Headlines

ತಿಂದ ತಕ್ಷಣ ನಿದ್ರೆ ಬರುತ್ತಿದೆಯೇ? ಕಾರ್ಬೋಹೈಡ್ರೇಟ್‌ನಿಂದ ಹಿಡಿದು ನಿದ್ರೆಯ ಕೊರತೆಯವರೆಗೆ ಕಾರಣಗಳೇನು? – Kannada News | Feeling Sleepy After Meals? These Foods and Habits Could Be the Reason

ಊಟ ಮಾಡಿದ ನಂತರ ಕೆಲವರಿಗೆ ಕಣ್ಣುಗಳು ಭಾರವಾಗುವುದು, ದೇಹದಲ್ಲಿ ಸುಸ್ತು ಕಾಣಿಸಿಕೊಳ್ಳುವುದು ಅಥವಾ ತಕ್ಷಣ ಮಲಗಬೇಕು ಎನ್ನಿಸುವುದು ಸಾಮಾನ್ಯ. ವಿಶೇಷವಾಗಿ ಮಧ್ಯಾಹ್ನದ ಊಟದ ನಂತರ ಅಥವಾ ಹೊಟ್ಟೆ ತುಂಬಾ ಆಹಾರ ಸೇವಿಸಿದಾಗ ಈ ಅನುಭವ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಊಟದ ಬಳಿಕ ನಿದ್ರೆ ಬರುವುದಕ್ಕೆ ಕೇವಲ ಹೊಟ್ಟೆ ತುಂಬಿರುವುದೇ ಕಾರಣವಲ್ಲ. ನಾವು ಸೇವಿಸುವ ಆಹಾರದ ಪ್ರಮಾಣ, ಅದರಲ್ಲಿರುವ ಪೋಷಕಾಂಶಗಳು, ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮತ್ತು ಇನ್ಸುಲಿನ್ ಬದಲಾವಣೆಗಳು ಹಾಗೂ ರಾತ್ರಿ ಸರಿಯಾಗಿ ನಿದ್ರೆ ಮಾಡದಿರುವುದೂ ಇದಕ್ಕೆ ಕಾರಣವಾಗಬಹುದು….

Read More

ಮಹೇಶ್ ಬಾಬುಗೆ ಸಂದೀಪ್ ರೆಡ್ಡಿ ವಂಗಾ ವಿಶೇಷ ಶುಭಾಶಯ: ‘ಡೆವಿಲ್’ ಮತ್ತೆ ಮುನ್ನೆಲೆಗೆ? – Kannada News | Sandeep Reddy Vanga wishes Mahesh Babu With AI video sparks Devil Movie Combo Rumours

ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಅವರ ಹುಟ್ಟುಹಬ್ಬಕ್ಕೆ ‘ಅನಿಮಲ್’ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು ವಿಶೇಷವಾಗಿ ಶುಭಾಶಯ ತಿಳಿಸಿದ್ದು, ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಸಾಮಾನ್ಯ ಪೋಸ್ಟ್‌ಗಳ ಮೂಲಕ ಶುಭಾಶಯ ಕೋರುವ ಬದಲಾಗಿ, ಲೆಜೆಂಡರಿ ನಟ ಕೃಷ್ಣ ಅವರ ಪ್ರಸಿದ್ಧ ಡೈಲಾಗ್ ಒಂದನ್ನು ಮಹೇಶ್ ಬಾಬು ಹೇಳುವಂತಹ ಎಐ ನಿರ್ಮಿತ ವಿಡಿಯೋವನ್ನು ವಂಗಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ‘ಡೆವಿಲ್’ (Devil) ಸಿನಿಮಾ ಬಗ್ಗೆ ಅಭಿಮಾನಿಗಳ…

Read More

IND vs SL: ಕಾಶ್ಮೀರದಲ್ಲಿ ತರಬೇತಿ; 17 ಕೆಜಿ ತೂಕ ಇಳಿಸಿಕೊಂಡ ಸರ್ಫರಾಜ್ ಖಾನ್

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಗಾಯದಿಂದ ಚೇತರಿಸಿಕೊಳ್ಳದ ಸಾಯಿ ಸುದರ್ಶನ್ ಬದಲಿಗೆ ಸರ್ಫರಾಜ್ ಖಾನ್ ಅವರನ್ನು ಟೀಂ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿದೆ. ಈ ಮೂಲಕ ಎರಡು ವರ್ಷಗಳ ನಂತರ ಸರ್ಫರಾಜ್ ಖಾನ್ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಆದರೆ ತಂಡಕ್ಕೆ ಮರಳಲು ಸರ್ಫರಾಜ್ ಪಟ್ಟ ಕಷ್ಟ ಅಷ್ಟಿಷ್ಟಲ್ಲ(PC-PTI). 2024 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸರ್ಫರಾಜ್ ಖಾನ್ ಅವರನ್ನು ಭಾರತ ತಂಡದಿಂದ ಕೈಬಿಡಲಾಯಿತು. ನಂತರ ಸರ್ಫರಾಜ್ ಖಾನ್ ಭಾರತ ಎ ತಂಡದೊಂದಿಗೆ…

Read More

ಭಾರತ-ಚೀನಾ ಗಡಿ ಬಳಿ ಮೇಘಸ್ಫೋಟ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ – Kannada News | Uttarakhand BRO bridge swept away after heavy flood near India China border

ನವದೆಹಲಿ, ಆಗಸ್ಟ್ 10: ಉತ್ತರಾಖಂಡದ ನೀತಿ ಕಣಿವೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ಪ್ರವಾಹದ (Flood) ಮಟ್ಟ ಏರಿಕೆಯಾಗಿದ್ದು, ಪ್ರಬಲ ನೀರಿನ ರಭಸಕ್ಕೆ ಸೇತುವೆಯೊಂದು ಕ್ಷಣಾರ್ಧದಲ್ಲಿ ಕೊಚ್ಚಿಹೋಗಿದೆ. ಇದರಿಂದಾಗಿ ಈ ಗಡಿ ಪ್ರದೇಶವು ಮುಖ್ಯ ನಗರದಿಂದ ಸಂಪೂರ್ಣವಾಗಿ ಸಂಪರ್ಕ ಕಳೆದುಕೊಂಡಿದೆ. ಚಮೋಲಿ ಜಿಲ್ಲೆಯಲ್ಲಿ ಕೆಸರು ಮಿಶ್ರಿತ ನೀರು ರಭಸವಾಗಿ ಹರಿದುಬಂದು ಲೋಹದ ಸೇತುವೆಗೆ ಅಪ್ಪಳಿಸುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ನೀರಿನ ತೀವ್ರತೆಗೆ ಸೇತುವೆಯು ಕೆಲವೇ ಸೆಕೆಂಡುಗಳಲ್ಲಿ ಬುಡಮೇಲಾಗಿ ನದಿಯ ದಂಡೆಯತ್ತ ಕೊಚ್ಚಿಕೊಂಡು ಹೋಗಿದೆ. ನದಿಯ ಪಕ್ಕದ ರಸ್ತೆಯಲ್ಲಿ…

Read More

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ; 47 ಜನ ಮಂದಿ ಸಾವು – Kannada News | 47 people killed several buildings collapsed as massive earthquake of 7.4 magnitude jolts Colombia

ಕೊಲಂಬಿಯಾ, ಆಗಸ್ಟ್ 10: ದಕ್ಷಿಣ ಅಮೆರಿಕದ ಕೊಲಂಬಿಯಾದಲ್ಲಿ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ (Earthquake) 47 ಜನರು ಮೃತಪಟ್ಟಿದ್ದಾರೆ. ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಸ್ಥಿತಿ ತೀವ್ರ ಆತಂಕಕಾರಿಯಾಗಿದೆ. ಭೂಕಂಪದ ಕೇಂದ್ರಬಿಂದು ಕೊಲಂಬಿಯಾದ ಚೊಕೊ ಪ್ರದೇಶದ ‘ಸ್ಯಾನ್ ಜೋಸ್ ಡೆಲ್ ಪಾಲ್ಮಾರ್’ ಬಳಿ ದಾಖಲಾಗಿದೆ. ಇದರ ತೀವ್ರತೆ ರಾಜಧಾನಿ ಬೊಗೋಟಾ ಹಾಗೂ ನೆರೆರಾಷ್ಟ್ರಗಳಿಗೂ ಹಬ್ಬಿದೆ. ಅಮೆರಿಕದ ಸ್ಥಳೀಯ ಸಮಯ ಬೆಳಿಗ್ಗೆ 7.34ಕ್ಕೆ ಸಂಭವಿಸಿದ ಈ ಭೂಕಂಪದ ಕೇಂದ್ರಬಿಂದು ಸ್ಯಾನ್ ಜೋಸ್ ಡೆಲ್ ಪಾಲ್ಮಾರ್‌ನಿಂದ ಪೂರ್ವಕ್ಕೆ ಸುಮಾರು 3 ಮೈಲಿ…

Read More

Happy Life Tips: ಜೀವನದಲ್ಲಿ ಸಂತೋಷವಾಗಿರಲು ಈ ಸಿಂಪಲ್‌ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | These good habits will bring happiness into your life

ಇಂದಿನ ಈ ಕಾರ್ಯನಿರತ ಜೀವನದಲ್ಲಿ ಹೆಚ್ಚಿನವರು ಒತ್ತಡಕ್ಕೊಳಗಾಗಿದ್ದಾರೆ. ಕೆಲಸ, ಕುಟುಂಬದ ಜವಾಬ್ದಾರಿಯ ಚಿಂತೆಯಿಂದಾಗಿ ಸಂತೋಷವಾಗಿರುವುದನ್ನೇ (Happy) ಮರೆತುಬಿಟ್ಟಿದ್ದಾರೆ. ಇನ್ನೂ ಅನೇಕರು ಸಂತೋಷವವನ್ನು ಕಂಡುಕೊಳ್ಳುವುದು ಸವಾಲಿನ ಕೆಲಸವೇ ಸರಿ ಎಂಬು ಭಾವಿಸುತ್ತಾರೆ. ಆದರೆ ಹ್ಯಾಪಿ ಆಗಿರೋದು ಅಷ್ಟು ಕಷ್ಟದ ಕೆಲಸವೇನಲ್ಲ, ಕೆಲವು ಸರಳ ಅಭ್ಯಾಸಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಂತೋಷವಾಗಿರಬಹುದು. ಸಂತೋಷದಾಯಕ ಜೀವನಕ್ಕೆ ಸಹಕಾರಿಯಾದ ಆ ಅಭ್ಯಾಸಗಳು ಯಾವುವು ಎಂಬ ಸಂಪೂರ್ಣ ವಿವರ ಇಲ್ಲಿದೆ. ಸಂತೋಷವಾಗಿರಲು ಏನು ಮಾಡಬೇಕು? ಸಕಾರಾತ್ಮಕ ಮನಸ್ಥಿತಿಯನ್ನು ಇಟ್ಟುಕೊಳ್ಳಿ: ಸಂತೋಷದ ಮೊದಲ ಹೆಜ್ಜೆ…

Read More

ಶಾರುಖ್ ನಟಿಸಿದ ಆ ಸಿನಿಮಾ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಸ್ಪಷ್ಟನೆ – Kannada News | Kabhi Alvida Naa Kehna 20 Years Karan Johar says film did not endorse infidelity

ಕರಣ್ ಜೋಹರ್ ನಿರ್ದೇಶನದ 2006ರ ಹಿಟ್ ಸಿನಿಮಾ ‘ಕಭಿ ಅಲ್ವಿದಾ ನಾ ಕೆಹನಾ’ (Kabhi Alvida Naa Kehna) ಬಿಡುಗಡೆಯಾಗಿ ಈಗ ಎರಡು ದಶಕಗಳನ್ನು ಪೂರೈಸಿದೆ. ಬಿಡುಗಡೆಯ ಸಮಯದಲ್ಲಿ ವಿಭಿನ್ನ ಹಾಗೂ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದ್ದ ಈ ಚಿತ್ರ, ಕಾಲಕ್ರಮೇಣ ಪ್ರೇಕ್ಷಕರ ನೆಚ್ಚಿನ ಕ್ಲಾಸಿಕ್ ಸಿನಿಮಾವಾಗಿ ಹೊರಹೊಮ್ಮಿತು. 20 ವರ್ಷ ಕಳೆದಿರುವ ಈ ಸಂದರ್ಭದಲ್ಲಿ ನಿರ್ದೇಶಕ ಕರಣ್ ಜೋಹರ್ (Karan Johar) ಅವರು ಇನ್‌ಸ್ಟಾಗ್ರಾಮ್‌ನಲ್ಲಿ ದೀರ್ಘವಾದ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಂದು ತಮಗೆ ಎದುರಾದ ವಿಚಿತ್ರ ಅನುಭವಗಳನ್ನು…

Read More

ಮಂಡ್ಯ: ಬಾಂಗ್ಲಾ ವಲಸಿಗರೆಂಬ ಶಂಕೆ; ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು – Kannada News | Mandya: Hindu Activists Intercept KSRTC Bus Over Suspected Bangladeshi Migrants

ಮಂಡ್ಯ, ಆಗಸ್ಟ್​​​ 10: ಮಂಡ್ಯದ ಬಸ್ ನಿಲ್ದಾಣದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪ್ರಯಾಣಿಸುತ್ತಿದ್ದಾರೆಂಬ ಶಂಕೆ ಮೇಲೆ ಹಿಂದೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್‌ ತಡೆದು ಪರಿಶೀಲನೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಸುಮಾರು 30 ಜನರು ಬಾಂಗ್ಲಾ ಮೂಲದವರೆಂದು ಶಂಕಿಸಿ ಕಾರ್ಯಕರ್ತರು ಅಡ್ಡಗಟ್ಟಿದ್ದರಿಂದ ಸ್ಥಳಕ್ಕೆ ಪೊಲೀಸರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ತಪಾಸಣೆ ವೇಳೆ ಇವರು ಕೊಡಗಿನ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕರು ಎಂಬುವುದು ಮೇಲ್ನೋಟಕ್ಕೆ ಕಂಡುಬಂದಿದೆ….

Read More

IND vs SL: ಸಚಿನ್ ದಾಖಲೆ ಮೇಲೆ ಗಿಲ್ ಕಣ್ಣು; ಕುಲ್ದೀಪ್, ಜಡೇಜಾಗೂ ಇದು ವಿಶೇಷ ಸರಣಿ – Kannada News | India vs SL Test: Gill’s Captaincy, Jadeja’s Wickets and Kuldeep’s Milestones Await

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ (India vs Sri Lanka ) ಹಲವು ದಾಖಲೆಗಳನ್ನು ಬರೆಯಲಿದೆ. ಇತ್ತ ಆಟಗಾರರು ಕೂಡ ವೈಯಕ್ತಿಕವಾಗಿ ವಿಶೇಷ ಮೈಲಿಗಲ್ಲುಗಳನ್ನು ದಾಟಲಿದ್ದಾರೆ. ಅಂತಹವರಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ (Shubman Gill), ರವೀಂದ್ರ ಜಡೇಜಾ ಮತ್ತು ಕುಲ್ದೀಪ್ ಯಾದವ್ ಕೂಡ ಸೇರಿದ್ದಾರೆ. ಅದರಲ್ಲೂ ನಾಯಕ ಗಿಲ್ ಈ ಸರಣಿಯಲ್ಲಿ 3 ಪ್ರಮುಖ ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಗಿಲ್ ಪ್ರಸ್ತುತ ಡಬ್ಲ್ಯೂಟಿಸಿ ಆವೃತ್ತಿಯಲ್ಲಿ ಈಗಾಗಲೇ ಐದು ಶತಕಗಳನ್ನು…

Read More

‘ಜಂತರ್ ಮಂತರ್‌ನಲ್ಲಿ ಯಾವ ಗುಂಡಿನ ದಾಳಿಯೂ ನಡೆದಿಲ್ಲ’; ರಾಹುಲ್ ಗಾಂಧಿಗೆ ಸಚಿವ ಜೆ.ಪಿ. ನಡ್ಡಾ ತಿರುಗೇಟು – Kannada News | No firing at Jantar Mantar JP Nadda counters Rahul Gandhi

ನವದೆಹಲಿ, ಆಗಸ್ಟ್ 10: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯಾವುದೇ ಗುಂಡಿನ ದಾಳಿ ಅಥವಾ ಪೆಲೆಟ್ ಗನ್ ಪ್ರಯೋಗ ನಡೆದಿಲ್ಲ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda) ಸ್ಪಷ್ಟಪಡಿಸಿದ್ದು, ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ದೇಶದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿವೇಶನದ ಆರಂಭದಲ್ಲಿ ರಾಹುಲ್ ಗಾಂಧಿ ನೀಟ್ (NEET) ಕುರಿತು ಚರ್ಚೆಗೆ ಪಟ್ಟು ಹಿಡಿದಿದ್ದರು. ಸರ್ಕಾರ ಅದಕ್ಕೆ ಒಪ್ಪಿಕೊಂಡಾಗ ರಾಮಮಂದಿರ ಟ್ರಸ್ಟ್ ವಿಷಯ ಎತ್ತಿದರು….

Read More