ಬೆಂಗಳೂರು, ಮಾ.20: ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟದಲ್ಲಿ ಏರುಪೇರು ಕಂಡುಬರುತ್ತಿದೆ. ವಾಹನ ಸಂಚಾರ ಮತ್ತು ಧೂಳಿನ ಪ್ರಮಾಣ ಹೆಚ್ಚಾಗಿರುವುದರಿಂದ ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಗಾಳಿಯ ಗುಣಮಟ್ಟ ‘ಸಾಧಾರಣ’ ಮಟ್ಟಕ್ಕೆ ಕುಸಿದಿದೆ. ಸಿಲ್ಕ್ ಬೋರ್ಡ್, ಪೀಣ್ಯ ಮತ್ತು ವೈಟ್ಫೀಲ್ಡ್ ಭಾಗಗಳಲ್ಲಿ ಮಾಲಿನ್ಯದ ಮಟ್ಟ ಕೊಂಚ ಹೆಚ್ಚಾಗಿದೆ. ಉಸಿರಾಟದ ತೊಂದರೆ ಇರುವವರು ಹೊರಬರುವಾಗ ಮಾಸ್ಕ್ ಧರಿಸುವುದು ಸೂಕ್ತ.
ಮೈಸೂರಿನಲ್ಲಿ ಇಂದು AQI ಮಟ್ಟ 55 – 75 ಇದೆ. ಇದು ಉತ್ತಮ ಗಾಳಿಯ ಮಟ್ಟವಾಗಿದೆ. ಸಾಂಸ್ಕೃತಿಕ ನಗರಿಯ ಗಾಳಿಯ ಗುಣಮಟ್ಟ ತೃಪ್ತಿದಾಯಕವಾಗಿದೆ. ಹುಬ್ಬಳ್ಳಿ-ಧಾರವಾಡ ಗಾಳಿಯ ಮಟ್ಟ 85 – 105 ಇದೆ. ರಸ್ತೆ ಕಾಮಗಾರಿ ಮತ್ತು ಒಣ ಹವಾಮಾನದಿಂದಾಗಿ ಧೂಳಿನ ಕಣಗಳ ಪ್ರಮಾಣ ಹೆಚ್ಚಿದೆ. ಮಂಗಳೂರಿನಲ್ಲಿ ಇಂದು ಗಾಳಿಯ ಮಟ್ಟ 45 – 60 ಉತ್ತಮವಾಗಿದೆ. ಸಮುದ್ರ ತೀರದ ಗಾಳಿಯು ಶುದ್ಧವಾಗಿದ್ದು, ಆರೋಗ್ಯಕ್ಕೆ ಪೂರಕವಾಗಿದೆ.
ಶಿವಮೊಗ್ಗ ಮತ್ತು ಕೊಡಗಿನಲ್ಲಿ ಇಂದು ಗಾಳಿಯ ಮಟ್ಟ 30 – 50 ಉತ್ತಮವಾಗಿದೆ. ಮಲೆನಾಡು ಭಾಗದಲ್ಲಿ ವಾಯು ಮಾಲಿನ್ಯ ಅತ್ಯಂತ ಕನಿಷ್ಠ ಮಟ್ಟದಲ್ಲಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಾಯು ಗುಣಮಟ್ಟ ಅತ್ಯಂತ ಉತ್ತಮವಾಗಿದ್ದು, ಆರೋಗ್ಯಕ್ಕೆ ಪೂರಕವಾಗಿದೆ.AQI 100 ದಾಟಿದ ನಗರಗಳಲ್ಲಿ ಹಿರಿಯ ನಾಗರಿಕರು ಮತ್ತು ಮಕ್ಕಳು ಬೆಳಗಿನ ಜಾವ ಹೊರಾಂಗಣ ವ್ಯಾಯಾಮ ಮಾಡುವಾಗ ಎಚ್ಚರಿಕೆ ವಹಿಸುವುದು ಉತ್ತಮ.
ನವದೆಹಲಿ/ಬೆಂಗಳೂರು, ಮಾರ್ಚ್ 20: ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಯುದ್ಧದ ಪರಿಣಾಮ ಭಾರತದಲ್ಲಿ (India) ಎಲ್ಪಿಜಿ (LPG) ಗ್ಯಾಸ್ ಕೊರತೆ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ಇದುವರೆಗೆ ಹೊರ್ಮುಝ್ ಜಲಸಂಧಿ ಸಮಸ್ಯೆಯಿಂದ ಅಡಚಣೆ ಉಂಟಾಗಿದೆ ಎನ್ನಲಾಗುತ್ತಿತ್ತು. ಆ ಮಾರ್ಗದ ಮೂಲಕ ಗ್ಯಾಸ್ ತುಂಬಿದ ಹಡಗುಗಳು ಬರುವಂತೆ ಮಾಡಲು ಕೇಂದ್ರ ಸರ್ಕಾರ ಹೇಗೋ ವ್ಯವಸ್ಥೆ ಮಾಡಿದೆ. ಆದರೆ ಇದೀಗ ಗಲ್ಫ್ ರಾಷ್ಟ್ರಗಳ ತೈಲ ಹಾಗೂ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿಗಳಿಂದ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.
ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆಯೇ ಗಲ್ಫ್ ಪ್ರದೇಶದ ಅನೇಕ ತೈಲ ಹಾಗೂ ಗ್ಯಾಸ್ ಘಟಕಗಳು ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಿರುವ ಬಗ್ಗೆ ವರದಿಗಳಾಗಿವೆ. ಸೌದಿ ಅರೇಬಿಯಾದ ಅರಾಮ್ಕೋ, ಕತಾರ್ನ ರಾಸ್ ಲಫಾನ್ ಅನಿಲ ಘಟಕ ಸೇರಿದಂತೆ ಪ್ರಮುಖ ಉತ್ಪಾದನಾ ಕೇಂದ್ರಗಳು ಹಾನಿಗೊಳಗಾಗಿದ್ದು, ಉತ್ಪಾದನೆ ಮತ್ತು ಪೂರೈಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಕತಾರ್ನ ‘ಪರ್ಲ್ ಜಿಟಿಎಲ್’ ಘಟಕ ಸ್ಥಗಿತ
ವಿಶೇಷವಾಗಿ, ಜಗತ್ತಿನ ಅತಿದೊಡ್ಡ ಗ್ಯಾಸ್ ಟು ಲಿಕ್ವಿಡ್ ಘಟಕಗಳಲ್ಲಿ ಒಂದಾದ ಕತಾರ್ನ ‘ಪರ್ಲ್ ಜಿಟಿಎಲ್’ ಘಟಕ ಸ್ಥಗಿತಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಭಾರತಕ್ಕೆ ಕತಾರ್ ಪ್ರಮುಖ ಎಲ್ಪಿಜಿ ಮತ್ತು ಎಲ್ಎನ್ಜಿ ಪೂರೈಕೆದಾರ ರಾಷ್ಟ್ರವಾಗಿದ್ದು, ಭಾರತದ ಒಟ್ಟು ಗ್ಯಾಸ್ ಅವಶ್ಯಕತೆಯ ಶೇ 50ರಷ್ಟು ಭಾಗವನ್ನು ಆಮದು ಮಾಡಿಕೊಳ್ಳುತ್ತದೆ.
ಕತಾರ್-ಭಾರತ ಮಧ್ಯೆ ಹೆಚ್ಚಿನ ವಹಿವಾಟು
ಪೆಟ್ರೋನೆಟ್ LNG ಮತ್ತು ಸರ್ಕಾರಿ ಸ್ವಾಮ್ಯದ GAIL ಕಂಪನಿಗಳು ಕತಾರ್ ಜತೆ ದೀರ್ಘಾವಧಿಯ ಒಪ್ಪಂದಗಳನ್ನು ಹೊಂದಿವೆ. ಪೆಟ್ರೋನೆಟ್ಗೆ ವರ್ಷಕ್ಕೆ 7.5 ಮಿಲಿಯನ್ ಟನ್ LNG ಪೂರೈಕೆ ಆಗುತ್ತಿದ್ದು, ಆಯಿಲ್ ಮಾರ್ಕೆಟಿಂಗ್ ಕಂಪನಿಗಳಿಗೆ 5 ಮಿಲಿಯನ್ ಮೆಟ್ರಿಕ್ ಟನ್ LPG ನೀಡಲಾಗುತ್ತದೆ. 2024-25ರಲ್ಲಿ ಕತಾರ್ ಭಾರತಕ್ಕೆ 6.39 ಬಿಲಿಯನ್ ಡಾಲರ್ ಮೌಲ್ಯದ LNG ಹಾಗೂ 3.21 ಬಿಲಿಯನ್ ಡಾಲರ್ ಮೌಲ್ಯದ LPG ರಫ್ತು ಮಾಡಿತ್ತು.
ಇದಲ್ಲದೆ, ಸೌದಿ ಅರೇಬಿಯಾದ ಯಾನ್ಬು ಪ್ರದೇಶದಲ್ಲಿರುವ SAMREF ತೈಲ ಸಂಸ್ಕರಣಾ ಘಟಕದ ಮೇಲಿನ ದಾಳಿಯಿಂದ ತೈಲ ಪೂರೈಕೆಯ ಮೇಲೂ ಪರಿಣಾಮ ಬಿದ್ದಿದೆ. ಹೊರ್ಮುಝ್ ಜಲಸಂಧಿ ಭಾಗಶಃ ಅಸ್ತವ್ಯಸ್ತವಾಗಿರುವ ಹಿನ್ನೆಲೆ, ಪರ್ಯಾಯ ಮಾರ್ಗಗಳಿಂದ ಸಾಗುತ್ತಿದ್ದ ತೈಲ ಪೂರೈಕೆಯೂ ಈಗ ಅಡಚಣೆಗೆ ಒಳಗಾಗಿದೆ.
ಪೆಟ್ರೋಲ್, ಡೀಸೆಲ್ ದರ ಏರಿಕೆ?
ಈ ಬೆಳವಣಿಗೆಗಳ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 119 ಡಾಲರ್ವರೆಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಭಾರತದಲ್ಲಿಯೂ ಪೆಟ್ರೋಲ್, ಡೀಸೆಲ್ ದರ ಏರಿಕೆಯ ಭೀತಿ ಎದುರಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ಎಲ್ಪಿಜಿ ಕೊರತೆಯಿಂದ ಹೋಟೆಲ್ ಉದ್ಯಮ ತತ್ತರಿಸಿ ಹೋಗಿದ್ದು, ಹಲವೆಡೆ ಹೋಟೆಲ್ಗಳು ಬಾಗಿಲು ಮುಚ್ಚಿವೆ. ಕೈಗಾರಿಕೆಗಳು ಮತ್ತು ಸಣ್ಣ ಉದ್ಯಮಗಳ ಮೇಲೂ ಪರಿಣಾಮ ಬೀಳುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
1973 ರಲ್ಲಿ ಏನಾಗಿತ್ತು ಗೊತ್ತಾ?
ತಜ್ಞರ ಪ್ರಕಾರ, ಇಂದಿನ ಪರಿಸ್ಥಿತಿ 1973ರ ಜಾಗತಿಕ ತೈಲ ಬಿಕ್ಕಟ್ಟನ್ನು ನೆನಪಿಸುವಂತಿದ್ದು, ಆಗಿನಂತೆಯೇ ತೈಲ ಪೂರೈಕೆ ಸಂಪೂರ್ಣ ಸ್ಥಗಿತಗೊಂಡರೆ ಜಗತ್ತಿನ ಆರ್ಥಿಕ ವ್ಯವಸ್ಥೆಯ ಮೇಲೂ ಗಂಭೀರ ಪರಿಣಾಮ ಬೀಳಬಹುದು.
ಒಟ್ಟಿನಲ್ಲಿ, ಗಲ್ಫ್ ಪ್ರದೇಶದ ಯುದ್ಧ ತೀವ್ರತೆ ಕಡಿಮೆಯಾಗದಿದ್ದರೆ ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳು ಮತ್ತೊಂದು ದೊಡ್ಡ ಇಂಧನ ಸಂಕಷ್ಟವನ್ನು ಎದುರಿಸಬೇಕಾಗುವ ಸಾಧ್ಯತೆ ತಲೆದೋರಿದೆ.
ಬೆಂಗಳೂರು, ಮಾ.20: ಭಗವಂತನ ಆರಾಧನೆಯಲ್ಲಿ ಮಡಿಯ ಮಹತ್ವದ ಕುರಿತು ಅನೇಕ ಪ್ರಶ್ನೆಗಳು ಮೂಡುತ್ತವೆ. ಮಡಿ ಎಂದರೆ ಕೇವಲ ಸ್ವಚ್ಛತೆ ಮತ್ತು ಶುಭ್ರತೆ ಎಂದು ಅರ್ಥೈಸಬಹುದು. ಇದು ಯಾವುದೇ ಭಯಾನಕ ಪದವಲ್ಲ, ಬದಲಾಗಿ ಶುಚಿತ್ವದ ಪ್ರತೀಕವಾಗಿದೆ. ದೇವರು ಮಡಿಯನ್ನು ಕೇಳಿಲ್ಲವಾದರೂ, ಶುಭ್ರತೆ, ಸ್ವಚ್ಛ ಮನಸ್ಸು ಮತ್ತು ಒಳ್ಳೆಯ ಭಾವನೆಗಳೊಂದಿಗೆ ಭಗವಂತನನ್ನು ಆರಾಧಿಸಲು ಮಡಿಯನ್ನು ಅನುಸರಿಸಲಾಗುತ್ತದೆ. ಮಡಿಯು ಹಿಂದೂ ಸಂಪ್ರದಾಯದಲ್ಲಿ ಶುಚಿತ್ವದ ಸಂಕೇತವಾಗಿದೆ. ಹಿರಿಯರು ಮತ್ತು ಗುರುಗಳು ಇದನ್ನು ಸಂಪ್ರದಾಯವಾಗಿ ರೂಢಿಸಿಕೊಂಡು ಬಂದಿದ್ದಾರೆ. ಇದು ಭಗವಂತನಿಗೆ ಏಕಾಗ್ರತೆಯಿಂದ ಮತ್ತು ಶ್ರದ್ಧೆಯಿಂದ ಪೂಜೆ ಸಲ್ಲಿಸಲು ಎಲ್ಲರೂ ಶುಚೀರ್ಭೂತರಾಗಿರುವಂತೆ ಮಾಡುವ ಒಂದು ಪದ್ಧತಿಯಾಗಿದೆ. ಮಡಿಯು ಶ್ರದ್ಧೆ, ಭಕ್ತಿ ಮತ್ತು ಸಿಸ್ತಿನ ಪ್ರತೀಕವಾಗಿದೆ. ಇದು ಆಂತರಿಕ ಹಾಗೂ ಬಾಹ್ಯ ಶುದ್ಧತೆಗೆ ಒತ್ತು ನೀಡುತ್ತದೆ, ಭಗವಂತನೊಂದಿಗೆ ಭಕ್ತಿಯ ಬಾಂಧವ್ಯವನ್ನು ಬಲಪಡಿಸಲು ಸಹಕಾರಿಯಾಗಿದೆ. ಒಟ್ಟಾರೆ, ಮಡಿಯು ಪವಿತ್ರವಾದ ನಿಯಮ ಮತ್ತು ನಂಬಿಕೆಯ ಆಧಾರವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಹೇಳಿದ್ದಾರೆ.
ಬೆಂಗಳೂರು, ಮಾ.20: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 20ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಪರಾಭವ ನಾಮ ಸಂವತ್ಸರದ ಪ್ರಥಮ ದಿನವಾದ ಇಂದು, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ, ರೇವತಿ ನಕ್ಷತ್ರ, ಬ್ರಹ್ಮ ಯೋಗ, ಬಾಲವಕರಣದ ವೈಶಿಷ್ಟ್ಯಗಳನ್ನು ವಿವರಿಸಲಾಗಿದೆ. ಇಂದು ರಾಹು ಕಾಲ ಬೆಳಿಗ್ಗೆ 10:56ರಿಂದ ಮಧ್ಯಾಹ್ನ 12:27ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು ಮಧ್ಯಾಹ್ನ 12:27ರಿಂದ 1:50ರ ತನಕ ಇದೆ. ರವಿ ಮತ್ತು ಚಂದ್ರ ಇಬ್ಬರೂ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದು, ತಾಯಿ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಇದು ಅದ್ಭುತವಾದ ದಿನ ಎಂದು ಗುರೂಜಿ ಹೇಳಿದ್ದಾರೆ. ಈ ದಿನ ಜನ್ಮದಿನ ಅಥವಾ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಶುಭ ಕೋರಲಾಗಿದೆ. ಮೇಷದಿಂದ ಮೀನದವರೆಗಿನ ಎಲ್ಲ ರಾಶಿಗಳವರಿಗೆ ಇಂದು ಇರುವ ಶುಭ ಫಲಗಳು, ಉದ್ಯೋಗ, ವ್ಯಾಪಾರ, ಆರೋಗ್ಯ, ಕುಟುಂಬ, ಅದೃಷ್ಟ ಸಂಖ್ಯೆ, ದಿಕ್ಕು, ಬಣ್ಣ ಹಾಗೂ ಪಠಿಸಬೇಕಾದ ಮಂತ್ರಗಳ ಕುರಿತು ವಿವರವಾದ ಮಾಹಿತಿ ನೀಡಲಾಗಿದೆ.
ಬೆಂಗಳೂರು, ಮಾ,20: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬೇಸಿಗೆಯ ಬಿಸಿ ಕನ್ನಡಿಗರನ್ನು ಕಂಗಾಲಾಗಿಸಿದೆ. ಇಂದು (ಮಾರ್ಚ್ 20, 2026) ರಾಜ್ಯದ ಪ್ರಮುಖ ನಗರಗಳಲ್ಲಿ ದಾಖಲಾದ ಹವಾಮಾನ ಬದಲಾವಣೆಗಳ ವಿವರ ಇಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 34°C – 35°C ತಲುಪುವ ಸಾಧ್ಯತೆಯಿದೆ. ಸಂಜೆಯ ವೇಳೆ ಭಾಗಶಃ ಮೋಡ ಕವಿದ ವಾತಾವರಣವಿದ್ದರೂ, ಉಷ್ಣಾಂಶ ಕಡಿಮೆಯಾಗುವ ಲಕ್ಷಣಗಳಿಲ್ಲ.
ಕಲ್ಬುರ್ಗಿ, ರಾಯಚೂರು ಮತ್ತು ಬಳ್ಳಾರಿಯಲ್ಲಿ ತಾಪಮಾನವು 40°C ಗಡಿ ದಾಟುತ್ತಿದೆ. ಈ ಭಾಗದಲ್ಲಿ ಬಿಸಿ ಗಾಳಿ (Heat Wave) ಬೀಸುವ ಸಾಧ್ಯತೆ ಇರುವುದರಿಂದ ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸಾರ್ವಜನಿಕರು ಹೊರಬರಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಮಂಗಳೂರು, ಉಡುಪಿ ಭಾಗದಲ್ಲಿ ತಾಪಮಾನದ ಜೊತೆಗೆ ಉಸಿರುಕಟ್ಟುವಂತಹ ಆರ್ದ್ರತೆ (Humidity) ಹೆಚ್ಚಾಗಿದ್ದು, ಗರಿಷ್ಠ ತಾಪಮಾನ 36°C ಆಸುಪಾಸಿನಲ್ಲಿದೆ.
ಹವಾಮಾನ ಇಲಾಖೆಯ ಪ್ರಕಾರ, ಮಲೆನಾಡು ಜಿಲ್ಲೆಗಳಾದ ಕೊಡಗು ಮತ್ತು ಶಿವಮೊಗ್ಗದ ಕೆಲವು ಭಾಗಗಳಲ್ಲಿ ಅತಿ ಸಣ್ಣ ಪ್ರಮಾಣದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ತುಂತುರು ಮಳೆಯಾಗುವ ಸಾಧ್ಯತೆ ತೀರಾ ವಿರಳವಾಗಿದೆ. ಇನ್ನು ಗದಗdಲ್ಲಿ ಶುಷ್ಕ ಹವಾಮಾನ ಮತ್ತು ಅತಿ ಹೆಚ್ಚು ಬಿಸಿಲು ಇರಲಿದೆ. ತಾಪಮಾನ ಗರಿಷ್ಠ 39°C, ಕನಿಷ್ಠ 24°C ಇರಲಿದೆ. ಮೋಡಗಳ ಸುಳಿವೇ ಇಲ್ಲದೆ ಸೂರ್ಯನ ಪ್ರತಾಪ ಹೆಚ್ಚಿರಲಿದೆ. ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸಿ.
ಹಾವೇರಿಯಲ್ಲಿ ತೀವ್ರ ಬಿಸಿಲು ಮತ್ತು ಸೆಕೆ ಇರಲಿದೆ. ತಾಪಮಾನ ಗರಿಷ್ಠ 38°C, ಕನಿಷ್ಠ 23°C ಇರಲಿದೆ. ಗಾಳಿಯ ವೇಗ ಕಡಿಮೆ ಇರಲಿದ್ದು, ಸೆಕೆಯಿಂದಾಗಿ ಜನರು ಹೈರಾಣಾಗುವ ಸಾಧ್ಯತೆಯಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಆಹ್ಲಾದಕರವಾಗಿದ್ದರೂ ಬಿಸಿಲಿನ ತೀವ್ರತೆ ಹೆಚ್ಚಿದೆ. ತಾಪಮಾನ ಗರಿಷ್ಠ 33°C, ಕನಿಷ್ಠ 19°C ಇರಲಿದೆ. ಮಧ್ಯಾಹ್ನ ಬಿಸಿಲು ಹೆಚ್ಚಿರುತ್ತದೆ, ಆದರೆ ಸಂಜೆ ವೇಳೆ ಗುಡ್ಡಗಾಡು ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಬಹುದು. ಹಾಸನದಲ್ಲಿ ಸಾಧಾರಣ ಬಿಸಿಲು ಮತ್ತು ಶುಷ್ಕ ಹವಾಮಾನ. ತಾಪಮಾನ ಗರಿಷ್ಠ 34°C, ಕನಿಷ್ಠ 21°C ಇರಲಿದೆ. ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಬಯಲು ಸೀಮೆಯ ಪ್ರಭಾವದಿಂದ ಸೆಕೆ ಹೆಚ್ಚಾಗಿರಲಿದೆ.
ನಿಮ್ಮಲ್ಲಿ ಉದ್ಯೋಗ ಬದಲಾವಣೆಯ ಆಸಕ್ತಿ ಕೆರಳಲಿದೆ. ಒಂದು ವೇಳೆ ಕೆಲ ತಿಂಗಳ ಹಿಂದೆ ಪ್ರಯತ್ನ ಪಟ್ಟು, ಆ ನಂತರದಲ್ಲಿ ಬೇಡ ಎಂದುಕೊಂಡು ಸುಮ್ಮನಾಗಿದ್ದವರು ಸಹ ಈ ದಿನ ಜಾಬ್ ಕನ್ಸಲ್ಟೆನ್ಸಿಗಳ ಮೂಲಕವಾಗಿ ಕೆಲಸಕ್ಕೆ ಪ್ರಯತ್ನಿಸಲಿದ್ದೀರಿ. ನೀವು ಯಾರಿಗಾದರೂ ಸಾಲ ಕೊಟ್ಟು, ಬಹಳ ಸಮಯದಿಂದ ಅದು ವಾಪಸ್ ಬಂದಿಲ್ಲ ಎಂದಾಗಿದ್ದಲ್ಲಿ ಈ ದಿನ ಪ್ರಯತ್ನಿಸಿದಲ್ಲಿ ವಸೂಲಾಗುವ ಸಾಧ್ಯತೆ ಇದೆ.
ಹೆಣ್ಣುಮಕ್ಕಳು ಪ್ರೀತಿ- ಪ್ರೇಮದಲ್ಲಿ ಇದ್ದಲ್ಲಿ ಅಂಥವರಿಗೆ ಬಹಳ ಮುಖ್ಯವಾದ ದಿನ ಇದಾಗಿರುತ್ತದೆ. ಇಷ್ಟು ಸಮಯ ಯಾವುದನ್ನು ಒಪ್ಪಿಸುವುದಕ್ಕೆ ಹಾಗೂ ಯಾವ ಬಗ್ಗೆ ತೀರ್ಮಾನಿಸುವುದಕ್ಕೆ ಭಾವನಾತ್ಮಕವಾಗಿ ಬಹಳ ಕಷ್ಟ ಎಂದೆನಿಸಿರುತ್ತದೋ ಅದು ಈ ದಿನ ಸಲೀಸಾಗಿ ಮುಗಿಯಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಕೋರ್ಸ್ ವೊಂದಕ್ಕೆ ಸೇರುವುದಕ್ಕೆ ತೀರ್ಮಾನ ಮಾಡುವ ಸಾಧ್ಯತೆಗಳಿವೆ.
ಕೆಲವು ಕೆಲಸಗಳನ್ನು ಮಾಡುವುದಕ್ಕೆ ಮೇಲು ನೋಟಕ್ಕೆ ನಿಮಗೆ “ಇಷ್ಟೇ ಅಲ್ಲವಾ” ಎಂದು ಅನಿಸಬಹುದು. ಆದರೆ ಅದನ್ನು ನಿಮ್ಮಿಂದ ಯಶಸ್ವಿಯಾಗಿ ಮಾಡಿ ಮುಗಿಸುವುದಕ್ಕೆ ಬೇಕಾದಷ್ಟು ಸಮಯ ಹಾಗೂ ಉತ್ಸಾಹ ಇದೆಯೇ ಎಂಬುದನ್ನು ಆಲೋಚಿಸಿ, ಆ ನಂತರ ಉತ್ತರವನ್ನು ನೀಡಿ. ವಜ್ರ- ಪ್ಲಾಟಿನಂ, ಚಿನ್ನ- ಬೆಳ್ಳಿ ಅಥವಾ ಯಾವುದೇ ಬೆಲೆಬಾಳುವ ವಸ್ತುಗಳ ಖರೀದಿಯನ್ನು ಒಂದು ದಿನದ ಮಟ್ಟಿಗೆ ಮುಂದೂಡಿ.
ಮನೆಯ ಅಂಗಳದಲ್ಲಿರುವ ತುಳಸಿ ಗಿಡಕ್ಕೆ ಪ್ರತಿದಿನ ಸಂಜೆ ತುಪ್ಪದ ದೀಪ ಹಚ್ಚಿ ಪ್ರದಕ್ಷಿಣೆ ಹಾಕಿ. ಹೀಗೆ ಮಾಡುವುದರಿಂದ ಕುಟುಂಬದಲ್ಲಿನ ಭಿನ್ನಾಭಿಪ್ರಾಯಗಳು ದೂರ ಆಗಲಿವೆ. ಉದ್ಯೋಗ ಸ್ಥಳದಲ್ಲಿ ಇರುವ ಗೊಂದಲ ಬಗೆಹರಿಯುತ್ತದೆ.
ನಿಮ್ಮಲ್ಲಿ ಕೆಲವರು ದೂರ ಪ್ರಯಾಣಕ್ಕಾಗಿ ಸಿದ್ಧತೆ ಮಾಡಿಕೊಳ್ಳಬಹುದು ಅಥವಾ ಹೊರಟು ಬಿಡಬಹುದು. ಇದರಿಂದ ದೀರ್ಘಾವಧಿಯಲ್ಲಿ ಬಹಳ ದೊಡ್ಡ ಮಟ್ಟದ ಅನುಕೂಲ ಇದೆ. ಆದರೆ ಹೊರಡುವ ಮುನ್ನ ಕುಟುಂಬದ ಕಡೆಯಿಂದ ಒತ್ತಡವಂತೂ ಇರುತ್ತದೆ. ಆದರೆ ಅದು ನಿಮ್ಮ ಕೆಲಸ ಯಶಸ್ವಿಯಾದ ಮೇಲೆ ಕರಗಿ ಹೋಗಲಿದೆ.
ನಿಮಗೆ ಚೆನ್ನಾಗಿ ಗೊತ್ತಿರುವಂಥ ವಿಷಯದಲ್ಲೇ ನಿಮ್ಮಿಂದ ಕೆಲವು ತಪ್ಪುಗಳು ಆಗಬಹುದು. ಮುಖ್ಯವಾಗಿ ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಅದರಲ್ಲೂ ಉದ್ಯೋಗ ಸ್ಥಳದಲ್ಲಿ ಮೇಲಧಿಕಾರಿಗಳು ನಿಮ್ಮನ್ನು ಪ್ರಶ್ನೆ ಕೇಳಿದಲ್ಲಿ ಒಂದು ಸಲ ಪರಿಶೀಲನೆ ಮಾಡಿ, ಆ ನಂತರವೇ ಉತ್ತರವನ್ನು ಹೇಳಿ. ಕೆಲವು ಜವಾಬ್ದಾರಿಗಳನ್ನು ನಿಮಗೆ ವಹಿಸುವುದಕ್ಕೆ ಕುಟುಂಬದಲ್ಲಿ ಹಾಗೂ ಉದ್ಯೋಗ ಸ್ಥಳದಲ್ಲಿ ಕೇಳಲಿದ್ದಾರೆ.
ಉತ್ತಮವಾದ ಸಂಬಳ ಹಾಗೂ ಹುದ್ದೆಯ ಜತೆಗೆ ಆಫರ್ ಬರಲಿದೆ. ಆದ್ದರಿಂದ ಈ ಅವಕಾಶವನ್ನು ಬೇಡ ಅನ್ನುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಎಂಬಂತೆ ಆಲೋಚನೆಯನ್ನು ಮಾಡುವುದು ಒಳ್ಳೆಯದು. ಸಾಕು ಪ್ರಾಣಿಗಳನ್ನು ಮನೆಗೆ ತರುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ದಿನದ ಕೊನೆ ಹೊತ್ತಿಗೆ ಮನಸ್ಸಿಗೆ ಹೆಚ್ಚು ಸಂತೋಷ ಎನಿಸುವಂಥ ವ್ಯಕ್ತಿ ಜತೆಗೆ ಮಾತುಕತೆ ಆಡಲಿದ್ದೀರಿ.
ಹಳೇ ವಿಚಾರಗಳನ್ನು ಕೆದಕುವುದಕ್ಕೆ ಹೋಗಬೇಡಿ. ತಂದೆ ಅಥವಾ ತಂದೆ ಸಮಾನರ ಜತೆಗೆ ಅಭಿಪ್ರಾಯ ಭೇದಗಳು ಕಾಣಿಸಿಕೊಳ್ಳಬಹುದು. ನೀವು ಬಹಳ ಉತ್ಸಾಹದಿಂದ ಮಾಡಿದ ಕೆಲಸಗಳು, ನಿರ್ಧಾರಗಳನ್ನು ಇತರರು ಬಹಳ ಕಡಿಮೆ ಮಾಡಿ ಮಾತನಾಡುವ ಸಾಧ್ಯತೆ ಇದೆ. ಈ ಕೆಲಸದಲ್ಲಿ ನೀವು ಹಾಕಿದ ಶ್ರಮ, ತೋರಿಸಿದ ನಿಷ್ಠೆ ಗೊತ್ತಿರುವ ವ್ಯಕ್ತಿಗಳು ಸಹ ಇಂಥ ಸನ್ನಿವೇಶದಲ್ಲಿ ನಿಮ್ಮ ಬೆಂಬಲಕ್ಕೆ ಬರುವುದಿಲ್ಲ.
ವೃತ್ತಿನಿರತರಿಗೆ ಒಂದು ಬಗೆಯ ನಿರಾಸಕ್ತಿ ಕಾಡಲಿದೆ. ನಿಮ್ಮಲ್ಲಿ ಕೆಲವರಿಗೆ ನಿದ್ದೆಯ ಸಮಸ್ಯೆ ಕೂಡ ಆಗಬಹುದು. ಒಂದು ವೇಳೆ ಇದು ಗಂಭೀರವಾದ ಸಮಸ್ಯೆ ಎಂದೇನಾದರೂ ಎನಿಸಿದಲ್ಲಿ ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಔಷಧೋಪಚಾರ ಮಾಡಿಕೊಳ್ಳುವುದು ಒಳ್ಳೆಯದು. ಲೇವಾದೇವಿ ವ್ಯವಹಾರ ಮಾಡುವಂಥವರಿಗೆ ಕೆಲವು ಬೆಳವಣಿಗೆಗಳಿಂದ ಆತಂಕ ಕಾಡಲು ಆರಂಭ ಆಗುತ್ತದೆ.
ದಿಢೀರನೇ ಹಣಕಾಸಿನ ಹೊಂದಾಣಿಕೆ ಮಾಡಿಕೊಳ್ಳಬೇಕಾಗಲಿದೆ. ನಿಮ್ಮ ಸ್ನೇಹಿತರಿಗೋ ಅಥವಾ ಆಪ್ತರಿಗೋ ಮಾಡಿಕೊಡಬೇಕು ಎಂದುಕೊಂಡ ವಾಹನ, ಸೈಟು ಅಥವಾ ಮನೆಯನ್ನು ನೀವೇ ಖರೀದಿ ಮಾಡುವಂಥ ಸಾಧ್ಯತೆಗಳಿವೆ. ನೀವು ಇದಕ್ಕಾಗಿ ಬಹಳ ಶ್ರಮ ಪಟ್ಟಿರುತ್ತೀರಿ. ಆದರೆ ನೀವು ಯಾರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಇಷ್ಟೆಲ್ಲ ಶ್ರಮ ಹಾಕಿರುತ್ತೀರೋ ಆ ವ್ಯಕ್ತಿಯೇ ಅದನ್ನು ಸದ್ಯಕ್ಕೆ ಬೇಡ ಎಂದು ಹೇಳುವಂಥ ಸಾಧ್ಯತೆಗಳಿವೆ.
ಮುನ್ನುಗ್ಗಲು ನಿಮಗೆ ಸ್ಥೈರ್ಯ ಸಾಲದು. ಮಂಗಲ ಕಾರ್ಯಗಳಿಗೆ ಸಂಪತ್ತನ್ನು ವಿನಿಯೋಗ ಮಾಡುವಿರಿ. ಅಧಿಕ ಲಾಭ ಗಳಿಸಬಹುದಾದ ಉತ್ಪಾದನೆಯಿಂದ ಅಲ್ಪ ಲಾಭ. ಹೊಸತನ ಹುಡುಕಾಟದಲ್ಲಿ ನೀವು ಇರುವಿರಿ. ದ್ವೇಷವನ್ನು ಬೆಳೆಸಿಕೊಳ್ಳುವುದು ಯೋಗ್ಯವೆನಿಸದು. ಸಮಯದ ನಿರೀಕ್ಷೆಯಲ್ಲಿ ಇರಿ. ಯಾರ ಸ್ವಭಾವವನ್ನೂ ಆಡಿಕೊಳ್ಳುವುದು ಬೇಡ. ಬರಬೇಕಾದ ಹಣವು ಮಧ್ಯದಲ್ಲಿ ನಿಂತಿದ್ದು ನಿಮಗೆ ಆತಂಕವಾಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸುವ ಚಿಂತೆಯಲ್ಲಿ ಇರುವಿರಿ.
ವೃಷಭ ರಾಶಿ:
ತೋರಿಕೆಗೆ ಮಾಡುವ ಕೆಲಸದಲ್ಲಿ ಯಾವ ಪರಿಣಾಮ ಕಾಣಿಸದು.ಹೊಸ ಮನೆಯ ಪ್ರವೇಶದಲ್ಲಿ ನೀವು ಭಾಗಿಯಾಗುವಿರಿ. ಕೆಲವು ಸಮಸ್ಯೆಗಳನ್ನು ನೀವು ಪರಿಹಾರ ಮಾಡಿಕೊಳ್ಳುವಿರಿ. ಸಂಬಂಧಗಳನ್ನು ನೀವು ಬೇಕಾದುದಕ್ಕೆ ಬಳಸಿಕೊಳ್ಳುವಿರಿ. ರಾಜಕಾರಣಿಗಳು ಅಸ್ಥಿರ ಮನಸ್ಸಿನಲ್ಲಿ ಇರುವರು. ಇಂದಿನ ಸೋಲು ನಿಮಗೆ ಪಾಠವಾಗುವುದು. ಮುನ್ನುಗ್ಗುವ ಅಭ್ಯಾಸವನ್ನು ಬೆಳೆಸಿಕೊಂಡು ನಿಮಗೆ ಇಷ್ಟವಾದ ಆಯ್ಕೆಯನ್ನು ಮಾಡಿಕೊಳ್ಳುವಿರಿ. ಮೇಲಧಿಕಾರಿಗಳ ಭಯದಿಂದ ಕಾರ್ಯದಲ್ಲಿ ಪ್ರಗತಿ.
ಮಿಥುನ ರಾಶಿ:
ಯಾವ ಕೆಲಸವನ್ನೂ ನೀವು ಪೂರ್ಣ ಮಾಡದೇ ಇರಲು ಮನಸ್ಸು ಬಾರದು. ನಿಮ್ಮ ದೌರ್ಬಲ್ಯದ ಜೊತೆ ಆಟವಾಡಬಹುದು. ನಿಮ್ಮ ವ್ಯವಹಾರದಲ್ಲಿ ಪೈಪೋಟಿಯು ಅಧಿಕವಾಗಿ ಇರಲಿದ್ದು ತಂತ್ರಗಳನ್ನು ರೂಪಿಸಬೇಕಾದೀತು. ನಕಾರಾತ್ಮಕ ಆಲೋಚನೆಗಳು ಬೆನ್ನು ಹತ್ತಬಹುದು. ತಂದೆಯ ಶ್ರಮವನ್ನು ಕಂಡು ಮಕ್ಕಳಿಗೆ ನೋವಾಗಬಹುದು. ನಿಮ್ಮವರ ಪ್ರೀತಿಯಿಂದ ನೀವು ಮನಸೋಲುವಿರಿ. ಯಾರನ್ನೂ ಅತಿಯಾಗಿ ಕಾಯಿಸದೇ ಅವರಿಗೆ ಬೇಕಾದುದನ್ನು ಹೇಳಿ, ಕೊಟ್ಟು ಕಳುಹಿಸಿ.
ಕರ್ಕಾಟಕ ರಾಶಿ:
ಇಂದು ನಿಮ್ಮ ಸಂಗಾತಿಗೆ ಅಪರೂಪದ ಉಡುಗೊರೆಯನ್ನು ಕೊಡಿಸುವಿರಿ. ನೀವು ಇಷ್ಟಪಡುವವರ ಭೇಟಿಯಾಗಲಿದೆ. ನಿಮ್ಮ ಗೌಪ್ಯತೆಯನ್ನು ಯಾರ ಜೊತೆಯೂ ಹೇಳಿಕೊಳ್ಳುವುದು ಬೇಡ. ನಿಯಮ ಪಾಲನೆಯಲ್ಲಿ ತಪ್ಪಬಹುದು. ನಿಮ್ಮ ಆಕ್ಷೇಪಗಳು ಹಲವು ಸುಳ್ಳಿನಿಂದ ಇರಲಿದೆ. ಇನ್ನೊಬ್ಬರ ಜೊತೆ ಸಂಬಂಧವನ್ನು ಬಯಸಿ, ಬೆಳೆಸುವಿರಿ. ಜಾಡ್ಯವನ್ನು ಬಿಡಬೇಕಾದೀತು. ನಿಮ್ಮ ವೃತ್ತಿಯು ನಿಮಗೆ ಸಂತೋಷವನ್ನು ಕೊಡದೇ ಇರುವುದು. ಕೆಲಸವನ್ನು ನೀವು ಸರಳವಾಗಿ ಮಾಡಿಕೊಳ್ಳುವುದು ಉತ್ತಮ.
ಸಿಂಹ ರಾಶಿ:
ವಿದ್ಯಾರ್ಥಿಗಳಿಗೆ ದುಡಿಮೆಯ ಬಗ್ಗೆ ಆಸಕ್ತಿಯು ಹೆಚ್ಚಾಗಿ ಅಭ್ಯಾಸವು ನಿಲ್ಲುವುದು. ಇಂದು ನೀವು ಕೆಲಸವನ್ನು ಹೆಚ್ಚು ಪ್ರಯತ್ನದಿಂದ ಪೂರ್ಣ ಮಾಡುವಿರಿ. ಯಾರಾದರೂ ನಿಮ್ಮ ಸ್ನೇಹಕ್ಕೆ ಕಡ್ಡಿಗೀರಬಹುದು. ಇಂದು ವ್ಯಾಪಾರ ವಿಷಯಗಳಲ್ಲಿ ನೀವು ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳುವಿರಿ. ಕಾರ್ಯದ ಹಂಚಿಕೆಯಿಂದ ಕೆಲಸವು ಸುಲಭವಾಗಬಹುದು. ವಿವಾಹಕ್ಕೆ ಯೋಗ ಬಂದರೂ ಅದನ್ನು ಮುಂದೂಡುವ ನಿರ್ಧಾರ ಮಾಡುವಿ
ಕನ್ಯಾ ರಾಶಿ:
ಅವಶ್ಯಕ ದಾಖಲೆಗಳನ್ನು ಭದ್ರವಾಗಿ ಇರಿಸಿಕೊಳ್ಳಿ. ಇಂದು ನೀವು ನಿಮ್ಮ ಸುತ್ತಲಿನ ವಾತಾವರಣವನ್ನು ಆಹ್ಲಾದವೆನಿಸುವುದು. ಭೂಮಿಯ ಖರೀದಿಗೆ ಹುಡುಕಾಟ ಆರಂಭ. ಆರ್ಥಿಕತೆಯಲ್ಲಿ ಸಬಲರಾಗಿರುವುದು ಸಂತೋಷವನ್ನು ಇಮ್ಮಡಿ ಮಾಡೀತು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಇಷ್ಟಪಡಲಾರಿರಿ. ರಕ್ಷಣೆಯ ಜವಾಬ್ದಾರಿಯವರಿಗೆ ಆರೋಗ್ಯದ ಕೆಡಬಹುದು.
ತುಲಾ ರಾಶಿ:
ಇಂದು ಸಮೂಹವನ್ನು ಕಟ್ಟಿಕೊಂಡು ಕೆಲಸವನ್ನು ಮಾಡುವಿರಿ. ಹಿರಿಯರಲ್ಲಿ ಮನಶ್ಶಾಂತಿಗೆ ಭಂಗ ಅಧಿಕ. ಆಸ್ತಿಗೆ ಸಂಬಂಧಿಸಿದ ವಿಚಾರವನ್ನು ಪ್ರಸ್ತಾಪಿಸಿ ಮಕ್ಕಳಿಂದ ಒಪ್ಪಿಗೆಯನ್ನು ಪಡೆಯುವಿರಿ. ಸಹೋದರಿಯರ ಜೊತೆ ವಾಗ್ವಾದವನ್ನು ಮಾಡುವಿರಿ. ದೃಷ್ಟಿಯನ್ನು ಸಂಕುಚಿತ ಮಾಡುವುದು ಬೇಡ. ನೀವು ಇಂದು ಆಸ್ತಿಯನ್ನು ಖರೀದಿಸಲು ಪ್ರಯತ್ನಿಸುತ್ತಿದ್ದು ನೀವು ಅದನ್ನು ಸುಲಭವಾಗಿ ಸಾಧಿಸುವಿರಿ. ಸ್ವಪ್ನದ ಚಿಂತೆಯಲ್ಲಿಯೇ ಇರಬಹುದು. ಇಂದು ನಿಮ್ಮ ತಾಯಿಯ ಬಗ್ಗೆ ನಿಮ್ಮ ಪ್ರೀತಿ ಹೆಚ್ಚಾಗುತ್ತದೆ.
ವೃಶ್ಚಿಕ ರಾಶಿ:
ಸಾಲವನ್ನು ಹಿಂದಿರುಗಿಸಲು ಸಮಯಮಿತಿಯ ವಿಸ್ತರಣೆ ಮಾಡಿಕೊಳ್ಳುವಿರಿ. ಹಲವಾರು ಗೊಂದಲಗಳು ನಿಮ್ಮ ಮನಸ್ಸಿನಲ್ಲಿ ಓಡಾಡಬಹುದು. ಇಂದು ನಿಮಗೆ ಅನಿರೀಕ್ಷಿತ ಆನಂದವನ್ನು ತರುವ ವಾರ್ತೆಗಳು ಬರಬಹುದು. ಬಹಳ ದಿನಗಳ ಕಳೆದ ಮೇಲೆ ತಂದೆಯ ಜೊತೆ ಮಾತನಾಡಿ ನೆಮ್ಮದಿಯು ಪಡೆಯುವಿರಿ. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ. ಇಂದು ನಿಮ್ಮ ವ್ಯವಹಾರದಲ್ಲಿ ಬೇರೆಯವರ ಮಾತನ್ನು ಕೇಳಬೇಕಾಗಿಬರಬಹುದು.
ಧನು ರಾಶಿ:
ಇಷ್ಟದವರು ನಿಮ್ಮನ್ನು ಶುಭಕಾರ್ಯಗಳಿಗೆ ಆಹ್ವಾನಿಸಬಹುದು. ಅಗ್ನಿಯ ಭಯದಿಂದ ಸಾಹಸ ಕಾರ್ಯಗಳಗೆ ಹಿಂದೇಟು. ಪ್ರಭಾವೀ ವ್ಯಕ್ತಿಗಳ ಒಡನಾಟವನ್ನು ಯಾರ ಜೊತೆಯಾದರೂ ಹಂಚಿಕೊಂಡು ಸಮಾಧಾನ ಮಾಡಿಕೊಳ್ಳುವಿರಿ. ಉದ್ಯೋಗದ ಕಾರಣ ನಿಮ್ಮ ವಾಸವನ್ನು ಬದಲಾಯಿಸಬೇಕಾಗಬಹುದು. ನಿಮ್ಮ ಜೊತೆ ಇರುವವರು ನಿಮ್ಮನ್ನು ಅರ್ಥಮಾಡಿಕೊಂಡ ರೀತಿ ಬೇರೆ ರೀತಿಯಲ್ಲಿ ಇರುವುದು. ವೈಯಕ್ತಿಕ ಕಾರ್ಯದಲ್ಲಿ ಗಮನವು ಕಡಿಮೆ ಇರುವುದು.
ಮಕರ ರಾಶಿ:
ವಿದ್ಯಾರ್ಥಿಗಳು ಪರಿಶ್ರಮದಿಂದ ಪಡೆಯಬೇಕಾದುದನ್ನು ಪಡೆಯುವರು. ಔದ್ಯೋಗಿಕ ಕ್ಷೇತ್ರದಲ್ಲಿ ಇನ್ನಷ್ಟು ಒಪ್ಪಂದವನ್ನು ಮಾಡಿಕೊಂಡು ಲಾಭ ಪಡೆಯುವ ಯೋಜನೆ ರೂಪಿಸುವಿರಿ. ನೀವು ಸಾಲವನ್ನು ಮಾಡಿದ್ದರೆ, ಇಂದು ನಿಮ್ಮ ಬಳಿ ಹಣವು ಬಂದು ಸೇರಿದರೂ ಮರುಪಾವತಿಗೆ ಮನಸ್ಸಾಗದು. ಹೂಡಕೆಯ ಕ್ಷೇತ್ರವನ್ನು ಬದಲಿಸುವಿರಿ. ನೂತನ ವಾಹನದ ಖರೀದಿಯನ್ನು ಮಾಡುವ ಇಚ್ಛೆಯು ಇಂದು ಪೂರ್ಣವಾಗುವುದು. ನಿಮ್ಮ ಬಗ್ಗೆ ಸಲ್ಲದ ದೂರಗಳು ಕೇಳಿ ಬರಬಹುದು.
ಕುಂಭ ರಾಶಿ:
ಇಂದು ನಿಮ್ಮ ದೇಹವು ಆಯಾಸದಿಂದ ದುರ್ಬಲವಾಗಬಹುದು. ಅವಿವಾಹಿತರಿಂದ ವಿವಾಹಕ್ಕೆ ನಿರಂತರ ಪ್ರಯತ್ನ. ಹೆಚ್ಚು ವಿಶ್ರಾಂತಿಯ ಅವಶ್ಯಕತೆ ಇರುವುದು. ಇಂದು ನಿಮ್ಮ ವಾಹನದ ಬಳಕೆಯನ್ನು ಹೆಚ್ಚು ಮಾಡುವಿರಿ. ಆಪ್ತ ಬಂಧುವನ್ನು ಅಕಾಲದಲ್ಲಿ ಕಳೆದುಕೊಳ್ಳುವಿರಿ. ಸಮಯೋಚಿತ ಕಾರ್ಯದಿಂದ ಪ್ರಶಂಸೆಯು ಇರಲಿದೆ. ಎಲ್ಲರೆದುರು ಮುಖಭಂಗವನ್ನು ಎದುರಿಸಿಬೇಕಾದೀತು. ವೈವಾಹಿಕ ಜೀವನದ ಕನಸು ಕಾಣುವಿರಿ.
ಮೀನ ರಾಶಿ:
ಹಣಕಾಸಿನ ಪ್ರಯತ್ನಗಳು ಸಫಲವಾಗಬಹುದು. ಆಗತ್ಯಕ್ಕೆ ಎಲ್ಲೂ ತೊಂದರೆಯಾಗದಂತೆ ಇರುವಿರಿ. ಮಿತ್ರನಿಗೆ ನಿಮ್ಮಿಂದ ಅಲ್ಪ ಧನಸಹಾಯ. ಸಾಮಾಜಿಕ ಬದ್ಧತೆಗಳಿಗೆ ಸ್ಪಂದನೆ. ಜವಾಬ್ದಾರಿಯು ಬಂದು ಹೊರೆಯು ಹೆಚ್ಚಾಗುವುದು. ಪುರುಷಪ್ರಯತ್ನದಿಂದ ಇಂದು ಹೆಚ್ಚು ಇರುವುದು. ಸಂಗಾತಿಯ ಜೊತೆ ಆಪ್ತವಾದ ಮಾತುಕತೆ ಇರಲಿದೆ. ನಿಮಗೆ ಸಾಕಷ್ಟು ಸಮಯವು ಇಂದು ಇರಲಿದ್ದು ಏನು ಮಾಡಬೇಕೆಂದು ತಿಳಿಯದೇ ಕಾಲವನ್ನು ಕಳೆಯುವಿರಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ ನಿತ್ಯನಕ್ಷತ್ರ : ರೇವತೀ, ಯೋಗ : ಬ್ರಹ್ಮ, ಕರಣ : ಬವ, ಸೂರ್ಯೋದಯ – 06 – 29 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 11:01 – 12:32, ಯಮಗಂಡ ಕಾಲ 15:33 – 17:04, ಗುಳಿಕ ಕಾಲ 08:00- 09:31
ಟೆಹ್ರಾನ್, ಮಾರ್ಚ್ 19: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಗಳು ಹೆಚ್ಚಾಗುತ್ತಲೇ ಇದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಅಮೆರಿಕದ ಮಿಲಿಟರಿಯ ಎಫ್-35 ಫೈಟರ್ ಜೆಟ್ ಮೇಲೆ ದಾಳಿ ನಡೆಸಿ ಹಾನಿ ಮಾಡಿದೆ. ಈ ಯುದ್ಧವಿಮಾನದ ಮೇಲೆ ಇರಾನ್ (Iran War) ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ವೀಡಿಯೊವನ್ನು ಇರಾನ್ ಮಾಧ್ಯಮವು ಬಿಡುಗಡೆ ಮಾಡಿದೆ. ಈ ಘಟನೆಯ ಬಳಿಕ ಇರಾನ್ ಮೇಲೆ ಯುದ್ಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದ ಫೈಟರ್ ಜೆಟ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಯಿತು. ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದ್ದು ಪೈಲಟ್ ಸುರಕ್ಷಿತರಾಗಿದ್ದಾರೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ