Headlines

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಜೀವನ ಆಧರಿಸಿ ಸಿನಿಮಾ ಘೋಷಿಸಿದ ಆರ್​ಜಿವಿ – Kannada News | Ram Gopal Varma Announces Police Company Starring Harshvardhan Rane

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮತ್ತೆ ಮುಂಬೈ ಅಂಡರ್‌ವರ್ಲ್ಡ್ ಕಥೆಯನ್ನು ತೆರೆಗೆ ತರಲು ಸಿದ್ಧರಾಗಿದ್ದಾರೆ. ‘ಡಿ ಕಂಪನಿ’ಗಿಂತಲೂ ಅತ್ಯಂತ ಅಪಾಯಕಾರಿಯಾದ ಪಡೆಯೊಂದರ ಕಥೆಯನ್ನು ಅವರು ಹೇಳಲಿದ್ದಾರೆ. ತಮ್ಮ ಹೊಸ ಸಿನಿಮಾಗೆ ‘ಪೋಲಿಸ್ ಕಂಪನಿ’ ಎಂದು ಹೆಸರಿಟ್ಟಿದ್ದಾರೆ. ಪ್ರಸಿದ್ಧ ನಟ ಹರ್ಷವರ್ಧನ್ ರಾಣೆ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಆರ್​​ಜಿವಿ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದಾರೆ. ಅಂಡರ್‌ವರ್ಲ್ಡ್ ಮತ್ತು ಪೋಲಿಸ್ ಕಂಪನಿ ಸಿನಿಮಾ ಶೀರ್ಷಿಕೆಯ ಹಿನ್ನೆಲೆಯನ್ನು ವರ್ಮಾ ಸ್ಪಷ್ಟವಾಗಿ ವಿವರಿಸಿದ್ದಾರೆ….

Read More

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: ಪಿಂಕ್ ಹಾಗೂ ಬ್ಲೂ ಲೈನ್‌ನ ಸಿಬಿಟಿಸಿ ವ್ಯವಸ್ಥೆಗೆ ರೈಲ್ವೆ ಮಂಡಳಿ ಗ್ರೀನ್ ಸಿಗ್ನಲ್! – Kannada News | Namma Metro Good News: Railway Board Approves CBTC Signaling for Bengaluru Pink and Blue Lines

ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ ಸಂಚಾರ ದಟ್ಟಣೆಗೆ ಬಹುದೊಡ್ಡ ಬ್ರೇಕ್ ಹಾಕಲಿರುವ ‘ನಮ್ಮ ಮೆಟ್ರೋ’ದ (Namma Metr0) ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಗಳಿಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಮಂಡಳಿಯಿಂದ ಅತ್ಯಂತ ಪ್ರಮುಖ ಹಾಗೂ ಮಹತ್ವದ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಇನ್ಮುಂದೆ ಈ ಮಾರ್ಗಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಮೆಟ್ರೋ ರೈಲುಗಳು ಸಂಚರಿಸಲಿದ್ದು, ಇದಕ್ಕೆ ಬೇಕಾದ ರೈಲು ನಿಯಂತ್ರಣ ವ್ಯವಸ್ಥೆಗೆ ಹಸಿರು ನಿಶಾನೆ ಸಿಕ್ಕಿದೆ. ಮೆಟ್ರೋದ ಪಿಂಕ್ ಹಾಗೂ ಬ್ಲೂ ಲೈನ್ ಮಾರ್ಗಗಳ ಕಮ್ಯುನಿಕೇಷನ್‌ ಬೇಸ್ಡ್‌…

Read More

CSKಗೆ ಹೊಸ ವಿದೇಶಿ ಹೆಡ್ ಕೋಚ್: ರೇಸ್​​ನಲ್ಲಿ ನಾಲ್ವರು! – Kannada News | CSK Hunt for New Overseas Coach Ahead of IPL 2027

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಮುಂಬರುವ ಐಪಿಎಲ್​ಗೂ ಮುನ್ನ ಮಹತ್ವದ ಬದಲಾವಣೆಗೆ ಸಜ್ಜಾಗಿದೆ. ಬರೋಬ್ಬರಿ 18 ವರ್ಷಗಳ ಕಾಲ ಸಿಎಸ್‌ಕೆ ತಂಡಕ್ಕೆ ಮುಖ್ಯ ತರಬೇತುದಾರರಾಗಿ ಮಾರ್ಗದರ್ಶನ ನೀಡಿ, ದಾಖಲೆಯ 5 ಐಪಿಎಲ್ ಟ್ರೋಫಿಗಳನ್ನು ತಂದುಕೊಟ್ಟಿದ್ದ ದಿಗ್ಗಜ ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ಇತ್ತೀಚೆಗಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ ಅವರು ಇಂಗ್ಲೆಂಡ್ ಪುರುಷರ ಟೆಸ್ಟ್ ತಂಡದ ಮುಖ್ಯ ತರಬೇತುದಾರರಾಗಿ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ….

Read More

3 ದಿನಗಳಲ್ಲಿ ಬೆಂಗಳೂರಿನ 60 ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ: 1 ವರ್ಷಕ್ಕೂ ಹಳೆಯ ಮಾಂಸ ಪತ್ತೆ! – Kannada News | Bengaluru Star Hotel Raids: 60 Hotels Inspected in 3 Days, Over One Year Old Meat Found

ಬೆಂಗಳೂರಿನ ಸ್ಟಾರ್ ಹೋಟೆಲ್​ಗಳ ಮೇಲೆ ದಾಳಿ ಸಂದರ್ಭದ ಚಿತ್ರImage Credit source: tv9 ಬೆಂಗಳೂರು, ಆಗಸ್ಟ್ 10: ಬೆಂಗಳೂರಿನ (Bengaluru) ಸ್ಟಾರ್ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದ್ದು, ಮೂರು ದಿನಗಳಲ್ಲಿ ಬರೋಬ್ಬರಿ 60 ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ ನಡೆಸಲಾಗಿದೆ. ತಪಾಸಣೆ ವೇಳೆ ಕೊಳೆತ ಮಾಂಸ, ಅವಧಿ ಮೀರಿದ ಆಹಾರ ಪದಾರ್ಥಗಳು, ಕೊಳೆತ ತರಕಾರಿಗಳು, ಬಳಸಿದ ಅಡುಗೆ ಎಣ್ಣೆ ಸೇರಿದಂತೆ ಹಲವು ಆಹಾರ ಸುರಕ್ಷತಾ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ. ಅಚ್ಚರಿ ಎಂದರೆ, ಒಂದು…

Read More

ಗಾಯಗೊಂಡರೂ ಶೂಟಿಂಗ್‌ಗೆ ಮರಳಲು ರಶ್ಮಿಕಾ ಮಂದಣ್ಣ ಉತ್ಸುಕ: ‘ರಣಬಾಲಿ’ ಚಿತ್ರತಂಡಕ್ಕೆ ಆಸರೆ – Kannada News | Rashmika Mandanna Ready to Resume Ranabaali Shoot After Injury

ಚಿತ್ರೀಕರಣದ ವೇಳೆ ಗಂಭೀರವಾಗಿ ಗಾಯಗೊಂಡಿದ್ದರೂ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ವೃತ್ತಿಪರತೆಗೆ ಸಾಟಿಯಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ತೀವ್ರ ಗಾಯದ ನಡುವೆಯೂ ತಮ್ಮ ಬಹುನಿರೀಕ್ಷಿತ ‘ರಣಬಾಲಿ’ ಸಿನಿಮಾದ ಶೂಟಿಂಗ್ ಸೆಟ್‌ಗೆ ಬೇಗನೇ ಮರಳಿ, ಬಾಕಿ ಇರುವ ದೃಶ್ಯಗಳ ಚಿತ್ರೀಕರಣವನ್ನು ಪೂರ್ಣಗೊಳಿಸಲು ಅವರು ತೀವ್ರ ಆಸಕ್ತಿ ತೋರಿದ್ದಾರೆ. ಈ ಮೂಲಕ ಅಂದುಕೊಂಡ ದಿನಾಂಕದಂದು ಸಿನಿಮಾ ರಿಲೀಸ್​​ ಮಾಡಲು ಮುಂದಾಗಿದ್ದಾರೆ. ರಶ್ಮಿಕಾಗೆ ಗಾಯ ಇತ್ತೀಚೆಗೆ ಅವರು ಚಿತ್ರ ‘ಮೈಸಾ’ ಶೂಟಿಂಗ್‌ನಲ್ಲಿ ನಿರತರಾಗಿದ್ದಾಗ ರಶ್ಮಿಕಾ ತೀವ್ರ ಸ್ವರೂಪದ…

Read More

Bengaluru Air Quality: ಬೆಂಗಳೂರಿನ ಪ್ರಮುಖ ನಗರಗಳಲ್ಲಿ ಸುಧಾರಿಸಿದ ಏರ್ ಕ್ವಾಲಿಟಿ – Kannada News | Bengaluru AQI Today: Karnataka Air Quality Report for August 11

ಬೆಂಗಳೂರಿನ ಪ್ರಮುಖ ನಗರಗಳಲ್ಲಿ ಸುಧಾರಿಸಿದ ಏರ್ ಕ್ವಾಲಿಟಿ ಬೆಂಗಳೂರು, ಆಗಸ್ಟ್ 11: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟವು (AQI) ಸಾಧಾರಣ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಗಾಳಿಯ ಮುನ್ಸೂಚನೆಯಿಂದಾಗಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ನಿರಾಳವಾಗಿ ಉಸಿರಾಡುವಂತಾಗಿದೆ. ಬೆಂಗಳೂರು ನಗರದ ಸರಾಸರಿ AQI ಪ್ರಮಾಣ 55 ರಿಂದ 67 ರ ಆಸುಪಾಸಿನಲ್ಲಿದ್ದು, ಇದು ಉತ್ತಮ ವಿಭಾಗಕ್ಕೆ ಒಳಪಡುತ್ತದೆ. ನಗರದ ವಿವಿಧ ಭಾಗಗಳ ವಿವರ ಇಲ್ಲಿದೆ ಪೀಣ್ಯ: ಕೈಗಾರಿಕಾ ಪ್ರದೇಶವಾಗಿದ್ದರೂ…

Read More

Karnataka Weather Forecast: ನೈಋತ್ಯ ಮುಂಗಾರು ತುಸು ದುರ್ಬಲ, ಕರಾವಳಿ-ಒಳನಾಡಿನ ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ – Kannada News | Karnataka Weather Forecast: Rain Likely Across Coastal and Interior Districts on August 11 12

ಬೆಂಗಳೂರಿನಲ್ಲಿ ಸೋಮವಾರ ಸಂಜೆ ಸುರಿದ ಮಳೆImage Credit source: tv9 ಬೆಂಗಳೂರು, ಆಗಸ್ಟ್ 11: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಇದೀಗ ತುಸು ದುರ್ಬಲವಾಗಿದ್ದರೂ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ (Weather Forecast), ಇಂದು (ಆಗಸ್ಟ್ 11) ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ…

Read More

ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Masa Shivaratri 2026: Today’s Horoscope for All 12 Zodiac Signs fro Basavaraja Guruji

ಇಂದು 2026ರ ಆಗಸ್ಟ್ 11, ಪರಾಭವ ನಾಮ ಸಂವತ್ಸರ, ಆಷಾಢ ಮಾಸ, ಕೃಷ್ಣ ಪಕ್ಷ ಚತುರ್ದಶಿ ಹಾಗೂ ಪುನರ್ವಸು ನಕ್ಷತ್ರ ಇದೆ. ಮಂಗಳವಾರದಂದು ಸುಬ್ರಮಣ್ಯ ಸ್ವಾಮಿ ಮತ್ತು ಹನುಮನ ಕೃಪೆಗೆ ಪಾತ್ರರಾಗಲು ಅವಕಾಶವಿದೆ. ಇಂದು ಮಾಸ ಶಿವರಾತ್ರಿ ಹಾಗೂ ಚಡಚಣ ಸಂಗಮೇಶ್ವರ ಉತ್ಸವವೂ ಜರುಗಲಿದೆ. ರವಿ ಮತ್ತು ಚಂದ್ರ ಕರ್ಕಾಟಕ ರಾಶಿಯಲ್ಲಿ ಪುನರ್ವಸು ನಕ್ಷತ್ರದಲ್ಲಿ ಸಂಚರಿಸುತ್ತಿದ್ದು, ಗುರು ಸಹ ಅಲ್ಲಿಯೇ ಇರುವುದರಿಂದ ಇದು ಗಜಕೇಸರಿ ಮಹಾಯೋಗವನ್ನು ಸೃಷ್ಟಿಸಿದೆ. ರಾಹುಕಾಲ ಮಧ್ಯಾಹ್ನ 3 ಗಂಟೆ 23 ನಿಮಿಷದಿಂದ 5…

Read More

ನಿತ್ಯ ಭವಿಷ್ಯ : ಇಂದು ಈ ರಾಶಿಯವರಿಂದ ಕೆಲವು ಅಸಾಧ್ಯ ಕಾರ್ಯಗಳು ಸಾಧ್ಯವಾಗಲಿವೆ, ನಿಃಸ್ಪೃಹತೆ ಇರಲಿ… – Kannada News | Daily Horoscope 11 August 2026: Zodiac Predictions and Success Tips for All Signs

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯ ಮಂಗಳವಾರದಂದು ಅನಿರೀಕ್ಷಿತ ಖ್ಯಾತಿ, ಖಾಸಗಿ ತನಕ್ಕೆ ಅಡ್ಡಿ, ಸ್ವಾವಲಂಬನೆ, ಇಷ್ಟದವರ ಭೇಟಿ, ಸಂಸ್ಥೆಯ ಜೊತೆ ಒಪ್ಪಂದ, ವಾಕ್ಸಮರ, ಆಹಾರ ಅಲಭ್ಯ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಮಂಗಳ, ಪಕ್ಷ :…

Read More

ತಿಂದ ತಕ್ಷಣ ನಿದ್ರೆ ಬರುತ್ತಿದೆಯೇ? ಕಾರ್ಬೋಹೈಡ್ರೇಟ್‌ನಿಂದ ಹಿಡಿದು ನಿದ್ರೆಯ ಕೊರತೆಯವರೆಗೆ ಕಾರಣಗಳೇನು? – Kannada News | Feeling Sleepy After Meals? These Foods and Habits Could Be the Reason

ಊಟ ಮಾಡಿದ ನಂತರ ಕೆಲವರಿಗೆ ಕಣ್ಣುಗಳು ಭಾರವಾಗುವುದು, ದೇಹದಲ್ಲಿ ಸುಸ್ತು ಕಾಣಿಸಿಕೊಳ್ಳುವುದು ಅಥವಾ ತಕ್ಷಣ ಮಲಗಬೇಕು ಎನ್ನಿಸುವುದು ಸಾಮಾನ್ಯ. ವಿಶೇಷವಾಗಿ ಮಧ್ಯಾಹ್ನದ ಊಟದ ನಂತರ ಅಥವಾ ಹೊಟ್ಟೆ ತುಂಬಾ ಆಹಾರ ಸೇವಿಸಿದಾಗ ಈ ಅನುಭವ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಊಟದ ಬಳಿಕ ನಿದ್ರೆ ಬರುವುದಕ್ಕೆ ಕೇವಲ ಹೊಟ್ಟೆ ತುಂಬಿರುವುದೇ ಕಾರಣವಲ್ಲ. ನಾವು ಸೇವಿಸುವ ಆಹಾರದ ಪ್ರಮಾಣ, ಅದರಲ್ಲಿರುವ ಪೋಷಕಾಂಶಗಳು, ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮತ್ತು ಇನ್ಸುಲಿನ್ ಬದಲಾವಣೆಗಳು ಹಾಗೂ ರಾತ್ರಿ ಸರಿಯಾಗಿ ನಿದ್ರೆ ಮಾಡದಿರುವುದೂ ಇದಕ್ಕೆ ಕಾರಣವಾಗಬಹುದು….

Read More