Headlines

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕುರ್ಚಿಗೆ ಕುತ್ತು ತಂದಿದ್ದ ಅಸಲಿ ರಹಸ್ಯ ದಾಖಲೆ ಬಯಲು – Kannada News | Leaked Cable Renews Debate Over Imran Khan’s Exit From Power

ಇಸ್ಲಾಮಾಬಾದ್, ಮೇ 18: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ಅತ್ಯಂತ ವಿವಾದಾತ್ಮಕ ಹಾಗೂ ರಹಸ್ಯ ರಾಜತಾಂತ್ರಿಕ ದಾಖಲೆ ‘ಸೈಫರ್’ ಅನ್ನು ಅಂತಾರಾಷ್ಟ್ರೀಯ ತನಿಖಾ ಮಾಧ್ಯಮ ಸಂಸ್ಥೆ ಡ್ರಾಪ್ ಸೈಟ್ ಬಿಡುಗಡೆ ಮಾಡಿದೆ. ಪಾಕಿಸ್ತಾನದ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಈ ರಹಸ್ಯ ಕೇಬಲ್​ನ ಅಸಲಿ ಪ್ರತಿ ಜಗತ್ತಿನ ಮುಂದೆ ಬಹಿರಂಗವಾಗಿರುವುದು ಇದೇ ಮೊದಲು. ಏನಿದು ಸೈಫರ್ ವಿವಾದ? 2022ರಲ್ಲಿ ಇಮ್ರಾನ್ ಖಾನ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವ ಮುನ್ನ, ಅಮೆರಿಕದಲ್ಲಿರುವ ಪಾಕಿಸ್ತಾನಿ…

Read More

ಕೋಲಾರದಲ್ಲಿ ಮೃತ್ಯುಕೂಪವಾದ ಕೃಷಿ ಹೊಂಡಗಳು: 15 ದಿನದಲ್ಲಿ 7 ಮಂದಿ ಸಾವು – Kannada News | Kolar Farm Ponds Turn Deadly: 7 Deaths in 15 Days Forces DC Dr MR Ravi to Order Fencing in 7 Days or Close Ponds

ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದ ಕೃಷಿ ಹೊಂಡ (ಸಾಂದರ್ಭಿಕ ಚಿತ್ರ)Image Credit source: tv9 ಕೋಲಾರ, ಮೇ 18: ಕೋಲಾರ (Kolar) ಜಿಲ್ಲೆಯಲ್ಲಿ ಕೃಷಿ ಹೊಂಡಗಳು ಸರಣಿ ಸಾವಿನ ಮೃತ್ಯುಕೂಪಗಳಾಗಿ ಪರಿಣಮಿಸಿದ್ದು, ಕಳೆದ ಕೇವಲ ಹದಿನೈದು ದಿನಗಳ ಅವಧಿಯಲ್ಲಿ ಏಳು ಜನ ಈ ಹೊಂಡಗಳಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಈ ಆಘಾತಕಾರಿ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ಜಿಲ್ಲಾಧಿಕಾರಿ (DC) ಎಂ.ಆರ್. ರವಿ ಅವರು ತಕ್ಷಣವೇ ವಿಶೇಷ ಸಭೆ ಕರೆದು ಮಹತ್ವದ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ…

Read More

Virat Kohli: ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆ!

ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಸೇರ್ಪಡೆಯಾಗಿರುವ ಹೊಸ ದಾಖಲೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50+ ರನ್‌ಗಳ ಜೊತೆಯಾಟ. ಈ ದಾಖಲೆಯೊಂದಿಗೆ ಇಂಗ್ಲೆಂಡ್ ಬ್ಯಾಟರ್ ಅಲೆಕ್ಸ್ ಹೇಲ್ಸ್​ ಅವರ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ (Virat Kohli) ಸರಿಗಟ್ಟಿದ್ದಾರೆ. (PC: IPL) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 2ನೇ ವಿಕೆಟ್​ಗೆ ದೇವದತ್ ಪಡಿಕ್ಕಲ್ ಜೊತೆ 76 ರನ್​ಗಳ ಜೊತೆಯಾಟವಾಡಿದ್ದರು. ಈ ಜೊತೆಯಾಟದೊಂದಿಗೆ ಟಿ20 ಕ್ರಿಕೆಟ್​…

Read More

‘ಟಾಕ್ಸಿಕ್’ ಸಿನಿಮಾ ಪದೇ ಪದೇ ಪೋಸ್ಟ್‌ಪೋನ್; ಅಭಿಮಾನಿಗಳ ಬೇಸರದ ಬಗ್ಗೆ ಯಶ್ ಮಾತು – Kannada News | Yash Explains ‘Toxic’ Movie Delay: Global Strategy and Fan Disappointment

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಪದೇ ಪದೇ ಮುಂದೂಡಲ್ಪಡುತ್ತಿದೆ. ಇದು ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಜೂನ್ 4ಕ್ಕೆ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ, ಜಾಗತಿಕ ಮಾರುಕಟ್ಟೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತೊಮ್ಮೆ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ. ಈ ವಿಳಂಬದ ಬಗ್ಗೆ ನಟ ಹಾಗೂ ನಿರ್ಮಾಪಕ ಯಶ್ ಅವರು ಅಂತರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದು, ಭಾರತೀಯ ಪ್ರೇಕ್ಷಕರು ಮತ್ತು ಅಭಿಮಾನಿಗಳ ಬೇಸರವನ್ನು ಒಪ್ಪಿಕೊಂಡಿದ್ದಾರೆ….

Read More

Video: ಬಿಹಾರದಲ್ಲಿ ಹೊತ್ತಿ ಉರಿದ ಪ್ಯಾಸೆಂಜರ್ ರೈಲು

ಪಾಟ್ನಾ, ಮೇ 18: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಹೊತ್ತಿ ಉರಿದಿರುವ ಘಟನೆ ಇಂದು ನಡೆದಿದೆ. ಬೆಂಕಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿರುವಾಗ ರೈಲು ಬೋಗಿಯಿಂದ ದಟ್ಟವಾದ ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ. ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸಸಾರಾಮ್-ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿತ್ತು ಇದಕ್ಕೂ ಸ್ವಲ್ಪ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

ಕರ್ನಾಟಕಕ್ಕೆ ಸಾವಿರ ಕೋಟಿ ರೂ. ಅನುದಾನದೊಂದಿಗೆ 1122 ಹೆಚ್ಚುವರಿ ವೈದ್ಯಕೀಯ ಸೀಟು ಮಂಜೂರು ಮಾಡಿದ ಕೇಂದ್ರ – Kannada News | Record Milestone: Karnataka Gets 1122 Additional Medical Seats with Rs 1090 Crore Central Funding

ಬೆಂಗಳೂರು, ಮೇ 18: ಕರ್ನಾಟಕದ (Karnataka) ವೈದ್ಯಕೀಯ ಶಿಕ್ಷಣ (Medical Education) ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ ಸಿಕ್ಕಿದ್ದು, ಬರೋಬ್ಬರಿ 1,122 ಹೆಚ್ಚುವರಿ ಯುಜಿ (UG) ಮತ್ತು ಪಿಜಿ (PG) ವೈದ್ಯಕೀಯ ಸೀಟುಗಳು ಮಂಜೂರಾಗಿವೆ. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಈ ಮಾಹಿತಿ ನೀಡಿದ್ದಾರೆ. ಮೇ 15ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇದಕ್ಕೆ ಅಂತಿಮ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ. ದೇಶದಲ್ಲೇ…

Read More

ಕಿಟಕಿ ಸರಳು ಮುರಿದು ಉಗಾಂಡದ ನಾಲ್ವರು ಮಹಿಳೆಯರು ಎಸ್ಕೇಪ್; ಮತ್ತೆ ಡ್ರಗ್ಸ್ ದಂಧೆಗೆ ಇಳಿಯುವ ಆತಂಕ! – Kannada News | Bengaluru: Four Ugandan Women Escape from Shelter, High Risk of Rejoining Drug Smuggling Networks

ಬೆಂಗಳೂರು, ಮೇ 18: ಸ್ಟೂಡೆಂಟ್ ಹಾಗೂ ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬಂದು, ವೀಸಾ ಅವಧಿ ಮುಗಿದಿದ್ದರೂ ಸ್ವದೇಶಕ್ಕೆ ಮರಳದೆ ಅಕ್ರಮವಾಗಿ ನೆಲೆಸುವ ವಿದೇಶಿಗರ ಜಾಲ ಸಿಲಿಕಾನ್ ಸಿಟಿಯಲ್ಲಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ‘ಹೋಮ್ ಆಫ್ ಹೋಪ್’ ನಿರಾಶ್ರಿತರ ಕೇಂದ್ರದಿಂದ ನಾಲ್ವರು ಉಗಾಂಡ ಮೂಲದ ಮಹಿಳೆಯರು (Uganda women) ಕಿಟಕಿ ಸರಳು ಮುರಿದು ಪರಾರಿಯಾಗಿದ್ದು, ಇವರು ಮತ್ತೆ ಮಾದಕ ವಸ್ತುಗಳ ಸ್ಮಗ್ಲಿಂಗ್ ಜಾಲದಲ್ಲಿ ಸಕ್ರಿಯರಾಗುವ ದಟ್ಟ ಸಾಧ್ಯತೆಗಳು ಎದುರಾಗಿವೆ….

Read More

ಬಿಗ್ ಬಾಸ್ ಮುಗಿದ ಬಳಿಕ ಹೊಸ ರಿಯಾಲಿಟಿ ಶೋಗೆ ರಕ್ಷಿತಾ ಶೆಟ್ಟಿ ಎಂಟ್ರಿ – Kannada News | Rakshitha Shetty New Reality Show After Bigg Boss Kannada

ರಕ್ಷಿತಾ ಶೆಟ್ಟಿ ಅವರು ‘ಬಿಗ್ ಬಾಸ್’ ಶೋ ಮೂಲಕ ಫೇಮಸ್ ಆದವರು. ಬಿಗ್ ಬಾಸ್​ ರನ್ನರ್ ಅಪ್ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಿದೆ. ಹೋದಲ್ಲಿ, ಬಂದಲ್ಲಿ ಅವರನ್ನು ಜನರು ಮುತ್ತಿಕೊಳ್ಳುತ್ತಿದ್ದಾರೆ. ಈಗ ಅವರು ಹೊಸ ಶೋನ ಭಾಗ ಆಗುತ್ತಿದ್ದಾರೆ. ಅದುವೇ ‘ಕ್ವಾಟ್ಲೆ ಕಿಚನ್ ಸೀಸನ್ 2’. ಸೂರಜ್ ಸಿಂಗ್, ತುಕಾಲಿ ಸಂತೋಷ್, ಓಂ ಪ್ರಕಾಶ್ ರಾವ್ ಮೊದಲಾದವರು ಶೋನ ಭಾಗ ಆಗುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೇರಳಂಗೆ ಪ್ರವಾಸ ಸದ್ಯಕ್ಕೆ ಬೇಡ, ಪ್ಲಾನ್ ಇದ್ದರೆ ಮುಂದೂಡಿ: ಸರ್ಕಾರದಿಂದ ಮಹತ್ವದ ಸಲಹೆ

ಬೆಂಗಳೂರು, ಮೇ 18: ಅರಬ್ಬಿ ಸಮುದ್ರದಲ್ಲಿ ಮುಂಗಾರು ಪೂರ್ವ ಅಲೆಗಳ ಅಬ್ಬರ ಚುರುಕುಗೊಂಡಿದ್ದು, ಕೇರಳಂ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರಸ್ತುತ ಕೇರಳಂನ ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟ ಹಾಗೂ ಬಿರುಗಾಳಿ ಸಹಿತ ಮಳೆ ನಿರಂತರವಾಗಿ ಸುರಿಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಕೇರಳಕ್ಕೆ ಪ್ರವಾಸದ ಪ್ಲಾನ್ ಇದ್ದರೆ ಮುಂದೂಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಪ್ರಸ್ತುತ ಕೇರಳಕ್ಕೆ ಪ್ರಯಾಣಿಸಲು ಯೋಜನೆ ರೂಪಿಸಿಕೊಂಡಿರುವವರು ನಿರ್ಧಾರವನ್ನು…

Read More

ನಿತ್ಯಾಗೆ ಗೊತ್ತಾಯ್ತ ಪ್ರೀತಿಯ ಸತ್ಯ; ಕರ್ಣ-ನಿಧಿ ವಿವಾಹ ಮಾಡಿಸಲು ಮುಂದಾದ ಸಹೋದರಿ – Kannada News | Karna Kannada Serial: Nithya’s Shocking Decision for Karna Nidhi Wedding**

‘ಕರ್ಣ’ ಧಾರಾವಾಹಿಯಲ್ಲಿ ಒಂದು ಪ್ರಮುಖ ಬೆಳವಣಿಗೆ ನಡೆದಿದೆ. ಇಷ್ಟು ದಿನ ಮುಚ್ಚಿಟ್ಟ ಸತ್ಯವು ಹೊರ ಬೀಳುವ ಸಮಯ ಬಂದಿದೆ. ಕರ್ಣ ಹಾಗೂ ನಿಧಿ ಪರಸ್ಪರ ಪ್ರೀತಿಸುತ್ತಾ ಇದ್ದವರು. ಆದರೆ, ಕರ್ಣನ ತಂದೆ ಮಾಡಿದ ಮೋಸದಿಂದ ಒಂದು ದೊಡ್ಡ ಆಘಾತ ಉಂಟಾಗಿತ್ತು. ಕರ್ಣನು ನಿತ್ಯಾಳನ್ನು ಮದುವೆ ಆಗುವ ಅನಿವಾರ್ಯತೆ ಬಂತು. ಈಗ ಆ ತಪ್ಪನ್ನು ಸರಿ ಮಾಡುವ ಸಮಯ ಎಂದೇ ಹೇಳಬಹುದು. ಧಾರಾವಾಹಿಯಲ್ಲಿ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ನಿಧಿ ಹಾಗೂ ಕರ್ಣ ಪ್ರೀತಿ ಮಾಡುತ್ತಿದ್ದರು. ಆದರೆ, ಕರ್ಣ…

Read More