಗಡೆಗೂ ಮುನ್ನವೇ ದಾಖಲೆಗಳ ಮೇಲೆ ದಾಖಲೆ ಬರೆಯಲು ಶುರು ಮಾಡಿದೆ. ನೆಲ್ಸನ್ ದಿಲೀಪ್ ಕುಮಾರ್ ಮತ್ತು ರಜನಿಕಾಂತ್ (Rajinikanth) ಕಾಂಬಿನೇಷನ್‌ನ ಈ ಸಿನಿಮಾ ಬಿಗ್ ಬಜೆಟ್​ನಲ್ಲಿ ತಯಾರಾಗುತ್ತಿದೆ. ಚಿತ್ರಮಂದಿರಕ್ಕೆ ಬರುವ ಮೊದಲೇ ಈ ಸಿನಿಮಾ ಡಿಜಿಟಲ್ ಲೋಕದಲ್ಲಿ ಇತಿಹಾಸ ನಿರ್ಮಿಸಿದೆ.

ವರದಿಗಳ ಪ್ರಕಾರ, ಅಮೆಜಾನ್ ಪ್ರೈಮ್ ವಿಡಿಯೋ ಸಂಸ್ಥೆಯು ‘ಜೈಲರ್ 2’ ಚಿತ್ರದ ಒಟಿಟಿ ಹಕ್ಕುಗಳನ್ನು ಬರೋಬ್ಬರಿ 160 ಕೋಟಿ ರೂಪಾಯಿ ಮೊತ್ತಕ್ಕೆ ಖರೀದಿಸಿದೆ ಎನ್ನಲಾಗಿದೆ. ಇದು ತಮಿಳು ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಒಟಿಟಿ ಡೀಲ್ ಆಗಿದೆ. ಈಗಲೂ ರಜನಿಕಾಂತ್ ಅವರ ಸಿನಿಮಾಗಳಿಗೆ ಎಷ್ಟು ಬೇಡಿಕೆ ಇದೆ ಎಂಬುದಕ್ಕೆ ಈ ಅಂಕಿಅಂಶಗಳೇ ಸಾಕ್ಷಿ ಆಗಿವೆ.

ಈ ಹಿಂದೆ ಕಮಲ್ ಹಾಸನ್ ಮತ್ತು ಮಣಿರತ್ನಂ ಅವರ ‘ಥಗ್ ಲೈಫ್’ ಸಿನಿಮಾ 150 ಕೋಟಿ ರೂಪಾಯಿಗೆ ಮಾರಾಟವಾಗಿ ದಾಖಲೆ ಬರೆದಿತ್ತು. ಈಗ ರಜನಿ ಆ ದಾಖಲೆಯನ್ನು ಅಳಿಸಿಹಾಕಿದ್ದಾರೆ. 160 ಕೋಟಿ ರೂಪಾಯಿ ಒಟಿಟಿ ಡೀಲ್ ಬಗ್ಗೆ ಚಿತ್ರತಂಡ ಇನ್ನೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೂ ಸುದ್ದಿ ಜೋರಾಗಿ ಕೇಳಿಬರುತ್ತಿದೆ.

‘ಜೈಲರ್’ ಮೊದಲ ಭಾಗದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಎಂಟ್ರಿ ಥಿಯೇಟರ್‌ಗಳಲ್ಲಿ ಸಂಚಲನ ಮೂಡಿಸಿತ್ತು. ಸೀಕ್ವೆಲ್‌ನಲ್ಲಿಯೂ ಶಿವಣ್ಣ ಅವರ ಪಾತ್ರ ಇರಲಿದ್ದು, ಅಭಿಮಾನಿಗಳಿಗೆ ಇದು ದೊಡ್ಡ ಸಮಾಚಾರ. ಚಿತ್ರದ ತಾರಾಗಣದಲ್ಲಿ ದಕ್ಷಿಣ ಭಾರತದ ಘಟಾನುಘಟಿ ಕಲಾವಿದರಿದ್ದಾರೆ. ಮೋಹನ್ ಲಾಲ್, ವಿಜಯ್ ಸೇತುಪತಿ, ರಮ್ಯಾ ಕೃಷ್ಣನ್, ಯೋಗಿ ಬಾಬು ಮುಂತಾದವರು ಇದ್ದಾರೆ.

ಇದನ್ನೂ ಓದಿ: ‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್

ಮೊದಲ ಭಾಗದ ಯಶಸ್ಸಿನಲ್ಲಿ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರ ಹಿನ್ನೆಲೆ ಸಂಗೀತ ಮತ್ತು ಹಾಡುಗಳ ಪಾತ್ರ ಬಹಳ ದೊಡ್ಡದಿತ್ತು. ‘ಜೈಲರ್ 2’ ಚಿತ್ರಕ್ಕೂ ಅವರೇ ಸಂಗೀತ ನೀಡುತ್ತಿದ್ದು, ಮತ್ತೊಮ್ಮೆ ಮಾಸ್ ಮ್ಯಾಜಿಕ್ ನಿರೀಕ್ಷಿಸಲಾಗಿದೆ. ಈ ಬಾರಿ ಸಿನಿಮಾದಲ್ಲಿ ಏನೆಲ್ಲ ವಿಶೇಷತೆ ಇರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಐಪಿಎಲ್​ನಲ್ಲಿ ‘ದುರಾದೃಷ್ಟ’ದ ದಾಖಲೆ ಬರೆದ ಇಶಾನ್ ಕಿಶನ್

Source link

ಸಚಿವ ಜಮೀರ್ ಮತ್ತೆ ಜೆಡಿಎಸ್​​​​ ಸೇರ್ತಾರೆ ಎನ್ನುವ ಚರ್ಚೆ ಬಗ್ಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ – Kannada News | HD Kumaraswamy Clarify about Minister Zameer ahmed khan to Join JDS

ನವದೆಹಲಿ, (ಏಪ್ರಿಲ್ 19): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere South By Election) ವಿಚಾರವಾಗಿ ಕಾಂಗ್ರೆಸ್​​​​ನಲ್ಲಿ ಒಳಬೇಗುದಿ ಸ್ಫೋಟಗೊಂಡಿದ್ದು, ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಇದರೀಗ ಈ ಲಿಸ್ಟ್​ನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer ahmed khan) ಇದ್ದು, ಸಂಪುಟ ಪುನಾರಚನೆ ಸಂದರ್ಭದಲ್ಲಿ ಜಮೀರ್ ಅವರನ್ನ ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಜೆಡಿಎಸ್‌ಗೆ ವಾಪಸ್‌ ತೆರಳುತ್ತಾರೆ ಎಂಬ ವದಂತಿ ಜೋರಾಗಿದೆ. ಇತ್ತೀಚೆಗೆ ಖಾಸಗಿ ಹೋಟೆಲ್​​ನಲ್ಲಿ ಜಮೀರ್ ಅಹ್ಮದ್ ಖಾನ್ ಹಾಗೂ ಕುಮಾರಸ್ವಾಮಿ ಭೇಟಿಯಾಗಿದ್ದು ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಹೀಗಾಗಿ ಜಮೀರ್ ಮುಂದಿನ ದಿನಗಳಲ್ಲಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಇನ್ನು ಇದಕ್ಕೆ ಮೊನ್ನೆ ಕುಮಾರಸ್ವಾಮಿ ಅವರೇ ಪ್ರತಿಕ್ರಿಯಿಸಿ, ಯಾರೂ ಸಂಪರ್ಕಿಸಿಲ್ಲ. ಸಂಪರ್ಕಿಸಿದರೆ ಪಕ್ಷದ ಹಿರಿಯರೊಂದಿಗೆ ಚರ್ಚಿಸುವೆ ಎಂಬ ಹೇಳಿಕೆ ರಾಜಕೀಯದಲ್ಲಿ ಕುತೂಹಲ ಹುಟ್ಟುಹಾಕಿತ್ತು. ಆದ್ರೆ, ಇದೀಗ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ. ಇಂತಹ ಸಂದರ್ಭಗಳನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಜೊತೆಗೆ ಯಾರೂ ಸಂಪರ್ಕ ಸಾಧಿಸಿಲ್ಲ ಎಂದಿದ್ದಾರೆ. ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅವರನ್ನ ಸೇರಿಸಿಕೊಳ್ಳುವುದಿಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB ತಂಡದ ಮುಂದಿನ ಮ್ಯಾಚ್ ಯಾವಾಗ? ಯಾರ ವಿರುದ್ಧ? ಇಲ್ಲಿದೆ ಡಿಟೇಲ್ಸ್ – Kannada News | IPL 2026: RCB Next Match Full Details

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಓಟಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬ್ರೇಕ್ ಹಾಕಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 26ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಡಿಸಿ ಪಡೆ 6 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 175 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.5 ಓವರ್​ಗಳಲ್ಲಿ 179 ರನ್ ಬಾರಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ.

ಈ ಸೋಲಿನ ಹೊರತಾಗಿಯೂ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಥಾನ ಬದಲಾಗಿಲ್ಲ. ಏಕೆಂದರೆ 6 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ರಾಯಲ್ ಪಡೆಯು ಉತ್ತಮ ನೆಟ್ ರನ್ ರೇಟ್ ಹೊಂದಿದ್ದು, ಈ ಮೂಲಕ ದ್ವಿತೀಯ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇದಾಗ್ಯೂ ಆರ್​ಸಿಬಿ ತಂಡ ತನ್ನ ಮುಂದಿನ ಮ್ಯಾಚ್​ಗಳಲ್ಲಿ ಸೋತರೆ ಟಾಪ್-4 ರಿಂದ ಕೆಳಗಿಳಿಯಲಿದೆ. ಇಲ್ಲಿ ಆರ್​ಸಿಬಿ ತಂಡದ ಮುಂದಿನ ಎದುರಾಳಿ ಯಾರೆಂದು ನೋಡುವುದಾದರೆ…

ಟೈಟಾನ್ಸ್ ಪಡೆಯ ಸವಾಲು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 24, ಶುಕ್ರವಾರದಂದು ಗುಜರಾತ್ ಟೈಟನ್ಸ್ (GT) ವಿರುದ್ಧ ಆಡಲಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ತವರಿನಲ್ಲಿ ಆರ್​ಸಿಬಿ ತಂಡದ ಕೊನೆಯ ಮ್ಯಾಚ್. ಹೀಗಾಗಿ ಈ ಪಂದ್ಯದ ಮೂಲಕ ಆರ್​ಸಿಬಿ ಮತ್ತೆ ಗೆಲುವಿನ ಲಯ ಕಂಡುಕೊಳ್ಳಬೇಕಿದೆ.

RCB ತಂಡದ ಮುಂಬರುವ ಪಂದ್ಯಗಳ ವೇಳಾಪಟ್ಟಿ:

ದಿನಾಂಕ ಎದುರಾಳಿ ತಂಡ ಸ್ಥಳ ಸಮಯ (IST)
ಏಪ್ರಿಲ್ 24  ಗುಜರಾತ್ ಟೈಟಾನ್ಸ್ ಬೆಂಗಳೂರು (ತವರು) ರಾತ್ರಿ 7:30
ಏಪ್ರಿಲ್ 27 ಡೆಲ್ಲಿ ಕ್ಯಾಪಿಟಲ್ಸ್ ದೆಹಲಿ ರಾತ್ರಿ 7:30
ಏಪ್ರಿಲ್ 30 ಗುಜರಾತ್ ಟೈಟಾನ್ಸ್ ಅಹಮದಾಬಾದ್ ರಾತ್ರಿ 7:30
ಮೇ 07 ಲಕ್ನೋ ಸೂಪರ್ ಜೈಂಟ್ಸ್ ಲಕ್ನೋ ರಾತ್ರಿ 7:30
ಮೇ 10 ಮುಂಬೈ ಇಂಡಿಯನ್ಸ್ ರಾಯ್‌ಪುರ (ತವರು) ರಾತ್ರಿ 7:30
ಮೇ 13 ಕೋಲ್ಕತ್ತಾ ನೈಟ್ ರೈಡರ್ಸ್ ರಾಯ್‌ಪುರ (ತವರು) ರಾತ್ರಿ 7:30
ಮೇ 17 ಪಂಜಾಬ್ ಕಿಂಗ್ಸ್ ಧರ್ಮಶಾಲಾ ಮಧ್ಯಾಹ್ನ 3:30
ಮೇ 22 ಸನ್‌ರೈಸರ್ಸ್ ಹೈದರಾಬಾದ್ ಹೈದರಾಬಾದ್ ರಾತ್ರಿ 7:30

ಇದನ್ನೂ ಓದಿ: IPL 2026: CSK ತಂಡಕ್ಕೆ ಮತ್ತೊಂದು ಆಘಾತ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

Source link

ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ – Kannada News | Some Political Developments In Karnataka after May 5th By Election Result Says HD Kuamraswamy

ನವದೆಹಲಿ, (ಏಪ್ರಿಲ್ 19): ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್​​ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ (HD Kuamraswamy) ಹೊಸ ಬಾಂಬ್ ಸಿಡಿಸಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕರ್ನಾಟದಲ್ಲಿ ಏನೇನೋ ರಾಜಕೀಯ ಬೆಳವಣಿಗೆಗಳು ಆಗುತ್ತಿವೆ. ಇನ್ನೂ ಮೇ5ರ ನಂತರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೀವೇ ನೋಡಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version