ಬೆಂಗಳೂರು, ಜನವರಿ 14: ಬೆಂಗಳೂರಿನಲ್ಲಿ ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕೆಆರ್ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಇಂದು ಭೋಗಿ ಹಬ್ಬವಾಗಿದ್ದು, ಈಗಾಗಲೇ ಮಾರುಕಟ್ಟೆಗಳಲ್ಲಿ ಜನಜಂಗುಳಿ ಸೇರಿದೆ. ಕಬ್ಬು, ಎಳ್ಳು, ಬೆಲ್ಲ ಸೇರಿದಂತೆ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸುವುದರಲ್ಲಿ ಜನ ನಿರತರಾಗಿದ್ದಾರೆ. ಕಳೆದ ಎರಡು ದಿನಗಳಿಂದ ವ್ಯಾಪಾರ, ವಹಿವಾಟು ಭಾರಿ ಹೆಚ್ಚಾಗಿದೆ. ಬೆಳಗ್ಗೆ 3-4 ಗಂಟೆಯಿಂದಲೇ ಜನರು ಕೆಆರ್ ಮಾರುಕಟ್ಟೆಯತ್ತ ತೆರಳುತ್ತಿದ್ದು, ಅವೆನ್ಯೂ ರಸ್ತೆ ಸಂಪೂರ್ಣವಾಗಿ ಗ್ರಾಹಕರಿಂದ ತುಂಬಿ ತುಳುಕುತ್ತಿದೆ.
ಬೆಲೆಗಳು ದುಪ್ಪಟ್ಟಾಗಿದ್ದರೂ, ಹಬ್ಬವನ್ನು ಅದ್ದೂರಿಯಾಗಿ ಆಚರಿಸುವ ಸಲುವಾಗಿ ಜನರು ಖರೀದಿಯಲ್ಲಿ ತೊಡಗಿದ್ದಾರೆ. ಮಾರುಕಟ್ಟೆಯ ಸುತ್ತಮುತ್ತ ಟ್ರಾಫಿಕ್ ಇಂದು ಮತ್ತು ನಾಳೆಯೂ ಮುಂದುವರೆಯುವ ನಿರೀಕ್ಷೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು, ಜನವರಿ 14: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ಭಗವಾನರನ್ನು ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ. ಶನಿ ಒಂದು ರಾಶಿಯಲ್ಲಿ ಎರಡುವರೆ ವರ್ಷ ಸ್ಥಿತನಾಗಿದ್ದು, ಅದರ ಸಂಚಾರ ಮತ್ತು ದೃಷ್ಟಿಯು ವ್ಯಕ್ತಿಯ ಜೀವನದ ಮೇಲೆ ಆಳವಾದ ಪ್ರಭಾವ ಬೀರುತ್ತದೆ. ಶನಿಯು ಏಕಾಂಗಿಯಾಗಿರುವಾಗ ವಾತ ಕಾಯಿಲೆಗಳು, ನರ ದೌರ್ಬಲ್ಯ, ಪ್ಯಾರಾಲಿಸಿಸ್, ಕಿಡ್ನಿ ವೈಫಲ್ಯ, ಅಜೀರ್ಣ ಮತ್ತು ಕೂದಲು ಉದುರುವಿಕೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ನೀಡಬಹುದು.
ಇತರೆ ಗ್ರಹಗಳೊಂದಿಗೆ ಶನಿ ಸಂಯೋಗಗೊಂಡಾಗ, ವಿಭಿನ್ನ ರೀತಿಯ ಅನಾರೋಗ್ಯಗಳು ಮತ್ತು ತೊಂದರೆಗಳು ಉಂಟಾಗಬಹುದು. ಉದಾಹರಣೆಗೆ, ರವಿಯೊಂದಿಗೆ ಶನಿ ಸೇರಿದಾಗ ದೃಷ್ಟಿದೋಷ, ಆಲಸ್ಯ, ಅಧಿಕಾರಿಗಳಿಂದ ತೊಂದರೆಗಳು ಕಾಣಿಸಬಹುದು. ಚಂದ್ರನೊಂದಿಗೆ ಸಂಯೋಗಗೊಂಡಾಗ ಮಾನಸಿಕ ತೊಂದರೆಗಳು, ರಕ್ತಹೀನತೆ ಮತ್ತು ಮುಖದ ಕಾಂತಿಯ ನಷ್ಟವಾಗಬಹುದು. ಬುಧನೊಂದಿಗೆ ಸೇರಿದಾಗ ಚರ್ಮ ವ್ಯಾಧಿಗಳು ಮತ್ತು ಮಾತಿನ ತೊದಲಿಕೆ ಇರಬಹುದು. ಗುರು, ಶುಕ್ರ, ರಾಹು ಮತ್ತು ಕೇತುಗಳೊಂದಿಗಿನ ಸಂಯೋಗಗಳು ಸಹ ಜೀರ್ಣಕ್ರಿಯೆ ಸಮಸ್ಯೆ, ಗಂಟಲು ನೋವು, ವಿಷಭಯ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳನ್ನು ಉಂಟುಮಾಡಬಹುದು ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
ಬಿಗ್ ಬಾಸ್ (Bigg Boss) ಮನೆಯಲ್ಲಿರೋ ರಘು ಹಾಗೂ ಅಶ್ವಿನಿ ಗೌಡ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಬೆಳೆದಿದೆ. ಇಬ್ಬರ ವಯಸ್ಸು ಸರಿ ಸುಮಾರು ಒಂದೇ ರೀತಿ ಇದೆ. ಈ ಕಾರಣದಿಂದಲೇ ಬಾಂಡಿಂಗ್ ಬಿಗಿಯಾಗಿದೆ. ಬಿಗ್ ಬಾಸ್ ಮನೆಯ ಇತರ ಸ್ಪರ್ಧಿಗಳು ಇವರ ಕಾಲೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಈಗ ಅಶ್ವಿನಿ ಗೌಡ ಅವರು ಈ ವಿಷಯದಲ್ಲಿ ಫನ್ ಮಾಡಿದ್ದಾರೆ. ಅವರು ಹೇಳಿದ ವಾಕ್ಯಕ್ಕೆ ಬೇರೆ ಬೇರೆ ರೀತಿಯ ಅರ್ಥ ಕಲ್ಪಿಸಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈಗ ನಡೆಯುತ್ತಿರುವುದು ಕೊನೆಯ ವಾರ. ಸ್ಪರ್ಧಿಗಳ ಮಧ್ಯೆ ಸಾಕಷ್ಟು ಟಫ್ ಸ್ಪರ್ಧೆ ಏರ್ಪಡುತ್ತಿದೆ. ಯಾರು ಹೋಗ್ತಾರೆ, ಯಾರು ಕಪ್ ಗೆಲ್ತಾರೆ ಎನ್ನುವ ಕುತೂಹಲ ಮೂಡಿದೆ. ಈ ಮಧ್ಯೆ ಕೊನೆಯ ವಾರದಲ್ಲಿ ವಿವಿಧ ರೀತಿಯ ಆಸೆಗಳನ್ನು ಹೇಳಿಕೊಳ್ಳಲು ಅವಕಾಶ ಇತ್ತು. ಅದೇ ರೀತಿ ರಘು ಅವರು ತಮ್ಮ ಮಗನ ಜೊತೆ ಸ್ವಿಮ್ಮಿಂಗ್ಪೂಲ್ನಲ್ಲಿ ಆಟ ಆಡಬೇಕು ಎಂದು ಆಸೆ ಹೇಳಿದ್ದರು. ಅಂತೆಯೇ ರಘು ಮಗ ರೋನಿತ್ ಬಿಗ್ ಬಾಸ್ ಮನೆಗೆ ಬಂದಿದ್ದಾರೆ.
ಬಿಗ್ ಬಾಸ್ ಮನೆಯ ಈಜುಕೊಳದಲ್ಲಿ ರಘು ಹಾಗೂ ರೋನಿತ್ ಆಟ ಆಡುತ್ತಿದ್ದರು. ಈ ವೇಳೆ ಅಶ್ವಿನಿ ಗೌಡ ಮಾತಿಗೆ ಇಳಿದರು. ‘ನಿಮ್ಮ ಅಪ್ಪ ಬಿಗ್ ಬಾಸ್ ಮನೆಯಿಂದ ಹೊರ ಬರುವಾಗ ಒಬ್ಬರೇ ಬರೋದಿಲ್ಲ. ಇನ್ನೊಬ್ಬರು ಅವರ ಜೊತೆ ಇರ್ತಾರೆ. ಓಕೆ ಅಲ್ಲವಾ’ ಎಂದು ಕೇಳಿದರು. ‘ಯಾರು ಇರ್ತಾರೆ’ ಎಂದು ರೋನಿತ್ ಮರು ಪ್ರಶ್ನೆ ಮಾಡಿದ. ಆಗ, ಅಶ್ವಿನಿ ಗೌಡ ಉತ್ತರಿಸಬೇಕು ಎನ್ನುವಾಗ ಬಿಗ್ ಬಾಸ್ ಹಾಡೊಂದನ್ನು ಹಾಕಿದರು. ಹೀಗಾಗಿ ಆ ಸಂಭಾಷಣೆ ಮುಂದುವರಿಯಲೇ ಇಲ್ಲ.
ಅಶ್ವಿನಿ ಗೌಡ ಹೇಳಿದ ಮಾತಿಗೆ ನಾನಾ ಅರ್ಥ ಕಲ್ಪಿಸಲಾಗುತ್ತಿದೆ. ‘ಅವರ ಜೊತೆ ನಾನು ಬರ್ತೀನಿ’ ಎಂಬರ್ಥದಲ್ಲಿ ಅವರು ಹಾಸ್ಯ ಮಾಡಿರಬಹುದು ಎಂದು ಕೆಲವರು ಹೇಳಿದ್ದಾರೆ. ರಘು ಅವರಿಗೆ ಈಗಾಗಲೇ ಮದುವೆ ಆಗಿ ಸುಖವಾಗಿ ಸಂಸಾರ ನಡೆಸುತ್ತಿದ್ದಾರೆ. ಅವರದ್ದು ಶುದ್ಧ ಮನಸ್ಸು. ಹೀಗಾಗಿ, ಈ ಬಗ್ಗೆ ಅವರು ಆಲೋಚಿಸಿರುವುದಿಲ್ಲ. ಇದೆಲ್ಲ ಹಾಸ್ಯಕ್ಕೆ ಮಾತ್ರ ಸೀಮಿತವಾಗಿದೆ.
ಬೆಂಗಳೂರು, ಜನವರಿ 14: ಸಂಕ್ರಾಂತಿ ಹಬ್ಬದಂದು (ಜನವರಿ 15) ಬೆಂಗಳೂರಿನ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಆಯೋಜಿಸಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಸೋಮಸುಂದರ ದೀಕ್ಷಿತ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷದಂತೆ, ಸೂರ್ಯ ರಶ್ಮಿಗಳು ಶಿವಲಿಂಗವನ್ನು ಸ್ಪರ್ಶಿಸುವ ಅಪರೂಪದ ಸನ್ನಿವೇಶವು ಈ ವರ್ಷ ಸಂಜೆ 5:2 ರಿಂದ 5:5 ರವರೆಗೆ ನಡೆಯಲಿದೆ. ಸೂರ್ಯನ ಕಿರಣಗಳು ಶಿವಲಿಂಗದ ಪಾದದಿಂದ ಕೇಶದವರೆಗೆ ಸ್ಪರ್ಶಿಸುತ್ತವೆ. ಧನುರ್ಮಾಸದ ಪೂಜೆಯು ಇಂದು ಕೊನೆಗೊಳ್ಳಲಿದ್ದು, ಜನವರಿ 15ರಂದು ವಿಶೇಷ ಅಭಿಷೇಕಗಳು ನಡೆಯಲಿವೆ. ಭಕ್ತರಿಗೆ ಸೂರ್ಯ ರಶ್ಮಿ ಸ್ಪರ್ಶದ ನೇರ ದರ್ಶನಕ್ಕಾಗಿ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ.
ವರದಿ: ನಟರಾಜ್, ಟಿವಿ9 ಬೆಂಗಳೂರು
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ನಿಮ್ಮ ರಕ್ಷಣೆಯನ್ನು ನೀವೇ ಮಾಡಿಕೊಳ್ಳಬೇಕು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ. ಎಲ್ಲದಕ್ಕೂ ಕೂಡಲೇ ಉತ್ತರವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ನಿಮ್ಮ ಅಧಿಕಾರದ ಮಾತುಗಳು ಅಹಂಕಾರದ ಮಾತಾಗುವುದು. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ. ನಿಂದನೆಯನ್ನು ಸಹಜದಂತೆ ಸ್ವೀಕರಿಸುವಿರಿ.
ವೃಷಭ ರಾಶಿ:
ನಿಮ್ಮಿಷ್ಟಿದ ಸ್ಥಳಕ್ಕೆ ಹೋದರೆ ಮನಸ್ಸು ಹಗುರಾಗುವುದು. ಒಳ್ಳೆಯ ಹವ್ಯಾಸಗಳನ್ನು ಕೊಲ್ಲುವುದು ಬೇಡ. ಸಂಗಾತಿಯ ಅನಪೇಕ್ಷಿತ ಆಸೆಗಳನ್ನು ದೂರ ಮಾಡುವಿರಿ. ನಿಮ್ಮ ಮಾತುಗಳು ಕಠೋರವಾಗಿ ಇರುವುದು. ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ವಾಹನದಿಂದ ಗಾಯವಾಗುವ ಸಾಧ್ಯತೆ ಇದೆ. ನಿಮ್ಮ ಕನಸನ್ನು ಸಕಾರ ಮಾಡಿಕೊಳ್ಳಲು ಪ್ರಗತಿಯಲ್ಲಿ ಇರುವಿರಿ. ಸಹೋದರನ ಜೊತೆ ಸಣ್ಣ ವಿಷಯಕ್ಕೆ ವಿವಾದವಾಗಬಹುದು. ನೇರ ನುಡಿಗಳು ನಿಮಗೆ ಮುಜುಗರವನ್ನು ಉಂಟುಮಾಡಬಹುದು. ವಿದೇಶಕ್ಕೆ ಹೋಗಲುಬೇಕಾದ ಸಿದ್ಧತೆ ನಡೆಸುವಿರಿ. ಮನೆಯಿಂದ ದೂರ ಇದ್ದವರಿಗೆ ತೊಂದರೆ ಬರಬಹುದು.
ಮಿಥುನ ರಾಶಿ:
ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಆರ್ಥಿಕತೆಯ ಯೋಜನೆಯನ್ನು ಹೆಣೆಯಬಹುದು. ಹೊಸ ಉದ್ಯೋಗದ ಅಭಿವೃದ್ಧಿಗೆ ದೇವರಲ್ಲಿ ಶರಣಾಗುವಿದರಿ. ಪ್ರಯತ್ನಗಳು ಆರಂಭವಾಗಲಿದೆ. ಪಿತ್ರಾರ್ಜಿತ ಆಸ್ತಿಯು ತಾನಾಗಿಯೇ ಬರಬಹುದು. ವಿದ್ಯಾಭ್ಯಾಸದಲ್ಲಿ ಆಸಕ್ತಿ ಬರುವಂತೆ ಮಾಡುವ ಹೊಣೆಗಾರಿಕೆ ಇರಲಿದೆ. ಹಿರಿಯರಿಂದ ಮಾರ್ಗದರ್ಶನವು ಸಿಗಲಿದೆ. ಇಂದು ಉದ್ಯೋಗಕ್ಕೆ ಸಂಬಂಧಿಸಿದ ಓಡಾಟವು ವ್ಯರ್ಥವಾಗುವುದು. ಸ್ವತಂತ್ರವಾಗಿ ನಿಮ್ಮನ್ನು ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಇಂದು ನೀವು ಹೊಸ ಕೆಲಸಗಳನ್ನು ಪ್ರಾರಂಭಿಸಬಹುದು. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಇರುವುದು ಇನ್ನಷ್ಟು ದುರ್ಬಲವಾಗಲು ಕಾರಣ.
ಕರ್ಕಾಟಕ ರಾಶಿ:
ಹಳೆಯ ಬಯಕೆಯನ್ನು ಇಡೇರಿಸಿಕೊಂಡು ಖುಷಿಪಡುವಿರಿ. ನಿಮ್ಮ ನಿರ್ಲಕ್ಷ್ಯದಿಂದ ಭೂಮಿಯ ಸ್ವಲ್ಪ ಭಾಗವನ್ನು ಕಳೆದುಹೋಗಬಹುದು. ಕಾನೂನಿಗೆ ಶರಣಾಗುವಿರಿ. ಉದ್ಧಟತನದ ಮಾತುಗಳಿಂದ ನಿಮ್ಮ ಸ್ವಭಾವವು ಸ್ಪಷ್ಟವಾಗುವುದು. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ಬಂದುಬಿಡುವುದು. ವಿದ್ಯಾಭ್ಯಾಸದ ಕಾರಣಕ್ಕೆ ಹಣವನ್ನು ಪಡೆದು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳುವಿರಿ. ಭಾವನೆಗಳು ಹೇರಿದರೆ ಅದು ಸ್ಫೋಟವಾಗುವ ಸಾಧ್ಯತೆ ಇದೆ. ಸುಲಭ ದಾರಿಯನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ. ನಂಬಿಕೆಯನ್ನು ಕಳೆದುಕೊಳ್ಳುವವ ಪ್ರಸಂಗವು ಬರಬಹುದು. ಉದ್ಯಮವನ್ನು ಮುನ್ನಡೆಸಲು ಉತ್ತಮ ವ್ಯಕ್ತಿಗಳ ಅನ್ವೇಷಣೆ ಮಾಡುವಿರಿ. ನಿಮ್ಮ ತಪ್ಪನ್ನು ಯಾರಿಂದಲೂ ಕೇಳಲು ಇಚ್ಛಿಸುವುದಿಲ್ಲ.
ಸಿಂಹ ರಾಶಿ:
ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ನಿಮ್ಮ ಸಮತೋಲನ ಮನಃಸ್ಥಿತಿಯು ಕ್ಲಿಷ್ಟ ಸಂದರ್ಭವನ್ನು ಲೀಲಾಜಾಲವಾಗಿ ದಾಟಿಸುವುದು. ನೆರೆಹೊರೆಯರ ಮಾತು ನಿಮಗೆ ಬೇಸರ ತರಿಸಿ, ಪ್ರತಿಯಾಗಿ ಏನನ್ನಾದರೂ ಹೇಳಲು ಹೋಗುವಿರಿ. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಡಬಹುದು. ಮಕ್ಕಳಿಗೆ ಜವಾಬ್ದಾರಿಯನ್ನು ಕೊಡಲು ಹಿಂಜರಿಯುವಿರಿ. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ಮನಸ್ಸಿಗೆ ಬೇರಸವಾಗುವ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ. ನಿಮ್ಮ ಕಾರ್ಯಕ್ಕೆ ಮಕ್ಕಳಿಂದ ವಿರೋಧವು ಇರಲಿದೆ. ಅಹಂಕಾರದ ಮಾತುಗಳು ನಿಮಗೇ ಬರಬಹುದು.
ಕನ್ಯಾ ರಾಶಿ:
ಅಯಾಚಿತ ಭಾಗ್ಯದಿಂದ ಖುಷಿಯಾಗಲಿದೆ. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದ್ದು ನೆಮ್ಮದಿ ಇರುವುದು. ನಿಮ್ಮಿಂದ ಆಕರ್ಷಿತರಾಗಿ ಮೋಹಗೊಳ್ಳಬಹುದು. ವ್ಯಾಪಾರದಲ್ಲಿ ಜನರ ಆಕರ್ಷಣೆಯನ್ನು ಮಾಡುವ ಕಲೆ ಸಿದ್ಧಿಸಿದೆ. ನಿಮ್ಮ ಅಸಮಾಧಾನವನ್ನು ಅಸ್ಥಾನದಲ್ಲಿ ಹೊರಹಾಕಿ ಮುಜುಗರಕ್ಕೆ ಒಳಗಾಗುವಿರಿ. ಬಂಧುಗಳಿಂದ ನಿಮಗೆ ಪ್ರಶಂಸೆ ಸಿಕ್ಕರೂ ಒಳಗೇ ಆತಂಕ. ತಂದೆಯ ಮೇಲೆ ನಿಮ್ಮ ಗೌರವವು ಅಧಿಕಾಗಿದ್ದು ಅನಿರೀಕ್ಷಿತ ಉಡುಗೊರೆಯನ್ನು ಕೊಡುವಿರಿ. ಯಾರ ವಸ್ತುವನ್ನು ಕಸಿದುಕೊಳ್ಳುವ ಹಂತಕ್ಕೆ ಹೋಗುವುದು ಬೇಡ. ನಿಮ್ಮ ನಿರ್ಲಕ್ಷ್ಯದಿಂದ ಭೂಮಿಯ ಸ್ವಲ್ಪ ಭಾಗವನ್ನು ಕಳೆದುಹೋಗಬಹುದು. ಬಂಧಿವಿನಿಂದ ನೀವು ಧನವನ್ನು ಅಪೇಕ್ಷಿಸುವಿರಿ.
ತುಲಾ ರಾಶಿ:
ಶೂನ್ಯದಿಂದ ಆರಂಭಿಸುವ ಕಲೆ ನಿಮಗೆ ಗೊತ್ತಿದೆ. ನಿರೀಕ್ಷಿತ ಗೌರವವು ನಿಮಗೆ ಸಿಗಲಿದೆ. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ಸಹೋದ್ಯೋಗಿಯೊಬ್ಬನಿಗೆ ಸಹಾಯ ಮಾಡುವ ಸ್ಥಿತಿಯು ನಿಮಗೆ ಬರಬಹುದು. ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ಯಾರ ಬಲವಂತಕ್ಕೂ ಮಣಿಯುವುದಿಲ್ಲ. ರತ್ನ ವ್ಯಾಪಾರದಲ್ಲಿ ಹಿನ್ನಡೆಯಾಗಬಹುದು. ಇಂದಿನ ಸಮಯವನ್ನು ವ್ಯರ್ಥಮಾಡಿಕೊಂಡು ಬೇಸರಿಸುವಿರಿ. ನಿಮ್ಮ ಸ್ವಭಾವವು ಇತರರಿಗೆ ಅಸಹಜತೆಯಂತೆ ಕಾಣಿಸಬಹುದು. ಎಲ್ಲರ ಮೇಲೂ ಹಿಡಿತ ಸಾಧಿಸುವ ಪ್ರಯತ್ನವು ಬೇಡ. ಮಾತನಾಡಿ ಇಂದು ಸಮಯವನ್ನು ವ್ಯರ್ಥ ಮಾಡುವಿರಿ. ವಹಿಸಿಕೊಂಡ ಕಾರ್ಯವನ್ನು ಸಮಯಕ್ಕೆ ಮುಗಿಸುವಿರಿ. ಕೃಷಿಕರು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವರು.
ವೃಶ್ಚಿಕ ರಾಶಿ:
ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ಮಕ್ಕಳಲ್ಲಿ ಪ್ರೀತಿಯನ್ನು ತೋರುವಿರಿ. ಅಪರಿಚಿತರಿಗೆ ಮಾಡಿದ ಸಹಾಯವು ದುರುಪಯೋಗವಾಗುವುದು. ನಿಮ್ಮ ಗುಣಗಳು ಅಪ್ರಕಾಶವಾಗಬಹುದು. ದೂರದ ಸ್ಥಳಕ್ಕೆ ಉದ್ಯೋಗಕ್ಕೆ ಹೋಗಲು ಮನೆಯಿಂದ ನಕಾರಾತ್ಮಕ ಸೂಚನೆ ಬರಬಹುದು. ಯಾರನ್ನೂ ಅವಲಂಬಿಸದೇ ನಡೆಯಬೇಕು ಎನ್ನುವ ಹಠವು ಬರುವುದು. ಪ್ರಶಂಸೆಯು ಇಲ್ಲದೇ ಕೆಲಸದಲ್ಲಿ ನಿಮ್ಮ ಆಸಕ್ತಿಯು ಕಡಿಮೆ ಆಗಬಹುದು. ನಿಮ್ಮ ಕಾರ್ಯಕ್ಕೆ ಮಕ್ಕಳಿಂದ ವಿರೋಧವು ಇರಲಿದೆ. ಸ್ಥಳ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಬೇಕಾದೀತು. ಸ್ನೇಹಿತರ ಜೊತೆ ಎಲ್ಲಿಗಾದರೂ ಪ್ರಯಾಣವನ್ನು ಮಾಡುವಿರಿ. ಸತ್ಯವನ್ನು ಸಂಗಾತಿಯಿಂದ ಮುಚ್ಚಿಡಲು ಪ್ರಯತ್ನಿಸುವಿರಿ.
ಧನು ರಾಶಿ:
ನೀವು ಯಾವ ಜವಾಬ್ದಾರಿಯನ್ನೂ ಪಡೆಯಲೂ ಹಿಂಜರಿಯುವುದಿಲ್ಲ. ನಿಮ್ಮ ವಾಹನವನ್ನು ಬದಲಾಯಿಸುವ ಸಾಧ್ಯತೆ ಇದೆ. ನಿಂದಕರಿಗೆ ಉತ್ತರವನ್ನು ಕೊಟ್ಟು ಸಿಟ್ಟಗುವಿರಿ. ಬರಲಿರುವ ಧನಾಗಮನದ ನಿರೀಕ್ಷೆಯಲ್ಲಿ ಇರುವಿರಿ. ಭಾವುಕರಾಗುವ ಸಂದರ್ಭವು ಬರಬಹುದು. ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆಯುವಿರಿ. ಕೆಲಸದ ಸಮಯವು ವ್ಯತ್ಯಾಸವಾಗಿದ್ದು ನಿಮಗೆ ಹೊಂದಿಕೊಳ್ಳುವುದು ಕಷ್ಟವಾದೀತು. ನಿಮ್ಮ ಮೇಲೆ ಸಹಾನುಭೂತಿ ಇರಬಹುದು. ವಿದೇಶೀ ವ್ಯಾಪಾರದಿಂದ ಆದಾಯವು ಹೆಚ್ಚಾಗಬಹುದು. ನಿಮ್ಮ ಅಜ್ಞಾನವನ್ನು ನೀವೇ ತೋರಿಸಿಕೊಳ್ಳುವಿರಿ. ನಮ್ಮದೇ ಸರಿ ಎನ್ನುವ ವಾದವು ಸರಿಯಾಗದು. ನೀವು ಇಂದು ಯಾರ ಜೊತೆಯೂ ಬೆರೆಯಲು ಇಷ್ಟಪಡುವುದಿಲ್ಲ.
ಮಕರ ರಾಶಿ:
ಇಂದು ಇತರ ಅನುಭವವೂ ನಿಮಗೆ ಪಾಠವಾಗುವುದು. ಹಠದ ಸ್ವಭಾವದಿಂದ ಹೊರಬನ್ನಿ. ನಿಮ್ಮ ಸ್ವೇಚ್ಛಾಚಾರವು ಮನೆಯವರಿಗೆ ಇಷ್ಟವಾಗದು. ಅನಿರೀಕ್ಷಿತ ಧನಾಗಮನದಿಂದ ಸಂತೋಷವು ಇಮ್ಮಡಿಯಾಗಬಹುದು. ನಿಮಗೆ ಸಿಕ್ಕ ಜವಾಬ್ದಾರಿಯಿಂದ ಬೀಗುವಿರಿ. ಹೊಸ ಪರಿಚಯವು ಅತಿಯಾಗಿ ಆಪ್ತವಾಗಬಹುದು. ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗುವುದು. ನಿಮ್ಮ ಬಗ್ಗೆ ನೀವೇ ಹೇಳಕೊಳ್ಳುವುದು ಜಂಭವೆನಿಸುವುದು. ಅತಿ ಲೋಭದಿಂದ ಧನಾರ್ಜನೆಯನ್ನು ಮಾಡುವಿರಿ. ಉದ್ಯೋಗಕ್ಕೆ ಸಂಬಂಧಿಸಿದ ಓಡಾಟವು ವ್ಯರ್ಥಯವಾಗುವುದು. ಉಚಿತವಾಗಿ ಸಿಕ್ಕಿದ್ದನ್ನು ಪಡೆಯಲು ಇಚ್ಛಿಸುವುದಿಲ್ಲ. ಶ್ರಮಕ್ಕೆ ಹೆಚ್ಚು ಮಹತ್ವವನ್ನು ಕೊಡುವಿರಿ.
ಕುಂಭ ರಾಶಿ:
ಸಾಧಕರ ಒಡನಾಟವು ನಿಮ್ಮ ಆಲೋಚನೆಯ ಕ್ರಮವನ್ನು ಬದಲಿಸುವುದು. ಪ್ರಶಾಂತವಾದ ಚಿತ್ತದಿಂದ ಇದ್ದರೆ ಸಕಾರಾತ್ಮಕ ಅಂಶಗಳನ್ನು ಕಾಣುವಿರಿ. ಒತ್ತಡದ ಕಾರಣ ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಅತಿ ಭೋಜನದಿಂದ ಉದರ ಬಾಧೆ. ಕೆಲವರು ನಿಮ್ಮ ದಾರಿ ತಪ್ಪಿಸಬಹುದು. ಮಿತ್ರರ ಸಹಾನುಭೂತಿಯು ನಿಮಗೆ ಉತ್ಸಾಹವನ್ನು ಕೊಡುವುದು. ಉತ್ತಮವಾದ ಉಡುಗೊರೆಯೊಂದು ನಿಮ್ಮ ಕೈ ಸೇರಬಹುದು. ಪ್ರಮುಖ ಅಂಶಗಳು ದೂರಾಗಿ ಅಪ್ರಧಾನಾಂಶಗಳೇ ಮುನ್ನೆಲೆಗೆ ಬರುವುದು. ಕಾರ್ಯದ ಅನಿವಾರ್ಯತೆಯು ಎದ್ದು ಕಾಣಿಸುವುದು. ನಿಮ್ಮ ಸರಳ ವ್ಯಕ್ತಿತ್ವವು ಮಾದರಿಯಾಗುವುದು.
ಮೀನ ರಾಶಿ:
ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ನಿಮ್ಮ ಅನುಪಸ್ಥಿತಿಯಲ್ಲಿ ಕಾರ್ಯಗಳು ಆಗುವುದು. ನಿಮ್ಮಿಂದಾಗಿ ಕುಟುಂಬದ ಒತ್ತಡವು ಕಡಿಮೆ ಆಗುವುದು. ಅವಸರ ಮಾಡದೇ ಕೆಲಸವನ್ನು ಮಾಡಿ. ಸಂಗಾತಿಯ ಮಾತಿನಂತೆ ಇಂದು ನಡೆದುಕೊಳ್ಳುವ ಅನಿವಾರ್ಯತೆ ಇದೆ. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ. ಯಾರದೋ ಒತ್ತಾಯಕ್ಕೆ ಮಣಿದು ಬೇಸರಪಡುವಿರಿ. ಇಂದು ನಿಮ್ಮ ಬೆಂಬಲಕ್ಕೆ ಬರುವವರನ್ನು ಅತಿಯಾಗಿ ನಂಬುವಿರಿ. ಅರ್ಥಿಕ ಕ್ರಮವನ್ನು ಸರಿಯಾಗಿ ಇಟ್ಟುಕೊಳ್ಳುವಿರಿ.
ಜನವರಿ 14, 2026ರ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಬುಧವಾರ, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಅನೂರಾಧಾ ಯೋಗ : ಗಂಡ, ಕರಣ : ಬಾಲವ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 13 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12-33 – 13:58, ಯಮಗಂಡ ಕಾಲ 08:19 – 09:44, ಗುಳಿಕ ಕಾಲ 11:09 – 12:33
ದೀರ್ಘಕಾಲದಿಂದ ನಡೆಯುತ್ತಿರುವ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿರಿಯರೊಂದಿಗೆ ತೀರ್ಥಯಾತ್ರೆಗೆ ಹೋಗುವ ಬಗ್ಗೆ ಚರ್ಚೆ ನಡೆಸುವಿರಿ. ಹಣಕಾಸಿನ ವ್ಯವಹಾರಗಳಲ್ಲಿ ಅಲ್ಪ ಲಾಭ ಇದ್ದರೂ ಭವಿಷ್ಯದ ಹೂಡಿಕೆಗೆ ಉತ್ತಮ ತಳಹದಿ ಸಿಗಲಿದೆ. ಸಾಲದ ಹೊರೆ ತಗ್ಗಿಸಲು ನೀವು ವಿಶೇಷ ಹಣಕಾಸಿನ ಯೋಜನೆ ರೂಪಿಸುವಿರಿ. ಕಚೇರಿಯಲ್ಲಿ ಗುಪ್ತ ಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ಕೆಲಸದ ವಿವರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ. ಧ್ಯಾನ, ಯೋಗದ ಅಭ್ಯಾಸದಿಂದ ಮಾನಸಿಕ ಒತ್ತಡ ಕಡಿಮೆ ಆಗಲಿದೆ.
ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಬಿಗಿಯಾದ ವರ್ತನೆ ಇದ್ದರೂ ನಿಮ್ಮ ಪ್ರಾಮಾಣಿಕತೆಯೇ ರಕ್ಷಿಸಲಿದೆ. ಕಲ್ಲಿದ್ದಲು ವ್ಯಾಪಾರಿಗಳಿಗೆ ಶುಭಪ್ರದವಾಗಿದೆ. ಆಸ್ತಿ ವಿವಾದಗಳು ಕೊನೆಗೂ ಸೌಹಾರ್ದಯುತವಾಗಿ ಬಗೆಹರಿಯುವ ಸೂಚನೆಗಳಿವೆ. ಮನೆಯಲ್ಲಿ ಗೃಹಿಣಿಯರಿಗೆ ಕೆಲಸದ ಒತ್ತಡ ಹೆಚ್ಚಾಗಬಹುದು, ಆರೋಗ್ಯದ ಕಾಳಜಿ ವಹಿಸಿ, ವಿಶೇಷವಾಗಿ ಮಂಡಿ ನೋವು ಅಥವಾ ಕಾಲುಗಳ ನೋವು ಕಾಡಬಹುದು. ಹೂಡಿಕೆ ಮಾಡುವ ಮೊದಲು ಮಾರುಕಟ್ಟೆಯ ಸ್ಥಿತಿಗತಿಯನ್ನು ಅಧ್ಯಯನ ಮಾಡಿ. ಶತ್ರುಗಳು ನಿಮ್ಮನ್ನು ಕೆಣಕಲು ಪ್ರಯತ್ನಿಸಬಹುದು.
ಆರ್ಥಿಕವಾಗಿ ಅನಿರೀಕ್ಷಿತ ಧನಾಗಮನದ ಸಾಧ್ಯತೆ ಇದೆ. ಸೋದರ ಸಂಬಂಧಿಗಳೊಂದಿಗೆ ಇದ್ದ ಹಣಕಾಸಿನ ವಿಚಾರದ ಮುನಿಸು ದೂರವಾಗಲಿದೆ. ರಕ್ತದೊತ್ತಡ ಅಥವಾ ಮಧುಮೇಹ ಇರುವವರು ಆಹಾರ ಪದ್ಧತಿಯಲ್ಲಿ ಶಿಸ್ತು ಪಾಲಿಸಬೇಕು. ಸಾರ್ವಜನಿಕ ಕೆಲಸಗಳಲ್ಲಿ ತೊಡಗಿರುವವರಿಗೆ ದೊಡ್ಡ ಮಟ್ಟದ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ದೃಢ ನಿರ್ಧಾರಗಳು ವ್ಯವಹಾರದಲ್ಲಿ ಅಭಿವೃದ್ಧಿಗೆ ದಾರಿ ಮಾಡಿಕೊಡಲಿವೆ. ಲೇವಾದೇವಿ ವ್ಯವಹಾರದಲ್ಲಿ ಇರುವವರಿಗೆ ದೊಡ್ಡ ಒಪ್ಪಂದಗಳು ಕೈಗೂಡಲಿವೆ. ಪ್ರೀತಿಯಲ್ಲಿ ಇರುವವರಿಗೆ ಉಡುಗೊರೆಗಳಿಗಾಗಿ ಖರ್ಚು ಆಗಲಿದೆ.
ಅಂದುಕೊಂಡಿದ್ದ ಕೆಲಸಗಳು ನಿಮ್ಮ ಪರವಾಗಿಯೇ ಇರಲಿದೆ. ಭೂಮಿ ವ್ಯವಹಾರಗಳಲ್ಲಿ ಲಾಭದ ಮುನ್ಸೂಚನೆ ಇದೆ. ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದೂರದ ಊರಿನಿಂದ ಅತಿಥಿಗಳು ಬರುವವರಿದ್ದು, ಮನೆಯಲ್ಲಿ ಚಟುವಟಿಕೆಗಳು ಹೆಚ್ಚಾಗಲಿವೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲಿಗೇರಲಿದೆ, ಸವಾಲುಗಳನ್ನು ಸ್ವೀಕರಿಸಲು ಸಜ್ಜಾಗಿರಿ. ಮಕ್ಕಳ ನಡವಳಿಕೆಯಲ್ಲಿ ಸುಧಾರಣೆ ಕಂಡುಬರಲಿದ್ದು, ಇದು ಪೋಷಕರಿಗೆ ಸಮಾಧಾನ ತರಲಿದೆ. ವಾಹನಗಳ ನಿರ್ವಹಣೆಗೆ ಹಣ ವ್ಯಯವಾಗಬಹುದು.
ಸಮಯ ಪ್ರಜ್ಞೆ ಮತ್ತು ಚತುರತೆಯಿಂದ ನೀವು ಕಠಿಣ ಕೆಲಸಗಳನ್ನು ಸುಲಭವಾಗಿ ಮುಗಿಸುವಿರಿ. ಹಣಕಾಸಿನ ಹರಿವು ನಿರಂತರವಾಗಿದ್ದರೂ ಐಷಾರಾಮಿ ಖರ್ಚುಗಳ ಮೇಲೆ ಹಿಡಿತವಿರಲಿ. ವ್ಯಾಪಾರದಲ್ಲಿ ಪಾಲುದಾರರೊಂದಿಗೆ ಇದ್ದ ಭಿನ್ನಾಭಿಪ್ರಾಯಗಳು ಬಗೆಹರಿಯಲಿವೆ. ಕಚೇರಿಯಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದ್ದು, ನಿಮ್ಮ ಸಲಹೆಗಳನ್ನು ಆಡಳಿತ ಮಂಡಳಿಯು ಗಂಭೀರವಾಗಿ ಪರಿಗಣಿಸಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಪ್ರೀತಿಪಾತ್ರರ ಜೊತೆ ಹೊರಗೆ ಸುತ್ತಾಡುವ ಯೋಗ ಇದೆ. ಹೊಸ ಭಾಷೆ- ಕೌಶಲ ಕಲಿಯಲು ಆರಂಭಿಸುವಿರಿ.
ವ್ಯಾಪಾರಿಗಳಿಗೆ ಲಾಭದಾಯಕ ದಿನವಾಗಿರಲಿದೆ. ಕುಟುಂಬದ ಸದಸ್ಯರ ಮಧ್ಯೆ ಪ್ರೀತಿ ಮತ್ತು ಸಾಮರಸ್ಯ ವೃದ್ಧಿಯಾಗಲಿದೆ. ಮನೆಯ ನವೀಕರಣದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವಿರಿ. ಆರ್ಥಿಕವಾಗಿ ಸಣ್ಣ ಮಟ್ಟದ ಉಳಿತಾಯ ಯೋಜನೆಗಳಿಗೆ ಹಣ ಹೂಡಿಕೆ ಮಾಡಲು ಸೂಕ್ತ ಸಮಯ. ಸಾರ್ವಜನಿಕವಾಗಿ ನಿಮ್ಮ ವರ್ಚಸ್ಸು ಹೆಚ್ಚಾಗಲಿದ್ದು, ನೂತನ ಗೆಳೆಯರ ಸಂಪರ್ಕ ಸಿಗಲಿದೆ. ಮಕ್ಕಳ ಕ್ರೀಡಾ ಸಾಧನೆಯು ಹರ್ಷ ತರಲಿದೆ. ಸುತ್ತಮುತ್ತಲಿನವರ ಕಷ್ಟಗಳಿಗೆ ಸ್ಪಂದಿಸುವ ನಿಮ್ಮ ಗುಣಕ್ಕೆ ಮೆಚ್ಚುಗೆ ಸಿಗಲಿದೆ.
ನಿಮ್ಮ ದಕ್ಷತೆ, ಕಾರ್ಯಕ್ಷಮತೆಗೆ ಹೊಸ ರೂಪ ಸಿಗಲಿದೆ. ವೃತ್ತಿ ಕ್ಷೇತ್ರದಲ್ಲಿ ಗುರಿ ತಲುಪಲು ಸುಲಭವಾದ ಹಾದಿ ಗೋಚರಿಸಲಿದೆ. ಸ್ವಂತ ಉದ್ಯೋಗದವವರಿಗೆ ಹೊಸ ಗ್ರಾಹಕರಿಂದ ದೊಡ್ಡ ಮೊತ್ತದ ಆರ್ಡರ್ಗಳು ಬರುವ ಸಾಧ್ಯತೆ ಇದೆ. ಆರ್ಥಿಕವಾಗಿ ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. ನೀವು ಪ್ರವಾಸಕ್ಕೆ ಸಿದ್ಧತೆ ನಡೆಸುತ್ತಿದ್ದರೆ ಅದಕ್ಕೆ ಪೂರಕ ಸನ್ನಿವೇಶಗಳು ಒದಗಿ ಬರಲಿವೆ. ಸಾಮಾಜಿಕವಾಗಿ ನಿಮ್ಮ ವ್ಯಕ್ತಿತ್ವಕ್ಕೆ ವಿಶೇಷ ಗೌರವ ಲಭಿಸಲಿದ್ದು, ಪ್ರಮುಖ ವ್ಯಕ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವ ಅವಕಾಶ ಸಿಗಬಹುದು.
ನಿಮ್ಮ ಕಲ್ಪನಾ ಶಕ್ತಿಯು ಉನ್ನತ ಮಟ್ಟದಲ್ಲಿ ಇರಲಿದ್ದು, ಕಲಾತ್ಮಕ ವೃತ್ತಿಯಲ್ಲಿರುವವರಿಗೆಲಾಭದಾಯಕ ಸಮಯ. ಹಣಕಾಸಿನ ವಿಚಾರದಲ್ಲಿ ಇಂದು ತರಾತುರಿಯ ನಿರ್ಧಾರ ಬೇಡ, ಹೂಡಿಕೆ ಮಾಡುವ ಮೊದಲು ನಂಬಿಕಸ್ತರಿಂದ ಸಲಹೆ ಪಡೆಯಿರಿ. ಕಚೇರಿಯಲ್ಲಿ ಸಹೋದ್ಯೋಗಿಗಳ ನಡುವೆ ಉಂಟಾಗಿದ್ದ ಸಣ್ಣಪುಟ್ಟ ಸಂಘರ್ಷಗಳು ನಿಮ್ಮ ಮಧ್ಯಸ್ಥಿಕೆಯಿಂದ ಬಗೆಹರಿಯಲಿವೆ. ಮನೆಗೆ ಅಗತ್ಯವಿರುವ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸಲು ಇಂದು ಮನಸ್ಸು ಮಾಡುವಿರಿ. ಹಳೆಯ ಗೆಳೆಯರ ಭೇಟಿಯಿಂದ ಮನಸ್ಸಿಗೆ ಮುದ ಸಿಗಲಿದೆ.
ವೈಯಕ್ತಿಕ ಮತ್ತು ವೃತ್ತಿ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವಿರಿ. ಆರ್ಥಿಕವಾಗಿ ಸ್ಥಿರತೆ ಇರಲಿದ್ದು, ದೀರ್ಘಕಾಲದ ಸಾಲದ ಸುಳಿಯಿಂದ ಹೊರಬರಲು ದಾರಿ ಸುಗಮವಾಗಲಿದೆ. ನೀರಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ತೊಡಗಿರುವವರಿಗೆ ಸಕಾರಾತ್ಮಕ ಫಲಿತಾಂಶ ದೊರೆಯುವ ಸಾಧ್ಯತೆ ಇದೆ. ನಿಮ್ಮ ಮಾರ್ಗದರ್ಶನದಿಂದ ಇತರರ ಬದುಕಿನಲ್ಲಿ ಬದಲಾವಣೆ ತರುವ ಅವಕಾಶ ದೊರೆಯಲಿದೆ. ಮನೆಯಲ್ಲಿ ಸಡಗರದ ವಾತಾವರಣವಿರಲಿದ್ದು, ಶುಭ ಸಮಾರಂಭಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಿರಿ.
ನವದೆಹಲಿ, ಜನವರಿ 13: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನದ ಡ್ರೋನ್ಗಳು (Drone) ಮತ್ತೆ ಕಾಣಿಸಿಕೊಂಡಿವೆ. ರಾಜೌರಿ ಸೆಕ್ಟರ್ನ ನಿಯಂತ್ರಣ ರೇಖೆಯ ಉದ್ದಕ್ಕೂ ಇಂದು ರಾತ್ರಿ ಅನುಮಾನಾಸ್ಪದ ಡ್ರೋನ್ಗಳು ಕಂಡುಬಂದ ನಂತರ ಭದ್ರತಾ ಪಡೆಗಳನ್ನು ಎಚ್ಚರಿಸಲಾಯಿತು. ಕೇವಲ 48 ಗಂಟೆಗಳಲ್ಲಿ ಎರಡನೇ ಬಾರಿಗೆ ಡ್ರೋನ್ಗಳು ಪತ್ತೆಯಾದ ನಂತರ ಭಾರತೀಯ ಸೇನೆಯು ಬಲವಾಗಿ ಅದಕ್ಕೆ ಪ್ರತಿದಾಳಿ ನಡೆಸಿತು. ಇದರಿಂದ ಗಡಿಯಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ವಹಿಸಲಾಗಿದೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಗಡಿಯಾಚೆಗಿನ ಪ್ರಚೋದನೆಗಳು ಮತ್ತು ಕದನ ವಿರಾಮ ಉಲ್ಲಂಘನೆಗಳ ವಿರುದ್ಧ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ ಮತ್ತೆ ಡ್ರೋನ್ಗಳು ಪ್ರತ್ಯಕ್ಷವಾಗಿವೆ.
ಮೂಲಗಳ ಪ್ರಕಾರ, ನಿಯಂತ್ರಣ ರೇಖೆಯ (ಎಲ್ಒಸಿ) ಉದ್ದಕ್ಕೂ ನಿಯೋಜಿಸಲಾದ ಭಾರತೀಯ ಸೇನಾ ಸಿಬ್ಬಂದಿ ಡ್ರೋನ್ ಚಟುವಟಿಕೆ ಪತ್ತೆಯಾದ ತಕ್ಷಣ ಶಂಕಿತ ಡ್ರೋನ್ಗಳನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದರು. ಡ್ರೋನ್ಗಳನ್ನು ಗಡಿಯಾಚೆಯಿಂದ ಕಳುಹಿಸಲಾಗಿದೆ ಎಂದು ಶಂಕಿಸಲಾಗಿದೆ. ಬಹುಶಃ ಕಣ್ಗಾವಲು ಅಥವಾ ಇತರ ಅನುಮಾನಾಸ್ಪದ ಉದ್ದೇಶಗಳಿಗಾಗಿ ಪಾಕಿಸ್ತಾನದಿಂದ ಭಾರತದೊಳಗೆ ಕಳುಹಿಸಿರುವ ಸಾಧ್ಯತೆಯಿದೆ.
BREAKING : At least 2 Pakistani drones were shot down by alert Indian Army troopers near Line of Control (LoC) in Rajouri when they tried to cross the LoC. (Sources)
ಈ ಘಟನೆಯ ನಂತರ ಜಮ್ಮು ಕಾಶ್ಮೀರದ ಗಡಿಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸಲಾಗಿದೆ. ಸೇನೆ ಮತ್ತು ಇತರ ಭದ್ರತಾ ಸಂಸ್ಥೆಗಳು ಕಾಶ್ಮೀರದಾದ್ಯಂತ ಕಣ್ಗಾವಲು ತೀವ್ರಗೊಳಿಸಿವೆ ಮತ್ತು ಶೋಧ ಕಾರ್ಯಾಚರಣೆಗಳನ್ನು ಚುರುಕುಗೊಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಡ್ರೋನ್ಗಳ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದೆ. ರಾಜೌರಿ ಜಿಲ್ಲೆಯ ಕೇರಿ ಸೆಕ್ಟರ್ ಮತ್ತು ದೂಂಗಾ ಗಲಿ ಪ್ರದೇಶಗಳಲ್ಲಿ ಮಧ್ಯರಾತ್ರಿಯಲ್ಲಿ ಅನುಮಾನಾಸ್ಪದ ಡ್ರೋನ್ಗಳು ಹಾರುತ್ತಿರುವುದರಿಂದ ಶತ್ರು ದೇಶದಿಂದ ಬಂದ ಈ ಡ್ರೋನ್ಗಳು ಶಸ್ತ್ರಾಸ್ತ್ರಗಳು ಅಥವಾ ಮಾದಕವಸ್ತುಗಳನ್ನು ಸಾಗಿಸುತ್ತಿರಬಹುದು ಎಂಬ ಅನುಮಾನದ ಮೇಲೆ ಸೇನೆಗೆ ಎಚ್ಚರಿಕೆ ನೀಡಲಾಗಿದೆ.
ಕಳೆದ 48 ಗಂಟೆಗಳಲ್ಲಿ ರಾಜೌರಿ ವಲಯದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ಚಟುವಟಿಕೆಯಲ್ಲಿನ ಹೆಚ್ಚಳವು ಭದ್ರತಾ ಪಡೆಗಳಲ್ಲಿ ಕಳವಳವನ್ನು ಮೂಡಿಸಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ನಂತರ ಇಷ್ಟು ಕಡಿಮೆ ಅವಧಿಯಲ್ಲಿ ಡ್ರೋನ್ಗಳು ಪತ್ತೆಯಾಗಿರುವುದು ಇದೇ ಮೊದಲು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (BBK 12 Finale) ಜನವರಿ 17 ಮತ್ತು 18ರಂದು ನಡೆಯಲಿದೆ. ಈ ಫಿನಾಲೆ ವಾರದಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ. ಅದಕ್ಕೂ ಮುನ್ನ ಎಲ್ಲ ಸ್ಪರ್ಧಿಗಳಿಗೆ ಕೆಲವು ವಿಶೇಷ ಸಲವತ್ತುಗಳನ್ನು ನೀಡಲಾಗಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ (Kavya Shaiva), ಧ್ರುವಂತ್, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಧನುಷ್ ಮತ್ತು ಗಿಲ್ಲಿ ನಟ (Gilli Nata) ಅವರು ಇದ್ದಾರೆ. ಇವರೆಲ್ಲರ ಒಂದು ಆಸೆಯನ್ನು ಈಡೇರಿಸುವುದಾಗಿ ಬಿಗ್ ಬಾಸ್ ಹೇಳಿದ್ದಾರೆ. ಕಾವ್ಯಾ ಶೈವ ಅವರು ಒಂದು ವಿಚಿತ್ರ ಆಸೆಯನ್ನು ಹೇಳಿಕೊಂಡಿದ್ದಾರೆ.
ಬಿಗ್ ಬಾಸ್ ನೀಡಿರುವ ಅವಕಾಶದ ಅನುಸಾರ ಸ್ಪರ್ಧಿಗಳು ತಲಾ 3 ಆಸೆಗಳನ್ನು ಹೇಳಬೇಕು. ಅದರಲ್ಲಿ ಸಾಧ್ಯವಾದ ಆಸೆಯನ್ನು ಬಿಗ್ ಬಾಸ್ ಈಡೇರಿಸುತ್ತಾರೆ. ಆಗ ಕಾವ್ಯಾ ಅವರು ತಮ್ಮ ಮೂರು ಆಸೆಗಳನ್ನು ಕ್ಯಾಮೆರಾ ಹೇಳಿಕೊಂಡರು. ‘ನನ್ನ ತಮ್ಮ ಮತ್ತೆ ಬಿಗ್ ಬಾಸ್ ಮನೆಗೆ ಬರಬೇಕು. ಬಿಗ್ ಬಾಸ್ ಮನೆಯಲ್ಲಿ ನಾನು ಒಂದು ಸಿನಿಮಾ ನೋಡಬೇಕು. ನಾನು ಕಳಪೆ ಆಗಿ ಜೈಲಿಗೆ ಹೋಗಬೇಕು’ ಎಂದು 3 ಆಸೆಗಳನ್ನು ಕಾವ್ಯಾ ತಿಳಿಸಿದರು.
ಮೊದಲ ಎರಡು ಆಸೆಗಳು ಚೆನ್ನಾಗಿಯೇ ಇವೆ. ಆದರೆ ಮೂರನೇ ಆಸೆ ಸ್ವಲ್ಪ ಸ್ವಲ್ಪ ವಿಚಿತ್ರವಾಗಿದೆ. ಯಾಕೆಂದರೆ, ಬಿಗ್ ಬಾಸ್ ಮನೆಯಲ್ಲಿ ಯಾರೂ ಕೂಡ ಕಳಪೆ ಪಡೆದು ಜೈಲಿಗೆ ಹೋಗಬೇಕು ಅಂತ ಬಯಸಲ್ಲ. ಕಳಪೆ ಪಟ್ಟದಿಂದ ತಪ್ಪಿಸಿಕೊಳ್ಳಬೇಕು ಎಂದೇ ಬಯಸುತ್ತಾರೆ. ಆದರೆ ಕಾವ್ಯಾ ಅವರು ತಾವು ಕೊನೇ ದಿನಗಳಲ್ಲಿ ಕಳಪೆ ಆಗಬೇಕು ಎಂದು ಆಸೆಪಟ್ಟಿದ್ದಾರೆ.
ಕಾವ್ಯಾ ಅವರ ಈ ಆಸೆಗೂ ಕಾರಣ ಇದೆ. ಬಿಗ್ ಬಾಸ್ ಮನೆಯಲ್ಲಿ ಅವರು ಎಲ್ಲ ಅನುಭವವನ್ನೂ ಪಡೆದುಕೊಂಡಿದ್ದಾರೆ. ಉತ್ತಮ ಪಡೆದಿದ್ದಾರೆ, ಕ್ಯಾಪ್ಟನ್ ಆಗಿದ್ದಾರೆ. ಆದರೆ ಜೈಲಿನ ಅನುಭವ ಹೇಗೆ ಇರುತ್ತದೆ ಎಂಬುದು ಅವರಿಗೆ ತಿಳಿದಿಲ್ಲ. ಅದರ ಅನುಭವವನ್ನೂ ಕೂಡ ಪಡೆಯಬೇಕು ಎಂಬುದು ಅವರ ಆಸೆ. ಹಾಗಾಗಿ ಅವರು ಬಿಗ್ ಬಾಸ್ ಎದುರು ಆಸೆ ಹೇಳಿಕೊಂಡಿದ್ದಾರೆ.
ಮಗನ ಜೊತೆ ಸ್ವಿಮಿಂಗ್ ಪೂಲ್ನಲ್ಲಿ ಆಟ ಆಡಬೇಕು, ಬಿಗ್ ಬಾಸ್ ಟಿವಿಯಲ್ಲಿ ಸಿನಿಮಾ ನೋಡಬೇಕು, ಮನೆಯವರ ಜೊತೆ ಇಷ್ಟದ ಅಡುಗೆ ಮಾಡಿಕೊಂಡು ತಿನ್ನಬೇಕು ಎಂದು ಮ್ಯೂಟೆಂಟ್ ರಘು ಅವರು ಆಸೆ ಹೇಳಿಕೊಂಡಿದ್ದಾರೆ. ನಲ್ಲಿ ಮೂಳೆ ತಿಂದು ಮಲಗಬೇಕು, ಟಿವಿಯಲ್ಲಿ ಸಿನಿಮಾ ನೋಡಬೇಕು ಎಂದು ಗಿಲ್ಲಿ ನಟ ಅವರು ಆಸೆಪಟ್ಟಿದ್ದಾರೆ.