Headlines

Makar Sankranti: ಮಕರ ಸಂಕ್ರಾಂತಿಗೆ ಈ ವಸ್ತು ಮನೆಗೆ ತನ್ನಿ; ನಿಮ್ಮ ಅದೃಷ್ಟವೇ ಬದಲಾಗಲಿದೆ – Kannada News | Makar sankranti attract wealth and positivity with these 5 auspicious vastu items

ಹಿಂದೂ ಸಂಪ್ರದಾಯದಲ್ಲಿ ಮಕರ ಸಂಕ್ರಾಂತಿಗೆ ಹೆಚ್ಚಿನ ಮಹತ್ವವಿದೆ. ಈ ದಿನ ಕೆಲವು ವಸ್ತುಗಳನ್ನು ಮನೆಗೆ ತರುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಆದ್ದರಿಂದ ಮನೆಯಲ್ಲಿರುವ ಆರ್ಥಿಕ ಸಮಸ್ಯೆಗಳನ್ನು ತೊಡೆದುಹಾಕಲು ಮತ್ತು ಲಕ್ಷ್ಮಿ ದೇವಿಯ ಅನುಗ್ರಹವನ್ನು ಆಕರ್ಷಿಸಲು ಈ ಹಬ್ಬದಂದು ಯಾವ ವಸ್ತುಗಳನ್ನು ಖರೀದಿಸಬೇಕು ಎಂಬುದನ್ನುಇಲ್ಲಿ ತಿಳಿದುಕೊಳ್ಳಿ. ಗಾಳಿ ಗಂಟೆಗಳು(Wind Chimes): ಸಂಕ್ರಾಂತಿಯಂದು ಗಾಳಿ ಗಂಟೆಗಳನ್ನು ತಂದು ಗಾಳಿ ಬೀಸುವ ಸ್ಥಳದಲ್ಲಿ ಇರಿಸಿ. ಇವುಗಳ ಶಬ್ದವು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕುತ್ತದೆ ಮತ್ತು…

Read More

ಬದಲಾಗಲ್ಲ ಬಾಲಿವುಡ್, ಮತ್ತೆ ‘ಕಾಂತಾರ’ಕ್ಕೆ ಅವಮಾನ ಮಾಡುವ ಯತ್ನ – Kannada News | CBFC removes Kantara movie reference from Bollywood movie Rahu Ketu

‘ಕಾಂತಾರ’ ಮತ್ತು ‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾನಲ್ಲಿ ಕರಾವಳಿಯ ದೈವ ಆರಾಧನೆ ಅದರ ಮಹಿಮೆ ಇನ್ನಿತರೆ ವಿಚಾರಗಳನ್ನು ತೋರಿಸಲಾಗಿದೆ. ಸಿನಿಮಾ ಮಾಡುವಾಗ ತಾವು ದೈವಗಳಿಗೆ ಅಪಚಾರ ಆಗದಂತೆ ಬಲು ನೇಮ-ನಿಷ್ಠೆಯಿಂದ ಸಿನಿಮಾ ಮಾಡಿರುವುದಾಗಿ ರಿಷಬ್ ಶೆಟ್ಟಿ ಹೇಳಿದ್ದರು. ಅಲ್ಲದೆ ಯಾರೂ ಸಹ ದೈವವನ್ನು ಅನುಕರಣೆ ಮಾಡುವುದು ಬೇಡ, ದೈವವನ್ನು ಹಾಸ್ಯಕ್ಕೆ ಬಳಸಿಕೊಳ್ಳುವುದು ಅಕ್ಷಮ್ಯ ಎಂದು ಸಹ ಹೇಳಿದ್ದರು. ಆದರೂ ಸಹ ಕೆಲವರು ಅದನ್ನು ಮಾಡುತ್ತಲೇ ಬಂದಿದ್ದಾರೆ. ಇತ್ತೀಚೆಗಷ್ಟೆ ಬಾಲಿವುಡ್​​ನ ಸ್ಟಾರ್ ನಟ ರಣ್ವೀರ್ ಸಿಂಗ್, ವೇದಿಕೆ…

Read More

ಗದಗದಲ್ಲಿ ಚಿನ್ನದ ನಿಧಿ: ಲಕ್ಕುಂಡಿಯ ಈ ಸ್ಥಳದಲ್ಲಿ ಇಂದಿಗೂ ಸಿಗುತ್ತದೆ ಚಿನ್ನ, ರತ್ನ, ಹವಳ – Kannada News | Beyond Gold: A Locals 45 Year Insight into Lakkundis Historical Finds

ಗದಗ, ಜ.14: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮವು ಪುರಾತನ ಕಾಲದ ನಿಧಿಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚೆಗೆ ಲಕ್ಕುಂಡಿಯಲ್ಲಿ ಚಿನ್ನ ಪತ್ತೆಯಾದ ನಂತರ ಇಲ್ಲಿನ ಇನ್ನು ಇಂತಹ ಚಿನ್ನ ಸಿಗುವ ಸ್ಥಳಗಳು ಇವೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದೀಗ ಲಕ್ಕುಂಡಿಯ ನಿಧಿಗಳ ಬಗ್ಗೆ ಸ್ಥಳೀಯರಾದ ಬಸಪ್ಪ ಬಡಿಗೇರ ಅವರು ಟಿವಿ9 ಕನ್ನಡಕ್ಕೆ ಹಲವು ಆಸಕ್ತಿದಾಯಕ ಮಾಹಿತಿಗಳನ್ನು ನೀಡಿದ್ದಾರೆ. ಬಸಪ್ಪ ಬಡಿಗೇರರ ಪ್ರಕಾರ, ಲಕ್ಕುಂಡಿಯಲ್ಲಿ ಮುತ್ತು, ರತ್ನ, ಹವಳಗಳಲ್ಲದೆ ಚಿನ್ನವೂ ದೊರೆಯುತ್ತದೆ. ರಾಜಮಹಾರಾಜರ ಕಾಲದಲ್ಲಿ ನಡೆದ ಭೀಕರ ಯುದ್ಧಗಳಲ್ಲಿ ಮಡಿದವರ…

Read More

ಪ್ರಲ್ಹಾದ ಜೋಶಿ ‘ಕರ್ನಾಟಕದ ಮೋದಿ’: ಜೋಶಿ ಕಾರ್ಯವೈಖರಿಗೆ ಅನಿವಾಸಿ ಭಾರತೀಯರ ಭರ್ಜರಿ ಮೆಚ್ಚುಗೆ – Kannada News | UAE’s Kannada Patashale Hails Pralhad Joshi as “Karnataka’s Modi”

ಪ್ರಲ್ಹಾದ ಜೋಶಿ ‘ಕರ್ನಾಟಕದ ಮೋದಿ’: ಜೋಶಿ ಕಾರ್ಯವೈಖರಿಗೆ ಅನಿವಾಸಿ ಭಾರತೀಯರ ಭರ್ಜರಿ ಮೆಚ್ಚು ನವದೆಹಲಿ, ಜನವರಿ 14: ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಕರ್ನಾಟಕದ ಅಭಿವೃದ್ಧಿ ಮತ್ತು ಜನಪರ ಕಾಳಜಿ ತೋರುವಲ್ಲಿ ‘ ಕರ್ನಾಟಕದ ಮೋದಿ’ ಎಂದು UAE ನಲ್ಲಿರುವ ‘ಕನ್ನಡ ಪಾಠಶಾಲೆ’ಯ ಸಂಚಾಲಕ ಶಶಿಧರ್ ನಾಗರಾಜಪ್ಪ ಬಣ್ಣಿಸಿದ್ದಾರೆ. ಯುಎಇನಲ್ಲಿ ಏರ್ಪಡಿಸಿದ್ದ ಸಮಾರಂಭ ಉದ್ದೇಶಿಸಿ ಮಾತನಾಡುತ್ತ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕಲ್ಯಾಣ ಕಾರ್ಯಕ್ಕೆ ಮಿಸಲಾದಂತೆ, ಕರ್ನಾಟಕದಲ್ಲಿ ಪ್ರಲ್ಹಾದ ಜೋಶಿ ಅವರು…

Read More

ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿ ಯಾವ ಕಾಲದ್ದು ಗೊತ್ತೇ? ಬಯಲಾಯ್ತು ರಹಸ್ಯ – Kannada News | What Era Does the Lakkundi Treasure Belong To? Mystery Finally Revealed

ಗದಗ, ಜನವರಿ 14: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿರುವ ನಿಧಿ ಸುಮಾರು 300 ವರ್ಷಗಳಿಗಿಂತಲೂ ಹಳೆಯದ್ದು ಎಂಬುದು ಗೊತ್ತಾಗಿದೆ. ಜಿಲ್ಲಾಧಿಕಾರಿಗಳ ಹೇಳಿಕೆಗಳ ಪ್ರಕಾರ, ಪತ್ತೆಯಾದ ಆಭರಣಗಳು 300 ವರ್ಷಗಳಿಗೂ ಹೆಚ್ಚು ಹಳೆಯದಾಗಿದ್ದು, ಅಂದಿನ ಕಾಲದ ಮೂರು-ನಾಲ್ಕು ರಾಜಮನೆತನಗಳ ಆಳ್ವಿಕೆಗೆ ಸಂಬಂಧಿಸಿರಬಹುದು. ಪತ್ತೆಯಾದ ಆಭರಣಗಳು ಗಾತ್ರದಲ್ಲಿ ದೊಡ್ಡದಾಗಿದ್ದು, ಇವುಗಳನ್ನು ಯಾರೋ ದಷ್ಟಪುಷ್ಟವಾಗಿರುವ ಶ್ರೀಮಂತ ವ್ಯಕ್ತಿಗಳು ಧರಿಸಿರಬೇಕು ಎಂದು ಜಿಲ್ಲಾಧಿಕಾರಿಗಳು ಅಂದಾಜಿಸಿದ್ದಾರೆ. ಈ ನಿಧಿ ಯಾರಿಗೆ ಸೇರಿತ್ತು ಎಂಬುದರ ಕುರಿತು ವರದಿ ಬರಲು ಇನ್ನೂ ಮೂರು ದಿನಗಳು ಬೇಕಾಗಬಹುದು….

Read More

ಚಪ್ಪಲಿಯಲ್ಲಿ ಹೊಡೆಸಿ ಬೆಂಕಿ ಹಾಕಿಸ್ತೀನಿ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಕಾಂಗ್ರೆಸ್ ರಾಜ್ಯ ಸಂಯೋಜಕ – Kannada News | Congress State Coordinator Threatens Shidlaghatta Municipal Commissioner with Assault and Arson

ರಾಜೀವ್ ಗೌಡ ಹಾಗೂ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಚಿಕ್ಕಬಳ್ಳಾಪುರ, ಜನವರಿ 14: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲಿಲ ಪದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಡು ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಕೋಪಗೊಂಡು, ದೂರವಾಣಿ ಕರೆ ಮೂಲಕ ಅವ್ಯಾಚ್ಚ ಶಬ್ದಗಳನ್ನು ಬಳಸಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿತ ರಾಜೀವ್ ಗೌಡ ಅವರು…

Read More

Video: ವೇಗವಾಗಿ ಬಂದು ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಬೈಕ್ ಸವಾರ – Kannada News | Traffic Check Turns Tragic as Speeding Biker Mows Down Home Guard in Hyderabad

ಹೈದರಾಬಾದ್, ಜನವರಿ 14: ತೆಲಂಗಾಣದ ಹೈದರಾಬಾದ್‌ನಲ್ಲಿ ಮಂಗಳವಾರ ದಿನನಿತ್ಯದ ಸಂಚಾರ ತಪಾಸಣೆಯ ಸಮಯದಲ್ಲಿ ವೇಗವಾಗಿ ಬಂದ ಬೈಕ್ ಸವಾರನೊಬ್ಬ ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದು,ಆತನನ್ನು ಪತ್ತೆಹಚ್ಚಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಗಾಯಗೊಂಡ ಗೃಹರಕ್ಷಕ ದಳದ ಸಿಬ್ಬಂದಿಯನ್ನು 40 ವರ್ಷದ ಜಂಗಯ್ಯ ಎಂದು ಗುರುತಿಸಲಾಗಿದೆ. ಫಲಕ್ನುಮಾ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಚೆಕ್ ಪೋಸ್ಟ್ ಸ್ಥಾಪಿಸಲು ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುತ್ತಿದ್ದಾಗ ಈ ಘಟನೆ ನಡೆದಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

ಬಳ್ಳಾರಿ ಗಲಭೆಗೆ ಅಮಿತ್ ಶಾ ಕಾರಣವಾ? ಕೆಪಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು – Kannada News | Bellary Riots: BJP’s Srivatsa Files DGP Complaint Against M. Lakshman for False Claims**

ಬಳ್ಳಾರಿ, ಜ.14: ಜಿಲ್ಲೆಯ ಗಲಭೆಗೆ ಅಮಿತ್​ ಶಾ (Amit Shah) ಕಾರಣ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿರುವ ಹೇಳಿಕೆಗೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಶಾಸಕ ಶ್ರೀವತ್ಸ ದೂರು ನೀಡಿದ್ದಾರೆ. ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಬಳ್ಳಾರಿ ಗಲಾಟೆಗೆ ಅಮಿತ್ ಶಾ ಕಾರಣ ಎಂದು ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ಹೆಣ ಬೀಳಿಸಿ ರಾಜಕಾರಣ ಮಾಡಿ ಎಂದು ಅಮಿತ್ ಶಾ ವಿ.ಸೋಮಣ್ಣ ಮೂಲಕ ಜರ್ನಾದನ ರೆಡ್ಡಿ, ರಾಮುಲುಗೆ…

Read More

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ಆಟಗಾರರಿಗೆ ವೀಸಾ ನಿರಾಕರಣೆ – Kannada News | T20 World Cup 2026: India denied Visas to Pakistan born Players

ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿಯ ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿದೆ. ಈ ತಂಡಗಳಲ್ಲಿ ಕೆಲ ಟೀಮ್​ಗಳು ಈಗ ಸಂಕಷ್ಟಕ್ಕೆ ಸಿಲುಕಿವೆ. ಇದಕ್ಕೆ ಮುಖ್ಯ ಕಾರಣ ತಮ್ಮ ತಂಡಗಳಲ್ಲಿ ಪಾಕಿಸ್ತಾನ್ ಮೂಲದ ಆಟಗಾರರು ಇರುವುದು. ಭಾರತದಲ್ಲಿ ನಡೆಯಲಿರುವ ಟಿ20 ಪಂದ್ಯಗಳಿಗೆ ಯುಎಸ್​ಎ ಆಟಗಾರರು ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ನಾಲ್ವರು ಪಾಕಿಸ್ತಾನ್ ಮೂಲದ ಅಮರಿಕನ್ ಆಟಗಾರರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಅದರಲ್ಲೂ…

Read More

Optical Illusion: ಈ ಕಾಡಿನಲ್ಲಿ ಮರೆ ಮಾಡಲಾಗಿರುವ ಛತ್ರಿಯನ್ನು ಹುಡುಕಬಲ್ಲಿರಾ – Kannada News | Optical Illusion: Can you find the umbrella in this forest in just 7 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ನೋಡುವುದಕ್ಕೆ ಸುಲಭದಾಯಕವಾಗಿ ಕಂಡರೂ ಈ ಒಗಟಿನ ಆಟಗಳು ಟ್ರಿಕ್ಕಿಯಾಗಿರುತ್ತದೆ. ಆದರೆ ಈ ಕಾಡಿನಲ್ಲಿ ಛತ್ರಿ ಎಲ್ಲಿದೆ ಎಂಬುವುದನ್ನು ಪತ್ತೆ ಹಚ್ಚುವುದೇ ನಿಮ್ಮ ಮುಂದಿರುವ ಸವಾಲು. ಆದರೆ ನೀವು ಕೇವಲ ಏಳು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಬೇಕು. ಈ…

Read More