ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆ: ಕಾವೇರಿ ಒಡಲು ಖಾಲಿ, ಕೃಷ್ಣಾ ಕೊಳ್ಳದಲ್ಲೂ ಆತಂಕ, ಬರಿದಾಗುತ್ತಿವೆ ಪ್ರಮುಖ ಜಲಾಶಯಗಳು – Kannada News | Karnataka Water Crisis 2026: KRS and Kabini Dams Reach Dead Storage as Deficit Monsoon Hits Cauvery and Krishna Basins

ಬೆಂಗಳೂರು, ಜೂನ್ 13: ರಾಜ್ಯಕ್ಕೆ ಮುಂಗಾರು ಮಳೆಯ (Monsoon Rain) ಆಗಮನವಾಗಿದ್ದರೂ ಕಾವೇರಿ ಮತ್ತು ಕೃಷ್ಣಾ ನದಿ ಜಲಾನಯನ ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ. ಕಾವೇರಿ ಕೊಳ್ಳದ ಜೀವನಾಡಿಗಳಾದ ಕೆಆರ್​ಎಸ್, ಕಬಿನಿ, ಹೇಮಾವತಿ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಲಾಶಯವಾದ ಆಲಮಟ್ಟಿಯಲ್ಲೂ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿದೆ. ಜೂನ್ ಎರಡನೇ ವಾರ ಕಳೆದರೂ ಸಮರ್ಪಕ ಮಳೆಯಾಗದ ಕಾರಣ ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಭೀತಿ ಎದುರಾಗಿದ್ದು, ರೈತ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ.

ಮುಖ್ಯಾಂಶಗಳು

  • ಕೆಆರ್‌ಎಸ್‌ನಲ್ಲಿ ಕೇವಲ 6 ಟಿಎಂಸಿ ಬಳಸಬಹುದಾದ ನೀರು ಲಭ್ಯ.
  • ಕಬಿನಿ ಜಲಾಶಯದ ಲೈವ್ ಸ್ಟೋರೇಜ್ ಸಾಮರ್ಥ್ಯ ಶೂನ್ಯ.
  • ಮಳೆ ಕೊರತೆಯಿಂದ ಬಿತ್ತನೆ ಕಾರ್ಯ ಸಂಪೂರ್ಣ ವಿಳಂಬ.

ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಆತಂಕಕಾರಿ ಪರಿಸ್ಥಿತಿ

ಕೆಆರ್​ಎಸ್ ಜಲಾಶಯ ನೀರಿನ ಮಟ್ಟ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಜಲಾಶಯದ ನೀರಿನ ಮಟ್ಟ ಸದ್ಯ 81.36 ಅಡಿಗೆ (ಗರಿಷ್ಠ 124.80 ಅಡಿ) ಕುಸಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 108.64 ಅಡಿ ನೀರಿದ್ದು, ಜೂನ್‌ನಲ್ಲೇ ಬಾಗಿನ ಅರ್ಪಿಸಲಾಗಿತ್ತು. ಸದ್ಯ ಡ್ಯಾಂನಲ್ಲಿರುವ 11.399 ಟಿಎಂಸಿ ನೀರಿನಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿದ್ದು, ಬಳಕೆಗೆ ಸಿಗುವುದು ಕೇವಲ 6 ಟಿಎಂಸಿ ಮಾತ್ರ! ಸದ್ಯ ಒಳಹರಿವು ಕೇವಲ 581 ಕ್ಯೂಸೆಕ್ ಇದೆ. ಕಳೆದ ವರ್ಷ ತಮಿಳುನಾಡಿಗೆ ಹೆಚ್ಚುವರಿಯಾಗಿ 30 ಟಿಎಂಸಿ ನೀರು ಹರಿಸಲಾಗಿತ್ತು, ಆದರೆ ಈ ಬಾರಿ ನಿಗದಿತ 9 ಟಿಎಂಸಿ ನೀರು ಕೊಡುವುದೂ ಅಸಾಧ್ಯವಾಗಿದೆ.

ಕೆಆರ್​ಎಸ್ ಡ್ಯಾಂ ಬ್ಯಾಕ್​ವಾಟರ್ ಪ್ರದೇಶ ಬರಿದಾಗಿರುವುದು

ಕಬಿನಿ ಜಲಾಶಯ ನೀರಿನ ಮಟ್ಟ

ಮೈಸೂರು ಜಿಲ್ಲೆಯ ಕಬಿನಿ ಜಲಾಶಯದ ಸ್ಥಿತಿ ಮತ್ತಷ್ಟು ಶೋಚನೀಯವಾಗಿದ್ದು, ನೀರಿನ ಮಟ್ಟ 52.16 ಅಡಿಗೆ (ಗರಿಷ್ಠ 84 ಅಡಿ) ಕುಸಿದಿದೆ. ಪ್ರಸ್ತುತ ಕೇವಲ 4.68 ಟಿಎಂಸಿ ನೀರು ಮಾತ್ರ ಸಂಗ್ರಹವಿದ್ದು, ಬಳಸಬಹುದಾದ (Live Storage) ನೀರಿನ ಪ್ರಮಾಣ ಸಂಪೂರ್ಣ ಶೂನ್ಯವಾಗಿದೆ! ಕಳೆದ ವರ್ಷ ಇಲ್ಲಿ 15.89 ಟಿಎಂಸಿ ನೀರಿತ್ತು. ಸದ್ಯ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಬಿಡುಗಡೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ಹೇಮಾವತಿ ಜಲಾಶಯ ನೀರಿನ ಮಟ್ಟ

ಹಾಸನ ಜಿಲ್ಲೆಯ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದ ಒಡಲು ಕೂಡ ಬರಿದಾಗುತ್ತಿದೆ. 37.103 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ ಕೇವಲ 14.586 ಟಿಎಂಸಿ ನೀರಿದ್ದು, ಬಳಕೆಗೆ ಯೋಗ್ಯವಿರುವುದು 10.214 ಟಿಎಂಸಿ ಮಾತ್ರ. ಮೂಡಿಗೆರೆ, ಸಕಲೇಶಪುರ ಭಾಗದಲ್ಲಿ ಮಳೆಯಾಗದಿದ್ದರೆ ಹಾಸನ ಮಾತ್ರವಲ್ಲದೆ ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಕೃಷಿಗೆ ಭಾರಿ ಹೊಡೆತ ಬೀಳಲಿದೆ.

ಉತ್ತರ ಕರ್ನಾಟಕದಲ್ಲೂ ಆತಂಕ

ಉತ್ತರ ಕರ್ನಾಟಕದ ಭಾಗದಲ್ಲೂ ಮುಂಗಾರು ಕೈಕೊಟ್ಟಿದ್ದು, ಕೃಷ್ಣಾ ನದಿಯ ಉಗಮಸ್ಥಳವಾದ ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಮಳೆ ಕೊರತೆಯಾಗಿದೆ. ಇದರ ನೇರ ಪರಿಣಾಮ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ಮೇಲೆ ಬಿದ್ದಿದ್ದು, ಸದ್ಯ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಶೂನ್ಯವಾಗಿದೆ. ಪ್ರಸ್ತುತ ಆಲಮಟ್ಟಿ ಡ್ಯಾಂನ ನೀರಿನ ಮಟ್ಟ 508.26 ಮೀಟರ್ ಇದ್ದು, ಕಳೆದ ವರ್ಷ 514.72 ಮೀಟರ್ ದಾಖಲಾಗಿತ್ತು. ಮಳೆ ಕೊರತೆ ಹೀಗೆಯೇ ಮುಂದುವರಿದರೆ ವಿಜಯಪುರ ಸೇರಿದಂತೆ ಹಲವು ಪ್ರಮುಖ ನಗರಗಳ ಕುಡಿಯುವ ನೀರಿಗೆ ತೀವ್ರ ಸಂಕಷ್ಟ ಎದುರಾಗಲಿದೆ.

ಇದನ್ನೂ ಓದಿ: ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ

ಕುಂಠಿತಗೊಂಡ ಮುಂಗಾರು ಬಿತ್ತನೆ ಕಾರ್ಯ

ಮಳೆ ಕೊರತೆಯಿಂದಾಗಿ ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳು ಸಂಪೂರ್ಣ ವಿಳಂಬವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ 2.07 ಲಕ್ಷ ಹೆಕ್ಟೇರ್ ಕೃಷಿ ಗುರಿ ಹೊಂದಲಾಗಿತ್ತಾದರೂ, ಕೇವಲ 11.138 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಇತ್ತ ವಿಜಯಪುರ ಜಿಲ್ಲೆಯಲ್ಲೂ 7.75 ಲಕ್ಷ ಹೆಕ್ಟೇರ್ ಮುಂಗಾರು ಬಿತ್ತನೆ ಗುರಿಯ ಪೈಕಿ ಪ್ರಸ್ತುತ ಬಿತ್ತನೆ ಪ್ರಮಾಣ ಭಾರಿ ಕುಸಿತ ಕಂಡಿದೆ. ಕಳೆದ ವರ್ಷ ಜೂನ್ ಆರಂಭದಲ್ಲೇ ಭರ್ಜರಿ ಬಿತ್ತನೆ ಕಾರ್ಯ ನಡೆದಿತ್ತು. ಆದರೆ ಈ ಬಾರಿ ಜಲಾಶಯಗಳು ಬರಿದಾಗುತ್ತಿರುವುದು ಮತ್ತು ಮುಂಗಾರು ಮಳೆ ಕೈಕೊಟ್ಟಿರುವುದು ಅನ್ನದಾತರನ್ನು ಕಣ್ಣೀರಲ್ಲಿ ಕೈ ತೊಳೆಯುವಂತೆ ಮಾಡಿದೆ.

ಮಾಹಿತಿ: ದಿಲೀಪ್ ಸಿಪಿ, ಅಶೋಕ್ ಯಡಹಳ್ಳಿ, ರಾಮ್, ಮಂಜುನಾಥ್ ಕೆಬಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಗತ್ತಿನ ಮೋಸ್ಟ್ ವಾಂಟೆಡ್ ಉಗ್ರ ಖತಂ!: ಹೆಣ್ಣುಮಕ್ಕಳ ಕೊಲೆಗೆ ಸೇನೆ ಮೂಲಕ ಭೀಕರ ಪ್ರತಿಕಾರ ತೀರಿಸಿಕೊಂಡ ಅಮೆರಿಕ ಅಧ್ಯಕ್ಷ ಟ್ರಂಪ್ – Kannada News | US Military Kills Tren De Aragua Chief Niño Guerrero; Trump Blasts Biden’s Border Policy

ವಾಷಿಂಗ್ಟನ್, ಜೂ.13: ಜಗತ್ತಿನ ಅತ್ಯಂತ ಕ್ರೂರ ಮತ್ತು ರಕ್ತಪಿಪಾಸು ಭಯೋತ್ಪಾದಕ ಸಂಘಟನೆಗಳಲ್ಲಿ ಒಂದಾದ ‘ಟ್ರೆನ್ ಡಿ ಅರಾಗುವಾ’ (Tren De Aragua) ಗ್ಯಾಂಗ್‌ನ ಮುಖ್ಯಸ್ಥ ‘ನಿನೋ ಗೆರೆರೊ’ (Niño Guerrero) ಅಮೆರಿಕ ಮಿಲಿಟರಿಯ ಭೀಕರ ದಾಳಿಗೆ ಹತನಾಗಿದ್ದಾನೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇರ ಆದೇಶದ ಮೇರೆಗೆ ಯುಎಸ್ ಸೌದರ್ನ್ ಕಮಾಂಡ್ (United States Southern Command) ನಡೆಸಿದ ಅತ್ಯಂತ ವೇಗದ ವೈಮಾನಿಕ ದಾಳಿಯಲ್ಲಿ (Kinetic Strike) ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ ಎಂದು ಟ್ರಂಪ್ ತಮ್ಮ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸುದೀರ್ಘ ಪೋಸ್ಟ್ ಬರೆದಿರುವ ಡೊನಾಲ್ಡ್ ಟ್ರಂಪ್, ಮಾಜಿ ಅಧ್ಯಕ್ಷ ಜೋ ಬೈಡನ್ ಅವರ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ನಾನು ಎರಡನೇ ಬಾರಿಗೆ ಅಧಿಕಾರಕ್ಕೆ ಬರುವ ಮುನ್ನ, ಜೋ ಬೈಡನ್ ಅವರು ಅಮೆರಿಕದ ದಕ್ಷಿಣ ಗಡಿಯನ್ನು ಮುಕ್ತವಾಗಿ ಬಿಟ್ಟು ಲಕ್ಷಾಂತರ ಅಕ್ರಮ ಕ್ರಿಮಿನಲ್‌ಗಳು ದೇಶದೊಳಗೆ ನುಗ್ಗಲು ಅವಕಾಶ ಮಾಡಿಕೊಟ್ಟಿದ್ದರು. ಈ ವಿದೇಶಿ ಕ್ರಿಮಿನಲ್ ಸೈನ್ಯವು ಅಮೆರಿಕದ ನಾಗರಿಕರ ಮೇಲೆ ಅತ್ಯಾಚಾರ, ದೌರ್ಜನ್ಯ ಮತ್ತು ಕೊಲೆಗಳನ್ನು ಮಾಡಲು ಬೈಡನ್ ಸರ್ಕಾರವೇ ಪರೋಕ್ಷವಾಗಿ ಕಾರಣವಾಗಿತ್ತು” ಎಂದು ಟ್ರಂಪ್ ಕಿಡಿಕಾರಿದ್ದಾರೆ.

“ನನ್ನ ಚುನಾವಣಾ ಪ್ರಚಾರದ ಸಮಯದಲ್ಲಿ, ಈ ರಾಕ್ಷಸರನ್ನು ನಮ್ಮ ದೇಶದಿಂದ ಓಡಿಸುವುದಾಗಿ ಮತ್ತು ಇವರಿಂದ ಕೊಲೆಯಾದ ಅಮಾಯಕ ಅಮೆರಿಕನ್ನರ ಕುಟುಂಬಗಳಿಗೆ ನ್ಯಾಯ ಒದಗಿಸುವುದಾಗಿ ನಾನು ವಾಗ್ದಾನ ಮಾಡಿದ್ದೆ. 12 ವರ್ಷದ ಬಾಲಕಿ ಜೊಸೆಲಿನ್ ನುಂಗರಾಯ್, 22 ವರ್ಷದ ಯುವತಿ ಲೇಕನ್ ರೈಲಿ ಸೇರಿದಂತೆ ಹತ್ಯೆಯಾದ ನೂರಾರು ಸುಂದರ ಆತ್ಮಗಳ ಪರವಾಗಿ ಅಮೆರಿಕ ಮಿಲಿಟರಿ ಇಂದು ಪ್ರತಿಕಾರ ತೀರಿಸಿಕೊಂಡಿದೆ. ಅವರ ಕುಟುಂಬಗಳಿಗೆ ಹಾಗೂ ಪ್ರೀತಿಪಾತ್ರರಿಗೆ ನ್ಯಾಯ ಸಿಕ್ಕಿದೆ” ಎಂದು ಟ್ರಂಪ್ ಹೇಳಿದ್ದಾರೆ.

ತಮ್ಮ ಆಡಳಿತದ ಆರಂಭದಲ್ಲೇ ‘ಟ್ರೆನ್ ಡಿ ಅರಾಗುವಾ’ ಗ್ಯಾಂಗ್ ಅನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ್ದನ್ನು ನೆನಪಿಸಿಕೊಂಡ ಟ್ರಂಪ್, ಈ ಕಾರ್ಯಾಚರಣೆಯನ್ನು ವೆನೆಜುವೆಲಾ ಸರ್ಕಾರದೊಂದಿಗೆ ನಿಕಟವಾಗಿ ಸಂಯೋಜಿಸಿ ಯಶಸ್ವಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್‌ನಿಂದ ಹೊರಟ ಭಾರತೀಯ ಹಡಗುಗಳ ಮೇಲೆ ಇರಾನ್​ನಿಂದ ಡ್ರೋನ್ ದಾಳಿ; ಟ್ರಂಪ್ ಆರೋಪ

“ನಮ್ಮ ಮಿತ್ರರಾಷ್ಟ್ರವಾದ ವೆನೆಜುವೆಲಾ ಸರ್ಕಾರದೊಂದಿಗೆ ನಾವು ಉತ್ತಮವಾಗಿ ಕೆಲಸ ಮಾಡುತ್ತಿದ್ದೇವೆ. ಇದರ ಪರಿಣಾಮವಾಗಿ, ಟ್ರೆನ್ ಡಿ ಅರಾಗುವಾ ಭಯೋತ್ಪಾದಕರಿಗೆ ಈಗ ವೆನೆಜುವೆಲಾದಲ್ಲಾಗಲಿ ಅಥವಾ ಜಗತ್ತಿನ ಬೇರೆಲ್ಲೂ ಸುರಕ್ಷಿತ ಆಶ್ರಯ ತಾಣಗಳಿಲ್ಲ. ಇಂತಹ ಕ್ರೂರ ಕೊಲೆಗಡುಕರು ಮತ್ತು ಡ್ರಗ್ ಮಾಫಿಯಾ ಕಿಂಗ್‌ಗಳನ್ನು ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಲ್ಲಾದರೂ ಹುಡುಕಿ ನರಕದ ಆಳಕ್ಕೆ ತಳ್ಳಲು ಅಮೆರಿಕ ಸದಾ ಸಿದ್ಧವಿದೆ” ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

7 ಭರ್ಜರಿ ದಾಖಲೆಗಳನ್ನು ಬದಿಗಿಟ್ಟು ನಿವೃತ್ತಿ ಘೋಷಿಸಿದ ಕೇನ್ ವಿಲಿಯಮ್ಸನ್!

Source link

Karnavedha Samskara: ಗಂಡು ಮಕ್ಕಳಿಗೆ ಕಿವಿ ಚುಚ್ಚಲೇಬೇಕು ಏಕೆ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Beyond Fashion: Understanding Karnavedha Samskara and Its Benefits for Boys

ಗಂಡು ಮಕ್ಕಳಿಗೆ ಕರ್ಣವೇದ ಸಂಸ್ಕಾರImage Credit source: Pinterest

ಹಿಂದೂ ಸನಾತನ ಸಂಪ್ರದಾಯದಲ್ಲಿ, ಅನೇಕ ಸಂಸ್ಕಾರಗಳು ವ್ಯಕ್ತಿಯ ಜೀವನದ ವಿವಿಧ ಹಂತಗಳಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅವುಗಳಲ್ಲಿ ಕರ್ಣವೇದ ಸಂಸ್ಕಾರ ಅಥವಾ ಕಿವಿ ಚುಚ್ಚಿಸುವುದು ಒಂದು ಪ್ರಮುಖ ವಿಧಿಯಾಗಿದೆ. ಸಾಮಾನ್ಯವಾಗಿ ಹೆಣ್ಣುಮಕ್ಕಳಿಗೆ ಮಾತ್ರವಲ್ಲದೆ, ಗಂಡು ಮಕ್ಕಳಿಗೂ ಕಿವಿ ಚುಚ್ಚಿಸುವ ಪದ್ಧತಿ ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಅಲಂಕಾರಿಕ ಅಥವಾ ಆಧುನಿಕ ಫ್ಯಾಷನ್ ಆಗಿರದೆ, ಆಳವಾದ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಶೈಕ್ಷಣಿಕ ಮಹತ್ವವನ್ನು ಹೊಂದಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಕರ್ಣವೇದ ಸಂಸ್ಕಾರ ಎಂದರೇನು?

ಕರ್ಣವೇದ ಸಂಸ್ಕಾರವು ಪುಟ್ಟ ಮಕ್ಕಳ ಕಿವಿಯನ್ನು ಚುಚ್ಚುವ ಒಂದು ಧಾರ್ಮಿಕ ವಿಧಿಯಾಗಿದೆ. ಇದು ಹಿಂದೂ ಧರ್ಮದ ಷೋಡಶ ಸಂಸ್ಕಾರಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಸಾಮಾನ್ಯವಾಗಿ, ಉಪನಯನದ ಸಮಯದಲ್ಲಿ ಅಥವಾ 21 ವರ್ಷ ವಯಸ್ಸಿನೊಳಗೆ ಈ ಸಂಸ್ಕಾರವನ್ನು ಮಾಡಿಸುವುದು ರೂಢಿಯಲ್ಲಿದೆ. ಇದು ಆಧ್ಯಾತ್ಮಿಕ ನಂಬಿಕೆಯ ಭಾಗವಾಗಿದ್ದು, ಪ್ರಾಚೀನ ಕಾಲದಿಂದಲೂ ಆಚರಿಸಿಕೊಂಡು ಬರಲಾಗಿದೆ.

ಆಧ್ಯಾತ್ಮಿಕ ಮಹತ್ವ:

ಕಿವಿ ಚುಚ್ಚಿಸುವುದಕ್ಕೆ ಹಲವು ಆಧ್ಯಾತ್ಮಿಕ ಕಾರಣಗಳಿವೆ. ಮಕ್ಕಳು ಪ್ರೌಢಾವಸ್ಥೆಗೆ ಬಂದಾಗ, ಅವರ ದೇಹದ ಸುತ್ತ ಋಣಾತ್ಮಕ ಶಕ್ತಿಗಳು ಆವರಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ನಂಬಲಾಗಿದೆ. ಕಿವಿ ಚುಚ್ಚಿಸುವುದರಿಂದ ದೇಹವು ಭಿನ್ನವಾಗುತ್ತದೆ. ಅಂದರೆ, ದೇಹದಲ್ಲಿ ಸಣ್ಣ ಗಾಯವಾಗಿರುವುದರಿಂದ, ಅದು ಕೆಟ್ಟ ಶಕ್ತಿಗಳ ಪ್ರಭಾವದಿಂದ ದೂರವಿರುತ್ತದೆ. ಒಂದು ಕಥೆಯ ಪ್ರಕಾರ, ಕಾಡಿನಲ್ಲಿ ರಾಜನೊಬ್ಬನ ಬೆರಳು ಕಟ್ ಆಗಿದ್ದ ಕಾರಣ, ಕಾಡಿನ ಜನರು ಆತನನ್ನು ದೇವಿಗೆ ಬಲಿ ನೀಡಲು ಅನರ್ಹ ಎಂದು ಹಿಂದಕ್ಕೆ ಕಳುಹಿಸುತ್ತಾರೆ. ಇದೇ ರೀತಿ, ದೇಹದಲ್ಲಿನ ಭಿನ್ನತೆ ಕೆಟ್ಟ ಶಕ್ತಿಗಳ ಆವಾಹನೆಯನ್ನು ತಡೆಯುತ್ತದೆ ಎಂದು ನಂಬಲಾಗಿದೆ. ನಿರ್ದಿಷ್ಟವಾಗಿ, ರಾಹು-ಕೇತುಗಳಂತಹ ಗ್ರಹಗಳ ನಕಾರಾತ್ಮಕ ಪ್ರಭಾವಗಳನ್ನು ಕಡಿಮೆ ಮಾಡಲು ಇದು ಸಹಕಾರಿ ಎಂದು ಹೇಳಲಾಗುತ್ತದೆ. ಒಂದು ಕಿವಿಗೆ ಬದಲಾಗಿ ಎರಡೂ ಕಿವಿಗಳನ್ನು ಚುಚ್ಚಿಸುವುದು ಹೆಚ್ಚು ಶುಭಕರ ಎಂದು ಹೇಳಲಾಗುತ್ತದೆ.

ಶೈಕ್ಷಣಿಕ ಮತ್ತು ವೈಜ್ಞಾನಿಕ ಪ್ರಯೋಜನಗಳು:

ಕರ್ಣವೇದ ಸಂಸ್ಕಾರವು ಮಕ್ಕಳ ಬೌದ್ಧಿಕ ಬೆಳವಣಿಗೆಗೂ ಸಹಕಾರಿಯಾಗಿದೆ. ಕಿವಿ ಚುಚ್ಚಿಸುವುದರಿಂದ ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುತ್ತದೆ. ಮೆಮೊರಿ ಪವರ್ ಹೆಚ್ಚುತ್ತದೆ, ಏಕಾಗ್ರತೆ ವೃದ್ಧಿಸುತ್ತದೆ, ತಾಳ್ಮೆ ಮತ್ತು ಸಹನೆ ಹೆಚ್ಚಾಗುತ್ತದೆ. ಇದು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಡೆಯುತ್ತದೆ ಮತ್ತು ಯೋಚನಾ ಶಕ್ತಿಯನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಇದಕ್ಕೆ ವೈಜ್ಞಾನಿಕ ಆಧಾರವೂ ಇದೆ. ಆಯುರ್ವೇದದಲ್ಲಿ, ಕಿವಿಯ ನರಬಿಂದುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಕಿವಿಯಲ್ಲಿರುವ ಕೆಲವು ನರಬಿಂದುಗಳು ಮೆದುಳಿಗೆ ನೇರವಾಗಿ ಸಂಪರ್ಕ ಹೊಂದಿವೆ. ಕಿವಿ ಚುಚ್ಚಿದಾಗ ಈ ನರಬಿಂದುಗಳು ಸಕ್ರಿಯಗೊಳ್ಳುತ್ತವೆ ಎಂದು ನಂಬಲಾಗಿದೆ. ಇದು ಮಿದುಳಿನ ಕಾರ್ಯಕ್ಷಮತೆಯನ್ನು ಹೆಚ್ಚಿಸಿ ಸ್ಮರಣ ಶಕ್ತಿ ಮತ್ತು ಏಕಾಗ್ರತೆಗೆ ಸಹಾಯ ಮಾಡುತ್ತದೆ. ಆಯುರ್ವೇದವು ಶರೀರಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಕಿವಿಯ ಮೇಲೆ ಚಿಕಿತ್ಸೆಯನ್ನು ಸೂಚಿಸುತ್ತದೆ.

ಯಾವ ವಯಸ್ಸಿನಲ್ಲಿ ಸೂಕ್ತ?

ಈ ಸಂಸ್ಕಾರಕ್ಕೆ ವಯಸ್ಸಿನ ಮಿತಿಯಿದ್ದರೂ, ಸಾಮಾನ್ಯವಾಗಿ ಪ್ರೌಢಾವಸ್ಥೆಗೆ ಬರುವ ಮೊದಲು ಅಂದರೆ 21 ವರ್ಷದ ಒಳಗಡೆ ಕಿವಿ ಚುಚ್ಚಿಸುವುದು ಸೂಕ್ತ ಎಂದು ಪರಿಗಣಿಸಲಾಗುತ್ತದೆ. ಈ ವಯಸ್ಸಿನಲ್ಲಿ ಮಕ್ಕಳು ಇನ್ನೂ ಬೆಳೆಯುತ್ತಿರುವುದರಿಂದ, ಯಾವುದೇ ಕೆಟ್ಟ ಶಕ್ತಿಗಳು ಅವರ ಮೇಲೆ ಆವಾಹನೆ ಆಗುವುದಿಲ್ಲ ಮತ್ತು ಕೆಟ್ಟ ಪ್ರಭಾವ ಬೀರುವುದಿಲ್ಲ ಎಂದು ನಂಬಲಾಗಿದೆ. ಮಗು ಮಂಕಾಗಿದೆ, ಓದುವುದಿಲ್ಲ ಅಥವಾ ಜ್ಞಾಪಕಶಕ್ತಿ ಕಡಿಮೆಯಾಗಿದೆ ಎಂದು ಪೋಷಕರು ಚಿಂತಿಸಿದಾಗ, ಈ ಸಾಂಪ್ರದಾಯಿಕ ಪದ್ಧತಿಯು ಉತ್ತಮ ಪರಿಹಾರ ನೀಡುತ್ತದೆ ಎಂದು ಕೆಲವರು ನಂಬುತ್ತಾರೆ.

ಕೊನೆಯದಾಗಿ, ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಕೇವಲ ಒಂದು ಪದ್ಧತಿಯಲ್ಲ. ಇದು ಸಾಂಪ್ರದಾಯಿಕವಾಗಿ, ಆಧ್ಯಾತ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಹಲವು ಶುಭ ಫಲಗಳನ್ನು ನೀಡುತ್ತದೆ ಎಂದು ಹಿಂದೂ ನಂಬಿಕೆಗಳು ಮತ್ತು ಆಯುರ್ವೇದದ ತತ್ವಗಳು ಹೇಳುತ್ತವೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:30 am, Sat, 13 June 26

Source link

ಭಾರತ ತಂಡದಲ್ಲಿ 3ನೇ ಸ್ಥಾನಕ್ಕಾಗಿ ಮೂವರ ನಡುವೆ ಪೈಪೋಟಿ! – Kannada News | IND vs AFG: Who Will Fill Kohli’s No.3 Spot?

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಇಂದಿನಿಂದ (ಜೂನ್ 13) ಶುರುವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಯಾರು? ಎಂಬುದೇ ಪ್ರಶ್ನೆ. ಏಕೆಂದರೆ ಐಪಿಎಲ್ 2026ರ ವೇಳೆ ಗಾಯಗೊಂಡಿರುವ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಬೇರೆ ಬ್ಯಾಟರ್​ನನ್ನು ಕಣಕ್ಕಿಳಿಸಬೇಕಾದ ಅನಿವಾರ್ಯತೆ ಎದುರಾಗಿದೆ.  ಈ ಅನಿವಾರ್ಯತೆಯ ಪಶ್ನೆಯನ್ನು ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಮೋರ್ನೆ ಮೋರ್ಕೆಲ್ ಮುಂದಿಡಲಾಗಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಮೋರ್ನೆ ಮೋರ್ಕೆಲ್ ಅವರಿಗೆ ಟೀಮ್ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಯಾರು ಎಂಬ ಪ್ರಶ್ನೆ ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಮೋರ್ಕೆಲ್​…

“ಈ ಏಕದಿನ ಸರಣಿಯಲ್ಲಿ ನಾವು ನಂ.3 ಸ್ಥಾನದಲ್ಲಿ ಇಶಾನ್ ಕಿಶನ್, ಕೆಎಲ್ ರಾಹುಲ್ ಅಥವಾ ಯಶಸ್ವಿ ಜೈಸ್ವಾಲ್ ಅವರಂತಹ ವಿಭಿನ್ನ ಆಟಗಾರರನ್ನು ಕಣಕ್ಕಿಳಿಸಿ ಪ್ರಯೋಗ ಮಾಡಲಿದ್ದೇವೆ. ಇದು ನಮಗೆ ಹೊಸ ಯೋಚನೆಗಳನ್ನು ಪರೀಕ್ಷಿಸಲು ಉತ್ತಮ ಅವಕಾಶ ನೀಡುತ್ತದೆ,” ಎಂದು ತಿಳಿಸಿದ್ದಾರೆ.

ಅಂದರೆ ಮೂರನೇ ಏಕದಿನ ಪಂದ್ಯದಲ್ಲಿ ಮೂವರು ಬ್ಯಾಟರ್​ಗಳು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಇಶಾನ್ ಕಿಶನ್, ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಳ್ಳಬಹುದು.

  • ಇಶಾನ್ ಕಿಶನ್: ಎಡಗೈ ವಿಕೆಟ್‌ಕೀಪರ್-ಬ್ಯಾಟರ್ ಆಗಿರುವ ಇಶಾನ್ ಕಿಶನ್ ಈ ಸರಣಿಯ ಮೂಲಕ ಏಕದಿನ ಕ್ರಿಕೆಟ್​ಗೆ ಮರಳಿದ್ದು, ಅಗ್ರ ಕ್ರಮಾಂಕದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ.
  • ಕೆಎಲ್ ರಾಹುಲ್: ಕಳೆದ ಕೆಲವು ವರ್ಷಗಳಿಂದ ಮಧ್ಯಮ ಕ್ರಮಾಂಕದಲ್ಲಿ (ನಂ.5) ಆಡುತ್ತಿರುವ ರಾಹುಲ್, ತಮ್ಮ ತಾಂತ್ರಿಕ ಕೌಶಲ್ಯದಿಂದಾಗಿ ಆರಂಭಿಕ ವಿಕೆಟ್ ಪತನದ ಸಂದರ್ಭದಲ್ಲಿ ಇನಿಂಗ್ಸ್ ಮುನ್ನಡೆಸಲು ಸೂಕ್ತ ಆಯ್ಕೆಯಾಗಿದ್ದಾರೆ.
  • ಯಶಸ್ವಿ ಜೈಸ್ವಾಲ್: ವಿರಾಟ್ ಕೊಹ್ಲಿ ಅವರ ಬದಲಿಯಾಗಿ ತಂಡಕ್ಕೆ ಆಯ್ಕೆಯಾಗಿರುವ ಯಶಸ್ವಿ ಜೈಸ್ವಾಲ್, ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅಲ್ಲದೆ ಈಗಾಗಲೇ ಏಕದಿನ ಕ್ರಿಕೆಟ್‌ನಲ್ಲಿ ಶತಕ (116*) ಸಿಡಿಸಿರುವ ಇವರು ಮೂರನೇ ಕ್ರಮಾಂಕಕ್ಕೆ ಬಲ ತುಂಬಬಲ್ಲರು.

ಭಾರತ vs ಅಫ್ಘಾನಿಸ್ತಾನ್ ಏಕದಿನ ಸರಣಿ ವೇಳಾಪಟ್ಟಿ:

ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ, ಇದೀಗ ಏಕದಿನ ಸರಣಿಯನ್ನೂ ಕೈವಶ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ. ಸರಣಿಯ ಎಲ್ಲಾ ಪಂದ್ಯಗಳು ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಈ ಮ್ಯಾಚ್​ಗಳ ವೇಳಾಪಟ್ಟಿ ಈ ಕೆಳಗಿನಂತಿದೆ.

  •  1ನೇ ಏಕದಿನ ಪಂದ್ಯ: ಜೂನ್ 13, ಶನಿವಾರ – ಧರ್ಮಶಾಲಾ
  •  2ನೇ ಏಕದಿನ ಪಂದ್ಯ: ಜೂನ್ 17, ಬುಧವಾರ – ಲಕ್ನೋ
  •  3ನೇ ಏಕದಿನ ಪಂದ್ಯ: ಜೂನ್ 20, ಶನಿವಾರ – ಚೆನ್ನೈ

ಇದನ್ನೂ ಓದಿ: ನನ್ನ ಎದುರಾಳಿ, ನನ್ನ ಆಪ್ತ ಗೆಳೆಯ… ವಿಲಿಯಮ್ಸನ್ ನಿವೃತ್ತಿಗೆ ಕೊಹ್ಲಿ ಭಾವುಕ ಪತ್ರ!

ಭಾರತ ಏಕದಿನ ತಂಡ:  ಶುಭ್​ಮನ್ ಗಿಲ್ (ನಾಯಕ) , ಕೆಎಲ್ ರಾಹುಲ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ , ಯಶಸ್ವಿ ಜೈಸ್ವಾಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಹರ್ಷ್ ದುಬೆ , ಕುಲ್ದೀಪ್ ಯಾದವ್ , ಅರ್ಷದೀಪ್ ಸಿಂಗ್ , ಗುರ್ನೂರ್ ಬ್ರಾರ್ , ಪ್ರಸಿದ್ಧ್ ಕೃಷ್ಣ , ಪ್ರಿನ್ಸ್ ಯಾದವ್.

Published On – 8:31 am, Sat, 13 June 26

Source link

ಒಟಿಟಿಗೆ ಬಂದಿರೋ ‘ವಲವಾರ’ ಸಿನಿಮಾನ ಮಿಸ್ ಮಾಡಲೇಬೇಡಿ; ನಮ್ಮ ಮಣ್ಣಿನ ಸುಂದರ ಕತೆ – Kannada News | Valavaara OTT Success: Kannada Film’s Emotional Rural Story Wins Hearts After Theatrical Release

ಕನ್ನಡದಲ್ಲಿ ಸಾಕಷ್ಟು ಸುಂದರ ಸಿನಿಮಾಗಳು ಥಿಯೇಟರ್​​ಗೆ ಬಂದು ಸದ್ದಿಲ್ಲದೆ ಹೋದ ಉದಾಹರಣೆಗಳಿವೆ. ‘ಚಿತ್ರ ಚೆನ್ನಾಗಿದ್ದರೂ ಹೆಚ್ಚು ಜನರಿಗೆ ತಲುಪಲಿಲ್ಲ’ ಎಂಬ ಕೊರಗು ಸಿನಿಮಾ ತಂಡವನ್ನು ಸದಾ ಕಾಡುತ್ತಿರುತ್ತದೆ. ಆದರೆ, ಇಂತಹ ಸಿನಿಮಾಗಳು ಒಟಿಟಿಗೆ (OTT) ಬಂದ ಬಳಿಕ ಭಾರಿ ಸಂಖ್ಯೆಯ ಪ್ರೇಕ್ಷಕರನ್ನು ತಲುಪಿ, ಗೆದ್ದ ಇತಿಹಾಸವಿದೆ. ಈಗ ಇದೇ ಸಾಲಿಗೆ ‘ವಲವಾರ’ ಚಿತ್ರವೂ ಸೇರ್ಪಡೆ ಆಗಿದೆ. ಜನವರಿ 30ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗದ ಗಣ್ಯರಿಂದ ಭಾರಿ ಪ್ರಶಂಸೆ ಪಡೆದಿದ್ದ ಈ ಅತ್ಯಂತ ಸುಂದರ ಹಾಗೂ ಹೃದಯಸ್ಪರ್ಶಿ ಕಲಾಕೃತಿ, ಈಗ ಒಟಿಟಿಯಲ್ಲಿ ರಿಲೀಸ್ ಆಗಿದ್ದು, ದೊಡ್ಡ ಮಟ್ಟದಲ್ಲಿ ಜನರನ್ನು ತಲುಪುತ್ತಿದೆ.

ಸಕಲೇಶಪುರದ ಹಸಿರು ಪರಿಸರದಲ್ಲಿ ನಡೆಯುವ ಗ್ರಾಮೀಣ ಕಥೆ. ಹಳ್ಳಿ ಜನರ ಮುಗ್ಧತೆ, ಅಣ್ಣ-ತಮ್ಮಂದಿರ ಬಾಂಧವ್ಯ ಮತ್ತು ಇಬ್ಬರು ಮಕ್ಕಳಿದ್ದಾಗ ತಂದೆ ಮಾಡುವ ತಾರತಮ್ಯದ ಬಗ್ಗೆ ಸಿನಿಮಾದಲ್ಲಿ ಹೇಳಲಾಗಿದೆ. ‘ವಲವಾರ’ ಪದದ ಅರ್ಥ ಕೂಡ ತಾರತಮ್ಯ ಎಂದೇ.

ಕಥೆ ಏನು?

ಒಂದು ಬಡ ಕುಟುಂಬದಲ್ಲಿ ಹುಟ್ಟುವ ಕುಂಡೇಸಿ ಹಾಗೂ ಕೊಸುಡಿಯ ಕಥೆ ಇದು. ತಂದೆಗೆ ಕಿರಿಯ ಮಗ ಕೊಸುಡಿ ಅಂದರೆ ಪ್ರೀತಿ. ಹಿರಿ ಮಗ ಕುಂಡೇಸಿ ಅಷ್ಟಕ್ಕಷ್ಟೇ. ತಂದೆ ಪೇಟೆಗ ಹೋದಾಗ ಅಣ್ಣ-ತಮ್ಮಂದಿರು ತಮ್ಮ ಮನೆಯ ಗರ್ಭಿಣಿ ಹಸು ‘ಗೌರ’ಳನ್ನು ಮೇಯಿಸಲು ಕರೆದುಕೊಂಡು ಹೋಗುತ್ತಾರೆ. ಆದರೆ, ಆ ಹಸು ಕಾಣೆಯಾಗುತ್ತದೆ. ಒಂದೇ ರಾತ್ರಿಯಲ್ಲಿ ಆ ಹಸುವನ್ನು ಹುಡುಕುವ ಪ್ರಕ್ರಿಯೆಯಲ್ಲಿ ಆ ಪುಟ್ಟ ಹುಡುಗನಿಗೆ ಸಿಗುವ ಜೀವನಾನುಭವವೇ ಚಿತ್ರದ ಮುಖ್ಯ ಕಥಾವಸ್ತು.

ಇದನ್ನೂ ಓದಿ: ‘ವಲವಾರ’ ಸಿನಿಮಾ ವಿಮರ್ಶೆ; ಹಾಸ್ಯ, ಭಾವನೆಗಳ ಮಿಶ್ರಣ; ಬಾಲ್ಯ ನೆನಪಿಸೋ ಪಯಣ

ಸುತನ್ ಗೌಡ ಅವರು ಕಥೆ, ಚಿತ್ರಕಥೆ ಬರೆದು ಈ ಚಿತ್ರವನ್ನು ಅದ್ಭುತವಾಗಿ ನಿರ್ದೇಶಿಸಿದ್ದಾರೆ. ಬಾಲ ನಟರಾದ ಮಾಸ್ಟರ್ ವೇದಿಕ್ ಕುಶಾಲ್ (ಕುಂಡೇಸಿ) ಮತ್ತು ಮಾಸ್ಟರ್ ಶಯಾನ್ (ಕೊಸುಡಿ) ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇವರೊಂದಿಗೆ ಅಭಯ್ (ಯದು ಕುಮಾರ), ಮಾಲತೇಶ್ ಮತ್ತು ಹರ್ಷಿತಾ ಗೌಡ ನಟಿಸಿದ್ದಾರೆ. ಸುಂದರ ಹಳ್ಳಿ ಕಥೆಯ ಈ ಚಿತ್ರಕ್ಕೆ ಕದ್ರಿ ಮಣಿಕಾಂತ್ ಅವರ ಹಿನ್ನೆಲೆ ಸಂಗೀತ ಮತ್ತಷ್ಟು ತೂಕ ಕೊಟ್ಟಿದೆ. ಗಿರಿಧರ್ ಜಯಕುಮಾರ್, ಅನಿರುದ್ಧ್ ಗೌತಮ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಜೀ5 ಒಟಿಟಿಯಲ್ಲಿ ಕನ್ನಡದ ಜೊತೆಗೆ ಹಲವು ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ? ಲಕ್ಷ್ಮಿ ಪ್ರವೇಶಿಸುವ ಸಿಂಹದ್ವಾರದ ಪಾವಿತ್ರ್ಯತೆ ಬಗ್ಗೆ ಇಲ್ಲಿದೆ ನೋಡಿ – Kannada News | The auspiciousness of your homes main door why evening seating matters

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More

Source link

ನನ್ನ ಎದುರಾಳಿ, ನನ್ನ ಆಪ್ತ ಗೆಳೆಯ… ವಿಲಿಯಮ್ಸನ್ ನಿವೃತ್ತಿಗೆ ಕೊಹ್ಲಿ ಭಾವುಕ ಪತ್ರ! – Kannada News | Virat Kohli’s Heartfelt Retirement Post For Friend Kane Williamson

ಜೂನ್ 12, 2026 ರಂದು ನ್ಯೂಝಿಲೆಂಡ್​ನ ಶ್ರೇಷ್ಠ ಬ್ಯಾಟರ್ ಹಾಗೂ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮಧ್ಯದಲ್ಲೇ ಹೊರಬಿದ್ದ ಈ ದಿಢೀರ್ ನಿರ್ಧಾರ ಇಡೀ ಕ್ರಿಕೆಟ್ ಜಗತ್ತಿಗೆ ಆಘಾತ ನೀಡಿದೆ. ಈ ಬೆನ್ನಲ್ಲೇ, ವಿಲಿಯಮ್ಸನ್ ಅವರ ಆಪ್ತ ಗೆಳೆಯ ಹಾಗೂ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಭಾವನಾತ್ಮಕ ಪತ್ರ ಈಗ ಎಲ್ಲರ ಗಮನ ಸೆಳೆದಿದೆ.

‘ಮೈದಾನದ ಎದುರಾಳಿ ಈಗ ಜೀವಮಾನದ ಗೆಳೆಯ’

ಆಧುನಿಕ ಕ್ರಿಕೆಟ್‌ನ ‘ಫ್ಯಾಬ್ ಫೋರ್’ ಜೋಡಿಯಾಗಿರುವ ವಿರಾಟ್ ಕೊಹ್ಲಿ ಮತ್ತು ಕೇನ್ ವಿಲಿಯಮ್ಸನ್ ನಡುವಿನ ಸ್ನೇಹ ಜಗತ್ಪ್ರಸಿದ್ಧ. ವಿಲಿಯಮ್ಸನ್ ನಿವೃತ್ತಿ ವಿಷಯ ತಿಳಿಯುತ್ತಿದ್ದಂತೆ ಕೊಹ್ಲಿ ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಹಾಗೂ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶುಭ ಹಾರೈಸಿದ್ದಾರೆ.

“ವರ್ಷಗಳ ಪಯಣದಲ್ಲಿ ಒಬ್ಬ ಕಠಿಣ ಎದುರಾಳಿಯಿಂದ ಅತ್ಯಾಪ್ತ ಗೆಳೆಯನಾಗಿ ಬದಲಾದ ಕಥೆ ನಮ್ಮದು. ಕೇನ್, ಇಷ್ಟು ವರ್ಷಗಳ ಕಾಲ ನಿನ್ನ ಅದ್ಭುತ ಬ್ಯಾಟಿಂಗ್ ನೋಡುವುದು ಮತ್ತು ನಿನ್ನ ವಿರುದ್ಧ ಸ್ಪರ್ಧಿಸುವುದು ನನಗೆ ಸಿಕ್ಕ ದೊಡ್ಡ ಹೆಮ್ಮೆ. ಆದರೆ ಎಲ್ಲಕ್ಕಿಂತ ಹೆಚ್ಚಾಗಿ ಕ್ರಿಕೆಟ್ ಮತ್ತು ಅದರಾಚೆಗಿನ ನಮ್ಮ ಸ್ನೇಹ ಹಾಗೂ ನಾವು ಹಂಚಿಕೊಂಡ ಆಲೋಚನೆಗಳಿಗೆ ನಾನು ಹೆಚ್ಚಿನ ಗೌರವ ನೀಡುತ್ತೇನೆ. ನಾವು ಭೇಟಿಯಾದ ಹಾಗೂ ಮಾತನಾಡಿದ ಪ್ರತಿ ಕ್ಷಣವನ್ನೂ ನಾನು ಸದಾ ನೆನಪಿಸಿಕೊಳ್ಳುತ್ತೇನೆ. ನನ್ನ ಸಹೋದರನಿಗೆ ಮುಂದಿನ ಜೀವನಕ್ಕೆ ಶುಭ ಹಾರೈಕೆಗಳು. ನೀನು ನಿನ್ನ ಪಾಲಿನ ಕರ್ತವ್ಯವನ್ನು ಅತ್ಯುತ್ತಮವಾಗಿ ನಿಭಾಯಿಸಿದ್ದೀಯಾ, ಈಗ ವಿಶ್ರಾಂತಿ ಪಡೆಯುವ ಸಮಯ. ಜೀವನ ಈಗಷ್ಟೇ ಆರಂಭವಾಗಿದೆ ಗೆಳೆಯ, ವೆಲ್ ಡನ್!” ಎಂದು ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.

ಪೈಪೋಟಿಯಿಂದಲೇ ಗೆಳೆತನ:

ವಿರಾಟ್ ಕೊಹ್ಲಿ ಮತ್ತು ಕೇನ್ ವಿಲಿಯಮ್ಸನ್ ಅವರ ಪೈಪೋಟಿ ಇಂದು ನಿನ್ನೆಯದ್ದಲ್ಲ. 2008 ರ ಅಂಡರ್-19 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇವರಿಬ್ಬರೂ ತಂತಮ್ಮ ದೇಶಗಳ ಮುನ್ನಡೆಸುವ ನಾಯಕರಾಗಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದರು. ಅಲ್ಲಿಂದ ಆರಂಭವಾದ ಈ ಕ್ರಿಕೆಟ್ ಪಯಣ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬರೋಬ್ಬರಿ 16 ವರ್ಷಗಳ ಕಾಲ ಮುಂದುವರಿಯಿತು.

ಮೈದಾನದಲ್ಲಿ ಎಷ್ಟೇ ತೀವ್ರ ಪೈಪೋಟಿ ಇದ್ದರೂ, ಇವರಿಬ್ಬರ ನಡುವಿನ ಸೌಜನ್ಯ ಮತ್ತು ಕ್ರೀಡಾ ಸ್ಫೂರ್ತಿ ಎಂದಿಗೂ ಕಡಿಮೆಯಾಗಲಿಲ್ಲ. 2020 ರ ನ್ಯೂಝಿಲೆಂಡ್ ಪ್ರವಾಸದ ವೇಳೆ ಇಬ್ಬರೂ ಬೌಂಡರಿ ಗೆರೆಯ ಬಳಿ ಕುಳಿತು ಮಾತನಾಡುತ್ತಿದ್ದ ಚಿತ್ರ ಇಂದಿಗೂ ಕ್ರಿಕೆಟ್ ಪ್ರೇಮಿಗಳ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ.

ನಾಯಕನಾಗಿ ಐತಿಹಾಸಿಕ ಸಾಧನೆ!

ಕೇನ್ ವಿಲಿಯಮ್ಸನ್ ಕೇವಲ ಬ್ಯಾಟಿಂಗ್ ಮಾತ್ರವಲ್ಲದೆ, ಕಿವೀಸ್ ತಂಡವನ್ನು ಅದ್ಭುತವಾಗಿ ಮುನ್ನಡೆಸಿದರು. 2021 ರ ಚೊಚ್ಚಲ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನಲ್ಲಿ ಭಾರತ ತಂಡವನ್ನೇ ಸೋಲಿಸಿ ನ್ಯೂಝಿಲೆಂಡ್‌ಗೆ ಐತಿಹಾಸಿಕ ಟ್ರೋಫಿ ತಂದುಕೊಟ್ಟ ಕೀರ್ತಿ ಇವರದ್ದಾಗಿದೆ. ಇದಲ್ಲದೆ 2019 ರ ಏಕದಿನ ವಿಶ್ವಕಪ್‌ನಲ್ಲಿ ತಂಡವನ್ನು ಫೈನಲ್‌ಗೆ ಮುನ್ನಡೆಸಿ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಪಡೆದಿದ್ದರು.

ಇದನ್ನೂ ಓದಿ: ವಿಶ್ವ ದಾಖಲೆಯ ಮೊತ್ತ ಪೇರಿಸಿ ಗೆದ್ದ ಇಂಗ್ಲೆಂಡ್

ಅವರ ಈ ಶಾಂತ ಸ್ವಭಾವ ಮತ್ತು ಅಪ್ರತಿಮ ಕ್ರೀಡಾ ಮನೋಭಾವದಿಂದಾಗಿ, ವಿರಾಟ್ ಕೊಹ್ಲಿ ಸೇರಿದಂತೆ ಜಗತ್ತಿನ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಇಂದು ಈ ‘ಜೆಂಟಲ್‌ಮನ್’ ಆಟಗಾರನಿಗೆ ಗೌರವದ ವಿದಾಯ ಕೋರುತ್ತಿದ್ದಾರೆ.

Published On – 7:49 am, Sat, 13 June 26

Source link

ಬ್ಯಾಂಕಾಕ್​​ನಿಂದ ಮುಂಬೈಗೆ ಬಂದ ಮಾಡೆಲ್ ಬಳಿ ಇತ್ತು 12 ಕೋಟಿ ಬೆಲೆಯ ಗಾಂಜಾ – Kannada News | Model Harsh Sunny Arrested: 12 Crore Cannabis Seized at Mumbai Airport from Bangkok

ಬ್ಯಾಂಕಾಕ್‌ನಿಂದ ಮುಂಬೈಗೆ ಆಗಮಿಸಿದ ಮಾಡೆಲ್ ಹರ್ಷ ಸನ್ನಿ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅವರ ಲಗೇಜ್‌ನಲ್ಲಿ ಸುಮಾರು 12 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಯಾಗಿದೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ವ್ಯಾಕ್ಯೂಮ್ ಸೀಲ್ಡ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದಾಗ್ಯೂ, ಬ್ಯಾಗ್‌ನಲ್ಲಿ ಮಾದಕ ದ್ರವ್ಯಗಳಿವೆ ಎಂದು ತನಗೆ ತಿಳಿದಿರಲಿಲ್ಲ ಎಂದು ಹರ್ಷ ಸನ್ನಿ ಹೇಳಿದ್ದಾರೆ.

ಬ್ಯಾಂಕಾಕ್ನಿಂದ ಮುಂಬೈಗೆ ಬಂದ ನಂತರ ಅವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬ್ಯಾಂಕಾಕ್ ನಿಂದ ಮುಂಬೈಗೆ ಬಂದಿದ್ದ ಹರ್ಷ ಸನ್ನಿ ಅವರ ಲಗೇಜ್ ಪರಿಶೀಲಿಸಿದ ವಿಮಾನ ನಿಲ್ದಾಣದ ಅಧಿಕಾರಿಗಳು, ಅವರು ಗಾಂಜಾದೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಪೊಲೀಸರು 28 ವರ್ಷದ ಹರ್ಷ ಸನ್ನಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಅವರ ಹಿಂದೆ ಬೇರೆ ಯಾರಿದ್ದಾರೆ ಎಂಬ ವಿಷಯ ಇನ್ನಷ್ಟೇ ಗೊತ್ತಾಗಬೇಕಿದೆ.

ಜೂನ್ 10 ರ ಮಧ್ಯರಾತ್ರಿ ಹರ್ಷ ಸನ್ನಿ ಬ್ಯಾಂಕಾಕ್‌ನಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದರು. ಅನುಮಾನಾಸ್ಪದ ಅಧಿಕಾರಿಗಳು ಲಗೇಜ್ ಅನ್ನು ಪರಿಶೀಲಿಸಿದಾಗ, ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ವ್ಯಾಕ್ಯೂಮ್ ಸೀಲ್ಡ್ ಪ್ಯಾಕೆಟ್‌ಗಳು ಪತ್ತೆಯಾಗಿವೆ. NDPS ಫೀಲ್ಡ್ ಟೆಸ್ಟಿಂಗ್ ಕಿಟ್ ಬಳಸಿ ಪರೀಕ್ಷಿಸಿದಾಗ, ಅದು ಗಾಂಜಾ ಎಂದು ತಿಳಿದು ಬಂದಿದೆ. ಇದರೊಂದಿಗೆ, ನಿಷೇಧಿತ ಔಷಧಿಗಳನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ NDPS ಕಾಯ್ದೆಯಡಿಯಲ್ಲಿ ಹರ್ಷ ಸನ್ನಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ನಂತರ, ಹರ್ಷ ಸನ್ನಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಮತ್ತು ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಇದನ್ನೂ ಓದಿ: ಬಿಗ್​​ಬಾಸ್​ನಿಂದ ಹೊರ ಬಂದದ್ದೆ ಇನ್​​ಸ್ಟಾ ಮಾಡೆಲ್ ಆದ ಜಾಹ್ನವಿ: ವಿಡಿಯೋ ನೋಡಿ

ಆದರೆ, ಹರ್ಷ ಸನ್ನಿ ಅವರ ವಾದ ಬೇರೆಯೇ ಇದೆ. ಒಂದು ಕಾರ್ಯಕ್ರಮದ ಹೆಸರಿನಲ್ಲಿ ತಮ್ಮನ್ನು ಬ್ಯಾಂಕಾಕ್‌ಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ. ‘ಅಲ್ಲಿನ ವ್ಯಕ್ತಿಯೊಬ್ಬರು ನನಗೆ ಒಂದು ಬ್ಯಾಗ್ ನೀಡಿ ಭಾರತಕ್ಕೆ ಕರೆದೊಯ್ಯುವಂತೆ ಕೇಳಿದರು. ಆದರೆ, ಆ ಬ್ಯಾಗ್‌ನಲ್ಲಿ ಅಕ್ರಮ ಸರಕುಗಳು ಮತ್ತು ಮಾದಕ ವಸ್ತುಗಳು ಇರುವುದು ತನಗೆ ತಿಳಿದಿರಲಿಲ್ಲ’ ಎಂದು ಹರ್ಷ ಸನ್ನಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Horoscope: ರವಿ-ಚಂದ್ರರ ಸಂಚಾರದಿಂದ 12 ರಾಶಿಗಳ ಮೇಲಾಗುವ ಪ್ರಭಾವವೇನು? ಮಾಸ ಶಿವರಾತ್ರಿಯ ವಿಶೇಷ ಭವಿಷ್ಯ – Kannada News | Todays Zodiac Forecast: Effects on All Signs by Dr. Basavaraj Guruji

ಬೆಂಗಳೂರು, ಜೂ.13: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 13, 2026, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪರಾಭವ ನಾಮ ಸಂವತ್ಸರದ ಉತ್ತರಾಯಣ, ಅಧಿಕ ಜೇಷ್ಠ ಮಾಸದ ಗ್ರೀಷ್ಮ ಋತು, ಕೃಷ್ಣ ಪಕ್ಷದ ತ್ರಯೋದಶಿಯಂದು ಈ ಭವಿಷ್ಯವನ್ನು ನೀಡಲಾಗಿದೆ. ಇಂದಿನ ದಿನವು ಶನಿವಾರವಾಗಿದ್ದು, ಶನೇಶ್ವರ, ಹನುಮ, ಮತ್ತು ಸಾಕ್ಷಾತ್ ವೆಂಕಟೇಶ್ವರನಿಗೆ ಪ್ರಿಯವಾದ ದಿನವಾಗಿದೆ. ಇದರ ಜೊತೆಗೆ, ಇಂದು ಮಾಸ ಶಿವರಾತ್ರಿಯೂ ಬಂದಿರುವುದರಿಂದ, ಶಿವನ ಆರಾಧನೆ ಮತ್ತು “ಓಂ ನಮಃ ಶಿವಾಯ” ಮಂತ್ರ ಜಪದಿಂದ ಶುಭಫಲಗಳು ಪ್ರಾಪ್ತವಾಗುತ್ತವೆ ಎಂದು ಗುರೂಜಿ ತಿಳಿಸಿದ್ದಾರೆ. ರವಿ ವೃಷಭ ರಾಶಿಯಲ್ಲಿ, ಚಂದ್ರ ಮೇಷ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ಪ್ರತಿ ರಾಶಿಯವರಿಗೂ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಕೌಟುಂಬಿಕ ಸಂಬಂಧಗಳು, ಪ್ರಯಾಣ, ಶುಭ ಸಂಖ್ಯೆ, ಶುಭ ಬಣ್ಣ ಮತ್ತು ಜಪಿಸಬೇಕಾದ ಮಂತ್ರದ ಬಗ್ಗೆ ಮಾಹಿತಿ ನೀಡಲಾಗಿದೆ. ಮೇಷ ರಾಶಿಯವರಿಗೆ ಆರ್ಥಿಕವಾಗಿ ಉತ್ತಮವಾಗಿದ್ದು, ಅನೇಕ ಅವಕಾಶಗಳು ದೊರೆಯಲಿವೆ. ವೃಷಭ ರಾಶಿಯವರಿಗೆ ಆದಾಯದಲ್ಲಿ ಏರಿಕೆ ಕಂಡುಬರಲಿದೆ. ಮಿಥುನ ರಾಶಿಯವರಿಗೆ ಆತ್ಮವಿಶ್ವಾಸ ವೃದ್ಧಿಯಾಗಲಿದೆ, ಕರ್ಕಾಟಕ ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿ ಇರಲಿದೆ. ಹೀಗೆ ಪ್ರತಿಯೊಂದು ರಾಶಿಗೂ ವೈಯಕ್ತಿಕ ಅಂಶಗಳನ್ನು ಆಧರಿಸಿ ದಿನದ ಆಗುಹೋಗುಗಳನ್ನು ಡಾ. ಬಸವರಾಜ ಗುರೂಜಿ ಅವರು ಸವಿವರವಾಗಿ ಹೇಳಿದ್ದಾರೆ. ಈ ಭವಿಷ್ಯವು ದಿನದ ಶುಭ-ಅಶುಭಗಳ ಬಗ್ಗೆ ಬೆಳಕು ಚೆಲ್ಲುತ್ತದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version