ಟಾಸ್ ಗೆದ್ದ ನ್ಯೂಝಿಲೆಂಡ್: ಭಾರತದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಚೇಂಜ್ – Kannada News | India vs new zealand 2nd odi Toss Update and playing 11

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಮ್ಯಾಚ್ ಶುರುವಾಗಿದೆ. ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡದ ನಾಯಕ ಮೈಕೆಲ್ ಬ್ರೇಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯದ ಕಾರಣ ತಂಡದಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಇಂದಿನ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ಸಿಕ್ಕಿದೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ನ್ಯೂಝಿಲೆಂಡ್ ಪ್ಲೇಯಿಂಗ್ XI: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೇ(ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್ (ನಾಯಕ), ಝಕಾರಿ ಫೌಲ್ಕ್ಸ್, ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಆದಿತ್ಯ ಅಶೋಕ್.

ಸರಣಿ ನಿರ್ಣಾಯಕ ಪಂದ್ಯ:

ಈ ಮ್ಯಾಚ್​ನಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಏಕೆಂದರೆ ಮೂರು ಪಂದ್ಯಗಳ ಸರಣಿ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 4 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ಜಯಿಸುವ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಇಂದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ಗೆಲ್ಲಲೇಬೇಕು. ಹೀಗಾಗಿ ಕಿವೀಸ್ ಪಡೆ ಪಾಲಿಗೆ ಇಂದಿನ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಆಯುಷ್ ಬದೋನಿ, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).

ಇದನ್ನೂ ಓದಿ: ಸಿಕ್ಸರ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ

ನ್ಯೂಝಿಲೆಂಡ್ ಏಕದಿನ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಸ್ಟಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೆ, ಝ್ಯಾಕ್ ಫೌಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್.

Source link

ಸುದೀಪ್ ಮಗಳು ಸಾನ್ವಿ ಧ್ವನಿಯಲ್ಲಿ ಮೂಡಿ ಬಂತು ಹೊಸ ಹಾಡು; ಇಂಪಾಗಿದೆ ‘ಅರಗಿಣಿಯೇ’ ಸಾಂಗ್ – Kannada News | Saanvi Sudeep Sings for Sanchit Sanjeev’s Debut ‘Mango Paccha’: Kichcha’s Daughter Shine

ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಸಿನಿಮಾದ ಕೆಲಸ ಕೊನೆಯ ಹಂತದಲ್ಲಿ ಇದ್ದು, ಶೀಘ್ರವೇ ಸಿನಿಮಾ ರಿಲೀಸ್ ಆಗಲಿದೆ. ವಿವೇಕ್ ನಿರ್ದೇಶನದ ಈ ಚಿತ್ರಕ್ಕೆ, ಪ್ರಿಯಾ ಹಾಗೂ ಕೆಆರ್​​ಜಿ ಸ್ಟುಡಿಯೋ ಬಂಡವಾಳ ಹೂಡಿದೆ. ಈ ಚಿತ್ರದ ‘ಅರಗಿಣಿಯೇ..’ ಹಾಡು ಬಿಡುಗಡೆ ಆಗಿದೆ. ಈ ಸಾಂಗ್​​ನ ಸುದೀಪ್ ಮಗಳು ಸಾನ್ವಿ (Sanvi Sudeep) ಹಾಡಿದ್ದಾರೆ ಅನ್ನೋದು ವಿಶೇಷ.

ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಮಕ್ಕಳು ನಟ/ನಟಿಯಾಗಿ ಚಿತ್ರರಂಗದಲ್ಲಿ ಮಿಂಚಲು ಬಯಸುತ್ತಾರೆ. ಆದರೆ, ಸಾನ್ವಿ ಆ ರೀತಿ ಅಲ್ಲ. ಅವರು ಗಾಯಕಿಯಾಗಿ ಗುರುತಿಸಿಕೊಳ್ಳಲು ಬಯಸುತ್ತಿದ್ದಾರೆ. ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ‘ಮಸ್ತ್ ಮಲೈಕಾ’ ಹಾಡನ್ನು ಇವರು ಹಾಡಿದ್ದರು. ಈ ಹಾಡು ಸಾಕಷ್ಟು ಗಮನ ಸೆಳೆದಿತ್ತು. ಈಗ ‘ಅರಗಿಣಿಯೇ..’ ಹಾಡನ್ನು ಹಾಡಿದ್ದಾರೆ.

‘ಅರಗಿಣಿಯೇ..’ ಹಾಡು ಸಖತ್ ಮೆಲೋಡಿಯಾಗಿದೆ. ಈ ಹಾಡಿಗೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು ಕಿವಿಗೆ ಇಂಪು ನೀಡಿದೆ. ಈ ಹಾಡಿನಲ್ಲಿ ಸಾನ್ವಿ ಸುದೀಪ್ ಜೊತೆ ಕಪಿಲ್ ಕಪಿಲನ್ ಕೂಡ ಹಾಡಿದ್ದಾರೆ. ಧನಂಜಯ ರಂಜನ್ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ: ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?

ಮಗಳು ಯಾವುದೇ ಕ್ಷೇತ್ರ ಆಯ್ಕೆ ಮಾಡಿಕೊಂಡರೂ ಅದಕ್ಕೆ ಬೆಂಬಲ ನೀಡೋದಾಗಿ ಸುದೀಪ್ ಹೇಳಿದ್ದರು. ಸಾನ್ವಿ ಸಂಗೀತ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ತೋರಿಸಿದಂತೆ ಇದೆ. ಇದಕ್ಕೆ ಸುದೀಪ್ ಬೆಂಬಲವಾಗಿ ನಿಂತಿದ್ದಾರೆ. ‘ಮಸ್ತ್ ಮಲೈಕಾ’ ಹಾಡಿಗೆ ಸಾನ್ವಿ ಹೆಸರನ್ನು ಸುದೀಪ್ ಅವರೇ ಸೂಚಿಸಿದರೇ ಎಂಬ ಪ್ರಶ್ನೆ ಎದುರಾಗಿತ್ತು. ಇದಕ್ಕೆ ಉತ್ತರಿಸಿದ್ದ ಸುದೀಪ್, ಈ ಅವಕಾಶ ಸಾನ್ವಿ ಟ್ಯಾಲೆಂಟ್​​ನಿಂದ ಬಂದಿದೆ ಎಂದಿದ್ದರು.

ಸಾನ್ವಿ ಧ್ವನಿ ಕೇಳಿದ್ದ ಅಜನೀಶ್ ಲೋಕನಾಥ್ ‘ಮಸ್ತ್ ಮಲೈಕಾ’ ಹಾಡಿಗೆ ಅವಕಾಶ ನೀಡಿದರಂತೆ. ಅವರ ಧ್ವನಿ ತುಂಬಾನೇ ಹೊಂದಿಕೆ ಆಗುತ್ತದೆ ಎಂಬ ಕಾರಣಕ್ಕೆ ಅವರನ್ನು ಹಾಗೆಯೇ ಉಳಿಸಿಕೊಳ್ಳಲಾಯಿತು. ಈ ಹಾಡು ಟ್ರೆಂಡ್​​ನಲ್ಲಿದೆ. ಈಗ ಅವರಿಗೆ ಮತ್ತೊಂದು ಅವಕಾಶ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಅವರ ಧ್ವನಿಯಿಂದ ಇನ್ನಷ್ಟು ಹಾಡು ಮೂಡಿ ಬರಲಿ ಎಂಬುದು ಫ್ಯಾನ್ಸ್ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ – Kannada News | PM Modi Joins Pongal Celebrations at Minister L Murugan’s Delhi Home

ನವದೆಹಲಿ, ಜನವರಿ 14: ಪ್ರಧಾನಿ ನರೇಂದ್ರ ಮೋದಿ ಇಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬವನ್ನು ಆಚರಿಸಿದ್ದಾರೆ. ಪ್ರಧಾನಿ ಸಾಂಪ್ರದಾಯಿಕ ಪೂಜೆ ಮತ್ತು ಆರತಿಯನ್ನು ನೆರವೇರಿಸಿದ್ದಾರೆ. ಅಷ್ಟೇ ಅಲ್ಲದೆ ಗೋಸೇವೆ ಕೂಡ ಮಾಡಿದ್ದಾರೆ.ಪ್ರಕೃತಿಯ ಬಗ್ಗೆ ಕೃತಜ್ಞತೆಯನ್ನು ಪದಗಳಿಗೆ ಸೀಮಿತಗೊಳಿಸಬಾರದು, ಅದನ್ನು ನಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಪೊಂಗಲ್ ಜನರಿಗೆ ಕಲಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಭೂಮಿಯು ನಮಗೆ ಇಷ್ಟೊಂದು ನೀಡಿದಾಗ, ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿಯಾಗಿದೆ. ಮಣ್ಣನ್ನು ಆರೋಗ್ಯಕರವಾಗಿಡುವುದು, ನೀರನ್ನು ಸಂರಕ್ಷಿಸುವುದು ಮತ್ತು ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಸುವುದು ಮುಂದಿನ ಪೀಳಿಗೆಗೆ ಅತ್ಯಂತ ಮುಖ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ-JDS ಮೈತ್ರಿಯಲ್ಲಿ ಭಿನ್ನರಾಗ: ಹೆಚ್​​ಡಿಕೆ ಮುಂದಿನ ನಡೆ ಏನು? – Kannada News | Rift Emerges in BJP JDS Alliance Over Karnataka Local Body Polls

ಬಿಜೆಪಿ-ಜೆಡಿಎಸ್​​ ಮೈತ್ರಿಯಲ್ಲಿ ಭಿನ್ನರಾಗ

ಬೆಂಗಳೂರು, ಜನವರಿ 14: ಸ್ಥಳೀಯ ಸಂಸ್ಥೆ ಚುನಾವಣೆ ಮೈತ್ರಿ ವಿಚಾರವೀಗ ಬಿಜೆಪಿ, ಜೆಡಿಎಸ್​​ಗೆ ಕಗ್ಗಂಟಾಗಿ ಮಾರ್ಪಟ್ಟಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್​​ ಜೊತೆ ಮೈತ್ರಿಗೆ ಬಿಜೆಪಿಯ ಕೆಲವರು ವಿರೋಧ ವ್ಯಕ್ತಪಡಿಸಿದ ಕಾರಣ,  ಬಿಜೆಪಿ ಹೈಕಮಾಂಡ್ ಜೊತೆ ಕೇಂದ್ರ ಸಚಿವ ಮತ್ತು ಜೆಡಿಎಸ್​​ ನಾಯಕ ಕುಮಾರಸ್ವಾಮಿ ಶೀಘ್ರದಲ್ಲೇ ಸಭೆ ನಡೆಸಲಿದ್ದಾರೆ. ಆ ಮೂಲಕ  ಸಂಕ್ರಾಂತಿ ಬಳಿಕ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು  ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಎಲ್ಲ ಚುನಾವಣೆಯಲ್ಲೂ ಮೈತ್ರಿಗೆ ಜೆಡಿಎಸ್​​ ಒಲವು

ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ಈಗಾಗಲೇ ಜೆಡಿಎಸ್ ಶಾಸಕರು, ಮುಖಂಡರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಸ್ಥಳೀಯ ಸಂಸ್ಥೆ, ಜಿಬಿಎ ಚುನಾವಣೆಯಲ್ಲಿ ಮೈತ್ರಿಗೆ ಒಲವು ವ್ಯಕ್ತವಾಗಿದ್ದು, ಬಿಜೆಪಿ ಜೊತೆಗೇ ಚುನಾವಣೆ ಎದುರಿಸೋಣ ಎಂದು ಮುಖಂಡರು ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೈತ್ರಿಯಾಗದಿದ್ದರೆ, ಮುಂಬರುವ ವಿಧಾನಸಭೆ ಚುನಾವಣೆಗೆ ಒಟ್ಟಾಗಿ ಹೋಗೋದು ಕಷ್ಟ. ಕಾರ್ಯಕರ್ತರು, ಮುಖಂಡರ ನಡುವೆ ಗೊಂದಲವಾದ್ರೆ ಅದು ಕಾಂಗ್ರೆಸ್​ಗೆ ಲಾಭ ಆಗಲಿದೆ. ಹೀಗಾಗಿ ಎಲ್ಲಾ ಚುನಾವಣೆಗೂ ಮೈತ್ರಿಯಲ್ಲೇ ಹೋಗೋಣ ಎಂಬ ನಿಲುವು ಜೆಡಿಎಸ್ ಮುಖಂಡರದ್ದು ಎನ್ನಲಾಗಿದೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆ; JDS ಜೊತೆ ಮೈತ್ರಿಗೆ ಮಂಡ್ಯದಲ್ಲಿ ಬಿಜೆಪಿಗರ ಅಪಸ್ವರ

ಸ್ಥಳೀಯ ಮಟ್ಟದಲ್ಲಿ ಮೈತ್ರಿಗೆ ಕೆಲ ಬಿಜೆಪಿಗರ ವಿರೋಧ

ನಾವು ಲೋಕಸಭೆ, ವಿಧಾನಸಭೆ ಮತ್ತು ಪರಿಷತ್ತಿನ ಚುನಾವಣೆಗಳಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಸ್ಪರ್ಧಿಸಲಿದ್ದೇವೆ. ಆದರೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿಯೂ ಜೆಡಿಎಸ್ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ ಎಂದು ಜೆಡಿಎಸ್​​ ವರಿಷ್ಠ ಹೆಚ್​.ಡಿ. ದೇವೇಗೌಡ ಈ ಹಿಂದೆ ಹೇಳಿದ್ದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ  ಬಿ.ವೈ. ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ್ದರು. ಆ ಬೆನ್ನಲ್ಲೇ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಮಂಡ್ಯ ಬಿಜೆಪಿಯಿಂದಲೂ ವಿರೋಧ ಕೇಳಿಬಂದಿತ್ತು. ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಕೋರ್ ಕಮಿಟಿ ಸದಸ್ಯರ ಮುಂದೆ ಈ ಕುರಿತು ನಾಯಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಸಚಿವ ಕೆ.ಸಿ. ನಾರಾಯಣ ಗೌಡ ಹಾಗೂ ಜಿಲ್ಲೆಯ ಇತರ ಪರಾಜಿತ ಅಭ್ಯರ್ಥಿಗಳು ಇದಕ್ಕೆ ದನಿಗೂಡಿಸಿದ್ದರು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಇದ್ದರೂ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಹಿತಾಸಕ್ತಿ ಕಾಪಾಡಲು ಮೈತ್ರಿ ಸಾಧ್ಯವಿಲ್ಲ ಎಂದು ವಾದಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

SBI ATM Charges: ಎಟಿಎಂ ಶುಲ್ಕದ ನಂತರ ಐಎಂಪಿಎಸ್ ಶುಲ್ಕವನ್ನೂ ಹೆಚ್ಚಿಸಿದ ಎಸ್​ಬಿಐ; ಇಲ್ಲಿದೆ ವಿವರ – Kannada News | SBI revises charges on IMPS and ATM transactions, details of the new rules here

ನವದೆಹಲಿ, ಜನವರಿ 14: ಕಳೆದ ತಿಂಗಳು ಎಟಿಎಂ ಟ್ರಾನ್ಸಾಕ್ಷನ್ ಶುಲ್ಕ ಪರಿಷ್ಕರಿಸಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಂದಿನ ತಿಂಗಳು ಐಎಂಪಿಎಸ್ ಟ್ರಾನ್ಸಾಕ್ಷನ್​ನಲ್ಲೂ (IMPS charges) ಏರಿಕೆ ಮಾಡುತ್ತಿದೆ. ದೊಡ್ಡ ಮೊತ್ತದ ಹಣವನ್ನು ಐಎಂಪಿಎಸ್ ಮೂಲಕ ಕಳುಹಿಸುತ್ತಿದ್ದರೆ ಹೆಚ್ಚಿನ ಶುಲ್ಕ ತೆರಬೇಕಾಗಬಹುದು. ಎಟಿಎಂ ಟ್ರಾನ್ಸಾಕ್ಷನ್​ನ (ATM transaction charges) ಹೊಸ ಶುಲ್ಕಗಳು 2025ರ ಡಿಸೆಂಬರ್ 1ರಿಂದ ಜಾರಿಗೆ ಬಂದಿವೆ. ಆದರೆ, ಐಎಂಪಿಎಸ್ ಶುಲ್ಕ ಏರಿಕೆಯು 2026ರ ಫೆಬ್ರುವರಿ 15ರಿಂದ ಜಾರಿಗೆ ಬರಬಹುದು.

ಐಎಂಪಿಎಸ್ ಶುಲ್ಕದಲ್ಲಿ ಎಷ್ಟು ಏರಿಕೆ?

ಎಸ್​ಬಿಐನ ಹೊಸ ನಿಯಮಗಳ ಪ್ರಕಾರ 25,000 ರೂಗಿಂತ ಹೆಚ್ಚಿನ ಮೊತ್ತವನ್ನು ಐಎಂಪಿಎಸ್ ಮೂಲಕ ಕಳುಹಿಸಿದಾಗ ತುಸು ಹೆಚ್ಚಿನ ಶುಲ್ಕ ತೆರಬೇಕಾಗುತ್ತದೆ. 25,000 ರೂವರೆಗಿನ ಟ್ರಾನ್ಸಾಕ್ಷನ್​ಗೆ ಈ ಹಿಂದಿನಂತೆ ಯಾವುದೇ ಶುಲ್ಕ ಇರುವುದಿಲ್ಲ.

ಐಎಂಪಿಎಸ್ ಮೂಲಕ ಕಳುಹಿಸಲಾಗುವ 25,000 ರೂನಿಂದ 1 ಲಕ್ಷ ರೂವರೆಗಿನ ಮೊತ್ತಕ್ಕೆ 2 ರೂ ಶುಲ್ಕ, ಜೊತೆಗೆ ಆ ಶುಲ್ಕದ ಮೇಲೆ ಜಿಎಸ್​ಟಿ ಅನ್ವಯ ಆಗುತ್ತದೆ.

ಇದನ್ನೂ ಓದಿ: ಕೆಲಸ ಬಿಟ್ಟು 3 ವರ್ಷಕ್ಕೆ ಇಪಿಎಫ್ ಅಕೌಂಟ್​ಗೆ ಬಡ್ಡಿ ಸಿಗಲ್ಲ ಅನ್ನೋದು ನಿಜ ಅಲ್ಲ; ಇಲ್ಲಿದೆ ಸತ್ಯಾಂಶ

1 ಲಕ್ಷ ರೂನಿಂದ 2 ಲಕ್ಷ ರೂವರೆಗಿನ ಐಎಂಪಿಎಸ್ ವಹಿವಾಟಿಗೆ ಶುಲ್ಕವು 6 ರೂ ಹಾಗೂ ಜಿಎಸ್​ಟಿ ಇರುತ್ತದೆ.

2 ಲಕ್ಷ ರೂನಿಂದ 5 ಲಕ್ಷ ರೂವರೆಗಿನ ಟ್ರಾನ್ಸಾಕ್ಷನ್ ಆದರೆ 10 ರೂ ಶುಲ್ಕ, ಜೊತೆಗೆ ಜಿಎಸ್​ಟಿ ಇರುತ್ತದೆ.

ಎಸ್​ಬಿಐನ ಮೊಬೈಲ್ ಆ್ಯಪ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್​ನಲ್ಲಿ ಐಎಂಪಿಎಸ್ ಅನ್ನು ಬಳಸಲಾಗುತ್ತದೆ. ಗ್ರಾಹಕರು ಅಗತ್ಯ ಬಿದ್ದರೆ ನೆಫ್ಟ್ ಅಥವಾ ಆರ್​ಟಿಜಿಎಸ್ ಅನ್ನು ಬಳಸಬಹುದು. ಐಎಂಪಿಎಸ್​ನಲ್ಲಿ ಹಣವು ತತ್​ಕ್ಷಣವೇ ವರ್ಗಾವಣೆ ಆಗುತ್ತದೆ.

ಎಟಿಎಂ ಟ್ರಾನ್ಸಾಕ್ಷನ್ ಶುಲ್ಕದಲ್ಲಿ ಹೆಚ್ಚಳ

ಎಸ್​ಬಿಐ ಗ್ರಾಹಕರು ಇತರ ಬ್ಯಾಂಕುಗಳ ಎಟಿಎಂಗಳಲ್ಲಿ ಒಂದು ತಿಂಗಳಲ್ಲಿ 5 ಟ್ರಾನ್ಸಾಕ್ಷನ್​ಗಳನ್ನು ಉಚಿತವಾಗಿ ಮಾಡಬಹುದು. ಅದಕ್ಕಿಂತ ಹೆಚ್ಚು ಬಾರಿ ಟ್ರಾನ್ಸಾಕ್ಷನ್ ಮಾಡಿದರೆ ಪ್ರತೀ ಟ್ರಾನ್ಸಾಕ್ಷನ್​ನಲ್ಲೂ ಶುಲ್ಕ ವಿಧಿಸಲಾಗುತ್ತದೆ. ಈ ಶುಲ್ಕವನ್ನು ಎಸ್​ಬಿಐ ಪರಿಷ್ಕರಿಸಿದೆ.

ಇದನ್ನೂ ಓದಿ: ಬರೀ 5,000 ರೂ ಎಸ್​ಐಪಿಗೆ ಸೀಮಿತವಾದರೆ ಸಂಪತ್ತು ಹೆಚ್ಚೋದಿಲ್ಲ; ಹೀಗೆ ಮಾಡಿ

ಡಿಸೆಂಬರ್ 1ರಿಂದ ಜಾರಿಗೆ ಬಂದಿರುವ ಪರಿಷ್ಕೃತ ದರಗಳ ಪ್ರಕಾರ, ಪ್ರತೀ ಕ್ಯಾಷ್ ವಿತ್​ಡ್ರಾಯಲ್​ಗೆ ಶುಲ್ಕವನ್ನು 21 ರೂನಿಂದ 23 ರೂಗೆ ಏರಿಸಲಾಗಿದೆ. ಜೊತೆಗೆ ಜಿಎಸ್​ಟಿಯೂ ಇರುತ್ತದೆ. ಬ್ಯಾಲನ್ಸ್ ಪರಿಶೀಲನೆ ಇತ್ಯಾದಿ ಹಣಕಾಸು ಅಲ್ಲದ ವಹಿವಾಟು ಆದರೆ 11 ರೂ ಹಾಗೂ ಜಿಎಸ್​ಟಿಯನ್ನು ಶುಲ್ಕವಾಗಿ ವಿಧಿಸಲಾಗುತ್ತದೆ.

ಗಮನಿಸಿ, ಎಸ್​ಬಿಐ ಗ್ರಾಹಕರು ಬೇರೆ ಬ್ಯಾಂಕುಗಳ ಎಟಿಎಂಗಳಲ್ಲಿ ಒಂದು ತಿಂಗಳಲ್ಲಿ ಐದು ಟ್ರಾನ್ಸಾಕ್ಷನ್​ಗಳನ್ನು ಉಚಿತವಾಗಿ ಮಾಡಬಹುದು. ಅದಾದ ಬಳಿಕ ಆ ತಿಂಗಳು ಮಾಡಲಾಗುವ ಪ್ರತೀ ವಹಿವಾಟಿಗೂ ಶುಲ್ಕ ಅನ್ವಯ ಆಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಚೊಚ್ಚಲ ಪಂದ್ಯ… ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ವಾಪಸ್ ಕರೆಸಿದ ಕೋಚ್..! – Kannada News | Ayushi Soni becomes first player to be retired out in WPL 2026

ವುಮೆನ್ಸ್ ಪ್ರೀಮಿಯರ್ ಲೀಗ್​ನ 6ನೇ ಪಂದ್ಯವು ನಾಟಕೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 4 ವಿಕೆಟ್ ಕಳೆದುಕೊಂಡು 10 ಓವರ್​ಗಳಲ್ಲಿ 99 ರನ್ ಕಲೆಹಾಕಿತ್ತು. ಅತ್ತ ಕನಿಕಾ ಅಹುಜಾ ಔಟಾಗುತ್ತಿದ್ದಂತೆ ಆಯುಷಿ ಸೋನಿ ಕ್ರೀಸ್​ಗೆ ಆಗಮಿಸಿದರು. ವಿಶೇಷ ಎಂದರೆ ಇದು ಸೋನಿಗೆ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ ಪಂದ್ಯ.

ಮೊದಲ ಪಂದ್ಯದಲ್ಲೇ ರನ್​ಗಳಿಸಲು ಪರದಾಡಿದ ಆಯುಷಿ ಸೋನಿ 14 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 11 ರನ್​ಗಳು. ಈ ಹನ್ನೊಂದು ರನ್​ಗಳಲ್ಲಿ ಒಂದೇ ಒಂದು ಬೌಂಡರಿ ಇರಲಿಲ್ಲ. ಅಷ್ಟರಲ್ಲಾಗಲೇ 16 ಓವರ್​ಗಳು ಮುಗಿದಿದ್ದವು.

ಮೊದಲ 10 ಓವರ್​ಗಳಲ್ಲಿ 99 ರನ್​ಗಳಿಸಿದ್ದ ಗುಜರಾತ್ ಜೈಂಟ್ಸ್ ಆ ಬಳಿಕ 6 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 37 ರನ್​ಗಳು. ಇದರಲ್ಲಿ ಆಯುಷಿಯ ಕೊಡುಗೆ ಕೇವಲ 11 ರನ್​ಗಳು ಮಾತ್ರ. ಹೀಗಾಗಿಯೇ ಗುಜರಾತ್ ಜೈಂಟ್ಸ್ ತಂಡದ ಕೋಚ್ ಆಯುಷಿಯನ್ನು ವಾಪಸ್ ಕರೆಸಿದ್ದಾರೆ.

ಇದರೊಂದಿಗೆ ಆಯುಷಿ ಸೋನಿ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ರಿಟೈರ್ಡ್​ ಔಟ್ ಆದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಇನ್ನು ಆಯುಷಿ ಸೋನಿ ಬದಲಿಗೆ ಕ್ರೀಸ್​ಗೆ ಆಗಮಿಸಿದ ಭಾರ್ತಿ ಫಲ್ಮಾಲಿ 15 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 36 ರನ್ ಬಾರಿಸಿದರು. ಈ ಮೂಲಕ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 192 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 19.2 ಓವರ್​ಗಳಲ್ಲಿ 193 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Source link

ಕಾರವಾರ: JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ – Kannada News | Twist in Rishala D’Souza suicide: Mother alleges physical harassment by JDS leader’s son

ಕಾರವಾರ, ಜನವರಿ 14: ಜೆಡಿಎಸ್​​ ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಿರುಕುಳವನ್ನೂ ಆರೋಪಿ ನೀಡಿದ ಕಾರಣ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರಿಶಾಲ ಡಿಸೋಜಾ ತಾಯಿ ಕ್ರಿಸ್ತೋದ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ. ಅಂತ್ಯ ಸಂಸ್ಕಾರಕ್ಕೂ ಮುನ್ನ ನಾವು ಮೃತದೇಹಕ್ಕೆ ಸ್ನಾನ ಮಾಡಿಸುತ್ತೇವೆ. ಈ ವೇಳೆ ಮಗಳ ಖಾಸಗಿ ಭಾಗ ಸೇರಿದಂತೆ ದೇಹದ ಬಹುತೇಕ ಕಡೆ ಕಚ್ಚಿದ ಮಾರ್ಕ್ ಕಂಡುಬಂದಿದೆ. ಖಾಸಗಿ ಭಾಗದಿಂದ ತಿವ್ರವಾದ ರಕ್ತಸ್ರಾವ ಕೂಡ ಆಗಿದೆ. ಅತ್ಯಾಚಾರದ ವಿಚಾರ ಮನೆಯಲ್ಲಿ ಹೇಳೋಕೆ ಆಗದೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಅವರು ಹೇಳಿದ್ದಾರೆ. ನ್ಯಾಯಕ್ಕೆ ಆಗ್ರಹಿಸಿ ಸಿಎಂ, ಗೃಹ ಸಚಿವ ಹಾಗೂ ಎಸ್ಪಿ ಮತ್ತು ಡಿಸಿಗೆ ಕ್ರಿಸ್ತೋದ ಡಿಸೋಜಾ ಪತ್ರ ಕೂಡ ಬರೆದಿದ್ದು, ಆರೋಪಿ ಬಂಧಿಸದಿದ್ರೆ ಕಾರವಾರ ಡಿಸಿ ಕಚೇರಿ ಮುಂದೆ ಧರಣಿಗೆ ಕದ್ರಾ ಗ್ರಾಮಸ್ಥರು ನಿರ್ಧರಿಸಿದ್ದಾರೆ. ಜೆಡಿಎಸ್ ಮುಖಂಡೆ ಚೈತ್ರಾ ಕೋಠಾರಕರ ಪುತ್ರ ಚಿರಾಗ್ ಕಿರುಕಳಕ್ಕೆ ರಿಶಾಲ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಈ ಹಿಂದೆ ಕೇಳಿಬಂದಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ನಮ್ಮ ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ವೇಳೆ ಕ್ರೇನ್​​ ಪಲ್ಟಿ: ತಪ್ಪಿದ ಭಾರೀ ದುರಂತ – Kannada News | Bengaluru Metro Construction: Crane Topples on Silk Board Airport Route

ಬೆಂಗಳೂರು, ಜನವರಿ 14: ಅಗರ ಬಳಿ ನಮ್ಮ ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ವೇಳೆ ಭಾರಿ ದುರಂತವೊಂದು ತಪ್ಪಿದೆ. ಕಂಟ್ರೋಲ್ ತಪ್ಪಿ ಬೃಹತ್ ಕ್ರೇನ್ ವಾಹನ ಆಯತಪ್ಪಿ ಬಿದ್ದಿದ್ದು, ಅದೃಷ್ವಶಾತ್​​ ಯಾವುದೇ ಪ್ರಾಣಹಾನಿ ಈ ವೇಳೆ ಸಂಭವಿಸಿಲ್ಲ. ಕ್ರೇನ್​​ ಹಿಂದಕ್ಕೆ ತೂಕದ ವಸ್ತು ಹಾಕದೆ ಮುಂದೆಯಿಂದ ಗರ್ಡರ್‌ ಎತ್ತಲು ಮುಂದಾದಾಗ ಬ್ಯಾಲೆನ್ಸ್​​ ತಪ್ಪಿದೆ. ಈ ವೇಳೆ ಆಪರೇಟರ್​​ ಕ್ರೇನ್​​ ವಾಹನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಮುಂಜಾನೆ 3.45ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳಕ್ಕೆ HSR ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದೆಹಲಿ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ – Kannada News | Fire Erupts at Union Minister Ravi Shankar Prasad’s Delhi Residence

ನವದೆಹಲಿ, ಜನವರಿ 14: ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ದೆಹಲಿ ನಿವಾಸದಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. 8.05ರ ಸುಮಾರಿಗೆ ಅಗ್ನಿಶಾಮಕ ದಳ ಅಲ್ಲಿಗೆ ತಲುಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮನೆಯೊಳಗೆ, ಒಂದು ಕೋಣೆಯೊಳಗಿನ ಹಾಸಿಗೆಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು.ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು, ಮತ್ತಷ್ಟು ಹರಡುವುದನ್ನು ತಡೆದಿದ್ದಾರೆ. ಯಾರಿಗೂ ಗಾಯಗಳಾಗಿಲ್ಲ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಹಾಸನ ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಒಣಗಲು ಹಾಕಿದ್ದ ಕಾಫಿ ಬೆಳೆಗೆ ಹಾನಿ – Kannada News | Heavy Rains Lash Hassan District, Dried Coffee Crop Damaged Across Several Areas

ಹಾಸನ, ಜನವರಿ 14: ಹಾಸನ ಜಿಲ್ಲೆಯ ವಿವಿಧೆಡೆ ಸುರಿದ ಭಾರಿ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕಾಲಿಕ ಮಳೆ ಕಾಫಿ ಬೆಳೆಗಾರರನ್ನು ಕಂಗಾಲಾಗಿಸಿದೆ. ಕಟಾವು ಮಾಡಿ ಒಣಗಲು ಹಾಕಿದ್ದ ಕಾಫಿ ಬೆಳೆಗೆ ಮಳೆಯಿಂದಾಗಿ ಹಾನಿಯುಂಟಾಗಿದೆ. ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯಿಂದಾಗಿ, ಕೊಯ್ಲು ಮಾಡಿ ಒಣಗಿಸಲು ಹಾಕಲಾಗಿದ್ದ ಕಾಫಿ ಬೀಜಗಳು ಮಳೆಯಲ್ಲಿ ನೆನೆದು ಸಂಪೂರ್ಣ ಹಾಳಾಗಿವೆ. ಇದರಿಂದ ಕಾಫಿ ಬೆಳೆಗಾರರು ಭಾರೀ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಮಳೆ ಹಾನಿಯಿಂದಾಗಿ ಕಾಫಿ ಹೂವುಗಳು, ಕಾಫಿ ಗಿಡಗಳು ಮತ್ತು ಒಟ್ಟಾರೆ ಕಾಫಿ ಕೃಷಿ ಮೇಲೂ ಪರಿಣಾಮ ಬೀರಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version