ಪಹಲ್ಗಾಮ್ ದಾಳಿ, ದೆಹಲಿ ಸ್ಫೋಟವನ್ನು ಖಂಡಿಸಿದ ಜರ್ಮನ್ ಚಾನ್ಸೆಲರ್ ಮೆರ್ಜ್ – Kannada News | PM Modi and German Chancellor Friedrich Merz condemn Pahalgam attack and Delhi blast

ನವದೆಹಲಿ, ಜನವರಿ 12: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಇಂದು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನವೆಂಬರ್ 10ರ ದೆಹಲಿ ಸ್ಫೋಟವನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ (UN) ಚಾರ್ಟರ್ ಪ್ರಕಾರ “ಸಮಗ್ರ ಮತ್ತು ನಿರಂತರ ರೀತಿಯಲ್ಲಿ” ಭಯೋತ್ಪಾದನೆಯನ್ನು ಎದುರಿಸಲು ಸಂಘಟಿತ ಅಂತರರಾಷ್ಟ್ರೀಯ ಪ್ರಯತ್ನಗಳಿಗೆ ಕರೆ ನೀಡಿದರು.

ಭಾರತ ಮತ್ತು ಜರ್ಮನಿ ಜಂಟಿಯಾಗಿ ನೇತೃತ್ವದ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮದ (ಐಪಿಒಐ) ಸಾಮರ್ಥ್ಯ ವೃದ್ಧಿ ಮತ್ತು ಸಂಪನ್ಮೂಲ ಹಂಚಿಕೆ ಸ್ತಂಭದ ಅಡಿಯಲ್ಲಿ ಚಟುವಟಿಕೆಗಳನ್ನು ಒಳಗೊಂಡಂತೆ ಈ ಪ್ರದೇಶದಲ್ಲಿ ಬರ್ಲಿನ್‌ನ ನಿರಂತರ ಪ್ರಕ್ರಿಯೆಗಳನ್ನು ಭಾರತ ಸ್ವಾಗತಿಸಿದೆ.

ಇದನ್ನೂ ಓದಿ: ಜರ್ಮನಿ ಅಧ್ಯಕ್ಷ ಫ್ರೆಡರಿಚ್ ಮೆರ್ಜ್ ಮತ್ತು ನರೇಂದ್ರ ಮೋದಿಯಿಂದ ಸಿಇಒಗಳ ಸಭೆ

“ಯುಎನ್ 1267 ನಿರ್ಬಂಧಗಳ ಸಮಿತಿಯಲ್ಲಿ ಪಟ್ಟಿ ಮಾಡಲಾದವುಗಳನ್ನು ಒಳಗೊಂಡಂತೆ ಭಯೋತ್ಪಾದಕರು ಮತ್ತು ಭಯೋತ್ಪಾದಕ ಘಟಕಗಳ ವಿರುದ್ಧ ಸಹಕಾರವನ್ನು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಭಯೋತ್ಪಾದಕ ಸುರಕ್ಷಿತ ತಾಣಗಳು ಮತ್ತು ಮೂಲಸೌಕರ್ಯವನ್ನು ನಿರ್ಮೂಲನೆ ಮಾಡಲು ಹಾಗೂ ಅಂತಾರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಭಯೋತ್ಪಾದಕ ಜಾಲಗಳು ಮತ್ತು ಹಣಕಾಸು ಅಡ್ಡಿಪಡಿಸಲು ಎರಡೂ ದೇಶಗಳು ಕೆಲಸ ಮಾಡುವುದನ್ನು ಮುಂದುವರಿಸಲು ಕರೆ ನೀಡಿವೆ” ಎಂದು ಜಂಟಿ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಮುಂದಿನ ವರ್ಷ ದೆಹಲಿಗೆ ಟ್ರಂಪ್ ಭೇಟಿ ಸಾಧ್ಯತೆ, ಭಾರತ ನಮ್ಮ ಅತ್ಯಗತ್ಯ ಪಾಲುದಾರ; ಅಮೆರಿಕದ ರಾಯಭಾರಿ ಹೇಳಿದ್ದೇನು?

ಭಾರತ ಮತ್ತು ಜರ್ಮನ್ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಮೆರ್ಜ್ ಇಂದು 2 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ತಮ್ಮ ಭೇಟಿಯ ಮೊದಲ ದಿನದಂದು ಮೆರ್ಜ್ ಅಹಮದಾಬಾದ್‌ನಲ್ಲಿರುವ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು. ನಂತರ, ಅವರು ಮತ್ತು ಪ್ರಧಾನಿ ಮೋದಿ ಸಬರಮತಿ ನದಿ ದಂಡೆಗೆ ಭೇಟಿ ನೀಡಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿದರು.

ಇದರ ನಂತರ, ಇಬ್ಬರು ನಾಯಕರು ದ್ವಿಪಕ್ಷೀಯ ಸಭೆ ನಡೆಸಿದರು, ಈ ಸಂದರ್ಭದಲ್ಲಿ ಅವರು ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಾಜಾದಲ್ಲಿನ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. ಹಾಗೇ, ಭಯೋತ್ಪಾದನೆ ಮಾನವೀಯತೆಗೆ ಗಂಭೀರ ಬೆದರಿಕೆ ಎಂದು ಇಬ್ಬರೂ ಅಭಿಪ್ರಾಯಪಟ್ಟರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ SP – Kannada News | Shidlaghatta Police Arrests Andra Pradesh Woman For theft 240 gram Gold In Chikkaballapur

ಚಿಕ್ಕಬಳ್ಳಾಪುರ, (ಜನವರಿ 12): ಕೆಎಸ್​​ಆರ್​​ಟಿಸಿ ಬಸ್ ನಲ್ಲಿ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ ಗ್ರಾಮದ ಮಹಿಳೆ ವನಜಾಕ್ಷಿ ಎಂಬಾಕೆ, ದೇವಸ್ಥಾನಕ್ಕೆ ಹೋಗುವ ಸಲುವಾಗಿ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಕ್ರಾಸ್ ನಿಂದ ಸೂಲಿಬೆಲೆಗೆ ತೆರಳಲು ಬಸ್ ಹತ್ತುತ್ತಿದ್ದ ವೇಳೆ, ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಆಂದ್ರ ಪ್ರದೇಶದ ಕುಪ್ಪಂ ಮೂಲದ ಮೀನಾಕ್ಷಿಯನ್ನ ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದುಗಳು ನೋಡಿ.. – Kannada News | Bigg Boss Kannada Season 12 Ashwini Gowda wants her fans to call with these titles

ನಟಿ, ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ಬಿಗ್ ಬಾಸ್ ಫಿನಾಲೆ (Bigg Boss Kannada Finale) ವಾರಕ್ಕೆ ಕಾಲಿಟ್ಟಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಯಾವುದೇ ಟಾಸ್ಕ್ ಇಲ್ಲ. ಆದರೆ ಕೆಲವು ಚಟುವಟಿಕೆಗಳನ್ನು ನೀಡಲಾಗಿದೆ. ಅಭಿಮಾನಿಗಳು ನಿಮ್ಮನ್ನು ಯಾವ ಬಿರುದುಗಳಿಂದ ಗುರುತಿಸಬೇಕು ಎಂಬ ಇಚ್ಛೆ ಇದೆ ಎಂದು ಸ್ಪರ್ಧಿಗಳಿಗೆ ಬಿಗ್ ಬಾಸ್ ಕೇಳಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರು ತಮ್ಮ ಆಯ್ಕೆಗಳನ್ನು ತಿಳಿಸಿದ್ದಾರೆ. ‘ಛಲಗಾರ್ತಿ ಅಶ್ವಿನಿ, ಹಠವಾದಿ ಅಶ್ವಿನಿ, ಕಿಚ್ಚು ಅಶ್ವಿನಿ, ಬೆಂಕಿ ಅಶ್ವಿನಿ, ಖಡಕ್ ಅಶ್ವಿನಿ’ ಎಂಬಿತ್ಯಾದಿ ಬಿರುದುಗಳನ್ನು ಅಶ್ವಿನಿ ಗೌಡ ಅವರು ಸೂಚಿಸಿದ್ದಾರೆ. ಗಿಲ್ಲಿ ನಟ (Gilli Nata) ಅವರು ‘ಪಳಾರ್ ಗಿಲ್ಲಿ, ಕಲಾಕಾರ್ ಗಿಲ್ಲಿ, ಕಿತಾಪತಿ ಕಿಂಗ್, ಮಾತಿನ ಮಲ್ಲ’ ಎಂಬಿತ್ಯಾದಿ ಬಿರುದುಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಬರಲಿದೆ. ವೀಕ್ಷಕರ ಕೌತುಕ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜೈಲಿನಲ್ಲಿರುವ ಮಗನಿಗೆ ಖಾಸಗಿ ಭಾಗದಲ್ಲಿ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದ್ದ ತಾಯಿ – Kannada News | Bengaluru: Mother Caught Hiding Mobile Phone in Private Parts While Visiting Son at Parappana Agrahara Jail

ಬೆಂಗಳೂರು, ಜನವರಿ 12: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಇತ್ತೀಚೆಗೆ ಪರಿಶೀಲನೆ ನಡೆಸಿದ್ದಾಗ ಮೊಬೈಲ್ (Mobile)​ ಹಾಗೂ ಸಿಮ್​ ಕಾರ್ಡ್​ಗಳು ಪತ್ತೆಯಾಗಿದ್ದವು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಜೈಲಿನಲ್ಲಿರುವ ಮಗನ ಭೇಟಿಗೆ ಬಂದಿದ್ದ ತಾಯಿ ತಮ್ಮ ಖಾಸಗಿ ಭಾಗದಲ್ಲಿ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದಿದ್ದಾರೆ. ಸದ್ಯ ತಾಯಿ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

ಜೈಲಿನಲ್ಲಿರುವ ಮಗ ಭರತ್​​ನನ್ನು ನೋಡಲು ತಾಯಿ ಲಕ್ಷ್ಮೀ ನರಸಮ್ಮ ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದರು. ವಿಸಿಟರ್ ಪಾಸ್ ಪಡೆದುಕೊಂಡು ಬಂದಿದ್ದ ಲಕ್ಷ್ಮೀ ನರಸಮ್ಮರನ್ನು ತಪಾಸಣೆ ಮಾಡಿದಾಗ ಗುಪ್ತಾಂಗದಲ್ಲಿ ಮೊಬೈಲ್​ ಇಟ್ಕೊಂಡು ಬಂದಿದ್ದು ಪತ್ತೆ ಆಗಿದೆ.

ಎಫ್​ಐಆರ್​ನಲ್ಲಿ ಏನಿದೆ?

ಕೇಂದ್ರ ಕಾರಾಗೃಹದ ಪ್ರಭಾರ ಅಧೀಕ್ಷಕ ಪರಮೇಶ್ ಹೆಚ್.ಎ ಅವರ ತಮ್ಮ ಸಂಸ್ಥೆಯ ಸಿಬ್ಬಂದಿ ಕು. ವಸಂತಮ್ಮ ವೀಕ್ಷಕಿ ಮುಖ್ಯ ವೀಕ್ಷಕರು ಮುಖಾಂತರ ಕಳುಹಿಸಿದ ದೂರಿನ ಸಾರಾಂಶವೇನೆಂದರೆ ಕೇಂದ್ರ ಕಾರಾಗೃಹದ ಮುಖ್ಯದ್ವಾರದ ಹೊರಗೆ ಎಡಭಾಗದಲ್ಲಿರುವ ತಪಾಸಣಾ ವಿಭಾಗ-01 (ಸಾಮಾನ್ಯ ಸಂದರ್ಶನ ವಿಭಾಗ) ಬಂದಿಗಳ ಸಂದರ್ಶನಕ್ಕೆ ಬರುವ ಸಾರ್ವಜನಿಕರನ್ನು ಮತ್ತು ಅವರು ತರುವಂತಹ ವಸ್ತುಗಳನ್ನು ತಪಾಸಣೆ ಮಾಡಲು ಸಾಮಾನ್ಯ ಕರ್ತವ್ಯಕ್ಕೆ ಕೆಎಸ್​ಐಎಸ್​ಎಫ್ ಮತ್ತು ಸಿಬ್ಬಂದಿಯನ್ನು  ನಿಯೋಜಿಸಲಾಗಿತ್ತು.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಅಲೋಕ್​​ ಕುಮಾರ್​​ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ

ಜನವರಿ 02ರಂದು ಸಮಯ ಸುಮಾರು ಮಧ್ಯಾಹ್ನ 12:10 ಗಂಟೆಗೆ ಸಾಮಾನ್ಯ ಸಂದರ್ಶನಕ್ಕೆ ಲಕ್ಷ್ಮೀ ನರಸಮ್ಮ (38) ಅವರು ವಿಸಿಟರ್ ಪಾಸ್ ಪಡೆದುಕೊಂಡು 9689/2205 ವಿಚಾರಣಾಧೀನಾ ಸಂಖ್ಯೆ ಹೊಂದಿರುವ ಭರತ್ ಎಂಬ ಕಾರಾಗೃಹ ಬಂದಿಯ ಸಂದರ್ಶನಕ್ಕೆ ಬಂದ ಸಂದರ್ಭದಲ್ಲಿ ತಪಾಸಣಾ ಕರ್ತವ್ಯದಲ್ಲಿದ್ದ ಆಶಾರಾಣಿ ವೈ ಎನ್, ತಪಾಸಣಾ ಕೊಠಡಿಗೆ ಕರೆದುಕೊಂಡು ಹೋಗಿ ಭೌತಿಕವಾಗಿ ತಪಾಸಣೆ ನಡೆಸಿದಾಗ, ಖಾಸಗಿ ಭಾಗದೊಳಗೆ ಒಂದು ಸಂಖ್ಯೆಯ ಬೇಸಿಕ್ ಕಂಪನಿಯ ನೀಲಿ ಬಣ್ಣದ ಮೊಬೈಲ್ (ಸಿಮ್ ಸಹಿತ) ಪತ್ತೆ ಆಗಿದೆ.

ಇದನ್ನೂ ಓದಿ: ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ಅಲೋಕ್​​ ಕುಮಾರ್​​ : ದಾಸನ ಬಗ್ಗೆ ಹೇಳಿದ್ದಿಷ್ಟು

ಮಹಿಳೆಯು ಕಾರಾಗೃಹದ ನಿಯಮ ಉಲ್ಲಂಘನೆ ಮಾಡಿ ಕೆಎಸ್​ಐಎಸ್​ಎಫ್​ ಸಿಬ್ಬಂದಿಯವರ ಕಣ್ಣಪ್ಪಿಸಿ ಕಾರಾಗೃಹದ ಒಳಗಡೆ ನಿಷೇಧಿತ ವಸ್ತು, ಸಾಗಿಸಲು ಪ್ರಯತ್ನಿಸಿರುವುದರಿಂದ ಲಕ್ಷ್ಮೀ ನರಸಮ್ಮ ಮತ್ತು ವಿಚಾರಣಾ ಬಂದಿ ಭರತ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs NZ: ತಂಡಕ್ಕೆ ಆಯ್ಕೆಯಾದರೂ ಆಯುಷ್ ಬದೋನಿಗೆ ಆಡುವ ಅವಕಾಶವಿಲ್ಲ – Kannada News | IND vs NZ 2nd ODI: Sundar Injury Blow, Reddy Set for Rajkot Debut; Kohli Eyes Ton

ವರದಿಗಳ ಪ್ರಕಾರ, ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೂ, ದೆಹಲಿ ನಾಯಕ ಆಯುಷ್ ಬದೋನಿ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯಕ್ಕಾಗಿ ಕಾಯಬೇಕಾಗುತ್ತದೆ. ಎರಡನೇ ಪಂದ್ಯದಲ್ಲಿ ಆಯುಷ್​ಗೆ ಆಡುವ ಅವಕಾಶ ಸಿಗುವ ಸಾಧ್ಯತೆಗಳಿಲ್ಲ. ತಂಡದ ಆಡಳಿತ ಮಂಡಳಿಯು ಬಡೋನಿಗಿಂತ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಆದ್ಯತೆ ನೀಡಲಿದೆ ಎಂದು ವರದಿಯಾಗಿದ್ದು, ಮುಂದಿನ ಏಕದಿನ ಪಂದ್ಯದಲ್ಲಿ ಅವರು ಆಡುವುದನ್ನು ಕಾಣಬಹುದು.

Source link

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಮಲ್ಲಿಕಾರ್ಜುನ ಖರ್ಗೆ – Kannada News | AICC President Mallikarjun kharge asks to Siddaramaiah And DK Shivakumar to development In North Karnataka

ಕಲಬುರಗಿ, (ಜನವರಿ 12): ಉತ್ತರ ಕರ್ನಾಟದ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun kharge) ಅವರು ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಖರ್ಗೆ, ಈ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿ.ಕೆ.ಶಿವಕುಮಾರ್​ ಹೇಳುತ್ತಾರೆ. ನೀವು ಇಲ್ಲಿ ಹುಟ್ಟುವುದು ಬೇಡ. ನಾವು ಅಲ್ಲಿ ಹುಟ್ಟುವುದು ಬೇಡ. ನಿಮ್ಮ ಮೈಸೂರು, ಬೆಂಗಳೂರಿನ ರೀತಿ ಅಭಿವೃದ್ಧಿ ಮಾಡಿ ಸಾಕು. ಮುಖ್ಯಮಂತ್ರಿ ಹಾಗೂ ಡಿಸಿಎಂ ಈ ಭಾಗದ ಬಗ್ಗೆ ಗಮನ ಕೊಡಿ. ದೆಹಲಿಯಿಂದ ಬಂದು ನಾನು ಜನರಿಗೆ ಪ್ರಚೋದನೆ ಕೊಡ್ತಿಲ್ಲ. ಅದರ ಬದಲಾಗಿ ನಿಮ್ಮ ಭಾಗದಷ್ಟೇ ನಮ್ಮ ಭಾಗವನ್ನು ಅಭಿವೃದ್ಧಿ ಮಾಡಿ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs UPW Live Score, WPL 2026: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ – Kannada News | RCB vs UPW Live Score today WPL 2026 match scorecard, Women’s Premier League Royal Challengers Bengaluru vs UP Warriorz Match 05 In Kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಐದನೇ ಪಂದ್ಯವು ಜನವರಿ 12, ಸೋಮವಾರ ನವಿ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಗೆಲುವಿನ ಗುರಿಯಲ್ಲಿದ್ದರೆ, ಯುಪಿ ವಾರಿಯರ್ಸ್​ ಮೊದಲ ಗೆಲುವಿಗೆ ಎದುರು ನೋಡುತ್ತಿದೆ.

Source link

RCB vs UPW Live Score, WPL 2026: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ – Kannada News | Royal challengers bengaluru vs up warriorz live score wpl 2026 match scorecard online at dr dy patil sports academy navi mumbai in kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಐದನೇ ಪಂದ್ಯವು ಜನವರಿ 12, ಸೋಮವಾರ ನವಿ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಗೆಲುವಿನ ಗುರಿಯಲ್ಲಿದ್ದರೆ, ಯುಪಿ ವಾರಿಯರ್ಸ್​ ಮೊದಲ ಗೆಲುವಿಗೆ ಎದುರು ನೋಡುತ್ತಿದೆ.

Source link

ಮುಂದಿನ ವರ್ಷ ದೆಹಲಿಗೆ ಟ್ರಂಪ್ ಭೇಟಿ ಸಾಧ್ಯತೆ, ಭಾರತ ನಮ್ಮ ಅತ್ಯಗತ್ಯ ಪಾಲುದಾರ; ಅಮೆರಿಕದ ರಾಯಭಾರಿ ಹೇಳಿದ್ದೇನು? – Kannada News | Donald Trump and PM Modi friendship is real India essential partner says US ambassador

ನವದೆಹಲಿ, ಜನವರಿ 12: ಭಾರತ ಮತ್ತು ಅಮೆರಿಕದ ನಡುವೆ ಭಾರತಕ್ಕೆ ನಿಯೋಜನೆಯಾಗಿರುವ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. “ಭಾರತ ಇಂದಿಗೂ ಅಮೆರಿಕಕ್ಕೆ ಅತ್ಯಗತ್ಯ ಪಾಲುದಾರನಾಗಿ ಉಳಿದಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನಡುವಿನ ಸ್ನೇಹ ತುಂಬಾ ನೈಜವಾದುದು. ಭಾರತಕ್ಕಿಂತ ಹೆಚ್ಚು ಅಗತ್ಯ ಪಾಲುದಾರ ಅಮೆರಿಕಕ್ಕೆ ಬೇರಾವುದೂ ಇಲ್ಲ” ಎಂದು ಗೋರ್ ಹೇಳಿದ್ದಾರೆ.

“ಭಾರತದಂತೆ ಬೇರೆ ಯಾವುದೇ ರಾಷ್ಟ್ರ ಅಮೆರಿಕಕ್ಕೆ ಅತ್ಯಗತ್ಯವಾಗಿಲ್ಲ. ಇಂದಿನಿಂದ (ಜನವರಿ 12) ಅಮೆರಿಕ ಮತ್ತು ಭಾರತ ತಮ್ಮ ಮುಂದಿನ ಸುತ್ತಿನ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಪುನರಾರಂಭಿಸಲಿವೆ” ಎಂದು ಅವರು ಘೋಷಿಸಿದರು. ಅಮೆರಿಕ ರಾಯಭಾರ ಕಚೇರಿಯಲ್ಲಿ ದಕ್ಷಿಣ ಮತ್ತು ಮಧ್ಯ ಏಷ್ಯಾದ ವಿಶೇಷ ರಾಯಭಾರಿಯೂ ಆಗಿರುವ ಗೋರ್, ಮುಂದಿನ ವರ್ಷದ ವೇಳೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕದೊಂದಿಗೆ ಟ್ರೇಡ್ ಡೀಲ್, ಮುಗಿಯದ ತೊಡಕು; ದಕ್ಷಿಣ ಅಮೆರಿಕ ಸೇರಿದಂತೆ ಬೇರೆ ಬೇರೆ ಮಾರುಕಟ್ಟೆಗಳ ಮೇಲೆ ಭಾರತದ ಕಣ್ಣು

ದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಯಲ್ಲಿ ಮಾತನಾಡಿದ ಗೋರ್, ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸ್ನೇಹ ಅತ್ಯಂತ ಸತ್ಯವಾದುದು. ನಿಜವಾದ ಸ್ನೇಹಿತರು ತಮ್ಮ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಅವರು ಹೇಳಿದರು.

“ಭಾರತ ವಿಶ್ವದ ಅತಿದೊಡ್ಡ ರಾಷ್ಟ್ರ. ಆದ್ದರಿಂದ ಇದನ್ನು ಅಂತಿಮ ಗೆರೆಯನ್ನು ದಾಟಿಸುವುದು ಸುಲಭದ ಕೆಲಸವಲ್ಲ, ಆದರೆ ನಾವು ಅಲ್ಲಿಗೆ ತಲುಪಲು ನಿರ್ಧರಿಸಿದ್ದೇವೆ” ಎಂದು ಗೋರ್ ಹೇಳಿದ್ದಾರೆ. “ನಾನು ಅಧ್ಯಕ್ಷ ಟ್ರಂಪ್ ಅವರೊಂದಿಗೆ ಪ್ರಪಂಚದಾದ್ಯಂತ ಪ್ರಯಾಣಿಸಿದ್ದೇನೆ. ಪ್ರಧಾನಿ ಮೋದಿ ಅವರೊಂದಿಗಿನ ಟ್ರಂಪ್ ಸ್ನೇಹವು ಅತ್ಯಂತ ನಿಜವೆಂದು ನಾನು ದೃಢೀಕರಿಸಬಲ್ಲೆ” ಎಂದು ಗೋರ್ ಒತ್ತಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ – Kannada News | Kodi Mutt seer’s prediction on Karnataka CM change: Will Ugadi decide Siddaramaiah’s future?

ರಾಯಚೂರು, ಜನವರಿ 12: ಸಂಕ್ರಾಂತಿ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಸಂಬಂಧ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿ, ಯುಗಾದಿ ಅಲ್ಲ, ಬಜೆಟ್‌ವರೆಗೂ ಏನೂ ಮಾಡಲಾಗಲ್ಲ ಎಂದು ಕಾಗಿನೆಲೆ ಕನಕಪೀಠದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಜ್ಯೋತಿಷ್ಯದಲ್ಲಿ ನಂಬುವ ಜನ ಸಂಕ್ರಾಂತಿ, ಯುಗಾದಿ ಅಂತಾ ಹೇಳ್ತಾರೆ. ಸಂಕ್ರಾಂತಿಯಲ್ಲಿ ಸೂರ್ಯ, ಯುಗಾದಿಯಲ್ಲಿ ಚಂದ್ರನನ್ನು ಹಿಡಿದು ಜ್ಯೋತಿಷ್ಯ ಹೇಳುತ್ತಾರೆ. ಯುಗಾದಿ ಹಬ್ಬ ಮುಗಿಯುವವರೆಗೂ ಸಿದ್ದರಾಮಯ್ಯ ಇರಲಿದ್ದು, ಮುಂದಿನದು ಯುಗಾದಿ ನೋಡಿಕೊಂಡು ಹೇಳಬೇಕು ಎಂದಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಡದಲ್ಲಿರುವ ವಿಚಾರವಾಗಿಯೂ ಮಾತನಾಡಿದ ಅವರು, ಆತ ಒಳ್ಳೆಯ ಕಾರ್ಯಕರ್ತ, ಸಂಘಟನೆ ಮನುಷ್ಯ, ಹೋರಾಟಗಾರ. ಆದ್ರೆ ಇಲ್ಲಿ ಸಂಘಟನೆ ಪ್ರಶ್ನೆ ಬರುವುದಿಲ್ಲ. ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡ್ತಾರಾ? ಇಲ್ಲವಾ? ಅನ್ನೋದನ್ನ ನೋಡಿ ಹೇಳ್ತೇನೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರಶ್ರೀ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version