Headlines

110 ಅಡಿಗೆ ಇಳಿದ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ; ಕುಡಿಯುವ ನೀರಿಗೆ ಸಮಸ್ಯೆ ಆಗುತ್ತಾ?

ಮಂಡ್ಯ, ಮಾರ್ಚ್​ 16: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ (KRS) ಜಲಾಶಯದ ನೀರಿನ ಮಟ್ಟ ಇದೀಗ 110 ಅಡಿಗೆ ಇಳಿದಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 110.44 ಅಡಿ ನೀರು ಇದ್ದು, ಸುಮಾರು 32.167 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗಾಗಿ ಈ ಬಾರಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಾ ಎಂಬ ಆತಂಕ ಶುರುವಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿಗೆ ಸಮಸ್ಯೆ ಇಲ್ಲಾ ಸಾಮಾನ್ಯವಾಗಿ ಜೂನ್–ಜುಲೈ ತಿಂಗಳಲ್ಲಿ ತುಂಬುವ ಕೆಆರ್‌ಎಸ್ ಜಲಾಶಯ ಈ ಬಾರಿ ಉತ್ತಮ…

Read More

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಮುಖಕ್ಕೆ ಗಾಯ; ಆಗಿದ್ದು ಹೇಗೆ?

ತೆಲುಗು ಬಿಗ್ ಬಾಸ್ ಖ್ಯಾತಿಯ ಪ್ರಸಿದ್ಧ ನಟಿ ಅಶ್ವಿನಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದರು. ಬಿಗ್ ಬಾಸ್‌ನ ಏಳನೇ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಅಶ್ವಿನಿ ಈಗ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ಸಂಪೂರ್ಣವಾಗಿ ಸಕ್ರಿಯರಾಗಿದ್ದಾರೆ. ಈಗ ಅವರಿಗೆ ಗಾಯ ಆಗಿದೆ. ಅಶ್ವಿನಿ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ, ಅಶ್ವಿನಿ ಶ್ರೀ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ…

Read More

ಬುಮ್ರಾಗೆ ಬೌಲಿಂಗ್ ಟ್ರಿಕ್ಸ್ ಹೇಳಿಕೊಟ್ಟಿದ್ದೇ ನಾನು: ಪಾಕ್ ಮೂಲದ ವೇಗಿ

ಪಾಕಿಸ್ತಾನ್ ಮೂಲದ ಯುಎಇ ಕ್ರಿಕೆಟಿಗ ಝಹೂರ್ ಖಾನ್ (Zahoor Khan) ಇತ್ತೀಚೆಗೆ ನೀಡಿದ ಹೇಳಿಕೆಯೊಂದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತದ ಸ್ಟಾರ್ ಬೌಲರ್ ಜಸ್​ಪ್ರೀತ್ ಬುಮ್ರಾ ಅವರ ಪ್ರಸಿದ್ಧ ‘ಸ್ಲೋವರ್ ಬಾಲ್’ (Slower ball) ತಂತ್ರವನ್ನು ತಾನೇ ಕಲಿಸಿಕೊಟ್ಟಿದ್ದು ಎಂದು ಅವರು ಹೇಳಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಝಹೂರ್ ಖಾನ್,  ಜಸ್​ಪ್ರೀತ್ ಬುಮ್ರಾ ಇತ್ತೀಚೆಗೆ ಸ್ಲೋವರ್ ಎಸೆತಗಳನ್ನು ಎಸೆಯುತ್ತಿದ್ದಾರೆ. ಈ ಎಸೆತಗಳನ್ನು ಹೇಳಿಕೆ ಕೊಟ್ಟಿದ್ದು ನಾನು. ಇದಾದ ಬಳಿಕ ಬುಮ್ರಾ ನಿಧಾನಗತಿಯ ಎಸೆತಗಳ ಮೂಲಕ ಯಶಸ್ಸು…

Read More

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಆಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಯಾವುದೇ ಅಪಾಯ ಸಂಭವಿಸದಂತೆ…

Read More

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!

ದೇವನಹಳ್ಳಿ, ಮಾರ್ಚ್​ 16: ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಹಾಗೂ ತ್ರಿಬಲ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರೀಲ್ಸ್ ಮಂಜುವನ್ನು ಠಾಣೆಗೆ ಕರೆಸಿ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ….

Read More

National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು (Vaccines) ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ COVID-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. COVID-19 ಸಾಂಕ್ರಾಮಿಕ ಸಮಯದಲ್ಲಿ ನಾವೆಲ್ಲರೂ ಅದರ ಮಹತ್ವವನ್ನು ನೋಡಿದ್ದೇವೆ. ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸಿದೆ. ಲಸಿಕೆಯ ಈ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ…

Read More

ಮೈಸೂರು ದಸರಾ ಶೈಲಿಯಲ್ಲಿ ವಿಜ್ರಂಭಿಸಲಿದೆ ಬೆಂಗಳೂರು; ಕರಗ ಶಕ್ತ್ಯೋತ್ಸವಕ್ಕೆ ಒಂಭತ್ತೇ ದಿನಗಳು ಬಾಕಿ!

ಬೆಂಗಳೂರು, ಮಾರ್ಚ್​ 16: ಬೆಂಗಳೂರು ಕರಗ (Bengaluru Karaga) ಶಕ್ತ್ಯೋತ್ಸವಕ್ಕೆ ಕೇವಲ ಒಂಬತ್ತು ದಿನಗಳು ಮಾತ್ರ ಬಾಕಿಯಿದ್ದು, ಉತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲು ಸಕಲ ಸಿದ್ಧತೆಗಳು ಆರಂಭವಾಗಿವೆ. ಐತಿಹಾಸಿಕ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯುವ ಕರಗ ಶಕ್ತ್ಯೋತ್ಸವ ಈ ಬಾರಿ ಮೈಸೂರು ದಸರಾ ಶೈಲಿಯಲ್ಲೇ ಅದ್ಧೂರಿಯಾಗಿ ನಡೆಯುವ ಸಾಧ್ಯತೆ ಇದೆ. ವಿಶೇಷವಾಗಿ ನಗರದ ಪ್ರಮುಖ ರಸ್ತೆಗಳನ್ನು ಮೈಸೂರು ದಸರಾ ಮಾದರಿಯಲ್ಲಿ ಲೈಟಿಂಗ್ ಮೂಲಕ ಅಲಂಕರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಲಕ್ಷಾಂತರ ರೂ. ವೆಚ್ಚದಲ್ಲಿ ಲೈಟಿಂಗ್!…

Read More

‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಸಿನಿಮಾ ಟಿಕೆಟ್ ದರ ಹೆಚ್ಚಳ ಮಾಡೋದಕ್ಕೆ ಪ್ರೇಕ್ಷಕನಿಗೆ ಕೋಪ ಇದೆ. ಅದರಲ್ಲೂ ಕರ್ನಾಟಕದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ಬರುತ್ತವೆ ಎಂದಾಗ ಬೇಕಾಬಿಟ್ಟಿ ಟಿಕೆಟ್ ದರ ಏರಿಸಿ, ಪ್ರೇಕ್ಷಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ವಿಷಯವಾಗಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಟಿಕೆಟ್ ದರ ಏರಿಕೆ ಪ್ರೇಕ್ಷಕನ ಮೇಲೆ ಮಾಡುವ ಶೋಷಣೆ ಅಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಪರ ವಿರೋಧ ಚರ್ಚೆಗಳು ನಡೆದಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ….

Read More

IPL ​ನಲ್ಲಿ ಮಹತ್ವದ ಬದಲಾವಣೆ: ಒಂದು ತಂಡಕ್ಕೆ ಎಷ್ಟು ಪಂದ್ಯಗಳು?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ ವೇಳಾಪಟ್ಟಿ ಪ್ರಕಟವಾಗಿದೆ. ಈ ವೇಳಾಪಟ್ಟಿಯಂತೆ ಈ ಬಾರಿಯ ಐಪಿಎಲ್​ ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಇತ್ತ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದರೂ ಬಿಸಿಸಿಐ ಇನ್ನೂ ಕೂಡ ಫಾರ್ಮ್ಯಾಟ್​ನ ಸ್ವರೂಪವನ್ನು ಬಹಿರಂಗಪಡಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಲೀಗ್​ ಹಂತದಲ್ಲಿ ಎಷ್ಟು ಮ್ಯಾಚ್​ಗಳನ್ನು ಆಡಲಾಗುತ್ತದೆ…

Read More

Karnataka LPG Gas Shortage: ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್

ಬೆಂಗಳೂರು, ಮಾರ್ಚ್​ 16: ಕರ್ನಾಟಕದಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆಯು ಹೋಟೆಲ್ ಉದ್ಯಮಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ತೈಲ ಪೂರೈಕೆಯಲ್ಲಿನ ಸಮಸ್ಯೆಯು ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಹಲವು ವರ್ಷಗಳ ಇತಿಹಾಸವಿರುವ ಎಮ್​ಟಿಆರ್​ನಂತಹ ಪ್ರತಿಷ್ಠಿತ ಹೋಟೆಲ್‌ಗಳು ಗ್ಯಾಸ್ ಅಭಾವದಿಂದಾಗಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಅಥವಾ ಮೆನುಗಳನ್ನು ಮೊಟಕುಗೊಳಿಸುವ ಪರಿಸ್ಥಿತಿ ಎದುರಿಸುತ್ತಿವೆ. ಬನಶಂಕರಿಯ ಫುಡ್ ಸ್ಟ್ರೀಟ್‌ಗಳು ಮತ್ತು ಮಲ್ಲೇಶ್ವರಂನ ಹೋಟೆಲ್‌ಗಳಲ್ಲಿ ಜನಸಂದಣಿ ಕಡಿಮೆಯಾಗಿದೆ. ಈ ಬಿಕ್ಕಟ್ಟಿನ ನಡುವೆ, ವಾಣಿಜ್ಯ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿವೆ….

Read More