Headlines

Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ

ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಈ ಮೂಕಪ್ರಾಣಿಗಳು ಮನುಷ್ಯನ ಆಪ್ತ ಸ್ನೇಹಿತನಾಗಿ ಬಿಡುತ್ತವೆ. ಮನೆಯ ಸದಸ್ಯರು  ಎಲ್ಲಿಗಾದ್ರೂ ಹೊರಟು ನಿಂತರೆ ಸಾಕು, ಅವರನ್ನೇ ಹಿಂಬಾಲಿಸುತ್ತವೆ. ಇನ್ನು, ಮನೆಯಲ್ಲಿರುವ ಪುಟಾಣಿ ಮಕ್ಕಳಿಗೆ ಕಾವಲಾಗಿ ನಿಲ್ಲುತ್ತವೆ. ಈ ವಿಡಿಯೋದಲ್ಲಿ ಅಂತಹದ್ದೇ ದೃಶ್ಯವಿದೆ. ಪುಟ್ಟ ಹುಡುಗಿ ಶಾಲೆಗೆ ಹೊರಟು ನಿಂತಿದ್ದು, ಆಕೆಯನ್ನು ಸ್ಕೂಲ್ ಬಸ್‌ಗೆ ಹತ್ತಿಸಿ ಜೋಪಾನವಾಗಿ ಕಳುಹಿಸಿಕೊಟ್ಟಿದೆ. ಈ ಹೃದಯಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. StreetdogofBombay ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ…

Read More

ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ

ರಮ್ಯಾ, ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ (Akasha Movie) ಮರು ಬಿಡುಗಡೆ ಆಗಿದೆ. ರಾಘವೇಂದ್ರ ರಾಜ್​ಕುಮಾರ್ ಅವರು ಈ ಸಿನಿಮಾ ನೋಡಲು ಇಂದು (ಮಾರ್ಚ್ 13) ಚಿತ್ರಮಂದಿರಕ್ಕೆ ಬಂದಿದ್ದಾರೆ. ಅಭಿಮಾನಿಗಳ ಜೊತೆ ಕುಳಿತು ಅವರು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತಾಡಿದರು. ‘ಪುನೀತ್ ಇಲ್ಲದೇ ಈ ಸಿನಿಮಾ ನೋಡಲು ಕಷ್ಟ ಆಗುತ್ತಿದೆ. ಮತ್ತೆ ಆ ದಿನಗಳು ವಾಪಸ್ ಬರಬಾರದೇ ಎನಿಸುತ್ತದೆ. ಆಕಾಶ್ ಸಿನಿಮಾ ಈಗ ನೋಡೋಕೂ ಅಷ್ಟೇ ಚೆನ್ನಾಗಿದೆ. ಅಪ್ಪು ಮತ್ತು ರಮ್ಯಾ ಜೋಡಿ…

Read More

ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಮೇಲೆ 2 ಬಾರಿ ಮಾರಣಾಂತಿಕ ದಾಳಿ; ಇರಾನ್ ಸಂಸದ ಮಾಹಿತಿ

ವಾಷಿಂಗ್ಟನ್, ಮಾರ್ಚ್ 13: ಇರಾನ್‌ನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ (Mojtaba Khamenei) ಇತ್ತೀಚಿನ ದಿನಗಳಲ್ಲಿ ಎರಡು ಮಾರಣಾಂತಿಕ ದಾಳಿಗಳಿಂದ ಬದುಕುಳಿದಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದಕ್ಕೆ ಇರಾನ್ ಸಂಸತ್ ಸದಸ್ಯರೊಬ್ಬರು ತಿಳಿಸಿದ್ದಾರೆ. ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಹಗೆತನದ ಮಧ್ಯೆ ಈ ದಾಳಿಗಳು ನಡೆದಿವೆ ಎಂದು ಸಂಸದ ಮೊಹಮ್ಮದ್ರೆಜಾ ರೆಝಾಯಿ ಕೌಚಿ ಹೇಳಿದ್ದಾರೆ. ಇರಾನ್‌ನ ರಾಜ್ಯ ಸುದ್ದಿ ಸಂಸ್ಥೆ ಇಸ್ಲಾಮಿಕ್ ರಿಪಬ್ಲಿಕ್ ನ್ಯೂಸ್ ಏಜೆನ್ಸಿಯೊಂದಿಗೆ ಮಾತನಾಡಿದ ಅವರು, ದೇಶದ ಮಾಜಿ ಸುಪ್ರೀಂ ಲೀಡರ್ ಅಲಿ…

Read More

ಜೈಲ್‌ ನರಕ…ಯಾರಿಗೂ ಬೇಡ: 13 ವರ್ಷ ಬಳಿಕ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್

ಬೆಂಗಳೂರು, (ಮಾರ್ಚ್ 13): ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಲ್ಲಿನ ಸಜಾಬಂಧಿಗಳಾಗಿ ಸೆರೆವಾಸ ಅನುಭವಿಸುತ್ತಿದ್ದ 30 ಮಂದಿ ಸಜಾಬಂಧಿಗಳಿಗೆ ಇಂದು (ಮಾರ್ಚ್ 13) ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ. ಇನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ 14 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದ್ರೆ, ಸನ್ನಡತೆ ಆಧಾರದ ಮೇಲೆ ಸರ್ಕಾರ ಅವಧಿಪೂರ್ವ ರಿಲೀಸ್ ಮಾಡಿದೆ. ಇನ್ನು ಇದೇ ವೇಳೆ ತುಮಕೂರಿನ ಕೈದಿಯೋರ್ವ ಜೈಲಿನಿಂದ ಬಿಡುಗಡೆಯಾಗಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ….

Read More

ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟಿ, ದಿವಂಗತ ಮಧುಬಾಲಾ ಅವರ ಬಯೋಪಿಕ್ (Madhubala Biopic) ಬಗ್ಗೆ ಬಿಟೌನ್‌ನಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಈ ಚಿತ್ರದಲ್ಲಿ ಮಧುಬಾಲಾ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಅನೇಕ ನಟಿಯರ ಹೆಸರು ಕೇಳಿಬರುತ್ತಿದೆ. ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ (Sai Pallavi) ಅವರನ್ನು ಈ ಪಾತ್ರಕ್ಕೆ ಆಯ್ಕೆ ಮಾಡುವ ಆಲೋಚನೆ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಇತ್ತು ಎನ್ನಲಾಗಿದೆ. ವರದಿಗಳ ಪ್ರಕಾರ, ಖ್ಯಾತ ನಿರ್ದೇಶಕ…

Read More

ರನೌಟ್ ಮಾಡಿದಕ್ಕೆ ಕೆರಳಿ ಕೆಂಡವಾದ ಪಾಕ್ ಆಟಗಾರ; ಇದರಲಿ ಯಾರದ್ದು ತಪ್ಪು? ನೀವೇ ನೋಡಿ

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಬಾಂಗ್ಲಾದೇಶ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಹೀಗಾಗಿ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್‌ ಮಾಡಿ ಉತ್ತಮ ಆರಂಭವನ್ನು ಪಡೆದುಕೊಂಡಿತು. ಆದಾಗ್ಯೂ ಪಾಕ್ ಇನ್ನಿಂಗ್ಸ್​ನ 39ನೇ ಓವರ್​ನಲ್ಲಿ ನಡೆದ ಅದೊಂದು ಘಟನೆ ಪಾಕ್ ಟಿ20 ತಂಡದ ನಾಯಕ ಸಲ್ಮಾನ್ ಆಘಾ ಕೆರಳುವಂತೆ ಮಾಡಿದಲ್ಲದೆ, ವಿಕೆಟ್ ಕೂಡ ಕಳೆದುಕೊಳ್ಳುವಂತೆ ಮಾಡಿತು. ಢಾಕಾದಲ್ಲಿ ನಡೆದ ಎರಡನೇ ಏಕದಿನ ಪಂದ್ಯದ ಪಾಕಿಸ್ತಾನದ ಇನ್ನಿಂಗ್ಸ್‌ನ…

Read More

ಏಯ್‌.. ಏಯ್‌ ಅಂದ್ರೂ ಕೇಳದ ಯುವಕ ಸ್ಟೇಜ್​​​​ ಮೇಲೇರಿ ಸಿಎಂಗೆ ಹೇಳಿದ್ದೇನು ಗೊತ್ತಾ?

ಮೈಸೂರು, (ಮಾರ್ಚ್ 13): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಮಾರ್ಚ್ 13) ತವರು ಕ್ಷೇತ್ರ ಮೈಸೂರಿನ ವರುಣಾಕ್ಕೆ ಭೇಟಿ ನೀಡಿದ್ದು, ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದ ಸಂಪ್ರೋಕ್ಷಣ, ಪುನರ್ ಪ್ರತಿಷ್ಠಾಪನೆ, ಕುಂಭಾಭಿಷೇಕ ಹಾಗೂ ಮಹಾದ್ವಾರದ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ತೆರೆ ವಾಹನದಲ್ಲಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ಇನ್ನು ಇದೇ ವೇಳೆ ಭದ್ರತಾಲೋಪವಾಗಿದೆ. ಸಿದ್ದರಾಮ್ಯಯ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಯುವಕನೋರ್ವ ಏಕಾಏಕಿ ವೇದಿಕೆ ನುಗ್ಗಿದ್ದು, ನಮ್ಮ…

Read More

T20 World Cup 2026: ಜಾಹೀರಾತಿನಿಂದಲೇ 1500 ಕೋಟಿ ರೂ. ಆದಾಯ..!

2026 ರ ಟಿ20 ವಿಶ್ವಕಪ್​ಗೆ ಅದ್ಧೂರಿ ತೆರೆಬಿದ್ದಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ಗೆಲುವಿಗಾಗಿ ಭಾರತ ತಂಡಕ್ಕೆ ಐಸಿಸಿ ಹಾಗೂ ಬಿಸಿಸಿಐ ಎರಡರಿಂದಲೂ ಭರ್ಜರಿ ಬಹುಮಾನ ಸಿಕ್ಕಿದೆ. ಇನ್ನು ಈ ಟೂರ್ನಿ ಆಯೋಜಿಸಿದ್ದ ಐಸಿಸಿಗೆ ಸಿಕ್ಕ ಹಣವೆಷ್ಟು ಎಂಬುದು ಇದುವರೆಗೂ ತಿಳಿದುಬಂದಿಲ್ಲ. ಆದಾಗ್ಯೂ ಸದ್ಯ ಹೊರಬಿದ್ದಿರುವ ಮಾಹಿತಿ ಪ್ರಕಾರ, ಕೇವಲ ಜಾಹೀರಾತು ಪ್ರಸಾರದಿಂದಲೇ ಐಸಿಸಿ ಖಜಾನೆಗೆ…

Read More

ಪಿಎಂ ಕಿಸಾನ್ ಸ್ಕೀಮ್; ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ; ನಿಮಗೆ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

ನವದೆಹಲಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಮ್​ನ ಗುವಾಹಟಿಯಲ್ಲಿ ಇಂದು ಪಿಎಂ ಕಿಸಾನ್ ಸ್ಕೀಮ್​ನಡಿ ((PM Kisan scheme) 22ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 9.32 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂನಂತೆ ಒಟ್ಟು 18,640 ಕೋಟಿ ರೂ ಹಾಕಲಾಗಿದೆ. ಕಳೆದ ಬಾರಿಗಿಂತ ಈ ಸಲ ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ ಆಗಿದೆ. ಇಕೆವೈಸಿ ಆಗಿಲ್ಲದಿರುವುದು ಸೇರಿದಂತೆ ವಿವಿಧ ಕಾರಣಗಳಿಗೆ ಲಕ್ಷಾಂತರ ಮಂದಿಗೆ ಯೋಜನೆಯ ಲಾಭ ಕೈತಪ್ಪಿದೆ. 21ನೇ…

Read More

ಬೀದರ್​​ನ​ ಬಿದ್ರಿ ಕಲೆಗೂ ತಟ್ಟಿದ ಯುದ್ಧದ ಬಿಸಿ: ವಿದೇಶಿ ವಹಿವಾಟು ಕುಸಿತ; ಸಂಕಷ್ಟದಲ್ಲಿ ಕಲಾವಿದರು

ಬೀದರ್​​​, ಮಾರ್ಚ್​​ 13: ಜಗತ್ತಿನಾದ್ಯಾಂತ ಪ್ರಸಿದ್ಧಿ ಪಡೆದಿರುವ ಐತಿಹಾಸಿಕ ಬೀದರಿ ಕಲೆಗೆ ಅಮೆರಿಕಾ, ಇಸ್ರೇಲ್, ಇರಾನ್ ಯುದ್ಧದಿಂದಾಗಿ (iran israel war) ವ್ಯಾಪಾರ ಕುಸಿತವಾಗಿದೆ. ಬೀದರಿ ಕಲೆಯನ್ನ ನಂಬಿಕೊಂಡು ಬದುಕು ಕಟ್ಟಿಕೊಂಡಿರುವ ಕುಟುಂಬಗಳಿಗೆ ಸಂಕಷ್ಟ ಎದುರಾಗಿದೆ. ಬೀದರಿ ಕಲೆಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕರು ಈ ಕಲೆಯನ್ನ ಪ್ರೋತ್ಸಾಹಿಸಬೇಕಾದ ಸರ್ಕಾರ ಕಂಡುಕಾಣದಂತೆ ಕುಳಿತುಬಿಟ್ಟಿದ್ದು, ಯುದ್ಧದ ಎಫೆಕ್ಟ್​​ ಹಿನ್ನಲೆ ಬಿದ್ರಿ ಕಲಾಕೃತಿಗಳು ಮಾರಾಟವಾಗುತ್ತಿಲ್ಲ. ಬೀದರ್ ಜಿಲ್ಲೆ ಎಂದ ಕೂಡಲೇ ನಮಗೆ ತಕ್ಷಣ ನೆನಪಾಗುವುದು ಜಗತ್ತಿನಾದ್ಯಾಂತ ಪ್ರಸಿದ್ಧಿ ಪಡೆದಿರುವ ಬೀದರಿ ಕಲೆ….

Read More