ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಎಲೆಕ್ಷನ್ ವೇಳೆ ಹೈಡ್ರಾಮಾ: ಚುನಾವಣಾ ಅಧಿಕಾರಿಯಿಂದಲೇ ಕಳ್ಳ ಮತದಾನ?
ತುಮಕೂರು, ಮಾರ್ಚ್ 15: ಕುಣಿಗಲ್ ತಾಲೂಕಿನ ಸಂತೆಮಾವತ್ತೂರು ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಚುನಾವಣಾ ಅಧಿಕಾರಿಯೇ ಕಾಂಗ್ರೆಸ್ ಪರ ಫೋರ್ಜರಿ ಮಾಡಿರುವ ಆರೋಪ ಕೇಳಿಬಂದಿದ್ದು, ಜೇಬಿನಲ್ಲಿ ಮತಪತ್ರಗಳನ್ನು ತುಂಬಿಕೊಂಡು ಬಂದು ಮತ ಪೆಟ್ಟಿಗೆಗೆ ಹಾಕಿರೋದಾಗಿ ಜೆಡಿಎಸ್ ದೂರಿದೆ. ಈ ಸಂಬಂಧ ಚುನಾವಣಾಧಿಕಾರಿ ವಿರುದ್ಧ ಕುಣಿಗಲ್ನ ಹುಲಿಯೂರುದುರ್ಗ ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿದ್ದು, ಹೈಡ್ರಾಮಾದ ಬಳಿಕ ಚುನಾವಣೆಯನ್ನೇ ರದ್ದು ಮಾಡಿದ ಪ್ರಸಂಗ ನಡೆದಿದೆ. ಸಂತೆಮಾವತ್ತೂರು ಕೃಷಿ ಪ್ರಾಥಮಿಕ ಪತ್ತಿನ…