Headlines

ಅಪ್ಪ-ಅಮ್ಮ ಮನೆಯಲ್ಲಿ ಬೆಕ್ಕು ಸಾಕುವಂತಿಲ್ಲ ಎಂದಿದ್ದಕ್ಕೆ ವೈದ್ಯೆ ಆತ್ಮಹತ್ಯೆ

ಹೈದರಾಬಾದ್, ಮಾರ್ಚ್ 21: ಯುವ ವೈದ್ಯೆಯೊಬ್ಬರು ತನ್ನ ತಂದೆ-ತಾಯಿ ಮನೆಯಲ್ಲಿ ಬೆಕ್ಕನ್ನು (Pet Cat) ಸಾಕುವಂತಿಲ್ಲ ಎಂದು ಹೇಳಿದರೆಂಬ ಒಂದೇ ಒಂದು ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರವಾದ ಮತ್ತು ಆಘಾತಕಾರಿ ಘಟನೆ ನಡೆದಿದೆ. ಸಾಕು ಬೆಕ್ಕನ್ನು ಸಾಕಲು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ ನಂತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಬಿಬಿಎಸ್ ಮುಗಿಸಿದ 23 ವರ್ಷದ ಮಹಿಳೆಯೊಬ್ಬರು ಮನೆಯಲ್ಲಿ ಸಾಕು ಬೆಕ್ಕನ್ನು ಸಾಕಲು ಕುಟುಂಬ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ವಾಲ್ ನಿವಾಸಿಯಾಗಿರುವ…

Read More

ಕೆಲವು ಗೊಂದಲಗಳ ಮಧ್ಯೆಯೂ ದಲಿತರ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಗೀಕಾರ – Kannada News | Karnataka Governor Thawar Chand Gehlot signed To SC Internal Reservation Bill 2025

ಬೆಂಗಳೂರು, (ಫೆಬ್ರವರಿ 26): ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ-2025 ( SC Internal Reservation Bill 2025) ಕೊನೆಗೂ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕೆಲವು ಗೊಂದಲಗಳ ಮಧ್ಯೆಯೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Thawar Chand Gehlot ), ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ ಸಹಿ ಹಾಕಿದ್ದಾರೆ. ಮೀಸಲಾತಿ ವಿಚಾರದಲ್ಲಿ ಒಳ ಪಂಗಡಗಳ ನಡುವೆ ಗೊಂದಲ ಏರ್ಪಟ್ಟಿದ್ದರಿಂದ ವಿಧೇಯಕಕ್ಕೆ ಸಹಿ ಹಾಕದೆ ಪೆಂಡಿಂಗ್ ಇಟ್ಟಿದ್ದರು. ಆದ್ರೆ, ಇಂದು (ಫೆಬ್ರವರಿ 26)…

Read More

Google Fellowship 2026: ಗೂಗಲ್​ನಿಂದ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ; 10 ಲಕ್ಷ ರೂ. ಸ್ಟೈಫಂಡ್ ಪಡೆಯುವ ಅವಕಾಶ

ಗೂಗಲ್‌ನಂತಹ ಜಾಗತಿಕ ಸಂಸ್ಥೆಯಲ್ಲಿ ಕೆಲಸ ಮಾಡುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು. ಈಗ ಆ ಕನಸನ್ನು ನನಸಾಗಿಸಿಕೊಳ್ಳಲು ಒಂದು ಸುವರ್ಣಾವಕಾಶ ಒದಗಿಬಂದಿದೆ. ಗೂಗಲ್ ವಿಶೇಷ ಫೆಲೋಶಿಪ್ ಪ್ರೋಗ್ರಾಂ ಅನ್ನು ಪ್ರಕಟಿಸಿದ್ದು, ಇದರಲ್ಲಿ ಭಾಗವಹಿಸುವವರಿಗೆ ಬರೋಬ್ಬರಿ 10 ಲಕ್ಷ ರೂಪಾಯಿಗಳವರೆಗೆ ಸ್ಟೈಫಂಡ್ ಪಡೆಯುವ ಅವಕಾಶವಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಈ ವಿಶೇಷ ಫೆಲೋಶಿಪ್ ಕಾರ್ಯಕ್ರಮವು ಕೇವಲ ಅನುಭವವನ್ನು ಮಾತ್ರವಲ್ಲದೆ, ಆರ್ಥಿಕವಾಗಿಯೂ ವಿದ್ಯಾರ್ಥಿಗಳಿಗೆ ದೊಡ್ಡ ಬೆಂಬಲ ನೀಡಲಿದೆ. ಪದವಿ ಓದುತ್ತಿರುವ ವಿದ್ಯಾರ್ಥಿಗಳಿಂದ ಹಿಡಿದು ಪಿಎಚ್‌ಡಿ ಸಂಶೋಧಕರವರೆಗೆ ಯಾರು ಬೇಕಾದರೂ ಇದಕ್ಕೆ ಅರ್ಜಿ…

Read More

ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂಬ ವದಂತಿಗೆ ಬ್ರೇಕ್ ಹಾಕಿದ ಎಮ್​ಆರ್​ಪಿಎಲ್!

ಮಂಗಳೂರು, ಮಾರ್ಚ್​ 07: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ರಿಫೈನರಿಯ ಕೆಲವು ಘಟಕಗಳನ್ನು ಕಚ್ಚಾ ತೈಲದ ಕೊರತೆಯಿಂದ ಸ್ಥಗಿತಗೊಳಿಸಲಾಗಿದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಿದೆ. ಕಂಪನಿಯ ಕಾರ್ಯಾಚರಣೆಗಳು ಸಾಮಾನ್ಯವಾಗಿ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದೆ. ಸೋಶಿಯಲ್ ಮೀಡಿಯಾ ವದಂತಿ ಸುಳ್ಳು ಎಂದ ರಿಫೈನರಿ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ OilPrice.com ಪ್ರಕಟಿಸಿದ ಪೋಸ್ಟ್‌ನಲ್ಲಿ ಪರ್ಷಿಯನ್ ಗಲ್ಪ್ ಪ್ರದೇಶದ ಉದ್ವಿಗ್ನತೆಯಿಂದ ಕಚ್ಚಾ ತೈಲ ಸಾಗಣೆ ವಿಳಂಬವಾಗಿದ್ದು, ಮಂಗಳೂರಿನ 3 ಲಕ್ಷ…

Read More

ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ – Kannada News | T20 World cup 2026 Semi Final Schedule

T20 World Cup 2026: ಟಿ20 ವಿಶ್ವಕಪ್​ 2026 ರ ಸೂಪರ್-8 ಸುತ್ತಿನ ಪಂದ್ಯಗಳು ಇಂದು ಪೂರ್ಣಗೊಳ್ಳಲಿದೆ. ದ್ವಿತೀಯ ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳಾವುವು ಎಂಬುದು ಖಚಿತವಾಗಲಿದೆ. ಅಂದರೆ ಈಗಾಗಲೇ ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ಸೆಮಿಫೈನಲ್​ಗೇರಿದ್ದು, ನಾಲ್ಕನೇ ತಂಡವಾಗಿ ಭಾರತ ಅಥವಾ ವೆಸ್ಟ್ ಇಂಡೀಸ್​ ನಾಕೌಟ್ ಹಂತಕ್ಕೇರಲಿದೆ. ಅತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಬಿದ್ದ…

Read More

ಟೀಮ್ ಇಂಡಿಯಾ ದಾಂಡಿಗರ ಆರ್ಭಟಕ್ಕೆ SRH ತಂಡದ ವಿಶ್ವ ದಾಖಲೆ ಉಡೀಸ್

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಸಹ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 253 ರನ್ ಕಲೆಹಾಕಿದ್ದರು. ಈ 253 ರನ್​ಗಳೊಂದಿಗೆ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ…

Read More

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ಗುಜರಾತ್ ಜೈಂಟ್ಸ್ ತಂಡದಿಂದ 210 ರನ್​ಗಳ ಗುರಿ… ಕೊನೆಯ ಮೂರು ಓವರ್​ಗಳಲ್ಲಿ 48 ರನ್​ಗಳ ಅವಶ್ಯಕತೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು 18ನೇ ಓವರ್​ನಲ್ಲಿ ಕಲೆಹಾಕಿದ್ದು ಬರೋಬ್ಬರಿ 19 ರನ್​​ಗಳು. 19ನೇ ಓವರ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್​ಗಳಿಂದ ಮೂಡಿಬಂದ ಸ್ಕೋರ್​ ಬರೋಬ್ಬರಿ 22 ರನ್​​ಗಳು. ಅದರಂತೆ ಅಂತಿಮ ಓವರ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೇವಲ 7 ರನ್​​ಗಳ ಅವಶ್ಯಕತೆ. ಕ್ರೀಸ್​ನಲ್ಲಿದದ್ದು ಲಾರಾ ವುಲ್​ಫರ್ಟ್ ಹಾಗೂ ಜೆಮಿಮಾ ರೊಡ್ರಿಗಸ್. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಖಚಿತ ಎಂದೇ ಎಲ್ಲರೂ ಭಾವಿಸಿದ್ದರು….

Read More

ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಓರ್ವ ಸಾವು

ಮಂಡ್ಯ , ಏಪ್ರಿಲ್ 06: ಕ್ಷುಲ್ಲಕ ಕಾರಣಗಳು ಹಾಗೂ ಆಸ್ತಿ ವಿವಾದಗಳಿಂದ ಮಂಡ್ಯದಲ್ಲಿ (Mandya) ಎರಡು ಪ್ರತ್ಯೇಕ ಹಿಂಸಾತ್ಮಕ ಘಟನೆಗಳು ನಡೆದಿದ್ದು, ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಘಟನೆಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಿ ಸಂಧಾನ ನಡೆಯುತ್ತಿರುವಾಗಲೇ ಮತ್ತೆ ಗಲಾಟೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಸಮೀಪ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಪರಿಣಾಮವಾಗಿ ಮರಳಿಗ ಗ್ರಾಮದ ಯಶವಂತ್…

Read More

Video: ದೂರ ಕುಳಿತು ಮಾತನಾಡಿ, ಮುಖದ ಹತ್ತಿರ ಬಂದು ಮಾತನಾಡಿದ ವ್ಯಕ್ತಿಗೆ ಸಂಸದೆ ಪ್ರಿಯಾ ಖಡಕ್ ರಿಯಾಕ್ಷನ್ – Kannada News | Awkward Moment on Stage: MP Priya Saroj Steps Back as Supporter Breaches Personal Space

ಲಕ್ನೋ, ಜನವರಿ 22: ಸಮಾಜವಾದಿ ಪಕ್ಷದ ಸಂಸದೆ ಹಾಗೂ ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ಮದುವೆಯಾಗಲಿರುವ ಪ್ರಿಯಾ ಸರೋಜ್ ವೇದಿಕೆ ಕಾರ್ಯಕ್ರಮವೊಂದರಲ್ಲಿ ಇರಿಸುಮುರಿಸು ಅನುಭವಿಸಿರುವ ವಿಡಿಯೋ ವೈರಲ್ ಆಗಿದೆ. ವೇದಿಕೆಯಲ್ಲಿ ಖಾಲಿ ಇದ್ದ ಖುರ್ಚಿಯಲ್ಲಿ ವ್ಯಕ್ತಿಯೊಬ್ಬರು ಬಂದು ಕುಳಿತು ಪ್ರಿಯಾ ಅವರ ಮುಖದ ಹತ್ತಿರ ತಮ್ಮ ಮುಖ ತಂದು ಮಾತನಾಡಿದ್ದು, ಪ್ರಿಯಾ ಅವರ ಕೋಪಕ್ಕೆ ಕಾರಣವಾಗಿದೆ. ಕೂಡಲೇ ಪ್ರಿಯಾ ಸ್ವಲ್ಪ ಪಕ್ಕಕ್ಕೆ ಸರಿದು ದೂರದಿಂದ ಮಾತನಾಡಿ ಎಂದು ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಘಟನೆ…

Read More

ದೇವನಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಬೆಂಕಿ, ಪ್ರಯಾಣಿಕರು ಪಾರು!

ದೇವನಹಳ್ಳಿ,ಮಾ.31: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮಂಗಳವಾರ (ಮಾ.31) ನಡೆದಿದೆ. ಕಾರು ಹೆದ್ದಾರಿಯಲ್ಲಿ ವೇ ಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಹೆದ್ದಾರಿ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅವರು ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರು ಬೆಂಕಿಗಾಹುತಿಯಾಗಿದೆ. ಇನ್ನು ಇದನ್ನು…

Read More