Headlines

ಸರ್ಕಾರದ ಮನೆಗಳ ಕರ್ಮಕಾಂಡ ಬಯಲು: ಭಯದಲ್ಲೇ ಬದುಕುತ್ತಿವೆ ನೂರಾರು ಕುಟುಂಬಗಳು – Kannada News | KHB Kengeri Flats: Bangaluru Residents Suffer from Poor Quality Housing

ಬೆಂಗಳೂರು, ಜನವರಿ 05: ಸದ್ಯ ರಾಜಧಾನಿಯಲ್ಲಿ ಕೋಗಿಲು (Kogilu Layout Row) ನಿವಾಸಿಗಳ ವಸತಿ ಬಗ್ಗೆ ದೊಡ್ಡ ಚರ್ಚೆ ಕೇಳಿ ಬರ್ತಿದೆ. ಕಡಿಮೆ ದುಡ್ಡನಲ್ಲಿ ಸರ್ಕಾರ ಕೊಗಿಲು ನಿವಾಸಿಗಳಿಗೆ ಮನೆ ನೀಡುವುದಕ್ಕೆ ಮುಂದಾಗಿದೆ. ಆದರೆ ಈ ನಡುವೆ ಇದೀಗ ಲಕ್ಷಾಂತರ ರೂ. ಖರ್ಚು ‌ಮಾಡಿ‌ ಮನೆ ಪಡೆದಿರುವ ಕರ್ನಾಟಕ ಹೌಸಿಂಗ್ ಬೋರ್ಡ್ (KHB) ನಿವಾಸಿಗಳು ನಮ್ಮ ಗೋಳು ಕೇಳಿ ಎನ್ನುತ್ತಾರೆ. ಸದ್ಯ ನೂರಾರು ಕುಟುಂಬಗಳು ಭಯದಲ್ಲೇ ಬದುಕುವಂತಾಗಿದೆ. ಕೋಗಿಲು ಬಡಾವಣೆ ಅನಧಿಕೃತ ಮನೆಗಳ ತೆರವು ವಿಚಾರದಲ್ಲಿ ರಾಜಕೀಯ…

Read More

‘ಗಿಲ್ಲಿ ಮೇಲಿನ ಅಭಿಪ್ರಾಯ ಬದಲಾಗಿದೆ’; ಅಶ್ವಿನಿ ಗೌಡ ಪ್ರೀತಿಯ ಮಾತು – Kannada News | Gilli Ashwini Gowda Fight: Bigg Boss Journey From Conflicts to Understanding and Forgiveness

ಗಿಲ್ಲಿ ನಟ (Gilli Nata) ಹಾಗೂ ಅಶ್ವಿನಿ ಗೌಡ ಮಧ್ಯೆ ಆದ ಕಿತ್ತಾಟಗಳು ಒಂದೆರಡಲ್ಲ. ಇಬ್ಬರೂ ಸಾಕಷ್ಟು ಬಾರಿ ಕಿತ್ತಾಡಿಕೊಂಡಿದ್ದು ಇದೆ. ಇವರ ಮಾತುಗಳು ಸಾಕಷ್ಟು ಬಾರಿ ಮಿತಿಮೀರಿದ್ದವು. ಈ ಬಗ್ಗೆ ಇಬ್ಬರಿಗೂ ಬೇಸರ ಇತ್ತು. ಇದನ್ನು ಓಪನ್ ಆಗಿ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಕೊಟ್ಟ ಚಟುವಟಿಕೆ ವೇಳೆ ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ. ಈ ವೇಳೆ ಕ್ಷಮೆ ಕೂಡ ಕೇಳಿದ್ದಾರೆ. ಈ ಪ್ರೀತಿಯ ಮಾತುಗಳು ವೀಕ್ಷಕರಿಗೆ ಇಷ್ಟ ಆಗಿದೆ. ಬಿಗ್ ಬಾಸ್ ಚಟುವಟಿಕೆ ಒಂದನ್ನು ನೀಡಿದ್ದರು….

Read More

Vastu Tips: ಗಂಡ- ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಯಾಕೆ ಗೊತ್ತಾ? – Kannada News | Vastu Eating Rules: Avoid Shared Plates and Bed Eating for Home Harmony and Prosperity

ವಾಸ್ತು ಶಾಸ್ತ್ರದ ಪ್ರಕಾರ, ಆಹಾರವು ಕೇವಲ ದೇಹವನ್ನು ಪೋಷಿಸುವುದಷ್ಟೇ ಅಲ್ಲ, ಅದು ನಮ್ಮ ಜೀವನಶಕ್ತಿಯ ಮೂಲವೂ ಹೌದು. ನಾವು ತಿನ್ನುವ ಪ್ರತಿಯೊಂದು ಆಹಾರವೂ ನಮ್ಮ ಶಕ್ತಿಯನ್ನು, ಮನಸ್ಸಿನ ಸ್ಥಿತಿಯನ್ನು ಮತ್ತು ಮನೆಯ ವಾತಾವರಣವನ್ನು ಪ್ರಭಾವಿಸುತ್ತದೆ. ಆದರೆ ಅನೇಕರು ಆಹಾರ ಸೇವಿಸುವಾಗ ಕೆಲವು ನಿಯಮಗಳನ್ನು ಪಾಲಿಸುವುದಿಲ್ಲ. ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಉಂಟಾಗುವ ಸಾಧ್ಯತೆ ಇರುತ್ತದೆ. ಈ ನಕಾರಾತ್ಮಕ ಶಕ್ತಿಯ ಪರಿಣಾಮ ವ್ಯಕ್ತಿಗೆ ಮಾತ್ರವಲ್ಲ, ಇಡೀ ಕುಟುಂಬದ ಮೇಲೆ ಬೀಳುತ್ತದೆ ಎಂದು ವಾಸ್ತು ಶಾಸ್ತ್ರ ತಿಳಿಸುತ್ತದೆ. ವಾಸ್ತು ಶಾಸ್ತ್ರದ…

Read More

ಸಂಪೂರ್ಣವಾಗಿ ಭಾರತದಲ್ಲೇ ಶೂಟ್ ಆಯ್ತು ರಷ್ಯಾ ಸಿನಿಮಾ; ಗಮನ ಸೆಳೆದೆ ಟ್ರೇಲರ್

ಕನ್ನಡ, ಹಿಂದಿ ಸೇರಿದಂತೆ ಭಾರತದ ಬಹುತೇಕ ಚಿತ್ರರಂಗದವರು ವಿದೇಶದಲ್ಲಿ ಶೂಟ್ ಮಾಡುತ್ತಾರೆ. ಅದರಲ್ಲೂ ಬಾಲಿವುಡ್​​ನವರು ವಿದೇಶಿ ಲೊಕೇಶನ್​​ಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೆಚ್ಚು. ಈಗ ಅಚ್ಚರಿ ಎಂಬಂತೆ ರಷ್ಯಾದ ಚಿತ್ರವೊಂದು ಭಾರತದ ಬೀದಿಗಳಲ್ಲಿ ಶೂಟ್ ಆಗಿದೆ. ಏಪ್ರಿಲ್ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಸಂಪೂರ್ಣವಾಗಿ ಭಾರತದ ಸಿನಿಮಾಗಳಿಂದ ಪ್ರೇರಿತವಾಗಿದೆ. ಭಾರತ ಹಾಗೂ ರಷ್ಯಾ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ‘ಪರ್ಸಿಮನ್ ಆಫ್ ಲವ್’ ಎಂಬುದು ಚಿತ್ರದ ಹೆಸರು. ಪರ್ಸಿಮನ್ ಎಂದರೆ ಆರೆಂಜ್ ರೀತಿಯಲ್ಲೇ ಇರುವ ಒಂದುಹಣ್ಣು….

Read More

ಬಾಗಲಕೋಟೆ ಉಪಚುನಾವಣೆ: ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!

ಬಾಗಲಕೋಟೆ, ಏಪ್ರಿಲ್ 9: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಗೋವಾದಲ್ಲಿ ನೆಲೆಸಿದ್ದ ಕರ್ನಾಟಕದ ಮತದಾರರು ವಿಶೇಷ ಆಸಕ್ತಿ ತೋರಿದ್ದಾರೆ. ಕ್ಷೇತ್ರದ ವ್ಯಾಪ್ತಿಯ ಮಾದಾಪುರ ಗ್ರಾಮದ ಸುಮಾರು 70 ರಿಂದ 80 ಮತದಾರರು ಎರಡು ಖಾಸಗಿ ಬಸ್‌ಗಳ ಮೂಲಕ ಗೋವಾದಿಂದ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಉದ್ಯೋಗಕ್ಕಾಗಿ ಗೋವಾಕ್ಕೆ ವಲಸೆ ಹೋಗಿದ್ದ ಇವರು, ಮಾದಾಪುರ ಗ್ರಾಮದ ಮತಗಟ್ಟೆಗಳಲ್ಲಿ ಉತ್ಸಾಹದಿಂದ ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬಳ್ಳಾರಿ ಗಲಭೆ: ನಾಳೆ ನಡೆಯಲಿರುವ ಬಿಜೆಪಿ ಬೃಹತ್​ ಪ್ರತಿಭಟನೆ ರ‍್ಯಾಲಿ ಬಗ್ಗೆ ಎಸ್​​ಪಿ ಹೇಳಿದ್ದಿಷ್ಟು – Kannada News | Ballari SP Details Strict Security for BJP Protest Amidst Banner and Firing Tensions

ಬಳ್ಳಾರಿ, ಜನವರಿ 16: ಬ್ಯಾನರ್​​​ ವಿಚಾರಕ್ಕೆ ಗಲಭೆ ಮತ್ತು ಫೈರಿಂಗ್ ಪ್ರಕರಣ ಘಟನೆ ಖಂಡಿಸಿ ಜ 17ರಂದು ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಎಸ್​​ಪಿ ಸುಮನ್ ಡಿ.ಪನ್ನೇಕರ್​ ಪ್ರತಿಕ್ರಿಯಿಸಿದ್ದು, ಸಮಾವೇಶದಲ್ಲಿ 15-20 ಸಾವಿರ ಜನ ಭಾಗಿಯಾಗುವ ಸಾಧ್ಯತೆ ಇದೆ. ಭದ್ರತೆಗಾಗಿ ಬೇರೆ ಜಿಲ್ಲೆಗಳಿಂದ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇಬ್ಬರು ಎಸ್​ಪಿ, 7 ಹೆಚ್ಚವರಿ ಎಸ್​​​ಪಿ, 15 ಡಿವೈಎಸ್​ಪಿ,…

Read More

ಚೈತ್ರಾ ಡಿಬಾರ್ ಆಗಿದ್ದಳು: ಮಗಳ ಕಿರುಕುಳಕ್ಕೆ ನೊಂದು ಎಲ್ಲ ವಿಷಯ ಹೇಳಿದ ಬಾಲಕೃಷ್ಣ – Kannada News | Chaithra Kundapura was debarred in 1st PUC says her Father Balakrishna Naik

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಸ್ಪರ್ಧಿ ಚೈತ್ರಾ ಕುಂದಾಪುರ ಅವರ ವಿರುದ್ಧ ನ್ಯಾಯಾಲಯ ಆದೇಶ ನೀಡಿದೆ. ತಂದೆ ಬಾಲಕೃಷ್ಣ ನಾಯ್ಕ್ ಅವರು ಚೈತ್ರಾ ಮೇಲೆ ಕೇಸ್ ಹಾಕಿದ್ದರು. ಕೋರ್ಟ್ ಆದೇಶದ ಬಳಿಕ ಬಾಲಕೃಷ್ಣ ನಾಯ್ಕ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಚೈತ್ರಾ (Chaithra Kundapura) ಅವರ ಇತಿಹಾಸವನ್ನು ಅವರು ತೆರೆದಿಟ್ಟಿದ್ದಾರೆ. ‘ನನಗೆ ನ್ಯಾಯಾಲಯದ ರಕ್ಷಣೆ ಸಿಕ್ಕಿದ್ದು ತುಂಬ ಅನುಕೂಲ ಆಗಿದೆ. ಇನ್ಮುಂದೆ ನನಗೆ ಮಕ್ಕಳಿಂದ, ಹೆಂಡತಿಯಿಂದ ತೊಂದರೆ ಆಗಬಾರದು. ವಿದ್ಯಾಭ್ಯಾಸ ಮಾಡುವಾಗಲೇ ಚೈತ್ರಾ…

Read More

ಧಾರವಾಡ: ಇಲ್ಲಿ ಇಡೀ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು! ಅಪರಾಧ ಕೃತ್ಯವೂ ಇಳಿಕೆ – Kannada News | Dharwad Mummigatti Village Under Full CCTV Surveillance: Crime Rate Drops, Model Gram Panchayat Emerges

ಇಡೀ ಮುಮ್ಮಿಗಟ್ಟಿ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು!Image Credit source: tv9 ಧಾರವಾಡ, ಫೆಬ್ರವರಿ 3: ಧಾರವಾಡ (Dharawad) ತಾಲೂಕಿನ ಮುಮ್ಮಿಗಟ್ಟಿ ಗ್ರಾಮ ಸುಮಾರು 12 ಸಾವಿರ ಜನಸಂಖ್ಯೆ ಹೊಂದಿದ್ದು, ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡೇ ಇದೆ. ಈ ಗ್ರಾಮದ ಪಕ್ಕ ಹೋಗುವ ವಾಹನಗಳ ಮೂಲಕ ಹೊರಗಿನ ಜನರು ಅಕ್ರಮಗಳನ್ನು ಎಸಗುವುದು ಸಾಮಾನ್ಯದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್​ನಲ್ಲಿ ಮುಖ್ಯವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯವಾಗಿ ಗ್ರಾಮ ಪಂಚಾಯತ್​​ಗಳ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ಮಾಡಬೇಕೆಂದರೂ ಅನುದಾನದ…

Read More

‘ಗೃಹಸಚಿವರೇ ನೆಟ್ಟಗಿಲ್ಲ’ ಎಂದು ಎಕ್ಸ್​​ ಪೋಸ್ಟ್​​: ದಾಖಲಾಯ್ತು ಸುಮೋಟೋ ಕೇಸ್​

ಬೆಂಗಳೂರು, ಮಾರ್ಚ್​​ 31: ಗೃಹಸಚಿವರೇ ನೆಟ್ಟಗಿಲ್ಲ, ಅವರ ಕಾಲೇಜಿನ ಪ್ರೊಫೆಸರ್ ನೆಟ್ಟಗಿರ್ತಾನಾ? ಎಂದು ಎಕ್ಸ್​​​​​ ಖಾತೆ ಮೂಲಕ ಗೃಹ ಸಚಿವ ಡಾ. ಜಿ. ಪರಮೆಶ್ವರ್​​ ಕುರಿತು ಆಕ್ಷೇಪಾರ್ಹ ಪೋಸ್ಟ್​​​ ಸಂಬಂಧ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಹಿಂದೂ ಜಾಗೃತನಾಗು ಎಂಬ ಎಕ್ಸ್ ಖಾತೆಯಲ್ಲಿ ಈ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದ್ದು, ಉದ್ದೇಶಪೂರ್ವಕ ದ್ವೇಷ ಭಾವನೆ ಮೂಡಿಸುವ ಆರೋಪ ಸಂಬಂಧ ಐಟಿ ಆ್ಯಕ್ಟ್ ಹಾಗೂ BNS U/S 299ರಡಿ ಪ್ರಕರಣ ದಾಖಲಾಗಿದೆ. ಹಿಂಮದೂ ಮತ್ತು ಮುಸ್ಲಿಂ…

Read More

ಅಮಿತಾಬ್ ಬಚ್ಚನ್ ಹೂಡಿಕೆ ಮಾಡುವ ವಿಧಾನ ತಿಳಿಸಿದ ಅಭಿಷೇಕ್ ಬಚ್ಚನ್ – Kannada News | Abhishek Bachchan shares his father Amitabh Bachchan’s investment lessons

ಅಮಿತಾಬ್ ಬಚ್ಚನ್ (Amitabh Bachchan) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಭಾರತೀಯ ಚಿತ್ರರಂಗದ ಲಿವಿಂಗ್ ಲಿಜೆಂಡ್ ಎನಿಸಿಕೊಂಡಿರುವ ಅಮಿತಾಬ್ ಬಚ್ಚನ್ ಅವರು ಅತ್ಯದ್ಭುತ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ಅಮಿತಾಬ್ ಬಚ್ಚನ್ ಅವರು ಹಲವು ವರ್ಷಗಳಿಂದಲೂ ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮಗಳ ಮೇಲೆ ಹೂಡಿಕೆ ಮಾಡಿಕೊಂಡು ಬಂದಿರುವುದು ಮಾತ್ರವೇ ಅಲ್ಲದೆ, ತಮ್ಮ ಮಕ್ಕಳಿಗೂ ಹೂಡಿಕೆಯ ಕೆಲವು ನಿಯಮಗಳನ್ನು ಹೇಳಿಕೊಟ್ಟಿದ್ದಾರೆ. ಇದೀಗ ಅಮಿತಾಬ್ ಬಚ್ಚನ್ ಅವರ ಪುತ್ರ, ಖ್ಯಾತ ನಟ ಅಭಿಷೇಕ್ ಬಚ್ಚನ್ ಅವರು ತಂದೆಯ ಹೂಡಿಕೆ…

Read More