ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್ – Kannada News | Lawyer Balan said Pavithra Gowda have higher chance of getting bail

ನಟ ದರ್ಶನ್ (Darshan), ಸುಪ್ರೀಂಕೋರ್ಟ್​​ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಗೊಂಡಿದೆ. ಸಾಕ್ಷ್ಯಗಳ ವಿಚಾರಣೆ ಬೇಗ ಮುಗಿಸಿ, ಒಂದೊಮ್ಮೆ ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಮುಗಿದಿಲ್ಲವಾದರೆ ಜಾಮೀನು ಅರ್ಜಿಯನ್ನು ಪರಿಶೀಲಿಸಬಹುದು ಎಂದಿದೆ ಸುಪ್ರೀಂಕೋರ್ಟ್. ಇಂದಿನ ಸುಪ್ರೀಂ ತೀರ್ಪಿನ ವಿಶ್ಲೇಷಣೆ ಮಾಡಿರುವ ವಕೀಲ ಬಾಲನ್ ಅವರು, ದರ್ಶನ್ ಅವರಿಗಿಂತಲೂ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚಿದೆ. ಮಹಿಳೆ ಮತ್ತು ಸಿಂಗಲ್ ಪೇರೆಂಟ್ ಆಗಿರುವ ಅವರು ಜಾಮೀನಿಗೆ ಪ್ರಯತ್ನಿಸಿದರೆ ಜಾಮೀನು ಸಿಗಬಹುದು ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹಳೆಯ ನೋವು ಮುಂದೆ ಆರ್ಥ್ರೈಟಿಸ್‌ಗೆ ಕಾರಣವಾಗುತ್ತದೆಯೇ? ಏನ್ ಹೇಳ್ತಾರೆ ತಜ್ಞರು – Kannada News | Preventing Arthritis After Injury: Orthopedic Tips For Long Term Joint Health

ಎಲುಬಿಗಾದ ಹಳೆಯ ನೋವು ಅಥವಾ ಗಾಯವನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಿದರೆ ಮುಂದೆ ಇದು ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಹೌದು, ಆರೋಗ್ಯ ತಜ್ಞರ ಪ್ರಕಾರ ಫ್ರ್ಯಾಕ್ಚರ್ (Fracture), ಲಿಗಮೆಂಟ್ ಹಾನಿ (Ligament injury) ಅಥವಾ ಜಾಯಿಂಟ್ ಇಂಜುರಿ (Joint injury) ಆದಾಗ ಸರಿಯಾದ ಚಿಕಿತ್ಸೆ ಪಡೆಯದೇ ಇದ್ದರೆ, ಮುಂದಿನ ದಿನಗಳಲ್ಲಿ ಆರ್ಥ್ರೈಟಿಸ್‌ (Arthritis) ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಅದರಲ್ಲಿಯೂ ಹಲವರು ಗಾಯವಾದ ನಂತರ ಕೆಲ ದಿನ ವಿಶ್ರಾಂತಿ ಪಡೆದು ಮತ್ತೆ ಸಾಮಾನ್ಯ ಚಟುವಟಿಕೆಗೆ ಮರಳುತ್ತಾರೆ. ಆದರೆ ಒಳಗಿರುವ ಹಾನಿ ಸಂಪೂರ್ಣವಾಗಿ ಗುಣವಾಗದಿದ್ದರೆ, ಸಂಧಿಗಳಲ್ಲಿ ನಿಧಾನವಾಗಿ ಘರ್ಷಣೆ ಹೆಚ್ಚಾಗಿ ನೋವು ಮತ್ತು ಊತ ಉಂಟಾಗಬಹುದು. ಕಾಲಕ್ರಮೇಣ ಇದು ಆರ್ಥ್ರೈಟಿಸ್‌ಗೆ ಕಾರಣವಾಗುವ ಅಪಾಯವಿರುತ್ತದೆ.

ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

ಹಳೆಯ ಗಾಯ ಅಥವಾ ನೋವಾಗಿದ್ದ ಭಾಗದಲ್ಲಿ ಪದೇಪದೇ ನೋವು ಕಾಣಿಸಿಕೊಳ್ಳುವುದು, ಊತ ಕಡಿಮೆಯಾಗದೇ ಇರುವುದು ಅಥವಾ ಬೆಳಗ್ಗೆ ಎದ್ದಾಗ ಕೀಲಿನ ಸಂಧಿಗಳು ಗಟ್ಟಿಯಾಗಿರುವ ಅನುಭವವಾಗುವುದು ಪ್ರಮುಖ ಲಕ್ಷಣಗಳಾಗಿವೆ. ನಡೆಯುವಾಗ, ಮೆಟ್ಟಿಲೇರುವಾಗ ಅಥವಾ ಕಾಲು, ಕೈಗಳನ್ನು ಮಡಚುವಾಗ ನೋವು ಹೆಚ್ಚಾದರೆ ಅದನ್ನು ಲಘುವಾಗಿ ತೆಗೆದುಕೊಳ್ಳಬಾರದು. ಕೆಲವರಿಗೆ ಕೀಲುಗಳ ಮಧ್ಯದಿಂದ ಶಬ್ದ ಬರುವುದು, ಭಾರವಾದ ಅನುಭವ ಅಥವಾ ಹೆಚ್ಚು ಸಮಯ ಕೂತ ಬಳಿಕ ಚಲನೆ ಮಾಡಲು ತೊಂದರೆ ಕಾಣಿಸಬಹುದು. ಇಂತಹ ಲಕ್ಷಣಗಳು ಸಂಧಿಗಳ ಘರ್ಷಣೆಯ ಸೂಚನೆಯಾಗಿರಬಹುದು ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಕೀಲು ನೋವು ಬರಬಾರದು ಎಂದರೆ ತಪ್ಪದೆ ಈ ಆಹಾರಗಳ ಸೇವನೆ ಮಾಡಿ

ಸಮಯಕ್ಕೆ ಚಿಕಿತ್ಸೆ ಯಾಕೆ ಅಗತ್ಯ?

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದರೆ ಕೀಲುಗಳ ಮಧ್ಯೆ ಆಗುವ ಹಾನಿಯನ್ನು ಕಡಿಮೆ ಮಾಡಬಹುದು. ಎಕ್ಸ್‌ರೇ ಅಥವಾ ಸ್ಕ್ಯಾನ್ ಮೂಲಕ ಎಲುಬು ಮತ್ತು ಕೀಲುಗಳು ಸಂಪೂರ್ಣವಾಗಿ ಗುಣಮುಖವಾಗಿದೆಯೇ ಎಂಬುದನ್ನು ವೈದ್ಯರು ಪರಿಶೀಲಿಸುತ್ತಾರೆ. ಫಿಜಿಯೋಥೆರಪಿ, ಔಷಧೋಪಚಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡುವುದರಿಂದ ನೋವು ಹಾಗೂ ಊತ ನಿಯಂತ್ರಣಕ್ಕೆ ಬರುತ್ತದೆ. ಚಿಕಿತ್ಸೆ ವಿಳಂಬವಾದರೆ ನಡೆಯುವಲ್ಲಿ ತೊಂದರೆ ಹೆಚ್ಚಾಗುವ ಸಾಧ್ಯತೆ ಇದೆ. ಜಾಯಿಂಟ್ ಗಳು ಆರೋಗ್ಯವಾಗಿರಲು ತೂಕ ನಿಯಂತ್ರಣದಲ್ಲಿ ಇಡುವುದು, ನಿಯಮಿತವಾಗಿ ಲಘು ವ್ಯಾಯಾಮ ಮಾಡುವುದು ಮತ್ತು ಗಾಯವಾದ ಭಾಗದ ಮೇಲೆ ಹೆಚ್ಚು ಒತ್ತಡ ಹಾಕದಿರುವುದು ಮುಖ್ಯ. ಕ್ಯಾಲ್ಸಿಯಂ, ವಿಟಮಿನ್ D ಮತ್ತು ಪ್ರೋಟೀನ್‌ಯುಕ್ತ ಆಹಾರ ಸೇವಿಸುವುದರಿಂದ ಎಲುಬುಗಳು ಬಲವಾಗಿರುತ್ತವೆ. ದೀರ್ಘಕಾಲ ನೋವು ಅಥವಾ ಗಟ್ಟಿತನ ಮುಂದುವರಿದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳಿತು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಿಯ ಬೆಂಗಾವಲು ಪಡೆಯನ್ನು ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ ಸಮಂತ್ ಗೋಯಲ್ – Kannada News | Not right to reduce PM Modi’s security amid austerity measures Former RAW chief Samant Goel says

ನವದೆಹಲಿ, ಮೇ 15: ಭಾರತದಲ್ಲಿ ಉಂಟಾಗಿರುವ ಇಂಧನದ ಬಿಕ್ಕಟ್ಟನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ವಾಹನಗಳ ಬಳಕೆಯನ್ನು ಕಡಿಮೆಗೊಳಿಸಲು ಸೂಚಿಸಿದ್ದರು. ಪ್ರಧಾನಿ ಮೋದಿ ಕೂಡ ತಮ್ಮ ಬೆಂಗಾವಲು ಪಡೆಯ ಪ್ರಮಾಣವನ್ನು ಕಡಿಮೆಗೊಳಿಸಿದ್ದರು. ಈ ಬಗ್ಗೆ ಭಾರತದ ಮಾಜಿ ಬಾಹ್ಯ ಗುಪ್ತಚರ ಸಂಸ್ಥೆ ರಾ (RAW) ಮುಖ್ಯಸ್ಥ ಸಮಂತ್ ಗೋಯಲ್ ಪ್ರತಿಕ್ರಿಯೆ ನೀಡಿದ್ದಾರೆ.

“ಪ್ರಸ್ತುತ ಅಂತಾರಾಷ್ಟ್ರೀಯ ಭದ್ರತಾ ಪರಿಸ್ಥಿತಿ ಅಸ್ಥಿರವಾಗಿದೆ. ಅಮೆರಿಕವನ್ನು ಸುರಕ್ಷಿತ ದೇಶವೆಂದು ಪರಿಗಣಿಸಿದ್ದರೂ ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ 3 ದಾಳಿಗಳು ನಡೆದಿವೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಲೇ ಇವೆ. ಪಕ್ಕದ ದೇಶದಿಂದಲೇ ಭಾರತಕ್ಕೆ ಭದ್ರತಾ ಆತಂಕವಿದೆ. ಹೀಗಾಗಿ, ನಾವು ಪ್ರಧಾನಿಯವರ ಭದ್ರತೆಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಇಂತಹ ಸಂದರ್ಭದಲ್ಲಿ ನಾವು ಅವರ ಭದ್ರತೆಯನ್ನು ಕಡಿಮೆ ಮಾಡುವ ಬದಲು ಬಲಪಡಿಸಬೇಕು. ಈ ರೀತಿ ಬೆಂಗಾವಲು ಪಡೆಯನ್ನು ಕಡಿಮೆ ಮಾಡುವುದು ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ ಒಳ್ಳೆಯದಲ್ಲ.” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೈನಾನ್ಸ್ ಸೆಕ್ಯೂರಿಟಿ ಗೈಡ್: ಹ್ಯಾಕರ್‌ಗಳಿಂದ ನಿಮ್ಮ ಕ್ರಿಪ್ಟೋ ರಕ್ಷಿಸಲು 7 ಸಲಹೆಗಳು – Kannada News | Secure the Crypto trading in Binance using these 7 tools

ಕ್ರಿಪ್ಟೋಕರೆನ್ಸಿ ವ್ಯವಹಾರದಲ್ಲಿ (Crypto currency trading) ಸುರಕ್ಷತೆಯು ಅತ್ಯಂತ ಮುಖ್ಯವಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ ಹ್ಯಾಕಿಂಗ್ ನಡೆಯುವುದು ಪ್ಲಾಟ್‌ಫಾರ್ಮ್‌ನ ತಪ್ಪಿನಿಂದಲ್ಲ, ಬದಲಿಗೆ ಬಳಕೆದಾರರ ನಿರ್ಲಕ್ಷ್ಯದಿಂದ. ಬೈನಾನ್ಸ್‌ನಲ್ಲಿ (Binance) ಸುರಕ್ಷಿತವಾಗಿರಲು ಹೆಚ್ಚಿನ ಮಂದಿಗೆ ತಿಳಿಯದ ಕೆಲ ಟ್ರಿಕ್ಸ್​ಗಳಿವೆ. ಈ ಕೆಳಗಿನ 7 ಸೆಕ್ಯೂರಿಟಿ ಟೂಲ್‌ಗಳನ್ನು ಬಳಸಿದರೆ ಕ್ರಿಪ್ಟೋ ವ್ಯವಹಾರ ಸುರಕ್ಷಿತವಾಗಿರುತ್ತದೆ.

  1. ಬೈನಾನ್ಸ್ ಅಥೆಂಟಿಕೇಟರ್ (Binance Authenticator): ಕೇವಲ SMS OTP ಮೇಲೆ ಅವಲಂಬಿತರಾಗಬೇಡಿ, ಏಕೆಂದರೆ ‘ಸಿಮ್ ಸ್ವಾಪ್’ ಹಗರಣಗಳು ನಡೆಯುತ್ತಿವೆ. ಅಥೆಂಟಿಕೇಟರ್ ಆಪ್ ಬಳಸುವುದು ಹೆಚ್ಚು ಸುರಕ್ಷಿತ.
  2. ಆಂಟಿ-ಫಿಶಿಂಗ್ ಕೋಡ್ (Anti-Phishing Code): ಇದನ್ನು ಸೆಟ್ ಮಾಡುವುದರಿಂದ ಬೈನಾನ್ಸ್‌ನಿಂದ ಬರುವ ಪ್ರತಿಯೊಂದು ಇಮೇಲ್‌ನಲ್ಲಿ ನಿಮ್ಮದೇ ಆದ ರಹಸ್ಯ ಕೋಡ್ ಇರುತ್ತದೆ. ಇದು ನಕಲಿ ಇಮೇಲ್‌ಗಳನ್ನು ಗುರುತಿಸಲು ಸಹಾಯ ಮಾಡುತ್ತದೆ.
  3. ವಿತ್‌ಡ್ರಾವಲ್ ವೈಟ್‌ಲಿಸ್ಟ್ (Withdrawal Whitelist): ಈ ಫೀಚರ್ ಆನ್ ಮಾಡಿದರೆ, ನಿಮ್ಮ ಹಣವನ್ನು ನೀವು ಮೊದಲೇ ಅನುಮೋದಿಸಿದ ವಿಳಾಸಗಳಿಗೆ ಮಾತ್ರ ಕಳುಹಿಸಲು ಸಾಧ್ಯವಾಗುತ್ತದೆ. ಇದರಿಂದ ಹ್ಯಾಕರ್‌ಗಳು ಹಣವನ್ನು ಬೇರೆ ಕಡೆಗೆ ವರ್ಗಾಯಿಸಲು ಸಾಧ್ಯವಾಗುವುದಿಲ್ಲ.
  4. ಡಿವೈಸ್ ಮ್ಯಾನೇಜ್‌ಮೆಂಟ್ (Device Management): ನಿಮ್ಮ ಅಕೌಂಟ್ ಯಾವ ಯಾವ ಫೋನ್ ಅಥವಾ ಕಂಪ್ಯೂಟರ್‌ನಲ್ಲಿ ಲಾಗಿನ್ ಆಗಿದೆ ಎಂದು ಗಮನಿಸಿ ಮತ್ತು ಅಪರಿಚಿತ ಸಾಧನಗಳನ್ನು ತಕ್ಷಣವೇ ತೆಗೆದುಹಾಕಿ.
  5. ಪ್ರತ್ಯೇಕ ಇಮೇಲ್ ಮತ್ತು ಬಲವಾದ ಪಾಸ್‌ವರ್ಡ್: ನಿಮ್ಮ ವೈಯಕ್ತಿಕ ಇಮೇಲ್ ಬದಲಿಗೆ ಟ್ರೇಡಿಂಗ್‌ಗೆಂದೇ ಪ್ರತ್ಯೇಕ ಇಮೇಲ್ ಬಳಸಿ ಮತ್ತು ಯಾರೂ ಊಹಿಸಲು ಸಾಧ್ಯವಾಗದಂತಹ ಕಠಿಣ ಪಾಸ್‌ವರ್ಡ್ ಇರಿಸಿ.
  6. ಬೈನಾನ್ಸ್ ವೆರಿಫೈ (Binance Verify): ಯಾವುದೇ ಸಾಮಾಜಿಕ ಜಾಲತಾಣದ ಲಿಂಕ್ ಅಥವಾ ಫೋನ್ ನಂಬರ್ ಅಧಿಕೃತವೇ ಎಂದು ಪರೀಕ್ಷಿಸಲು ಬೈನಾನ್ಸ್‌ನ ಅಧಿಕೃತ ಸೈಟ್‌ನಲ್ಲಿರುವ ಈ ಟೂಲ್ ಬಳಸಿ.
  7. ತುರ್ತು ಸಂದರ್ಭದಲ್ಲಿ ಏನು ಮಾಡಬೇಕು?: ಒಂದು ವೇಳೆ ನಿಮ್ಮ ಅಕೌಂಟ್ ಹ್ಯಾಕ್ ಆಗಿದ್ದರೆ, ತಕ್ಷಣವೇ ಪಾಸ್‌ವರ್ಡ್ ಬದಲಿಸಿ, ಎಲ್ಲಾ ಸಾಧನಗಳಿಂದ ಲಾಗ್-ಔಟ್ ಆಗಿ ಮತ್ತು ಬೈನಾನ್ಸ್ ಸಪೋರ್ಟ್ ತಂಡವನ್ನು ಸಂಪರ್ಕಿಸಿ. ಸೈಬರ್ ಕ್ರೈಮ್ ಹೆಲ್ಪ್‌ಲೈನ್ 1930ಕ್ಕೆ ಕರೆ ಮಾಡಿ ದೂರು ನೀಡಿ.

ಇದನ್ನೂ ಓದಿ: ಈ ತಂತ್ರ ಬಳಸಿದರೆ, 12 ಲಕ್ಷ ಮಾತ್ರವಲ್ಲ, 15 ಲಕ್ಷ ರೂವರೆಗೆ ಆದಾಯಕ್ಕೆ ಶೂನ್ಯ ತೆರಿಗೆ

ಸಂಶೋಧನೆಯ ಪ್ರಕಾರ 65% ಬಳಕೆದಾರರು ‘ನಮಗೆ ಏನೂ ಆಗುವುದಿಲ್ಲ’ ಎಂಬ ಅಸಡ್ಡೆಯಿಂದ ಈ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಿಲ್ಲ. ಆದರೆ ಇವುಗಳನ್ನು ಸಕ್ರಿಯಗೊಳಿಸಲು ಕೇವಲ 30-45 ನಿಮಿಷಗಳು ಬೇಕಾಗುತ್ತವೆ, ಇದು ನಿಮ್ಮ ಜೀವನದ ಉಳಿತಾಯವನ್ನು ಕಾಪಾಡಬಲ್ಲದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 6:39 pm, Fri, 15 May 26

Source link

ನಾನು ಸಿಎಂ ಆಗ್ಲಾ? ಎಂದವನ ಬಂಡವಾಳ ಬಯಲು: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್ – Kannada News | Investment Scam: Shivanand Neelannavar Accused in 4,500 Crore Fraud; House and Office Seized

ಶಿವಾನಂದ ನೀಲಣ್ಣವರ್Image Credit source: tv9 kannada

ಬೆಳಗಾವಿ, ಮೇ 15: ಮಾಜಿ ಸೈನಿಕರು ಹಾಗೂ ಸಾರ್ವಜನಿಕರ ಕೋಟ್ಯಂತರ ರೂ ಹಣ ದುರಪಯೋಗವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಶಿವಂ ಅಸೋಸಿಯೇಟ್ಸ್ (Shivam Associates) ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್​​ ಎಂಬಾತ ಯಾವುದೇ ನಿಯಮಗಳನ್ನು ಪಾಲಿಸದೆ, ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಬರೋಬ್ಬರಿ 40 ರಿಂದ 45 ಸಾವಿರ ಜನರಿಂದ ಅಂದಾಜು 4,500 ಕೋಟಿ ರೂ ಹೂಡಿಕೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದ್ದು, ಸದ್ಯ ಶಿವಾನಂದ ನೀಲಣ್ಣವರ್​​ ಮನೆ ಸೇರಿದಂತೆ ಕಚೇರಿ ಕೂಡ ಸೀಜ್​ ಮಾಡಲಾಗಿದ್ದು, ಡಿಸಿಗೆ ವರದಿ ಸಲ್ಲಿಕೆ ಮಾಡಲಾಗಿದೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ₹4,500 ಕೋಟಿ ವಂಚನೆ ಆರೋಪ ಕೇಸ್​​
  • ಶಿವಾನಂದ ನೀಲಣ್ಣವರ್​​ ಮನೆ, ಕಚೇರಿ ಸೀಜ್​
  • ಸಿಐಡಿ ತನಿಖೆಗೆ ಒತ್ತಾಯ

ಪ್ರಕರಣದ ಗಾಂಭೀರ್ಯವನ್ನು ಅರಿತು ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆಯಡಿ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ಬೆಳಗಾವಿಯ ಶಿವಬಸವನಗರದಲ್ಲಿರುವ ಕಚೇರಿ, ಮನೆ ಹಾಗೂ ಅಪಾರ್ಟ್‌ಮೆಂಟ್‌ ಸೇರಿದಂತೆ ಹಲವು ಕಡೆಗಳಲ್ಲಿ ಎಸಿ ಶ್ರವಣ್ ಕುಮಾರ್ ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ಪೊಲೀಸರ ಬಿಗಿ ಬಂದೋಬಸ್ತ್‌ನೊಂದಿಗೆ 24 ಗಂಟೆಗಳ ಕಾಲ ಸುದೀರ್ಘ ಜಾಲಾಡಿದ್ದು, ಸದ್ಯ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದಾರೆ.

ದಾಖಲೆಗಳಿಲ್ಲದ ಸಾವಿರಾರು ಕೋಟಿ ವ್ಯವಹಾರ: ಆರ್​ಬಿಐ ನಿಯಮಗಳ ಉಲ್ಲಂಘನೆ

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಅತಿರೇಕದ ಭಾಷಣಗಳ ಮೂಲಕ ವೈರಲ್ ಆಗಿದ್ದ ಶಿವಾನಂದ ನೀಲಣ್ಣವರ್ ಹಿನ್ನೆಲೆಯನ್ನು ಕೆದಕಿದಾಗ ಈ ಬೃಹತ್ ಜಾಲ ಪತ್ತೆಯಾಗಿದೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಸಂಗ್ರಹಿಸಲು ಯಾವುದೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಗಸೂಚಿಗಳನ್ನು ಪಾಲಿಸಿಲ್ಲ ಹಾಗೂ ಹೂಡಿಕೆ ಮಾಡಿದ ಸಾರ್ವಜನಿಕರ ಹಣಕ್ಕೆ ಯಾವುದೇ ಅಧಿಕೃತ ದಾಖಲೆಗಳನ್ನು ನಿರ್ವಹಿಸಿಲ್ಲ ಎನ್ನಲಾಗಿದೆ. ಆನ್‌ಲೈನ್ ಮೂಲಕವೇ ಇಷ್ಟೊಂದು ಕೋಟ್ಯಂತರ ರೂ ವ್ಯವಹಾರ ನಡೆದಿದ್ದರೂ ಆದಾಯ ತೆರಿಗೆ ಇಲಾಖೆ ಅಥವಾ ಜಾರಿ ನಿರ್ದೇಶನಾಲಯದ ಗಮನಕ್ಕೆ ಬಾರದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತನಿಖೆಯ ವೇಳೆ ವ್ಯಕ್ತಿಯೊಬ್ಬರು ಯಾವುದೇ ದಾಖಲೆಯಿಲ್ಲದೆ 5 ಲಕ್ಷ ರೂ ಹೂಡಿಕೆ ಮಾಡಿರುವುದು ಪತ್ತೆಯಾಗಿದೆ.

ಧೈರ್ಯವಾಗಿರಿ: ಆಡಿಯೋ ಬಿಡುಗಡೆ ಮಾಡಿದ ಶಿವಾನಂದ ನೀಲಣ್ಣವರ್​​

ದಾಳಿಯ ಬೆನ್ನಲ್ಲೇ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿರುವ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ್ ಆಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿದ್ದಾರೆ. ‘ನನ್ನ ಮೊಬೈಲ್ ಬಂದ್ ಇದೆ, ಆದರೆ ನಾನು ಮನೆಯಲ್ಲೇ ಇದ್ದೇನೆ ಮತ್ತು ಸೆಕ್ಯೂರಿಟಿಯಲ್ಲಿದ್ದೇನೆ. ಇನ್ನು ಎರಡು ಮೂರು ದಿನಗಳಲ್ಲಿ ಎಂದಿನಂತೆ ಎಲ್ಲವೂ ಸರಿಯಾಗಲಿದೆ. ಹೂಡಿಕೆದಾರರು ಯಾರೂ ಹೆದರಬೇಡಿ, ವಿಶೇಷವಾಗಿ ಮಹಿಳೆಯರು ಧೈರ್ಯವಾಗಿರಿ’ ಎಂಬ ಸಂದೇಶ ನೀಡಿದ್ದಾರೆ.

ಬಂಧನದ ಭೀತಿ: ಸಿಐಡಿ ತನಿಖೆಗೆ ಒತ್ತಾಯ

ಮೂಲತಃ ಹುಬ್ಬಳ್ಳಿ ತಾಲೂಕಿನ ಉಣಕಲ್ ಗ್ರಾಮದವರಾದ ಶಿವಾನಂದ, ಬೆಳಗಾವಿಯ ಮಹಿಳೆಯನ್ನು ಮದುವೆಯಾಗಿ ಇಲ್ಲೇ ನೆಲೆಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ‘ನಾನು ಸಿಎಂ ಆಗ್ಲಾ?, ನಾನು ಪಕ್ಕಾ ಗಂಡ್ಸು’ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಹವಾ ಸೃಷ್ಟಿಸಲು ಯತ್ನಿಸುತ್ತಿದ್ದರು. ಸದ್ಯ ಇವರ ವಿರುದ್ಧ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.

ಮುಂದಿನ ಕ್ರಮವೇನು?

ದಾಳಿ ವೇಳೆಯಲ್ಲಿ ಸಿಕ್ಕ ದಾಖಲೆಗಳು, ಪರಿಶೀಲನೆ ವೇಳೆಯಲ್ಲಿ ಕಂಡು ಬಂದ ವಿಷಯಗಳ ಬಗ್ಗೆ ಸದ್ಯ ಎಸಿ ಶ್ರವಣಕುಮಾರ್ ಅವರು ದಾಳಿಯ ಸಂಪೂರ್ಣ ವರದಿಯನ್ನು ಡಿಸಿ ಮೊಹಮ್ಮದ್ ರೋಷನ್‌ಗೆ ಸಲ್ಲಿಸಲಿದ್ದು, ಜಿಲ್ಲಾಡಳಿತ ಶಿವಾನಂದನ ಬಂಧನಕ್ಕೆ ಆದೇಶಿಸುತ್ತದೆಯೇ ಅಥವಾ ತನಿಖೆಯನ್ನು ಮುಂದುವರಿಸುತ್ತದೆಯೇ ಎಂದು ಕಾದು ನೋಡಬೇಕಿದೆ. ಈ ಹಗರಣದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಸಾವಿರಾರು ಗ್ರಾಹಕರು ಹಣ ಹೂಡಿರುವುದರಿಂದ, ಪ್ರಕರಣವನ್ನು ಉನ್ನತ ಮಟ್ಟದ ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಸಾಮಾಜಿಕ ಹೋರಾಟಗಾರ ರಾಜು ಟೋಪಣ್ಣವರ್ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಪವಾಡಸದೃಶ ಪಾರು

ಕೊಪ್ಪಳ, ಮೇ 15: ಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಟ್ರ್ಯಾಕ್ಟರ್​​ ಬಿದ್ದು ಮಗು ಸೇರಿ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಅದೇ ತುಂಗಭದ್ರಾ ಸೇತುವೆ ಮೇಲೆ ಮತ್ತೊಂದು ಅಪಘಾತ ನಡೆದಿದೆ. ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದ್ದು, ಅದೃಷ್ಟವಶಾತ್​​ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ಸಂಬಂಧ ಲಾರಿ ಚಾಲಕನನ್ನು ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೇವಲ ಹಾಲು, ತರಕಾರಿಗಾಗಿ ಪ್ರಾಣದ ಹಂಗು ತೊರೆದು ಕಳ್ಳರೊಂದಿಗೆ ಹೋರಾಡಿದ ಮಹಿಳೆ – Kannada News | Viral: Woman’s Brave Fight for Milk Exposes India’s Deep Economic Hardship

ಸಮಾಜದಲ್ಲಿ ಆರ್ಥಿಕ ಸಂಕಷ್ಟ ಎಷ್ಟು ತೀವ್ರವಾಗಿದೆ ಎಂಬುದಕ್ಕೆ ಇತ್ತೀಚೆಗೆ ನಡೆದ ಈ ಘಟನೆ ಸಾಕ್ಷಿಯಾಗಿದೆ. ಕೇವಲ ಒಂದು ಲೀಟರ್ ಹಾಲು, ಕೆಲವು ತರಕಾರಿಗಳು ಮತ್ತು ಜೇಬಿನಲ್ಲಿದ್ದ ಅಲ್ಪಸ್ವಲ್ಪ ಹಣವನ್ನು ರಕ್ಷಿಸಿಕೊಳ್ಳಲು ಮಹಿಳೆಯೊಬ್ಬರು ಬೈಕ್‌ನಲ್ಲಿ ಬಂದ ಸರಗಳ್ಳರೊಂದಿಗೆ ಪ್ರಾಣದ ಹಂಗು ತೊರೆದು ಹೋರಾಡಿದ್ದಾರೆ. ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಮಹಿಳೆಯು ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕೈಯಲ್ಲಿದ್ದ ಬ್ಯಾಗ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಆ ಬ್ಯಾಗ್‌ನಲ್ಲಿ ಕೇವಲ ದಿನನಿತ್ಯದ ಆಹಾರ ಪದಾರ್ಥಗಳಿದ್ದರೂ, ಆಕೆಗೆ ಅದು ಅತ್ಯಂತ ಮೌಲ್ಯಯುತವಾಗಿತ್ತು. ಆರ್ಥಿಕ ಸಂಕಷ್ಟದ ಈ ದಿನಗಳಲ್ಲಿ ಒಂದು ಹೊತ್ತಿನ ಹಾಲಿನ ಪ್ಯಾಕೆಟ್ ಕೂಡ ಎಷ್ಟು ಮುಖ್ಯ ಎಂಬುದನ್ನು ತೋರಿಸುವಂತೆ, ಆಕೆ ಕಳ್ಳರಿಗೆ ಬ್ಯಾಗ್ ಬಿಟ್ಟುಕೊಡದೆ ಹಠಾತ್ತನೆ ಎದುರಿಸಿದ್ದಾರೆ. ಈ ಹೋರಾಟದಲ್ಲಿ ಅವರು ರಸ್ತೆಯ ಮೇಲೆ ಬಿದ್ದರೂ ಬ್ಯಾಗ್ ಮಾತ್ರ ಬಿಡಲಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಮಹಿಳೆಯ ಧೈರ್ಯವನ್ನು ಮೆಚ್ಚುವುದರ ಜೊತೆಗೆ, ದೇಶದಲ್ಲಿನ ಆರ್ಥಿಕ ದುಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಒಂದು ಲೀಟರ್ ಹಾಲಿಗಾಗಿ ಪ್ರಾಣದ ಹಂಗು ತೊರೆಯಬೇಕಾದ ಪರಿಸ್ಥಿತಿ ಬಂದಿದೆಯಲ್ಲ” ಎಂಬ ಕಾಮೆಂಟ್‌ಗಳು ಜನರ ನೋವನ್ನು ಪ್ರತಿಬಿಂಬಿಸುತ್ತಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭೋಜಶಾಲಾ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಲಿದೆ; ಓವೈಸಿ ವಿಶ್ವಾಸ – Kannada News | Owaisi calls Bhojshala Temple verdict similar to Babri Mosque judgment

ನವದೆಹಲಿ, ಮೇ 15: ಮಧ್ಯಪ್ರದೇಶ ಹೈಕೋರ್ಟ್ ಭೋಜಶಾಲಾ ವಿವಾದಿತ ಪ್ರದೇಶವನ್ನು ಸರಸ್ವತಿ ದೇವಿಯ ದೇವಾಲಯವೆಂದು ಘೋಷಿಸಿದ್ದಕ್ಕೆ AIMIM ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಬಾಬ್ರಿ ಮಸೀದಿ ತೀರ್ಪಿನಂತೆಯೇ ಇದೆ ಎಂದು ಹೇಳಿರುವ ಅವರು ಸುಪ್ರೀಂ ಕೋರ್ಟ್ ಈ ತೀರ್ಪನ್ನು ರದ್ದುಗೊಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, ಭೋಜಶಾಲಾ ತೀರ್ಪು ಮತ್ತು ರಾಮ ಜನ್ಮಭೂಮಿ ಮಂದಿರ-ಬಾಬ್ರಿ ಮಸೀದಿ ಪ್ರಕರಣದ ತೀರ್ಪಿನ ನಡುವೆ ಸ್ಪಷ್ಟವಾದ ಹೋಲಿಕೆಗಳು ಇವೆ ಎಂದು ಹೇಳಿದ್ದಾರೆ.

“ಸುಪ್ರೀಂ ಕೋರ್ಟ್ ಈ ಆದೇಶವನ್ನು ರದ್ದುಗೊಳಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಈ ತೀರ್ಪಿಗೆ ಬಾಬ್ರಿ ಮಸೀದಿ ತೀರ್ಪಿನೊಂದಿಗೆ ಸ್ಪಷ್ಟ ಹೋಲಿಕೆಗಳಿವೆ” ಎಂದು ಓವೈಸಿ ಎಕ್ಸ್​​ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಪ್ರಕರಣವನ್ನು ಪ್ರಶ್ನಿಸಿರುವ ಮುಸ್ಲಿಂ ಕಡೆಯವರು ಸಹ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಚೀನಾದ ಬೆಂಬಲವಿಲ್ಲದಿದ್ದರೆ ಪಾಕಿಸ್ತಾನ ಏನೂ ಇಲ್ಲ; ಓವೈಸಿ ತೀವ್ರ ವಾಗ್ದಾಳಿ

“ನಮ್ಮ ವಿರುದ್ಧ ತೆಗೆದುಕೊಂಡ ನಿರ್ಧಾರವನ್ನು ನಾವು ಪರಿಶೀಲಿಸುತ್ತೇವೆ. ನಾವು ಸುಪ್ರೀಂ ಕೋರ್ಟ್‌ನಲ್ಲಿ ಈ ತೀರ್ಪನ್ನು ಪ್ರಶ್ನಿಸುತ್ತೇವೆ” ಎಂದು ಧಾರ್ ಶಹರ್ ಖಾಜಿ ವಕಾರ್ ಸಾದಿಕ್ ANIಗೆ ತಿಳಿಸಿದ್ದಾರೆ.

ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ ಸಂಕೀರ್ಣವು ಸರಸ್ವತಿ ದೇವಿಗೆ ಮೀಸಲಾಗಿರುವ ದೇವಾಲಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ಸಮುದಾಯವು ಈ ಜಿಲ್ಲೆಯಲ್ಲಿ ಮಸೀದಿ ನಿರ್ಮಿಸಲು ಪ್ರತ್ಯೇಕ ಭೂಮಿಯನ್ನು ಪಡೆಯಲು ರಾಜ್ಯ ಸರ್ಕಾರವನ್ನು ಸಂಪರ್ಕಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವೈದ್ಯೋ ನಾರಾಯಣೋ ಹರಿಃ: ನವಜಾತ ಶಿಶುವಿಗೆ ಮರುಜೀವ ನೀಡಿದ ವೈದ್ಯೆ – Kannada News | Life Returns in Saharanpur: How a Doctor’s Instinct and Bravery Saved a Dying Baby

ಸಹಾರನ್‌ಪುರ, ಮೇ,15 : ಉತ್ತರ ಪ್ರದೇಶದ ಸಹಾರನ್‌ಪುರದ ನಾನೋಟಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪವಾಡವೊಂದು ನಡೆದಿದೆ. ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಉಸಿರಾಟ ನಿಲ್ಲಿಸಿ ಸಾವಿನ ಅಂಚಿನಲ್ಲಿದ್ದ ನವಜಾತ ಶಿಶುವಿಗೆ ವೈದ್ಯೆಯೊಬ್ಬರು ತಮ್ಮ ಉಸಿರನ್ನೇ ನೀಡಿ ಮರುಜೀವ ಕೊಟ್ಟಿದ್ದಾರೆ. ನಾನೋಟಾ ಕೇಂದ್ರದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಹುಟ್ಟಿದ ತಕ್ಷಣ ಮಗು ಉಸಿರಾಡುತ್ತಿರಲಿಲ್ಲ. ಆಸ್ಪತ್ರೆಯಲ್ಲಿದ್ದ ಆಮ್ಲಜನಕದ ಯಂತ್ರ (Oxygen Machine) ಕೆಲಸ ಮಾಡದಿದ್ದಾಗ ಅಲ್ಲಿನ ವಾತಾವರಣದಲ್ಲಿ ಗಾಬರಿ ಮತ್ತು ನಿಶ್ಯಬ್ದ ಆವರಿಸಿತು. ಇಂತಹ ಕ್ಲಿಷ್ಟ ಸಮಯದಲ್ಲಿ ಡಾ. ರುಮಾ ಅವರು ಧೃತಿಗೆಡದೆ ತಕ್ಷಣ ಕಾರ್ಯಪ್ರವೃತ್ತರಾದರು. ಯಂತ್ರ ವೈಫಲ್ಯವಾದಾಗ ಡಾ. ರುಮಾ ಅವರು ಪ್ರೊಟೊಕಾಲ್‌ಗಳಿಗಿಂತ ಮಾನವೀಯತೆಗೆ ಒತ್ತು ನೀಡಿದರು. ಮಗುವಿನ ಎದೆಯ ಮೇಲೆ ಒತ್ತಡ ಹಾಕುತ್ತಾ (Chest Compressions), ಸ್ವತಃ ತಮ್ಮ ಬಾಯಿಯಿಂದ ಮಗುವಿಗೆ ಕೃತಕ ಉಸಿರಾಟ ನೀಡಲು ಆರಂಭಿಸಿದರು. ಸತತ ಪ್ರಯತ್ನದ ನಂತರ ಮಗು ಅಳಲು ಆರಂಭಿಸಿತು. ಆ ಒಂದು ಅಳುವಿನ ಶಬ್ದ ಇಡೀ ಕೊಠಡಿಯಲ್ಲಿದ್ದವರ ಕಣ್ಣಲ್ಲಿ ಆನಂದಬಾಷ್ಪ ತರಿಸಿತು. ವೈದ್ಯಕೀಯ ತರಬೇತಿಗಿಂತ ಮಿಗಿಲಾಗಿ ವೈದ್ಯೆಯಲ್ಲಿದ್ದ ತಾಯ್ತನದ ತುಡಿತ ಒಂದು ಜೀವವನ್ನು ಉಳಿಸಿದೆ. ಇಂದು ಡಾ. ರುಮಾ ಅವರ ಈ ಧೀರ ಕಾರ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಆರ್​ಸಿಬಿಗೆ ಎಂಟ್ರಿಕೊಟ್ಟ ಇಂಗ್ಲೆಂಡ್ ವೇಗಿ; ಸಿಎಸ್​ಕೆ ತಂಡಕ್ಕೆ ಕುಲ್ದೀಪ್‌ ಯಾದವ್ ಸೇರ್ಪಡೆ – Kannada News | IPL 2026 Player Changes: Kuldeep Yadav Joins CSK, Richard Gleeson Boosts RCB

2026 ರ ಐಪಿಎಲ್‌ನ (IPL 2026) ಲೀಗ್ ಹಂತಕ್ಕೆ ಇನ್ನೇನು ತೆರೆ ಬೀಳಲಿದೆ. ಅದಾದ ಬಳಿಕ ಪ್ಲೇಆಫ್ ಸುತ್ತು ಶುರುವಾಗಲಿದೆ. ಆದಾಗ್ಯೂ ಈವರೆಗೆ ಯಾವ ತಂಡಕ್ಕೂ ಪ್ಲೇಆಫ್ ಟಿಕೆಟ್ ಸಿಕ್ಕಿಲ್ಲ. ಕೆಲವು ತಂಡಗಳ ಸ್ಥಾನ ಖಚಿತವಾದರೂ ಇನ್ನು ಕೆಲವು ತಂಡಗಳು ತೀವ್ರಪೈಪೋಟಿ ನಡೆಸುತ್ತಿವೆ. ಅಂತಹ ತಂಡಗಳಲ್ಲಿ ಆರ್​ಸಿಬಿಗೆ (RCB) ಪ್ಲೇಆಫ್ ಸ್ಥಾನ ಭಾಗಶಃ ಖಚಿತವಾಗಿದ್ದರೆ, ಇತ್ತ ಸಿಎಸ್​ಕೆಗೂ (CSK) ಪ್ಲೇಆಫ್​ಗೇರುವ ಅವಕಾಶವಿದೆ. ಇದೀಗ ಈ ಎರಡೂ ತಂಡಗಳಿಗೆ ಹೊಸ ಆಟಗಾರರ ಆಗಮನವಾಗಿದೆ.

ವಾಸ್ತವವಾಗಿ ಈ ಸೀಸನ್​ನಲ್ಲಿ ಆಟಗಾರರ ಇಂಜುರಿಯಿಂದ ಅತಿ ಹೆಚ್ಚು ಸಮಸ್ಯೆಗೆ ಗುರಿಯಾದ ತಂಡಗಳಲ್ಲಿ ಸಿಎಸ್​ಕೆ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಸಿಎಸ್​ಕೆ ತಂಡದ ಐದರಿಂದ ಆರು ಆಟಗಾರರು ಗಾಯದ ಕಾರಣದಿಂದಾಗಿ ಇಡೀ ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ಫ್ರಾಂಚೈಸಿ ಅವರ ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುತ್ತಿದೆ. ಅದರಂತೆ ಗಾಯದಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದ ಎಡಗೈ ವೇಗದ ಬೌಲರ್ ಖಲೀಲ್ ಅಹ್ಮದ್ ಬದಲಿಗೆ ಸಿಎಸ್‌ಕೆ ಕುಲದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಏತನ್ಮಧ್ಯೆ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಇಂಗ್ಲೆಂಡ್​ನ ರಿಚರ್ಡ್ ಗ್ಲೀಸನ್ ಅವರನ್ನು ನುವಾನ್ ತುಷಾರ ಬದಲಿಗೆ ತಂಡಕ್ಕೆ ಸೇರಿಸಿಕೊಂಡಿದೆ.

ಖಲೀಲ್ ಬದಲಿಗೆ ಕುಲ್ದೀಪ್‌

ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದು, ಎರಡೂ ತಂಡಗಳಲ್ಲಿ ಮಾಡಲಾದ ಬದಲಾವಣೆಗಳನ್ನು ವಿವರಿಸಲಾಗಿದೆ. ಪ್ರಕಟಣೆಯ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ಖಲೀಲ್ ಬದಲಿಗೆ ದೆಹಲಿ ವೇಗದ ಬೌಲರ್ ಕುಲದೀಪ್ ಯಾದವ್ ಅವರನ್ನು 30 ಲಕ್ಷ ರೂ. ಮೂಲ ಬೆಲೆಗೆ ತಂಡಕ್ಕೆ ಕರತಂದಿದೆ. ಸಿಎಸ್​ಕೆ ಪರ ಆರಂಭಿಕ ಐದು ಪಂದ್ಯಗಳನ್ನಾಡಿದ ಬಳಿಕ ಖಲೀಲ್, ಗಾಯಗೊಂಡು ಇಡೀ ಐಪಿಎಲ್​ನಿಂದ ಹೊರಗುಳಿದಿದ್ದರು. ಇದೀಗ ಅವರ ಬದಲಿಗೆ ಬಂದ ಕುಲ್ದೀಪ್ ಈ ಹಿಂದೆ 2021 ಮತ್ತು 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಮೂರು ಪಂದ್ಯಗಳನ್ನು ಆಡಿದ್ದರು, ಎರಡು ವಿಕೆಟ್‌ಗಳನ್ನು ಕಬಳಿಸಿದ್ದರು.

ಆರ್‌ಸಿಬಿ ಸೇರಿದ 38 ವರ್ಷದ ಬೌಲರ್

ಮತ್ತೊಂದೆಡೆ, ಹಾಲಿ ಚಾಂಪಿಯನ್ ಆರ್​ಸಿಬಿ ಕೂಡ, ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ ಈ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಇಲ್ಲಿಯವರೆಗೆ 12 ಲೀಗ್ ಪಂದ್ಯಗಳನ್ನು ಆಡಿರುವ ಆರ್‌ಸಿಬಿ, 38 ವರ್ಷದ ಇಂಗ್ಲಿಷ್ ವೇಗದ ಬೌಲರ್ ರಿಚರ್ಡ್ ಗ್ಲೀಸನ್ ಅವರನ್ನು 1.6 ಕೋಟಿ ರೂ.ಗೆ ತಂಡಕ್ಕೆ ಸೇರಿಸಿಕೊಂಡಿದೆ. ಗ್ಲೀಸನ್, ಈ ಹಿಂದೆ ಸಿಎಸ್‌ಕೆ ಮತ್ತು ಮುಂಬೈ ಇಂಡಿಯನ್ಸ್ ಪರ ಮೂರು ಪಂದ್ಯಗಳನ್ನು ಆಡಿದ್ದು, ಎರಡು ವಿಕೆಟ್‌ಗಳನ್ನು ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version