PBKS vs RCB: ಐತಿಹಾಸಿಕ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್ – Kannada News | IPL 2026: RCB Dominates PBKS as Kohli, Venkatesh Iyer Shine; Shreyas Iyer’s 100th Match Disappointment

ಐಪಿಎಲ್ 2026 ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 222 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪವರ್​ ಪ್ಲೇನಲ್ಲಿಯೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಅದರಲ್ಲೂ ಐಪಿಎಲ್‌ನಲ್ಲಿ 100ನೇ ಪಂದ್ಯವನ್ನಾಡುತ್ತಿದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್​ಗೆ ಈ ಪಂದ್ಯ ಐತಿಹಾಸಿಕವಾಗಿತ್ತು. ಆದರೆ ಈ ಪಂದ್ಯದಲ್ಲಿ ಅವರು ಕೇವಲ 1 ರನ್ ಬಾರಿಸಿ ಔಟಾದರು.

ಆರಂಭಿಕ ಪ್ರಿಯಾಂಶ್ ಆರ್ಯ, ಭುವಿ ಬೌಲ್ ಮಾಡಿದ ಓವರ್​ನ ಮೂರನೇ ಎಸೆತದಲ್ಲಿ ಖಾತೆ ತೆರೆಯದೆ ಔಟಾದರೆ ಮತ್ತೊಬ್ಬ ಆರಂಭಿಕ ಪ್ರಬ್ಸಿಮಾನ್ಸ್ ಕೂಡ ಭುವಿಗೆ ಬಲಿಯಾದರು. ಹೀಗಾಗಿ ಈ ಎರಡು ಆರಂಭಿಕ ಆಘಾತದ ನಂತರ ಬಂದ ನಾಯಕ ಶ್ರೇಯಸ್ ಅಯ್ಯರ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಮಾತ್ರವಲ್ಲದೆ ಮೇಲೆ ಹೇಳಿದಂತೆ ಅಯ್ಯರ್​ಗೆ ಇದು 100ನೇ ಐಪಿಎಲ್ ಪಂದ್ಯವಾಗಿತ್ತು. ಈ ಮೈಲಿಗಲ್ಲು ಪಂದ್ಯದಲ್ಲಿ ಅಯ್ಯರ್ ಸ್ಮರಣೀಯ ಇನ್ನಿಂಗ್ಸ್ ಆಡುತ್ತಾರೆ ಎಂದು ಎಲ್ಲರು ನಿರೀಕ್ಷಿಸಿದ್ದರು. ಆದರೆ ಅಯ್ಯರ್, ರಸಿಖ್ ಎಸೆದ 4ನೇ ಓವರ್​ನಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚಿತ್ತು ನಿರ್ಗಮಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗನ ‘ಪೆದ್ದಿ’ ಸಿನಿಮಾ ಸೆಟ್​ನಲ್ಲಿ ಅರ್ಧ ಗಂಟೆಯೂ ಇರಲಾಗಲಿಲ್ಲ ಚಿರಂಜೀವಿಗೆ: ಕಾರಣ? – Kannada News | Peddi director said Chiranjeevi could not stay for half hour in Peddi set

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾದ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ರಾಮ್ ಚರಣ್ ಜೊತೆಗೆ ಜಾನ್ಹವಿ ಕಪೂರ್ ನಟಿಸಿದ್ದು, ಸಿನಿಮಾ ಅನ್ನು ನಿರ್​ದೇಶಕ ಬುಚ್ಚಿ ಬಾಬು ಸನಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಪ್ರಚಾರ ಈಗಾಗಲೇ ಆರಂಭವಾಗಿದ್ದು, ಬುಚ್ಚಿ ಬಾಬು ಸನಾ, ಇತ್ತೀಚೆಗಿನ ಸಂದರ್ಶನವೊಂದರಲ್ಲಿ ‘ಪೆದ್ದಿ’ ಸಿನಿಮಾ ಶೂಟಿಂಗ್ ಬಗ್ಗೆ ಮಾತನಾಡಿದ್ದರು. ಆ ವೇಳೆ ಮೆಗಾಸ್ಟಾರ್ ಚಿರಂಜೀವಿ ಅವರು ಸೆಟ್​​ಗೆ ಬಂದಿದ್ದರಾದರೂ ಅವರಿಗೆ ಅರ್ಧ ಗಂಟೆ ಸಹ ಸೆಟ್​​ನಲ್ಲಿ ಇರಲಾಗಲಿಲ್ಲ ಎಂದರು. ಅವರೇ ಕಾರಣವನ್ನೂ ತಿಳಿಸಿದ್ದಾರೆ.

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಕ್ಲೈಮ್ಯಾಕ್ಸ್ ಸೀನ್​ ಶೂಟಿಂಗ್ ವೇಳೆ ನಟ ಮೆಗಾಸ್ಟಾರ್ ಚಿರಂಜೀವಿ ಅವರು ಸೆಟ್​​ಗೆ ಭೇಟಿ ನೀಡಿದ್ದರು. ಚಿರಂಜೀವಿ ಅವರು ಸೆಟ್​​ಗೆ ಬಂದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದವು. ಸರಿಯಾಗಿ ಕುಸ್ತಿ ಪಂದ್ಯದ ಶೂಟಿಂಗ್ ನಡೆಯುವಾಗಲೇ ಮೆಗಾಸ್ಟಾರ್ ಚಿರಂಜೀವಿ ಅವರು ಸೆಟ್​​ಗೆ ಹಾಜರಿ ಹಾಕಿದ್ದರು. ಆದರೆ ಅರ್ಧ ಗಂಟೆ ಸಹ ಅವರು ಇರಲಿಲ್ಲವಂತೆ. ಕೂಡಲೇ ಅಲ್ಲಿಂದ ಹೊರಟು ಬಿಟ್ಟರಂತೆ.

ಏಕೆಂದರೆ, ಕ್ಲೈಮ್ಯಾಕ್ಸ್ ನಲ್ಲಿ ನಡೆಯುವ ಫೈಟ್​​ನಲ್ಲಿ ರಾಮ್ ಚರಣ್ ಅವರಿಗೆ ಬಹಳಷ್ಟು ಅಪಾಯಕಾರಿ ಶಾಟ್​​ಗಳು ಇದ್ದವಂತೆ. ಎಲ್ಲವನ್ನೂ ಖುದ್ದು ರಾಮ್ ಚರಣ್ ಅವರೇ ಮಾಡುತ್ತಿದ್ದರಂತೆ. ಮಗ ತನ್ನನ್ನು ತಾನು ಅಷ್ಟು ಅಪಾಯಕ್ಕೆ ಒಡ್ಡಿಕೊಳ್ಳುವುದನ್ನು ನೋಡಲಾಗದೆ ಚಿರಂಜೀವಿ ಅವರು ಸೆಟ್​​ನಿಂದಲೇ ಹೊರಟು ಹೋದರಂತೆ. ಇದೇ ವಿಷಯವನ್ನು ಬುಚ್ಚಿ ಬಾಬು ಸನಾ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

‘ಪೆದ್ದಿ’ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಸಾಕಷ್ಟು ರಿಸ್ಕಿ ಶಾಟ್​​ಗಳನ್ನು ರಾಮ್ ಚರಣ್ ಅವರಿಗಾಗಿ ಕಂಪೋಸ್ ಮಾಡಲಾಗಿತ್ತಂತೆ. ಕೆಲ ಶಾಟ್​​ಗಳು ಅದೆಷ್ಟು ರಿಸ್ಕಿ ಆಗಿದ್ದುವೆಂದರೆ ರಾಮ್ ಚರಣ್ ಅವರನ್ನು ಆ ಸ್ಥಿತಿಯಲ್ಲಿ ನೋಡಲು ಸಹ ಚಿರಂಜೀವಿ ಅವರು ಭಯಪಟ್ಟು ಅಲ್ಲಿಂದ ಹೊರಟು ಹೋದರಂತೆ. ಬುಚ್ಚಿ ಬಾಬು ಸನಾ ಹೇಳಿರುವಂತೆ ಸಿನಿಮಾದ ಕ್ಲೈಮ್ಯಾಕ್ಸ್, ‘ಪೆದ್ದಿ’ ಸಿನಿಮಾದ ಜೀವ. ಆಕ್ಷನ್ ಜೊತೆಗೆ ಅತೀವ ಭಾವುಕವಾದ ದೃಶ್ಯಗಳು ಸಿನಿಮಾದ ಕ್ಲೈಮ್ಯಾಕ್ಸ್​​ನಲ್ಲಿ ಇವೆಯಂತೆ.

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಅವರು ‘ಗೌಡನಾಯ್ಡು’ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಜಾನ್ಹವಿ ಕಪೂರ್ ಸಿನಿಮಾದ ನಾಯಕಿ. ಜಗಪತಿ ಬಾಬು ಸಹ ಸಿನಿಮಾನಲ್ಲಿದ್ದಾರೆ. ಶ್ರುತಿ ಹಾಸನ್, ಸಿನಿಮಾನಲ್ಲಿ ಐಟಂ ಹಾಡಿನಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​​ ಗಳು – Kannada News | Fishing Boats Parked In Baithkol Port over Wind Increases In Arabian Sea

ಕಾರವಾರ, (ಮೇ 17): ಒಂದೆಡೆ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ (Arabian Sea) ಗಾಳಿಯ ವೇಗ ಹೆಚ್ಚಾಗಿದೆ. ಕಳೆದ ಮೂರು ದಿನಗಳಿಂದ ಗಂಟೆಗೆ 40 ರಿಂದ 55km.ವೇಗದಲ್ಲಿ ಗಾಳಿ ಬಿಸುತ್ತಿದೆ. ಇದರಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿಯ ಬೈಥಕೊಲ್ ಬಂದರಿನಲ್ಲಿ (Baithkol Port) ನೂರಕ್ಕೂ ಹೆಚ್ಚು ಬೋಟ್ ಗಳಿಗೆ ಲಂಗರು ಹಾಕಲಾಗಿದೆ. ಪ್ರತಿ ವರ್ಷ ಜೂನ್ 1 ರಿಂದ ಅಧಿಕೃತ ಮೀನುಗಾರಿಕೆ ಬಂದ್ ಆಗುತ್ತೆ. ಆದ್ರೆ ಈ ವರ್ಷ ಹವಾಮಾನ ವೈಪರಿತ್ಯದಿಂದ. ಅವಧಿ ಪೂರ್ವ ಮೀನುಗಾರಿಕೆ ನಿರ್ಬಂಧಿಸುವ ಸಾಧ್ಯತೆ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

18 ವರ್ಷದಿಂದ ಜಪಾನ್​ನಲ್ಲಿ ಬ್ಯುಸಿನೆಸ್ ಮಾಡ್ತಿದ್ದವನಿಗೆ ಅಂದ್ರು ‘ಗೋ ಬ್ಯಾಕ್ ಟು ಇಂಡಿಯಾ’ – Kannada News | Japan Visa Crisis: Indian Entrepreneur Manish Kumar Faces Deportation After 30 Years

ಜಪಾನೀ ನಗರದ ಸಾಂದರ್ಭಿಕ ಚಿತ್ರImage Credit source: AI/Mediaforge/TV9

ಟೋಕಿಯೋ, ಮೇ 17: ಜಪಾನ್‌ನಲ್ಲಿ ಕಳೆದ 30 ವರ್ಷಗಳಿಂದ ವಾಸಿಸುತ್ತಾ, ಸೈತಾಮಾ ನಗರದಲ್ಲಿ (Saitama Prefecture) ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಭಾರತೀಯ ರೆಸ್ಟೋರೆಂಟ್​ವೊಂದನ್ನು ನಡೆಸುತ್ತಿದ್ದ ಮನೀಶ್ ಕುಮಾರ್ ಎಂಬ ಭಾರತೀಯ ಉದ್ಯಮಿಗೆ ಜಪಾನ್ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಜಪಾನ್‌ನ ವಲಸೆ ಸೇವಾ ಸಂಸ್ಥೆಯು (ISA) ಅವರ ಬಿಸಿನೆಸ್ ಮ್ಯಾನೇಜರ್ ವೀಸಾ (Business Manager Visa) ನವೀಕರಣವನ್ನು ತಿರಸ್ಕರಿಸಿರುವುದು ಇದಕ್ಕೆ ಕಾರಣವಾಗಿದೆ. ಟೋಕಿಯೋದಲ್ಲಿ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಮನೀಶ್ ಕುಮಾರ್, ತಮ್ಮ ಅಳಲನ್ನು ತೋಡಿಕೊಳ್ಳುತ್ತಾ ಕಣ್ಣೀರು ಹಾಕಿದ್ದಾರೆ.

“ಎರಡು ವಾರಗಳ ಹಿಂದೆ ಜಪಾನ್ ವಲಸೆ ಸಂಸ್ಥೆಯು (ISA) ನನಗೆ ಭಾರತಕ್ಕೆ ಮರಳಿ ಹೋಗುವಂತೆ ತಿಳಿಸಿತು. ನನ್ನ ಮಕ್ಕಳು ಹುಟ್ಟಿದ್ದು, ಬೆಳೆದಿದ್ದು ಎಲ್ಲವೂ ಜಪಾನ್‌ನಲ್ಲಿಯೇ. ಅವರಿಗೆ ಕೇವಲ ಜಪಾನಿ ಭಾಷೆ ಮಾತ್ರ ಗೊತ್ತು, ಅವರ ಸ್ನೇಹಿತರೆಲ್ಲರೂ ಜಪಾನಿಯರೇ ಆಗಿದ್ದಾರೆ. ನಾವಿಲ್ಲಿ ಕಷ್ಟಪಟ್ಟು ದುಡಿದು ಒಂದು ಮನೆಯನ್ನೂ ಖರೀದಿಸಿದ್ದೇವೆ. ಈಗ ಇದ್ದಕ್ಕಿದ್ದಂತೆ ಯಾವುದೇ ತಪ್ಪು ಮಾಡದ ನಮಗೆ ‘ಭಾರತಕ್ಕೆ ವಾಪಸ್ ಹೋಗಿ’ ಎಂದು ಹೇಳುತ್ತಿರುವುದು ಎಷ್ಟು ಮಾನವೀಯ? ನಾನು ಈಗ ಏನು ಮಾಡಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಜಪಾನ್​ನಲ್ಲಿ ವೀಸಾ ನಿಯಮಗಳು ಕಟ್ಟುನಿಟ್ಟಾಗಲು ಕಾರಣವೇನು?

ಜಪಾನ್ ಸರ್ಕಾರವು ತನ್ನ ‘ಬಿಸಿನೆಸ್ ಮ್ಯಾನೇಜರ್ ವೀಸಾ’ ನೀತಿಯನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಕಳೆದ ವರ್ಷ (ಅಕ್ಟೋಬರ್ 2025) ನಿಯಮಗಳನ್ನು ಬಹಳ ಕಠಿಣಗೊಳಿಸಿದೆ. ನಕಲಿ ವ್ಯಾಪಾರಗಳನ್ನು ತೋರಿಸಿ ವಿದೇಶಿಗರು ದೀರ್ಘಾವಧಿ ವಾಸದ ಹಕ್ಕು (Residency) ಪಡೆಯುವುದನ್ನು ತಡೆಯುವುದು ಸರ್ಕಾರದ ಉದ್ದೇಶವಾಗಿತ್ತು.

ಇದನ್ನೂ ಓದಿ: ಟಾಟಾ-ASML ಡೀಲ್; ಚಿಪ್ ಕ್ಷೇತ್ರದಲ್ಲಿ ಸಂಚಲನ; ಯಾಕಿದು ಮಹಾ ಡೀಲ್? ಎಲ್ಲರಿಗೂ ಅಚ್ಚರಿ ಎನಿಸುವಂಥದ್ದು ಏನಿದೆ?

ಆದರೆ, ಈ ಹಠಾತ್ ಬದಲಾವಣೆಯು ಕಾನೂನುಬದ್ಧವಾಗಿ ಸಣ್ಣ ಉದ್ಯಮ ನಡೆಸುತ್ತಿದ್ದ ಮನೀಶ್ ಕುಮಾರ್ ಅವರಂತಹ ಪ್ರಾಮಾಣಿಕ ಉದ್ಯಮಿಗಳ ಬದುಕನ್ನು ಬೀದಿಗೆ ತಂದಿದೆ.

ಹೊಸ ನಿಯಮಗಳಲ್ಲಿನ ಕಠಿಣ ಷರತ್ತುಗಳು

ಈ ಹಿಂದೆ ವೀಸಾ ಪಡೆಯಲು ಕನಿಷ್ಠ 5 ಮಿಲಿಯನ್ ಯೆನ್ (ಸುಮಾರು 30 ಲಕ್ಷ ರೂ) ಹೂಡಿಕೆ ಸಾಕಾಗಿತ್ತು. ಆದರೆ ಹೊಸ ನಿಯಮದ ಪ್ರಕಾರ ಅದನ್ನು 30 ಮಿಲಿಯನ್ ಯೆನ್‌ಗೆ (ಸುಮಾರು 1.8 ಕೋಟಿ ರೂ) ಏರಿಸಲಾಗಿದೆ. ಸಣ್ಣ ಉದ್ಯಮಿಗಳಿಗೆ ಈ ಮೊತ್ತವನ್ನು ಹೊಂದಿಸುವುದು ಅಸಾಧ್ಯವಾಗಿದೆ.

ಮತ್ತೊಂದು ಪ್ರಮುಖ ನಿಯಮವು ಸ್ಥಳೀಯ ನೌಕರರ ನೇಮಕದ್ದಾಗಿದೆ. ಪ್ರತಿಯೊಬ್ಬ ಉದ್ಯಮಿಯೂ ಕಡ್ಡಾಯವಾಗಿ ಕನಿಷ್ಠ ಒಬ್ಬ ಸ್ಥಳೀಯ (ಜಪಾನಿ) ಪೂರ್ಣಾವಧಿ ನೌಕರನನ್ನು ಕೆಲಸಕ್ಕೆ ಇಟ್ಟುಕೊಳ್ಳಬೇಕು ಎಂದು ಹೇಳುತ್ತದೆ ಹೊಸ ನಿಯಮ.

ಮಗದೊಂದು ಕಠಿಣ ನಿಯಮಗಳಲ್ಲಿ ಜಪಾನೀ ಭಾಷೆಯಲ್ಲಿ ಪರಿಣಿತಿ ಸಾಧಿಸುವುದು ಸೇರಿದೆ. ಉದ್ಯಮಿ ಅಥವಾ ಅವರ ಸಿಬ್ಬಂದಿ ಜಪಾನಿ ಭಾಷೆಯ ಉನ್ನತ ಮಟ್ಟದ ಪ್ರಾವೀಣ್ಯತೆಯನ್ನು (JLPT N2 ಮಟ್ಟ) ಸಾಬೀತುಪಡಿಸಬೇಕು.

ಇದನ್ನೂ ಓದಿ: ಭಾರತಕ್ಕೆ 2ನೇ ಅತಿದೊಡ್ಡ ರಫ್ತು ಮಾರುಕಟ್ಟೆ ಈಗ ಯುಎಇ ಅಲ್ಲ, ಸಿಂಗಾಪುರ

ವೀಸಾ ಅರ್ಜಿಗಳಲ್ಲಿ ಶೇ. 96 ರಷ್ಟು ಕುಸಿತ

ಜಪಾನ್ ಸರ್ಕಾರದ ಈ ಕಠಿಣ ನೀತಿಯಿಂದಾಗಿ ಉದ್ಯಮ ವೀಸಾಕ್ಕೆ ಸಲ್ಲಿಕೆಯಾಗುತ್ತಿದ್ದ ಅರ್ಜಿಗಳ ಸಂಖ್ಯೆ ಶೇಕಡಾ 96 ರಷ್ಟು ಕುಸಿದಿದೆ. ಈ ಹಿಂದೆ ತಿಂಗಳಿಗೆ ಸರಾಸರಿ 1,700 ಅರ್ಜಿಗಳು ಬರುತ್ತಿದ್ದರೆ, ಈಗ ಅದು ಕೇವಲ 70ಕ್ಕೆ ಇಳಿದಿದೆ. ಮನೀಶ್ ಕುಮಾರ್ ಅವರಂತೆಯೇ ಹಾಂಕಾಂಗ್ ಮೂಲದ ಮತ್ತೊಬ್ಬ ರೆಸ್ಟೋರೆಂಟ್ ಮಾಲೀಕರೂ ಸಹ ಬಂಡವಾಳದ ಕೊರತೆಯಿಂದಾಗಿ ತಮ್ಮ ಉದ್ಯಮವನ್ನು ಮುಚ್ಚಿ ತಾಯ್ನಾಡಿಗೆ ಮರಳುತ್ತಿದ್ದಾರೆ.

ಪ್ರಸ್ತುತ, ಜಪಾನ್‌ನ ಈ ಕಠಿಣ ವಲಸೆ ನೀತಿಯ ವಿರುದ್ಧ ಮತ್ತು ಮನೀಶ್ ಕುಮಾರ್ ಅವರಂತಹ ದೀರ್ಘಾವಧಿ ನಿವಾಸಿಗಳ ಪರವಾಗಿ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಜಪಾನ್‌ನಲ್ಲಿ ಸಾವಿರಾರು ಜನರು ಸಹಿ ಸಂಗ್ರಹಿಸಿ ಆನ್‌ಲೈನ್ ಅಭಿಯಾನವನ್ನು ನಡೆಸುತ್ತಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹೇಗಿತ್ತು ‘ಟಾಕ್ಸಿಕ್’ ಸೆಟ್: ನಟಿಯ ಮಾತು ಕೇಳಿ ಯಶ್ ಬಗ್ಗೆ ಹೆಮ್ಮೆ ಆಗದೇ ಇರದು – Kannada News | Tara Sutaria said Toxic movie set is the most professional set she ever worked

ಇತ್ತೀಚೆಗಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗವನ್ನು ಪ್ಯಾನ್ ಇಂಡಿಯಾ (Pan India) ಲೆವೆಲ್​​ಗೆ ಮತ್ತು ಈಗ ‘ಟಾಕ್ಸಿಕ್’ ಮೂಲಕ ಹಾಲಿವುಡ್​​ ಲೆವೆಲ್​​ಗೆ ಕೊಂಡೊಯ್ಯುವ ಕಾರ್ಯವನ್ನು ನಟ ಯಶ್ ಮಾಡುತ್ತಿದ್ದಾರೆ. ಅವರು ಸಿನಿಮಾವನ್ನು ಹಾಲಿವುಡ್​​ ಲೆವೆಲ್​​ನಲ್ಲಿ ನಿರ್ಮಾಣ ಮಾಡಿರುವುದು ಸಿನಿಮಾದ ಟೀಸರ್, ಪೋಸ್ಟರ್​​ಗಳಿಂದ ಈಗಾಗಲೇ ತಿಳಿದಿದೆ. ಆದರೆ ಯಶ್ ಅವರು ಸಿನಿಮಾದ ಸೆಟ್​​ನಲ್ಲೂ ನಟ-ನಟಿ ಸೇರಿದಂತೆ ಎಲ್ಲ ಸಿಬ್ಬಂದಿಗೂ ವಿಶ್ವ ದರ್ಜೆಯ ಟ್ರೀಟ್​​ಮೆಂಟ್ ಸಿಗುವಂತೆ ಮಾಡಿದ್ದರು. ‘ಟಾಕ್ಸಿಕ್’ ಸಿನಿಮಾ ಸೆಟ್​​ನಲ್ಲಿದ್ದ ವೃತ್ತಿಪರತೆ ಬಗ್ಗೆ ಕೆಲಸದ ಗುಣಮಟ್ಟ ಇನ್ನಿತರೆ ವಿಷಯಗಳ ಬಗ್ಗೆ ಸಿನಿಮಾದ ಐವರು ನಾಯಕಿಯರಲ್ಲಿ ಒಬ್ಬರಾದ ತಾರಾ ಸುತಾರಿಯಾ ಮಾತನಾಡಿದ್ದಾರೆ.

ಹಾಲಿವುಡ್ ರಿಪೋರ್ಟರ್​ ಜೊತೆಗೆ ಮಾತನಾಡಿರುವ ನಟಿ ತಾರಾ ಸುತಾರಿಯಾ ‘ಟಾಕ್ಸಿಕ್’ ಸಿನಿಮಾದ ಸೆಟ್ ಮತ್ತು ಅಲ್ಲಿಯ ಶೂಟಿಂಗ್ ವಿಧಾನ, ಕಲಾವಿದರನ್ನು, ತಂತ್ರಜ್ಞರನ್ನು, ಸಿಬ್ಬಂದಿಗಳನ್ನು ನಡೆಸಿಕೊಳ್ಳುತ್ತಿದ್ದ ವಿಧಾನ ಎಷ್ಟು ವೃತ್ತಿಪರವಾಗಿತ್ತು ಎಂಬುದನ್ನು ವಿವರಿಸಿದ್ದಾರೆ. ‘ನನಗಂತೂ ‘ಟಾಕ್ಸಿಕ್’ ಸಿನಿಮಾನಲ್ಲಿ ಕೆಲಸ ಮಾಡಿದ್ದು ಬಹಳ ತೃಪ್ತಿ ತಂದಿದೆ. ಶೂಟಿಂಗ್ ಸೆಟ್‌ನಲ್ಲಿ ನನಗೆ ತುಂಬಾ ಒಳ್ಳೆಯ ಅನುಭವ ನೀಡಿದ ಸಿನಿಮಾ ಇದು’ ಎಂದಿದ್ದಾರೆ.

ಸಿನಿಮಾ ಸೆಟ್​​ಗಳಲ್ಲಿ ಅತಿಯಾದ ಕೆಲಸಕ್ಕೆ ಪ್ರಾಧಾನ್ಯತೆ ಹೆಚ್ಚು, ಶೂಟಿಂಗ್ ಬೇಗನೆ ಮುಗಿಯಬೇಕು ಮತ್ತು ರಿಚ್ ಆಗಿ ಬರಬೇಕೆಂದು ಚಿತ್ರತಂಡಗಳು ನಟ-ನಟಿಯರನ್ನು ಹೆಚ್ಚಿಗೆ ದುಡಿಸಿಕೊಳ್ಳುವುದು, ಭದ್ರತೆ, ಸುರಕ್ಷತೆಗೆ ಹೆಚ್ಚು ಗಮನ ವಹಿಸದೇ ಇರುವುದು ಮಾಡುತ್ತವೆ. ಆದರೆ ‘ಟಾಕ್ಸಿಕ್’ ಸೆಟ್​​ನಲ್ಲಿ ಇದೆಲ್ಲ ಇರಲೇ ಇಲ್ಲವಂತೆ. ‘ಸೆಟ್​​ನಲ್ಲಿ ಮಾನವೀಯತೆಗೆ ಮತ್ತು ಪ್ರಮಾಣಿಕತೆಗೆ ಮೊದಲ ಆದ್ಯತೆ ಇತ್ತು’ ಎಂದು ನಟಿ ತಾರಾ ಸುತಾರಿಯಾ ಹೇಳಿದ್ದಾರೆ.

ಇದನ್ನೂ ಓದಿ:ಚೈತ್ರಾ ಆಚಾರ್​​ಗೆ ಸಿಕ್ತು ದೊಡ್ಡ ಅವಕಾಶ, ಪ್ಯಾನ್ ಇಂಡಿಯಾ ಸ್ಟಾರ್ ಜೊತೆ ಸಿನಿಮಾ

ಮುಂದುವರೆದು ಮಾತನಾಡಿ, ‘ನನಗೆ ಬಹಳ ವರ್ಷಗಳ ಬಳಿಕ ಒಳ್ಳೆಯ ತಂಡ ಸಿಕ್ಕಿತು, ಅದು ಕೂಡ ಗೀತು ಮೋಹನ್ ದಾಸ್ ಅವರ ನಾಯಕತ್ವದಲ್ಲಿ. ನಿಖಿಲ್ ನಾಗೇಶ್ ಭಟ್ ಅವರ ನಿರ್ದೇಶನದಲ್ಲಿ ಕೆಲಸ ಮಾಡಿದ ಬಳಿಕ ನನಗೆ ಸಿಕ್ಕ ಅದ್ಭುತ ನಿರ್ದೇಶಕಿ ಗೀತು ಮೋಹನ್​​ದಾಸ್. ಅವರ ಜೊತೆ ಕೆಲಸ ಮಾಡುವುದು ಮತ್ತು ಒಬ್ಬ ಮಹಿಳೆಯ ನೇತೃತ್ವದಲ್ಲಿ ಮುನ್ನಡೆಯುವುದು ನನ್ನ ಜೀವನದ ಅತ್ಯಂತ ಸಂತೋಷದ ವಿಷಯವಾಗಿದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಕೆಲಸ ಮಾಡಿರುವ ಯಾರನ್ನು ಬೇಕಾದರೂ ಕೇಳಿ ಎಲ್ಲರೂ ಇದೇ ಉತ್ತರ ನೀಡುತ್ತಾರೆ’ ಎಂದಿದ್ದಾರೆ ನಟಿ ತಾರಾ ಸುತಾರಿಯಾ.

ಯಶ್, ‘ಟಾಕ್ಸಿಕ್’ ಸಿನಿಮಾದ ಸಹ ನಿರ್ಮಾಪಕ ಆಗಿದ್ದು, ಯಶ್ ಅವರು ವೃತ್ತಿಪರತೆಯಿಂದ, ಕಾರ್ಪೊರೇಟ್ ಶೈಲಿಯಲ್ಲಿ ಸಿನಿಮಾದ ಚಿತ್ರೀಕರಣ ಮಾಡಿದ್ದಾರೆ. ಸಾಮಾನ್ಯ ಸಿನಿಮಾ ಶೂಟಿಂಗ್​​ನ ಮಾದರಿಗಳನ್ನು ಕೈಬಿಟ್ಟು, ಕನ್ನಡ ಸಿನಿಮಾ ಶೂಟಿಂಗ್​​ಗೆ ಒಂದು ಕಾರ್ಪೊರೇಟ್ ಶೈಲಿಯನ್ನು ತಂದಿದ್ದಾರೆ. ಈಗ ಸಿನಿಮಾವನ್ನು ಸಹ ಹಾಲಿವುಡ್ ಲೆವೆಲ್​​ನಲ್ಲಿ ಬಿಡುಗಡೆ ಮಾಡಲು ಸತತ ಪ್ರಯತ್ನ ಮಾಡುತ್ತಿದ್ದಾರೆ. ಸಿನಿಮಾದ ಹೊಸ ಬಿಡುಗಡೆ ದಿನಾಂಕ ಇನ್ನಷ್ಟೆ ಘೋಷಣೆ ಆಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:59 pm, Sun, 17 May 26

Source link

ಬೆಂಗಳೂರಿನಿಂದ ಮತ್ತೊಂದು ಹೈ-ಸ್ಪೀಡ್ ರೈಲು ಕಾರಿಡಾರ್​​ಗೆ ಒತ್ತಾಯಿಸಿದ ತೇಜಸ್ವಿ ಸೂರ್ಯ – Kannada News | BJP MP tejasvi Surya demands to ashwini vaishnaw for Start bengaluru mubai high speed Railway corridor

ಬೆಂಗಳೂರು, (ಮೇ 17): ದಾವಣಗೆರೆ ಮತ್ತು ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರು ಮತ್ತು ಮುಂಬೈ ನಡುವೆ ಹೈ-ಸ್ಪೀಡ್ ರೈಲು ಕಾರಿಡಾರ್ ಅನ್ನು (bengaluru mubai high speed Railway corridor) ಮಂಜೂರು ಮಾಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಅವರು ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (ashwini vaishnaw )ಅವರಿಗೆ ಆಗ್ರಹಿಸಿದ್ದಾರೆ. ಈ ಯೋಜನೆಯು ಮಧ್ಯ ಮತ್ತು ಉತ್ತರ ಕರ್ನಾಟಕದಾದ್ಯಂತ ಆರ್ಥಿಕ ಚಟುವಟಿಕೆಗಳನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರನ್ನು ಚೆನ್ನೈ ಮತ್ತು ಹೈದರಾಬಾದ್‌ನೊಂದಿಗೆ ಸಂಪರ್ಕಿಸುವ ಇತ್ತೀಚೆಗೆ ಘೋಷಿಸಲಾದ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳಂತೆಯೇ, ಬೆಂಗಳೂರು-ಮುಂಬೈ ಕಾರಿಡಾರ್ ಕೂಡ ಕರ್ನಾಟಕದ ದೀರ್ಘಕಾಲೀನ ಆರ್ಥಿಕ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಅವರು ಗಮನ ಸೆಳೆದರು. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ನಡೆದ ನೂತನ, ಎಸ್‌ಎಂವಿಟಿ ಬೆಂಗಳೂರು – ಲೋಕಮಾನ್ಯ ತಿಲಕ್ ಟರ್ಮಿನಸ್ ಬೈ-ವೀಕ್ಲಿ ಎಕ್ಸ್‌ಪ್ರೆಸ್ ರೈಲಿನ ಹಸಿರು ನಿಶಾನೆ ತೋರುವ ಸಮಾರಂಭದಲ್ಲಿ ವರ್ಚುವಲ್ ಆಗಿ ಭಾಗವಹಿಸಿ ಸೂರ್ಯ ಅವರು ಈ ಮನವಿ ಮಾಡಿದರು.

ಇದನ್ನೂ ಓದಿ: ರೈಲ್ವೇ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಬೆಂಗಳೂರು, ಮುಂಬೈ ಎಕ್ಸ್​​ಪ್ರೆಸ್​​ ಟ್ರೈನ್​​ಗೆ ಹಸಿರು ನಿಶಾನೆ

ಉಭಯ ಮಹಾನಗರಗಳ ನಡುವಿನ ಬಲವಾದ ಆರ್ಥಿಕ ಸಂಬಂಧಗಳನ್ನು ಒತ್ತಿಹೇಳಿದ ಸೂರ್ಯ, ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಆರ್ಥಿಕ ರಾಜಧಾನಿಗಳಾಗಿದ್ದು, ಬೆಂಗಳೂರು ದೇಶದ ತಂತ್ರಜ್ಞಾನ ರಾಜಧಾನಿಯಾಗಿ ಮತ್ತು ಮುಂಬೈ ವಾಣಿಜ್ಯ ರಾಜಧಾನಿಯಾಗಿ ಹೊರಹೊಮ್ಮಿದೆ ಎಂದರು.

“ಪ್ರತಿ ವರ್ಷ ಲಕ್ಷಾಂತರ ಜನರು ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಸುತ್ತಾರೆ. ದಾವಣಗೆರೆ ಮತ್ತು ಹುಬ್ಬಳ್ಳಿ ಮೂಲಕ ಈ ಎರಡು ನಗರಗಳನ್ನು ಸಂಪರ್ಕಿಸುವ ಹೈ-ಸ್ಪೀಡ್ ರೈಲು ಕಾರಿಡಾರ್ ಕೇವಲ ಸಂಪರ್ಕವನ್ನು ಸುಧಾರಿಸುವುದಲ್ಲದೆ, ಮಧ್ಯ ಮತ್ತು ಉತ್ತರ ಕರ್ನಾಟಕದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಈ ಯೋಜನೆಯನ್ನು ಪರಿಗಣಿಸಿ ಅನುಷ್ಠಾನಗೊಳಿಸಿದರೆ, ರಾಜ್ಯದ ಆರ್ಥಿಕ ಭವಿಷ್ಯವನ್ನು ಬಲಪಡಿಸಲು ನೀಡಿದ ಈ ಕೊಡುಗೆಯನ್ನು ಕರ್ನಾಟಕ ಮತ್ತು ಬೆಂಗಳೂರಿನ ಜನರು ಯಾವಾಗಲೂ ನೆನಪಿಸಿಕೊಳ್ಳುತ್ತಾರೆ ಎಂದು ಸಂಸದ ಸೂರ್ಯ ವಿವರಿಸಿದರು.

ಬೆಂಗಳೂರು ಮತ್ತು ಮುಂಬೈ ನಡುವಿನ ನೂತನ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ಸ್ವಾಗತಿಸಿದ ಸೂರ್ಯ ರವರು, ಎರಡೂ ನಗರಗಳ ನಡುವೆ ದಶಕಗಳಿಂದ ಪ್ರಯಾಣದ ಬೇಡಿಕೆ ಹೆಚ್ಚುತ್ತಿದ್ದರೂ, 1983 ರಿಂದ ಉದ್ಯಾನ್ ಎಕ್ಸ್‌ಪ್ರೆಸ್ ಮಾತ್ರ ಏಕೈಕ ನೇರ ರೈಲು ಸೇವೆಯಾಗಿ ಉಳಿದಿತ್ತು ಎಂಬುದನ್ನು ಉಲ್ಲೇಖಿಸಿ, 30 ವರ್ಷಗಳಿಗೂ ಹೆಚ್ಚು ಕಾಲ, ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಸುವ ನಾಗರಿಕರು ಸೀಮಿತ ರೈಲು ಸಂಪರ್ಕದ ಕಾರಣದಿಂದಾಗಿ ಅಪಾರ ತೊಂದರೆಗಳನ್ನು ಎದುರಿಸುತ್ತಿದ್ದರು. ಹಬ್ಬದ ಮತ್ತು ರಜಾದಿನಗಳ ಸಂದರ್ಭದಲ್ಲಿ ವೇಟಿಂಗ್ ಲಿಸ್ಟ್‌ಗಳು ಹೆಚ್ಚಾಗುತ್ತಿದ್ದವು ಮತ್ತು ವಿಮಾನ ಹಾಗೂ ಬಸ್ ದರಗಳು ಗಗನಕ್ಕೇರುತ್ತಿದ್ದವು. ಈ ಹೊಸ ರೈಲು ಸಾವಿರಾರು ಪ್ರಯಾಣಿಕರಿಗೆ ದೊಡ್ಡ ಮಟ್ಟದ ಅನುಕೂಲ ಕಲ್ಪಿಸಲಿದೆ ” ಎಂದು ಅವರು ಹೇಳಿದರು.

ಬೆಂಗಳೂರು ಮತ್ತು ಮುಂಬೈ ನಡುವೆ ರಾತ್ರಿ ಸಂಪರ್ಕ ಕಲ್ಪಿಸುವ ‘ವಂದೇ ಭಾರತ್ ಸ್ಲೀಪರ್’ ಸೇವೆಯನ್ನು ಬೆಂಗಳೂರು ಶೀಘ್ರದಲ್ಲೇ ಪಡೆಯಲಿದೆ ಎಂದು ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆ ಎಂದು ಸೂರ್ಯ ಇದೇ ವೇಳೆ ತಿಳಿಸಿದ್ದು, ಕರ್ನಾಟಕದ ರೈಲ್ವೆ ಮೂಲಸೌಕರ್ಯಕ್ಕಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಅಶ್ವಿನಿ ವೈಷ್ಣವ್ ಮತ್ತು ವಿ ಸೋಮಣ್ಣ ಅವರಿಗೆ ಧನ್ಯವಾದ ಅರ್ಪಿಸಿದರು.

ಕಳೆದ ಒಂದು ದಶಕದಲ್ಲಿ ರೈಲ್ವೆ ವಲಯದಲ್ಲಿ ಆಗಿರುವ ಅಭೂತಪೂರ್ವ ಸುಧಾರಣೆಗಳು ರಾಜ್ಯದ ಅಭಿವೃದ್ಧಿಗೆ ವೇಗ ನೀಡಿದ್ದು, 2014 ರವರೆಗೆ ಕರ್ನಾಟಕಕ್ಕೆ ವಾರ್ಷಿಕ ರೈಲ್ವೆ ಅನುದಾನ ಸರಾಸರಿ ಸುಮಾರು ₹850 ಕೋಟಿಗಳಷ್ಟಿತ್ತು, ಆದರೆ ಪ್ರಸ್ತುತ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ವಾರ್ಷಿಕವಾಗಿ ಸುಮಾರು ₹8,000 ಕೋಟಿ ಲಭಿಸುತ್ತಿದೆ, ಇದು ಸುಮಾರು ಒಂಬತ್ತು ಪಟ್ಟು ಹೆಚ್ಚಳವಾಗಿದೆ ಎಂದು ಅಂಕಿ-ಅಂಶಗಳನ್ನು ನೀಡಿದರು.

ಕರ್ನಾಟಕದಲ್ಲಿ ಸದ್ಯ ರೈಲು ಮಾರ್ಗಗಳ ದ್ವಿಗುಣಗೊಳಿಸುವಿಕೆ, ವಿದ್ಯುದೀಕರಣ ಮತ್ತು ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ನಿಲ್ದಾಣಗಳ ಮರುಅಭಿವೃದ್ಧಿ ಸೇರಿದಂತೆ 52,000 ಕೋಟಿಗೂ ಹೆಚ್ಚು ಮೌಲ್ಯದ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ. ಇನ್ನು ರಾಜ್ಯದಾದ್ಯಂತ ರೈಲ್ವೆ ವಿದ್ಯುದೀಕರಣವು 3,000 ಕಿಲೋಮೀಟರ್ ದಾಟಿದ್ದು, ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಸೂರ್ಯ ತಿಳಿಸಿದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಟಾಟಾ-ASML ಡೀಲ್; ಚಿಪ್ ಕ್ಷೇತ್ರದಲ್ಲಿ ಸಂಚಲನ; ಯಾಕಿದು ಮಹಾ ಡೀಲ್? ಎಲ್ಲರಿಗೂ ಅಚ್ಚರಿ ಎನಿಸುವಂಥದ್ದು ಏನಿದೆ? – Kannada News | ASML Tata Deal: India’s Semiconductor Future Unlocked, Boosting Chip Manufacturing

ನವದೆಹಲಿ, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ಯೂರೋಪ್​ನ ನೆದರ್​ಲ್ಯಾಂಡ್ಸ್ ದೇಶದ ಉದ್ಯಮಿಗಳೊಂದಿಗೆ ಸಭೆ ನಡೆಸಿದ್ದಾರೆ. ಡಚ್ಚರಿಂದ ಬಹಳಷ್ಟು ಹೂಡಿಕೆಗಳು ಭಾರತಕ್ಕೆ ಹರಿದುಬರಲಿವೆ. ಅದರಲ್ಲಿ ಬಹಳ ಗಮನ ಸೆಳೆದಿರುವುದು ಜಾಗತಿಕ ಸೆಮಿಕಂಡಕ್ಟರ್ (ಚಿಪ್) ಉದ್ಯಮದ ಅತ್ಯಂತ ಪ್ರಭಾವಶಾಲಿ ದೈತ್ಯ ಕಂಪನಿ ನೆದರ್‌ಲ್ಯಾಂಡ್ಸ್‌ನ ASML ಮತ್ತು ಭಾರತದ ಹೆಮ್ಮೆಯ ಟಾಟಾ ಗ್ರೂಪ್ (Tata Electronics) ನಡುವೆ ಏರ್ಪಟ್ಟಿರುವ ಒಪ್ಪಂದ. ಇದು ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಭಾರತದ ಮೊದಲ ಸೆಮಿಕಂಡಕ್ಟರ್ ಫ್ಯಾಬ್ (ಚಿಪ್ ತಯಾರಿಕಾ ಘಟಕ) ಸ್ಥಾಪನೆಗೆ ಸಂಬಂಧಿಸಿದಂತೆ ಈ ಒಪ್ಪಂದ ಬಹಳ ಮುಖ್ಯ.

ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ASML ಎಷ್ಟು ಶಕ್ತಿಶಾಲಿ?

ಸೆಮಿಕಂಡಕ್ಟರ್ ಜಗತ್ತಿನಲ್ಲಿ ASML ಕೇವಲ ಒಂದು ಕಂಪನಿಯಲ್ಲ, ಅದು ಇಡೀ ವಿಶ್ವದ ಅತ್ಯಾಧುನಿಕ ಚಿಪ್ ಉದ್ಯಮವನ್ನು ನಿಯಂತ್ರಿಸುವ ಏಕೈಕ ‘ಮಹಾಶಕ್ತಿ’. ಕ್ಷೇತ್ರದಲ್ಲಿ ASML ಪೂರ್ಣ ಪಾರಮ್ಯ ಹೊಂದಿದೆ.

ಪ್ರಸ್ತುತ ಸ್ಮಾರ್ಟ್‌ಫೋನ್‌ಗಳು, ಕೃತಕ ಬುದ್ಧಿಮತ್ತೆ (AI) ಸೂಪರ್ ಕಂಪ್ಯೂಟರ್‌ಗಳು ಮತ್ತು ಅತ್ಯಾಧುನಿಕ ಗ್ಯಾಜೆಟ್‌ಗಳಲ್ಲಿ ಬಳಸಲಾಗುವ 5 ನ್ಯಾನೋಮೀಟರ್ (nm), 3nm ಮತ್ತು 2nm ನಂತಹ ಅತ್ಯಂತ ಸೂಕ್ಷ್ಮ ಚಿಪ್‌ಗಳನ್ನು ತಯಾರಿಸಲು EUV (Extreme Ultraviolet) ಲಿಥೋಗ್ರಫಿ ಯಂತ್ರಗಳು ಬೇಕೇ ಬೇಕು. ಇಡೀ ಜಗತ್ತಿನಲ್ಲಿ ಈ EUV ಯಂತ್ರಗಳನ್ನು ತಯಾರಿಸುವ ಏಕೈಕ ಕಂಪನಿ ASML ಮಾತ್ರ. ಈ ತಂತ್ರಜ್ಞಾನದಲ್ಲಿ ಇದಕ್ಕೆ ಯಾವುದೇ ಪ್ರತಿಸ್ಪರ್ಧಿ ಇಲ್ಲ.

ಇದನ್ನೂ ಓದಿ: ಭಾರತಕ್ಕೆ 2ನೇ ಅತಿದೊಡ್ಡ ರಫ್ತು ಮಾರುಕಟ್ಟೆ ಈಗ ಯುಎಇ ಅಲ್ಲ, ಸಿಂಗಾಪುರ

ಶೇ. 80 ಕ್ಕೂ ಹೆಚ್ಚು ಮಾರುಕಟ್ಟೆ ಪಾಲು: ಮುಂದುವರಿದ ಚಿಪ್‌ಗಳು ಮಾತ್ರವಲ್ಲದೆ, ವಾಹನಗಳು ಮತ್ತು ಸಾಮಾನ್ಯ ಎಲೆಕ್ಟ್ರಾನಿಕ್ಸ್‌ನಲ್ಲಿ ಬಳಸುವ ಸಾಂಪ್ರದಾಯಿಕ ಚಿಪ್‌ಗಳನ್ನು ತಯಾರಿಸುವ DUV (Deep Ultraviolet) ಲಿಥೋಗ್ರಫಿ ಮಾರುಕಟ್ಟೆಯಲ್ಲೂ ASML ಶೇಕಡಾ 82 ಕ್ಕೂ ಹೆಚ್ಚು ಆದಾಯದ ಪಾಲನ್ನು ಹೊಂದಿದೆ. ನಿಕಾನ್ (Nikon) ಮತ್ತು ಕ್ಯಾನನ್ (Canon) ನಂತಹ ಕಂಪನಿಗಳು ಇದರ ಹತ್ತಿರಕ್ಕೂ ಬರಲು ಸಾಧ್ಯವಿಲ್ಲ.

ವಿಶ್ವದ ಅತ್ಯಂತ ಸಂಕೀರ್ಣ ಯಂತ್ರ: ASML ನ ಒಂದು ಹೈ-ಎಂಡ್ ಯಂತ್ರದ ಬೆಲೆ ಸುಮಾರು 200 ಮಿಲಿಯನ್‌ನಿಂದ 370 ಮಿಲಿಯನ್ ಡಾಲರ್ (ಅಂದರೆ ಸುಮಾರು 1,900 ರಿಂದ 3,500 ಕೋಟಿ ರೂ). ಇದು ಒಂದು ದೊಡ್ಡ ಸಾರಿಗೆ ವಿಮಾನದ ಗಾತ್ರದಲ್ಲಿದ್ದು, ಇದನ್ನು ಬೇರೆ ದೇಶಕ್ಕೆ ಸಾಗಿಸಲು ಮೂರು ಬೋಯಿಂಗ್ 747 ವಿಮಾನಗಳು ಬೇಕಾಗುತ್ತವೆ. ಇದೇ ಕಾರಣಕ್ಕೆ ASML ಯುರೋಪ್‌ನ ಅತ್ಯಂತ ಮೌಲ್ಯಯುತ ತಂತ್ರಜ್ಞಾನ ಕಂಪನಿಯಾಗಿದೆ.

ಟಾಟಾ – ASML ಒಪ್ಪಂದ ಭಾರತಕ್ಕೆ ಎಷ್ಟು ಮುಖ್ಯ?

ಗುಜರಾತ್‌ನ ಧೋಲೇರಾದಲ್ಲಿ ಸುಮಾರು 11 ಬಿಲಿಯನ್ ಡಾಲರ್ (1.05 ಲಕ್ಷ ಕೋಟಿ ರೂಗೂ ಹೆಚ್ಚು) ವೆಚ್ಚದಲ್ಲಿ ಟಾಟಾ ಸಂಸ್ಥೆಯು ಭಾರತದ ಮೊದಲ ವಾಣಿಜ್ಯ 300mm ಸೆಮಿಕಂಡಕ್ಟರ್ ಫ್ಯಾಬ್ ಅನ್ನು ಸ್ಥಾಪಿಸುತ್ತಿದೆ. ಈ ಹಂತದಲ್ಲಿ ASML ಜೊತೆಗಿನ ಒಪ್ಪಂದವು ಭಾರತದ ಪಾಲಿಗೆ “ಸಾಮ್ರಾಜ್ಯದ ಕೀಲಿಕೈ” ಸಿಕ್ಕಂತಾಗಿದೆ.

ಸೆಮಿಕಂಡಕ್ಟರ್ ಉದ್ಯಮದಲ್ಲಿ ಯಂತ್ರೋಪಕರಣಗಳ ಕೊರತೆ ಮತ್ತು ತಂತ್ರಜ್ಞಾನದ ಕೊರತೆಯಿಂದಾಗಿ ಯೋಜನೆಗಳು ವಿಫಲವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆದರೆ ಜಾಗತಿಕ ದೈತ್ಯ ASML ನೇರವಾಗಿ ಟಾಟಾ ಜೊತೆ ಕೈಜೋಡಿಸಿರುವುದರಿಂದ, ಧೋಲೇರಾ ಯೋಜನೆಗೆ ಅತ್ಯಾಧುನಿಕ ಲಿಥೋಗ್ರಫಿ ಉಪಕರಣಗಳು ಮತ್ತು ತಾಂತ್ರಿಕ ಬೆಂಬಲ ಯಾವುದೇ ಅಡೆತಡೆಯಿಲ್ಲದೆ ಸಿಗಲಿದೆ.

ಚಿಪ್ ತಯಾರಿಕೆಗೆ ಅತ್ಯಂತ ನುರಿತ ಇಂಜಿನಿಯರ್‌ಗಳ ಅಗತ್ಯವಿದೆ. ಈ ಒಪ್ಪಂದದ ಪ್ರಕಾರ, ASML ಕಂಪನಿಯು ಭಾರತೀಯ ಯುವಕರಿಗೆ ಲಿಥೋಗ್ರಫಿ ತಂತ್ರಜ್ಞಾನದಲ್ಲಿ ತರಬೇತಿ ನೀಡಲಿದ್ದು, ಭಾರತದಲ್ಲಿ ಸ್ವಂತ ಸಂಶೋಧನೆ ಮತ್ತು ಅಭಿವೃದ್ಧಿ (R&D) ಮೂಲಸೌಕರ್ಯವನ್ನು ಬೆಳೆಸಲು ಸಹಾಯ ಮಾಡಲಿದೆ.

ಇದನ್ನೂ ಓದಿ: ದಿ ಹೇಗ್‌ನಲ್ಲಿ 16 ಡಚ್ ಸಿಇಒಗಳನ್ನು ಭೇಟಿಯಾದ ಪ್ರಧಾನಿ ಮೋದಿ: ಏನಿದು ಒಪ್ಪಂದ? ಏನು ಚರ್ಚೆಯಾಯಿತು?

ಭಾರತಕ್ಕೆ ಜಾಗತಿಕ ಮನ್ನಣೆ

ಇದು ಕೇವಲ ಸರಕು ಖರೀದಿಯ ಒಪ್ಪಂದವಲ್ಲ, ಇದೊಂದು ಕಾರ್ಯತಂತ್ರದ ಮೈತ್ರಿ (Strategic Partnership). ಜಾಗತಿಕ ಚಿಪ್ ಮಾರುಕಟ್ಟೆಯಲ್ಲಿ ತೈವಾನ್ (TSMC), ಅಮೆರಿಕ (Intel) ಮತ್ತು ದಕ್ಷಿಣ ಕೊರಿಯಾ (Samsung) ದೇಶಗಳು ಹೊಂದಿರುವ ಉನ್ನತ ತಂತ್ರಜ್ಞಾನದ ಮಾರುಕಟ್ಟೆಗೆ ಭಾರತವೂ ಲಗ್ಗೆ ಇಡಲು ಇದು ಹೆದ್ದಾರಿಯಾಗಲಿದೆ.

ಇದುವರೆಗೆ ಭಾರತವು ಕೇವಲ ಚಿಪ್‌ಗಳನ್ನು ಜೋಡಿಸುವ (Assembly) ಅಥವಾ ವಿನ್ಯಾಸ (Design) ಮಾಡುವ ಕೆಲಸಕ್ಕೆ ಸೀಮಿತವಾಗಿತ್ತು. ಆದರೆ, ಜಗತ್ತಿನ ಅತಿ ದೊಡ್ಡ ಚಿಪ್ ಯಂತ್ರ ತಯಾರಕ ಕಂಪನಿಯಾದ ASML, ಟಾಟಾ ಗ್ರೂಪ್ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಭಾರತವು ಇನ್ನು ಮುಂದೆ ಜಾಗತಿಕ ಸೆಮಿಕಂಡಕ್ಟರ್ ಉತ್ಪಾದನೆಯ ಪ್ರಮುಖ ಕೇಂದ್ರವಾಗಿ (Global Chip Hub) ಬದಲಾಗುವುದು ಖಚಿತವಾಗಿದೆ. ಸೆಮಿಕಂಡಕ್ಟರ್ ವ್ಯಾಲ್ಯೂ ಚೈನ್​ನಲ್ಲಿ ಭಾರತ ಮೇಲೇರಬಹುದು. ಇದು ‘ಮೇಕ್ ಇನ್ ಇಂಡಿಯಾ’ ಮತ್ತು ಆತ್ಮನಿರ್ಭರ ಭಾರತ ಯೋಜನೆಗೆ ಸಿಕ್ಕ ಅತಿ ದೊಡ್ಡ ಯಶಸ್ಸು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

PBKS vs RCB: ಪಂಜಾಬ್ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಸೃಷ್ಟಿಸಿದ ಕೊಹ್ಲಿ – Kannada News | Virat Kohli’s IPL 2026 Record: 9th 500+ Season and 5500 Runs for RCB Opener!

ಐಪಿಎಲ್ 2026 (IPL 2026) ರ ನಿರ್ಣಾಯಕ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡಗಳ ನಡುವೆ ನಡೆಯಿತು. ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​​ಸಿಬಿ ಪರ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ತಂಡಕ್ಕೆ ಮತ್ತೊಮ್ಮೆ ಅಡಿಪಾಯ ಹಾಕಿಕೊಟ್ಟರು. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅಜೇಯ ಶತಕ ಬಾರಿಸಿದ್ದ ಕೊಹ್ಲಿ, ಪಂಜಾಬ್ ವಿರುದ್ಧವೂ ಅದೇ ಆಟವನ್ನು ಮುಂದುವರೆಸಿದರು. ಪರಿಣಾಮವಾಗಿ ಸತತ ಎರಡನೇ ಪಂದ್ಯದಲ್ಲೂ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ 9 ಐಪಿಎಲ್ ಸೀಸನ್​ಗಳಲ್ಲಿ 500+ ರನ್ ಕಲೆಹಾಕಿದ ಏಕೈಕ ಆಟಗಾರ ಎಂಬ ದಾಖಲೆಯನ್ನು ಸೃಷ್ಟಿಸಿದರು.

ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ 37 ಎಸೆತಗಳನ್ನು ಎದುರಿಸಿದ ಕೊಹ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 58 ರನ್ ಬಾರಿಸಿ ಔಟಾದರು. ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಈ ಆವೃತ್ತಿಯಲ್ಲಿ 500 ರನ್​ಗಳ ಗಡಿ ಕೂಡ ದಾಟಿದರು. ಇಲ್ಲಿಯವರೆಗೆ ನಡೆದಿರುವ 19 ಆವೃತ್ತಿಗಳಲ್ಲಿ ಕೊಹ್ಲಿ 500 ಕ್ಕೂ ಅಧಿಕ ರನ್ ಕಲೆಹಾಕಿರುವ 9ನೇ ಸೀಸನ್ ಇದಾಗಿದೆ. ಈ ಮೂಲಕ ಅಧಿಕ ಬಾರಿ 500+ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಡೇವಿಡ್ ವಾರ್ನರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ತಲಾ ಏಳು ಸೀಸನ್​ಗಳಲ್ಲಿ 500+ ರನ್ ಕಲೆಹಾಕಿದ್ದಾರೆ.

9 ಆವೃತ್ತಿಗಳಲ್ಲಿ 500+ ರನ್

  • 2011 ರ ಐಪಿಎಲ್‌: 557 ರನ್‌
  • 2013 ರ ಐಪಿಎಲ್‌: 634 ರನ್‌
  • 2015 ರ ಐಪಿಎಲ್‌: 505 ರನ್‌
  • 2016 ರ ಐಪಿಎಲ್‌: 973 ರನ್‌
  • 2018 ರ ಐಪಿಎಲ್‌: 530 ರನ್‌
  • 2023 ರ ಐಪಿಎಲ್‌: 639 ರನ್‌
  • 2024 ರ ಐಪಿಎಲ್‌: 741 ರನ್‌
  • 2025 ರ ಐಪಿಎಲ್‌: 657 ರನ್‌
  • 2026 ರ ಐಪಿಎಲ್‌: 500* ರನ್‌

ಆರಂಭಿಕನಾಗಿ 5500 ರನ್

ಇದರ ಜೊತೆಗೆ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಮತ್ತೊಂದು ಇತಿಹಾಸವನ್ನು ನಿರ್ಮಿಸಿದರು. ಐಪಿಎಲ್ ಇತಿಹಾಸದಲ್ಲಿ ಒಂದೇ ಫ್ರಾಂಚೈಸಿಯ ಪರ ಆರಂಭಿಕ ಆಟಗಾರನಾಗಿ 5500 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ. ಇಲ್ಲಿಯವರೆಗೆ, ಐಪಿಎಲ್‌ನಲ್ಲಿ ಒಂದೇ ಫ್ರಾಂಚೈಸಿ ಪರ ಆಡುವಾಗ ಯಾವುದೇ ಬ್ಯಾಟ್ಸ್‌ಮನ್ ಈ ಸಾಧನೆ ಮಾಡಿಲ್ಲ.

PBKS vs RCB IPL 2026 Live Score: ಆರ್​ಸಿಬಿ 200 ರನ್ ಪೂರ್ಣ

ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಏಳು ರನ್‌ಗಳು ಬೇಕಾಗಿದ್ದವು. ಅಮಾನತುಲ್ಲಾ ಉಮರ್ಜೈ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಈ ಮೈಲಿಗಲ್ಲು ಸಾಧಿಸಿದರು. ಒಟ್ಟಾರೆಯಾಗಿ, ಕೊಹ್ಲಿಗಿಂತ ಮೊದಲು, ಶಿಖರ್ ಧವನ್ ಮತ್ತು ಡೇವಿಡ್ ವಾರ್ನರ್ ಐಪಿಎಲ್‌ನಲ್ಲಿ ಆರಂಭಿಕರಾಗಿ 5500 ರನ್‌ಗಳನ್ನು ಗಳಿಸಿದ್ದಾರೆ. ಆದರೆ ಅವರು ವಿಭಿನ್ನ ಫ್ರಾಂಚೈಸಿಗಳಿಗಾಗಿ ಆಡುವಾಗ ಈ ಸಾಧನೆಯನ್ನು ಮಾಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:01 pm, Sun, 17 May 26

Source link

ಕೋಲಾರ: ಜವರಾಯನಾದ ಕೃಷಿ ಹೊಂಡ, ಈಜು ಕಲಿಸಲು ಹೋದ ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ – Kannada News | Drowning Tragedy: Father and Two Children Die in Farm Pond While Learning to Swim

ಕೋಲಾರ, ಮೇ 17: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದ ತಂದೆ ಹಾಗೂ ಇಬ್ಬರು ಮುದ್ದಿನ ಮಕ್ಕಳು ನೀರು ಪಾಲಾಗಿರುವ (death) ದಾರುಣ ಘಟನೆ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಮೃತ ದುರ್ದೈವಿಗಳು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲು ಜಾರಿ ಬಿದ್ದು ದುರಂತ

ಭಾನುವಾರ ರಜಾದಿನವಾಗಿದ್ದರಿಂದ ತಂದೆ ಶ್ರೀನಿವಾಸ್​​, ತಮ್ಮಿಬ್ಬರು ಮಕ್ಕಳಿಗೆ ಈಜು ಕಲಿಸಿಕೊಡಲು ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಗ್ರಾಮದ ಭೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡದ ಬಳಿ ತೆರಳಿದ್ದಾಗ, ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆ. ದುರದೃಷ್ಟವಶಾತ್ ಮೂವರೂ ಕೃಷಿ ಹೊಂಡದಲ್ಲೇ ಮುಳುಗಿ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ.

Source link

Vasthu Tips: ಮನೆ ಕಟ್ಟುವಾಗ ಕಿಟಕಿ ನಿರ್ಮಾಣದ ದಿಕ್ಕುಗಳ ಬಗ್ಗೆ ಇರಲಿ ಎಚ್ಚರ; ವಾಸ್ತು ಸಲಹೆ ಇಲ್ಲಿದೆ – Kannada News | Vastu Shastra Guide: Maximize Home Positive Energy with Right Window Placement

ಕಿಟಕಿ ನಿರ್ಮಾಣದ ದಿಕ್ಕುImage Credit source: Pinterest

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಮುಖ್ಯ ಬಾಗಿಲಿನಷ್ಟೇ ಕಿಟಕಿಗಳಿಗೂ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಕಿಟಕಿಗಳನ್ನು ಕೇವಲ ಗಾಳಿ-ಬೆಳಕು ಬರುವ ದಾರಿಯನ್ನಾಗಿ ಅಷ್ಟೇ ಅಲ್ಲದೆ, ಮನೆಯಲ್ಲಿ ಧನಾತ್ಮಕ ಶಕ್ತಿ (Positive Energy), ಸಂತೋಷ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ತಪ್ಪು ದಿಕ್ಕಿನಲ್ಲಿ ಅಥವಾ ತಪ್ಪು ಸಂಖ್ಯೆಯಲ್ಲಿ ಕಿಟಕಿಗಳನ್ನು ಅಳವಡಿಸುವುದರಿಂದ ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಬಹುದು. ಆದ್ದರಿಂದ ಮನೆ ಕಟ್ಟುವಾಗ ಕಿಟಕಿಗಳ ವಿಷಯದಲ್ಲಿ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ.

ಕಿಟಕಿಗಳು ತೆರೆಯುವ ದಿಕ್ಕು ಹೀಗಿರಲಿ:

ವಾಸ್ತು ಶಾಸ್ತ್ರದಲ್ಲಿ ಕಿಟಕಿ ಮತ್ತು ಬಾಗಿಲುಗಳು ಯಾವ ಕಡೆಗೆ ತೆರೆದುಕೊಳ್ಳುತ್ತವೆ ಎಂಬುದು ಅತ್ಯಂತ ಮುಖ್ಯವಾದ ವಿಷಯವಾಗಿದೆ. ಮನೆಯ ಕಿಟಕಿಗಳಾಗಲಿ ಅಥವಾ ಬಾಗಿಲುಗಳಾಗಲಿ ಯಾವಾಗಲೂ ಒಳಮುಖವಾಗಿ (ಒಳಗಡೆಗೆ) ತೆರೆಯಬೇಕು. ಹೊರಮುಖವಾಗಿ ತೆರೆಯುವ ಕಿಟಕಿಗಳನ್ನು ವಾಸ್ತು ಪ್ರಕಾರ ಅಶುಭವೆಂದು ಪರಿಗಣಿಸಲಾಗುತ್ತದೆ. ಹೀಗೆ ಹೊರಗೆ ತೆರೆಯುವ ಕಿಟಕಿಗಳಿಂದ ಮನೆಯಲ್ಲಿನ ಧನಲಕ್ಷ್ಮಿ ಮತ್ತು ಧನಾತ್ಮಕ ಶಕ್ತಿ ಹೊರಗೆ ಹೋಗುತ್ತದೆ ಎಂಬ ನಂಬಿಕೆಯಿದೆ.

ದಕ್ಷಿಣ ದಿಕ್ಕಿನ ಕಿಟಕಿಗಳಿದ್ದರೆ ಎಚ್ಚರ:

ವಾಸ್ತು ಶಾಸ್ತ್ರದ ಪ್ರಕಾರ, ದಕ್ಷಿಣ ದಿಕ್ಕನ್ನು ಯಮನ ದಿಕ್ಕು ಎಂದು ಪರಿಗಣಿಸಲಾಗುವುದರಿಂದ ಈ ದಿಕ್ಕಿನಲ್ಲಿ ಕಿಟಕಿಗಳನ್ನು ನಿರ್ಮಿಸುವುದು ಅಶುಭ. ಒಂದು ವೇಳೆ ನಿಮ್ಮ ಮನೆಯಲ್ಲಿ ಈಗಾಗಲೇ ದಕ್ಷಿಣ ದಿಕ್ಕಿಗೆ ಕಿಟಕಿಗಳಿದ್ದರೆ, ಅವುಗಳನ್ನು ಆದಷ್ಟು ಕಡಿಮೆ ಸಮಯದವರೆಗೆ ಮಾತ್ರ ತೆರೆದಿಡಬೇಕು. ಈ ದಿಕ್ಕಿನಿಂದ ಬರುವ ನಕಾರಾತ್ಮಕ ಗಾಳಿಯು ಮನೆಯ ಸದಸ್ಯರ ಆರೋಗ್ಯ ಮತ್ತು ನೆಮ್ಮದಿಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು.

ಉತ್ತರ ದಿಕ್ಕು ಕುಬೇರನ ಆಶೀರ್ವಾದ:

ಮನೆಯ ಉತ್ತರ ದಿಕ್ಕಿನಲ್ಲಿ ಕಿಟಕಿಗಳನ್ನು ಹೊಂದಿರುವುದನ್ನು ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಉತ್ತರ ದಿಕ್ಕು ಸಂಪತ್ತಿನ ಅಧಿದೇವತೆಯಾದ ಕುಬೇರನಿಗೆ ಸೇರಿದ್ದಾಗಿದೆ. ಈ ದಿಕ್ಕಿನಲ್ಲಿ ಕಿಟಕಿಗಳನ್ನು ನಿರ್ಮಿಸುವುದರಿಂದ ಮನೆಯಲ್ಲಿ ಆರ್ಥಿಕ ಪ್ರಗತಿ ಕಂಡುಬರುತ್ತದೆ ಮತ್ತು ಸಂಪತ್ತು ವೃದ್ಧಿಯಾಗುತ್ತದೆ. ಈ ಕಿಟಕಿಗಳನ್ನು ಪ್ರತಿದಿನ ನಿಯಮಿತವಾಗಿ ತೆರೆಯುವುದರಿಂದ ಮನೆಯೊಳಗೆ ಸದಾ ಲಕ್ಷ್ಮಿಯ ಕೃಪೆ ಇರುತ್ತದೆ.

ಇದನ್ನೂ ಓದಿ: ನಿಮ್ಮ ಜನ್ಮ ದಿನಾಂಕದಲ್ಲೇ ಅಡಗಿದೆ ಮದುವೆಯ ರಹಸ್ಯ; ನಿಮಗಾಗುವುದು ಪ್ರೇಮ ವಿವಾಹವೋ ಅಥವಾ ಅರೇಂಜ್ ಮ್ಯಾರೇಜ್?

ಪೂರ್ವ ದಿಕ್ಕು ಸಕಾರಾತ್ಮಕತೆಯ ಸಂಕೇತ:

ಪೂರ್ವಕ್ಕೆ ಮುಖ ಮಾಡಿರುವ ಕಿಟಕಿಗಳನ್ನು ಹೊಂದಿರುವುದು ಕೂಡ ವಾಸ್ತು ಪ್ರಕಾರ ಅತ್ಯಂತ ಶ್ರೇಷ್ಠ. ಪೂರ್ವ ದಿಕ್ಕಿನಿಂದ ಬರುವ ಸೂರ್ಯನ ಮೊದಲ ಕಿರಣಗಳು ಮನೆಯೊಳಗೆ ಪ್ರವೇಶಿಸಿದಾಗ, ಅದು ಇಡೀ ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ನಾಶಪಡಿಸಿ, ಅಪಾರ ಸಕಾರಾತ್ಮಕತೆಯನ್ನು ತರುತ್ತದೆ. ಇದು ಮನೆಯಲ್ಲಿರುವವರ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಮನಸ್ಸಿಗೆ ಉಲ್ಲಾಸವನ್ನು ನೀಡುತ್ತದೆ.

ಕಿಟಕಿಗಳ ಸಂಖ್ಯೆ ಸಮವಾಗಿರಲಿ:

ಮನೆ ನಿರ್ಮಾಣ ಮಾಡುವಾಗ ಕಿಟಕಿಗಳ ಒಟ್ಟು ಸಂಖ್ಯೆಯ ಕಡೆಗೂ ಗಮನ ಹರಿಸಬೇಕು. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಒಟ್ಟು ಕಿಟಕಿಗಳ ಸಂಖ್ಯೆಯು ಯಾವಾಗಲೂ ಸಮ ಸಂಖ್ಯೆಯಲ್ಲಿರಬೇಕು (ಉದಾಹರಣೆಗೆ 2, 4, 6, 8, 10 ಇತ್ಯಾದಿ). ಯಾವುದೇ ಕಾರಣಕ್ಕೂ ಬೆಸ ಸಂಖ್ಯೆಯಲ್ಲಿ (Odd Numbers) ಕಿಟಕಿಗಳು ಇರಬಾರದು. ಬೆಸ ಸಂಖ್ಯೆಯ ಕಿಟಕಿಗಳು ಮನೆಯಲ್ಲಿ ವಾಸ್ತು ದೋಷಗಳಿಗೆ ಕಾರಣವಾಗಿ, ಅನಗತ್ಯ ಖರ್ಚು ಹಾಗೂ ಕೌಟುಂಬಿಕ ಕಲಹಗಳನ್ನು ಉಂಟುಮಾಡಬಹುದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version