Headlines

ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ – Kannada News | Mysuru Bomb Threat: Saraguru Office Receives RDX Email Amid CM Siddaramaiah Visit

ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿಯ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ ಮೈಸೂರು, ಡಿಸೆಂಬರ್ 22: ಇತ್ತೀಚಿಗೆ ಮಂಗಳೂರು, ಭಟ್ಕಳ ಸೇರಿದಂತೆ ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ (Bomb Threat) ಇ-ಮೇಲ್​ಗಳು ಹೆಚ್ಚಿದ್ದು, ಇದೀಗ ಸಿಎಂ ಮೈಸೂರು ಭೇಟಿಯ ನಡುವೆಯೇ ಸರಗೂರು ತಾಲೂಕು ಕಚೇರಿಗೂ ಇದೇ ರೀತಿಯ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇ-ಮೇಲ್​ನಲ್ಲಿ ನಟ ಅಜಿತ್ ಕುಮಾರ್ ಹೆಸರು ಉಲ್ಲೇಖ ಸಿಎಂ ಸಿದ್ದರಾಮಯ್ಯ…

Read More

ಐಸಿಸಿ ಮಾಸ್ಟರ್ ಪ್ಲ್ಯಾನ್: ಭಾರತ vs ಪಾಕಿಸ್ತಾನ್ 3 ಬಾರಿ ಮುಖಾಮುಖಿ! – Kannada News | New ICC Format: 3 India Pakistan Matches In 2027 World Cup

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಬಹುನಿರೀಕ್ಷಿತ 2027ರ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯ ಸ್ವರೂಪದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಯಿಂದಾಗಿ ಮುಂದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಬರೋಬ್ಬರಿ ಮೂರು ಬಾರಿ ಮುಖಾಮುಖಿಯಾಗಬಹುದು. ಅದರಲ್ಲೂ ಸಾಂಪ್ರದಾಯಿಕ ಎದುರಾಳಿಗಳ ನಡುವೆ ಕನಿಷ್ಠ ಎರಡು ಪಂದ್ಯಗಳು ನಡೆಯುವುದು ಬಹುತೇಕ ಖಚಿತವಾಗಿದೆ. ಸಾಮಾನ್ಯವಾಗಿ ಹಿಂದಿನ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ಲೀಗ್ ಹಂತದಲ್ಲಿ ಕೇವಲ ಒಂದು ಬಾರಿ ಮಾತ್ರ ಮುಖಾಮುಖಿಯಾಗುತ್ತಿದ್ದವು. ಇನ್ನು ದ್ವಿತೀಯ ಬಾರಿ ಉಭಯ…

Read More

ಕರ್ನಾಟಕದ ಕಾಲು ಭಾಗ ಜನ ಕುಡಿಯೋದು ಕ್ಯಾನ್, ಬಾಟಲ್ ನೀರು! ಇಲ್ಲಿ ನಲ್ಲಿ ನೀರಿಗಿಂತ ಬಾಟಲ್ ವಾಟರ್‌ಗೇ ಹೆಚ್ಚು ಡಿಮಾಂಡ್

ಬೆಂಗಳೂರು, ಏಪ್ರಿಲ್ 7: ಭಾರತದಲ್ಲಿ ಕುಡಿಯುವ ನೀರಿನ (Drinking Water) ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ, ಕ್ರಾಂತಿಕಾರಕ ಬದಲಾವಣೆಯಾಗಿದ್ದು, ದೇಶದ ಶೇ 95ರಷ್ಟು ಕುಟುಂಬಗಳು ಇಂದು ಶುದ್ಧ ಕುಡಿಯುವ ನೀರಿನ ಸೌಲಭ್ಯ ಹೊಂದಿವೆ. ಇದರೊಂದಿಗೆ, ಕುಡಿಯುವ ನೀರು ಸಂಪರ್ಕದ ಈ ಪ್ರಗತಿಯಲ್ಲಿ ಭಾರತ ಜಗತ್ತಿಗೇ ಮಾದರಿಯಾಗಿದೆ. ಆದರೆ, ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಂದು ಕುತೂಹಲಕಾರಿ ಬೆಳವಣಿಗೆ ಕಂಡುಬಂದಿದೆ. ಬೆಂಗಳೂರು (Bangalore) ಸೇರಿದಂತೆ ದಕ್ಷಿಣ ಭಾರತದ ಹೆಚ್ಚಿಮ ನಗರವಾಸಿಗಳು ನಲ್ಲಿ ನೀರಿಗಿಂತ ಹೆಚ್ಚಾಗಿ ‘ಬಾಟಲ್ ವಾಟರ್’ ಅಥವಾ ‘ಕ್ಯಾನ್…

Read More

‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ – Kannada News | Yash fans express doubts about Toxic movie English version release

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ, ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಸದ್ಯ ಸ್ಯಾಂಡಲ್‌ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಕುತೂಹಲ ಮೂಡಿಸಿದೆ. ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ ಈ ಆ್ಯಕ್ಷನ್ ಅಬ್ಬರದ ಸಿನಿಮಾ ಯಶ್ (Yash) ವೃತ್ತಿಜೀವನದ ಅತಿ ದೊಡ್ಡ ಬಜೆಟ್‌ನ ಚಿತ್ರ ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ಟೀಸರ್ ನೋಡಿದರೆ ಸಿನಿಮಾದಲ್ಲಿ ರಕ್ತಸಿಕ್ತ ದೃಶ್ಯಗಳು ಹೇರಳವಾಗಿವೆ ಎಂಬ ಸುಳಿವು ಸಿಕ್ಕಿದೆ. ಅದರಿಂದ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಆದರೆ, ಸಿನಿಮಾದ ಬಿಡುಗಡೆ ವಿಚಾರದಲ್ಲಿ…

Read More

ಥಲಸ್ಸೆಮಿಯಾ ಅಪಾಯಕಾರಿಯೇ? ಮದುವೆ ಅಥವಾ ಗರ್ಭಧಾರಣೆಗೂ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಯಾಕೆ ಮುಖ್ಯ? – Kannada News | How Genetic Blood Disorder Thalassemia Affects Children’s Health

ಥಲಸ್ಸೆಮಿಯಾ (Thalassemia) ಒಂದು ಗಂಭೀರವಾದ ಜೆನೆಟಿಕ್ ರಕ್ತ ಸಂಬಂಧಿ ಕಾಯಿಲೆಯಾಗಿದೆ. ಇದು ಪೋಷಕರಿಂದ ಮಕ್ಕಳಿಗೆ ಜೀನ್ಸ್ ಮೂಲಕ ಬರಬಹುದು. ಭಾರತದಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ಮೇಜರ್ ಸಮಸ್ಯೆಯೊಂದಿಗೆ ಜನಿಸುತ್ತಿದ್ದಾರೆ. ಆರಂಭಿಕ ಹಂತದಲ್ಲಿ ಲಕ್ಷಣಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳದ ಕಾರಣ, ಹಲವರು ಇದನ್ನು ಸಾಮಾನ್ಯ ರಕ್ತಹೀನತೆ ಅಥವಾ ದೌರ್ಬಲ್ಯ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಎಂದರೇನು? ಇದರ ಲಕ್ಷಣಗಳು ಹೇಗಿರುತ್ತವೆ ಮತ್ತು ಇದು ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಈ ಬಗ್ಗೆ ಸ್ವಲ್ಪ ಮಟ್ಟಿನ ಅರಿವಿದ್ದಾಗ…

Read More

Video: ನಾಳೆ ಆಷಾಢ ಮಾಸದ ಮೊದಲ ಶುಕ್ರವಾರ; ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಹೇಗಿದೆ ನೋಡಿ – Kannada News | Chamundi Hills Gears Up for Ashadha Fridays: EO Roopa Details Extensive Preparations

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಡ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಭಕ್ತರಿಗೆ ಸುಗಮ ದರ್ಶನ ಒದಗಿಸಲು ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರೂಪಾ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಬಾರಿಯ ಆಷಾಢದಲ್ಲಿ ಭಕ್ತರ ಅನುಕೂಲಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಪ್ರಮುಖವಾಗಿ, ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲಾಗಿದೆ. ಕಳೆದ ಬಾರಿ ಎದುರಾದ ಗೊಂದಲಗಳನ್ನು ನಿವಾರಿಸಿ, ಸುಗಮ ದರ್ಶನಕ್ಕೆ ಒತ್ತು ನೀಡಲಾಗಿದೆ. ಶಶಿ ರಂಜನ್…

Read More

ನಾಗಪುರ ಆರ್ ಎಸ್​ ಎಸ್​ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ – Kannada News | Nagpur RSS, BJP Offices Face Cesium 137 Threat: Police Beef Up Security Amid Probe

ನಾಗಪುರ, ಏಪ್ರಿಲ್ 30: ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿ ಮತ್ತು ಭಾರತೀಯ ಜನತಾ ಪಕ್ಷದ (BJP) ಕಚೇರಿಯನ್ನು ಗುರಿಯಾಗಿಸಿಕೊಂಡು ವಿಕಿರಣಶೀಲ ವಸ್ತುಗಳ ಮೂಲಕ ದಾಳಿ ನಡೆಸುವ ಬೆದರಿಕೆ ಪತ್ರವೊಂದು ಪೊಲೀಸ್ ಇಲಾಖೆಗೆ ಲಭ್ಯವಾಗಿದೆ. ಪತ್ರದ ಗಂಭೀರತೆಯನ್ನು ಅರಿತ ಪೊಲೀಸ್ ಆಯುಕ್ತರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಭಯೋತ್ಪಾದನಾ ನಿಗ್ರಹ ದಳ (ATS), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ಮುಂಬೈನಿಂದ ಆಗಮಿಸಿದ ಪರಮಾಣು ಶಕ್ತಿ ತಜ್ಞರ ವಿಶೇಷ…

Read More

ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು – Kannada News | Cholesterol Deposits on Skin: Expert Explains

ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿಯಲ್ಲಿ ಆಗುತ್ತಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ, ಕೊಲೆಸ್ಟ್ರಾಲ್ ಮಟ್ಟದಲ್ಲಿ ವೇಗಗತಿಯಲ್ಲಿ ಏರಿಕೆ ಕಂಡುಬರುತ್ತಿದೆ. ನಿಮಗೆ ತಿಳಿದಿರಬಹುದು, ಕೊಲೆಸ್ಟ್ರಾಲ್ ದೇಹದಲ್ಲಿ ಇರುವ ಒಂದು ರೀತಿಯ ಕೊಬ್ಬು, ಇದು ಹಾರ್ಮೋನುಗಳನ್ನು ತಯಾರಿಕೆಗೆ ಮತ್ತು ಜೀವಕೋಶಗಳ ರಚನೆಗೆ ಅಗತ್ಯವಾಗಿರುತ್ತದೆ. ಆದರೆ ಅದು ಅಗತ್ಯ ಮಟ್ಟಕ್ಕಿಂತ ಹೆಚ್ಚಾದಾಗ, ಆರೋಗ್ಯಕ್ಕೆ ಅಪಾಯಕಾರಿಯಾಗುತ್ತದೆ. ಈ ರೀತಿ ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ ಮತ್ತು ಅದರ ಪರಿಣಾಮಗಳನ್ನು ಚರ್ಮದ ಮೇಲೂ ಕಂಡುಬರುತ್ತದೆ. ಈ ರೀತಿ ಚರ್ಮದ ಮೇಲೆ…

Read More

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ ಅಂಕ ಪಟ್ಟಿ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಈಗಾಗಲೇ 9 ಪಂದ್ಯಗಳು ಮುಗಿದಿವೆ. ಎಲ್ಲಾ ತಂಡಗಳು ಕನಿಷ್ಠ 3 ಪಂದ್ಯಗಳನ್ನಾಡಿದೆ. ಈ ಪಂದ್ಯಗಳ ಮೂಲಕ ಐದು ತಂಡಗಳು ಕೂಡ ಗೆಲುವಿನ ಖಾತೆ ತೆರೆದಿದೆ. ಈ ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ…. 1- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ಈವರೆಗೆ 3 ಪಂದ್ಯಗಳನ್ನಾಡಿದೆ. ಈ ಮೂರು ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕ ಪಟ್ಟಿಯಲ್ಲಿ ಮೊದಲ…

Read More

ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ: ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್​​ಐಆರ್​ – Kannada News | Davanagere Headmaster Death Case: FIR Registered Against 10 for Alleged Caste Harassment and Mental Torture

ಮೃತ ಮುಖ್ಯ ಶಿಕ್ಷಕ ಜಯಪ್ಪImage Credit source: Tv9 Kannada ದಾವಣಗೆರೆ, ಜೂನ್​​ 18: ವಿಷ ಸೇವಿಸಿ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಪ್ರಕರಣ ಸಂಬಂಧ ಐವರು ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್​​ಪಿ, ಬಿಆರ್​ಪಿ ಸೇರಿದಂತೆ 10 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮಾನಸಿಕ ಹಿಂಸೆ, ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ,ಮಹಾಂತೇಶ್ ಗೌಳಿ, ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ,…

Read More