ಬೆಂಗಳೂರಿನಲ್ಲಿ ಎಲ್ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ
ಬೆಂಗಳೂರು, ಮಾರ್ಚ್ 14: ರಾಜ್ಯದಲ್ಲಿ ವಾಣಿಜ್ಯ ಎಲ್ಪಿಜಿ ಗ್ಯಾಸ್ (LPG Gas Cylinder) ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ಕರ್ನಾಟಕದ ನಾರಿ ಶಕ್ತಿ ಪರವಾಗಿ ಪತ್ರ ಬರೆದಿರುವ ರೂಪಾ ಶಾಸ್ತ್ರಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೊರತೆ ಮತ್ತು ಬೆಲೆ ಏರಿಕೆಯು ಹೋಟೆಲ್…