ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ದಾಖಲೆಯೊಂದಿಗೆ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನ ರನ್ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅದು ಕೂಡ ಶ್ರೀಲಂಕಾದ ಕುಮಾರ ಸಂಗಾಕ್ಕರ ಅವರನ್ನು ಹಿಂದಿಕ್ಕುವ ಮೂಲಕ.
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ದಾಖಲೆಯೊಂದಿಗೆ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನ ರನ್ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅದು ಕೂಡ ಶ್ರೀಲಂಕಾದ ಕುಮಾರ ಸಂಗಾಕ್ಕರ ಅವರನ್ನು ಹಿಂದಿಕ್ಕುವ ಮೂಲಕ.
ಜಬಲ್ಪುರ, ಜನವರಿ 14: ಯಾವುದೋ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ರಾತ್ರೋರಾತ್ರಿ ಮಹಿಳೆಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ್ದಷ್ಟೇ ಅಲ್ಲದೆ, ಮನೆಯ ಮೇಲೆ ಮನ ಬಂದಂತೆ ಗುಂಡು ಹಾರಿಸಿದ್ದಾರೆ.ಎದುರು ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿರುವ ವಿಡಿಯೋ ವೈರಲ್ ಆಗಿದೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ, ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವಿಷಯದಲ್ಲಿ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಗಾಯಗೊಂಡ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹರ್ಮನ್ಪ್ರೀತ್ ಕೌರ್ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ ಗಳೊಂದಿಗೆ ಅಜೇಯ 71 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಹರ್ಮನ್ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಧಿಕ ಅರ್ಧಶತಕ ಸಿಡಿಸಿದ ದಾಖಲೆ ಇದೀಗ ಹರ್ಮನ್ಪ್ರೀತ್ ಕೌರ್ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ನ್ಯಾಟ್ ಸೀವರ್ ಬ್ರಂಟ್ ಹೆಸರಿನಲ್ಲಿತ್ತು.
ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿರುವ ಇಂಗ್ಲೆಂಡ್ ಆಟಗಾರ್ತಿ ನ್ಯಾಟ್ ಸೀವರ್ ಬ್ರಂಟ್ ಈವರೆಗೆ 31 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 9 ಅರ್ಧಶತಕ ಬಾರಿಸಿ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಧಿಕ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.
ಇದೀಗ ಈ ದಾಖಲೆಯನ್ನು ಹರ್ಮನ್ಪ್ರೀತ್ ಕೌರ್ ಅಳಿಸಿ ಹಾಕಿದ್ದಾರೆ. ಮುಂಬೈ ಇಂಡಿಯನ್ಸ್ ಪರ 31 ಪಂದ್ಯಗಳನ್ನಾಡಿರುವ ಹರ್ಮನ್ ಒಟ್ಟು 10 ಅರ್ಧಶತಕ ಬಾರಿಸಿ WPL ನಲ್ಲಿ ಅತೀ ಹೆಚ್ಚು ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಹಾಗೆಯೇ ಈ ಅರ್ಧಶತಕದೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ 1000+ ರನ್ ಕಲೆಹಾಕಿದ ಮೊದಲ ಭಾರತೀಯ ಬ್ಯಾಟರ್ ಹಾಗೂ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ನ್ಯಾಟ್ ಸೀವರ್ ಬ್ರಂಟ್ (1101). ಇದೀಗ 1016 ರನ್ ಗಳೊಂದಿಗೆ ಹರ್ಮನ್ಪ್ರೀತ್ ಕೌರ್ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 6ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 192 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಹರ್ಮನ್ಪ್ರೀತ್ ಕೌರ್ (71) ಅಜೇಯ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 19.2 ಓವರ್ಗಳಲ್ಲಿ 193 ರನ್ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿಲ್ಲಿ ಮುಂದುವರೆದ ಚಳಿಯಬ್ಬರ
ಬೆಂಗಳೂರು, ಜನವರಿ 14: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ಸೃಷ್ಟಿಸಿದ ಹಲ್ಚಲ್ ಅಷ್ಟಿಷ್ಟಲ್ಲ. ಈ ಸಿನಿಮಾದ ಟೀಸರ್ ನೋಡಿದ ಅನೇಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ಈ ಟೀಸರ್ನಲ್ಲಿದ್ದ ಬೋಲ್ಡ್ ದೃಶ್ಯಗಳ ಬಗ್ಗೆ ಕೆಲವರು ಅಪಸ್ವರ ತೆಗೆದಿದ್ದರು. ಈ ಸಂಬಂಧ ಸಾಮಾಜಿಕ ಕಾರ್ಯಕರ್ತರು ಹಾಗೂ ಮಹಿಳಾ ಕಮಿಷನ್ ಸೆನ್ಸಾರ್ ಮಂಡಳಿಗೆ ದೂರು ನೀಡಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿತ್ತು. ಆದರೆ, ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಸೆನ್ಸಾರ್ ಮಂಡಳಿ ಸ್ಪಷ್ಟವಾಗಿ ಹೇಳಿದೆ.
ಎನ್ಡಿಟಿವಿ ಮಾಡಿದ ವರದಿ ಪ್ರಕಾರ, ಸೆನ್ಸಾರ್ ಮಂಡಳಿ ಈ ವಿಷಯದಲ್ಲಿ ಮಧ್ಯ ಬರಲು ಸಾಧ್ಯವಿಲ್ಲ ಎಂದು ಹೇಳಿದೆಯಂತೆ. ಏಕೆಂದರೆ ‘ಟಾಕ್ಸಿಕ್’ ಟೀಸರ್ ಯೂಟ್ಯೂಬ್ ಸೇರಿದಂತೆ ಇತರೆ ಸೋಶಿಯಲ್ ಮೀಡಿಯಾಗಳಲ್ಲಿ ಮಾತ್ರ ರಿಲೀಸ್ ಆಗಿದೆ. ಸೆನ್ಸಾರ್ ಮಂಡಳಿ ಥಿಯೇಟರ್ಗಳಲ್ಲಿ ರಿಲೀಸ್ ಆಗುವ ಸಿನಿಮಾ, ಟ್ರೇಲರ್ ಹಾಗೂ ಜಾಹೀರಾತುಗಳಿಗೆ ಮಾತ್ರ ಪ್ರಮಾಣಪತ್ರ ನೀಡುತ್ತವೆ. ಯೂಟ್ಯೂಬ್ನಲ್ಲಿ ರಿಲೀಸ್ ಆಗುವ ವಿಷಯಗಳಿಗೆ ಅವರು ಮೂಗುತೂರಿಸಲು ಸಾಧ್ಯವಿಲ್ಲ.
‘ಟಾಕ್ಸಿಕ್ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಯೂಟ್ಯೂಬ್ನಲ್ಲಿ. ಇದರಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಸದ್ಯದ ಮಟ್ಟಿಗೆ ಟಾಕ್ಸಿಕ್ಗೆ ಸಂಬಂಧಿಸಿದಂತೆ ಸೆನ್ಸಾರ್ ಮಾಡಲು ಯಾವುದೇ ಅರ್ಜಿ ಬಂದಿಲ್ಲ. ನಾವು ಈ ಚಿತ್ರದ ಯಾವುದೇ ಕಂಟೆಂಟ್ನ ಸೆನ್ಸಾರ್ ಮಾಡಿಲ್ಲ’ ಎಂದು ಸ್ಪಷ್ಟಮಾತುಗಳಲ್ಲಿ ಹೇಳಿದೆ. ಸೆನ್ಸಾರ್ ಮಂಡಳಿ ಕಾರ್ಯವೈಖರಿ ಗೊತ್ತಿದ್ದರೆ ಈ ರೀತಿಯ ದೂರು ಸೆನ್ಸಾರ್ ಮಂಡಳಿಗೆ ದಾಖಲಾಗುತ್ತಿರಲಿಲ್ಲವೇನೋ.
ಇದನ್ನೂ ಓದಿ: ‘ಟಾಕ್ಸಿಕ್’ ಟೀಸರ್ನಲ್ಲಿ ತಪ್ಪು: ವೀಕ್ಷಕರ ದಾರಿ ತಪ್ಪಿಸಲಾಗಿದೆಯೇ?
ಈ ಮೊದಲು ಕೂಡ ಯೂಟ್ಯೂಬ್ನಲ್ಲಿ ರಿಲೀಸ್ ಆದ ಅನೇಕ ಬೋಲ್ಡ್ ಕಂಟೆಂಟ್ಗಳ ಬಗ್ಗೆ ಪ್ರಶ್ನೆ ಎದುರಾಗಿತ್ತು. ಆದರೆ, ಈ ವಿಷಯದಲ್ಲಿ ಹಸ್ತಕ್ಷೇಪ ಸಾಧ್ಯವಿಲ್ಲ ಎಂದು ಸೆನ್ಸಾರ್ ಮಂಡಳಿ ನೇರವಾಗಿ ಹೇಳಿತ್ತು. ಒಂದೊಮ್ಮೆ ಇದೇ ರೀತಿಯ ಬೋಲ್ಡ್ ಕಂಟೆಂಟ್ಗಳು ಸಿನಿಮಾ ಸೆನ್ಸಾರ್ ಮಾಡುವಾಗ ಕಂಡರೆ ಸೆನ್ಸಾರ್ ಮಂಡಳಿ ಅದನ್ನು ಪ್ರಶ್ನೆ ಮಾಡಬಹುದು. ಎ ಸರ್ಟಿಫಿಕೇಟ್ ನೀಡಬಹುದು. ಈಗ ಟೀಸರ್ ಯೂಟ್ಯೂಬ್ನಲ್ಲಿ ಮಾತ್ರ ರಿಲೀಸ್ ಆಗಿರುವುದರಿಂದ ಚಿತ್ರಕ್ಕೆ ಯಾವುದೇ ಸಮಸ್ಯೆ ಇಲ್ಲ. ಈಗ ಸೆನ್ಸಾರ್ ಮಂಡಳಿಯ ಹೇಳಿಕೆಯು ‘ಟಾಕ್ಸಿಕ್’ ತಂಡಕ್ಕೆ ದೊಡ್ಡ ರಿಲೀಫ್ ನೀಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On – 7:27 am, Wed, 14 January 26
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಎರಡು ಉತ್ತರಗಳು ಕೇಳಿ ಬರುತ್ತಿದೆ. ಅದು ಕೂಡ ನವಿ ಮುಂಬೈ ಮತ್ತು ರಾಯ್ಪುರ್ ಕಡೆಯಿಂದ.
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂದಿನ ಸೀಸನ್ ಗಾಗಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಬಾರಿ RCB ಕಣಕ್ಕಿಳಿಯುವುದು ಡೌಟ್.
2025ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ RCB ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಏರ್ಪಡಿಸಿತ್ತು. ಈ ವೇಳೆ ಉಂಟಾದ ಕಾಲ್ತುತಿದಿಂದಾಗಿ 11 ಮಂದಿ ಮೃತಪಟ್ಟಿದ್ದರು. ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.
ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಮೂಲಸೌಕರ್ಯಗಳ ಕೊರತೆ ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಇದೇ ಕಾರಣದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಾಟವನ್ನು ನಿಷೇಧಿಸಲಾಗಿದೆ. ಅಲ್ಲದೆ ಮುಂಬರುವ ಐಪಿಎಲ್ ಪಂದ್ಯಗಳಿಗೂ ಎನ್ಒಸಿ ಸಿಗುವುದು ಅನುಮಾನ ಎನ್ನಲಾಗಿದೆ.
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನವಿ ಮುಂಬೈ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ಹೊಸ ತವರು ಮೈದಾನವಾಗಿ ಆಯ್ಕೆ ಮಾಡಿಕೊಂಡಿದೆ. ಅಲ್ಲದೆ ಈ ಸ್ಟೇಡಿಯಂನಲ್ಲಿ ಒಟ್ಟು 5 ಮ್ಯಾಚ್ ಗಳನ್ನು ಆಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.
ಇನ್ನುಳಿದ 2 ಹೋಮ್ ಮ್ಯಾಚ್ ಗಳನ್ನು ಚಂಡೀಗಢದ ರಾಯ್ಪುರ್ನಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲು ಪ್ಲ್ಯಾನ್ ರೂಪಿಸಲಾಗಿದೆ. ಅಂದರೆ ಈ ಬಾರಿ RCB ತನ್ನ ಹೋಮ್ ಮ್ಯಾಚ್ ಗಳನ್ನು ನವಿ ಮುಂಬೈ ಮತ್ತು ರಾಯ್ಪುರ್ ನಲ್ಲಿ ಆಡುವುದು ಬಹುತೇಕ ಖಚಿತ. ಅದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂ ಮೇಲಿನ ನಿಷೇಧ ತೆರವಾದರೆ ಮಾತ್ರ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದೆ.
ನವದೆಹಲಿ, ಜನವರಿ 14: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯ PSLV-C62 ಮಿಷನ್ನ ವೈಫಲ್ಯವು ಎಲ್ಲರಿಗೂ ಬೇಸರ ತಂದಿದೆ. 16 ಪ್ಯಾಸೆಂಜರ್ಸ್ಗಳನ್ನು ಹೊತ್ತು ಹೊರಟಿದ್ದ ರಾಕೆಟ್(Rocket)ನಲ್ಲಿ ಕೇವಲ ಕಿಡ್ ಮಾತ್ರ ಬದುಕುಳಿದಿದೆ. ಇಲ್ಲಿ ಪ್ಯಾಸೆಂಜರ್ಸ್ ಎಂದರೆ 16 ಉಪಗ್ರಹಗಳು ಎಂದರ್ಥ. ಸ್ಪ್ಯಾನಿಷ್ ಸ್ಟಾರ್ಟ್ಅಪ್ ಆರ್ಬಿಟಲ್ ಪ್ಯಾರಡೈಮ್ನ “KID” ಕ್ಯಾಪ್ಸುಲ್ ದುರಂತದಿಂದ ಬದುಕುಳಿದಿದೆ.
ಈ ಫುಟ್ಬಾಲ್ ಗಾತ್ರದ ಕ್ಯಾಪ್ಸುಲ್ ದುರಂತದಿಂದ ಬದುಕುಳಿಯುವುದಲ್ಲದೆ, ಭೂಮಿಗೆ ಡೇಟಾವನ್ನು ಹಿಂತಿರುಗಿಸಿತು. ಕಾರ್ಯಾಚರಣೆಯ ಸಮಯದಲ್ಲಿ, ರಾಕೆಟ್ನ ಮೂರನೇ ಹಂತದಲ್ಲಿ ವೈಫಲ್ಯ ಎದುರಾಗಿತ್ತು. ಮುಖ್ಯ ಉಪಗ್ರಹವು ಬಾಹ್ಯಾಕಾಶವನ್ನು ತಲುಪುವುದನ್ನು ತಡೆಯಿತು.
ಆದಾಗ್ಯೂ, ಈ ಸಣ್ಣ, 25 ಕಿಲೋಗ್ರಾಂ ಕ್ಯಾಪ್ಸುಲ್ 28 ಗ್ರಾಂನ ಅಗಾಧ ಒತ್ತಡವನ್ನು ತಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ಇದು ತೀವ್ರವಾದ ಶಾಖದ ನಡುವೆ ಮೂರು ನಿಮಿಷಗಳ ಕಾಲ ನಿರಂತರ ಸಂಕೇತಗಳನ್ನು ಕಳುಹಿಸಿತು.
ಮತ್ತಷ್ಟು ಓದಿ: India’s Space Mission: ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವಿರುವ ಎರಡನೇ ದೇಶವಾಗುವತ್ತ ಭಾರತ ಧಾಪುಗಾಲು
ಜನವರಿ 12, 2026ರಂದು ಶ್ರೀಹರಿಕೋಟಾದಿಂದ ಇಸ್ರೋ PSLV-C62 ರಾಕೆಟ್ ಉಡಾವಣೆ ಮಾಡಿತ್ತು. ರಾಕೆಟ್ನ ಮೂರನೇ ಹಂತದಲ್ಲಿನ ದೋಷವು ಇಡೀ ಕಾರ್ಯಾಚರಣೆಯನ್ನೇ ತಲೆಕೆಳಗಾಗಿ ಮಾಡಿತ್ತು. ಈ ರಾಕೆಟ್16 ಉಪಗ್ರಹಗಳನ್ನು ಹೊತ್ತು ಹೊರಟಿತ್ತು.
ಮುಖ್ಯ ಉಪಗ್ರಹಗಳು ನಾಶವಾದರೂ ಸ್ಪ್ಯಾನಿಷ್ ಸ್ಟಾರ್ಟ್ಅಪ್ ಆರ್ಬಿಟಲ್ ಪ್ಯಾರಡೈಮ್ನ ‘KID’ ಕ್ಯಾಪ್ಸುಲ್ನಿಂದ ಬೇರ್ಪಡುವಲ್ಲಿ ಯಶಸ್ವಿಯಾಯಿತು. ಅದರ ಮೂಲಮಾದರಿಯು ತೀವ್ರವಾದ ಶಾಖ ಮತ್ತು ಒತ್ತಡವನ್ನು ತಡೆದುಕೊಳ್ಳುತ್ತದೆ. ಕ್ಯಾಪ್ಸುಲ್ ಕಾರ್ಯನಿರ್ವಹಿಸುತ್ತಲೇ ಇತ್ತು ಮಾತ್ರವಲ್ಲದೆ ಮೂರು ನಿಮಿಷಗಳ ಕಾಲ ಟೆಲಿಮೆಟ್ರಿ ಡೇಟಾವನ್ನು ಕಳುಹಿಸಿತು. ವಿಜ್ಞಾನಿಗಳು ಈಗ ಕ್ಯಾಪ್ಸುಲ್ನ ಮಾರ್ಗವನ್ನು ಪುನರ್ನಿರ್ಮಿಸಲು ಈ ಡೇಟಾವನ್ನು ಬಳಸುತ್ತಿದ್ದಾರೆ.
ಇದನ್ನು ಫ್ರೆಂಚ್ ಕಂಪನಿ ರೈಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಉಪಗ್ರಹ ಸೇವೆ ಮತ್ತು ಲಾಜಿಸ್ಟಿಕ್ಸ್ನಲ್ಲಿ ಬಳಸಬಹುದಾದ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವುದು ಕಂಪನಿಯು ಗುರಿಯಾಗಿದೆ.
ಭವಿಷ್ಯದಲ್ಲಿ ಸುರಕ್ಷಿತ ಬಾಹ್ಯಾಕಾಶ ನೌಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಈ ಡೇಟಾವು ಒಂದು ಮೈಲಿಗಲ್ಲು ಎಂದು ಸಾಬೀತುಪಡಿಸುತ್ತದೆ ಎಂದು ವಿಜ್ಞಾನಿಗಳ ನಂಬಿಕೆಯಾಗಿದೆ.
PSLV-C62 ಮಿಷನ್ 2026 ರ ಇಸ್ರೋದ ಮೊದಲ ಪ್ರಮುಖ ಮಿಷನ್ ಆಗಿತ್ತು. ಈ ರಾಕೆಟ್ ಡಿಆರ್ಡಿಒದ ಪ್ರಾಥಮಿಕ ಉಪಗ್ರಹ EOS-N1 (ಅನ್ವೇಷ) ಜೊತೆಗೆ ಭಾರತ ಮತ್ತು ವಿದೇಶಗಳಿಂದ ಬಂದ 15 ಇತರ ಸಣ್ಣ ಪೇಲೋಡ್ಗಳನ್ನು ಹೊತ್ತೊಯ್ದಿತು. ಮೂರನೇ ಹಂತದ (PS3) ಸಮಯದಲ್ಲಿ ಸಮಸ್ಯೆ ಎದುರಾಗಿತ್ತು ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಹೇಳಿದ್ದಾರೆ. ಈ ತಾಂತ್ರಿಕ ದೋಷವು ರಾಕೆಟ್ ತನ್ನ ಉದ್ದೇಶಿತ ಕಕ್ಷೆಯನ್ನು ತಲುಪುವ ಕನಸನ್ನು ಭಗ್ನಗೊಳಿಸಿತ್ತು.
ಇಸ್ರೋ ಇನ್ನೂ ಔಪಚಾರಿಕವಾಗಿ ಇದನ್ನು ಸಂಪೂರ್ಣ ವೈಫಲ್ಯ ಎಂದು ಘೋಷಿಸದಿದ್ದರೂ, ಪ್ರಾಥಮಿಕ ಉಪಗ್ರಹಗಳ ನಷ್ಟವನ್ನು ದೃಢಪಡಿಸಲಾಗಿದೆ. ಈ ನಿರಾಶೆಯ ನಡುವೆ, ಸ್ಪ್ಯಾನಿಷ್ ಕ್ಯಾಪ್ಸುಲ್ನ ಯಶಸ್ಸು ವಿಜ್ಞಾನಿಗಳಿಗೆ ಸ್ವಲ್ಪ ಸಮಾಧಾನ ತಂದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಜನವರಿ 14: ಬೆಂಗಳೂರಿನಲ್ಲಿ ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕೆಆರ್ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಇಂದು ಭೋಗಿ ಹಬ್ಬವಾಗಿದ್ದು, ಈಗಾಗಲೇ ಮಾರುಕಟ್ಟೆಗಳಲ್ಲಿ ಜನಜಂಗುಳಿ ಸೇರಿದೆ. ಕಬ್ಬು, ಎಳ್ಳು, ಬೆಲ್ಲ ಸೇರಿದಂತೆ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸುವುದರಲ್ಲಿ ಜನ ನಿರತರಾಗಿದ್ದಾರೆ. ಕಳೆದ ಎರಡು ದಿನಗಳಿಂದ ವ್ಯಾಪಾರ, ವಹಿವಾಟು ಭಾರಿ ಹೆಚ್ಚಾಗಿದೆ. ಬೆಳಗ್ಗೆ 3-4 ಗಂಟೆಯಿಂದಲೇ ಜನರು ಕೆಆರ್ ಮಾರುಕಟ್ಟೆಯತ್ತ ತೆರಳುತ್ತಿದ್ದು, ಅವೆನ್ಯೂ ರಸ್ತೆ ಸಂಪೂರ್ಣವಾಗಿ ಗ್ರಾಹಕರಿಂದ ತುಂಬಿ ತುಳುಕುತ್ತಿದೆ.
ಬೆಲೆಗಳು ದುಪ್ಪಟ್ಟಾಗಿದ್ದರೂ, ಹಬ್ಬವನ್ನು ಅದ್ದೂರಿಯಾಗಿ ಆಚರಿಸುವ ಸಲುವಾಗಿ ಜನರು ಖರೀದಿಯಲ್ಲಿ ತೊಡಗಿದ್ದಾರೆ. ಮಾರುಕಟ್ಟೆಯ ಸುತ್ತಮುತ್ತ ಟ್ರಾಫಿಕ್ ಇಂದು ಮತ್ತು ನಾಳೆಯೂ ಮುಂದುವರೆಯುವ ನಿರೀಕ್ಷೆಯಿದೆ.
ಬೆಂಗಳೂರು, ಜನವರಿ 14: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ಭಗವಾನರನ್ನು ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ. ಶನಿ ಒಂದು ರಾಶಿಯಲ್ಲಿ ಎರಡುವರೆ ವರ್ಷ ಸ್ಥಿತನಾಗಿದ್ದು, ಅದರ ಸಂಚಾರ ಮತ್ತು ದೃಷ್ಟಿಯು ವ್ಯಕ್ತಿಯ ಜೀವನದ ಮೇಲೆ ಆಳವಾದ ಪ್ರಭಾವ ಬೀರುತ್ತದೆ. ಶನಿಯು ಏಕಾಂಗಿಯಾಗಿರುವಾಗ ವಾತ ಕಾಯಿಲೆಗಳು, ನರ ದೌರ್ಬಲ್ಯ, ಪ್ಯಾರಾಲಿಸಿಸ್, ಕಿಡ್ನಿ ವೈಫಲ್ಯ, ಅಜೀರ್ಣ ಮತ್ತು ಕೂದಲು ಉದುರುವಿಕೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ನೀಡಬಹುದು.
ಇತರೆ ಗ್ರಹಗಳೊಂದಿಗೆ ಶನಿ ಸಂಯೋಗಗೊಂಡಾಗ, ವಿಭಿನ್ನ ರೀತಿಯ ಅನಾರೋಗ್ಯಗಳು ಮತ್ತು ತೊಂದರೆಗಳು ಉಂಟಾಗಬಹುದು. ಉದಾಹರಣೆಗೆ, ರವಿಯೊಂದಿಗೆ ಶನಿ ಸೇರಿದಾಗ ದೃಷ್ಟಿದೋಷ, ಆಲಸ್ಯ, ಅಧಿಕಾರಿಗಳಿಂದ ತೊಂದರೆಗಳು ಕಾಣಿಸಬಹುದು. ಚಂದ್ರನೊಂದಿಗೆ ಸಂಯೋಗಗೊಂಡಾಗ ಮಾನಸಿಕ ತೊಂದರೆಗಳು, ರಕ್ತಹೀನತೆ ಮತ್ತು ಮುಖದ ಕಾಂತಿಯ ನಷ್ಟವಾಗಬಹುದು. ಬುಧನೊಂದಿಗೆ ಸೇರಿದಾಗ ಚರ್ಮ ವ್ಯಾಧಿಗಳು ಮತ್ತು ಮಾತಿನ ತೊದಲಿಕೆ ಇರಬಹುದು. ಗುರು, ಶುಕ್ರ, ರಾಹು ಮತ್ತು ಕೇತುಗಳೊಂದಿಗಿನ ಸಂಯೋಗಗಳು ಸಹ ಜೀರ್ಣಕ್ರಿಯೆ ಸಮಸ್ಯೆ, ಗಂಟಲು ನೋವು, ವಿಷಭಯ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳನ್ನು ಉಂಟುಮಾಡಬಹುದು ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
ಬಿಗ್ ಬಾಸ್ (Bigg Boss) ಮನೆಯಲ್ಲಿರೋ ರಘು ಹಾಗೂ ಅಶ್ವಿನಿ ಗೌಡ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಬೆಳೆದಿದೆ. ಇಬ್ಬರ ವಯಸ್ಸು ಸರಿ ಸುಮಾರು ಒಂದೇ ರೀತಿ ಇದೆ. ಈ ಕಾರಣದಿಂದಲೇ ಬಾಂಡಿಂಗ್ ಬಿಗಿಯಾಗಿದೆ. ಬಿಗ್ ಬಾಸ್ ಮನೆಯ ಇತರ ಸ್ಪರ್ಧಿಗಳು ಇವರ ಕಾಲೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಈಗ ಅಶ್ವಿನಿ ಗೌಡ ಅವರು ಈ ವಿಷಯದಲ್ಲಿ ಫನ್ ಮಾಡಿದ್ದಾರೆ. ಅವರು ಹೇಳಿದ ವಾಕ್ಯಕ್ಕೆ ಬೇರೆ ಬೇರೆ ರೀತಿಯ ಅರ್ಥ ಕಲ್ಪಿಸಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈಗ ನಡೆಯುತ್ತಿರುವುದು ಕೊನೆಯ ವಾರ. ಸ್ಪರ್ಧಿಗಳ ಮಧ್ಯೆ ಸಾಕಷ್ಟು ಟಫ್ ಸ್ಪರ್ಧೆ ಏರ್ಪಡುತ್ತಿದೆ. ಯಾರು ಹೋಗ್ತಾರೆ, ಯಾರು ಕಪ್ ಗೆಲ್ತಾರೆ ಎನ್ನುವ ಕುತೂಹಲ ಮೂಡಿದೆ. ಈ ಮಧ್ಯೆ ಕೊನೆಯ ವಾರದಲ್ಲಿ ವಿವಿಧ ರೀತಿಯ ಆಸೆಗಳನ್ನು ಹೇಳಿಕೊಳ್ಳಲು ಅವಕಾಶ ಇತ್ತು. ಅದೇ ರೀತಿ ರಘು ಅವರು ತಮ್ಮ ಮಗನ ಜೊತೆ ಸ್ವಿಮ್ಮಿಂಗ್ಪೂಲ್ನಲ್ಲಿ ಆಟ ಆಡಬೇಕು ಎಂದು ಆಸೆ ಹೇಳಿದ್ದರು. ಅಂತೆಯೇ ರಘು ಮಗ ರೋನಿತ್ ಬಿಗ್ ಬಾಸ್ ಮನೆಗೆ ಬಂದಿದ್ದಾರೆ.
ಬಿಗ್ ಬಾಸ್ ಮನೆಯ ಈಜುಕೊಳದಲ್ಲಿ ರಘು ಹಾಗೂ ರೋನಿತ್ ಆಟ ಆಡುತ್ತಿದ್ದರು. ಈ ವೇಳೆ ಅಶ್ವಿನಿ ಗೌಡ ಮಾತಿಗೆ ಇಳಿದರು. ‘ನಿಮ್ಮ ಅಪ್ಪ ಬಿಗ್ ಬಾಸ್ ಮನೆಯಿಂದ ಹೊರ ಬರುವಾಗ ಒಬ್ಬರೇ ಬರೋದಿಲ್ಲ. ಇನ್ನೊಬ್ಬರು ಅವರ ಜೊತೆ ಇರ್ತಾರೆ. ಓಕೆ ಅಲ್ಲವಾ’ ಎಂದು ಕೇಳಿದರು. ‘ಯಾರು ಇರ್ತಾರೆ’ ಎಂದು ರೋನಿತ್ ಮರು ಪ್ರಶ್ನೆ ಮಾಡಿದ. ಆಗ, ಅಶ್ವಿನಿ ಗೌಡ ಉತ್ತರಿಸಬೇಕು ಎನ್ನುವಾಗ ಬಿಗ್ ಬಾಸ್ ಹಾಡೊಂದನ್ನು ಹಾಕಿದರು. ಹೀಗಾಗಿ ಆ ಸಂಭಾಷಣೆ ಮುಂದುವರಿಯಲೇ ಇಲ್ಲ.
ಇದನ್ನೂ ಓದಿ: ಧ್ರುವಂತ್ಗೆ ಸೀಸನ್ ಚಪ್ಪಾಳೆ ಬದಲು ವಾರದ ಚಪ್ಪಾಳೆ; ನಿರ್ಧಾರ ಬದಲಿಸಿದ ಬಿಗ್ ಬಾಸ್
ಅಶ್ವಿನಿ ಗೌಡ ಹೇಳಿದ ಮಾತಿಗೆ ನಾನಾ ಅರ್ಥ ಕಲ್ಪಿಸಲಾಗುತ್ತಿದೆ. ‘ಅವರ ಜೊತೆ ನಾನು ಬರ್ತೀನಿ’ ಎಂಬರ್ಥದಲ್ಲಿ ಅವರು ಹಾಸ್ಯ ಮಾಡಿರಬಹುದು ಎಂದು ಕೆಲವರು ಹೇಳಿದ್ದಾರೆ. ರಘು ಅವರಿಗೆ ಈಗಾಗಲೇ ಮದುವೆ ಆಗಿ ಸುಖವಾಗಿ ಸಂಸಾರ ನಡೆಸುತ್ತಿದ್ದಾರೆ. ಅವರದ್ದು ಶುದ್ಧ ಮನಸ್ಸು. ಹೀಗಾಗಿ, ಈ ಬಗ್ಗೆ ಅವರು ಆಲೋಚಿಸಿರುವುದಿಲ್ಲ. ಇದೆಲ್ಲ ಹಾಸ್ಯಕ್ಕೆ ಮಾತ್ರ ಸೀಮಿತವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.