Headlines

ಅಲ್ಲು ಅರ್ಜುನ್ ವ್ಯಕ್ತಿತ್ವ ಎಂಥದ್ದು? ವಿವರಿಸಿದ ಮ್ಯಾನೇಜರ್

ಕೆಲವು ದಿನಗಳ ಹಿಂದೆ, ಟಾಲಿವುಡ್ ಸ್ಟಾರ್ ಹೀರೋ ಅಲ್ಲು ಅರ್ಜುನ್ ಬಗ್ಗೆ ಬ್ರಾಂಡ್ ಸ್ಟ್ರಾಟಜಿಸ್ಟ್ ಕಾವೇರಿ ಬರುವಾ ಅವರ ಹೇಳಿಕೆಗಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದವು. ಅಲ್ಲು ಅರ್ಜುನ್ ಅವರನ್ನು ಭೇಟಿಯಾಗಲು 42 ನಿಯಮಗಳನ್ನು ಪಾಲಿಸಬೇಕು ಎಂಬ ಅವರ ಹೇಳಿಕೆಗಳು ಸಂಚಲನ ಸೃಷಟಿಸಿದವು. ಆದಾಗ್ಯೂ, ಅಲ್ಲು ಅರ್ಜುನ್ ತಂಡವು ತಕ್ಷಣವೇ ಇವುಗಳಿಗೆ ಪ್ರತಿಕ್ರಿಯಿಸಿ ಕಾವೇರಿ ಬರುವಾ ಅವರ ಹೇಳಿಕೆಗಳನ್ನು ನಿರಾಕರಿಸಿತು. ಇತ್ತೀಚೆಗೆ, ಅಲ್ಲು ಅರ್ಜುನ್ ಅವರ ಮ್ಯಾನೇಜರ್ ಶರತ್ಚಂದ್ರ ನಾಯ್ಡು ಅವರು ಇದೇ ವಿಷಯಕ್ಕೆ ಪ್ರತಿಕ್ರಿಯಿಸಿದ್ದಾರೆ. ಸಿನಿಮಾಗೆ ಸಂಬಂಧಿಸಿದ…

Read More

‘ಸನ್​ರೈಸರ್ಸ್’ ​ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್?

ದಿ ಹಂಡ್ರೆಡ್ ಲೀಗ್​ನಲ್ಲಿ ಪಾಕಿಸ್ತಾನ್ ಆಟಗಾರ ಅಬ್ರಾರ್ ಅಹ್ಮದ್​ ಅವರನ್ನು ಖರೀದಿಸಿ ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಇಕ್ಕಟಿಗೆ ಸಿಲುಕಿದೆ.  ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನುಎಸ್​ಆರ್​ಹೆಚ್ ಮಾಲೀಕತ್ವದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಬರೋಬ್ಬರಿ £1,90,000 (ಸುಮಾರು ₹2.34 ಕೋಟಿ) ಮೊತ್ತಕ್ಕೆ ಖರೀದಿಸಿದೆ. ಇತ್ತ ಭಾರತೀಯ ವಿರೋಧಿ ಮನಸ್ಥಿತಿ ಹೊಂದಿರುವ ಪಾಕ್ ಆಟಗಾರನನ್ನು ಖರೀದಿಸಿರುವುದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಈ ಆಕ್ರೋಶದೊಂದಿಗೆ ಸನ್​ರೈಸರ್ಸ್​ ಲೀಡ್ಸ್‌ನ ‘X’ (ಟ್ವಿಟರ್) ಖಾತೆಯನ್ನು…

Read More

ಜೈಲುಗಳಲ್ಲಿ ಡ್ರಗ್ಸ್ ನೆಟ್​ವರ್ಕ್​ ಬ್ರೇಕ್ ಹಾಕಲು ಡಿಜಿಪಿ ಪ್ಲಾನ್; ರಾಜ್ಯದ ಎಲ್ಲಾ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಟೆಸ್ಟ್!

ಬೆಂಗಳೂರು, ಮಾರ್ಚ್ 14: ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ (Alok Kumar) ಅವರ ಸೂಚನೆಯಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕೈದಿಗಳನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯದ ಶೇ10 ಕೈದಿಗಳಿಗೆ ಟೆಸ್ಟ್ ಪರಪ್ಪನ ಅಗ್ರಹಾರದಲ್ಲಿ ಮಾರ್ಚ್ 9 ರಂದು ಸಿಬ್ಬಂದಿಯೇ ತನ್ನ ಒಳುಡುಪಿನಲ್ಲಿ ಮಾದಕ ವಸ್ತುಗಳನ್ನು ಜೈಲಿನೊಳಗೆ ತಂದ ಘಟನೆ ನಡೆದಿತ್ತು. ಇದೊಂದೇ ಅಲ್ಲದೆ ಹಲವು ಬಾರಿ…

Read More

‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ವಿಘ್ನ ಎದುರಾಗಿತ್ತು. ಇರಾನ್ ಹಾಗೂ ಇಸ್ರೇಲ್ ಯುದ್ಧದ ಕಾರಣ ನೀಡಿ ಇವರು ಸಿನಿಮಾನ ಮುಂದಕ್ಕೆ ಹಾಕಿಕೊಂಡರು. ಇದರಿಂದ ‘ಧುರಂಧರ್ 2’ ಸಿನಿಮಾ ಜೊತೆಗಿನ ಕ್ಲ್ಯಾಶ್ ಮಿಸ್ ಆಗಿದೆ. ಆದರೆ, ಕೆಲವು ವರದಿಗಳ ಪ್ರಕಾರ ‘ಟಾಕ್ಸಿಕ್’ ಸಿನಿಮಾ ಈಗ ಡಜನ್ ಸಿನಿಮಾಗಳ ವಿರುದ್ಧ ಹೋರಾಡಬೇಕಾದ ಪರಿಸ್ಥಿತಿ ಬಂದಿದೆ. ಇದರಿಂದ ‘ಟಾಕ್ಸಿಕ್’ ತುಂಬಾನೇ ದೊಡ್ಡ ಚಾಲೆಂಜ್ ಎದುರಿಸುವ ಸೂಚನೆ ಪಡೆದಿದೆ. ‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿತ್ತು….

Read More

ಪುತ್ರಿಯರಿಂದಲೇ ಅಂತ್ಯಸಂಸ್ಕಾರ: ಗಂಡು ಮಕ್ಕಳಿಲ್ಲದಿದ್ದರೇನು? ತಂದೆಗೆ ಅಗ್ನಿಸ್ಪರ್ಶ ಮಾಡಿದ ಇಬ್ಬರು ಹೆಣ್ಮಕ್ಕಳು!

ಕಡೂರು, ಮಾ.14 : “ಗಂಡು ಮಕ್ಕಳಿದ್ದರೆ ಮಾತ್ರ ಮುಕ್ತಿ” ಎಂಬ ಹಳೆಯ ಸಂಪ್ರದಾಯದ ನಂಬಿಕೆಯನ್ನು ಬದಿಗೊತ್ತಿ, ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ವಿದಾಯ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಬೀರೂರು ಪಟ್ಟಣದ ನಿವಾಸಿ ವಿಶ್ವನಾಥ್ ಅವರು ನಿನ್ನೆ ನಿಧನರಾಗಿದ್ದರು. ಇವರಿಗೆ ಗಂಡು ಮಕ್ಕಳಿರಲಿಲ್ಲ, ಕೇವಲ ಇಬ್ಬರು ಹೆಣ್ಣು ಮಕ್ಕಳಿದ್ದರು. ತಂದೆಯ ಸಾವಿನಿಂದ ಕಂಗಾಲಾಗಿದ್ದ ಪುತ್ರಿಯರು, ತಂದೆಯ ಮೇಲಿನ ಗೌರವ…

Read More

Saturn Combustion 2026: ಇನ್ನು 40 ದಿನಗಳ ಕಾಲ ಮೀನ ರಾಶಿಯಲ್ಲಿ ಶನಿ ಅಸ್ತಂಗತ; ಯಾವ ರಾಶಿಗೆ ಅಶುಭ?

ಗ್ರಹಗಳ ವಿಷಯದಲ್ಲಿ ಮಹತ್ವದ ಬದಲಾವಣೆಯೊಂದು ಸಂಭವಿಸಲಿದೆ. ಕರ್ಮ ಕಾರಕ ಮತ್ತು ನ್ಯಾಯಾಧೀಶನಾಗಿರುವ ಶನಿ ಗ್ರಹವು ಅಸ್ತಂಗತನಾಗಲಿದ್ದಾನೆ. ಅಸ್ತಂಗತ ಎಂದರೆ ಸೂರ್ಯನಿಗೆ ಹತ್ತಿರ ಬಂದಾಗ ಯಾವುದೇ ಗ್ರಹವು ತನ್ನ ಸಂಪೂರ್ಣ ಶಕ್ತಿಯನ್ನು ಕಳೆದುಕೊಳ್ಳುವುದು. ಶನಿ ಗ್ರಹವು ನಿನ್ನೆ ಅಂದರೆ ಮಾರ್ಚ್ 13 ರಂದು ಸಂಜೆ 7 ಗಂಟೆ 13 ನಿಮಿಷದಿಂದ ಏಪ್ರಿಲ್ 22 ರ ಬೆಳಗಿನ ಜಾವ 4 ಗಂಟೆ 43 ನಿಮಿಷದವರೆಗೆ ಅಸ್ತಂಗತ ಸ್ಥಿತಿಯಲ್ಲಿ ಇರಲಿದ್ದು, ಈ ಅವಧಿಯಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಈ ಅವಧಿಯು ಸುಮಾರು…

Read More

ಮೊದಲು ಸತ್ಯ ತಿಳೀರಿ, ವಿದ್ಯಾರ್ಥಿಗಳ ಪ್ರವೇಶ, ಅಧ್ಯಾಪಕರ ನೇಮಕದ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಗೆ ದೆಹಲಿ ವಿವಿ ತೀವ್ರ ಆಕ್ಷೇಪ

ನವದೆಹಲಿ, ಮಾರ್ಚ್​ 14: ದೆಹಲಿ ವಿಶ್ವವಿದ್ಯಾಲಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಹಾಗೂ ಅಧ್ಯಾಪಕರ ನೇಮಕದ ಕುರಿತು ರಾಹುಲ್ ಗಾಂಧಿ(Rahul Gandhi) ಹೇಳಿಕೆಗೆ ದೆಹಲಿ ವಿವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯಾವುದೇ ಸಾರ್ವಜನಿಕ ಹೇಳಿಕೆ ನೀಡುವ ಮೊದಲು ನಿಖರವಾದ ಸಂಗತಿ ಏನೆಂದು ತಿಳಿಯುವುದು ಬಹಳ ಮುಖ್ಯ ಎಂದು ವಿವಿ ಹೇಳಿದೆ. ದೆಹಲಿ ವಿಶ್ವವಿದ್ಯಾನಿಲಯವು ಅಧಿಕೃತ ಹೇಳಿಕೆಯಲ್ಲಿ, ವಿದ್ಯಾರ್ಥಿಗಳ ಪ್ರವೇಶವು ಪ್ರಾಥಮಿಕವಾಗಿ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) ಅಂಕಗಳನ್ನು ಆಧರಿಸಿದೆ ಎಂದು ಸ್ಪಷ್ಟಪಡಿಸಿದೆ. ಹೆಚ್ಚಿನ ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ…

Read More

Cylinder Price Hike: 1700 ರೂ. ಬೆಲೆಯ ಸಿಲಿಂಡರ್ 5000 ರೂ.ಗೆ ಮಾರಾಟ!

ಬೆಂಗಳೂರು, ಮಾರ್ಚ್​ 14: ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜಧಾನಿಯ ಹೋಟೆಲ್‌ಗಳಿಗೂ ತಟ್ಟಿದೆ. ಸಿಲಿಂಡರ್‌ಗಳ ಕೊರತೆಯಿಂದ ಕಾಳ ಸಂತೆಯಲ್ಲಿ 1,700 ರೂ. ಬೆಲೆಯ ಕಮರ್ಷಿಯಲ್ ಸಿಲಿಂಡರ್‌ಗಳು 5,000 ದಿಂದ 5,500 ರೂ.ಗೆ ಮಾರಾಟವಾಗುತ್ತಿವೆ. ಡಿಸ್ಟ್ರಿಬ್ಯೂಟರ್‌ಗಳು ಮತ್ತು ಕೆಲ ಏಜೆನ್ಸಿಗಳು ಈ ಪರಿಸ್ಥಿತಿಯ ಲಾಭ ಪಡೆದು ಹೋಟೆಲ್ ಮಾಲೀಕರನ್ನು ಸುಲಿಗೆ ಮಾಡುತ್ತಿವೆ ಎನ್ನಲಾಗುತ್ತಿದೆ. ಈ ಸಂಕಷ್ಟದಿಂದ ಹೋಟೆಲ್ ಮಾಲೀಕರು ತಮ್ಮ ಸಿಬ್ಬಂದಿಯನ್ನು ಉಳಿಸಿಕೊಳ್ಳಲು ಮತ್ತು ಗ್ರಾಹಕರಿಗೆ…

Read More

ಐಪಿಎಲ್​ಗೆ ಟಕ್ಕರ್: ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ

ಪಾಕಿಸ್ತಾನ್ ಸೂಪರ್ ಲೀಗ್​ ವೇಳಾಪಟ್ಟಿ ಪ್ರಕಟವಾಗಿದೆ. ಈ ಬಾರಿ ಪಿಎಸ್​ಎಲ್​ ಟೂರ್ನಿ ಶುರುವಾಗುವುದು ಮಾರ್ಚ್ 26 ರಿಂದ. ಅಂದರೆ ಐಪಿಎಲ್ ಆರಂಭಕ್ಕೂ ಎರಡು ದಿನ ಮೊದಲು ಪಿಎಸ್​ಎಲ್​ ಟೂರ್ನಿಗೆ ಚಾಲನೆ ನೀಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಐಪಿಎಲ್​ನ ಪ್ರತಿ ಪಂದ್ಯಗಳಿಗೂ ಅರ್ಧಗಂಟೆ ಮುಂಚೆಯೇ ಪಾಕಿಸ್ತಾನ್ ಸೂಪರ್ ಲೀಗ್​ನ ಮ್ಯಾಚ್​ಗಳು ಶುರುವಾಗಲಿದೆ. ಅಂದರೆ ಐಪಿಎಲ್​ನ ಮೊದಲ ಪಂದ್ಯ 3.30 ಆರಂಭವಾದರೆ, ಅತ್ತ ಪಿಎಸ್​ಎಲ್​ನ ಮೊದಲ ಪಂದ್ಯ ಭಾರತೀಯ ಕಾಲಮಾನ 3 ಗಂಟೆಗೆ ಶುರುವಾಗಲಿದೆ. ಇನ್ನು…

Read More

ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ ಎಫ್​ಐಆರ್

ಚಿತ್ರದುರ್ಗ, ಮಾರ್ಚ್ 14: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಲ್ಲಿ ಚಿತ್ರದುರ್ಗ (Chitradurga) ನಗರಾಭಿವೃದ್ಧಿ ಕೋಶದ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಕೋಶದ ಐವರು ಸಿಬ್ಬಂದಿ ಸೇರಿ ಒಟ್ಟು ಆರು ಜನರ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 15 ಲಕ್ಷ ರೂಪಾಯಿ ಮೌಲ್ಯದ ನಕಲಿ ಬಿಲ್ ಸಲ್ಲಿಕೆ! ಜಿಲ್ಲಾ ನಗರಾಭಿವೃದ್ಧಿ ಕೋಶದ ಸಿಟಿ ಲೆವಲ್ ಟೆಕ್ನಿಕಲ್ ಸೆಲ್ (CLTC) ಸಿಬ್ಬಂದಿಗಳ…

Read More