‘ಅಂದೇ ಹೇಳಿದ್ವಿ ಡಿ. ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ’: ಪಂಚಮುಖಿ ಆಂಜನೇಯ ದೇವಸ್ಥಾನದ ಅರ್ಚಕರ ಸಂತಸ
ರಾಯಚೂರು, ಜೂನ್ 02: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ನಿಯೋಜನೆಗೊಂಡಿರುವ ಬೆನ್ನಲ್ಲೇ, ರಾಯಚೂರು ತಾಲೂಕಿನ ಪ್ರಸಿದ್ಧ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಸಡಗರ ಮನೆಮಾಡಿದೆ. ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲಿದ್ದಾರೆ ಎಂದು ಈ ಹಿಂದೆ ಭವಿಷ್ಯ ನುಡಿದಿದ್ದ ದೇವಸ್ಥಾನದ ಮೂಲ ಅರ್ಚಕ ಶಾಮಾಚಾರ್ಯರು ಟಿವಿ9 ಎದುರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಮುಖ್ಯಾಂಶಗಳು ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದಿದ್ದ ರಾಯಚೂರು ಅರ್ಚಕರ ಭವಿಷ್ಯ ನಿಜವಾಗಿದೆ. ಪಂಚಮುಖಿ ಸನ್ನಿಧಿಯಲ್ಲಿ ಈ ಹಿಂದೆ ಪೂಜೆ ಸಲ್ಲಿಸಿದ್ದ…