ಬೆಂಗಳೂರು, ಮಾರ್ಚ್ 18: ಯುಗಾದಿ ಮತ್ತು ರಂಜಾನ್ ಹಬ್ಬ ಹಿನ್ನೆಲೆ ಇಂದು ಮಧ್ಯಾಹ್ನದಿಂದಲೇ ಜನರು ತಮ್ಮ ಊರಿಗೆ ಹೊರಟ್ಟಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ನಲ್ಲಿ ಕಿಕ್ಕಿರಿದು ತುಂಬಿದ್ದಾರೆ. ಬಸ್ಗಳು ಬರುತ್ತಿದ್ದಂತೆ ಕಿಟಕಿ ಮೂಲಕ ಬ್ಯಾಗ್ ಗಳನ್ನು ಹಾಕಿ ಸೀಟ್ ಪ್ರಯಾಣಿಕರು ಮುಂದಾಗಿದ್ದಾರೆ. ಇದೇ ವೇಳೆ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಓರ್ವ ಮಹಿಳೆ ಕೆಳಗೆಬಿದಿದ್ದಾರೆ. ಸರ್ಕಾರಿ ಬಸ್ ಮುಂದೆ ಚಲಿಸುವಾಗ ಮಹಿಳೆ ಆಯತಪ್ಪಿಬಿದಿದ್ದಾರೆ. ಸಹ ಪ್ರಯಾಣಿಕರ ಸಮಯ ಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ.
ನವದೆಹಲಿ, ಮಾರ್ಚ್ 18: ಚೀನಾಕ್ಕೆ ಹೋಗುತ್ತಿದ್ದ ರಷ್ಯಾದ ತೈಲ (Oil Tanker) ತುಂಬಿದ ಟ್ಯಾಂಕರ್ ದಕ್ಷಿಣ ಚೀನಾದ ಸಮುದ್ರದಲ್ಲಿ ತನ್ನ ದಿಕ್ಕನ್ನು ಬದಲಾಯಿಸಿದೆ. ಆ ಹಡಗು ಯು-ಟರ್ನ್ ಹೊಡೆದು ಈಗ ಭಾರತಕ್ಕೆ ಆಗಮಿಸುತ್ತಿದೆ. ಅಮೆರಿಕ, ಇಸ್ರೇಲ್-ಇರಾನ್ ಯುದ್ಧದ ಮಧ್ಯೆ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಡಗಿನ ಟ್ರ್ಯಾಕಿಂಗ್ ಡೇಟಾ ಅಫ್ರಾಮ್ಯಾಕ್ಸ್ ಟ್ಯಾಂಕರ್ ಅಕ್ವಾ ಟೈಟಾನ್ ಮಾರ್ಚ್ 21ರಂದು ರಷ್ಯಾದ ಯುರಲ್ಸ್ ಕಚ್ಚಾ ತೈಲದ ಸರಕುಗಳನ್ನು ಹೊತ್ತು ನವಮಂಗಳೂರು ಬಂದರಿಗೆ ಆಗಮಿಸುವ ನಿರೀಕ್ಷೆಯಿದೆ ಎಂದು ತೋರಿಸಿದೆ. ಜನವರಿ ಅಂತ್ಯದಲ್ಲಿ ಈ ಹಡಗು ಬಾಲ್ಟಿಕ್ ಸಮುದ್ರದ ಬಂದರಿನಿಂದ ತೈಲವನ್ನು ಲೋಡ್ ಮಾಡಿತ್ತು. ಆರಂಭದಲ್ಲಿ ಆ ಹಡಗು ಚೀನಾದ ರಿಜಾವೊ ಬಂದರಿಗೆ ಹೋಗಬೇಕೆಂದು ಸೂಚಿಸಲಾಗಿತ್ತು. ಆದರೆ, ಇದೀಗ ಆ ಹಡಗು ಯು-ಟರ್ನ್ ತೆಗೆದುಕೊಂಡು ಭಾರತಕ್ಕೆ ಆಗಮಿಸುತ್ತಿದೆ.
ಅಮೆರಿಕ ರಷ್ಯಾದ ಖರೀದಿಗಳನ್ನು ತಾತ್ಕಾಲಿಕವಾಗಿ ಹೆಚ್ಚಿಸಲು ಭಾರತಕ್ಕೆ ಹಸಿರು ನಿಶಾನೆ ತೋರಿಸಿತ್ತು. ಇದಾದ ನಂತರ ಭಾರತೀಯ ಸಂಸ್ಕರಣಾಗಾರರು 30 ಮಿಲಿಯನ್ ಬ್ಯಾರೆಲ್ಗಳಷ್ಟು ರಷ್ಯಾದ ತೈಲವನ್ನು ಖರೀದಿಸಿದ್ದರು. ಇದು ಇರಾನ್ನಲ್ಲಿನ ಯುದ್ಧದಿಂದಾಗಿ ನಷ್ಟವಾದ ಮಧ್ಯಪ್ರಾಚ್ಯ ಪೂರೈಕೆಗಳನ್ನು ನಿಭಾಯಿಸಲು ಭಾರತಕ್ಕೆ ಸಹಾಯ ಮಾಡುವ ಗುರಿಯನ್ನು ಹೊಂದಿದೆ. ಅಂದಿನಿಂದ, ಹೆಚ್ಚಿನ ದೇಶಗಳು ರಷ್ಯಾದಿಂದ ತೈಲ ಖರೀದಿಯನ್ನು ಪುನರಾರಂಭಿಸಲು ಅವಕಾಶ ನೀಡಲಾಗಿದೆ.
ವೋರ್ಟೆಕ್ಸಾ ಲಿಮಿಟೆಡ್ ಪ್ರಕಾರ, ರಷ್ಯಾದ ತೈಲವನ್ನು ಸಾಗಿಸುವ 7 ಟ್ಯಾಂಕರ್ಗಳು ಚೀನಾದ ಬದಲಾಗಿ ಭಾರತಕ್ಕೆ ಆಗಮಿಸುತ್ತಿವೆ. ತೈಲ ಟ್ಯಾಂಕರ್ ಮೊದಲು ರಷ್ಯಾದ ಕಪ್ಪು ಸಮುದ್ರದ ನೊವೊರೊಸಿಸ್ಕ್ನಿಂದ ಪಯಣಿಸಿತ್ತು. ಇದು ಆರಂಭದಲ್ಲಿ ಚೀನಾದ ರಿಝಾವೊ ಬಳಿಯ ನೀರಿನ ಕಡೆಗೆ ಸಾಗುತ್ತಿತ್ತು. ಇದೀಗ ಆ ಹಡಗನ್ನು ಭಾರತಕ್ಕೆ ತಿರುಗಿಸಲಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 18:ಯುಗಾದಿ ಮತ್ತು ರಂಜಾನ್ ಹಬ್ಬಗಳನ್ನು ಮನೆಯವರ ಜೊತೆ ಸೇರಿಕೊಂಡು ಆಚರಿಸಬೇಕು ಎಂಬ ಆಸೆಯಲ್ಲಿ ಬೆಂಗಳೂರಿನಿಂದ ಊರುಗಳತ್ತ ಮುಖ ಮಾಡುತ್ತಿರುವ ಪ್ರಯಾಣಿಕರಿಗೆ ಭರ್ಜರಿ ಶಾಕ್ ಎದುರಾಗಿದೆ. ಇದೇ ಸಮಯವನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲಕರು ದುಪ್ಪಟ್ಟು ದರ ವಸೂಲಿಗೆ ಇಳಿದಿದ್ದಾರೆ. ನಾಳೆ ಯುಗಾದಿ ಹಬ್ಬವಾದರೆ, ಶುಕ್ರವಾರ ಹೊಸ ತೊಡಕು ಆಚರಣೆ ಇದೆ. ಶನಿವಾರ ರಂಜಾನ್ ಬಂದಿದ್ದು, ಭಾನುವಾರ ಎಂದಿನಂತೆ ವಾರದ ರಜೆ ಇರಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯ ಜನ ಊರುಗಳತ್ತ ಹೊರಟು ನಿಂತಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ KSRTC 2,325 ಹೆಚ್ಚುವರಿ ಬಸ್ಗಳನ್ನು ಬಿಟ್ಟಿರುವ ನಡುವೆಯೂ ಪ್ರಯಾಣಿಕರ ಪರದಾಟ ಮುಂದುವರಿದಿದೆ.
ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿರುವ ಮೆಜೆಸ್ಟಿಕ್ ಬಸ್ ನಿಲ್ದಾಣ
ಇಂದು ಮಧ್ಯಾಹ್ನದಿಂದಲೇ ಊರಿನತ್ತ ಬೆಂಗಳೂರಿಗರು ಹೊರಟಿರುವ ಕಾರಣ ಮೆಜೆಸ್ಟಿಕ್ ಬಸ್ ನಿಲ್ದಾಣ ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿರುವ ದೃಶ್ಯಗಳು ಕಂಡುಬಂದಿವೆ. ಸೀಟಿಗಾಗಿ ಪ್ರಯಾಣಿಕರ ನಡುವೆಯೇ ಪೈಪೋಟಿ ನಡೆಯುತ್ತಿದ್ದು, ಬಸ್ಸುಗಳು ಬರ್ತಿದ್ದಂತೆ ಕಿಟಕಿ ಮೂಲಕ ಬ್ಯಾಗ್ಗಳನ್ನು ಹಾಕಿ ಜನರು ಸೀಟ್ ಹಿಡಿಯಲು ಪ್ರಯತ್ನಿಸುತ್ತಿರೋದು ಸರ್ವೇ ಸಾಮಾನ್ಯ ಎಂಬಂತಿದೆ. ಸಂಜೆ ವೇಳೆಗೆ ಈ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಹೆಚ್ಚಿದೆ.
ಈಗಿನ ಕಾಲದ ಮಕ್ಕಳು (children) ಎಲ್ಲದರಲ್ಲೂ ಒಂದು ಹೆಜ್ಜೆ ಮುಂದೆನೇ. ಏನೇ ಕೇಳಿದ್ರೂ ಪಟ ಪಟನೇ ಉತ್ತರ ಹೇಳ್ತಾರೆ. ಹೆತ್ತವರನ್ನು ಮಾತಿನಲ್ಲೇ ಕಟ್ಟಿ ಹಾಕ್ತಾರೆ, ಆದರೆ ಈ ಪುಟ್ಟ ಹುಡುಗಿಯೂ (little girl) ಎಮ್ಮೆ ಕರುವಿಗೆ ಓಪನ್ ಚಾಲೆಂಜ್ ಹಾಕಿದ್ದಾಳೆ. ಕುತ್ತಿಗೆಗೆ ಕಟ್ಟಿದ ಹಗ್ಗವನ್ನು ಎಷ್ಟೇ ಎಳೆದರೂ ಎಮ್ಮೆ ಕರುವು ಕದಲದೇ ಹಾಗೆಯೇ ನಿಂತುಕೊಂಡಿದ್ದು, ಇದರಿಂದ ಕೋಪಗೊಂಡ ಈ ಪುಟ್ಟ ಹುಡುಗಿಯೂ ಸವಾಲು ಹಾಕಿರುವ ವಿಡಿಯೋ ವೈರಲ್ ಆಗಿದೆ. ಈ ಪುಟ್ಟ ಬಾಲಕಿಯ ಮಾತು ಕೇಳಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.
Ayub Khilji ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ಪುಟ್ಟ ಹುಡುಗಿಯೊಂದು ಎಮ್ಮೆ ಕರುವಿಗೆ ಕಟ್ಟಿದ ಹಗ್ಗವನ್ನು ಎಳೆಯುತ್ತಿರುವುದನ್ನು ಕಾಣಬಹುದು. ಎಮ್ಮೆ ಕರುವು ತಾನು ಬರಲ್ಲ ಎಂದು ಹಠ ಹಿಡಿದು ನಿಂತಿದೆ. ಇದೇ ವೇಳೆ ಈ ಪುಟ್ಟ ಬಾಲಕಿ ಈ ಕರುವಿಗೆ ಸವಾಲು ಹಾಕಿದ್ದು, ನಾನು ಕೂಡ ನಿಮ್ಮ ಅಮ್ಮನ ಹಾಲು ಕುಡಿದೇ ಬೆಳೆದಿದ್ದು ಎಂದು ಹೇಳಿರುವುದನ್ನು ಕಾಣಬಹುದು. ಮತ್ತೆ ತನ್ನ ಪ್ರಯತ್ನ ಬಿಡದೇ ಎಮ್ಮೆ ಕರುವಿನ ಕುತ್ತಿಗೆಗೆ ಕಟ್ಟಿದ ಹಗ್ಗವನ್ನು ಎಳೆಯುತ್ತಿದ್ದಾಳೆ.
ಈ ವಿಡಿಯೋ ನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪುಟ್ಟ ಹುಡುಗಿಯ ಮಾತು ಕೇಳಿ ನಗು ಬಂದಿದೆ ಎಂದಿದ್ದಾರೆ. ಮತ್ತೊಬ್ಬರು, ಈ ಪುಟಾಣಿಯ ಸವಾಲು ಮಜಾವಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪುನೀತ್ ರಾಜ್ಕುಮಾರ್ (Puneeth Rajkumar) ನಟನೆಯ ‘ಆಕಾಶ್’ ಸಿನಿಮಾ 2005 ರಲ್ಲಿ ಬಿಡುಗಡೆ ಆಗಿ ಭಾರಿ ದೊಡ್ಡ ಹಿಟ್ ಆಗಿತ್ತು. ಕೆಲ ದಿನಗಳ ಹಿಂದಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದ್ದು, ಪ್ರೇಕ್ಷಕರು, ಅಭಿಮಾನಿಗಳು ಬಲು ಅದ್ಧೂರಿಯಾಗಿ ‘ಆಕಾಶ್’ ಸಿನಿಮಾವನ್ನು ಮತ್ತೊಮ್ಮೆ ಸ್ವಾಗತ ಮಾಡಿದ್ದಾರೆ. ರಮ್ಯಾ ಸೇರಿದಂತೆ ದೊಡ್ಮನೆಯ ಹಲವು ಸದಸ್ಯರು ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಿದರು. ರಮ್ಯಾ ಅಂತೂ ಅಭಿಮಾನಿಗಳೊಟ್ಟಿಗೆ ಸೇರಿ ಚಿತ್ರಮಂದಿರದಲ್ಲಿಯೇ ‘ನೀನೆ ನೀನೆ’ ಹಾಡು ಸಹ ಹಾಡಿದರು.
ಸಿನಿಮಾ ಮರು ಬಿಡುಗಡೆ ಆದ ದಿನ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದ ರಮ್ಯಾ, ಪುನೀತ್ ಅವರೊಟ್ಟಿಗಿನ ಗೆಳೆತನವನ್ನು ನೆನಪು ಮಾಡಿಕೊಂಡಿದ್ದರು. ಮಾತ್ರವಲ್ಲದೆ ‘ಆಕಾಶ್’ ಸಿನಿಮಾ ಚಿತ್ರೀಕರಣ ಮಾಡುವಾಗಿನ ಘಟನೆಗಳನ್ನು ನೆನಪು ಮಾಡಿಕೊಂಡಿದ್ದರು. ಎಷ್ಟು ಖುಷಿಯಿಂದ ತಾವು ಚಿತ್ರೀಕರಣ ಮಾಡಿದ್ದಾಗಿ ಹೇಳಿಕೊಂಡಿದ್ದರು, ರಾಘವೇಂದ್ರ ರಾಜ್ಕುಮಾರ್ ಅವರು ‘ನೀನೇ, ನೀನೆ’ ಹಾಡನ್ನು ಮೊದಲ ಬಾರಿ ಕೇಳಿಸಿದ ಕ್ಷಣವನ್ನು ಸಹ ನೆನಪು ಮಾಡಿಕೊಂಡಿದ್ದರು. ಆದರೆ ಇದೀಗ ಬಹಳ ಅಪರೂಪವಾದ ಬಿಟಿಎಸ್ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.
ರಮ್ಯಾ ಅವರು ‘ಆಕಾಶ್’ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಮಾಡಿದ್ದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 2005 ರಲ್ಲಿ ಸೋನಿಯ ಹ್ಯಾಂಡಿಕ್ಯಾಮ್ನಲ್ಲಿ ತೆಗೆದ ವಿಡಿಯೋ ಇದಾಗಿದ್ದು, ರಮ್ಯಾ, ಪುನೀತ್ ಅವರು ‘ನೀನೆ ನೀನೆ’ ಹಾಡಿನ ಚಿತ್ರೀಕರಣಕ್ಕೆ ಹೊರದೇಶಕ್ಕೆ ಹೋದಾಗಿನ ವಿಡಿಯೋ ಇದಾಗಿದೆ. ವಿಡಿಯೋನಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಇದ್ದಾರೆ. ವಿನಯ್ ಮತ್ತು ಯುವರಾಜ್ ಕುಮಾರ್ ಅವರಿದ್ದಾರೆ. ಡಾ ರಾಜ್ಕುಮಾರ್, ಪಾರ್ವತಮ್ಮ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ದೊಡ್ಮನೆಯ ಇನ್ನೂ ಹಲವರಿದ್ದಾರೆ.
ವಿಡಿಯೋ ಹಂಚಿಕೊಂಡಿರುವ ನಟಿ ರಮ್ಯಾ, ‘2004/2005 ರಲ್ಲಿ ನಮ್ಮ ‘ಆಕಾಶ್’ ಚಿತ್ರೀಕರಣದ ಕೆಲವು ತುಣುಕುಗಳನ್ನು ರೆಕಾರ್ಡ್ ಮಾಡಿದ್ದೇನೆ, ಅವುಗಳನ್ನು ಸೋನಿ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿದ್ದೆ, ಅದನ್ನು ಕನ್ವರ್ಟ್ ಮಾಡಿ ಇಲ್ಲಿ ನಿಮಗಾಗಿ ಹಂಚಿಕೊಳ್ಳುತ್ತಿದ್ದೇನೆ. ನಾನು ಆಡಿಯೊವನ್ನು ಹಾಗೆಯೇ ಇರಿಸಿದ್ದೇನೆ, ಆದರೆ ಅದು ಹಳೆಯ ಕ್ಯಾಮೆರಾ ಆಗಿರುವುದರಿಂದ ಕೆಲವು ಆಡಿಯೊ ಭಾಗಗಳು ಮಿಸ್ ಆಗಿವೆ. ಆದರೆ ನೀವು ಇನ್ನೂ ನಮ್ಮ ತಮಾಷೆಯನ್ನು ಕೇಳಬಹುದು. ಮಾತ್ರವಲ್ಲದೆ ನಮ್ಮ ತಂಡದಲ್ಲಿ ಇದ್ದ ಗೆಳೆತನ, ಆತ್ಮೀಯತೆಯನ್ನು ನೀವು ವಿಡಿಯೋನಲ್ಲಿ ನೋಡಬಹುದು. ಅಪ್ಪು ಜೊತೆಗೆ ಕಳೆದ ಆ ತಮಾಷೆಯ ಕ್ಷಣಗಳನ್ನು ನಾನು ಸದಾ ನೆನಪಿಡುತ್ತೇನೆ. ನಗು ಮತ್ತು ನಿಮ್ಮ ಸ್ನೇಹಕ್ಕಾಗಿ ಧನ್ಯವಾದಗಳು. ವಿಡಿಯೋನಲ್ಲಿ ನೀವು ಅಶ್ವಿನಿ ಪುನೀತ್ ರಾಜ್ಕುಮಾರ್, ಯುವ ರಾಜ್ಕುಮಾರ್, ವಿನಯ್ ರಾಜ್ಕುಮಾರ್, ರಾಜ್ಕುಮಾರ್, ಪಾರ್ವತಮ್ಮ ರಾಜ್ಕುಮಾರ್, ರಾಘಣ್ಣ ಮತ್ತು ಅಪ್ಪು ಅವರ ಮಕ್ಕಳನ್ನು ನೋಡಬಹುದು’ ಎಂದು ಬರೆದುಕೊಂಡಿದ್ದಾರೆ.
ಚಿಕ್ಕಮಗಳೂರು (ಮಾರ್ಚ್.18): ಜಿಲ್ಲೆಯಲ್ಲಿ ಬಿಜೆಪಿ (BJP) ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು, ಮುಸ್ಲಿಂ ಘಟನೆಯ ಸದಸ್ಯರು ಸೇರಿ ಒಟ್ಟು 15 ಜನರಿಗೆ ಗಡಿಪಾರು ನೋಟಿಸ್ (externment Notice) ನೀಡಲಾಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ , ಬಜರಂಗದಳ ಹಾಸನ ವಿಭಾಗದ ಸಹ ಸಂಯೋಜಕ ಶ್ಯಾಮ್ ವಿ ಗೌಡ, ಮುಸ್ಲಿಂ ಸಂಘಟನೆಯ ನಾಲ್ವರು ಸೇರಿದಂತೆ 15 ಜನರಿಗೆ ಪೊಲೀಸ್ ಕಾಯ್ದೆ1963 ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತದಿಂದ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದ್ದು, ಈ ಸಂಬಂಧ ವಿಚಾರಣೆಗೆ ಬರುವಂತೆ ಹಾಜರಾಗುವಂತೆ ಸೂಚಿಸಲಾಗಿದೆ.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅವರ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ತನ್ನ ಶಿಫಾರಸ್ಸು ಪತ್ರದಲ್ಲಿ ಉಲ್ಲೇಖಿಸಿದೆ. ಈ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇವರನ್ನು ಜಿಲ್ಲೆಯಿಂದ ಹೊರಹಾಕುವಂತೆ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಅದರಂತೆ ಇದೀಗ ನೋಟಿಸ್ ನೀಡಲಾಗಿದೆ.
ಪೊಲೀಸ್ ಇಲಾಖೆ ನೀಡಿರುವ ಪಟ್ಟಿಯಲ್ಲಿ ಪ್ರಮುಖವಾಗಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಭಜರಂಗದಳದ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಅವರ ಹೆಸರುಗಳಿವೆ. ಇವರೊಂದಿಗೆ ವಿವಿಧ ಕೋಮು ಸಂಘರ್ಷ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ನಾಲ್ವರು ಮುಸ್ಲಿಂ ಮುಖಂಡರ ಹೆಸರನ್ನೂ ಶಿಫಾರಸ್ಸು ಮಾಡಲಾಗಿದೆ. ಜೋಹರ್, ಚಾಂದ್, ಇಬ್ರಾಹಿಂ ಹಾಗೂ ಇಮ್ರಾನ್ ಎಂಬುವವರಿಗೂ ಗಡಿಪಾರು ಭೀತಿ ಎದುರಾಗಿದೆ.
ಪೊಲೀಸ್ ಇಲಾಖೆಯ ಶಿಫಾರಸ್ಸನ್ನು ಸ್ವೀಕರಿಸಿರುವ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಗಳು (AC) ವಿಚಾರಣೆ ನಡೆಸಲಿದ್ದಾರೆ. ಈ ವಿಚಾರಣೆಯ ವೇಳೆ ಆರೋಪಿಗಳು ಅಥವಾ ಅವರ ಪರ ವಕೀಲರು ತಮ್ಮ ವಾದ ಮಂಡಿಸಲು ಅವಕಾಶವಿರುತ್ತದೆ. ವಿಚಾರಣೆಯ ನಂತರ, ಜಿಲ್ಲೆಯಲ್ಲಿ ಇವರಿಂದ ಶಾಂತಿಗೆ ಭಂಗ ಉಂಟಾಗುತ್ತದೆಯೇ ಎಂಬುದನ್ನು ಪರಿಶೀಲಿಸಿ, ಎಸಿ ಅವರು ಗಡಿಪಾರು ಮಾಡುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ಹಣದ ಮಳೆಯನ್ನೇ ಹರಿಸುವ ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಬ್ಯಾಟ್ಸ್ಮನ್ಗಳ ಅಬ್ಬರವನ್ನೇ ಕೇಳುವ ಈ ಲೀಗ್ನಲ್ಲಿ ಬೌಂಡರಿ ಹಾಗೂ ಸಿಕ್ಸರ್ಗಳ ಮಳೆ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡುತ್ತದೆ. ಆದಾಗ್ಯೂ ಈ ಲೀಗ್ನಲ್ಲಿ ಸಿಕ್ಸರ್ ಬಾರಿಸಿದ ಆಟಗಾರರೂ ಇದ್ದಾರೆ ಎಂಬುದು ಅಚ್ಚರಿಯ ಸಂಗತಿ.
ರೋಹಿತ್ ಶರ್ಮಾ, ಧೋನಿ, ಅಭಿಷೇಕ್ ಶರ್ಮಾ ಮತ್ತು ಆಂಡ್ರೆ ರಸೆಲ್ ಅವರಂತಹ ಆಟಗಾರರು ಸಿಕ್ಸ್-ಹಿಟ್ಟಿಂಗ್ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆದರೆ ಐಪಿಎಲ್ನಲ್ಲಿ ಎಂದಿಗೂ ಸಿಕ್ಸ್ ಹೊಡೆಯದ ಐವರು ಆಟಗಾರರಿದ್ದಾರೆ. ಅಂತಹ ಐವರು ಆಟಗಾರರ ಪಟ್ಟಿ ಇಲ್ಲಿದೆ.
ಐಪಿಎಲ್ನಲ್ಲಿ ಸಿಕ್ಸ್ ಬಾರಿಸದ ಆಟಗಾರರ ಪಟ್ಟಿಯಲ್ಲಿ ಮಿಚೆಲ್ ಸ್ಟಾರ್ಕ್ ಅಗ್ರಸ್ಥಾನದಲ್ಲಿದ್ದಾರೆ . ಸ್ಟಾರ್ಕ್ 52 ಐಪಿಎಲ್ ಪಂದ್ಯಗಳನ್ನು ಆಡಿದ್ದ್ದು, 111 ರನ್ ಗಳಿಸಿದ್ದಾರೆ. ಇಲ್ಲಿಯವರೆಗೆ 11 ಬೌಂಡರಿಗಳನ್ನು ಬಾರಿಸಿರುವ ಸ್ಟಾರ್ಕ್, ಇದುವರೆಗೆ ಸಿಕ್ಸರ್ ಖಾತೆ ತೆರೆದಿಲ್ಲ. ಬೌಲಿಂಗ್ ಜೊತೆಗೆ ಬ್ಯಾಟಿಂಗ್ ಮಾಡುವ ಕ್ಷಮತೆಯನ್ನು ಹೊಂದಿರುವ ಸ್ಟಾರ್ಕ್ ಐಪಿಎಲ್ನಲ್ಲಿ ಒಂದೇ ಒಂದು ಸಿಕ್ಸ್ ಬಾರಿಸಿಲ್ಲ.
2012 ರ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ನಿತಿನ್ ಸೈನಿ ಕೂಡ ಐಪಿಎಲ್ನಲ್ಲಿ ಒಮ್ಮೆಯೂ ಸಿಕ್ಸರ್ ಬಾರಿಸಲಿಲ್ಲ. ಈ ಲೀಗ್ನಲ್ಲಿ ೧೦ ಪಂದ್ಯಗಳನ್ನಾಡಿರುವ ಸೈನಿ 140 ರನ್ ಬಾರಿಸಿದ್ದು, ಇವರು ಕೂಡ ಸಿಕ್ಸರ್ ಖಾತೆ ತೆರೆದಿಲ್ಲ.
ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್ ಕೂಡ ಐಪಿಎಲ್ನಲ್ಲಿ ಸಿಕ್ಸರ್ ಬಾರಿಸಲಿಲ್ಲ. 2012 ರಲ್ಲಿ ಪುಣೆ ವಾರಿಯರ್ಸ್ ಪರ ಆಡಿದ್ದ ಕ್ಲಾರ್ಕ್ ಆಡಿದ ಆರು ಇನ್ನಿಂಗ್ಸ್ಗಳಲ್ಲಿ 98 ರನ್ ಕಲೆಹಾಕಿದ್ದರು. ಆ ನಂತರ ಅವರ ಐಪಿಎಲ್ ವೃತ್ತಿಜೀವನ ಕೊನೆಗೊಂಡಿತು.
ಪುಣೆ ವಾರಿಯರ್ಸ್ ತಂಡದ ಮತ್ತೊಬ್ಬ ಆಟಗಾರ ಕ್ಯಾಲಮ್ ಫರ್ಗುಸನ್ ಕೂಡ ಐಪಿಎಲ್ನಲ್ಲಿ ಒಂಬತ್ತು ಪಂದ್ಯಗಳನ್ನು ಆಡಿದ್ದು, ಸಿಕ್ಸರ್ ಖಾತೆ ತೆರೆದಿಲ್ಲ. ಈ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಐಪಿಎಲ್ನಲ್ಲಿ 98 ರನ್ ಬಾರಿಸಿದ್ದಾರೆ.
ಆಸ್ಟ್ರೇಲಿಯಾದ ಮತ್ತೊಬ್ಬ ಮಾಜಿ ಆಲ್ರೌಂಡರ್ ಲೀ ಆಂಡ್ರ್ಯೂ ಕಾರ್ಸೆಲ್ಡೈನ್ ಕೂಡ ಐಪಿಎಲ್ನಲ್ಲಿ ಸಿಕ್ಸರ್ಗಳ ಖಾತೆ ತೆರೆದಿಲ್ಲ. ರಾಜಸ್ಥಾನ್ ರಾಯಲ್ಸ್ ಪರ ಐದು ಪಂದ್ಯಗಳನ್ನಾಡಿದ್ದ ಕಾರ್ಸೆಲ್ಡೈನ್ 81 ರನ್ ಕಲೆಹಾಕಿದ್ದಾರೆ. ಆದರೆ ಅವರ ಬ್ಯಾಟ್ನಿಂದ ಒಂದೇ ಒಂದು ಸಿಕ್ಸರ್ ಸಿಡಿಯಲಿಲ್ಲ.
ಬೆಂಗಳೂರು, ಮಾರ್ಚ್ 18: ಕೋಗಿಲು ನಿರಾಶ್ರಿತರಿಗೆ ಕೊನೆಗೂ ನಿವೇಶನ ಭಾಗ್ಯ ದೊರೆತಿದೆ. ಮೂರ್ನಾಲ್ಕು ತಿಂಗಳ ಬಳಿಕ 30 ಅರ್ಹ ನಿವಾಸಿಗಳಿಗೆ ಸಚಿವರಾದ ಕೃಷ್ಣಬೈರೇಗೌಡ ಮತ್ತು ಜಮೀರ್ ಅಹ್ಮದ್ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಆ ಮೂಲಕ ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ ಮತ್ತು ರಂಜಾನ್ ಹಬಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ರಾಜೀವ್ ಗಾಂಧಿ ವಸತಿ ನಿಗಮದ ಸಮುಚ್ಚಯದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಹಕ್ಕುಪತ್ರ ಪಡೆದವರಲ್ಲಿ ಸಾಮಾನ್ಯ ವರ್ಗದ 10 ಕುಟುಂಬಗಳಿಗೆ ಆದ್ಯತೆ ನೀಡಲಾಗಿದೆ. ಪರಿಶಿಷ್ಟ ಜಾತಿಯ 7 ಕುಟುಂಬ, ಪರಿಶಿಷ್ಟ ಪಂಗಡದ 2 ಕುಟುಂಬ, ಅಲ್ಪಸಂಖ್ಯಾತ ಸಮುದಾಯದ 10 ಕುಟುಂಬಗಳು ಸೇರಿದಂತೆ ಒಟ್ಟು 30 ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸಲಾಗಿದೆ.
‘ಲವ್ ಸೀಸನ್ಸ್’ (Love Seasons) ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ರಂಗಭೂಮಿ ಹಿನ್ನೆಲೆಯ ಕೃತ್ವಿಕ್ ನಿರ್ದೇಶನದಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಹೊಸ ಕಲಾವಿದರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಮಂಡ್ಯ ರಮೇಶ್ ಅವರ ‘ನಟನಾ’ ಸಂಸ್ಥೆಯಲ್ಲಿ ಅಭಿನಯದ ಪಾಠ ಕಲಿತಿರುವ ಮುಕುಂದ ರಾಮಸ್ವಾಮಿ ಹೀರೋ ಆಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ, ಶ್ವೇತಾ ಕೊಗ್ಲೂರ್ ಅವರು ನಾಯಕಿಯರಾಗಿ ಅಭಿನಯಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ, ಜಯತೀರ್ಥ, ಸಂಗೀತಾ, ಚೇತನ್ ದುರ್ಗ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ‘ಎನ್.ಆರ್. ಸ್ಟುಡಿಯೋಸ್’ ಬ್ಯಾನರ್ ಮೂಲಕ ಎನ್.ಆರ್. ಮಂಜುನಾಥ (ನೀಲೇರಿ) ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವೀರ್ ಸಮರ್ಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಕೆ.ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ. ಅವಿನಾಶ ಶಾಸ್ತ್ರಿ ಅವರ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನ ಈ ಚಿತ್ರಕ್ಕಿದೆ.
ನವದೆಹಲಿ, ಮಾರ್ಚ್ 18: ಉತ್ತರ ಕೊರಿಯಾದ (North Korea Elections) ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ (Kim Jong-Un) ಅಚ್ಚರಿಯೇನಲ್ಲದ ರೀತಿಯಲ್ಲಿ ಚುನಾವಣೆಯಲ್ಲಿ ಮತ್ತೊಂದು ಬಾರಿ ಭರ್ಜರಿ ಜಯ ಸಾಧಿಸಿದ್ದಾರೆ. ಅವರ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾ ಮತ್ತು ಅದರ ಮಿತ್ರಪಕ್ಷಗಳು ಈ ಬಾರಿಯ ಸಂಸತ್ ಚುನಾವಣೆಯಲ್ಲಿ ಶೇ. 99.97ರಷ್ಟು ಮತಗಳನ್ನು ಪಡೆದಿವೆ. 15ನೇ ಸುಪ್ರೀಂ ಪೀಪಲ್ಸ್ ಅಸೆಂಬ್ಲಿಯ ಸದಸ್ಯರನ್ನು ಆಯ್ಕೆ ಮಾಡಲು ಮಾರ್ಚ್ 15ರಂದು ಮತದಾನ ನಡೆಯಿತು.
ಪೀಪಲ್ಸ್ ಕೊರಿಯಾದ ವರದಿಯ ಪ್ರಕಾರ, ಉತ್ತರ ಕೊರಿಯಾದಲ್ಲಿ ಮತದಾನ ಕಡ್ಡಾಯವಾಗಿದೆ. ಈ ಹಿಂದೆ, ವಲಸಿಗ ನಾಗರಿಕರು ಮತದಾನ ಮಾಡಲು ಅರ್ಹರಾಗಿರಲಿಲ್ಲ. 2021ರಲ್ಲಿ ಚೀನಾ ಮತ್ತು ರಷ್ಯಾದಲ್ಲಿ ವಾಸಿಸುವ ಉತ್ತರ ಕೊರಿಯಾದ ನಾಗರಿಕರಿಗೆ ಮತದಾನದ ಹಕ್ಕನ್ನು ನೀಡಲಾಗಿತ್ತು. ಉತ್ತರ ಕೊರಿಯಾದ ಚುನಾವಣಾ ಸಮಿತಿಯು ಈ ಚುನಾವಣೆಯನ್ನು ನಿರ್ವಹಿಸುತ್ತದೆ.
ಉತ್ತರ ಕೊರಿಯಾದಲ್ಲಿ 17 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಮತ ಚಲಾಯಿಸಲು ಅರ್ಹರು. ಉತ್ತರ ಕೊರಿಯಾದಲ್ಲಿ ಮತ ಚಲಾಯಿಸದಿರುವುದು ದೇಶದ್ರೋಹಕ್ಕೆ ಸಮಾನ. ಉತ್ತರ ಕೊರಿಯಾದಲ್ಲಿ ಮತದಾನವನ್ನು ಕಾಗದದ ಮತಪತ್ರಗಳನ್ನು ಬಳಸಿ ನಡೆಸಲಾಗುತ್ತದೆ. ಅಲ್ಲಿ ಅಭ್ಯರ್ಥಿಗಳನ್ನು ಅವರ ಹೆಸರಿನ ಮುಂದೆ ಗುರುತಿಸಬೇಕು. ಮತದಾರರು ಅಭ್ಯರ್ಥಿಯ ವಿರುದ್ಧ ಮತ ಚಲಾಯಿಸಲು ಬಯಸಿದರೆ ಅವರು ಅದನ್ನು ಸಾರ್ವಜನಿಕವಾಗಿ ಮಾಡಬೇಕು.
ಉತ್ತರ ಕೊರಿಯಾದಲ್ಲಿ, ಪ್ರತಿ ಸ್ಥಾನದಲ್ಲಿ ಒಬ್ಬ ಅಭ್ಯರ್ಥಿ ಮಾತ್ರ ಸ್ಪರ್ಧಿಸುತ್ತಾರೆ. ಮತದಾರರು ಆ ಅಭ್ಯರ್ಥಿಯ ಪರವಾಗಿ ಅಥವಾ ವಿರುದ್ಧವಾಗಿ ಮತ ಚಲಾಯಿಸಬಹುದು. ಯಾರಾದರೂ ವಿರುದ್ಧವಾಗಿ ಮತ ಚಲಾಯಿಸಲು ಬಯಸಿದರೆ ಅವರು ಆ ಅಭ್ಯರ್ಥಿಯನ್ನು ಸಾರ್ವಜನಿಕವಾಗಿ ವಿರೋಧಿಸಬೇಕು.
JUST IN: Kim Jong Un wins North Korea’s parliamentary election with 99.93% of the vote. pic.twitter.com/6T5KfznUFD
1957ರ ನಂತರ ಉತ್ತರ ಕೊರಿಯಾದ ರಾಜ್ಯ ಮಾಧ್ಯಮವು ಸುಪ್ರೀಂ ಪೀಪಲ್ಸ್ ಅಸೆಂಬ್ಲಿ ಚುನಾವಣೆಯಲ್ಲಿ ಯಾವುದೇ ಮಟ್ಟದ ವಿರೋಧವನ್ನು ಒಪ್ಪಿಕೊಂಡಿರುವುದು ಇದೇ ಮೊದಲು. ಕಿಮ್- ಜಾಂಗ್ ಅವರಿಗೆ ಮತ ಹಾಕದವರ (ಶೇ. 0.07) ಸಂಖ್ಯೆ ಚಿಕ್ಕದಾಗಿದ್ದರೂ ಅವರು ಕಿಮ್ ಜಾಂಗ್ ಅವರ ಕೆಂಗಣ್ಣಿಗೆ ಗುರಿಯಾಗುವುದರಲ್ಲಿ ಅನುಮಾನವಿಲ್ಲ. ಈ ಬಗ್ಗೆ ಟ್ರೋಲ್ ಮಾಡುತ್ತಿರುವ ಜನರು “ಆ 0.07% ಮತದಾರರಿಗೆ ಸಂತಾಪಗಳು” ಎಂದು ಒಬ್ಬರು ಬಳಕೆದಾರರು ಬರೆದಿದ್ದಾರೆ. ಇನ್ನೊಬ್ಬರು, “ಆ 0.07% ಜನರು ಈಗ ಉತ್ತರ ಕೊರಿಯಾದ ಮೋಸ್ಟ್ ವಾಂಟೆಡ್ ಆಗಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.
JUST IN: Kim Jong Un wins North Korea’s parliamentary election with 99.93% of the vote. pic.twitter.com/6T5KfznUFD