Headlines

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ….

Read More

ಹಾರ್ಮುಜ್​ನಿಂದ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್ ಸಾಗಲು ಅನುಮತಿ; ಇದು ಮಾತುಕತೆಯ ಫಲ ಎಂದ ಸಚಿವ ಜೈಶಂಕರ್

ನವದೆಹಲಿ, ಮಾರ್ಚ್ 16: ಹಾರ್ಮುಜ್ ಜಲಸಂಧಿಯನ್ನು ಬ್ಲಾಕ್ ಮಾಡಿದ್ದ ಇರಾನ್ ಮೊನ್ನೆಯಷ್ಟೇ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್​ಗಳು (Indian flagged gas tankers) ಸಾಗಲು ಅನುಮತಿ ಕೊಟ್ಟಿದೆ. ಈ ವಿಚಾರದ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಹಡಗುಗಳಿಗೆ ಇರಾನ್ ಅನುಮತಿಸಿರುವುದರ ಹಿಂದೆ ಯಾವುದೇ ಒಪ್ಪಂದ ಇಲ್ಲ. ಇದು ಎರಡು ದೇಶಗಳ ನಡುವಿನ ಸಂಬಂಧದ ಫಲ, ಮಾತುಕತೆಯ ಫಲ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಜೊತೆ ಭಾರತ ಒಪ್ಪಂದ ಮಾಡಿಕೊಂಡಿದೆ….

Read More

ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ಹಂತ ಹಂತವಾದ ಮಾಹಿತಿ ಇಲ್ಲಿದೆ

ದಶಕಕ್ಕಿಂತ ಹೆಚ್ಚು ಅವಧಿಯ ನಂತರ ಬೆಂಗಳೂರಿನಲ್ಲಿ ವಾರ್ಡ್ ಕಾರ್ಪೊರೇಟರ್ ಚುನಾವಣೆ ನಡೆಯಲು ಸಿದ್ಧತೆಗಳು ಆರಂಭವಾಗಿವೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಹೊಸದಾಗಿ ರಚನೆಯಾದ ಗ್ರೇಟರ್ ಬೆಂಗಳೂರು ಅಥಾರಿಟಿ ಹಾಗೂ ರಾಜ್ಯ ಚುನಾವಣಾ ಆಯೋಗ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸಲು ಸಜ್ಜಾಗಿವೆ. ಮೊದಲ ಹಂತವಾಗಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ 45,69,193 ಪುರುಷರು, 43,20,583 ಮಹಿಳೆಯರು ಮತ್ತು 1,635 ಇತರೆ ಮತದಾರರ ಹೆಸರುಗಳಿದ್ದು, ವಿವರಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸುವ ವಿಧಾನ ಇಲ್ಲಿದೆ….

Read More

ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಇವು ಕ್ಯಾನ್ಸರ್​​ ತವರು ಮನೆ ಎಂದ ಡಾಕ್ಟರ್ಸ್​​!

ಬೆಂಗಳೂರು, ಮಾರ್ಚ್​​ 16: ಎಲ್​​ಪಿಜಿ ಸಿಲಿಂಡರ್​​ಗಳ ಅಭಾವದಿಂದ ಜನರೀಗ ಮತ್ತೆ ಸಾಂಪ್ರದಾಯಿಕ ಸೌದೆ ಒಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ವೈದ್ಯರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಕ್ಯಾನ್ಸರ್, ಟಿಬಿ, ಅಸ್ತಮಾ ಸೇರಿದಂತೆ ನೂರಾರು ರೋಗಗಳಿಗೆ ಇವೇ ತವರುಮನೆ ಎಂದು ಎಚ್ಚರಿಸಿದ್ದಾರೆ. ಸೌದೆಯಿಂದ ಹೊರ ಬರುವ ಹೊಗೆ ಲಂಗ್ಸ್ ಕ್ಯಾನ್ಸರ್, ಟಿಬಿ, ಬ್ರೆಸ್ಟ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್​​ಗೆ ಕಾರಣವಾಗುತ್ತದೆ. ಈ ಹೊಗೆಯಲ್ಲಿ ಬೆಂಜೀನ್ ಮತ್ತು ಪಾಲಿ ಸೈಕ್ಲಿಕ್ ಆರೋಮ್ಯಾಟಿಕ್ ಹೈಡ್ರೋಕಾರ್ಬನ್​​ಗಳು ಹೊರ ಹೊಮ್ಮುತ್ತವೆ ಎಂದು ತಿಳಿಸಿದ್ದಾರೆ. ಆದರೆ ಇವು…

Read More

ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ನವದೆಹಲಿ, ಮಾರ್ಚ್ 16: ಯುದ್ಧದ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ಇರಾನ್ (Iran) ಅತ್ಯಾಧುನಿಕ, ದೇಶೀಯ ನಿರ್ಮಿತ ‘ಡ್ಯಾನ್ಸಿಂಗ್ ಮಿಸೈಲ್ (Dancing Missile)’ ಸೆಜ್ಜಿಲ್ (Sejjil) ಮೂಲಕ ಇಸ್ರೇಲ್ ವಿರುದ್ಧ ದಾಳಿ ನಡೆಸಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ, ಇರಾನ್ ಮೊತ್ತಮೊದಲ ಬಾರಿಗೆ ಇಸ್ರೇಲ್ ವಿರುದ್ಧ ಡ್ಯಾನ್ಸಿಂಗ್ ಮಿಸೈಲ್ ಪ್ರಯೋಗ ಮಾಡಿದಂತಾಗಿದೆ. ಇಸ್ರೇಲ್​ನ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್, ಸೆಜ್ಜಿಲ್ ಮೂಲಕ ದಾಳಿ ನಡೆಸಿದೆ. ಸದ್ಯ ‘ಡ್ಯಾನ್ಸಿಂಗ್ ಮಿಸೈಲ್’ ಎಂಬ ಹೆಸರು ಜಗತ್ತಿನ ಗಮನ ಸೆಳೆದಿದೆ….

Read More

ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ

ಯಾವುದೇ ಸೆಲೆಬ್ರಿಟಿ ಹೊರಗೆ ಕಾಣಿಸಿಕೊಂಡರೆ ಸಾಕು, ಅವರನ್ನು ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಹೀಗಾಗದಂತೆ ತಡೆಯಲು ಭದ್ರತಾ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಾಗೋದಿಲ್ಲ. ಈಗ ಕಾಜೋಲ್ ಅವರಿಗೆ ಹಾಗೆಯೇ ಆಗಿದೆ. ಅವರು ಬಾಲಿವುಡ್ ನಟಿ. ಅಜಯ್ ದೇವಗನ್ ಪತ್ನಿ. ಅವರು ಬರುತ್ತಾರೆ ಎಂದರೆ ಸಾಕಷ್ಟು ಭದ್ರತೆ ನೀಡಲಾಗುತ್ತದೆ. ಆದಾಗ್ಯೂ ಅಭಿಮಾನಿಗಳು ಮುತ್ತಿಕೊಂಡರು. ಕೊನೆಗೆ ಅವರು ಕಷ್ಟಪಟ್ಟು ಕಾರನ್ನು ಏರಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​  ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಮಾರ್ಚ್ 28 ರಿಂದ ಶುರುವಾಗಲಿರುವ 19ನೇ ಆವೃತ್ತಿಯ ಟೂರ್ನಿಗೆ ಈಗಾಗಲೇ 10 ತಂಡಗಳು ಸಜ್ಜಾಗಿವೆ. ಈ ತಂಡಗಳಲ್ಲಿ ಇರುವ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…  ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ಅಂಗ್​ಕ್ರಿಶ್ ರಘುವಂಶಿ, ಅನುಕುಲ್ ರಾಯ್, ಮನೀಶ್ ಪಾಂಡೆ, ರಮಣದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕ್ಯಾಮೆರೋನ್…

Read More

ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರಲು ಭಾರತವೂ ಸೇರಿ ಹಲವು ರಾಷ್ಟ್ರಗಳಿಗೆ ಅಮೆರಿಕ ಮನವಿ

ನವದೆಹಲಿ, ಮಾರ್ಚ್ 16: ಜಗತ್ತಿನ ಪ್ರಮುಖ ತೈಲ ಮಾರ್ಗಗಳಲ್ಲಿ ಒಂದೆನಿಸಿರುವ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ತೈಲ ಹಡಗುಗಳ ಸಾಗಣೆಗೆ ರಕ್ಷಣೆ ಒದಗಿಸಲು ಅಮೆರಿಕವು ಹಲವು ದೇಶಗಳ ನೆರವು ಯಾಚಿಸುತ್ತಿದೆ. ಇರಾನ್ ಯುದ್ಧದಿಂದಾಗಿ ಈ ಹಾರ್ಮುಜ್ ಸ್ಟ್ರೇಟ್ ಬಹುತೇಕ ಸ್ಥಗಿತಗೊಂಡಿದೆ. ತೈಲ ಹೊತ್ತ ಕೆಲವೇ ಕೆಲವು ಹಡಗುಗಳ ಮಾತ್ರ ಆಗಾಗ್ಗೆ ಹೊರಬರುತ್ತಿವೆ. ಇದರ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರುತ್ತಿದೆ. ಇದೇ ವೇಳೆ, ಹಾರ್ಮುಜ್ ಜಲಸಂಧಿಯಲ್ಲಿ ತೈಲ ಹಡಗುಗಳನ್ನು ಸಾಗಿಸಲು ಬಿಡುವುದಿಲ್ಲ ಎಂದು ಇರಾನ್ ಹೇಳಿರುವ…

Read More

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರು

ಬಾಗಲಕೋಟೆ, ಮಾರ್ಚ್​​ 16: ಉಪ ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಬಾಗಲಕೋಟೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್​​ ಆಕಾಂಕ್ಷಿಗಳ ನಡುವೆ ಫೈಟ್​​ ಜೋರಾಗಿದೆ. ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರುವಾಗಿದ್ದು, ಪ್ರಬಲ ಆಕಾಂಕ್ಷಿ ವೀರಣ್ಣ ಹಳೆಗೌಡರ ಪತ್ರ ಕೂಡ ಬರೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪ್ರಮುಖರಿಗೆ ಟಿಕೆಟ್​​ಗಾಗಿ ಮನವಿ ಮಾಡಿದ್ದಾರೆ. ನಾನು ಹಿಂದುಳಿದ ವರ್ಗಕ್ಕೆ…

Read More

‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನಷ್ಟವನ್ನೇ ಮಾಡಿವೆ’; ವಿಜಯ್ ಸೇತುಪತಿ ಬೇಸರ

ಸ್ಟಾರ್ ಹೀರೋ ಆಗಿ ಬೆಳೆದ ಬಳಿಕ ಕೆಲವರಿಗೆ ಸಿನಿಮಾ ನಿರ್ಮಾಣ ಮಾಡುವ ಹುಮ್ಮಸ್ಸು ಬರುತ್ತದೆ. ಹಾಗಂತ ಅದನ್ನು ಮಾಡೋದ್ರಲ್ಲಿ ಸ್ವಾರ್ಥ ಇದೆ ಎಂದರ್ಥವಲ್ಲ. ಹೊಸ ಪ್ರತಿಭೆಗಳಿಗೆ ಅವಕಾಶ ಸಿಗಲಿ ಎಂಬುದು ಇದರ ಮುಖ್ಯ ಉದ್ದೇಶ ಆಗಿರುತ್ತದೆ. ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಕೂಡ ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಹೊಸ ಸಿನಿಮಾಗಳನ್ನು ಅವರು ನಿರ್ಮಿಸುತ್ತಿದ್ದಾರೆ. ಅವರು ಬಂಡವಾಳ ಹಾಕಿದ ಸಿನಿಮಾಗಳೆಲ್ಲ ಬಾಕ್ಸ್ ಆಫೀಸ್​​​ನಲ್ಲಿ ಸೋತಿವೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಭಾರದ್ವಾಜ್ ರಂಗನ್ ಜೊತೆ ‘ಗಲಾಟಾ…

Read More