ಕಾರವಾರ, ಮಾರ್ಚ್ 16: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಭಾನುವಾರ ಸಂಜೆ ಅಬ್ಬರದ ಗಾಳಿ ಮಳೆ ಸುರಿದಿದೆ. ಪರಿಣಾಮವಾಗಿ ಬೃಹತ್ ಮರ ಧರೆಗುರುಳಿದೆ. ಮುಂಡಗೋಡ–ಪಾಳ–ಹಾನಗಲ್ ರಸ್ತೆಯಲ್ಲಿ ಮರ ಉರುಳಿಬಿದ್ದಿದೆ. ಆಲಿಕಲ್ಲು ಮಳೆಯೂ ಸಹ ಸುರಿದಿದೆ. ಮರ ಹೆದ್ದಾರಿಯ ಮಧ್ಯೆ ಬಿದ್ದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಡಬೇಕಾಯಿತು. ಇದರ ಮಧ್ಯೆ ದೇಶದ ಹಲವು ಭಾಗಗಳಲ್ಲಿ ಎಲ್ಪಿಜಿ ಗ್ಯಾಸ್ ಕೊರತೆ ಉಂಟಾಗಿರುವ ಹಿನ್ನೆಲೆ, ಸ್ಥಳೀಯರು ಮರವನ್ನು ಸೌದೆಗಾಗಿ ಕತ್ತರಿಸಿಕೊಳ್ಳಲು ಮುಗಿಬಿದ್ದರು. ಮಳೆ ಸುರಿಯುತ್ತಿದ್ದರೂ ಸಹ ಹಲವರು ಮರದ ಕೊಂಬೆಗಳನ್ನು ಕತ್ತರಿಸಿ ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದವು.
ನಂತರ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಮರವನ್ನು ಸಂಪೂರ್ಣವಾಗಿ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 16: ಬೆಂಗಳೂರು (Bengaluru) ಅಂದ್ರೆ ದುಬಾರಿ. ಇಲ್ಲಿ ಎಷ್ಟು ದುಡಿದ್ರೂ ಮನೆ ಬಾಡಿಗೆ, ದಿನಸಿ ಹಾಗೂ ಉಳಿದ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಹೋಗೋದ್ರಲ್ಲಿಯೇ ಜೇಬು ಖಾಲಿಯಾಗಿರುತ್ತದೆ. ಇಂತಹದ್ದೇ ಅನುಭವ ಯುವತಿಯೊಬ್ಬಳಿಗೆ ಆಗಿದೆ. ಬೆಂಗಳೂರಿನಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಅವಧಿಯಲ್ಲಿ ಅಂಶಿಕಾ ಅಗರ್ವಾಲ್ (Anshika Aggarwal) ತನ್ನ ಮಾಸಿಕ ಖರ್ಚು ವೆಚ್ಚಗಳ ಬಗ್ಗೆ ಮಾತನಾಡಿದ್ದಾಳೆ. ಈ ಪೋಸ್ಟ್ನಲ್ಲಿ ವಿವರವಾದ ಮಾಹಿತಿ ನೀಡಿದ್ದಾಳೆ.
ಅಂಶಿಕಾ ಅಗರ್ವಾಲ್ (@kipupwidanshika) ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಸಿಕ ಖರ್ಚುವೆಚ್ಚಗಳ ಬಗ್ಗೆ ಉಲ್ಲೇಖಿಸಿರುವುದನ್ನು ಕಾಣಬಹುದು. ಪಿಜಿಗೆ ಪಾವತಿಸಲು ಮಾತ್ರ ತಿಂಗಳಿಗೆ ಸುಮಾರು 12,500 ರೂ ಖರ್ಚು ಆಯ್ತು. ಆಹಾರವು ಎರಡನೇ ಅತಿದೊಡ್ಡ ವೆಚ್ಚವಾಗಿದ್ದು, ಪ್ರತಿ ತಿಂಗಳು ಸುಮಾರು 6,000 ರೂ ಊಟಕ್ಕೆ ಎತ್ತಿಡಬೇಕಾಯ್ತು. ಪಿಜಿ ವಸತಿ ಸೌಕರ್ಯವು ಸಾಮಾನ್ಯವಾಗಿ ಆಹಾರವನ್ನು ಒಳಗೊಂಡಿದ್ದರೂ, ಆ ಆಹಾರವನ್ನು ಹೆಚ್ಚು ಅವಲಂಬಿಸಲು ಸಾಧ್ಯವಾಗಲಿಲ್ಲ ಹೊರಗಿನ ಊಟಕ್ಕೆ ಹೆಚ್ಚುವರಿ ಖರ್ಚು ಮಾಡಬೇಕಾಗಿತ್ತು ಎಂದು ಹೇಳಿದ್ದಾಳೆ.
ವೈರಲ್ ಪೋಸ್ಟ್ ಇಲ್ಲಿದೆ
Here was my bangalore expense during 2 month of internship
Pg: 12.5k
Food: 6k(I just couldn’t eat PG food)
Travel: 2k in auto, cabs
Outings: 2k(didn’t go out a lot)
Misc: 1-2k
Total: 26k around
Bangalore is expensive because of the rent and sometimes travel or else you can get…
ಮಾಸಿಕ ವೆಚ್ಚಗಳಲ್ಲಿ ಟ್ರಾವೆಲ್ಗಾಗಿ ಸರಿಸುಮಾರು 2,000 ರೂ ಸೇರಿವೆ. ಸುತ್ತಾಟಕ್ಕಾಗಿ 2,000 ರೂ, (ಇಂಟರ್ನ್ಶಿಪ್ ಅವಧಿಯಲ್ಲಿ ತಾನು ಹೆಚ್ಚಾಗಿ ಹೊರಗೆ ಹೋಗುತ್ತಿರಲಿಲ್ಲ) ಹಾಗೂ ದೈನಂದಿನ ಅಗತ್ಯ ವಸ್ತುಗಳಂತಹ ವಿವಿಧ ವೆಚ್ಚಗಳು 1,000 ರೂಯಿಂದ 2,000 ರೂ ತಗಲಿವೆ. ಒಟ್ಟಾರೆಯಾಗಿ ಎರಡು ತಿಂಗಳ ಇಂಟರ್ನ್ಶಿಪ್ ಅವಧಿಯಲ್ಲಿ26,000 ರೂ ಖರ್ಚು ಆಯಿತು ಎಂದು ಬರೆದುಕೊಂಡಿದ್ದಾಳೆ.
ಈ ಪೋಸ್ಟ್ ಹದಿನೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನನ್ನದು ತಿಂಗಳಿಗೆ 40 ರಿಂದ 50 ಸಾವಿರ ರೂ ಖರ್ಚು ಎಂದು ಹೇಳಿದ್ದಾರೆ. ಇನ್ನೊಬ್ಬರು, ತುಂಬಾ ದುಬಾರಿಯಾಯ್ತು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಬಹುಶಃ ನನಗೆ ಪ್ರವಾಸಕ್ಕೆ ಸುಮಾರು 4-5 ಸಾವಿರ ಬೇಕಾಗಬಹುದು. ನಿಮ್ಮ ಖರ್ಚುಗಳನ್ನು ನಿಯಂತ್ರಿಸಿದರೆ ಬೆಂಗಳೂರಿನಲ್ಲಿ ವಾಸಿಸುವುದು ಅಷ್ಟು ದುಬಾರಿಯಲ್ಲ ಎಂದಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಂಡ್ಯ, ಮಾರ್ಚ್ 16: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ (KRS) ಜಲಾಶಯದ ನೀರಿನ ಮಟ್ಟ ಇದೀಗ 110 ಅಡಿಗೆ ಇಳಿದಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 110.44 ಅಡಿ ನೀರು ಇದ್ದು, ಸುಮಾರು 32.167 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗಾಗಿ ಈ ಬಾರಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಾ ಎಂಬ ಆತಂಕ ಶುರುವಾಗಿದೆ.
ಬೆಂಗಳೂರಿಗೆ ಕುಡಿಯುವ ನೀರಿಗೆ ಸಮಸ್ಯೆ ಇಲ್ಲಾ
ಸಾಮಾನ್ಯವಾಗಿ ಜೂನ್–ಜುಲೈ ತಿಂಗಳಲ್ಲಿ ತುಂಬುವ ಕೆಆರ್ಎಸ್ ಜಲಾಶಯ ಈ ಬಾರಿ ಉತ್ತಮ ಮಳೆಯ ಪರಿಣಾಮವಾಗಿ ಮೇ ತಿಂಗಳಲ್ಲೇ ಭರ್ತಿಯಾಗಿತ್ತು. ಆದರೆ ಈಗ ನೀರಿನ ಮಟ್ಟ 110 ಅಡಿಗೆ ಇಳಿದಿರುವುದರಿಂದ ಮುಂದಿನ ದಿನಗಳಲ್ಲಿ ಕುಡಿಯಲು ನೀರು ಸಿಗದಂತೆ ಆಗುತ್ತಾ ಎಂಬ ಪ್ರಶ್ನೆ ಉದಭವಿಸಿದ್ದು, ನೀರಿನ ಮಟ್ಟ ಕುಸಿದಿದ್ದರೂ ಜೂನ್ ಹಾಗೂ ಜುಲೈವರೆಗೆ ಕುಡಿಯುವ ನೀರಿಗೆ ಯಾವುದೇ ಆತಂಕ ಇಲ್ಲ ಎಂದು ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ರೈತರ ಬೆಳೆಗಳಿಗೆ ಕಟ್ಟು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಬಿಡಲಾಗುತ್ತಿದ್ದು, ನೀರಿನ ಸಮರ್ಪಕ ನಿರ್ವಹಣೆ ಮಾಡಲಾಗುತ್ತಿದೆ. ಹೀಗಾಗಿ ಮೈಸೂರು ಹಾಗೂ ಬೆಂಗಳೂರಿಗೆ ಪೂರೈಕೆ ಮಾಡುವ ಕುಡಿಯುವ ನೀರಿಗೂ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಈ ವರ್ಷ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.
ತೆಲುಗು ಬಿಗ್ ಬಾಸ್ ಖ್ಯಾತಿಯ ಪ್ರಸಿದ್ಧ ನಟಿ ಅಶ್ವಿನಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದರು. ಬಿಗ್ ಬಾಸ್ನ ಏಳನೇ ಸೀಸನ್ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಅಶ್ವಿನಿ ಈಗ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ಸಂಪೂರ್ಣವಾಗಿ ಸಕ್ರಿಯರಾಗಿದ್ದಾರೆ. ಈಗ ಅವರಿಗೆ ಗಾಯ ಆಗಿದೆ.
ಅಶ್ವಿನಿ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ, ಅಶ್ವಿನಿ ಶ್ರೀ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ, ಅವರು ತಮ್ಮ ಮುಖಕ್ಕೆ ಗಾಯವಾಗಿದೆ ಎಂದು ಬಹಿರಂಗಪಡಿಸಿದ್ದಾರೆ. ‘ಬೆಳಿಗ್ಗೆ ನಾಯಿಯನ್ನು ವಾಕಿಂಗ್ಗೆ ಕರೆದೊಯ್ಯುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದೆ. ನನ್ನ ಮುಖಕ್ಕೆ ಗಾಯಗಳಾಗಿವೆ. ನಾನು ಈ ರೀತಿ ನಿಮ್ಮ ಮುಂದೆ ಬರುತ್ತೇನೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಮುಖಕ್ಕೆ ಪೆಟ್ಟು ಬಿದ್ದ ನಂತರ ನನಗೆ ತುಂಬಾ ನೋವಾಗಿದೆ. ನೀವೆಲ್ಲರೂ ನನಗಾಗಿ ಪ್ರಾರ್ಥಿಸುತ್ತಿದ್ದೀರಿ ಎಂದು ನಾನು ಭಾವಿಸುತ್ತೇನೆ’ ಎಂದು ಅಶ್ವಿನಿ ಶ್ರೀ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.
ಬಿಗ್ ಬಾಸ್ ಬ್ಯೂಟಿ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಿಗ್ ಬಾಸ್ ಸೆಲೆಬ್ರಿಟಿಗಳು, ಆಪ್ತ ಸ್ನೇಹಿತರು ಮತ್ತು ಸ್ನೇಹಿತರು ಇದನ್ನು ನೋಡಿದ ನಂತರ ಪ್ರತಿಕ್ರಿಯಿಸುತ್ತಿದ್ದಾರೆ. ಅವರು ಅಶ್ವಿನಿ ಶ್ರೀ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ.
ತೆಲಂಗಾಣ ಮೂಲದ ಅಶ್ವಿನಿ ಶ್ರೀ, ತಮ್ಮ ವೃತ್ತಿಜೀವನದ ಆರಂಭದಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಪೋಷಕ ನಟಿಯಾಗಿ ಪ್ರಭಾವಿತರಾದರು. ಆದಾಗ್ಯೂ, ಅವರು ಹೆಚ್ಚಿನ ಮನ್ನಣೆಯನ್ನು ಗಳಿಸಲು ಸಾಧ್ಯವಾಗಲಿಲ್ಲ. ಅವರು ಸರ್ದಾರ್ ಗಬ್ಬರ್ ಸಿಂಗ್, ರಾಜಾ ದಿ ಗ್ರೇಟ್, ಬಿ.ಟೆಕ್ ಬಾಬುಲು, ಆಮಿರ್ ಪೆಟಾಲೊ ಮತ್ತು ಇತರ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಅನೇಕ ಸಂಗೀತ ವೀಡಿಯೊಗಳು ಮತ್ತು ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.
ಪಾಕಿಸ್ತಾನ್ ಮೂಲದ ಯುಎಇ ಕ್ರಿಕೆಟಿಗ ಝಹೂರ್ ಖಾನ್ (Zahoor Khan) ಇತ್ತೀಚೆಗೆ ನೀಡಿದ ಹೇಳಿಕೆಯೊಂದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಪ್ರಸಿದ್ಧ ‘ಸ್ಲೋವರ್ ಬಾಲ್’ (Slower ball) ತಂತ್ರವನ್ನು ತಾನೇ ಕಲಿಸಿಕೊಟ್ಟಿದ್ದು ಎಂದು ಅವರು ಹೇಳಿಕೊಂಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಝಹೂರ್ ಖಾನ್, ಜಸ್ಪ್ರೀತ್ ಬುಮ್ರಾ ಇತ್ತೀಚೆಗೆ ಸ್ಲೋವರ್ ಎಸೆತಗಳನ್ನು ಎಸೆಯುತ್ತಿದ್ದಾರೆ. ಈ ಎಸೆತಗಳನ್ನು ಹೇಳಿಕೆ ಕೊಟ್ಟಿದ್ದು ನಾನು. ಇದಾದ ಬಳಿಕ ಬುಮ್ರಾ ನಿಧಾನಗತಿಯ ಎಸೆತಗಳ ಮೂಲಕ ಯಶಸ್ಸು ಸಾಧಿಸುತ್ತಿದ್ದಾರೆ ಎಂದಿದ್ದಾರೆ.
2019/2020ರಲ್ಲಿ ಯುಎಇ ನಲ್ಲಿ ನಡೆದ ಐಪಿಎಲ್ ಸಮಯದಲ್ಲಿ ನಾನು ಮುಂಬೈ ಇಂಡಿಯನ್ಸ್ ತಂಡ ನೆಟ್ ಬೌಲರ್ ಆಗಿದ್ದೆ. ಅಭ್ಯಾಸದ ವೇಳೆ ನಾನುರ್ ಎಸೆದ ಸ್ಲೋವರ್ ಬೌನ್ಸರ್ ಬ್ಯಾಟರ್ ಅನ್ನು ಸಂಪೂರ್ಣವಾಗಿ ಕಕ್ಕಾಬಿಕ್ಕಿ ಮಾಡಿತ್ತು. ಇದನ್ನು ಗಮನಿಸಿದ ಅಂದಿನ ಮುಂಬೈ ಕೋಚ್ಗಳಾದ ಶೇನ್ ಬಾಂಡ್ ಮತ್ತು ಮಹೇಲಾ ಜಯವರ್ಧನೆ ಆಶ್ಚರ್ಯಚಕಿತರಾಗಿದ್ದರು.
ಇದರಿಂದ ಪ್ರಭಾವಿತರಾದ ಜಸ್ಪ್ರೀತ್ ಬುಮ್ರಾ, ನನ್ನ ಬಳಿ ಬಂದು “ಪಾಜಿ, ನಿಮ್ಮ ಗ್ರಿಪ್ (ಚೆಂಡನ್ನು ಹಿಡಿಯುವ ರೀತಿ) ಹೇಗಿದೆ? ನನಗೆ ತೋರಿಸಿಕೊಡಿ” ಎಂದು ಕೇಳಿದ್ದರು. ಇದನ್ನು ನಾನು ವಿವರಿಸಿಕೊಟ್ಟಿದ್ದೆ.
ಇನ್ನು ಕಲಿತ ಬಳಿಕ ಜಸ್ಪ್ರೀತ್ ಬುಮ್ರಾ “ಇದು ನೆಕ್ಸ್ಟ್ ಲೆವೆಲ್ ತಂತ್ರ” ಎಂದು ಹೊಗಳಿದ್ದರು ಎಂದು ಝಹೂರ್ ಖಾನ್ ಸಂದರ್ಶನದಲ್ಲಿ ಹೇಳಿದ್ದಾರೆ.
ಇತ್ತ ಜಸ್ಪ್ರೀತ್ ಬುಮ್ರಾ ಇತ್ತೀಚಿನ ದಿನಗಳಲ್ಲಿ ಯಾರ್ಕರ್ ಎಸೆತಗಳೊಂದಿಗೆ ಸ್ಲೋವರ್ ಎಸೆತಗಳನ್ನು ಎಸೆಯುತ್ತಿರುವುದಂತು ನಿಜ. ಈ ರಣತಂತ್ರ ರೂವಾರಿ ನಾನೇ ಎಂದು ಯುಎಇ ವೇಗಿ ಝಹೂರ್ ಖಾನ್ ಹೇಳಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ಎಷ್ಟು ನಿಜ ಎಂಬುದು ಜಸ್ಪ್ರೀತ್ ಬುಮ್ರಾ ಅವರಿಗೆ ಮಾತ್ರ ಗೊತ್ತಿದೆ.
ಇನ್ನು ಝಹೂರ್ ಖಾನ್ ಯುಎಇ ಪರ ಈವರೆಗೆ 62 ಏಕದಿನ ಹಾಗೂ 57 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಏಕದಿನ ಕ್ರಿಕೆಟ್ನಲ್ಲಿ 93 ಹಾಗೂ ಟಿ20 ಕ್ರಿಕೆಟ್ನಲ್ಲಿ 72 ವಿಕೆಟ್ಗಳನ್ನು ಕಬಳಿಸಿದ್ದಾರೆ. ಇದಾಗ್ಯೂ 2024 ರ ಬಳಿಕ ಝಹೂರ್ ಖಾನ್ ಯುಎಇ ಪರ ಒಂದೇ ಒಂದು ಪಂದ್ಯವಾಡಿಲ್ಲ ಎಂಬುದು ಉಲ್ಲೇಖಾರ್ಹ.
ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್ನಲ್ಲಿ ಗ್ಯಾಸ್ ಸೋರಿಕೆ ಆಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ದೇವನಹಳ್ಳಿ, ಮಾರ್ಚ್ 16: ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಹಾಗೂ ತ್ರಿಬಲ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರೀಲ್ಸ್ ಮಂಜುವನ್ನು ಠಾಣೆಗೆ ಕರೆಸಿ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಲಸಿಕೆಗಳು (Vaccines) ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ COVID-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. COVID-19 ಸಾಂಕ್ರಾಮಿಕ ಸಮಯದಲ್ಲಿ ನಾವೆಲ್ಲರೂ ಅದರ ಮಹತ್ವವನ್ನು ನೋಡಿದ್ದೇವೆ. ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸಿದೆ. ಲಸಿಕೆಯ ಈ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರೀಯ ಲಸಿಕೆ ದಿನದ ಇತಿಹಾಸವೇನು?
ಭಾರತದಲ್ಲಿ ಲಸಿಕೆ ಅಭಿಯಾನವು 1955 ರಲ್ಲಿ ಆಚರಿಸಲಾಯಿತು. ಆ ಸಮಯದಲ್ಲಿ ಪೋಲಿಯೊ ಒಂದು ಪ್ರಮುಖ ಸಮಸ್ಯೆಯಾಗಿತ್ತು, ಆದ್ದರಿಂದ ಭಾರತ ಸರ್ಕಾರವು ದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಅಧಿಕೃತವಾಗಿ ಪ್ರಾರಂಭಿಸಿತು. ಮಾರ್ಚ್ 16, 1995 ರಂದು, ವಿಶ್ವ ಆರೋಗ್ಯ ಸಂಸ್ಥೆಯ (WHO) ಜಾಗತಿಕ ಪೋಲಿಯೊ ಉಪಕ್ರಮದ ಭಾಗವಾಗಿ ಭಾರತದಲ್ಲಿ ಮೌಖಿಕ ಪೋಲಿಯೊ ಲಸಿಕೆಯ ಮೊದಲ ಡೋಸ್ ಅನ್ನು ನೀಡಲಾಯಿತು. ಈ ಅಭಿಯಾನದಡಿಯಲ್ಲಿ, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ನೀಡಲಾಯಿತು. ಇದರ ನಂತರ, ಪೋಲಿಯೊ ಪ್ರಕರಣಗಳು ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸಿದವು ಮತ್ತು ಅಂತಿಮವಾಗಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಯಿತು. 2014 ರಲ್ಲಿ, ಭಾರತವನ್ನು ಪೋಲಿಯೊ ಮುಕ್ತ ಎಂದು ಘೋಷಿಸಲಾಯಿತು. ಲಸಿಕೆಯ ಮಹತ್ವವನ್ನು ಎತ್ತಿ ತೋರಿಸಲು ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಮಾರ್ಚ್ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ.
ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿವೆ. ಲಸಿಕೆಗಳ ಪಾತ್ರ ಮತ್ತು ಪ್ರಾಮುಖ್ಯತೆಯನ್ನು ಎತ್ತಿ ತೋರಿಸಲು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ.
ಲಸಿಕೆಗಳು ಜೀವ ಉಳಿಸುವುದು ಮಾತ್ರವಲ್ಲ, ಆರೋಗ್ಯ ಹಾಗೂ ಜೀವನ ಮಟ್ಟವನ್ನು ಸುಧಾರಿಸುತ್ತವೆ, ಲಸಿಕೆಗಳು ಆರೋಗ್ಯ ಹದಗೆಡದಂತೆ, ವೈರಸ್ಗಳು ಮತ್ತು ಬ್ಯಾಕ್ಟೀರಿಯಾಗಳನ್ನು ದೇಹದಿಂದ ಸಂಪೂರ್ಣವಾಗಿ ತೆಗೆದು ಕಾಲು ಸಹಾಯ ಮಾಡುತ್ತದೆ. ಇದರ ಈ ಮಹತ್ವದ ಬಗ್ಗೆಯೂ ಜಾಗೃತಿ ಮೂಡಿಸಲಾಗುತ್ತದೆ.
ಅಪಾಯಕಾರಿ ಮತ್ತು ಗಂಭೀರ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಲಸಿಕೆಗಳು ಪರಿಣಾಮಕಾರಿ ಸಾಧನಗಳಾಗಿವೆ. ಜಾಗತಿಕವಾಗಿ, ವ್ಯಾಪಕವಾದ ಲಸಿಕೆ ಅಭಿಯಾನಗಳು ಸಿಡುಬು, ದಡಾರ ಮತ್ತು ಟೆಟನಸ್ನಂತಹ ಸಾಂಕ್ರಾಮಿಕ ಮತ್ತು ಅಪಾಯಕಾರಿ ಕಾಯಿಲೆಗಳನ್ನು ನಿರ್ಮೂಲನೆ ಮಾಡಿವೆ. WHO ಪ್ರಕಾರ, ಲಸಿಕೆಯ ಮೂಲಕ ಪ್ರತಿ ವರ್ಷ 2-3 ಮಿಲಿಯನ್ ಜೀವಗಳನ್ನು ಉಳಿಸಲಾಗುತ್ತಿದೆ. ಈ ಪ್ರಸ್ತುತ ಯುಗದಲ್ಲಿ ಲಸಿಕೆಗಳು ವಹಿಸುವ ಪಾತ್ರವನ್ನು ನಿರ್ಲಕ್ಷಿಸಲಾಗುವುದಿಲ್ಲ.
ಬೆಂಗಳೂರು, ಮಾರ್ಚ್ 16: ಬೆಂಗಳೂರು ಕರಗ (Bengaluru Karaga) ಶಕ್ತ್ಯೋತ್ಸವಕ್ಕೆ ಕೇವಲ ಒಂಬತ್ತು ದಿನಗಳು ಮಾತ್ರ ಬಾಕಿಯಿದ್ದು, ಉತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲು ಸಕಲ ಸಿದ್ಧತೆಗಳು ಆರಂಭವಾಗಿವೆ. ಐತಿಹಾಸಿಕ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯುವ ಕರಗ ಶಕ್ತ್ಯೋತ್ಸವ ಈ ಬಾರಿ ಮೈಸೂರು ದಸರಾ ಶೈಲಿಯಲ್ಲೇ ಅದ್ಧೂರಿಯಾಗಿ ನಡೆಯುವ ಸಾಧ್ಯತೆ ಇದೆ. ವಿಶೇಷವಾಗಿ ನಗರದ ಪ್ರಮುಖ ರಸ್ತೆಗಳನ್ನು ಮೈಸೂರು ದಸರಾ ಮಾದರಿಯಲ್ಲಿ ಲೈಟಿಂಗ್ ಮೂಲಕ ಅಲಂಕರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ.
ಲಕ್ಷಾಂತರ ರೂ. ವೆಚ್ಚದಲ್ಲಿ ಲೈಟಿಂಗ್!
ಕರಗ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಒಟ್ಟು 39 ಲಕ್ಷ ರೂಪಾಯಿ ವೆಚ್ಚದಲ್ಲಿ ಲೈಟಿಂಗ್ ಅಳವಡಿಸಲು ಟೆಂಡರ್ ಆಹ್ವಾನಿಸಲಾಗಿದೆ. ಮೊದಲ ಹಂತದಲ್ಲಿ 10.14 ಲಕ್ಷ ರೂಪಾಯಿ ವೆಚ್ಚದಲ್ಲಿ ಧರ್ಮರಾಯಸ್ವಾಮಿ ದೇವಾಲಯ, ಸಂಪಂಗಿ ಕೆರೆ ಹಾಗೂ ಕರಗ ಸಾಗುವ ಪ್ರಮುಖ ಮಾರ್ಗಗಳಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಎರಡನೇ ಹಂತದಲ್ಲಿ 28.92 ಲಕ್ಷ ರೂಪಾಯಿ ವೆಚ್ಚದಲ್ಲಿ ಜಿಬಿಎ ಪ್ರಧಾನ ಕಚೇರಿ, ಪ್ರಮುಖ ವೃತ್ತಗಳು ಹಾಗೂ ಕೆಲವು ಆಯ್ದ ಪ್ರಮುಖ ರಸ್ತೆಗಳನ್ನು ಬೆಳಗಿಸಲು ಯೋಜಿಸಲಾಗಿದೆ.
ಏಪ್ರಿಲ್ 1ಕ್ಕೆ ಕರಗ ಶಕ್ತ್ಯೋತ್ಸವ
ಮಾರ್ಚ್ 24ರಂದು ಧರ್ಮರಾಯಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕರಗ ಉತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಮಾರ್ಚ್ 30ರಂದು ಹಸಿ ಕರಗ ನಡೆಯಲಿದ್ದು, ಏಪ್ರಿಲ್ 1ರಂದು ಮುಖ್ಯ ಕರಗ ಶಕ್ತ್ಯೋತ್ಸವ ನಡೆಯಲಿದೆ. ಇದರ ಜೊತೆಗೆ ಭಕ್ತರಿಗೆ ಮನರಂಜನೆ ಕಾರ್ಯಕ್ರಮಗಳನ್ನೂ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಕಳೆದ ವರ್ಷ ಸುಮಾರು 40 ಲಕ್ಷ ರೂಪಾಯಿಯಲ್ಲಿ ಕರಗ ಉತ್ಸವ ನಡೆಸಲಾಗಿತ್ತು. ಆದರೆ ಈ ಬಾರಿ ಕೇವಲ ಲೈಟಿಂಗ್ಗಾಗಿಯೇ 39 ಲಕ್ಷ ರೂಪಾಯಿ ವೆಚ್ಚ ಮಾಡಲಾಗುತ್ತಿರುವುದು, ಈ ಬಾರಿ ಕರಗ ಉತ್ಸವ ಮೈಸೂರು ದಸರಾ ಶೈಲಿಯಲ್ಲಿ ಭರ್ಜರಿಯಾಗಿ ನಡೆಯಲಿದೆ ಎಂಬ ನಿರೀಕ್ಷೆಯನ್ನು ಹೆಚ್ಚಿಸಿದೆ.
ಸಿನಿಮಾ ಟಿಕೆಟ್ ದರ ಹೆಚ್ಚಳ ಮಾಡೋದಕ್ಕೆ ಪ್ರೇಕ್ಷಕನಿಗೆ ಕೋಪ ಇದೆ. ಅದರಲ್ಲೂ ಕರ್ನಾಟಕದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ಬರುತ್ತವೆ ಎಂದಾಗ ಬೇಕಾಬಿಟ್ಟಿ ಟಿಕೆಟ್ ದರ ಏರಿಸಿ, ಪ್ರೇಕ್ಷಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ವಿಷಯವಾಗಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಟಿಕೆಟ್ ದರ ಏರಿಕೆ ಪ್ರೇಕ್ಷಕನ ಮೇಲೆ ಮಾಡುವ ಶೋಷಣೆ ಅಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಪರ ವಿರೋಧ ಚರ್ಚೆಗಳು ನಡೆದಿವೆ.
ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಅಲ್ಲಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಎಲ್ಲಾ ಉದ್ಯಮಗಳ ಸಿನಿಮಾಗಳು ಗೆಲ್ಲಲಿ ಎಂದು ನಾನು ಬಯಸುತ್ತೇನೆ. ಯಾರಿಗೂ ತಾರತಮ್ಯ ಮಾಡುವುದಿಲ್ಲ . ಜೂನಿಯರ್ ಎನ್ಟಿಆರ್, ಮಹೇಶ್ ಬಾಬು ಅಥವಾ ಪ್ರಭಾಸ್ ಯಾರೇ ನಟಿಸಿದ ಚಿತ್ರವಾದರೂ ಪ್ರತಿ ಸಿನಿಮಾ ದೊಡ್ಡ ಯಶಸ್ಸನ್ನು ಕಾಣಬೇಕೆಂದು ಹಾರೈಸುತ್ತೇನೆ’ ಎಂದು ಅವರು ಹೇಳಿದರು.
ಕನ್ನಡದ ಬ್ಲಾಕ್ಬಸ್ಟರ್ ಚಿತ್ರ ‘ಕಾಂತಾರ’ ಸಿನಿಮಾದ ಯಶಸ್ಸನ್ನು ಉದಾಹರಣೆಯಾಗಿ ನೀಡಿದರು. ‘ಭಾಷೆ ಅಥವಾ ಸಿನಿಮಾದಲ್ಲಿ ಯಾರು ನಟಿಸಿದ್ದಾರೆ ಎಂಬುದನ್ನು ಲೆಕ್ಕಿಸಬಾರದು. ತೆಲುಗು ಚಿತ್ರಗಳು ಕರ್ನಾಟಕದಲ್ಲಿ ಹಿನ್ನಡೆಯನ್ನು ಎದುರಿಸುತ್ತಿವೆ. ಆದರೂ ಕಾಂತಾರದಂತಹ ಚಿತ್ರದ ಬಗ್ಗೆ ನಾನು ಎಂದಿಗೂ ಕೆಟ್ಟದಾಗಿ ಭಾವಿಸಿಲ್ಲ. ಏಕೆಂದರೆ ಅದು ಭಾರತೀಯ ಚಿತ್ರವಾಗಿದ್ದು, ಅದನ್ನು ಪ್ರೋತ್ಸಾಹಿಸಬೇಕಾಗಿದೆ’ ಎಂದು ಅವರು ಹೇಳಿದರು.
ಟಿಕೆಟ್ ದರ ಏರಿಕೆಯ ಬಗ್ಗೆ ಮಾತನಾಡಿದ ಪವನ್ ಕಲ್ಯಾಣ್, ‘ಅದನ್ನು ಶೋಷಣೆ ಎಂದು ನೋಡಬಾರದು. ಚಿತ್ರಮಂದಿರಗಳಲ್ಲಿ ಸಿನಿಮಾ ನೋಡುವುದು ಕಡ್ಡಾಯವಲ್ಲ. ಈಗ ಪ್ರೇಕ್ಷಕರು ನೆಟ್ಫ್ಲಿಕ್ಸ್, ಅಮೇಜಾನ್ ಸೇರಿದಂತೆ ಅನೇಕ ಪ್ಲಾಟ್ಫಾರ್ಮ್’ ಆಯ್ಕೆ ಹೊಂದಿದ್ದಾರೆ ಎಂದು ಅವರು ಹೇಳಿದರು. ನಿರ್ಮಾಪಕರು ದೊಡ್ಡ ಮೊತ್ತವನ್ನು ಹಾಕಿರುತ್ತಾರೆ. ಅದಕ್ಕೆ ಪ್ರತಿಯಾಗಿ ಹಣ ಪಡೆಯಬೇಕು ಎಂಬ ಕಾರಣಕ್ಕೆ ಟಿಕೆಟ್ ದರ ಹೆಚ್ಚಿಸಲಾಗುತ್ತದೆ ಎಂದು ಅವರು ಹೇಳಿದರು.
ಆಂಧ್ರದಲ್ಲಿ ಟಿಕೆಟ್ ದರ ಹೆಚ್ಚಿಸೋದಾದರೆ ಸರ್ಕಾರದ ಒಪ್ಪಿಗೆ ಬೇಕು. ಅದು ಕೂಡ ಕೆಲವೇ ದಿನ ಮಾತ್ರ ಟಿಕೆಟ್ ದರ ಹೆಚ್ಚಿಸಲ ಅವಕಾಶ ಇರುತ್ತದೆ. ಆದರೆ, ಕರ್ನಾಟಕದಲ್ಲಿ ಈ ರೀತಿಯ ಯಾವುದೇ ಕಟ್ಟುಪಾಡು ಇಲ್ಲ. ಹೀಗಾಗಿ, ಇದೊಂದು ದಬ್ಬಾಳಿಕೆ ಎಂದೇ ಪರಿಗಣಿಸಲಾಗುತ್ತದೆ.