ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ – Kannada News | Some Political Developments In Karnataka after May 5th By Election Result Says HD Kuamraswamy

ನವದೆಹಲಿ, (ಏಪ್ರಿಲ್ 19): ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್​​ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ (HD Kuamraswamy) ಹೊಸ ಬಾಂಬ್ ಸಿಡಿಸಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕರ್ನಾಟದಲ್ಲಿ ಏನೇನೋ ರಾಜಕೀಯ ಬೆಳವಣಿಗೆಗಳು ಆಗುತ್ತಿವೆ. ಇನ್ನೂ ಮೇ5ರ ನಂತರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೀವೇ ನೋಡಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಯುರೋಪಿನಲ್ಲಿ ಎರಡು ತಿಂಗಳ ವಾಸ, ವಿದೇಶದಲ್ಲಿ ಕಲಿತ ಜೀವನ ಪಾಠ ಹಂಚಿಕೊಂಡ ಭಾರತೀಯ ಮಹಿಳೆ – Kannada News | Indian woman living in Europe says live for yourself

ನಮ್ಮ ಊರಲ್ಲಿ ಕಡಿಮೆ ಸಂಬಳ ಪಡೆದ್ರೂ ಸಿಗೋ ಖುಷಿ, ವಿದೇಶಕ್ಕೆ ಹೋಗಿ ಲಕ್ಷಾನುಗಟ್ಟಲೆ ದುಡಿದ್ರೂ ಸಿಗಲ್ಲ ಅನ್ನೋ ಅಭಿಪ್ರಾಯ ಅನೇಕರಲ್ಲಿದೆ. ಆದರೆ ಕೆಲವರಿಗೆ ಹೊರ ರಾಜ್ಯ, ಹೊರ ದೇಶ (foreign) ಅಂದ್ರೆ ಅದೇನೋ ವ್ಯಾಮೋಹ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಎನ್ನುವುದು ಕೆಲವರ ಭಾವನೆ. ಆದರೆ ಈ ಹೊರ ದೇಶದಲ್ಲಿ ಕೆಲಸ ಮಾಡುವ ಅನೇಕರು ಮಾಡುವ ತ್ಯಾಗಗಳು ಅಷ್ಟಿಷ್ಟಲ್ಲ. ಒಂದಷ್ಟು ಬದಲಾವಣೆಗಳೊಂದಿಗೆ ಬದುಕು ಕಟ್ಟಿಕೊಳ್ಳುತ್ತಾರೆ. ಭಾರತೀಯ ಮಹಿಳೆಯೊಬ್ಬರು ವಿದೇಶದಲ್ಲಿ ನೆಲೆಸಿದ್ದಾರೆ. ಭಾರತೀಯಳಾಗಿ ಯುರೋಪಿಯನ್‌ನಲ್ಲಿ (Europe)  ಎರಡು ತಿಂಗಳುಗಳ ಕಾಲ ನೆಲೆಸಿ, ನಾನು ಕಲಿತ ವಿಷಯಗಳನ್ನು ನನ್ನ ದೈನಂದಿನ ಜೀವನದಲ್ಲಿ ಹೇಗೆ ಅಳವಡಿಸಿಕೊಂಡೆ ಎಂದು ಹೇಳಿದ್ದಾರೆ. ಈ ಅನುಭವಗಳು ಹಾಗೂ ಬದಲಾವಣೆಗಳು ಬದುಕಿಗೆ ಎಷ್ಟು ಅನಿವಾರ್ಯ ಎನ್ನುವುದನ್ನು ಈ ವಿಡಿಯೋ ಸಾರಿ ಹೇಳುವಂತಿದೆ.

ವಿಶಾ ಖಂಡೇಲ್ವಾಲ್ (visha.khandelwal) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಕಳೆದ ಕೆಲವು ತಿಂಗಳುಗಳನ್ನು ಯುರೋಪಿಯನ್‌ನಲ್ಲಿ ಭಾರತೀಯ ಮಹಿಳೆ ಕಳೆದಿದ್ದು, ತಮ್ಮ ಅನುಭವಗಳನ್ನು ವಿವರಿಸಿದ್ದಾರೆ. ನಾನು ಕಲಿತ ವಿಷಯಗಳನ್ನು ನನ್ನ ದೈನಂದಿನ ಜೀವನದಲ್ಲಿ ಹೇಗೆ ಅನ್ವಯಿಸುತ್ತಿದ್ದೇನೆ. ಮೊದಲು, ಸಣ್ಣ ಮಾತುಕತೆಯಾಗಿದ್ದರೂ ಕ್ಯಾಬ್ ಚಾಲಕರು, ಮಾಣಿಗಳು, ಹಾದುಹೋಗುವ ಅಪರಿಚಿತರನ್ನು ಸ್ವಾಗತಿಸಲು ಕಲಿತೆ. ಈ ಎರಡು ತಿಂಗಳಲ್ಲಿ ನಾನು ಎಲ್ಲರನ್ನೂ ಸ್ವಾಗತಿಸುವ ಅಭ್ಯಾಸವನ್ನು ಬೆಳೆಸಿಕೊಂಡೆ ಎಂದು ಹೇಳಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ

ಈ ನಡವಳಿಕೆಯು ಭಾರತದಲ್ಲಿ ಸರಾಗವಾಗಿರಲು ಸಾಧ್ಯವಿಲ್ಲ.. ಆದರೆ ಈ ಅಭ್ಯಾಸವು ಸಂವಹನದ ಮೇಲೆ ಪ್ರಭಾವ ಬೀರಿದೆ. ಆಟೋ ಚಾಲಕನಿಗೆ ಒಟಿಪಿ ಹೇಳುವುದು ತುಂಬಾ ಪ್ರಾಯೋಗಿಕವಾಗಿದೆ. ತದನಂತರದ ಈ ಸಂಭಾಷಣೆಗಳು ಪ್ರಯಾಣದ ನಡುವೆ ನಿಮ್ಮ ದೃಷ್ಟಿಕೋನವನ್ನು ಬದಲಾಯಿಸುತ್ತದೆ ಹಾಗೂ ಮನಸ್ಸು ತೆರೆದು ಕೊಳ್ಳುತ್ತದೆ ಎಂದಿದ್ದಾರೆ.

ನಾವು ಇಬ್ಬರು ಭಾರತೀಯ ಹುಡುಗಿಯರು ಸ್ವಿಸ್ ಹುಡುಗನೊಂದಿಗೆ ಪ್ರಯಾಣಿಸುತ್ತಿದ್ದೆವು. ಆ ಹುಡುಗನು ಬೆಳಿಗ್ಗೆ 8:30 ಕ್ಕೆ ನಮ್ಮನ್ನು ಭೇಟಿಯಾಗಬೇಕೆಂದು ಹೇಳಿದ. ನಾವು ಅವನಿಗೆ 8:45 ಕ್ಕೆ ಸಮಯಕ್ಕೆ ಬರಲು ಹೇಳಿದ್ದೆವು. ಆದರೆ ಆತನು 8:30 ಕ್ಕೆ ಬಂದು ನಮಗಾಗಿ ಕಾಯುತ್ತಿದ್ದನು ಎಂದು ಹೇಳಿದ್ದಾರೆ. ಈ  ಸಮಯ ಪಾಲನೆಯಂತಹ ಅಭ್ಯಾಸಗಳು ಮಾಯವಾಗಿವೆ. ಈಗ ನಾನು ಕ್ಯಾಬ್, ಆಟೋಗಾಗಿ ಕಾಯುತ್ತಿದ್ದೇನೆ. ಕೆಲವೊಮ್ಮೆ ಸಮಯಕ್ಕಿಂತ ಮೊದಲೇ ಬರುತ್ತೇನೆ. ತಡವಾಗಿ ಬಂದಿದ್ದಕ್ಕಾಗಿ ಕ್ಷಮೆಯಾಚಿಸಬೇಕಾಗಿಲ್ಲದ ಕಾರಣ ದೂರವಾಗುವ ಒತ್ತಡ ಮತ್ತು ಅಪರಾಧ ಪ್ರಜ್ಞೆ, ತುಂಬಾ ಕಡಿಮೆ ಎಂದಿದ್ದಾರೆ.

ಅಂತಿಮವಾಗಿ, ನಿಮಗಾಗಿ ಬದುಕುವುದು. ನಾನು 35 ರಿಂದ 40 ವರ್ಷ ವಯಸ್ಸಿನ ಮಹಿಳೆಯರೊಂದಿಗೆ ವಾಸದ ಸ್ಥಳಗಳನ್ನು ಹಂಚಿಕೊಂಡಿದ್ದೇನೆ, ಒಂಟಿಯಾಗಿ ಪ್ರಯಾಣಿಸುತ್ತಿದ್ದೇನೆ, ಪುಸ್ತಕ ಬರೆಯುತ್ತಿದ್ದೇನೆ. ಫಿಟ್ನೆಸ್ ಮೇಲೆ ಕೇಂದ್ರೀಕರಿಸುತ್ತಿದ್ದೇನೆ, ಸಂಪೂರ್ಣವಾಗಿ ತಲೆಕೆಡಿಸಿಕೊಳ್ಳಲಿಲ್ಲ ಎಂದು ವಿವರಿಸಿರುವುದನ್ನು ಕಾಣಬಹುದು.

ಇದನ್ನೂ ಓದಿ: ಜರ್ಮನ್‌ನಲ್ಲಿ ಡ್ರೀಮ್‌ ಜಾಬ್‌ ಗಿಟ್ಟಿಸಿಕೊಂಡ ಭಾರತೀಯ ಮಹಿಳೆ ಹೇಳಿದ್ದೇನು ನೋಡಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಸಮಯಪಾಲನೆ ವಿಚಾರ ತುಂಬಾ ಖುಷಿ ಕೊಟ್ಟಿತು ಎಂದಿದ್ದಾರೆ. ಇನ್ನೊಬ್ಬರು, ಈ ಮನಸ್ಥಿತಿಯ ಬದಲಾವಣೆ ನಿಧಾನವಾಗಿ ಆಗಬೇಕು ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಮಗಾಗಿ ಬದುಕುವುದು ಇಲ್ಲಿ ಕಠಿಣ ಪಾಠವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫಾರೆಕ್ಸ್ ರಿಸರ್ವ್ಸ್: ಮತ್ತೆ 700 ಬಿಲಿಯನ್ ಡಾಲರ್ ಮೈಲಿಗಲ್ಲು ಮುಟ್ಟಿದ ಭಾರತ – Kannada News | India’s forex reserves rise to 700 billion USD on April 10th

ಫಾರೆಕ್ಸ್ ರಿಸರ್ವ್ಸ್Image Credit source: Shutterstock

ನವದೆಹಲಿ, ಏಪ್ರಿಲ್ 19: ಭಾರತದ ಫಾರೆಕ್ಸ್ ರಿಸರ್ವ್ಸ್ (Forex reserves) ಏಪ್ರಿಲ್ 10ರಂದು ಅಂತ್ಯಗೊಂಡ ವಾರದಲ್ಲಿ 3.825 ಬಿಲಿಯನ್ ಡಾಲರ್​ನಷ್ಟು ಏರಿದೆ. ಹಿಂದಿನ ವಾರದಲ್ಲೂ 9.063 ಬಿಲಿಯನ್ ಡಾಲರ್​ನಷ್ಟು ರಿಸರ್ವ್ಸ್ ಹೆಚ್ಚಳ ಆಗಿತ್ತು. ಇದರೊಂದಿಗೆ ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ 700.946 ಬಿಲಿಯನ್ ಡಾಲರ್​ಗೆ ಏರಿದೆ. ಆದರೆ, ಸಾರ್ವಕಾಲಿಕ ಗರಿಷ್ಠ ಫಾರೆಕ್ಸ್ ಮೀಸಲು ನಿಧಿಯ ಮಟ್ಟ ಮುಟ್ಟಲು ಇನ್ನೂ 28 ಬಿಲಿಯನ್ ಡಾಲರ್ ಬೇಕಾಗುತ್ತದೆ.

2026ರ ಫೆಬ್ರುವರಿ 27ರಂದು ಭಾರತದ ಫಾರೆಕ್ಸ್ ರಿಸರ್ವ್ಸ್ 728.494 ಬಿಲಿಯನ್ ಡಾಲರ್ ಆಗಿತ್ತು. ಆ ನಂತರದಲ್ಲಿ ಇರಾನ್ ಇತ್ಯಾದಿ ಕಡೆ ಜಾಗತಿಕ ರಾಜಕೀಯ ಸಂಕಷ್ಟಗಳ ಕಾರಣಗಳಿಗೆ ರುಪಾಯಿ ಮೇಲೆ ಒತ್ತಡ ಬಿದ್ದು, ಆರ್​ಬಿಐ ತನ್ನ ರಿಸರ್ವ್ಸ್​ನಲ್ಲಿದ್ದ ಒಂದಿಷ್ಟು ಡಾಲರ್​ಗಳನ್ನು ಮಾರುತ್ತಾ ಹೋಗಬೇಕಾಯಿತು. ಹೀಗಾಗಿ, ಫಾರೆಕ್ಸ್ ರಿಸರ್ವ್ಸ್ ಹಲವು ಬಿಲಿಯನ್ ಡಾಲರ್​ಗಳಷ್ಟು ಕಡಿಮೆಗೊಂಡಿತು.

ಇದನ್ನೂ ಓದಿ: ಅಕ್ಷಯ ತೃತೀಯ ಸ್ಪೆಷಲ್: ಒಡವೆ, ಡಿಜಿಟಲ್ ಗೋಲ್ಡ್, ಇಟಿಎಫ್- ಬಂಗಾರದ ಲಾಭ ಪಡೆಯಲು ಯಾವುದು ಬೆಸ್ಟ್?

ಫಾರೀನ್ ಕರೆನ್ಸಿ ಆಸ್ತಿಯಲ್ಲಿ ಗಣನೀಯ ಹೆಚ್ಚಳ

ಏಪ್ರಿಲ್ 10ರಂದು ಅಂತ್ಯಗೊಂಡ ವಾರದಲ್ಲಿ ಏರಿಕೆಯಾದ 3.285 ಬಿಲಿಯನ್ ಡಾಲರ್ ಫಾರೆಕ್ಸ್ ಮೀಸಲು ನಿಧಿಯಲ್ಲಿ ಬಹುಪಾಲು ಫಾರೀನ್ ಕರೆನ್ಸಿಗಳೇ ಇವೆ. ಬರೋಬ್ಬರಿ 3.127 ಬಿಲಿಯನ್ ಡಾಲರ್ ಮೊತ್ತದ ವಿದೇಶೀ ಕರೆನ್ಸಿ ಆಸ್ತಿಗಳನ್ನು ಆರ್​ಬಿಐ ಹೆಚ್ಚಿಸಿಕೊಂಡಿದೆ.

ಇನ್ನಿತರ ಆಸ್ತಿಗಳ ಪೈಕಿ ಗೋಲ್ಡ್ ರಿಸರ್ವ್ಸ್ 601 ಮಿಲಿಯನ್ ಡಾಲರ್​ನಷ್ಟು ಹೆಚ್ಚಿದೆ. ಎಸ್​ಡಿಆರ್​ಗಳು 56 ಮಿಲಿಯನ್ ಡಾಲರ್, ಹಾಗೂ ಭಾರತದ ಐಎಂಎಫ್ ಮೀಸಲು ಸ್ಥಾನ 56 ಮಿಲಿಯನ್ ಡಾಲರ್ ಏರಿಕೆ ಆಗಿದೆ.

ಇದನ್ನೂ ಓದಿ: ಕಳೆದ 5 ವರ್ಷದಿಂದ ಅಕ್ಷಯ ತೃತೀಯದಂದು ಚಿನ್ನ ಖರೀದಿಸುತ್ತಿದ್ದರೆ ಇವತ್ತಿನ ಮೌಲ್ಯವೆಷ್ಟಿರುತ್ತಿತ್ತು ಗೊತ್ತಾ?

ಏಪ್ರಿಲ್ 10ರಂದು ಭಾರತದ ಫಾರೆಕ್ಸ್ ರಿಸರ್ವ್ಸ್

ಒಟ್ಟು ಫಾರೆಕ್ಸ್ ರಿಸರ್ವ್ಸ್: 700.946 ಬಿಲಿಯನ್ ಡಾಲರ್

  • ಫಾರೀನ್ ಕರೆನ್ಸಿ ಅಸೆಟ್: 555.946 ಬಿಲಿಯನ್ ಡಾಲರ್
  • ಗೋಲ್ಡ್ ರಿಸರ್ವ್ಸ್: 121.343 ಬಿಲಿಯನ್ ಡಾಲರ್
  • ಎಸ್​ಡಿಆರ್: 18.763 ಬಿಲಿಯನ್ ಡಾಲರ್
  • ಐಎಂಎಫ್ ಮೀಸಲು: 4.857 ಬಿಲಿಯನ್ ಡಾಲರ್

ಅತಿಹೆಚ್ಚು ಫಾರೆಕ್ಸ್ ರಿಸರ್ವ್ಸ್ ಹೊಂದಿರುವ ದೇಶಗಳು

  • ಚೀನಾ: 3.643 ಟ್ರಿಲಿಯನ್ ಡಾಲರ್
  • ಜಪಾನ್: 1.294 ಟ್ರಿಲಿಯನ್ ಡಾಲರ್
  • ಸ್ವಿಟ್ಜರ್​ಲ್ಯಾಂಡ್: 1.077 ಟ್ರಿಲಿಯನ್ ಡಾಲರ್
  • ರಷ್ಯಾ: 755 ಬಿಲಿಯನ್ ಡಾಲರ್
  • ಭಾರತ: 700 ಬಿಲಿಯನ್ ಡಾಲರ್

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Gajakesari Rajayoga 2026: ಏ. 21 ‘ಗಜಕೇಸರಿ ರಾಜಯೋಗ’: ಈ 4 ರಾಶಿಗಳ ಭವಿಷ್ಯ ಬಂಗಾರದಂತೆ ಹೊಳೆಯಲಿದೆ! – Kannada News | Gajakesari Rajayoga 2026: April 21 brings immense luck to 4 zodiac signs!

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಸಂಚಾರವು ವಿಶೇಷ ಮಹತ್ವವನ್ನು ಹೊಂದಿದೆ. ಅದರಲ್ಲೂ ಅತ್ಯಂತ ಶಕ್ತಿಶಾಲಿ ಮತ್ತು ಮಂಗಳಕರ ಎಂದು ಪರಿಗಣಿಸಲಾದ ‘ಗಜಕೇಸರಿ ರಾಜಯೋಗ’ ಏಪ್ರಿಲ್ 21 ರಂದು ರೂಪುಗೊಳ್ಳುತ್ತಿದೆ. ಗುರು ಮತ್ತು ಚಂದ್ರನ ಅಪರೂಪದ ಸಂಯೋಗದಿಂದ ಸೃಷ್ಟಿಯಾಗುವ ಈ ಯೋಗವು ಕೆಲವು ರಾಶಿಗಳ ಪಾಲಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ.

ಗಜಕೇಸರಿ ರಾಜಯೋಗ ಎಂದರೇನು?

ಜಾತಕದಲ್ಲಿ ಗುರು ಮತ್ತು ಚಂದ್ರರು ಪರಸ್ಪರ ಕೇಂದ್ರ ಸ್ಥಾನದಲ್ಲಿದ್ದಾಗ ಅಥವಾ ಒಂದೇ ರಾಶಿಯಲ್ಲಿ ಸೇರಿದಾಗ ಈ ಯೋಗ ರೂಪುಗೊಳ್ಳುತ್ತದೆ. ಏಪ್ರಿಲ್ 21 ರಂದು ಚಂದ್ರನು ಮಿಥುನ ರಾಶಿಗೆ ಪ್ರವೇಶಿಸಲಿದ್ದು, ಅಲ್ಲಿ ಈಗಾಗಲೇ ನೆಲೆಸಿರುವ ಗುರುವಿನೊಂದಿಗೆ ಸೇರಿ ಈ ಅದ್ಭುತ ರಾಜಯೋಗವನ್ನು ಸೃಷ್ಟಿಸಲಿದ್ದಾನೆ.

ಈ ಯೋಗದಿಂದಾಗಿ ವಿಶೇಷ ಲಾಭ ಪಡೆಯಲಿರುವ ಆ 4 ರಾಶಿಗಳು ಇಲ್ಲಿವೆ:

ಮಿಥುನ ರಾಶಿ (Gemini):

ಮಿಥುನ ರಾಶಿಯಲ್ಲೇ ಈ ರಾಜಯೋಗ ರೂಪುಗೊಳ್ಳುತ್ತಿರುವುದರಿಂದ, ಈ ರಾಶಿಯವರಿಗೆ ಅತ್ಯಂತ ಹೆಚ್ಚಿನ ಲಾಭ ಸಿಗಲಿದೆ. ಮನಃಶಾಂತಿ: ಚಂದ್ರನ ಪ್ರಭಾವದಿಂದ ನಿಮ್ಮ ಮನಸ್ಸು ಶಾಂತವಾಗಿರುತ್ತದೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಸುಲಭವಾಗುತ್ತದೆ. ಕುಟುಂಬದೊಂದಿಗೆ ಸುಂದರ ಕ್ಷಣಗಳನ್ನು ಕಳೆಯುತ್ತೀರಿ. ಕೈ ಹಾಕಿದ ಪ್ರತಿಯೊಂದು ಕೆಲಸದಲ್ಲೂ ಜಯ ನಿಮ್ಮದಾಗುತ್ತದೆ.

ಸಿಂಹ ರಾಶಿ (Leo):

ಸಿಂಹ ರಾಶಿಯವರ ಪಾಲಿಗೆ ಈ ಸಮಯವು ಆರ್ಥಿಕ ಸಮೃದ್ಧಿಯನ್ನು ಹೊತ್ತು ತರಲಿದೆ. ನಿಮ್ಮ ಆದಾಯದಲ್ಲಿ ಗಣನೀಯ ಏರಿಕೆ ಕಂಡುಬರಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಷೇರು ಮಾರುಕಟ್ಟೆ ಅಥವಾ ಇನ್ಯಾವುದೇ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಇದು ಸಕಾಲ. ಹಳೆಯ ಸಾಲದ ಬಾಧೆಗಳಿಂದ ಮುಕ್ತಿ ಸಿಗಲಿದೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಕನ್ಯಾ ರಾಶಿ (Virgo):

ಕನ್ಯಾ ರಾಶಿಯವರಿಗೆ ಆರೋಗ್ಯ ಮತ್ತು ಐಶ್ವರ್ಯ ಎರಡೂ ಒದಗಿ ಬರಲಿವೆ. ಉದ್ಯೋಗದಲ್ಲಿರುವ ಅಡೆತಡೆಗಳು ನಿವಾರಣೆಯಾಗಿ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ಉದ್ಯಮಿಗಳಿಗೆ ಹೆಚ್ಚಿನ ಲಾಭ ದೊರೆಯುವ ಮುನ್ಸೂಚನೆ ಇದೆ.

ಕುಂಭ ರಾಶಿ (Aquarius):

ಕುಂಭ ರಾಶಿಯವರ ಬಹುದಿನಗಳ ಕನಸುಗಳು ನನಸಾಗುವ ಸಮಯವಿದು. ಹೊಸ ಮನೆ ಅಥವಾ ವಾಹನ ಖರೀದಿಸುವ ನಿಮ್ಮ ಹಂಬಲ ಈ ಸಮಯದಲ್ಲಿ ಈಡೇರುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿಯ ಜೊತೆಗೆ ಕುಟುಂಬದಲ್ಲಿ ಸಂಭ್ರಮದ ವಾತಾವರಣ ನೆಲೆಸಲಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನಿ ಹೆಣ್ಣುಮಕ್ಕಳು ಭಾರತೀಯ ಹೆಣ್ಣುಮಕ್ಕಳಿಗಿಂತ ಸುಂದರವಾಗಿದ್ದಾರೆ: ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ – Kannada News | Beauty Beyond Borders, Retired Judge Katju’s Bold Take on Pakistani vs Indian Beauty Sets the Internet Ablaze

ಕಾಟ್ಜು -ಸಾಂದರ್ಭಿಕ Image Credit source: Google Gemini

ನವದೆಹಲಿ, ಏಪ್ರಿಲ್ 19: ಸಾಮಾನ್ಯವಾಗಿ ನ್ಯಾಯಮೂರ್ತಿಗಳು ನಿವೃತ್ತಿ ಬಳಿಕ ಸಾರ್ವಜನಿಕ ಜೀವನದಿಂದ ದೂರವಿರುತ್ತಾರೆ. ಆದರೆ 2004 ರಿಂದ 2011 ರವರೆಗೆ ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಶೈಲಿಯೇ ಬೇರೆ. ಇತ್ತೀಚೆಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ತಮ್ಮ ವೈಯಕ್ತಿಕ ಅಭಿಪ್ರಾಯವೊಂದು ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್‌ಗಳ ಮಳೆಯನ್ನು ಸುರಿಸಿದೆ.

ಕಾಟ್ಜು ಅವರು ಭಾರತೀಯ ಮಹಿಳೆಯರು ಪಾಕಿಸ್ತಾನಿ ಮಹಿಳೆಯರಿಗಿಂತ ಸುಂದರವಾಗಿದ್ದಾರೆ ಎಂಬ ಧಾಟಿಯಲ್ಲಿ ತಮಾಷೆಯಾಗಿ ಪೋಸ್ಟ್ ಮಾಡಿದ್ದರು. ಇದು ಕೇವಲ ಸೌಂದರ್ಯದ ಬಗೆಗಿನ ಅಭಿಪ್ರಾಯವಾಗಿರದೆ, ಅವರ ಎಂದಿನ ವ್ಯಂಗ್ಯಭರಿತ ಶೈಲಿಯಿಂದ ಕೂಡಿತ್ತು. ಕಾಟ್ಜು ಅವರ ಪೋಸ್ಟ್‌ಗೆ ಭಾರತೀಯರು ಅತ್ಯಂತ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಸರ್, ಈ ಪೋಸ್ಟ್ ನೋಡಿದ ಮೇಲೆ ನಿಮ್ಮ ಹಳೆಯ ನ್ಯಾಯಾಂಗ ತೀರ್ಪುಗಳನ್ನೂ ನಾವು ಒಮ್ಮೆ ಮರುಪರಿಶೀಲಿಸಬೇಕಾಗುತ್ತದೆ ಎಂದು ಒಬ್ಬರು ತಮಾಷೆ ಮಾಡಿದ್ದಾರೆ. ನಿಮ್ಮೊಳಗಿನ ತುಂಟತನ ಇನ್ನು ಹೋಗಿಲ್ಲ ಎಂದು ಇನ್ನು ಕೆಲವರು ಕಾಲೆಳೆದಿದ್ದಾರೆ.

ಕಾಟ್ಜು ಅವರ ವಾದಕ್ಕೆ ಪಾಕಿಸ್ತಾನದ ನೆಟ್ಟಿಗರು ಸುಮ್ಮನೆ ಕುಳಿತುಕೊಳ್ಳಲಿಲ್ಲ. ಅವರು ತಮ್ಮ ದೇಶದ ಪುರುಷರ ಪರವಾಗಿ ಬ್ಯಾಟ್ ಬೀಸಿದರು. ನಮ್ಮ ದೇಶದ ಪುರುಷರು ಭಾರತೀಯರಿಗಿಂತ ಹೆಚ್ಚು ಹ್ಯಾಂಡ್ಸಮ್ ಆಗಿದ್ದಾರೆ ಎಂದು ಕೆಲವರು ಫೋಟೋಗಳನ್ನು ಹಂಚಿಕೊಂಡು ವಾದಕ್ಕಿಳಿದರೆ, ಸೌಂದರ್ಯ ಎಂಬುದು ನೋಡುವವರ ಕಣ್ಣಿನಲ್ಲಿರುತ್ತದೆ ಎಂದು ಇನ್ನು ಕೆಲವರು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜಕೀಯ ಮತ್ತು ಗಡಿ ಉದ್ವಿಗ್ನತೆ ಸದಾ ಇರುತ್ತದೆ. ಆದರೆ, ಕಾಟ್ಜು ಅವರ ಈ ಪೋಸ್ಟ್ ಚರ್ಚೆಯು ಯಾವುದೇ ದ್ವೇಷಕ್ಕೆ ಅವಕಾಶ ನೀಡದೆ, ಸಂಪೂರ್ಣವಾಗಿ ಲಘು ಹಾಸ್ಯದಿಂದ ಕೂಡಿತ್ತು. ಪ್ರಾದೇಶಿಕ ಹೆಮ್ಮೆ ಮತ್ತು ಸೌಂದರ್ಯದ ಕುರಿತಾದ ಈ ಚರ್ಚೆಯು ಎರಡೂ ಕಡೆಯ ಜನರನ್ನು ಸ್ವಲ್ಪ ಕಾಲ ನಗಿಸುವಂತೆ ಮಾಡಿತು. ಆದರೆ ಅವರ ಎಕ್ಸ್ ಖಾತೆಯಲ್ಲಿದ್ದ ಆ ಪೋಸ್ಟ್​ ಅನ್ನು ಡಿಲೀಟ್ ಮಾಡಲಾಗಿದ್ದು, ಜನರು ಸ್ಕ್ರೀನ್ ಶಾಟ್​​ಗಳನ್ನು ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪಬ್ಬಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ; ಮಹಡಿಯಿಂದ ಬಿದ್ದು ಯುವಕ ಸಾವು! – Kannada News | Mysuru Pub Brawl: Software Engineer Nishanth Dies After Fall at Purple Haze

ಮೈಸೂರು, ಏಪ್ರಿಲ್ 19: ಜಿಲ್ಲೆಯ ಪಬ್ ಒಂದರಲ್ಲಿ ನಡೆದ ಗಲಾಟೆ ಒಬ್ಬನ ಸಾವಿನಲ್ಲಿ ಅಂತ್ಯಗೊಂಡಿದೆ. ಮೈಸೂರು (Mysuru) ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಪರ್ಪಲ್ ಹೆಜ್ ರೆಸ್ಟೋರೆಂಟ್ನಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಲಾಟೆಯಲ್ಲಿ ಗೋಕುಲಂ ನಿವಾಸಿ 32 ವರ್ಷದ ನಿಶಾಂತ್ ಮೃತಪಟ್ಟಿದ್ದು, ಆತ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ.

ಪಾರ್ಟಿ ಮುಗಿಸಿ ಹೊರಬರುವ ವೇಳೆ ಘಟನೆ

ನಿಶಾಂತ್ ತನ್ನ ಸ್ನೇಹಿತರಾದ ಸಂದೀಪ್ ಮತ್ತು ದೀಕ್ಷಿತ್ ಜೊತೆ ಪಬ್‌ನಲ್ಲಿ ಪಾರ್ಟಿ ಮುಗಿಸಿ ಹೊರಬರುತ್ತಿದ್ದ. ಈ ವೇಳೆ ರಾಕಿ ಎಂಬಾತ ಹಾಗೂ ಅವನ ಸ್ನೇಹಿತರು ಎದುರಾಗಿದ್ದು, ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆದಿದೆ ಎನ್ನಲಾಗಿದೆ. ಗಲಾಟೆಯ ಮಧ್ಯೆ ನಿಶಾಂತ್ ಪಬ್‌ನ ಎರಡನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಪರಿಣಾಮ ನಿಶಾಂತ್‌ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ನಿಶಾಂತ್‌ನ್ನು ಉದ್ದೇಶಪೂರ್ವಕವಾಗಿ ಮಹಡಿಯಿಂದ ತಳ್ಳಿಹಾಕಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ಕೊಂದ ‘ಸೈಕೋ’ ತಂದೆ – Kannada News | UP man kills twin daughters by slitting their throats, then calls police himself

ಕಾನ್ಪುರ, ಏಪ್ರಿಲ್ 19:  ತಂದೆಯೊಬ್ಬ ತನ್ನ 11 ವರ್ಷದ  ಅವಳಿ ಹೆಣ್ಣು ಮಕ್ಕಳನ್ನು ರಾಕ್ಷಸನಂತೆ ಕೊಲೆ(Murder) ಮಾಡಿದ್ದಾನೆ. ಕಾನ್ಪುರದ ನಿವಾಸವೊಂದರಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯ ಕ್ರೌರ್ಯದ ಒಂದೊಂದೇ ಪುಟಗಳು ಈಗ ತೆರೆದುಕೊಳ್ಳುತ್ತಿವೆ. ಆರೋಪಿ ಮತ್ತು ಆತನ ಪತ್ನಿ ರೇಷ್ಮಾ ಛೆಟ್ರಿ 2014 ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಆರಂಭದಲ್ಲಿ ಚೆನ್ನಾಗಿದ್ದ ಸಂಸಾರದಲ್ಲಿ ನಂತರ ಬಿರುಕು ಮೂಡಿತು. ಆರೋಪಿ ಮದ್ಯವ್ಯಸನಿಯಾಗಿದ್ದು, ಪತ್ನಿಗೆ ಪ್ರತಿದಿನ ಚಿತ್ರಹಿಂಸೆ ನೀಡುತ್ತಿದ್ದ. ಎಷ್ಟರಮಟ್ಟಿಗೆ ಅಂದರೆ, ಮನೆಯ ಪ್ರತಿಯೊಂದು ಮೂಲೆಯಲ್ಲಿ ಹಾಗೂ ಮಲಗುವ ಕೋಣೆಯಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಪತ್ನಿಯ ಮೇಲೆ ನಿಗಾ ಇಟ್ಟಿದ್ದ.

ಕೊಲೆಯ ಹಿಂದಿನ ರಾತ್ರಿ ಕುಟುಂಬದವರೆಲ್ಲರೂ ಒಟ್ಟಿಗೆ ಊಟ ಮಾಡಿದ್ದರು. ನಂತರ ಆರೋಪಿ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಮಲಗಿಸಲು ತನ್ನ ಕೋಣೆಗೆ ಕರೆದೊಯ್ದಿದ್ದ. ಪತ್ನಿ ರೇಷ್ಮಾ ಸಿಸಿಟಿವಿ ಮಾನಿಟರ್‌ನಲ್ಲಿ ನೋಡುತ್ತಿದ್ದಾಗ, ಪತಿ ಫೋನ್‌ನಲ್ಲಿ ದೀರ್ಘಕಾಲ ಮಾತನಾಡುತ್ತಿದ್ದುದು ಕಂಡುಬಂದಿದೆ. ಬೆಳಗಿನ ಜಾವ 2:30ಕ್ಕೆ ಆತ ಒಬ್ಬ ಮಗಳನ್ನು ಸ್ನಾನಗೃಹಕ್ಕೆ ಕರೆದೊಯ್ದು ನಂತರ ವಾಪಸ್ ಬಂದಿದ್ದಾನೆ. ಸ್ವಲ್ಪ ಸಮಯದ ನಂತರ ಕೋಣೆಯ ದೀಪಗಳನ್ನು ಆಫ್ ಮಾಡಿದ್ದಾನೆ. ಆನಂತರ ಅಲ್ಲಿ ಯಾವುದೇ ಸದ್ದು ಕೇಳಿಸದಿದ್ದಾಗ, ಎಲ್ಲರೂ ಮಲಗಿದ್ದಾರೆ ಎಂದು ರೇಷ್ಮಾ ಭಾವಿಸಿದ್ದರು.

ದೀಪ ಆಫ್ ಮಾಡಿದ ಆ ಕರಾಳ ಕ್ಷಣದಲ್ಲೇ ಆರೋಪಿ ತನ್ನಿಬ್ಬರು ಮಕ್ಕಳ ಕತ್ತನ್ನು ಹರಿತವಾದ ಆಯುಧದಿಂದ ಸೀಳಿ ಹತ್ಯೆ ಮಾಡಿದ್ದಾನೆ. ಕೃತ್ಯ ಎಸಗಿದ ನಂತರ ಏನೂ ಅರಿಯದವನಂತೆ ತಾನೇ ಪೊಲೀಸರಿಗೆ ಫೋನ್ ಮಾಡಿ ಮನೆಯಲ್ಲಿ ಕೊಲೆಯಾಗಿದೆ ಎಂದು ಮಾಹಿತಿ ನೀಡಿದ್ದಾನೆ. ಪೊಲೀಸರನ್ನು ದಾರಿ ತಪ್ಪಿಸಲು ಆತ ನಡೆಸಿದ ಈ ನಾಟಕ ದೀರ್ಘಕಾಲ ಉಳಿಯಲಿಲ್ಲ.

ಮತ್ತಷ್ಟು ಓದಿ: ಗುಜರಾತ್​ನಲ್ಲಿ ಬೈಕ್ ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ, ಕೊಲೆ, ಕೋಮುಗಲಭೆ

ಪೊಲೀಸರು ಸ್ಥಳಕ್ಕೆ ಬಂದಾಗ ಇಬ್ಬರು ಹೆಣ್ಣು ಮಕ್ಕಳ ಶವಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದವು. ಆತ ನಮ್ಮನ್ನು ಕೊಲ್ಲುವುದಾಗಿ ಆಗಾಗ ಬೆದರಿಕೆ ಹಾಕುತ್ತಿದ್ದ. ನನ್ನನ್ನು ಹೊಡೆದು ಮನೆಯಿಂದ ಹೊರಹಾಕುತ್ತಿದ್ದ ಎಂದು ರೇಷ್ಮಾ ಪೊಲೀಸರ ಮುಂದೆ ಕಣ್ಣೀರಿಟ್ಟಿದ್ದಾರೆ. ಒಂಬತ್ತು ತಿಂಗಳು ಮಕ್ಕಳಿಂದ ದೂರವಿದ್ದ ರೇಷ್ಮಾ, ಮಕ್ಕಳ ಮೇಲಿನ ಪ್ರೀತಿಗಾಗಿ ಮರಳಿ ಬಂದಿದ್ದರು. ಆದರೆ ಬಂದ ಕೆಲವೇ ದಿನಗಳಲ್ಲಿ ಮಕ್ಕಳ ಹೆಣ ನೋಡುವಂತಾಗಿದೆ.

ಹಿರಿಯ ಪೊಲೀಸ್ ಅಧಿಕಾರಿ ದೀಪೇಂದ್ರ ನಾಥ್ ಚೌಧರಿ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವಿಧಿವಿಜ್ಞಾನ ತಂಡ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಹಂತಕ ತಂದೆಯನ್ನು ಈಗಾಗಲೇ ಬಂಧಿಸಲಾಗಿದ್ದು, ಈ ದಾರುಣ ಹತ್ಯೆಯ ಹಿಂದಿನ ಅಸಲಿ ಉದ್ದೇಶವನ್ನು ಹೊರಹಾಕಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:46 pm, Sun, 19 April 26

Source link

Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಮೂರನೇ ವಾರದ ಭವಿಷ್ಯ ತಿಳಿಯಿರಿ – Kannada News | April 2026 Weekly Horoscope: Career, Speech Control, Anger and Success Predictions!

ಇದು 2026ರ ಏಪ್ರಿಲ್ ನ ಮೂರನೇ ವಾರವಾಗಿದ್ದು, ವೃತ್ತಿಯಲ್ಲಿ ಸಂತೃಪ್ತಿ, ಮಾತಿನ ಮೇಲೆ‌ ಕಡಿವಾಣ, ಕೋಪದ ನಿಯಂತ್ರಣ ಅನಿವಾರ್ಯ, ಅನುಭವಿಗಳ ಸಹವಾಸ, ಮಹತ್ಕಾರ್ಯಕ್ಕೆ ಪ್ರೋತ್ಸಾಹ ಇವೆಲ್ಲ ಈ ವಾರ ವಿಶೇಷ ವಿಷಯ.

ಮೇಷ:

ಈ ವಾರ ನಿಮಗೆ ಹೊಸ ಹುರುಪು ತರಲಿದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಿಗಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಆರೋಗ್ಯದ ಕಡೆ ಗಮನವಿರಲಿ. ಕುಟುಂಬದಲ್ಲಿ ಸೌಹಾರ್ದತೆ ಇರಲಿದ್ದು, ಹಿರಿಯರ ಆಶೀರ್ವಾದದೊಂದಿಗೆ ಮುನ್ನಡೆಯಿರಿ.

​ವೃಷಭ:

ಆಲೋಚನೆಗಳಲ್ಲಿ ಸ್ಪಷ್ಟತೆ ಇರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ. ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ದೂರದ ಪ್ರಯಾಣದ ಯೋಗವಿದ್ದು, ಸುರಕ್ಷತೆಗೆ ಆದ್ಯತೆ ನೀಡಿ.

​ಮಿಥುನ:

ವೃತ್ತಿ ಜೀವನದಲ್ಲಿ ಪ್ರಗತಿ ಕಂಡುಬರಲಿದೆ. ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಹೂಡಿಕೆ ಮಾಡುವ ಮುನ್ನ ಅನುಭವಸ್ಥರ ಸಲಹೆ ಪಡೆಯಿರಿ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗಲಿವೆ, ಅದನ್ನು ಪ್ರೀತಿಯಿಂದ ನಿಭಾಯಿಸಿ.

​ಕರ್ಕಾಟಕ:

ಸಮಾಜದಲ್ಲಿ ಗೌರವ ಹೆಚ್ಚಾಗುವ ಸಮಯವಿದು. ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ. ಮಾನಸಿಕ ನೆಮ್ಮದಿಗಾಗಿ ಧ್ಯಾನದ ಮೊರೆ ಹೋಗಿ. ನೆರೆಹೊರೆಯವರೊಂದಿಗೆ ಅನಗತ್ಯ ವಾದ ಬೇಡ. ಹಿರಿಯರ ಆರೋಗ್ಯದ ಮೇಲೆ ನಿಗಾ ಇರಲಿ.

​ಸಿಂಹ:

ನಿಮ್ಮ ಆತ್ಮವಿಶ್ವಾಸ ಇಂದು ನಿಮ್ಮನ್ನು ಉನ್ನತ ಸ್ಥಾನಕ್ಕೆ ತಲುಪಿಸಲಿದೆ. ಹೊಸ ಉದ್ಯೋಗದ ಆಕಾಂಕ್ಷಿಗಳಿಗೆ ಶುಭ ವಾರ್ತೆ ಸಿಗಲಿದೆ. ಪ್ರೇಮ ಜೀವನದಲ್ಲಿ ಮಧುರತೆ ಇರಲಿದೆ. ಹಠಮಾರಿ ಸ್ವಭಾವ ಬಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ.

​ಕನ್ಯಾ:

ಕೆಲಸದ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ, ಸರಿಯಾದ ಸಮಯ ನಿರ್ವಹಣೆ ಅಗತ್ಯ. ಹಣಕಾಸಿನ ವಹಿವಾಟಿನಲ್ಲಿ ಎಚ್ಚರಿಕೆ ಇರಲಿ. ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಸಂಭ್ರಮ ಮನೆ ಮಾಡಲಿದೆ. ಸಾತ್ವಿಕ ಆಹಾರ ಸೇವನೆಗೆ ಆದ್ಯತೆ ನೀಡಿ.

​ತುಲಾ:

ವ್ಯಾಪಾರಸ್ಥರಿಗೆ ಲಾಭದಾಯಕ ವಾರವಿದು. ಪಾಲುದಾರಿಕೆಯಲ್ಲಿ ಉತ್ತಮ ಬಾಂಧವ್ಯ ಮೂಡಲಿದೆ. ಕಲಾ ಕ್ಷೇತ್ರದಲ್ಲಿ ಇರುವವರಿಗೆ ಹೊಸ ಅವಕಾಶಗಳು ಹುಡುಕಿ ಬರಲಿವೆ. ದೈಹಿಕ ವ್ಯಾಯಾಮಕ್ಕೆ ಸಮಯ ಮೀಸಲಿಡಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.

​ವೃಶ್ಚಿಕ:

ಸವಾಲುಗಳನ್ನು ಧೈರ್ಯದಿಂದ ಎದುರಿಸುವಿರಿ. ಶತ್ರುಗಳ ತಂತ್ರಗಳು ಫಲಿಸುವುದಿಲ್ಲ. ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆ ಕಾಣಲಿದೆ. ಮಕ್ಕಳ ಶಿಕ್ಷಣದ ಬಗ್ಗೆ ಶುಭ ಸುದ್ದಿ ಕೇಳುವಿರಿ. ಕೋಪದ ಮೇಲೆ ನಿಯಂತ್ರಣವಿರಲಿ, ಶಾಂತಿ ಕಾಪಾಡಿಕೊಳ್ಳಿ.

​ಧನುಸ್ಸು:

ಸೃಜನಾತ್ಮಕ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಾಗುವ ಸಮಯ. ಪ್ರಯಾಣದಿಂದ ಲಾಭ ಉಂಟಾಗಲಿದೆ. ಹಳೆಯ ಬಾಕಿ ಹಣ ಕೈಸೇರಬಹುದು. ದೇವತಾ ದರ್ಶನ ಭಾಗ್ಯವಿದ್ದು, ಮನಸ್ಸಿಗೆ ಆಧ್ಯಾತ್ಮಿಕ ಶಾಂತಿ ದೊರೆಯಲಿದೆ.

​ಮಕರ:

ಭೂಮಿ ಅಥವಾ ವಾಹನ ಖರೀದಿಯ ಯೋಗವಿದೆ. ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವೃತ್ತಿಯಲ್ಲಿ ಅಧಿಕಾರಿಗಳಿಂದ ಪ್ರಶಂಸೆ ಪಡೆಯುವಿರಿ. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಸ್ನೇಹಿತರ ಸಹಾಯದಿಂದ ಕಠಿಣ ಕೆಲಸಗಳು ಸುಗಮವಾಗಲಿವೆ.

​ಕುಂಭ:

ನೆರೆ-ಹೊರೆಯವರೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ಸಣ್ಣ ಪ್ರವಾಸದ ಸಾಧ್ಯತೆ ಇದೆ. ಸಾಲದ ಹೊರೆ ಕಡಿಮೆಯಾಗುವ ಮಾರ್ಗಗಳು ಗೋಚರಿಸಲಿವೆ. ಸಂಗಾತಿಯ ಬೆಂಬಲ ನಿಮ್ಮನ್ನು ಹುರಿದುಂಬಿಸಲಿದೆ. ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ಶುಭ ಕಾಲವಿದು.

​ಮೀನ:

ನೀವಾಡುವ ಮಾತಿನ ಮೇಲೆ ನಿಗಾ ಇರಲಿ, ಸಂವಹನ ದೋಷದಿಂದ ಸಮಸ್ಯೆ ಕಾಡಬಹುದು. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆ ಇದೆ. ಹೂಡಿಕೆಯಲ್ಲಿ ಲಾಭ ಸಿಗಲಿದೆ. ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ದಾನ ಧರ್ಮದಲ್ಲಿ ಆಸಕ್ತಿ ತೋರಿಸುವಿರಿ.

– ಲೋಹಿತ ಹೆಬ್ಬಾರ್ – 8762924271 (what’s app only)

Published On – 12:37 pm, Sun, 19 April 26

Source link

ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್​​: ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ; ಹಲವು ಮದ್ಯಗಳ ಬೆಲೆ ಏರಿಕೆ ಸಾಧ್ಯತೆ – Kannada News | Big Shock for Liquor Lovers: Prices of Several Alcoholic Drinks Likely to Rise by 20 Percent

ವಿವಿಧ ಮದ್ಯದ ಬೆಲೆಯಲ್ಲಿ ಹೆಚ್ಚಳ ಸಾಧ್ಯತೆImage Credit source: AI Image

ಬೆಂಗಳೂರು, ಏಪ್ರಿಲ್​​ 19: ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಆಧಾರದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಸೇವಿಸುವ ಮದ್ಯಗಳಾದ ವಿಸ್ಕಿ, ರಮ್, ಜಿನ್, ಬ್ರಾಂಡಿಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಶೀಘ್ರದಲ್ಲೇ ಕನಿಷ್ಠ ಶೇ.20ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೊಸ ವ್ಯವಸ್ಥೆಯ ನಿಯಮದಂತೆ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ (AIB) ಹೆಚ್ಚು ಇದ್ದರೆ ತೆರಿಗೆಯೂ ಹೆಚ್ಚಾಗಲಿದೆ. ಹೀಗಾಗಿ ಕರ್ನಾಟಕದಲ್ಲಿ ತಯಾರಾಗುವ ಇಂಡಿಯನ್ ಮೇಡ್ ಲಿಕರ್ ಬೆಲೆಯ ಮೇಲೂ ಇದು ಪರಿಣಾಮ ಬೀರಲಿದೆ.

ಈಗಾಗಲೇ MRP ಆಧಾರದ ಮೇಲೆ ವಿವಿಧ ಸ್ಲ್ಯಾಬ್‌ಗಳಲ್ಲಿ ಮದ್ಯ ಮಾರಾಟವಾಗುತ್ತಿದ್ದು, ಹೊಸ ವ್ಯವಸ್ಥೆ ಜಾರಿಯಾದಲ್ಲಿಕಡಿಮೆ ಆದಾಯ ವರ್ಗದವರು ಬಳಸುವ ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯ ಹೆಚ್ಚು ದುಬಾರಿ ಆಗಲಿದೆ. ಈ ವಿಭಾಗದ ಮದ್ಯಗಳಲ್ಲಿ ಸರಾಸರಿ ಆಲ್ಕೋಹಾಲ್ ಪ್ರಮಾಣ ಶೇ. 42.8ರಷ್ಟಿದೆ. ಇವೇ ನಾಲ್ಕು ಸ್ಲ್ಯಾಬ್‌ಗಳು ಒಟ್ಟು ಎಕ್ಸೈಸ್ ಆದಾಯದಲ್ಲಿ ಶೇ.80ರಷ್ಟು ಪಾಲು ಹೊಂದಿದ್ದು, ಕಳೆದ ವರ್ಷ 180 ಮಿಲಿ ಮದ್ಯದ ಬೆಲೆ 80ರಿಂದ 95 ರೂಪಾಯಿಗೆ ಏರಿಕೆಯಾಗಿತ್ತು. ಆದರೆ ಹೊಸ ತೆರಿಗೆ ವ್ಯವಸ್ಥೆಯ ನಂತರ 105-110ರೂಪಾಯಿವರೆಗೆ ದರ ಏರಿಕೆಯಾಗಬಹುದು ಎನ್ನಲಾಗಿದೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ; ಬಜೆಟ್​​​ನಲ್ಲಿ ಮಹತ್ವದ ನಿರ್ಧಾರ

ಸರ್ಕಾರವು ಆರು ದಶಕಗಳ ಹಳೆಯ ಮದ್ಯ ತೆರಿಗೆ ನೀತಿಯಲ್ಲಿ ತಿದ್ದುಪಡಿ ಮಾಡಲು ಶನಿವಾರ ಕರಡು ಅಧಿಸೂಚನೆ ಹೊರಡಿಸಿದ್ದು, ಇದು ಜಾರಿಯಾದಲ್ಲಿ ಆಲ್ಕೋಹಾಲ್-ಇನ್-ಬೇವರೇಜ್ (AIB) ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತಂದ ಮೊದಲ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ. ಪಾಶ್ಚಾತ್ಯ ದೇಶಗಳಲ್ಲಿ ಈ ವ್ಯವಸ್ಥೆ ಇದ್ದರೂ, ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಮದ್ಯದ ಪ್ರಮಾಣದ ಬದಲಿಗೆ ಅದರಲ್ಲಿನ ನಿಜವಾದ ಆಲ್ಕೋಹಾಲ್ ಪ್ರಮಾಣದ ಆಧಾರದಲ್ಲಿ ತೆರಿಗೆ ವಿಧಿಸುವ ಕ್ರಮಕ್ಕೆ ರಾಜ್ಯ ಮುಂದಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಬ್ರೂವರ್ಸ್ ಮತ್ತು ಡಿಸ್ಟಿಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಮಾರ್ ಪರಸಾ, ಈ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊದಲ ನಾಲ್ಕು ಸ್ಲ್ಯಾಬ್‌ಗಳಲ್ಲಿ ಬರುವ ಮದ್ಯ ಸಾಮಾನ್ಯ ಜನರಿಗೆ ಲಭ್ಯವಾಗುವಂತಹದ್ದು. ಇದರ ಬೆಲೆ ಏರಿಕೆಯಿಂದ ಮಾರುಕಟ್ಟೆಯ ಮೇಲೆ ಪರಿಣಾಮ ಉಂಟಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅಂತಿಮ ಅಧಿಸೂಚನೆಗೂ ಮುನ್ನ ಸರ್ಕಾರ ನಮ್ಮ ಸಲಹೆಗಳನ್ನು ಪರಿಗಣಿಸುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:17 pm, Sun, 19 April 26

Source link

ಹಾರ್ಮುಜ್​ನಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ, ಇರಾನ್ ರಾಯಭಾರಿ ಬಳಿ ವಿವರಣೆ ಕೇಳಿದ ಭಾರತ – Kannada News | Hormuz Tensions Spike as India Calls in Iranian Envoy

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ಮಿಲಿಟರಿ ದಾಳಿ ನಡೆಸಿದ ಕಾರಣ, ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಕದನ ವಿರಾಮವಿದ್ದರೂ ಇರಾನ್ ದಾಳಿ ಮುಂದುವರೆಸಿದೆ. ಇರಾನ್‌ನ ರಾಯಭಾರಿಯನ್ನು ಕರೆಸಿ ಭಾರತ ವಿವರಣೆ ಕೇಳಿದೆ. ಅಮೆರಿಕಾ ನೌಕಾಪಡೆ ಇರುವ ಕಾರಣ ಸಂಚಾರ ನಿಷೇಧಿಸಿದೆ ಎಂದು ಇರಾನ್ ಹೇಳಿದೆ. ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ದಾಳಿ ನಡೆಸಿದೆ. ಭಾರತದ ಎರಡು ಹಡಗುಗಳು ಗುಂಡಿನ ದಾಳಿಗೆ ಒಳಗಾಗಿದ್ದು, ಒಂದು ಹಡಗು ಭಾರತದ ಕರಾವಳಿ ಕಡೆಗೆ ತಪ್ಪಿಸಿಕೊಂಡಿದೆ.

ಈ ಘಟನೆಯಿಂದ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಭಾರತದಲ್ಲಿರುವ ಇರಾನ್ ರಾಯಭಾರಿಯನ್ನು ಕರೆಸಿ ವಿವರಣೆ ಕೇಳಿದೆ. ಇರಾನ್, ಇಸ್ರೇಲ್ ಮತ್ತು ಅಮೆರಿಕಾ ನಡುವೆ ಕದನ ವಿರಾಮ ಘೋಷಣೆಯಾಗಿದ್ದರೂ, ಹರ್ಮುಜ್ ಜಲಸಂಧಿಯಲ್ಲಿ ಮತ್ತೆ ಉದ್ವಿಗ್ನತೆ ಸೃಷ್ಟಿಯಾಗಿದೆ.

ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿದೆ ಎಂದು ಘೋಷಿಸಿದ್ದರೂ, ಇಪ್ಪತ್ತನಾಲ್ಕು ಗಂಟೆಗಳೊಳಗಾಗಿ ಮತ್ತೆ ಬಂದ್ ಮಾಡಿದೆ. ಅಮೆರಿಕದ ಯುದ್ಧ ನೌಕೆಗಳು ಇನ್ನೂ ಹಾರ್ಮುಜ್ ಜಲಸಂಧಿಯಲ್ಲಿ ಇರುವುದರಿಂದ ಮತ್ತು ಇರಾನ್ ಬಂದರುಗಳಿಗೆ ಅಮೆರಿಕ ನಿರ್ಬಂಧ ಹೇರಿರುವ ಕಾರಣ ಹಡಗುಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಯುರೇನಿಯಂ ಕಾರ್ಯಕ್ರಮಗಳನ್ನು ನಿಲ್ಲಿಸುವ ಅಮೆರಿಕದ ಷರತ್ತುಗಳನ್ನು ಇರಾನ್ ತಿರಸ್ಕರಿಸಿದೆ. ಈ ಘಟನೆಗಳು ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಗೊಂದಲಗಳಿಗೆ ಕಾರಣವಾಗಿವೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version