ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್ ಲೀಗ್ನ 5ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಯುಪಿ ತಂಡ ಆರ್ಸಿಬಿಯ ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿದೆ. ತಂಡದ ಪ್ರಮುಖ ಬ್ಯಾಟರ್ಗಳು ಈಗಾಗಲೇ ಪೆವಿಲಿಯನ್ ಸೇರಿಕೊಂಡಿದ್ದಾರೆ.
ಅದರಲ್ಲೂ ಪಂದ್ಯದ 8ನೇ ಓವರ್ನಲ್ಲಿ ಬೌಲಿಂಗ್ಗೆ ಇಳಿದ ಕನ್ನಡತಿ ಶ್ರೇಯಾಂಕ ಪಾಟೀಲ್ ಮೊದಲ ಎಸೆತದಲ್ಲೇ ಯುಪಿ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅವರ ವಿಕೆಟ್ ಪಡೆದರು. ಈ ವಿಕೆಟ್ನ ಶ್ರೇಯ ಅತ್ಯದ್ಭುತ ಫಿಲ್ಡಿಂಗ್ ಮಾಡಿದ ರಾಧಾ ಯಾದವ್ಗೂ ಸಲ್ಲಬೇಕು. ಆ ನಂತರ ಅದೇ ಓವರ್ನ ಕೊನೆಯ ಎಸೆತದಲ್ಲಿ ಯುಪಿ ತಂಡದ ಬ್ಯಾಟಿಂಗ್ ಜೀವಾಳ ಎನಿಸಿಕೊಂಡಿರುವ ಫೋಬೆ ಲಿಚ್ಫೀಲ್ಡ್ ಅವರನ್ನು ಶ್ರೇಯಾಂಕ ಬಲಿ ಪಡೆದರು.
ಬೆಂಗಳೂರು, (ಜನವರಿ 12): ನಗರದ ಆಕ್ಸ್ಫರ್ಡ್ ಡೆಂಟಲ್ ಕಾಲೇಜಿನ (Bengaluru dental college) ವಿದ್ಯಾರ್ಥಿನಿ ಯಶಸ್ವಿ ಆತ್ಮಹತ್ಯೆ ಪ್ರಕರಣಕ್ಕೆ ( Yashaswini suicide Case) ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಮೊನ್ನೆ ಅಂದರೆ ಜನವರಿ 8ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಉಪನ್ಯಾಸಕರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಹಾಗೂ ಯಶಸ್ವಿ ಸಹಪಾಠಿಗಳು ಆರೋಪಿಸಿದ್ದರು. ಈ ಸಂಬಂಧ ಕಾಲೇಜು ಅಧ್ಯಾಪಕರ ಜನಾಂಗೀಯ ನಿಂದನೆ ಮತ್ತು ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು ಪ್ರಾಂಶುಪಾಲರು ಸೇರಿದಂತೆ ಐವರ ವಿರುದ್ಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಆಕ್ಸ್ಫರ್ಡ್ ಡೆಂಟಲ್ ಕಾಲೇಜಿನ ಆಡಳಿತ ಮಂಡಳಿ, ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಿದೆ. ಒಎಂಆರ್ ವಿಭಾಗದ ಲೆಕ್ಚರರ್ಸ್ಗಳಾದ ಡಾ.ಅನಿಮೋಲ್, ಡಾ.ಶಬಾನಾ, ಡಾ.ಫೈಕಾ, ಡಾ.ಸಿಂಧು, ಡಾ.ಸುಶ್ಮಿನಿ, ಡಾ.ಅಲ್ಬಾ ವಜಾಗೊಂಡ ಉಪನ್ಯಾಸಕರು.
ಬಟ್ಟೆ, ಮೈಬಣ್ಣದ ಬಗ್ಗೆ ನಿಂದನೆ ಆರೋಪ
ಸಹಪಾಠಿಗಳ ಮುಂದೆ ಯಶಸ್ವಿನಿ ಮೈಬಣ್ಣ ಹಾಗೂ ಡ್ರೆಸ್ ಬಗ್ಗೆ ಟೀಕೆ ಆರೋಪ ಕೇಳಿಬಂದಿದೆ. ಕಪ್ಪು ಬಣ್ಣದ ನಿನಗೆ ಡಾಕ್ಟರ್ ಆಗಬೇಕ ಎಂದು ಅವಮಾನ ಮಾಡಲಾಗಿತ್ತು ಎನ್ನಲಾಗಿದ್ದು, ಇದರಿಂದ ಮನನೊಂದು ಯಶಸ್ವಿ ಆತ್ಮಹತ್ಯೆಗೆ ಶರಣಾಗಿದ್ದಳು ಎಂದು ಆರೋಪಿಸಲಾಗಿತ್ತು. ಕಣ್ಣು ನೋವು ಎಂದು ಒಂದು ದಿನ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಸೆಮಿನಾರ್, ರೆಡಿಯಾಲಜಿ ಕೇಸ್ ನೀಡದೆ ಕೊಂಕು ಮಾತುಗಳಿಂದ ನಿಂದನೆ ಮಾಡಲಾಗಿತ್ತು ಎನ್ನಲಾಗಿದೆ.
ತನ್ನ ಮಗಳ ಸಾವಿಗೆ ಕಾರಣರಾದ ಲೆಕ್ಚರರ್ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯಶಸ್ವಿನಿ ತಾಯಿ ಪರಿಮಳ ಒತ್ತಾಯಿಸಿದ್ದರು. ‘ನನ್ನ ಮಗಳು ವೈದ್ಯೆಯಾಗಿ ಸಮಾಜ ಸೇವೆ ಮಾಡಬೇಕೆಂಬ ಕನಸು ಕಂಡಿದ್ದಳು. ಆದರೆ ಕಾಲೇಜು ಲೆಕ್ಚರರ್ಸ್ ಆಕೆಯ ಕನಸನ್ನು ಹೊಸಕಿ ಹಾಕಿದ್ದಾರೆ. ಅವಳಿಗೆ ಸಿಗಬೇಕಾದ ನ್ಯಾಯ ಎಲ್ಲ ವಿದ್ಯಾರ್ಥಿಗಳಿಗೂ ಸಂದೇಶವಾಗಬೇಕು’ ಎಂದು ಕಣ್ಣೀರಿಟ್ಟಿದ್ದರು. ಅಲ್ಲದೇ ಯಶಸ್ವಿನಿ ಸಹಪಾಠಿಗಳು ಸಹ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದು, ಯಶಸ್ವಿನಿ ಸಾವಿಗೆ ನ್ಯಾಯಬೇಕೆಂದು ಆಗ್ರಹಿಸಿದ್ದರು.
ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಕುಟುಂಬಸ್ಥರು ನೀಡಿದ್ದ ದೂರಿನ ಮೇರೆಗೆ ಪ್ರಿನ್ಸಿಪಾಲ್ ಡಾ.ಪ್ರಿಯಾ ಸೇರಿದಂತೆ ಒಟ್ಟು ಐದು ಜನರ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಕಳೆದ ಕೆಲವು ವರ್ಷಗಳಿಂದ ಮಾಲಿನ್ಯದ ಸಮಸ್ಯೆ ಗಮನಾರ್ಹವಾಗಿ ಹೆಚ್ಚುತ್ತಿದೆ. ಚಳಿಗಾಲದಲ್ಲಿ ಮಾಲಿನ್ಯದ ಮಟ್ಟವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಮಾಲಿನ್ಯವು ಆಸ್ತಮಾ, ಬ್ರಾಂಕೈಟಿಸ್ ಮತ್ತು ಸಿಒಪಿಡಿಯಂತಹ ಕಾಯಿಲೆಗಳ ಹೆಚ್ಚಳಕ್ಕೂ ಕಾರಣವಾಗಿದೆ. ಶ್ವಾಸಕೋಶದ ಸೋಂಕುಗಳು ಇದಕ್ಕೆ ಕಾರಣ. ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿಗೆ ಔಷಧವನ್ನು ಪತಂಜಲಿ ಅಭಿವೃದ್ಧಿಪಡಿಸಿದೆ. ಇದನ್ನು ಶ್ವಾಸರಿ ವಟಿ ಎಂದು ಕರೆಯಲಾಗುತ್ತದೆ. ಈ ಔಷಧಿ ಶ್ವಾಸಕೋಶಗಳಿಗೆ ಪ್ರಯೋಜನಕಾರಿ ಎಂದು ಪತಂಜಲಿ (Patanjali) ಹೇಳಿಕೊಂಡಿದೆ. ಇದನ್ನು ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲಾಗುತ್ತದೆ. ಇದನ್ನು ಸೇವಿಸುವುದರಿಂದ ಯಾವುದೇ ಅಡ್ಡಪರಿಣಾಮಗಳು ಉಂಟಾಗುವುದಿಲ್ಲ ಎನ್ನಲಾಗುತ್ತಿದೆ.
ಶ್ವಾಸಾರಿ ವಟೀ ಶ್ವಾಸಕೋಶವನ್ನು ಶುದ್ಧೀಕರಿಸುತ್ತದೆ ಮತ್ತು ಉಸಿರಾಟದ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ ಎಂದು ಪತಂಜಲಿ ಹೇಳಿಕೊಂಡಿದೆ . ಈ ಔಷಧವು ಬ್ರಾಂಕೋಡಿಲೇಟರ್ ಆಗಿ ಕಾರ್ಯನಿರ್ವಹಿಸುತ್ತದೆ, ಶ್ವಾಸಕೋಶದ ಸೋಂಕುಗಳನ್ನು ನಿವಾರಿಸುತ್ತದೆ ಮತ್ತು ಶ್ವಾಸಕೋಶದ ಸಾಮರ್ಥ್ಯವನ್ನು ಸುಧಾರಿಸುತ್ತದೆ. ಪತಂಜಲಿಯ ಪ್ರಕಾರ, ಈ ಔಷಧಿಯನ್ನು ಕಾಕಡಸಿಂಘಿ, ಶುಂಠಿ ಬೂದಿ, ಲೈಕೋರೈಸ್ ಬೇರು, ಒಣ ಶುಂಠಿ ಮತ್ತು ದಾಲ್ಚಿನ್ನಿ ಬಳಸಿ ತಯಾರಿಸಲಾಗುತ್ತದೆ. ಇದು ಸ್ಫಟಿಕ ಭಸ್ಮ ಮತ್ತು ಹಲವಾರು ಇತರ ಗಿಡಮೂಲಿಕೆಗಳನ್ನು ಸಹ ಒಳಗೊಂಡಿದೆ.
ಸಂಶೋಧನೆಯ ಪ್ರಕಾರ, ಈ ಔಷಧಿಯು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದು ಶ್ವಾಸಕೋಶದ ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ. ಈ ಔಷಧಿಯು ಶ್ವಾಸಕೋಶದಲ್ಲಿ ಲೋಳೆ, ಕಫ ಮತ್ತು ಇನ್ಫ್ಲೆಮೇಶನ್ ಅನ್ನು ಕಡಿಮೆ ಮಾಡುತ್ತದೆ. ಪತಂಜಲಿ ಹೇಳುವಂತೆ ಈ ಔಷಧಿಯು ಆಸ್ತಮಾ, ಬ್ರಾಂಕೈಟಿಸ್ ಅಥವಾ COPD ಯಂತಹ ಪರಿಸ್ಥಿತಿಗಳಿಂದ ಬಳಲುತ್ತಿರುವ ಜನರಿಗೆ ಪರಿಹಾರ ನೀಡುತ್ತದೆ.
ಶ್ವಾಸರಿ ವಟಿ ತೆಗೆದುಕೊಳ್ಳುವ ವಿಧಾನವೇನು?
ಈ ಔಷಧಿಯ ಒಂದು ಟ್ಯಾಬ್ಲೆಟ್ ಅನ್ನು ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮತ್ತು ಇನ್ನೊಂದನ್ನು ರಾತ್ರಿ ಊಟದ ಮೊದಲು ತೆಗೆದುಕೊಳ್ಳಬಹುದು. ಹೀಗೆ ದಿನಕ್ಕೆ ಎರಡು ಟ್ಯಾಬ್ಲೆಟ್ ಸೇವಿಸಬೇಕು. ಆದಾಗ್ಯೂ, ರೋಗಿಯ ಆರೋಗ್ಯ ಮತ್ತು ಸ್ಥಿತಿಯನ್ನು ಅವಲಂಬಿಸಿ ಅಥವಾ ನಿಮ್ಮ ವೈದ್ಯರು ಸೂಚಿಸಿದಂತೆ ಡೋಸೇಜ್ ಬದಲಾಯಿಸಬಹುದು. ನೀವು ಈಗಾಗಲೇ ಶ್ವಾಸಕೋಶದ ಸಮಸ್ಯೆಗಳಿಗೆ ಬೇರೆ ಯಾವುದೇ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದರೆ, ಈ ಪತಂಜಲಿ ಔಷಧವನ್ನು ಬದಲಿಯಾಗಿ ಬಳಸಬೇಡಿ. ಇಂಥ ಪರಿಸ್ಥಿತಿಯಲ್ಲಿ, ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ. ನಿಮ್ಮ ವೈದ್ಯರ ಸಲಹೆಯ ಪ್ರಕಾರ ಮಾತ್ರ ಚಿಕಿತ್ಸೆ ಪಡೆಯಬಹುದು. ಈ ಔಷಧಿಯನ್ನು ಎಂದಿಗೂ ಸ್ವಯಂ-ನಿರ್ವಹಿಸಬೇಡಿ.
ಧಾರವಾಡ, ಜನವರಿ 12: ಎಂದಿನಂತೆ ಆ ಮಕ್ಕಳು (Children) ಶಾಲೆಗೆ ಹೋಗಿದ್ದರು. ಎಂದಿನಂತೆಯೇ ಮಧ್ಯಾಹ್ನದ ಊಟವನ್ನೂ ಮಾಡಿದ್ದರು. ಬಳಿಕ ಆ ಎರಡೂ ಮಕ್ಕಳು ನಾಪತ್ತೆಯಾಗಿದ್ದರು. ಮಧ್ಯಾಹ್ನದ ಬಳಿಕ ತರಗತಿಗೆ ಬರದೇ ಇರೋದ್ರಿಂದಾಗಿ ಶಿಕ್ಷಕರು ಅವರ ಪೋಷಕರಿಗೆ ಫೋನ್ ಮಾಡಿ ಮಕ್ಕಳು ಮನೆಗೆ ಬಂದಿದ್ದಾರೆಯೇ ಅಂತಾ ಕೇಳಿದಾಗಲೇ ಆ ಮಕ್ಕಳು ಶಾಲೆಯಲ್ಲಿಯೂ ಇಲ್ಲ, ಮನೆಗೂ ಹೋಗಿಲ್ಲ ಅನ್ನೋದು ಗೊತ್ತಾಗಿದ್ದು. ಕೂಡಲೇ ಶಾಲೆಗೆ ಸಿಸಿಟಿವಿ ಕ್ಯಾಮೆರಾ ನೋಡಿದರೆ ಅವರಿಬ್ಬರನ್ನೂ ಓರ್ವ ವ್ಯಕ್ತಿ ತನ್ನ ಬೈಕ್ ಮೇಲೆ ಕರೆದೊಯ್ದಿರೋದು ಗೊತ್ತಾಗಿದೆ. ಇದೀಗ ಅಪಹರಣಕಾರ(Kidnap) ಸಿಕ್ಕಿಬಿದ್ದಿದ್ದು, ಮಕ್ಕಳು ಪಕ್ಕದ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಇದೆಲ್ಲಾ ನಡೆದಿದ್ದು ವಿದ್ಯಾಕಾಶಿ ಧಾರವಾಡದಲ್ಲಿ.
ನಡೆದದ್ದೇನು?
ಲಕ್ಷ್ಮೀ ಕರೆಯಪ್ಪನವರ್ ಹಾಗೂ ಅನ್ವರ್ ದೊಡ್ಡಮನಿ ಧಾರವಾಡದ ಕಮಲಾಪುರ ಬಡಾವಣೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 3 ನೇ ತರಗತಿಯಲ್ಲಿ ಓದುತ್ತಿರು ವಿದ್ಯಾರ್ಥಿಗಳು. ಇಂದು ಎಂದಿನಂತೆ ಶಾಲೆಗೆ ಬಂದಿದ್ದರು. ಮಧ್ಯಾಹ್ನದ ಬಿಸಿಯೂಟವನ್ನೂ ಸೇವಿಸಿದ್ದರು. ಈ ವೇಳೆ ಶಾಲೆಗೆ ಬಂದ ಓರ್ವ ವ್ಯಕ್ತಿ ಮೊದಲು ಅನ್ವರ್ ನನ್ನು ಕರೆದು ಮಾತನಾಡಿಸಿದ್ಧಾನೆ. ಅನ್ವರ್ಗೆ ಆತ ಪರಿಚಯವಿದ್ದಿದ್ದಕ್ಕೆ ಉಳವಿ ಬಸಪ್ಪ ದೇವಸ್ಥಾನದ ಜಾತ್ರೆಗೆ ಹೋಗೋಣ ಬರುತ್ತೀಯಾ ಅಂತಾ ಕೇಳಿದ್ದಾನೆ. ಆ ಮುಗ್ಧ ಬಾಲಕ ಬರುತ್ತೇನೆ ಅಂತಾ ಹೇಳಿದಾಗ ಪಕ್ಕದಲ್ಲಿಯೇ ಇದ್ದ ಲಕ್ಷ್ಮೀಯನ್ನು ಕೂಡ ಕೇಳಿದ್ದಾನೆ. ಆ ಬಾಲಕಿ ಕೂಡ ಬರೋದಾಗಿ ಹೇಳಿದ್ದಾಳೆ.
ಕೂಡಲೇ ಇಬ್ಬರನ್ನೂ ಹತ್ತಿಸಿಕೊಂಡ ಆ ವ್ಯಕ್ತಿ ಅಲ್ಲಿಂದ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ. ಯಾವಾಗ ಮಧ್ಯಾಹ್ನದ ಬಳಿಕ ತರಗತಿಯಲ್ಲಿ ಇಬ್ಬರು ಮಕ್ಕಳು ಕಾಣಲಿಲ್ಲವೋ ಶಿಕ್ಷಕರು ಅವರಿಬ್ಬರ ಪೋಷಕರಿಗೆ ಫೋನ್ ಮಾಡಿ, ಮಕ್ಕಳು ಮನೆಗೆ ಬಂದಿದ್ದಾರಾ ಅಂತಾ ಕೇಳಿದ್ದಾರೆ. ಆಗ ಮನೆಗೆ ಬಂದಿಲ್ಲ ಅನ್ನೋದು ಗೊತ್ತಾಗುತ್ತಿದ್ದಂತೆಯೇ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದ್ದು, ವ್ಯಕ್ತಿಯೊಬ್ಬ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಹತ್ತಿಸಿಕೊಂಡು ಅಲ್ಲಿಂದ ಪರಾರಿಯಾಗಿರುವುದು ಗೊತ್ತಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆ ಪೊಲೀಸರು ಎಲ್ಲಾ ಕಡೆ ಮಾಹಿತಿ ರವಾನಿಸಿದ್ಧಾರೆ. ಇದೇ ವೇಳೆ ಈ ಮಾಹಿತಿ ಸಿಗುತ್ತಿದ್ದಂತೆಯೇ ಶಾಲೆಗೆ ಆಗಮಿಸಿದ ಅನೇಕ ಪೋಷಕರು ಶಾಲೆಯ ಮುಂದೆ ಜಮಾವಣೆಗೊಂಡರು. ಈ ವೇಳೆ ಎಲ್ಲರ ಮುಖದಲ್ಲಿಯೂ ಆತಂಕ ಎದ್ದು ಕಾಣುತ್ತಿತ್ತು. ಇನ್ನು ಅಪಹರಣಗೊಂಡ ಮಕ್ಕಳ ಪೋಷಕರಂತೂ ತಮ್ಮ ಮಕ್ಕಳು ಎಲ್ಲಿದ್ದಾರೋ? ಹೇಗಿದ್ದಾರೋ? ಅನ್ನೋ ಆತಂಕದಲ್ಲಿಯೇ ಇದ್ದರು.
ಮಕ್ಕಳು ಸಿಕ್ಕಿದ್ಹೇಗೆ?
ಇನ್ನು ಇದೇ ವೇಳೆ ಪೊಲೀಸರಿಗೆ ಮಾಹಿತಿಯೊಂದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಬಳಿ ಬೈಕ್ ವೊಂದು ರಸ್ತೆ ಬದಿಯ ಗುಂಡಿಯಲ್ಲಿ ಬಿದ್ದಿದ್ದು, ಬೈಕ್ ಮೇಲೆ ಓರ್ವ ವ್ಯಕ್ತಿ ಹಾಗೂ ಇಬ್ಬರು ಮಕ್ಕಳಿರುವ ಮಾಹಿತಿ ಲಭ್ಯವಾಗಿದೆ. ಇದೇ ವೇಳೆ ದಾಂಡೇಲಿ ಪೊಲೀಸರು ವ್ಯಕ್ತಿಯ ವಿಚಾರಣೆ ನಡೆಸಿದಾಗ ಆತ ಧಾರವಾಡ ನಗರದ ಅಬ್ದುಲ್ ಕರೀಂ ಮೇಸ್ತ್ರಿ ಅನ್ನೋದು ಖಚಿತವಾಗಿದೆ. ಅಪಘಾತದಲ್ಲಿ ಆತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆತನಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದೀಗ ಉಪನಗರ ಠಾಣೆ ಪೊಲೀಸರು ಪೋಷಕರಿಂದ ದೂರನ್ನು ಪಡೆದಿದ್ದು, ದಾಂಡೇಲಿ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಅಬ್ದುಲ್ ಕರೀಂ ಯಾವ ಕಾರಣಕ್ಕೆ ಈ ಎರಡೂ ಮಕ್ಕಳನ್ನು ಅಪಹರಣ ಮಾಡಿದ ಅನ್ನೋದರ ಬಗ್ಗೆ ಖಾಕಿ ತನಿಖೆ ಮುಂದುವರೆಸಿದ್ದಾರೆ. ಒಟ್ಟಿನಲ್ಲಿ ಅಪಘಾತವೊಂದು ಎರಡೂ ಮಕ್ಕಳನ್ನು ಪತ್ತೆ ಹಚ್ಚಲು ಕಾರಣವಾಗಿದ್ದು ಮಾತ್ರ ವಿಚಿತ್ರ ಸಂಗತಿಯೇ ಸರಿ.
ರಾಂಪುರ, ಜನವರಿ 12: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಬಜರಂಗದಳದ ಕಾರ್ಯಕರ್ತ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಸೂರಜ್ ಪಟೇಲ್ ಎಂಬ ವ್ಯಕ್ತಿ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳನ್ನು ಬಳಸಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. “ನನ್ನನ್ನು ಮುಟ್ಟಿ ನೋಡಿ, ಇಡೀ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ” ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.
ಸೂರಜ್ ಪಟೇಲ್ ಪೂರ್ವಾನುಮತಿ ಇಲ್ಲದೆ ಪೊಲೀಸ್ ಠಾಣೆಗೆ ಬಂದು ಆ ಸಮಯದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಸುಹೈಲ್ ಎಂಬ ವ್ಯಕ್ತಿಯನ್ನು ಭೇಟಿಯಾಗಬೇಕೆಂದು ಹಠ ಹಿಡಿದಾಗ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ತನಿಖಾಧಿಕಾರಿ ಅಥವಾ ಕರ್ತವ್ಯ ಅಧಿಕಾರಿಯನ್ನು ಸಂಪರ್ಕಿಸಲು ಸೂಚಿಸಿದ್ದಾರೆ. ಇದರಿಂದ ಸೂರಜ್ ಆಕ್ರೋಶಗೊಂಡರು. ಈ ಘಟನೆಯನ್ನು ಸ್ಥಳದಲ್ಲಿದ್ದ ಯಾರೋ ಒಬ್ಬರು ರೆಕಾರ್ಡ್ ಮಾಡಿದ್ದಾರೆ. ಈ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಹಿಳಾ ಪ್ರೀಮಿಯರ್ ಲೀಗ್ 2026 ರ ಸೀಸನ್ಗೆ ಅದ್ಭುತ ಆರಂಭ ಸಿಕ್ಕಿದೆ. ನಡೆದಿರುವ ಐದು ಪಂದ್ಯಗಳು ಅಭಿಮಾನಿಗಳನ್ನು ರಂಜಿಸಿವೆ. ಟೂರ್ನಮೆಂಟ್ನ ಆರಂಭಿಕ ಪಂದ್ಯಗಳು ನವಿ ಮುಂಬೈನಲ್ಲಿ ನಡೆಯುತ್ತಿದ್ದು, ಎಲ್ಲಾ ಪಂದ್ಯಗಳಿಗೂ ಕ್ರೀಡಾಂಗಣ ಭರ್ತಿಯಾಗುತ್ತಿದೆ. ಒಟ್ಟಾರೆಯಾಗಿ, ಟೂರ್ನಮೆಂಟ್ ಉತ್ತಮ ಆರಂಭವನ್ನು ಕಂಡಿರುವುದು ಬಿಸಿಸಿಐಗೆ ಸಮಾಧಾನಕರ ಸುದ್ದಿಯಾಗಿದೆ.
ಆದಾಗ್ಯೂ ಬಿಸಿಸಿಐಗೆ ಕೊಂಚ ಹಿನ್ನಡೆಯುಂಟಾಗಿದ್ದು, ಟೂರ್ನಮೆಂಟ್ನ ಎರಡು ಪಂದ್ಯಗಳಿಗೆ ಪ್ರೇಕ್ಷಕರಿಗೆ ಮೈದಾನಕ್ಕೆ ಎಂಟ್ರಿ ಇಲ್ಲ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮುಂಬೈ ಮತ್ತು ನವಿ ಮುಂಬೈನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಂದಾಗಿ ಭದ್ರತಾ ದೃಷ್ಟಿಯಿಂದ ಬಿಸಿಸಿಐ ಈ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ.
ಈ ತಿಂಗಳ 15 ರಂದು ಮಹಾರಾಷ್ಟ್ರದಲ್ಲಿ ಮಹಾನಗರ ಪಾಲಿಕೆ ಚುನಾವಣೆಗಳು ನಡೆಯಲಿವೆ. ಈ ಚುನಾವಣಾ ಕರ್ತವ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಭಾಗವಹಿಸಬೇಕಾಗುತ್ತದೆ. ಅದೇ ಸಮಯದಲ್ಲಿ, ನವಿ ಮುಂಬೈನಲ್ಲಿ WPL ಪಂದ್ಯಗಳನ್ನು ಸಹ ನಿಗದಿಪಡಿಸಲಾಗಿದೆ. ಮತದಾನದ ದಿನ ಮತ್ತು ಚುನಾವಣೆಯ ಹಿಂದಿನ ದಿನದಂದು ಭದ್ರತೆ ಒದಗಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
ಈ ಕಾರಣದಿಂದಾಗಿ, ಜನವರಿ 14, 15 ಮತ್ತು 16 ರಂದು ನಿಗದಿಯಾಗಿದ್ದ ಪಂದ್ಯಗಳನ್ನು ಖಾಲಿ ಕ್ರೀಡಾಂಗಣಗಳಲ್ಲಿ ನಡೆಸಲು ಅಧಿಕಾರಿಗಳು ಯೋಜಿಸುತ್ತಿದ್ದಾರೆ. ವೇಳಾಪಟ್ಟಿಯ ಪ್ರಕಾರ ಜನವರಿ 14 ರಂದು ದೆಹಲಿ ಕ್ಯಾಪಿಟಲ್ಸ್ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಸೆಣಸಲಿದ್ದು, ನವೆಂಬರ್ 15 ರಂದು ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್ ವಿರುದ್ಧ ಸೆಣಸಲಿದೆ.
ಹಾಗೆಯೇ ಈ ಎರಡು ಪಂದ್ಯಗಳು ಮಾತ್ರವಲ್ಲದೆ, ಜನವರಿ 16 ರಂದು ನಡೆಯಲಿರುವ ಆರ್ಸಿಬಿ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಪಂದ್ಯವನ್ನು ಸಹ ಪ್ರೇಕ್ಷಕರಿಲ್ಲದೆ ನಡೆಸಬೇಕಾಗಬಹುದು, ಏಕೆಂದರೆ ಆ ದಿನ ಮತ ಎಣಿಕೆ ಮತ್ತು ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಆದಾಗ್ಯೂ, ಈ ವಿಷಯದ ಬಗ್ಗೆ ಈ ಸಮಯದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಆದಾಗ್ಯೂ ಈ 3 ಪಂದ್ಯಗಳು ಖಾಲಿ ಕ್ರೀಡಾಂಗಣದಲ್ಲಿ ನಡೆದರೆ ಬಿಸಿಸಿಐ ಆದಾಯದ ಮೇಲೆ ಪರಿಣಾಮ ಬೀರಬಹುದು.
ಪ್ರಸ್ತುತ, ಈ ಮೂರು ದಿನಾಂಕಗಳ ಪಂದ್ಯಗಳ ಟಿಕೆಟ್ ಮಾರಾಟವನ್ನು ಅಧಿಕೃತ ಟಿಕೆಟ್ ವೇದಿಕೆಗಳಲ್ಲಿ ಸ್ಥಗಿತಗೊಳಿಸಲಾಗಿದೆ. ಜನವರಿ 17 ರಂದು ನಡೆಯುವ ಡಬಲ್ ಹೆಡರ್ ಪಂದ್ಯಗಳಿಗೆ ಮಾತ್ರ ಟಿಕೆಟ್ಗಳು ಲಭ್ಯವಿದೆ. ಇದರರ್ಥ 17 ರಿಂದ ಮತ್ತೆ ಪ್ರೇಕ್ಷಕರಿಗೆ ಅವಕಾಶ ನೀಡುವ ಸಾಧ್ಯತೆಯಿದೆ.
ಪಂದ್ಯಗಳು ನಿಗದಿಯಂತೆ ನಡೆಯಲಿವೆ, ಆದರೆ ಜನಸಂದಣಿಯನ್ನು ನಿಯಂತ್ರಿಸುವ ಬಗ್ಗೆ ಮಾತ್ರ ಚರ್ಚಿಸಲಾಗುತ್ತಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ. ಚುನಾವಣಾ ದಿನಾಂಕಗಳನ್ನು ಘೋಷಿಸುವ ಮೊದಲು ಡಬ್ಲ್ಯೂಪಿಎಲ್ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿರುವುದರಿಂದ ಈ ಪರಿಸ್ಥಿತಿ ಉದ್ಭವಿಸಿದೆ. ಆರಂಭಿಕ ಪಂದ್ಯಗಳಿಗೆ ಪ್ರೇಕ್ಷಕರಿಂದ ಭಾರಿ ಪ್ರತಿಕ್ರಿಯೆ ದೊರೆತ ಸಮಯದಲ್ಲಿ, ಖಾಲಿ ಕ್ರೀಡಾಂಗಣಗಳಲ್ಲಿ ಪಂದ್ಯಗಳನ್ನು ಆಡುವುದನ್ನು ನೋಡುವುದು ಅಭಿಮಾನಿಗಳಿಗೆ ಸ್ವಲ್ಪ ನಿರಾಶಾದಾಯಕವಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಡೆಸ್ಕ್ನಲ್ಲೇ ಕುಳಿತು ಕೆಲಸ ಮಾಡುವ ವೃತ್ತಿಪರರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ದಿನಕ್ಕೆ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುವ ಉದ್ಯೋಗಿಗಳು ಸರಿಯಾದ ಭಂಗಿಯ ಬದಲು ಮನಸ್ಸಿಗೆ ಬಂದಂತೆ ಕುಳಿತುಕೊಂಡಿರುತ್ತಾರೆ. ಇದರ ಜೊತೆಗೆ, ಕೆಲಸ ಮಾಡುವ ಸ್ಥಳ ಅಥವಾ ಆಫೀಸ್ ತಲುಪುವುದಕ್ಕಾಗಿ ಕೆಟ್ಟ ಕೆಟ್ಟ ರಸ್ತೆಗಳಲ್ಲಿ ಎರಡು ಮೂರು ಗಂಟೆಗಳ ಕಾಲ ಸಂಚರಿಸುತ್ತಾರೆ. ಹೀಗೆ ನಮ್ಮ ಮಧ್ಯೆ ಇರುವ ಅತ್ಯಧಿಕ ಜನ ತಮ್ಮ ದಿನದ ಹೆಚ್ಚಿನ ಅವಧಿಯನ್ನು ಕುಳಿತುಕೊಂಡೇ ಕಳೆಯುತ್ತಾರೆ. ಹಾಗಾಗಿ ಕುಳಿತುಕೊಳ್ಳುವ ಭಂಗಿ ಸರಿಯಾಗಿ ಇಲ್ಲದಿದ್ದರೆ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದರ ಬಗ್ಗೆ ಸರ್ಜಾಪುರ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್- ನ್ಯೂರೊ ಸ್ಪೈನ್ ಸರ್ಜರಿ ಡಾ ಅಜಯ್ ಹೆಗ್ಡೆ (Dr. Ajay Hegde) ಅವರು ಈ ಕುರಿತು ಕೆಲವು ವಿಷಯಗಳನ್ನು ಟಿವಿ9 ಕನ್ನಡ ಜೊತೆ ಹಂಚಿಕೊಂಡಿದ್ದು ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.
ಡಾ ಅಜಯ್ ಹೆಗ್ಡೆ ಹೇಳುವ ಪ್ರಕಾರ, ಒಂದೇ ಜಾಗದಲ್ಲಿ ದೀರ್ಘಕಾಲ ಕುಳಿತುಕೊಳ್ಳುವುದು ಅಥವಾ ನಿಂತುಕೊಳ್ಳುವುದು, ದೇಹಕ್ಕೆ ಮತ್ತು ಭಂಗಿಗೆ ಪೂರಕವಲ್ಲದ ವಿನ್ಯಾಸ ಮತ್ತು ಚಲನಶೀಲತೆಯ ಕೊರತೆ, ಭಂಗಿಯ ಅಸಮತೋಲನ ಸೇರಿದಂತೆ ದಿನನಿತ್ಯ ರೂಢಿಸಿಕೊಂಡ ಹಲವಾರು ಅಭ್ಯಾಸಗಳು ಸ್ನಾಯು ಮತ್ತು ಮೂಳೆಗೆ ಸಂಬಂಧ ಪಟ್ಟ ಕಾಯಿಲೆಗಳಿಗೆ ಕಾರಣವಾಗುತ್ತದೆ. ಇವುಗಳಲ್ಲಿ ಹರ್ನಿಯೇಟೆಡ್ ಡಿಸ್ಕ್, ಕಾರ್ಪಲ್ ಟನಲ್ ಸಿಂಡ್ರೋಮ್ ಮತ್ತು ದೀರ್ಘಕಾಲದ ಬೆನ್ನು ನೋವು ಪ್ರಮುಖವಾಗಿವೆ. ವಿಶೇಷವಾಗಿ ಯುವ ಜನತೆಯಲ್ಲಿ ಕುತ್ತಿಗೆ ನೋವು, ಭುಜದ ಬಿಗಿತದಂತಹ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿರುವುದನ್ನು ಆರೋಗ್ಯ ತಜ್ಞರು ಗಮನಿಸಿದ್ದಾರೆ ಎಂದು ಹೇಳಿದ್ದಾರೆ.
ಬೆನ್ನು ನೋವಿನ ಸಮಸ್ಯೆ ಹೆಚ್ಚಳಕ್ಕೆ ಕಾರಣವೇನು?
ಕೊರೊನಾ ಸಾಂಕ್ರಾಮಿಕ ಕಡಿಮೆಯಾದ ನಂತರ ಉದ್ಯೋಗಿಗಳು ಮತ್ತೆ ಪುನಃ ಆಫೀಸ್ ಗಳಿಗೆ ಹೋಗಲು ಆರಂಭಿಸಿದ್ದು ಸಹಜವಾಗಿ ಪ್ರಯಾಣವನ್ನು ಪುನರಾರಂಭಿಸಿದ್ದಾರೆ. ಈ ಬದಲಾವಣೆಯು ಬೆನ್ನು ನೋವಿನ ಸಮಸ್ಯೆ 10 ರಿಂದ 30% ರಷ್ಟು ಹೆಚ್ಚಳಕ್ಕೆ ಕಾರಣವಾಗಿದೆ.
ಸ್ಥಿರವಾಗಿ ಕುಳಿತುಕೊಳ್ಳುವುದು, ದೀರ್ಘ ಪ್ರಯಾಣ ಮಾಡುವುದು ಮತ್ತು ಹೆಚ್ಚಿನ ಒತ್ತಡದಿಂದ ಸ್ನಾಯು- ಮೂಳೆಗೆ ಸಂಬಂಧಿಸಿದ ಕಾಯಿಲೆಗಳ ಹೆಚ್ಚಳಕ್ಕೆ ಕಾರಣವಾಗಿದೆ. ಕೇವಲ ವೃತ್ತಿಪರರು ಮಾತ್ರವಲ್ಲದೇ, ವಿದ್ಯಾರ್ಥಿಗಳು ಮತ್ತು ವಯಸ್ಕರನ್ನೂ ಸಹ ಈ ರೀತಿಯ ಸಮಸ್ಯೆ ವ್ಯಾಪಕವಾಗಿ ಬಾಧಿಸುತ್ತಿವೆ.
ವಾರಕ್ಕೆ 40 ಗಂಟೆಗಳಿಗಿಂತ ಹೆಚ್ಚು ಸಮಯ ಕುಳಿತು ಕೆಲಸ ಮಾಡುವವರು ಮತ್ತು ದೀರ್ಘ ಪ್ರಯಾಣ ಮಾಡುವವರಲ್ಲಿ ಈ ರೀತಿಯ ಸ್ನಾಯು- ಮೂಳೆಗಳ ನೋವು ಹೆಚ್ಚಾಗಿ ಕಂಡುಬರುತ್ತಿದೆ.
ದೈನಂದಿನ ಪ್ರಯಾಣದಿಂದಾಗುವ ಸಮಸ್ಯೆಗಳನ್ನು ಕಡಿಮೆ ಮಾಡಲು ರಸ್ತೆಗಳ ಗುಣಮಟ್ಟವನ್ನು ಸುಧಾರಿಸುವುದು ಮುಖ್ಯ. ಜೊತೆಗೆ ಕಚೇರಿಗಳಲ್ಲಿ ಸಮಯ ಸಿಕ್ಕಾಗ ವಿರಾಮ ತೆಗೆದುಕೊಂಡು ಸ್ವಲ್ಪ ಚಲಿಸಬೇಕು. ಒಂದೇ ಕಡೆಯಲ್ಲಿ ಗಂಟೆಗಟ್ಟಲೆ ಕುಳಿತುಕೊಳ್ಳುವುದಕ್ಕಿಂತ ಗಂಟೆಗೊಮ್ಮೆಯಾದರೂ ಎದ್ದು ತಿರುಗಾಡುವುದು ಒಳ್ಳೆಯದು. ಸಾಧ್ಯವಾದಲ್ಲಿ ಸಾರ್ವಜನಿಕ ಸಾರಿಗೆಯ ಬಳಕೆ ಮಾಡುವುದು. ಒಟ್ಟಾರೆ, ಬೆಂಗಳೂರಿನಲ್ಲಿ ಕೆಲಸ ಮತ್ತು ಪ್ರಯಾಣ ಸೇರಿದಂತೆ ದೈನಂದಿನ ಒತ್ತಡಗಳು ನಗರದ ಉದ್ಯೋಗಿಗಳ ಆರೋಗ್ಯ ಮತ್ತು ಭಂಗಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇದನ್ನು ಎದುರಿಸಲು ಕೆಲವು ಬದಲಾವಣೆ ಮಾಡಿಕೊಳ್ಳುವುದು ಬಹಳ ಒಳ್ಳೆಯದು.
ವಿಜಯಪುರ, ಜನವರಿ 12: ಬಿಜೆಪಿಯಿಂದ ಉಚ್ಛಾಟನೆಗೊಂಡಿರೋ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಹೈಕಮಾಂಡ್ ನಾಯಯಕರು ತಮ್ಮ ಜೊತೆ ನೇರ ಸಂಪರ್ಕದಲ್ಲಿ ಇರೋದಾಗಿ ಯತ್ನಾಳ್ ಹೇಳಿರೋದೀಗ ಭಾರಿ ಕುತೂಹಲ ಕೆರಳಿಸಿದೆ. ವಿಜಯಪುರ ಶಾಸಕ ಮರಳಿ ಬಿಜೆಪಿಗೆ ಬರ್ತಾರಾ ಎನ್ನುವ ಪ್ರಶ್ನೆಗಳು ಇತ್ತೀಚೆಗೆ ಮೇಲಿಂದ ಮೇಲೆ ಕೇಳಿಬರುತ್ತಿತ್ತು. ಈ ನಡುವೆ ಉಚ್ಛಾಟಿತ ನಾಯಕನ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದೆ. ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತೂ ಶಾಸಕ ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡೋದಾಗಿ ತಿಳಿಸಿದ್ದಾರೆ. ಅಲ್ಲದೆ, ಪಕ್ಷದ ಅಭ್ಯರ್ಥಿಗಳು ಆಹ್ವಾನಿಸಿದರೆ ಪ್ರಚಾರಕ್ಕೂ ಹೋಗಲು ಸಿದ್ಧವಿರುವುದಾಗಿ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿ, ಜನವರಿ 12: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಇಂದು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನವೆಂಬರ್ 10ರ ದೆಹಲಿ ಸ್ಫೋಟವನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ (UN) ಚಾರ್ಟರ್ ಪ್ರಕಾರ “ಸಮಗ್ರ ಮತ್ತು ನಿರಂತರ ರೀತಿಯಲ್ಲಿ” ಭಯೋತ್ಪಾದನೆಯನ್ನು ಎದುರಿಸಲು ಸಂಘಟಿತ ಅಂತರರಾಷ್ಟ್ರೀಯ ಪ್ರಯತ್ನಗಳಿಗೆ ಕರೆ ನೀಡಿದರು.
ಭಾರತ ಮತ್ತು ಜರ್ಮನಿ ಜಂಟಿಯಾಗಿ ನೇತೃತ್ವದ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮದ (ಐಪಿಒಐ) ಸಾಮರ್ಥ್ಯ ವೃದ್ಧಿ ಮತ್ತು ಸಂಪನ್ಮೂಲ ಹಂಚಿಕೆ ಸ್ತಂಭದ ಅಡಿಯಲ್ಲಿ ಚಟುವಟಿಕೆಗಳನ್ನು ಒಳಗೊಂಡಂತೆ ಈ ಪ್ರದೇಶದಲ್ಲಿ ಬರ್ಲಿನ್ನ ನಿರಂತರ ಪ್ರಕ್ರಿಯೆಗಳನ್ನು ಭಾರತ ಸ್ವಾಗತಿಸಿದೆ.
“ಯುಎನ್ 1267 ನಿರ್ಬಂಧಗಳ ಸಮಿತಿಯಲ್ಲಿ ಪಟ್ಟಿ ಮಾಡಲಾದವುಗಳನ್ನು ಒಳಗೊಂಡಂತೆ ಭಯೋತ್ಪಾದಕರು ಮತ್ತು ಭಯೋತ್ಪಾದಕ ಘಟಕಗಳ ವಿರುದ್ಧ ಸಹಕಾರವನ್ನು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಭಯೋತ್ಪಾದಕ ಸುರಕ್ಷಿತ ತಾಣಗಳು ಮತ್ತು ಮೂಲಸೌಕರ್ಯವನ್ನು ನಿರ್ಮೂಲನೆ ಮಾಡಲು ಹಾಗೂ ಅಂತಾರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಭಯೋತ್ಪಾದಕ ಜಾಲಗಳು ಮತ್ತು ಹಣಕಾಸು ಅಡ್ಡಿಪಡಿಸಲು ಎರಡೂ ದೇಶಗಳು ಕೆಲಸ ಮಾಡುವುದನ್ನು ಮುಂದುವರಿಸಲು ಕರೆ ನೀಡಿವೆ” ಎಂದು ಜಂಟಿ ಹೇಳಿಕೆ ತಿಳಿಸಿದೆ.
ಭಾರತ ಮತ್ತು ಜರ್ಮನ್ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಮೆರ್ಜ್ ಇಂದು 2 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ತಮ್ಮ ಭೇಟಿಯ ಮೊದಲ ದಿನದಂದು ಮೆರ್ಜ್ ಅಹಮದಾಬಾದ್ನಲ್ಲಿರುವ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು. ನಂತರ, ಅವರು ಮತ್ತು ಪ್ರಧಾನಿ ಮೋದಿ ಸಬರಮತಿ ನದಿ ದಂಡೆಗೆ ಭೇಟಿ ನೀಡಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿದರು.
ಇದರ ನಂತರ, ಇಬ್ಬರು ನಾಯಕರು ದ್ವಿಪಕ್ಷೀಯ ಸಭೆ ನಡೆಸಿದರು, ಈ ಸಂದರ್ಭದಲ್ಲಿ ಅವರು ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಾಜಾದಲ್ಲಿನ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. ಹಾಗೇ, ಭಯೋತ್ಪಾದನೆ ಮಾನವೀಯತೆಗೆ ಗಂಭೀರ ಬೆದರಿಕೆ ಎಂದು ಇಬ್ಬರೂ ಅಭಿಪ್ರಾಯಪಟ್ಟರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಚಿಕ್ಕಬಳ್ಳಾಪುರ, (ಜನವರಿ 12): ಕೆಎಸ್ಆರ್ಟಿಸಿ ಬಸ್ ನಲ್ಲಿ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ ಗ್ರಾಮದ ಮಹಿಳೆ ವನಜಾಕ್ಷಿ ಎಂಬಾಕೆ, ದೇವಸ್ಥಾನಕ್ಕೆ ಹೋಗುವ ಸಲುವಾಗಿ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಕ್ರಾಸ್ ನಿಂದ ಸೂಲಿಬೆಲೆಗೆ ತೆರಳಲು ಬಸ್ ಹತ್ತುತ್ತಿದ್ದ ವೇಳೆ, ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಆಂದ್ರ ಪ್ರದೇಶದ ಕುಪ್ಪಂ ಮೂಲದ ಮೀನಾಕ್ಷಿಯನ್ನ ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.