ಆಸ್ಕರ್ 2026 ಸಮಾರಂಭ: ಎಲ್ಲಿ ವೀಕ್ಷಿಸಬಹುದು? ಭಾರತದಲ್ಲಿ ಟೆಲಿಕಾಸ್ಟ್ ಯಾವಾಗ?

ಆಸ್ಕರ್ 2026 ಸಮಾರಂಭ: ಎಲ್ಲಿ ವೀಕ್ಷಿಸಬಹುದು? ಭಾರತದಲ್ಲಿ ಟೆಲಿಕಾಸ್ಟ್ ಯಾವಾಗ?

ಸಿನಿಮಾ (Cinema) ಲೋಕದ ಅತ್ಯುನ್ನತ ಪ್ರಶಸ್ತಿ ಎಂದೇ ಪರಿಗಣಿಸಲ್ಪಡುವುದು ಆಸ್ಕರ್ ಅಥವಾ ಅಕಾಡೆಮಿ ಪ್ರಶಸ್ತಿ. ಈ ವರ್ಷದ ಆಸ್ಕರ್ಸ್ (Oscars 2026) ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಲಿವುಡ್‌ನ ಲಾಸ್ ಏಂಜಲ್ಸ್​​ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿರುವ ಈ ವರ್ಣರಂಜಿತ ಕಾರ್ಯಕ್ರಮವನ್ನು ಕಣ್ಣುಂಬಿಕೊಳ್ಳಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಭಾರತೀಯ ಸಿನಿಮಾ ಪ್ರೇಮಿಗಳಿಗೂ ಸಹ ಆಸ್ಕರ್​ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಆಸ್ಕರ್ಸ್ ಅನ್ನು ಭಾರತೀಯರು ಎಲ್ಲಿ ನೋಡಬಹುದು? ಯಾವ ಸಮಯಕ್ಕೆ ನೋಡಬಹುದು? ಮಾಹಿತಿ ಇಲ್ಲಿದೆ…

ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಮಾರ್ಚ್ 15ರ ಸಂಜೆ ಈ ಸಮಾರಂಭ ನಡೆಯಲಿದೆ. ಆದರೆ ಭಾರತ ಮತ್ತು ಅಮೆರಿಕದ ನಡುವಿನ ಸಮಯದ ವ್ಯತ್ಯಾಸದಿಂದಾಗಿ, ಭಾರತೀಯ ಪ್ರೇಕ್ಷಕರು ಮಾರ್ಚ್ 16ರ ಸೋಮವಾರ ಮುಂಜಾನೆ ಈ ಕಾರ್ಯಕ್ರಮವನ್ನು ವೀಕ್ಷಿಸಬೇಕಾಗುತ್ತದೆ. ಮಾರ್ಚ್ 16ರ ಸೋಮವಾರ ಮುಂಜಾನೆ ಭಾರತೀಯ ಕಾಲಮಾನ 5:30ಕ್ಕೆ ರೆಡ್ ಕಾರ್ಪೆಟ್ ಸಂಭ್ರಮ ಆರಂಭವಾಗಲಿದ್ದು, 6:30ರಿಂದ ಅಧಿಕೃತ ಪ್ರಶಸ್ತಿ ಪ್ರದಾನ ಸಮಾರಂಭ ಶುರುವಾಗಲಿದೆ.

ಭಾರತದಲ್ಲಿ ಆಸ್ಕರ್ ಪ್ರಸಾರದ ಅಧಿಕೃತ ಹಕ್ಕನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ (Disney+ Hotstar) ಹೊಂದಿದೆ. ಹಾಟ್‌ಸ್ಟಾರ್ ಚಂದಾದಾರರು ಮೊಬೈಲ್ ಅಥವಾ ಸ್ಮಾರ್ಟ್ ಟಿವಿಯಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಸ್ಟಾರ್ ನೆಟ್‌ವರ್ಕ್‌ನ ಇಂಗ್ಲಿಷ್ ಎಂಟರ್‌ಟೈನ್‌ಮೆಂಟ್ ಚಾನೆಲ್‌ಗಳಾದ ಸ್ಟಾರ್ ವರ್ಲ್ಡ್ ಅಥವಾ ಸ್ಟಾರ್ ಮೂವೀಸ್ ನಲ್ಲಿ ಈ ಕಾರ್ಯಕ್ರಮ ಪ್ರಸಾರವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:’ಜನ ನಾಗಯನ್‘ ಸಿನಿಮಾ: ಯಶಸ್ವಿಯಾಯ್ತು ವಿಜಯ್ ರಾಜಕೀಯ ವಿರೋಧಿಗಳ ಪ್ಲ್ಯಾನ್

ಈ ಬಾರಿಯ ಆಸ್ಕರ್ ವೇದಿಕೆಯನ್ನು ಜನಪ್ರಿಯ ಹಾಸ್ಯನಟ ಮತ್ತು ಟಾಕ್ ಶೋ ನಿರೂಪಕ ಕೋನನ್ ಒ’ಬ್ರಿಯಾನ್ ನಿರೂಪಣೆ ಮಾಡಲಿದ್ದಾರೆ. ಭಾರತದ ಯಾವುದೇ ಸಿನಿಮಾಗಳು ಈ ಬಾರಿ ಆಸ್ಕರ್​ಸ್ ರೇಸಿನಲ್ಲಿ ಇಲ್ಲವಾದರೂ ನಟಿ ಪ್ರಿಯಾಂಕಾ ಚೋಪ್ರಾ ಅವರು ಈ ಬಾರಿ ಪ್ರಶಸ್ತಿ ಪ್ರದಾನ ಮಾಡಲಿರುವುದು ವಿಶೇಷ. ಈ ವರ್ಷ ‘ಒನ್ ಬ್ಯಾಟಲ್ ಆಫ್ಟರ್ ಅನದರ್’, ‘ಸಿನ್ನರ್ಸ್’ ಇನ್ನೂ ಕೆಲವು ದೊಡ್ಡ ಸಿನಿಮಾಗಳು ಈ ಬಾರಿ ಸ್ಪರ್ಧೆಯಲ್ಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೀದರ್‌ನ ಅಷ್ಟೂರು ಜಾತ್ರೆ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತ: ಜಾತ್ರೆಯ ವಿಶೇಷತೆ ತಿಳಿಯಿರಿ

ಬೀದರ್​​, ಮಾರ್ಚ್​​ 15: ಹಿಂದೂ-ಮುಸ್ಲಿಂ ಧಾರ್ಮಿಕ ಸಾಮರಸ್ಯದ ಸಂಕೇತವಾದ ಬೀದರ್​​​ ಅಷ್ಟೂರು ಜಾತ್ರೆ (Astur Jatre) ಅದ್ಧೂರಿಯಾಗಿ ನಡೆಯುತ್ತಿದೆ. ಹಿಂದೂ-ಮುಸ್ಲಿಂ ಭೇದ ಭಾವ ಮರೆತು ಶತಮಾನಗಳಿಂದ ವಿಜೃಂಭಣೆಯಿಂದ ಹಿಂದೂಗಳು ಅಲ್ಲಮಪ್ರಭು ಎಂದು ಮುಸ್ಲಿಂರು ಅಹೆಮದ್ ಶಾ ವಲಿ ಎಂದು ಪೂಜಿಸುತ್ತಾರೆ. ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಗೆ ಜನಸಾಗರವೆ ಹರಿದು ಬರುತ್ತದೆ.

ದೇವನೂಬ್ಬ ನಾಮ ಹಲವು ಎಂಬಂತೆ ಬೀದರ್ ನಗರಕ್ಕೆ ಸಮೀಪದ ಅಷ್ಟೂರ ಗ್ರಾಮದ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್‌ಗಳು ಹಿಂದೂ ಹಾಗೂ ಮುಸ್ಲಿಂ ಸಹೋದರತ್ವ ಸಾರುವ ಪ್ರತೀಕಗಳಾಗಿವೆ. ಈ ದರ್ಗಾದಲ್ಲಿ ಮುಸ್ಲಿಂಮರಿಗೆ ಅಹ್ಮದ ಶಾ ಅಲಿ ವಲಿ ಆರಾಧ್ಯ ದೈವವಾದರೆ, ಹಿಂದೂಗಳಿಗೆ ಅಲ್ಲಮಪ್ರಭುವಾಗಿ ಪೂಜೆ ಪಡೆಯುವುದು ವಿಶೇಷ. ಹಿಂದೂ-ಮುಸ್ಲಿಂ ಭಾವೈಕ್ಯದಲ್ಲಿ ನಂಬಿಕೆಯಿಟ್ಟಿದ್ದ ಅಹ್ಮದ್ ಶಾ ಅಲಿ ಬಹಮನಿ ಅವರ ಜನ್ಮದಿನದಂದು ಗೋರಿಯ ಗುಂಬಜ್‌ಗೆ ತೆರಳುವ ಸಾವಿರಾರು ಜನರು ಭಕ್ತಿ ಸಮರ್ಪಣೆ ಮಾಡುವುದು ಹಲವು ಶತಮಾನಗಳಿಂದ ನಡೆದು ಬಂದಿದೆ.

ಇದನ್ನೂ ಓದಿ: ಬೀದರ್​​ನ​ ಬಿದ್ರಿ ಕಲೆಗೂ ತಟ್ಟಿದ ಯುದ್ಧದ ಬಿಸಿ: ವಿದೇಶಿ ವಹಿವಾಟು ಕುಸಿತ; ಸಂಕಷ್ಟದಲ್ಲಿ ಕಲಾವಿದರು

ಅಷ್ಟೂರಿನ ಅಲ್ಲಮಪ್ರಭು ದೇವರು ಜಗತ್ತಿಗೆ ಸಹೋದರತೆ, ಸಮಾನತೆಯೊಂದಿಗೆ ಸತ್ಯ ಶುದ್ಧ ಕಾಯಕ ಮತ್ತು ದಾಸೋಹದಂತಹ ಮಹಾನ್ ತತ್ವಗಳನ್ನು ಸಾರಿದ ಶರಣರು. ಅವರಸ್ಮರಣೆಯಲ್ಲೇ ಪ್ರತಿವರ್ಷ ಜಾತ್ರೆ ನಡೆಯುತ್ತದೆ. ರಾಜ್ಯ, ಆಂದ್ರಪ್ರದೇಶ ಮತ್ತು ಮಹಾರಾಷ್ಟ್ರಗಳಿಂದ ಸಾವಿರಾರು ಯಾತ್ರಾರ್ಥಿಗಳು, ಪ್ರವಾಸಿಗರು ನಿತ್ಯ ಇಲ್ಲಿಗೆ ಆಗಮಿಸಿ ದರ್ಗಾಕ್ಕೆ ಹೂವಿನ ಚಾದರ್ ಸಮರ್ಪಿಸುತ್ತಾರೆ. ಅಗರಬತ್ತಿ ಹಚ್ಚಿ ಪೂಜಿಸಿ, ಪ್ರಾರ್ಥಿಸಿ ಅಹ್ಮದ್ ಶಾಹ್‌ಗೆ ನಮಿಸುತ್ತಾರೆ. ಇಲ್ಲಿ ಹಿಂದೂಗಳು ಅಲ್ಲಮಪ್ರಭು ಗುಡಿ ಎಂದೂ, ಮುಸ್ಲಿಮರು ವಲಿ ದರ್ಗಾ ಎಂದೂ ಪರಿಗಣಿಸುವ ಅಹ್ಮದ್ ಶಾಹ್‌ನ ಸಮಾಧಿ ಅಪರೂಪದ ಭಾವೈಕ್ಯತೆಯ ತಾಣಗಳಲ್ಲೊಂದು ಎಂದು ಭಕ್ತರಾದ ಬಸವರಾಜ್​​ ಅವರ ಮಾತು.

ಐದು ದಿನಗಳ ಅದ್ಧೂರಿ ಜಾತ್ರೆ

ಅಷ್ಟಕ್ಕೂ ಈ ದರ್ಗಾದ ಜಾತ್ರೆಗೆ ಚಾಲನೆ ನೀಡುವವರು ಪಕ್ಕದ ಗುಲ್ಬರ್ಗ ಜಿಲ್ಲೆಯ ಮಾಡಿಹಾಳ್ ಮತ್ತು ಆಳಂದನ ಅಲ್ಲಮಪ್ರಭು ಮಹಾರಾಜರೆಂದೇ ಗುರುತಿಸಿಕೊಂಡಿರುವ ಗುರುಗಳು. ಪ್ರತಿ ವರ್ಷ ಹೋಳಿ ಹಬ್ಬದ ನಂತರ ನಡೆಯುವ ಜಾತ್ರೆಯ ಈ ಸಂದರ್ಭದಲ್ಲಿ ಕಾಲ್ನಡಿಗೆಯಲ್ಲಿಯೇ ಆಗಮಿಸುವ ಗುರುಗಳು ದರ್ಗಾ ಮುಂದೆ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡುತ್ತಾರೆ. ಐದು ದಿನಗಳವರೆಗೆ ನಡೆಯುವ ಈ ಜಾತ್ರೆಯಲ್ಲಿ ಪಟಾಕಿ ಸಿಡಿಸುವುದು ಮತ್ತು ಅಂತಾರಾಜ್ಯ ಕುಸ್ತಿ ಸ್ಪರ್ಧೆ ಏರ್ಪಡಿಸುವುದು ತಲೆತಲಾಂತರಗಳಿಂದ ನಡೆದು ಬಂದ ಸಂಸ್ಕೃತಿ.

ದರ್ಗಾ ಮುಂದೆ ಭಕ್ತರು ಎಣ್ಣೆ ದೀಪ ಹಚ್ಚಿ ಭಕ್ತಿ ಸಮರ್ಪಿಸುತ್ತಾರೆ. ಬೀದರ್‌ನಿಂದ 3 ಕಿಮೀ ದೂರದ ಅಷ್ಟೂರು ಗ್ರಾಮ ಪ್ರವೇಶಿಸುವ ಮುನ್ನವೇ ಬಹಮನಿ ಅರಸರ ಗೋರಿಗಳ ಸಾಲು ನೋಡಲು ಸಿಗುತ್ತದೆ. ಇಲ್ಲಿ ಅಲ್ಲಾವುದ್ದಿನ್ ಗೋರಿ, ಸಿಡಿಲ ಹೊಡೆತಕ್ಕೆ ಸಿಲುಕಿ ಅರ್ಧ ಕುಸಿದಿರುವ ಹುಮಾಯೂನ್ ಸಮಾಧಿ, ಅದರ ಪಕ್ಕದಲ್ಲಿಯೇ ಇರುವ ಮಕ್ದುಮ್ ಏ ಜಹಾನ್, ನರ್ಗಿಸ್ ಬೇಗಂ, ನಿಜಾಮ್ ಶಾಹ, ಮಹಮೂದ ಶಾಹ ಬಹಮನಿ, ಮೊಹಮ್ಮದ ಶಾ ಬಹಮನಿ, ಅಹಮದ್ ಶಾ ಬಹಮನಿ, ಅಲ್ಲಾಮುದ್ದೀನ್ ಶಾಹ ಬಹಮನಿ, ವಲಿವುಲ್ಲಾ ಶಾಹ ಬಹಮನಿ, ಖಲೀಮಲ್ಲಾ ಶಾಹ ಬಹಮನಿ ಗೋರಿಗಳಿವೆ. ಅಹಮದ್ ಶಾಹ್‌ನ ಈ ಗೋರಿ ಮೇಲ್ಭಾಗದಲ್ಲಿ ಅಂದರೆ ಗುಂಬಜಿನ ಒಳಭಾಗದಲ್ಲಿ ಚಿನ್ನದ ಲೇಪನ ಹಾಗೂ ವೈವಿಧ್ಯಮಯ ಬಣ್ಣ ಬಳಸಿದ್ದು ಆಕರ್ಷಕವಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತದೆ.

ಇದನ್ನೂ ಓದಿ: ಕಾರ್ಖಾನೆಗಳಿಗೆ ಸಿಹಿ ಕೊಟ್ಟ ಅನ್ನದಾತರ ಬಾಯಿಗೆ ಕಹಿ: ಸಂಕಷ್ಟಕ್ಕೆ ಸಿಲುಕಿದ ಬೀದರ್ ಕಬ್ಬು ಬೆಳೆಗಾರರು

ಕೇಂದ್ರ ಸರ್ಕಾರದ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ವ್ಯಾಪ್ತಿಗೆ ಈ ಗುಂಬಜ್‌ಗಳು ಬರುತ್ತಿವೆ. ಪ್ರವಾಸಿ ತಾಣಗಳನ್ನಾಗಿಸುವುದಷ್ಟೇ ಅಲ್ಲದೆ ಪುರಾತನ ಸ್ಮಾರಕ ಸ್ಥಳಗಳನ್ನು ಸಂರಕ್ಷಿಸುವಲ್ಲಿ ವಿಶೇಷ ಆಸಕ್ತಿ ವಹಿಸಲಾಗುತ್ತಿದೆ. ಹೀಗಾಗಿ ಇಲ್ಲಿನ ಜಾತ್ರೆ ಹಿಂದೂ-ಮುಸ್ಲಿಮರು ಒಂದಾಗಿ ಆಚರಣೆ ಮಾಡುವುದರಿಂದ ಈ ಜಾತ್ರೆಗೆ ವಿಶೇಷವಾದ ಸ್ಥಾನ ಬಂದಿದೆ.

ಜಿಲ್ಲಾಡಳಿತ ನಿರ್ಲಕ್ಷ ಆರೋಪ

ಪ್ರತಿವರ್ಷ ಹೂಳಿಹುಣ್ನಿಮೆಯ ನಂತರ ನಡೆಯುವ ಈ ಜಾತ್ರೆ ಹಲವಾರು ವಿಶೇಷತೆಯನ್ನೊಳಗೊಂಡಿದೆ. ಇಲ್ಲಿನ ಹಿಂದೂ-ಮುಸ್ಲಿಂ ಭಾವೈಕತೆಯೆ ಜಾತ್ರೆಗೆ ನೂರಾರು ಹಿಂದೂ-ಮುಸ್ಲಿಂ ಎರಡು ಮೂರು ದಿನವಿದ್ದು ಜಾತ್ರೆ ಮಾಡಿ ಹೊಗುತ್ತಾರೆ. ಆದರೆ ಜಿಲ್ಲಾಡಳಿತ ಮಾತ್ರ ಈ ಜಾತ್ರೆಯನ್ನ ನಿರ್ಲಕ್ಷ ಮಾಡುತ್ತಿದ್ದು, ಜಾತ್ರೆಗೆ ಬರುವ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯವನ್ನ ಕಲ್ಪಿಸಿಲ್ಲ. ಹಿಂದೂ-ಮುಸ್ಲಿಂ ಭಾವಕೈತೆಯ ಈ ಜಾತ್ರೆಗೆ ಜಿಲ್ಲಾಡಳಿತದ ಸಹಕಾರ ಬೇಕಾಗಿದೆ ಎಂದು ಇಲ್ಲಿನ ಭಕ್ತರ ಆಸೆಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕದ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ

Source link

ರಾಧಿಕಾ ಪಂಡಿತ್ ಬರ್ತಡೇ ಪಾರ್ಟಿ: ಇಲ್ಲಿದೆ ನೋಡಿ ವಿಡಿಯೋ

ಯಶ್ ಪತ್ನಿ ನಟಿ ರಾಧಿಕಾ ಪಂಡಿತ್ (Radhika Pandit) ಅವರ ಹುಟ್ಟುಹಬ್ಬ ಇತ್ತೀಚೆಗಷ್ಟೆ ಇತ್ತು. ತಮ್ಮ ಹುಟ್ಟುಹಬ್ಬದಂದು ರಾಧಿಕಾ ಪಂಡಿತ್ ಅವರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಟ್ಟಿಗೆ ಸೆಲ್ಫಿಗಳನ್ನು ತೆಗೆಸಿಕೊಂಡರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿ ಖುಷಿ ಪಟ್ಟರು. ಅದೇ ದಿನ ರಾಧಿಕಾ ಪಂಡಿತ್ ಅವರಿಗಾಗಿ ನಟ ಯಶ್ ಅದ್ಧೂರಿ ಬರ್ತ್​​ಡೇ ಪಾರ್ಟಿ ಸಹ ಆಯೋಜನೆ ಮಾಡಿದ್ದರು. ಪಾರ್ಟಿಯಲ್ಲಿ ಕೆವಿಎನ್ ನಿರ್ಮಾಣ ಸಂಸ್ಥೆಯ ವೆಂಕಟ್ ನಾರಾಯಣ್, ನಲಪಾಡ್ ಸೇರಿದಂತೆ ಚಿತ್ರರಂಗದ ಗಣ್ಯರು ಹಾಗೂ ಯಶ್ ಹಾಗೂ ರಾಧಿಕಾ ಅವರ ಸ್ನೇಹಿತರು ಕುಟುಂಬದವರು ಭಾಗವಹಿಸಿದ್ದರು. ಇಲ್ಲಿದೆ ನೋಡಿ ಪಾರ್ಟಿಯ ಕ್ಯೂಟ್ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

LPG ಸಿಲಿಂಡರ್​​ ಸಮಸ್ಯೆಗೆ ತಲ್ಲಣಿಸಿದ ಹೋಟೆಲ್​ ಉದ್ಯಮ: ಐದೇ ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!

ಬೆಂಗಳೂರು, ಮಾರ್ಚ್​​ 15: ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಕರ್ನಾಟಕದಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗಿದೆ. ಅದರಲ್ಲೂ ಹೋಟೆಲ್​​ ಉದ್ಯಮವಂತೂ ಇದರಿಂದ ಬಹಳ ಸಮಸ್ಯೆಗೆ ಸಿಲುಕಿದ್ದು, ಹಲವೆಡೆ ರೆಸ್ಟೋರೆಂಟ್​​ಗಳು ಬಂದ್​​ ಆಗಿದ್ದರೆ, ಇನ್ನು ಕೆಲ ಹೋಟೆಲ್​​ಗಳು ಮೆನುವಿನಿಲ್ಲಿ ಭಾರಿ ಕಡಿತ ಮಾಡಿ ಗ್ರಾಹಕರಿಗೆ ಸೇವೆ ಒದಗಿಸುತ್ತಿವೆ. ಇದೆಲ್ಲದರ ಪರಿಣಾಮ ಎಂಬಂತೆ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ಕಳೆದ 5 ದಿನಗಳಲ್ಲಿ 100 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದ್ದು, ಹೋಟೆಲ್​​ಗಳ ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಟ್ಯಾಕ್ಸ್ ವಿನಾಯತಿಗೆ ಸರ್ಕಾರಕ್ಕೆ ಮನವಿ

ಬೆಂಗಳೂರಿನಲ್ಲಿ ಸರಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್​ಗಳಿದ್ದು, ಈ ಪೈಕಿ 4,500 ಹೋಟೆಲ್​​ಗಳು ರಿಜಿಸ್ಟರ್​​ ಆಗಿವೆ. ಇವೆಲ್ಲವೂ ಕೂಡ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದ ಸಮಸ್ಯೆಗೆ ಸಿಲುಕಿದ್ದು, ನಷ್ಟ ಅನುಭವಿಸುತ್ತಿವೆ. ಹೀಗಾಗಿ ಟ್ಯಾಕ್ಸ್ ವಿನಾಯತಿ ನೀಡುವಂತೆ ಹೋಟೆಲ್ ಮಾಲೀಕರ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ . ಪ್ರಾಪರ್ಟಿ ತೆರಿಗೆ ಸೇರಿ ಎಲ್ಲ ವಿಧದ ಟ್ಯಾಕ್ಸ್​​ನಿಂದ ಶೇ.20ರಿಂದ 25ರಷ್ಟು ವಿನಾಯಿತಿ ನೀಡುವಂತೆ ಕೋರಲಾಗಿದೆ. ಇನ್ನು ನಾಳೆಯಿಂದ ರಾಜ್ಯದ ಹೋಟೆಲ್​​ಗಳಿಗೆ ಶೇ.20ರಷ್ಟು LPG ಸಿಲಿಂಡರ್ ಪೂರೈಕೆಯಾಗಲಿದೆ ಎಂದು ಕೇಂದ್ರದಿಂದ ಸೂಚನೆ ಬಂದಿದ್ದು, ಇದು ನೆರವೇರಿದ್ದೇ ಆದಲ್ಲಿ ಹೋಟೆಲ್ ಉದ್ಯಮ ಕೊಂಚ ಉಸಿರಾಡಬಹುದು ಎಂದು ಆಹಾರೋದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಎಲ್​ಪಿಜಿ ಪೂರೈಕೆ ನಿಯಮದಲ್ಲಿ ಬದಲಾವಣೆ; ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ

ಹಬ್ಬದ ಹೋಳಿಗೆ ತಯಾರಿಗೂ ಸಿಗ್ತಿಲ್ಲ LPG ಸಿಲಿಂಡರ್​​

ಇನ್ನೇನು ಯುಗಾದಿ ಹಬ್ಬ ಸಮೀಪಿಸುತ್ತಿದ್ದು ಹೋಳಿಗೆಗೆ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಸಿಲಿಂಡರ್​​ಗಳ ಕೊರತೆ ಇವುಗಳ ತಯಾರಿ ಮೇಲೆಯೂ ಪ್ರಭಾವ ಬೀರಿದೆ. ವೆರೈಟಿ ಹೋಳಿಗೆ ತಯಾರಿಸುವ ಬಹುತೇಕ ಹೋಳಿಗೆ ಮನೆಗಳು ಬಂದ್​​ ಆಗಿದ್ದು, ಸಂಪಿಗೆ ರಸ್ತೆಯ ಹಳ್ಳಿಮನೆ ಹೋಟೆಲ್ ಹಬ್ಬದ ಹೋಳಿಗೆ ತಯಾರಿಸಲು ಸೌದೆ ಒಲೆ ಮೊರೆ ಹೋಗಿರುವ ದೃಶ್ಯ ಕಂಡುಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

2 ಐಸಿಸಿ ಫೈನಲ್‌ಗಳಲ್ಲಿ ಭಾರತವನ್ನು ಮಣಿಸಿದ್ದ ಪಾಕ್ ಮಾಜಿ ನಾಯಕ ಕ್ರಿಕೆಟ್​ಗೆ ವಿದಾಯ

Source link

ಏಪ್ರಿಲ್ 1ರಿಂದ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಶುಲ್ಕದಲ್ಲಿ ಏರಿಕೆ; ಇಲ್ಲಿದೆ ಹೊಸ ದರ

ನವದೆಹಲಿ, ಮಾರ್ಚ್ 15: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 2026-27ರ ಹಣಕಾಸು ವರ್ಷಕ್ಕೆ ಫಾಸ್​ಟ್ಯಾಗ್ ಶುಲ್ಕವನ್ನು (FASTag annual pass) ಪರಿಷ್ಕರಿಸಿದೆ. ಕಮರ್ಷಿಯಲ್ ಅಲ್ಲದ ವಾಹನಗಳ ವಾರ್ಷಿಕ ಫಾಸ್​ಟ್ಯಾಗ್ ಪಾಸ್ ಶುಲ್ಕದಲ್ಲಿ ಅಲ್ಪ ಏರಿಕೆ ಆಗಿದೆ. ಖಾಸಗಿ ಕಾರುಗಳು, ಜೀಪ್, ವ್ಯಾನ್​ಗಳ ಮಾಲೀಕರು ವಾರ್ಷಿಕ ಪಾಸ್​ನ ಬೆಲೆ 3,000 ರೂನಿಂದ 3,075 ರೂಗೆ ಏರಿಸಲಾಗಿದೆ. ಮುಂಬರುವ ಹಣಕಾಸು ವರ್ಷದಿಂದ, ಅಂದರೆ 2026ರ ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರುತ್ತವೆ.

2025ರಲ್ಲಿ ಸ್ವಾತಂತ್ರ್ಯೋತ್ಸವ ದಿನದಂದು ಫಾಸ್​ಟ್ಯಾಗ್ ವಾರ್ಷಿಕ ಪಾಸ್​ನ ಸ್ಕೀಮ್ ಆರಂಭವಾಯಿತು. ನಾನ್-ಕಮರ್ಷಿಯಲ್ ಬಳಕೆಗೆ ನೊಂದಾಯಿಸಲಾದ ಖಾಸಗಿ ವಾಹನಗಳ ಮಾಲೀಕರಿಗೆ ಅನುಕೂಲವಾಗಲೆಂದು ಈ ಯೋಜನೆ ಚಾಲನೆಗೆ ತರಲಾಗಿದೆ. ಹೆದ್ದಾರಿಯಲ್ಲಿ ಹೆಚ್ಚೆಚ್ಚು ಓಡಾಡುವ ಇಂಥ ವಾಹನ ಮಾಲೀಕರಿಗೆ ವಾರ್ಷಿಕ ಪಾಸ್ ಬಹಳ ಅನುಕೂಲವಾಗುತ್ತದೆ.

ಇದನ್ನೂ ಓದಿ: Salary Hike: ಸರ್ಕಾರಿ ಉದ್ಯೋಗಿಗಳಿಗೆ ಶೇ 35ರಷ್ಟು ವೇತನ ಏರಿಕೆಯಾ?

ವಾರ್ಷಿಕ್ ಫಾಸ್​ಟ್ಯಾಗ್ ಪಾಸ್ ಪಡೆದರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ 200 ಬಾರಿ ಟೋಲ್ ಪ್ಲಾಜಾದಲ್ಲಿ ಪ್ರವೇಶ ಪಡೆಯಬಹುದು. ಈ ಪಾಸ್ ಒಂದು ವರ್ಷ ಸಿಂಧು ಇರುತ್ತದೆ. ಯಾವುದೇ ಟೋಲ್ ಪ್ಲಾಜಾ ಆದರೂ ಉಚಿತವಾಗಿ ಹಾದು ಹೋಗಬಹುದು. ಕೆಲ ಟೋಲ್ ಪ್ಲಾಜಾಗಳಲ್ಲಿ ದರ ಹೆಚ್ಚಿರಲಿ, ಅಥವಾ ಕಡಿಮೆ ಇರಲಿ, ಅದು ಈ ವಾರ್ಷಿಕ ಪಾಸ್​ನಲ್ಲಿ ಗಣನೆಗೆ ಬರುವುದಿಲ್ಲ. ಒಂದು ವರ್ಷದೊಳಗೆ ಹಾದು ಹೋಗುವ ಟೋಲ್ ಪ್ಲಾಜಾಗಳ ಸಂಖ್ಯೆ 200 ದಾಟುವಂತಿಲ್ಲ.

ವಾರ್ಷಿಕ ಪಾಸ್ ಪಡೆದರೆ ಪದೇ ಪದೇ ಫಾಸ್​ಟ್ಯಾಗ್ ರೀಚಾರ್ಜ್ ಮಾಡುವುದು ತಪ್ಪುತ್ತದೆ. ಈ ಪಾಸ್ ಸ್ಕೀಮ್ ಆರಂಭವಾಗಿ ಇನ್ನೂ ಒಂದು ವರ್ಷ ಆಗಿಲ್ಲ, ಆಗಲೇ ಸಾಕಷ್ಟು ಜನಬಳಕೆ ಪಡೆಯುತ್ತಿದೆ. 50 ಲಕ್ಷಕ್ಕೂ ಹೆಚ್ಚು ಜನರು ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಖರೀದಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ಕಾರುಗಳ ಶೇ. 20ರಷ್ಟು ಟೋಲ್ ಟ್ರಾನ್ಸಾಕ್ಷನ್​ಗಳು ವಾರ್ಷಿಕ ಪಾಸ್ ಬಳಸಿ ಆಗುತ್ತಿವೆ ಎಂದು ದತ್ತಾಂಶಗಳು ಹೇಳುತ್ತವೆ.

ಇದನ್ನೂ ಓದಿ: ಪ್ಲೇಸ್ಟೋರ್​ನಲ್ಲಿ ಚ್ಯಾಟ್​ಜಿಪಿಟಿ, ಫ್ಲಿಪ್​ಕಾರ್ಟ್ ಅನ್ನು ಮೀರಿಸಿದ ಎಲ್​ಪಿಜಿ ಬುಕಿಂಗ್ ಆ್ಯಪ್

ವಾರ್ಷಿಕ ಫಾಸ್​ಟ್ಯಾಗ್ ಪಾಸ್ ಪಡೆಯುವುದು ಹೇಗೆ?

ರಾಜಮಾರ್ಗ್ ಯಾತ್ರಾ ಆ್ಯಪ್ ಹಾಗೂ ಹೆದ್ದಾರಿ ಪ್ರಾಧಿಕಾರ ಮತ್ತು ರಸ್ತೆ ಸಾರಿಗೆ ಸಚಿವಾಲಯದ ಅಧಿಕೃತ ವೆಬ್​ಸೈಟ್​ಗಳಲ್ಲಿ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಅನ್ನು ಪಡೆಯಬಹುದು. ಈ ವೆಬ್​ಸೈಟ್ ಅಥವಾ ಆ್ಯಪ್​ಗೆ ಹೋಗಿ, ಫಾಸ್​ಟ್ಯಾಗ್ ಜೋಡಿತ ಅಕೌಂಟ್, ವಾಹನ ನೊಂದಣಿ ವಿವರ ಮತ್ತು ನೊಂದಾಯಿತ ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಬೇಕು. ವಾರ್ಷಿಕ ಪಾಸ್​ಗೆ ಪೇಮೆಂಟ್ ಮಾಡಿದ ಬಳಿಕ ಅದು ಆ್ಯಕ್ಟಿವೇಟ್ ಆಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಳ್ಳಿಗಳು ಮುಳುಗುವ ಆತಂಕ: ಬಫರ್ ಡ್ಯಾಮ್ ನಿರ್ಮಾಣಕ್ಕೆ ಕೊರಟಗೆರೆಯಲ್ಲಿ ತೀವ್ರ ವಿರೋಧ

ತುಮಕೂರು, ಮಾರ್ಚ್​​ 15: ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡೇರಹಳ್ಳಿ ಗ್ರಾಮದ ಬಳಿ ಎತ್ತಿನಹೊಳೆ ಯೋಜನೆಯ ಭಾಗವಾಗಿ ಬಫರ್ ಡ್ಯಾಮ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸುಮಾರು 1.2 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಈ ಡ್ಯಾಮ್ ನಿರ್ಮಾಣಕ್ಕೆ ಬಜೆಟ್‌ನಲ್ಲಿಯೂ ಅನುಮೋದನೆ ಸಿಕ್ಕಿದೆ. ಆದರೆ ವಡ್ಡೇರಹಳ್ಳಿ ಬಳಿ ಹಾದುಹೋಗುವ ಎತ್ತಿನಹೊಳೆ ನಾಲೆಯ ಬಳಿ 817.50 ಮೀಟರ್ ಎತ್ತರ ಮತ್ತು ಸುಮಾರು 1,440 ಮೀಟರ್ ಉದ್ದದ ಬಫರ್ ಡ್ಯಾಮ್ ನಿರ್ಮಿಸುವ ಈ ಯೋಜನೆ ಹಳ್ಳಿಗಳನ್ನೇ ಮುಳುಗಿಸಬಹುದೆಂಬ ಆತಂಕ ವ್ಯಕ್ತವಾಗಿದ್ದು, ಸರ್ಕಾರದ ನಿರ್ಧಾರಕ್ಕೆ ಸ್ಥಳೀಯ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಸಾಗಿಸಲು ಈ ಡ್ಯಾಮ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸರ್ಕಾರವೇನೋ ಹೇಳಿದೆ. ಆದರೆ ಈಗಾಗಲೇ ನಿರ್ಧರಿಸಿದ್ದ ಬಫರ್ ಡ್ಯಾಮ್ ಯೋಜನೆಯ ಮೂಲ ಸ್ಥಳದ ಬದಲಿಗೆ ವಡೇರಹಳ್ಳಿಯಲ್ಲಿ ಅಣೆಕಟ್ಟು ನಿರ್ಮಾಣದ ಚಿಂತನೆಗೆ ಗ್ರಾಮಸ್ಥರು ಅಸಮಾಧಾನಗೊಂಡಿದ್ದಾರೆ. ಈ ಡ್ಯಾಮ್ ನಿರ್ಮಾಣ ವಿಚಾರ ವಡ್ಡೇರಹಳ್ಳಿ ಸೇರಿದಂತೆ ಕಾಟೇನಹಳ್ಳಿ, ಅಂಕೋನಹಳ್ಳಿ, ನಾಯಕರಪಾಳ್ಯ, ಚೆಣಚೆಹಟ್ಟಿ, ನರಸಾಪುರ ಹಾಗೂ ಗಾಣದಹಟ್ಟಿ ಸೇರಿದಂತೆ ಏಳೆಂಟು ಗ್ರಾಮಗಳ ರೈತರನ್ನು ಆತಂಕಕ್ಕೆ ತಳ್ಳಿದೆ. ಭೂಮಿ ಮತ್ತು ಮನೆಗಳು ಮುಳುಗುವ ಭೀತಿಯಿಂದ ರೈತರು ಯೋಜನೆ ವಿರೋಧಿಸುತ್ತಿದ್ದು, ಪ್ರಾಣ ಬಿಟ್ಟೇವೇ ಹೊರತು ಡ್ಯಾಮ್ ನಿರ್ಮಾಣಕ್ಕೆ ಜಾಗ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ಮತ್ತೊಂಡೆ ಸ್ಥಳೀಯ ಗ್ರಾಮಸ್ಥರ ವಿರೋಧದ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ರೈತರನ್ನು ಕೂರಿಸಿಕೊಂಡು ಮಾತನಾಡುವ ಮುಖಾಂತರ ಸಮಸ್ಯೆ ಬಗೆ ಹರಿಸೊದಾಗಿ ಹೇಳಿದ್ದಾರೆ. ಈ ಹಿಂದೆ ಬಫರ್ ಡ್ಯಾಂ ಬೈರಗೊಂಡನಹಳ್ಳಿಯಲ್ಲಿ ನಿರ್ಮಿಸುವ ಚಿಂತನೆ ನಡೆದಿತ್ತು. ಕೆಲ ಬೆಳವಣಿಗೆ ಬಳಿಕ ದೊಡ್ಡಬಳ್ಳಾಪುರದ ಚರ್ಚೆಯಾಯ್ತು. ನಂತರ ಮತ್ತೆ ಬೈರಗೊಂಡ್ಲುವಿನ್ನಲ್ಲಿ ಮಾಡುವ ಬಗ್ಗೆ ಚರ್ಚೆಯಾದಾಗ ಗ್ರಾಮಸ್ಥರು ವಿರೋಧ ವ್ಯಕ್ತ ಪಡಿಸಿದ್ದರು. ಆರೇಳು ಬಾರಿ ಸಭೆ ಮಾಡಿದರೂ ಗ್ರಾಮಸ್ಥರು ಬೇಡ ಎಂದರು. ಹೀಗಾಗಿ ವಡೇರಹಳ್ಳಿಯಲ್ಲಿ ನಿರ್ಮಾಣ ಮಾಡುವ ನಿರ್ಧಾರ ಮಾಡಲಾಗಿದೆ‌. ಸ್ಥಳೀರನ್ನು ಏನಾದರೂ ಮಾಡಿ ಮನವೊಲಿಸುವ ಮುಖಾಂತರ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸಮಸ್ಯೆ ಬಗೆ ಹರಿಸಲಾಗುವುದು ಎಂದು ತಿಳಿಸಿದ್ದಾರೆ. ಹೀಗಿದ್ದರೂ ಸದ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಬಫರ್ ಡ್ಯಾಮ್ ನಿರ್ಮಾಣ ವಿಚಾರ ಸರ್ಕಾರ ಹಾಗೂ ಗ್ರಾಮಸ್ಥರ ನಡುವಿನ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

RCB: ವಿವಾದದ ನಡುವೆ ಗುಟ್ಟಾಗಿ ಸಪ್ತಪದಿ ತುಳಿದ ಆರ್‌ಸಿಬಿ ವೇಗಿ ಯಶ್ ದಯಾಳ್

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹಾಲಿ ಚಾಂಪಿಯನ್ ಆರ್​ಸಿಬಿ (RCB) ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಆದರೆ ಸೀಸನ್ ಪ್ರಾರಂಭವಾಗುವ ಮೊದಲೇ ಆರ್​ಸಿಬಿ ವೇಗಿ ಯಶ್ ದಯಾಳ್ (Yash Dayal) ಗುಟ್ಟಾಗಿ ವೈವಾವಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಾಸ್ತವವಾಗಿ ಯಶ್ ದಯಾಳ್ ಹುಡುಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾತ್ರವಲ್ಲದೆ ಅವರನ್ನು ಯಾವಾಗ ಬೇಕಾದರೂ ಬಂಧಿಸಿ ಜೈಲಿಗಟ್ಟಬಹುದು. ಹೀಗಿರುವಾಗ ಯಶ್ ದಯಾಳ್ ರಹಸ್ಯವಾಗಿ ಮದುವೆಯಾಗಿ ಎಲ್ಲರಿಗೂ ಶಾಕ್ ನೀಡಿದ್ದಾರೆ.

ಗುಟ್ಟಾಗಿ ನಡೆದ ದಯಾಳ್ ಮದುವೆ

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ. ಯಶ್ ದಯಾಳ್ ಅವರ ವಿವಾಹ ಫೆಬ್ರವರಿ 4 ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿ ನೆರವೇರಿದ್ದು, ಇದೀಗ ಅದರ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿವೆ. ಮದುವೆಯನ್ನು ತುಂಬಾ ರಹಸ್ಯವಾಗಿಡಲಾಗಿದ್ದು, ಎರಡೂ ಕುಟುಂಬಗಳ ಸದಸ್ಯರು ಮಾತ್ರ ಹಾಜರಿದ್ದರು ಎಂದು ವರದಿಯಾಗಿದೆ. ಅಚ್ಚರಿಯ ಸಂಗತಿಯೆಂದರೆ ಯಶ್ ದಯಾಳ್ ತಮ್ಮ ಸ್ನೇಹಿತರನ್ನಾಗಲಿ ಅಥವಾ ಯಾವುದೇ ಕ್ರಿಕೆಟಿಗರನ್ನಾಗಲಿ ತಮ್ಮ ಮದುವೆಗೆ ಆಹ್ವಾನಿಸಿಲ್ಲ. ಯಶ್ ದಯಾಳ್, ವ್ಲಾಗರ್ ಶ್ವೇತಾ ಪುಂಡಿರ್ ಅವರನ್ನು ವರಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ಯಶ್ ದಯಾಳ್ ಅವರ ವೃತ್ತಿಜೀವನದ ವಿಚಾರಕ್ಕೆ ಬರುವುದಾದರೆ.. ಐಪಿಎಲ್‌ನಲ್ಲಿ ಆರ್​ಸಿಬಿ ತಂಡದ ಪರ ಆಡುತ್ತಿರುವ ದಯಾಳ್, ತಂಡದ ಪ್ರಮುಖ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಆದಾಗ್ಯೂ ಈ ಆವೃತ್ತಿಯಲ್ಲಿ ಅವರು ತಂಡದ ಪರ ಆಡುತ್ತಾರೋ, ಇಲ್ಲವೋ ಎಂಬುದು ಖಚಿತವಾಗಿಲ್ಲ. ಏಕೆಂದರೆ ಕಳೆದ ವರ್ಷ ಯುವತಿಯೊಬ್ಬಳು ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆ ಪ್ರಕರಣ ಪ್ರಸ್ತುತ ವಿಚಾರಣೆಯಲ್ಲಿದೆ. ದಯಾಳ್ ಅವರ ವಿರುದ್ಧ ಕೇಳಿ ಬಂದ ಈ ಆರೋಪದಿಂದಾಗಿ ಆರ್​ಸಿಬಿ ಕೂಡ ಮುಜುಗರಕ್ಕೀಡಾಗಬೇಕಾಯಿತು. ಹೀಗಾಗಿ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ದಯಾಳ್​ರನ್ನು ಆರ್​ಸಿಬಿ ಆಡಿಸುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಜಾಮೀನು ಅರ್ಜಿ ವಜಾ; ಆರ್​ಸಿಬಿ ವೇಗಿ ಯಶ್ ದಯಾಳ್​ಗೆ ಬಂಧನ ಭೀತಿ

ದಯಾಳ್ ವಿರುದ್ಧ ಅತ್ಯಾಚಾರದ ಆರೋಪ

ಕಳೆದ ವರ್ಷ ಆರ್‌ಸಿಬಿ ತಂಡದ ಗೆಲುವಿನಲ್ಲಿ ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು. ಆದಾಗ್ಯೂ, ಆರ್‌ಸಿಬಿ ಪ್ರಶಸ್ತಿ ಗೆದ್ದ ಕೆಲವೇ ದಿನಗಳಲ್ಲಿ, ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ದಯಾಳ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ದಯಾಳ್ ಅವರೊಂದಿಗಿನ ಹಳೆಯ ಫೋಟೋಗಳು ಮತ್ತು ಚಾಟ್‌ಗಳನ್ನು ಹಂಚಿಕೊಂಡ ಅವರು, ಮದುವೆಯ ಸುಳ್ಳು ಭರವಸೆ ನೀಡಿ ದಯಾಳ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಇದರ ನಂತರ, ದಯಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದಾಗ್ಯೂ, ಅಲಹಾಬಾದ್ ಹೈಕೋರ್ಟ್ ದಯಾಳ್ ಬಂಧನಕ್ಕೆ ತಡೆ ನೀಡಿತ್ತು.

Source link

Video: ಪುಟ್ಟಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

ಆನೆಗಳ ((elephants) ಆಟ ತುಂಟಾಟ ನೋಡುವುದೇ ಚಂದ. ಎಲ್ಲರಿಗೂ ತಿಳಿದಿರುವಂತೆ ಈ ಆನೆಗಳು  ಭಾವನಾತ್ಮಕ ಜೀವಿಗಳು. ಆನೆಗಳಿಗೆ ಮನುಷ್ಯರು ತುಂಬಾ ಮುದ್ದಾಗಿ ಕಾಣುತ್ತಾರೆಯಂತೆ. ಹೀಗಾಗಿ ಈ ಪ್ರಾಣಿಗಳು ಮನುಷ್ಯರೊಂದಿಗೆ ಬಹುಬೇಗನೇ ಆಪ್ತವಾಗುತ್ತವೆ. ಹೀಗಾಗಿ ಗಜರಾಜನ ಜತೆಗಿನ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿಯೊಂದಿಗೆ ಆನೆಯೊಂದು ಪ್ರೀತಿಯಿಂದ ವರ್ತಿಸಿದೆ. ಹೌದು ಐಸ್ ಕ್ರೀಮ್ ಕೊಟ್ಟ ಬಾಲಕಿಗೆ ಮುತ್ತು ನೀಡಿ ಧನ್ಯವಾದ ತಿಳಿಸಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

primepost07 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟ್ಟ ಹುಡುಗಿಯೊಬ್ಬಳು ಆನೆಗೆ ಐಸ್ ಕ್ರೀಮ್ ಕೊಡುವುದನ್ನು ಕಾಣಬಹುದು. ಐಸ್ ಕ್ರೀಮ್ ಕೊಟ್ಟ ಖುಷಿಗೆ ಆನೆ ಪುಟ್ಟ ಹುಡುಗಿಗೆ ಥ್ಯಾಂಕ್ಸ್ ಹೇಳಿ ಮುತ್ತು ನೀಡಿದೆ. ಪುಟ್ಟ ಹುಡುಗಿಯೂ ಖುಷಿಯಿಂದ ನಕ್ಕಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಮಹಿಳೆಯ ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ ಆನೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ತುಂಬಾನೇ ಮುದ್ದಾಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಐಸ್ ಕ್ರೀಮ್ ಕೊಟ್ಟದ್ದಕ್ಕೆ ಈ ಗಜರಾಜನಿಗೆ ಎಷ್ಟು ಖುಷಿ ನೋಡಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮುಗ್ಧ ಮನಸ್ಸುಗಳ ಶುದ್ಧ ಗೆಳತನ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Exit mobile version