Headlines

WPL 2026: ಒಂದೇ ಓವರ್​ನಲ್ಲಿ 2 ಪ್ರಮುಖ ವಿಕೆಟ್ ಉರುಳಿಸಿದ ಟಗರು ಪುಟ್ಟಿ; ವಿಡಿಯೋ ನೋಡಿ – Kannada News | WPL 2026: Shreyanka Patil’s Double Strike Sinks UP Warriorz vs RCB

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ 5ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಯುಪಿ ವಾರಿಯರ್ಸ್​ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಯುಪಿ ತಂಡ ಆರ್​ಸಿಬಿಯ ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿದೆ. ತಂಡದ ಪ್ರಮುಖ ಬ್ಯಾಟರ್​ಗಳು ಈಗಾಗಲೇ ಪೆವಿಲಿಯನ್ ಸೇರಿಕೊಂಡಿದ್ದಾರೆ. ಅದರಲ್ಲೂ ಪಂದ್ಯದ 8ನೇ ಓವರ್​ನಲ್ಲಿ ಬೌಲಿಂಗ್​ಗೆ ಇಳಿದ ಕನ್ನಡತಿ ಶ್ರೇಯಾಂಕ ಪಾಟೀಲ್ ಮೊದಲ ಎಸೆತದಲ್ಲೇ ಯುಪಿ…

Read More

ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಯಕರು ಕೆಲಸದಿಂದ ವಜಾ – Kannada News | Bengaluru dental college Student Yashaswini Suicide Case: 6 lecturers terminated

ಬೆಂಗಳೂರು, (ಜನವರಿ 12): ನಗರದ ಆಕ್ಸ್​ಫರ್ಡ್ ಡೆಂಟಲ್ ಕಾಲೇಜಿನ (Bengaluru dental college) ವಿದ್ಯಾರ್ಥಿನಿ ಯಶಸ್ವಿ ಆತ್ಮಹತ್ಯೆ ಪ್ರಕರಣಕ್ಕೆ ( Yashaswini suicide Case) ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಮೊನ್ನೆ ಅಂದರೆ ಜನವರಿ 8ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಉಪನ್ಯಾಸಕರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಹಾಗೂ ಯಶಸ್ವಿ ಸಹಪಾಠಿಗಳು ಆರೋಪಿಸಿದ್ದರು. ಈ ಸಂಬಂಧ ಕಾಲೇಜು ಅಧ್ಯಾಪಕರ ಜನಾಂಗೀಯ ನಿಂದನೆ ಮತ್ತು ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು…

Read More

ಶ್ವಾಸಕೋಶ ಸಮಸ್ಯೆಗಳಿಗೆ ಶ್ವಾಸರಿ ವಟೀ; ಪತಂಜಲಿಯ ಈ ಆಯುರ್ವೇದ ಔಷಧದ ಪ್ರಯೋಜನ ಮತ್ತು ಬಳಕೆ ವಿಧಾನ ತಿಳಿಯಿರಿ – Kannada News | Patanjali Swasari Vati helpful in treating lung related problems

ಕಳೆದ ಕೆಲವು ವರ್ಷಗಳಿಂದ ಮಾಲಿನ್ಯದ ಸಮಸ್ಯೆ ಗಮನಾರ್ಹವಾಗಿ ಹೆಚ್ಚುತ್ತಿದೆ. ಚಳಿಗಾಲದಲ್ಲಿ ಮಾಲಿನ್ಯದ ಮಟ್ಟವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಮಾಲಿನ್ಯವು ಆಸ್ತಮಾ, ಬ್ರಾಂಕೈಟಿಸ್ ಮತ್ತು ಸಿಒಪಿಡಿಯಂತಹ ಕಾಯಿಲೆಗಳ ಹೆಚ್ಚಳಕ್ಕೂ ಕಾರಣವಾಗಿದೆ. ಶ್ವಾಸಕೋಶದ ಸೋಂಕುಗಳು ಇದಕ್ಕೆ ಕಾರಣ. ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿಗೆ ಔಷಧವನ್ನು ಪತಂಜಲಿ ಅಭಿವೃದ್ಧಿಪಡಿಸಿದೆ. ಇದನ್ನು ಶ್ವಾಸರಿ ವಟಿ ಎಂದು ಕರೆಯಲಾಗುತ್ತದೆ. ಈ ಔಷಧಿ ಶ್ವಾಸಕೋಶಗಳಿಗೆ ಪ್ರಯೋಜನಕಾರಿ ಎಂದು ಪತಂಜಲಿ (Patanjali) ಹೇಳಿಕೊಂಡಿದೆ. ಇದನ್ನು ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲಾಗುತ್ತದೆ. ಇದನ್ನು ಸೇವಿಸುವುದರಿಂದ ಯಾವುದೇ ಅಡ್ಡಪರಿಣಾಮಗಳು ಉಂಟಾಗುವುದಿಲ್ಲ ಎನ್ನಲಾಗುತ್ತಿದೆ. ಶ್ವಾಸಾರಿ ವಟೀ…

Read More

ಧಾರವಾಡದಲ್ಲಿ ಕಿಡ್ನ್ಯಾಪ್‌ ಆಗಿದ್ದ ಮಕ್ಕಳಿಬ್ಬರು ಪಕ್ಕದ ಜಿಲ್ಲೆಯಲ್ಲಿ ಪತ್ತೆ: ಪರಿಚಿತ ವ್ಯಕ್ತಿಯಿಂದಲೇ ಅಪಹರಣ – Kannada News | Dharwad Child Abduction: Kids Rescued After Abductor Bike Accident in Dandeli

ಮಕ್ಕಳನ್ನ ಕಿಡ್ನ್ಯಾಪ್‌ ಮಾಡಿದ್ದ ವ್ಯಕ್ತಿ ಧಾರವಾಡ, ಜನವರಿ 12: ಎಂದಿನಂತೆ ಆ ಮಕ್ಕಳು (Children) ಶಾಲೆಗೆ ಹೋಗಿದ್ದರು. ಎಂದಿನಂತೆಯೇ ಮಧ್ಯಾಹ್ನದ ಊಟವನ್ನೂ ಮಾಡಿದ್ದರು. ಬಳಿಕ ಆ ಎರಡೂ ಮಕ್ಕಳು ನಾಪತ್ತೆಯಾಗಿದ್ದರು. ಮಧ್ಯಾಹ್ನದ ಬಳಿಕ ತರಗತಿಗೆ ಬರದೇ ಇರೋದ್ರಿಂದಾಗಿ ಶಿಕ್ಷಕರು ಅವರ ಪೋಷಕರಿಗೆ ಫೋನ್ ಮಾಡಿ ಮಕ್ಕಳು ಮನೆಗೆ ಬಂದಿದ್ದಾರೆಯೇ ಅಂತಾ ಕೇಳಿದಾಗಲೇ ಆ ಮಕ್ಕಳು ಶಾಲೆಯಲ್ಲಿಯೂ ಇಲ್ಲ, ಮನೆಗೂ ಹೋಗಿಲ್ಲ ಅನ್ನೋದು ಗೊತ್ತಾಗಿದ್ದು. ಕೂಡಲೇ ಶಾಲೆಗೆ ಸಿಸಿಟಿವಿ ಕ್ಯಾಮೆರಾ ನೋಡಿದರೆ ಅವರಿಬ್ಬರನ್ನೂ ಓರ್ವ ವ್ಯಕ್ತಿ ತನ್ನ ಬೈಕ್…

Read More

ನನ್ನನ್ನು ಮುಟ್ಟಿದರೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ – Kannada News | If you Touch me I will set entire police station on fire Bajrang Dal man threatens police in Rampur

ರಾಂಪುರ, ಜನವರಿ 12: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಬಜರಂಗದಳದ ಕಾರ್ಯಕರ್ತ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಸೂರಜ್ ಪಟೇಲ್ ಎಂಬ ವ್ಯಕ್ತಿ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳನ್ನು ಬಳಸಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. “ನನ್ನನ್ನು ಮುಟ್ಟಿ ನೋಡಿ, ಇಡೀ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ” ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸೂರಜ್ ಪಟೇಲ್ ಪೂರ್ವಾನುಮತಿ…

Read More

WPL 2026: ಆರ್​ಸಿಬಿ ಸೇರಿದಂತೆ ಈ 3 ಪಂದ್ಯಗಳಿಗೆ ಸ್ಟೇಡಿಯಂಗೆ ವೀಕ್ಷಕರ ಪ್ರವೇಶ ನಿಷೇಧ

ಮಹಿಳಾ ಪ್ರೀಮಿಯರ್ ಲೀಗ್ 2026 ರ ಸೀಸನ್​ಗೆ ಅದ್ಭುತ ಆರಂಭ ಸಿಕ್ಕಿದೆ. ನಡೆದಿರುವ ಐದು ಪಂದ್ಯಗಳು ಅಭಿಮಾನಿಗಳನ್ನು ರಂಜಿಸಿವೆ. ಟೂರ್ನಮೆಂಟ್‌ನ ಆರಂಭಿಕ ಪಂದ್ಯಗಳು ನವಿ ಮುಂಬೈನಲ್ಲಿ ನಡೆಯುತ್ತಿದ್ದು, ಎಲ್ಲಾ ಪಂದ್ಯಗಳಿಗೂ ಕ್ರೀಡಾಂಗಣ ಭರ್ತಿಯಾಗುತ್ತಿದೆ. ಒಟ್ಟಾರೆಯಾಗಿ, ಟೂರ್ನಮೆಂಟ್ ಉತ್ತಮ ಆರಂಭವನ್ನು ಕಂಡಿರುವುದು ಬಿಸಿಸಿಐಗೆ ಸಮಾಧಾನಕರ ಸುದ್ದಿಯಾಗಿದೆ. ಆದಾಗ್ಯೂ ಬಿಸಿಸಿಐಗೆ ಕೊಂಚ ಹಿನ್ನಡೆಯುಂಟಾಗಿದ್ದು, ಟೂರ್ನಮೆಂಟ್‌ನ ಎರಡು ಪಂದ್ಯಗಳಿಗೆ ಪ್ರೇಕ್ಷಕರಿಗೆ ಮೈದಾನಕ್ಕೆ ಎಂಟ್ರಿ ಇಲ್ಲ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮುಂಬೈ ಮತ್ತು ನವಿ ಮುಂಬೈನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಂದಾಗಿ ಭದ್ರತಾ…

Read More

ನೀವು ಕೆಲಸ ಮಾಡುವಾಗ ಕುಳಿತುಕೊಳ್ಳುವಂತಹ ಭಂಗಿಯಿಂದಲೂ ಬರಬಹುದು ಬೆನ್ನು ನೋವು ಎಚ್ಚರಿಕೆ ನೀಡಿದ ಡಾ ಅಜಯ್‌ ಹೆಗ್ಡೆ – Kannada News | Back Pain Relief for Office Workers

Dr. Ajay Hegde On Back Pain From Sitting ಇತ್ತೀಚಿನ ವರ್ಷಗಳಲ್ಲಿ ಡೆಸ್ಕ್‌ನಲ್ಲೇ ಕುಳಿತು ಕೆಲಸ ಮಾಡುವ ವೃತ್ತಿಪರರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ದಿನಕ್ಕೆ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುವ ಉದ್ಯೋಗಿಗಳು ಸರಿಯಾದ ಭಂಗಿಯ ಬದಲು ಮನಸ್ಸಿಗೆ ಬಂದಂತೆ ಕುಳಿತುಕೊಂಡಿರುತ್ತಾರೆ. ಇದರ ಜೊತೆಗೆ, ಕೆಲಸ ಮಾಡುವ ಸ್ಥಳ ಅಥವಾ ಆಫೀಸ್ ತಲುಪುವುದಕ್ಕಾಗಿ ಕೆಟ್ಟ ಕೆಟ್ಟ ರಸ್ತೆಗಳಲ್ಲಿ ಎರಡು ಮೂರು ಗಂಟೆಗಳ ಕಾಲ ಸಂಚರಿಸುತ್ತಾರೆ. ಹೀಗೆ ನಮ್ಮ ಮಧ್ಯೆ ಇರುವ ಅತ್ಯಧಿಕ ಜನ…

Read More

ಉಚ್ಛಾಟಿತ ಶಾಸಕನ ಸಂಪರ್ಕದಲ್ಲಿದ್ಯಾ ಬಿಜೆಪಿ ಹೈಕಮಾಂಡ್​?: ಯತ್ನಾಳ್​​ ಸ್ಫೋಟಕ ಹೇಳಿಕೆ – Kannada News | Expelled BJP MLA Yatnal said he is in touch with high command leaders

ವಿಜಯಪುರ, ಜನವರಿ 12: ಬಿಜೆಪಿಯಿಂದ ಉಚ್ಛಾಟನೆಗೊಂಡಿರೋ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಹೊಸ ಬಾಂಬ್​​ ಸಿಡಿಸಿದ್ದಾರೆ. ಹೈಕಮಾಂಡ್​​ ನಾಯಯಕರು ತಮ್ಮ ಜೊತೆ ನೇರ ಸಂಪರ್ಕದಲ್ಲಿ ಇರೋದಾಗಿ ಯತ್ನಾಳ್​​ ಹೇಳಿರೋದೀಗ ಭಾರಿ ಕುತೂಹಲ ಕೆರಳಿಸಿದೆ. ವಿಜಯಪುರ ಶಾಸಕ ಮರಳಿ ಬಿಜೆಪಿಗೆ ಬರ್ತಾರಾ ಎನ್ನುವ ಪ್ರಶ್ನೆಗಳು ಇತ್ತೀಚೆಗೆ ಮೇಲಿಂದ ಮೇಲೆ ಕೇಳಿಬರುತ್ತಿತ್ತು. ಈ ನಡುವೆ ಉಚ್ಛಾಟಿತ ನಾಯಕನ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದೆ.ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತೂ…

Read More

ಪಹಲ್ಗಾಮ್ ದಾಳಿ, ದೆಹಲಿ ಸ್ಫೋಟವನ್ನು ಖಂಡಿಸಿದ ಜರ್ಮನ್ ಚಾನ್ಸೆಲರ್ ಮೆರ್ಜ್ – Kannada News | PM Modi and German Chancellor Friedrich Merz condemn Pahalgam attack and Delhi blast

ನವದೆಹಲಿ, ಜನವರಿ 12: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಇಂದು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನವೆಂಬರ್ 10ರ ದೆಹಲಿ ಸ್ಫೋಟವನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ (UN) ಚಾರ್ಟರ್ ಪ್ರಕಾರ “ಸಮಗ್ರ ಮತ್ತು ನಿರಂತರ ರೀತಿಯಲ್ಲಿ” ಭಯೋತ್ಪಾದನೆಯನ್ನು ಎದುರಿಸಲು ಸಂಘಟಿತ ಅಂತರರಾಷ್ಟ್ರೀಯ ಪ್ರಯತ್ನಗಳಿಗೆ ಕರೆ ನೀಡಿದರು. ಭಾರತ ಮತ್ತು ಜರ್ಮನಿ ಜಂಟಿಯಾಗಿ ನೇತೃತ್ವದ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮದ (ಐಪಿಒಐ) ಸಾಮರ್ಥ್ಯ ವೃದ್ಧಿ…

Read More

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ SP – Kannada News | Shidlaghatta Police Arrests Andra Pradesh Woman For theft 240 gram Gold In Chikkaballapur

ಚಿಕ್ಕಬಳ್ಳಾಪುರ, (ಜನವರಿ 12): ಕೆಎಸ್​​ಆರ್​​ಟಿಸಿ ಬಸ್ ನಲ್ಲಿ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ ಗ್ರಾಮದ ಮಹಿಳೆ ವನಜಾಕ್ಷಿ ಎಂಬಾಕೆ, ದೇವಸ್ಥಾನಕ್ಕೆ ಹೋಗುವ ಸಲುವಾಗಿ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಕ್ರಾಸ್ ನಿಂದ ಸೂಲಿಬೆಲೆಗೆ ತೆರಳಲು ಬಸ್ ಹತ್ತುತ್ತಿದ್ದ ವೇಳೆ, ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಆಂದ್ರ…

Read More