ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

ಕೃಷಿ ಅಥವಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಹಣಕಾಸಿನ ಹೊಂದಾಣಿಕೆ ಮಾಡುವುದಕ್ಕೆ ಪ್ರಯತ್ನಿಸುತ್ತಿದ್ದಲ್ಲಿ ಮುಖ್ಯವಾದ ಮಾತುಕತೆ ನಡೆಸುವುದಕ್ಕೆ ತೆರಳುವಾಗ ಹಸಿರು ಬಣ್ಣದ ಕರ್ಚೀಫ್ ಅಥವಾ ವಸ್ತ್ರವನ್ನು ಬಳಸಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ತಂದೆ ಅಥವಾ ತಂದೆ ಸಮಾನರಾದವರ ಜತೆಗೆ ವಿವಿಧ ವಿಚಾರಗಳಿಗೆ ಅಭಿಪ್ರಾಯ ಭೇದಗಳು ಉದ್ಭವ ಆಗಲಿದೆ. ಒಂದು ವೇಳೆ ನೀವು ಇದನ್ನು ಕೂತು, ಮಾತನಾಡಿ ಬಗೆಹರಿಸಿಕೊಳ್ಳದೇ ಹೋದಲ್ಲಿ ಮೂರನೇ ವ್ಯಕ್ತಿಯ ಮಧ್ಯಪ್ರವೇಶದಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟು ಹೋಗಬಹುದು. ನಿಮ್ಮ ಸಾಮರ್ಥ್ಯಕ್ಕೆ ಮೀರಿದ ಯಾವುದೇ ಕೆಲಸವನ್ನು ಒಪ್ಪಿಕೊಳ್ಳುವುದಕ್ಕೆ ಹೋಗಬೇಡಿ. ಬೇರೆಯವರಿಗೆ ಒಪ್ಪಿಸಿ, ಮುಗಿಸಬೇಕು ಎಂದು ಪ್ರಯತ್ನ ಪಟ್ಟರೂ ಸಾಧ್ಯವಾಗದೇ ಹೋದೀತು.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಕೃಷಿಕರಿದ್ದಲ್ಲಿ ಬೆಳೆ ನಷ್ಟ ಅಥವಾ ಬೇರೆ ಯಾವುದಾದರೂ ರೀತಿಯಿಂದ ಹಣಕಾಸಿನ ವಿಚಾರದಲ್ಲಿ ನಿಮಗೆ ನಷ್ಟ ಆಗುವಂಥ ಯೋಗ ಇದೆ. ಯಾರಿಗಾದರೂ ವಸ್ತುವನ್ನು ಕೊಡುವುದಾಗಿಯೋ ಅಥವಾ ಇಂಥ ಕೆಲಸವನ್ನು ಇಷ್ಟೇ ಸಮಯದಲ್ಲಿ ಮಾಡಿಕೊಡುತ್ತೇನೆ ಎಂದು ಮಾತು ನೀಡುವ ಮುನ್ನ ಒಂದಕ್ಕೆ ನಾಲ್ಕು ಬಾರಿಗೆ ಎಂಬಂತೆ ಸಾಧ್ಯಾಸಾಧ್ಯತೆಗಳನ್ನು ಅಳೆದು- ತೂಗಿ ನೋಡುವುದು ಮುಖ್ಯ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಡೆಯುವಷ್ಟು ದಿನ ನಾಣ್ಯ ಎಂಬಂತೆ ಕೆಲವು ಕೆಲಸಗಳನ್ನು ಡೆಡ್ ಲೈನ್ ಇಟ್ಟುಕೊಂಡು ಮಾಡುವುದಕ್ಕೆ ತೀರ್ಮಾನ ಮಾಡಲಿದ್ದೀರಿ. ಒಂದು ಹಂತದ ನಂತರ ಆ ಕೆಲಸವನ್ನು ಮಾಡಬಾರದು ಎಂಬ ಗಟ್ಟಿ ನಿರ್ಧಾರವನ್ನು ಕೈಗೊಳ್ಳಲಿದ್ದೀರಿ. ನಿಮ್ಮ ಈ ದಿನದ ನಡವಳಿಕೆ ಹಾಗೂ ಮಾತುಕತೆ ಆಪ್ತರಾದವರಿಗೆ ಆಶ್ಚರ್ಯ ಹಾಗೂ ಗಾಬರಿ ಉಂಟುಮಾಡುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 13ರ ದಿನಭವಿಷ್ಯ

ಇಂದು ಸಂಜೆ ಮಹಾಲಕ್ಷ್ಮಿಯ ಮುಂದೆ ತುಪ್ಪದ ದೀಪ ಹಚ್ಚಿ “ಲಕ್ಷ್ಮಿ ಅಷ್ಟೋತ್ತರ” ಪಠಿಸುವುದು ಆರ್ಥಿಕ ಒತ್ತಡ ಕಡಿಮೆ ಮಾಡಲು ಸಹಕಾರಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಿಮ್ಮ ಧೈರ್ಯದ ತೀರ್ಮಾನ ಈ ದಿನ ಉತ್ತಮವಾದ ಫಲ ನೀಡಲಿದೆ. ಇತರರು ನಿಮ್ಮನ್ನು ಎಚ್ಚರಿಸಿ, ಯಾವುದನ್ನು ಮಾಡಬಾರದು ಎಂದು ಹೇಳಿರುತ್ತಾರೋ ಅದೇ ಲಾಭದಾಯಕವಾಗಿ ಮಾರ್ಪಡಲಿದೆ. ಇನ್ನೂ ಸ್ಪಷ್ಟವಾಗಿ ಹೇಳಬೇಕು ಅಂದರೆ, ಇತರರು ತಮ್ಮಿಂದ ಮಾಡಲು ಸಾಧ್ಯವಿಲ್ಲ ಎಂದು ಕೈಬಿಟ್ಟ ಕೆಲಸವನ್ನು ನೀವು ಯಶಸ್ವಿಯಾಗಿ ಹಾಗೂ ಲಾಭದಾಯಕವಾಗಿಯೂ ಮಾಡಿ ಮುಗಿಸಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನಿಮಗೆ ನೀವೇ ದೊಡ್ಡ ಮಟ್ಟದ ಬೆಂಚ್ ಮಾರ್ಕ್ ಹಾಕಿಕೊಂಡು ಅದನ್ನು ನಿಮ್ಮಿಂದ ಮಾಡುವುದಕ್ಕೆ ಸಾಧ್ಯವೇ ಎಂಬ ಪ್ರಶ್ನೆಗಳನ್ನು ಇಟ್ಟುಕೊಳ್ಳುವುದಕ್ಕೆ ಹೋಗಬೇಡಿ. ಆಸ್ತಿ- ಜಮೀನು ವಿಚಾರದಲ್ಲಿ ವ್ಯಾಜ್ಯಗಳು ಇದ್ದಲ್ಲಿ ಅದನ್ನು ಬಗೆಹರಿಸಿಕೊಳ್ಳುವುದಕ್ಕೆ ದಾರಿಗಳು ಗೋಚರ ಆಗಲಿವೆ. ನಿಮ್ಮಲ್ಲಿ ಕೆಲವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂಥ ಅವಕಾಶಗಳಿವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಹಣಕಾಸಿನ ವಿಚಾರದಲ್ಲಿ ಯಾರು ವಿಪರೀತ ಒತ್ತಡದ ಸನ್ನಿವೇಶಗಳನ್ನು ಎದುರಿಸುತ್ತಿದ್ದೀರಿ ಅಂಥವರಿಗೆ ಅದರಿಂದ ಹೊರಬರುವುದಕ್ಕೆ ಇತರರು ಸಹಾಯ ಮಾಡುವ ಸಾಧ್ಯತೆ ಇದೆ. ಅಥವಾ ಒಂದು ವೇಳೆ ನಿಮ್ಮದೇ ವ್ಯವಹಾರಗಳು ಅಥವಾ ವ್ಯಾಪಾರದಲ್ಲಿ ಬರಬೇಕಾದ ಹಣವು ಬಾಕಿ ನಿಂತಿದ್ದಲ್ಲಿ ಅದನ್ನು ವಾಪಸ್ ಪಡೆಯುವುದಕ್ಕೆ ಅವಕಾಶಗಳಿವೆ. ಉದ್ಯೋಗ ವಿಚಾರವಾಗಿ ಯಾರಾದರೂ ಹೊಸ ಆಫರ್ ಹೇಳಿದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿ.

ಲೇಖನ- ಸ್ವಾತಿ ಎನ್.ಕೆ.

Source link

Money9 Financial Freedom Summit: ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್

ನವದೆಹಲಿ, ಮಾರ್ಚ್​​ 12: ಚಿಲ್ಲರೆ ಹೂಡಿಕೆದಾರರು ಷೇರು ಮಾರುಕಟ್ಟೆಯ ಬೆನ್ನೆಲುಬು. ಕಳೆದ ಎರಡು ವರ್ಷಗಳಲ್ಲಿ ಷೇರು ಮಾರುಕಟ್ಟೆಯ ನಿಜವಾದ ಹೀರೋಗಳೆಂದರೆ ರಿಟೇಲ್ ಹೂಡಿಕೆದಾರರು ಹೊರತು ಸಾಂಸ್ಥಿಕ ಹೂಡಿಕೆದಾರರಲ್ಲ. ಚಿಲ್ಲರೆ ಹೂಡಿಕೆದಾರರೇ ನವ ಭಾರತದ ಶಕ್ತಿ ಎಂದು ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026ರಲ್ಲಿ (Money9 Financial Summit) ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುಣ್ ದಾಸ್​​ (Barun Das) ಹೇಳಿದ್ದಾರೆ.

ಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದೇ ನಮ್ಮ ಗುರಿ: ಬರುಣ್ ದಾಸ್

ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026 ರಲ್ಲಿ ಮಾತನಾಡಿದ ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುಣ್ ದಾಸ್, ಟಿವಿ9 ನೆಟ್‌ವರ್ಕ್‌ನಲ್ಲಿ ಮನಿ9 ಅನ್ನು ನಾವು ಒಂದು ವಿಶೇಷ ಉದ್ದೇಶದೊಂದಿಗೆ ಆರಂಭಿಸಿದ್ದೇವೆ. ಭಾರತೀಯ ಭಾಷೆಗಳಲ್ಲೇ ಹಣಕಾಸು ಜ್ಞಾನವನ್ನು ಜನರಿಗೆ ತಲುಪಿಸುವ ಮೂಲಕ ಆ ನಿಟ್ಟಿನಲ್ಲಿ ಅವರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಹಾಯ ಮಾಡುವುದು ನಮ್ಮ ಉದ್ದೇಶ. ನಮ್ಮಲ್ಲಿ ಬಹುತೇಕ ಜನರು ಹಣಕ್ಕಾಗಿ ಕೆಲಸ ಮಾಡುತ್ತೇವೆ. ಆದರೆ ನಮ್ಮಗಾಗಿ ಹಣ ದುಡಿಯಲಾರಂಭಿಸಿದಾಗ ನಾವು ಆರ್ಥಿಕವಾಗಿ ಸ್ವಾತಂತ್ರ್ಯರಾಗುತ್ತೇವೆ ಎಂದರು.

2024 ಮತ್ತು 2025ರಲ್ಲಿ ವಿದೇಶಿ ಹೂಡಿಕೆದಾರರು ನಿವ್ವಳ ಮಾರಾಟಗಾರರಾಗಿದ್ದರೂ, ಆ ಸಮಯದಲ್ಲಿ ಚಿಲ್ಲರೆ ಹೂಡಿಕೆದಾರರು ಷೇರು ಮಾರುಕಟ್ಟೆಯ ಬೆನ್ನೆಲುಬಾದರು. ಕಳೆದ ಒಂದೂವರೆ ವರ್ಷದಲ್ಲಿ ಭಾರತದಲ್ಲಿ ಚಿನ್ನದ ಬೆಲೆ ದ್ವಿಗುಣವಾಗಿದೆ. ಭಾರತೀಯ ಕುಟುಂಬಗಳು ತಮ್ಮ ಪಾರಂಪರಿಕ ಸಂಪತ್ತಾದ ಚಿನ್ನದಿಂದ ಗಳಿಸಿದ ಮೌಲ್ಯವು, ಸಂಪೂರ್ಣ ಷೇರು ಮಾರುಕಟ್ಟೆಯ ಮಾರುಕಟ್ಟೆ ಮೌಲ್ಯದಿಂದ ಬಂದ ಲಾಭಕ್ಕೆ ಸಮಾನವಾಗಿದೆ ಎಂದು ಅವರು ತಿಳಿಸಿದರು.

ಭಾರತೀಯ ಕುಟುಂಬಗಳ ನಿಜವಾದ ಶಕ್ತಿಯೇ ಚಿನ್ನ

ನನಗೆ ಹಲವಾರು ಬಾರಿ ನಮ್ಮ ಅಜ್ಜಿ–ಅಜ್ಜಿಯವರು ಹೇಳಿದ್ದೇ ಸರಿ ಎನ್ನಿಸುತ್ತದೆ. ಚಿನ್ನ ನಿಜವಾಗಿಯೂ ಸಂಕಷ್ಟದ ಸಂದರ್ಭಗಳಲ್ಲಿ ನೆರವಾಗುತ್ತದೆ. ಕಳೆದ ಒಂದೂವರೆ ವರ್ಷದಲ್ಲಿ ಭಾರತದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ಸುಮಾರು ಒಂದು ಲಕ್ಷ ರೂಪಾಯಿವರೆಗೆ ಏರಿಕೆಯಾಗಿದೆ. ಭಾರತೀಯ ಕುಟುಂಬಗಳಲ್ಲಿ ಸುಮಾರು 27 ಸಾವಿರ ಟನ್ ಚಿನ್ನವಿದ್ದು, ಇದರ ಪರಿಣಾಮವಾಗಿ ಅವರ ಸಂಪತ್ತಿನಲ್ಲಿ ಸುಮಾರು 100 ಲಕ್ಷ ಕೋಟಿ ರೂ ಹೆಚ್ಚಳವಾಗಿದೆ. ಇದೇ ಭಾರತೀಯ ಕುಟುಂಬಗಳ ನಿಜವಾದ ಶಕ್ತಿ. ಜಗತ್ತಿನಲ್ಲೇ ಚಿನ್ನದ ಮೇಲೆ ಅತ್ಯಧಿಕ ಸ್ವಾಮ್ಯ ಹೊಂದಿರುವವರು ಭಾರತೀಯರು ಎಂದರು.

ಎಸ್‌ಐಪಿ ಹೂಡಿಕೆಯಲ್ಲಿ ದಾಖಲೆ

ಇತ್ತೀಚಿನ ದಿನಗಳಲ್ಲಿ ಸಿಸ್ಟಮ್ಯಾಟಿಕ್ ಇನ್ವೆಸ್ಟ್‌ಮೆಂಟ್ ಪ್ಲಾನ್ ಅಂದರೆ ಎಸ್​​ಐಪಿ ಮೂಲಕ ನಡೆಯುತ್ತಿರುವ ಹೂಡಿಕೆಗಳು ಗಮನಾರ್ಹವಾಗಿವೆ. 2025ರ ಡಿಸೆಂಬರ್ ಮತ್ತು 2026ರ ಜನವರಿ ತಿಂಗಳಲ್ಲಿ ಮಾಸಿಕವಾಗಿ ಸುಮಾರು 31 ಸಾವಿರ ಕೋಟಿ ರೂ ಎಸ್‌ಐಪಿ ಹೂಡಿಕೆ ನಡೆದಿದೆ. ಜನವರಿ ವೇಳೆಗೆ ದೇಶದಲ್ಲಿ 26 ಕೋಟಿಗೂ ಹೆಚ್ಚು ಎಸ್‌ಐಪಿ ಖಾತೆಗಳು ಇದ್ದವು.

ಇದನ್ನೂ ಓದಿ: Money9 Summit: 2047ರೊಳಗೆ ಮಹಾರಾಷ್ಟ್ರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ: ಮಹಾರಾಷ್ಟ್ರ ಸಿಎಂ ಫಡ್ನವಿಸ್

ಇನ್ನು ಭಾರತದಲ್ಲಿ ಚಿಲ್ಲರೆ ಹೂಡಿಕೆದಾರರು ಇದೀಗ ಪ್ರಬುದ್ಧರಾಗಿದ್ದು, ಜೊತೆಗೆ ಬುದ್ಧಿವಂತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ ಹಣಕಾಸು ಒಳಗೊಳ್ಳುವಿಕೆ ಅಭಿಯಾನದ ಪ್ರಯೋಜನವನ್ನು ಅವರು ಸಮರ್ಪಕವಾಗಿ ಪಡೆದುಕೊಂಡಿದ್ದಾರೆ. ‘ಮ್ಯೂಚುವಲ್ ಫಂಡ್ ಸರಿಯೇ’ ಎಂಬ ಸಂದೇಶವನ್ನು ಅವರು ಅರ್ಥಮಾಡಿಕೊಂಡಿದ್ದಾರೆ. ಕ್ರಮಬದ್ಧ ಹೂಡಿಕೆಗಳ ಮೂಲಕವೇ ಭವಿಷ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ಭಾರತದ ಆರ್ಥಿಕತೆಯಲ್ಲಿ ನಿಜವಾದ ಸಂಪತ್ತು ನಿರ್ಮಾಣ ಸಾಧ್ಯವೆಂದು ಅವರು ಅರಿತುಕೊಂಡಿದ್ದಾರೆ ಎಂದು ಬರುಣ್ ದಾಸ್ ಹೇಳಿದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್​​ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ಬೆಂಗಳೂರು, (ಮಾರ್ಚ್ 12): 2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್​​ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸಿರುವ ಭಾರೀ ಸಂಚನ ಮೂಡಿಸಿದೆ. ಹೌದು…ಬೆಂಗಳೂರಿನ ಬೌರಿಂಗ್ ಕ್ಲಬ್​ನಲ್ಲಿ ಸಿಎಂ‌ ಹಾಗೂ ಡಿಸಿಎಂ ಬಣಗಳ ಶಾಸಕರು ಒಟ್ಟಾಗಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಇನ್ನು ಈ ಸಭೆ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿ- ಎಸ್​ಆರ್​ಹೆಚ್

2026 ರ ಐಪಿಎಲ್ ವೇಳಾಪಟ್ಟಿಯ (IPL 2026 schedule) ಮೊದಲ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28 ರಂದು ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುಂಚೆಯೇ ಎರಡೂ ತಂಡಗಳು ದೊಡ್ಡ ಸಂಕಷ್ಟಕ್ಕೆ ಸಿಲುಕಿವೆ. ವಾಸ್ತವವಾಗಿ, ಎರಡೂ ತಂಡಗಳ ಇಬ್ಬರು ಸ್ಟಾರ್ ಆಟಗಾರರು ಮೊದಲ ಪಂದ್ಯದಲ್ಲಿ ಆಡುವುದು ಖಚಿತವಾಗಿಲ್ಲ. ಗಾಯಗಳಿಂದ ಬಳಲುತ್ತಿರುವ ಮತ್ತು ಇನ್ನೂ ಫಿಟ್‌ನೆಸ್ ಮರಳಿ ಪಡೆಯದ ಜೋಶ್ ಹೇಜಲ್‌ವುಡ್ ಮತ್ತು ಪ್ಯಾಟ್ ಕಮ್ಮಿನ್ಸ್ ಉದ್ಘಾಟನಾ ಪಂದ್ಯದಲ್ಲಿ ಆಡುವುದು ಅನುಮಾನ. ಪ್ಯಾಟ್ ಕಮ್ಮಿನ್ಸ್ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿದ್ದರೆ, ಜೋಶ್ ಹೇಜಲ್‌ವುಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ಜೀವಾಳವಾಗಿದ್ದಾರೆ. ಹೀಗಾಗಿ ಇವರಿಬ್ಬರ ಅಲಭ್ಯತೆ ಎರಡೂ ತಂಡಗಳಿಗೆ ದೊಡ್ಡ ತಲೆನೋವಾಗಿದೆ.

ಪ್ಯಾಟ್ ಕಮ್ಮಿನ್ಸ್-ಹೇಜಲ್‌ವುಡ್ ಡೌಟ್

ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹೇಜಲ್‌ವುಡ್ ಗಾಯದ ಕಾರಣದಿಂದಾಗಿ 2026 ರ ಟಿ20 ವಿಶ್ವಕಪ್​ನಿಂದಲೂ ಹೊರಬಿದಿದ್ದರು. ಇದೀಗ ಇವರಿಬ್ಬರು ಐಪಿಎಲ್ 2026 ರ ಆರಂಭಿಕ ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು ಎಂದು ವರದಿಯಾಗಿದೆ. ಇಬ್ಬರೂ ಆಟಗಾರರು ಇನ್ನೂ ಚೇತರಿಕೆಯ ಹಾದಿಯಲಿದ್ದು, ವೈದ್ಯಕೀಯ ಅನುಮತಿ ಪಡೆದ ನಂತರವೇ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ.

ಪ್ಯಾಟ್ ಕಮ್ಮಿನ್ಸ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಜುಲೈ 2025 ರ ವೆಸ್ಟ್ ಇಂಡೀಸ್ ಪ್ರವಾಸದ ನಂತರ ಈ ಗಾಯಕ್ಕೆ ತುತ್ತಾದ ಕಮ್ಮಿನ್ಸ್, ಇದರಿಂದಾಗಿ ಆಶಸ್ ಸರಣಿಯ ಆರಂಭಿಕ ಪಂದ್ಯಗಳಿಂದ ಹೊರಬಿದ್ದರು. ಆದರೆ ಅವರ ಚೇತರಿಕೆ ಪೂರ್ಣಗೊಳ್ಳದ ಕಾರಣ ಅವರನ್ನು 2026 ರ ಟಿ20 ವಿಶ್ವಕಪ್‌ನಿಂದಲೂ ಹೊರಗಿಡಲಾಯಿತು. ಇನ್ನು ವೇಗಿ ಹೇಜಲ್‌ವುಡ್ ಮಂಡಿರಜ್ಜು ಗಾಯ ಮತ್ತು ಅಕಿಲೀಸ್ ಸ್ನಾಯುರಜ್ಜು ಗಾಯದಿಂದ ಬಳಲುತ್ತಿದ್ದಾರೆ. ನವೆಂಬರ್ 2025 ರಲ್ಲಿ ಶೆಫೀಲ್ಡ್ ಶೀಲ್ಡ್ ಪಂದ್ಯದ ಸಮಯದಲ್ಲಿ ಹೇಜಲ್‌ವುಡ್ ಈ ಗಾಯಕ್ಕೆ ತುತ್ತಾದರು. ಇದರಿಂದಾಗಿ ಅವರು ಆಶಸ್‌ ಸರಣಿಯಿಂದಲೂ ಹೊರಗುಳಿದರು. ಅವರ ಚೇತರಿಕೆ ನಿಧಾನವಾಗಿದ್ದರಿಂದ 2026 ರ ಟಿ20 ವಿಶ್ವಕಪ್‌ನಿಂದಲೂ ಅವರನ್ನು ಹೊರಗಿಡಲಾಯಿತು.

IPL 2026: 6 ಉದ್ಘಾಟನಾ ಪಂದ್ಯಗಳನ್ನಾಡಿರುವ ಆರ್​ಸಿಬಿ ಗೆದ್ದಿದ್ದೆಷ್ಟು? ಸೋತಿದ್ದೆಷ್ಟು?

ಕಮ್ಮಿನ್ಸ್-ಹೇಜಲ್‌ವುಡ್ ಐಪಿಎಲ್ ಪ್ರದರ್ಶನ

ಪ್ಯಾಟ್ ಕಮ್ಮಿನ್ಸ್ 72 ಐಪಿಎಲ್ ಪಂದ್ಯಗಳಲ್ಲಿ ಪ್ರತಿ ಓವರ್‌ಗೆ 8.8 ರನ್‌ಗಳ ಎಕಾನಮಿ ದರದೊಂದಿಗೆ 79 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕಳೆದ ವರ್ಷ 14 ಪಂದ್ಯಗಳನ್ನಾಡಿದ ಕಮ್ಮಿನ್ಸ್ 16 ವಿಕೆಟ್‌ಗಳನ್ನು ಕಬಳಿಸಿದ್ದರು. ಇತ್ತ ಹೇಜಲ್‌ವುಡ್ 39 ಪಂದ್ಯಗಳಲ್ಲಿ 57 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಹೇಜಲ್​ವುಡ್ ಆಡಿದ 12 ಪಂದ್ಯಗಳಲ್ಲಿ 22 ವಿಕೆಟ್‌ಗಳನ್ನು ಕಬಳಿಸಿದ್ದರು. ಅವರ ಈ ಪ್ರದರ್ಶನವು ಆರ್‌ಸಿಬಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ನಟಿ ಚೈತ್ರಾ ಜೆ. ಆಚಾರ್ (Chaithra J Achar) ಅವರು ಗಾಯನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಚೈತ್ರಾ ಆಚಾರ್ ಅವರು ಹಲವು ಗೀತೆಗಳನ್ನು ಹಾಡುತ್ತಾರೆ. ಈಗ ಅವರು ‘ಕರಿಮಾಯಿ ತಾಯೆ’ (Karimaayi Taaye) ಗೀತೆಯನ್ನು ಹಾಡಿದ್ದಾರೆ. ಅವರ ಕಂಠಕ್ಕೆ ಅಭಿಮಾನಿಗಳು ತಲೆದೂಗಿದ್ದಾರೆ. ಈ ಹಾಡನ್ನು ಕಲಿಯಲು ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ ಬ್ಯಾಗ್ ಕದ್ದುಕೊಂಡು ಹೋದರು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಇದನ್ನೂ ಓದಿ: ಬಸ್​​​ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ: ಊಟಕ್ಕೆ ನಿಲ್ಲಿಸಿದಾಗ ಕೃತ್ಯ

Source link

Money9 Summit: 2047ರೊಳಗೆ ಮಹಾರಾಷ್ಟ್ರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ: ಮಹಾರಾಷ್ಟ್ರ ಸಿಎಂ ಫಡ್ನವಿಸ್

Money9 Financial Freedom Summit 2026: Money9 ನ ನಾಲ್ಕನೇ ಆವೃತ್ತಿಯ ಹಣಕಾಸು ಸ್ವಾತಂತ್ರ್ಯ ಶೃಂಗಸಭೆ (ಫೈನಾನ್ಷಿಯಲ್ ಫ್ರೀಡಂ ಸಮಿಟ್ 2026) ಪ್ರಾರಂಭವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ಣವೀಸ್ ಈ ಶೃಂಗಸಭೆಯಲ್ಲಿ ತಮ್ಮ ಸಂದೇಶವನ್ನು ಹಂಚಿಕೊಂಡರು. TV9 ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಬರುಣ್ ದಾಸ್ (Barun Das) ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ವೀಡಿಯೊ ಸಂದೇಶದ ಮೂಲಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು.

ಮಹಾರಾಷ್ಟ್ರ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದ ಫಡಣವಿಸ್

ಮಹಾರಾಷ್ಟ್ರ ಇಂದು ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಮಹಾ ಸಿಎಂ ಫಡ್ನವೀಸ್ ಹೇಳಿದರು. ಮಹಾರಾಷ್ಟ್ರದ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ. ಇಂದು, ಭಾರತೀಯ ರಾಜ್ಯಗಳಲ್ಲೇ ಮಹಾರಾಷ್ಟ್ರ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದೆ. ಮಹಾರಾಷ್ಟ್ರವನ್ನು ಒಂದು ದೇಶವಾಗಿ ಪರಿಗಣಿಸಿ ನೋಡಿದರೂ, ವಿಶ್ವದ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರಗಳಲ್ಲಿ ಒಂದೆನಿಸಬಲ್ಲುದು ಎಂದು ದೇವೇಂದ್ರ ಫಡ್ಣವಿಸ್ ಅಭಿಪ್ರಾಯಪಟ್ಟರು.

ಇದನ್ನೂ ಓದಿ:

ಎಲ್ಲಾ ಕ್ಷೇತ್ರಗಳಲ್ಲಿ ಮಹಾರಾಷ್ಟ್ರದ್ದು ಮೊದಲ ಸ್ಥಾನ

ವಿದೇಶಿ ಹೂಡಿಕೆಯಾಗಿರಲಿ, ಅತಿ ಹೆಚ್ಚು ಮೂಲಸೌಕರ್ಯ ಯೋಜನೆಗಳಿರಲಿ, ಉದ್ಯೋಗ ಸೃಷ್ಟಿಯಾಗಿರಲಿ ಅಥವಾ ಹೆಚ್ಚಿನ ಸ್ಟಾರ್ಟಪ್‌ಗಳಿರಲಿ, ಮಹಾರಾಷ್ಟ್ರವು ಎಲ್ಲಾ ವಲಯಗಳಲ್ಲಿಯೂ ಪ್ರಥಮ ಸ್ಥಾನದಲ್ಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗಳು ತಿಳಿಸಿದರು. ಒಂದು ಕಾಲದಲ್ಲಿ ಮುಂಬೈ ಮತ್ತು ಪುಣೆಗೆ ಸೀಮಿತವಾಗಿದ್ದ ಅಭಿವೃದ್ಧಿಯು ಈಗ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಹೊಸ ಹೂಡಿಕೆ ಅವಕಾಶಗಳು ತೆರೆಯುತ್ತಿವೆ. ಅದು ಗಡ್ಚಿರೋಲಿಯಾಗಲಿ ಅಥವಾ ನಂದುರ್ಬಾರ್, ಜಲಗಾಂವ್ ಅಥವಾ ನಾಂದೇಡ್ ಆಗಿರಲಿ, ಹಿಂದೆ ಹೂಡಿಕೆಯ ಕೊರತೆಯಿದ್ದ ಪ್ರತಿಯೊಂದು ಜಿಲ್ಲೆಯೂ ಈಗ ಹೂಡಿಕೆಯಲ್ಲಿ ಪೈಪೋಟಿ ನಡೆಸುತ್ತಿವೆ ಎಂದರು.

ಮೂರು ಹಂತಗಳಲ್ಲಿ ಮಹಾರಾಷ್ಟ್ರದ ಅಭಿವೃದ್ಧಿಗೆ ಪರಿಕಲ್ಪನೆ

ಒಂದು ದೊಡ್ಡ ಸಾಹಸಗಾಥೆಯೇ ನಡೆಯುತ್ತಿದೆ. 2047 ರ ವೇಳೆಗೆ $5 ಟ್ರಿಲಿಯನ್ ಆರ್ಥಿಕತೆಯ ಕನಸಿನೊಂದಿಗೆ ನಾವು ಮುಂದುವರಿಯಲು ಪ್ರಾರಂಭಿಸಿದ್ದೇವೆ. ಇದನ್ನು ನನಸು ಮಾಡುವುದು ಅಸಾಧ್ಯವೇನಲ್ಲ ಎಂದ ದೇವೇಂದ್ರ ಫಡಣವಿಸ್ ಅವರು, ಅಭಿವೃದ್ಧಿ ಹೊಂದಿದ ಮಹಾರಾಷ್ಟ್ರಕ್ಕಾಗಿ ಮೂರು ಹಂತದ ದೃಷ್ಟಿಕೋನವನ್ನು ರೂಪಿಸಿರುವ ಸಂಗತಿಯನ್ನು ತಿಳಿಸಿದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ ಜನಗಳೇ ಗ್ಯಾಸ್ ಸಿಲಿಂಡರ್ ಚಿಂತೆ ಬಿಡಿ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಕೇಳಿ

​ಬೆಂಗಳೂರು, (ಮಾರ್ಚ್ 12): ಕರ್ನಾಟಕದಲ್ಲಿ (Karnataka) ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ (gas cylinder) ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟನೆಯನ್ನು ನೀಡಿದೆ. ರಾಜ್ಯದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸುಗಮ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಬಗ್ಗೆ ಹರಡುತ್ತಿರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಸಾಕಷ್ಟು ದಾಸ್ತಾನು ಲಭ್ಯತೆ

ರಾಜ್ಯ ಸರ್ಕಾರವು ಪ್ರಮುಖ ತೈಲ ಕಂಪನಿಗಳಾದ IOC, BPC ಮತ್ತು HPC ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಿದೆ. ರಾಜ್ಯದಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ ಮತ್ತು ಮುಂಬರುವ ದಿನಗಳಿಗೂ ಸರಿಹೊಂದುವಷ್ಟು ಸಾಕಷ್ಟು ದಾಸ್ತಾನು ಲಭ್ಯವಿದೆ ಎಂದು ತೈಲ ಕಂಪನಿಗಳು ದೃಢಪಡಿಸಿವೆ ಅಂತ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಸಿಹಿಸುದ್ದಿ: ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ, ಹೋಟೆಲ್​ಗಳು ಬಂದ್ ಆಗಲ್ಲ

​ಸಾರ್ವಜನಿಕರಿಗೆ ಮನವಿ

ಆತಂಕ ಬೇಡ: ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಬಗ್ಗೆ ಹರಡುತ್ತಿರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಅನಗತ್ಯ ಬುಕಿಂಗ್ ಬೇಡ: ಸಿಲಿಂಡರ್‌ಗಳ ಕೊರತೆಯಾಗಬಹುದು ಎಂಬ ಆತಂಕದಿಂದ ಸಾರ್ವಜನಿಕರು ಅನಗತ್ಯವಾಗಿ ಸಿಲಿಂಡರ್‌ಗಳನ್ನು ಮುಂಗಡವಾಗಿ ಬುಕ್ ಮಾಡುವುದು ಅಥವಾ ಸಂಗ್ರಹಿಸಿಡುವುದನ್ನು ಮಾಡಬಾರದು. ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಯಾಗದಂತೆ ಸಹಕರಿಸಲು ಕೋರಲಾಗಿದೆ.

ಆದ್ಯತಾ ವಲಯಗಳಿಗೆ ಪೂರೈಕೆ

​ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಅಗತ್ಯ ಸೇವೆಗಳಾದ ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ಆರೋಗ್ಯ ಕೇಂದ್ರಗಳು, ವಿದ್ಯಾರ್ಥಿನಿಲಯಗಳು ಮತ್ತು ಅಂಗನವಾಡಿ ಕೇಂದ್ರಗಳು, ಶಾಲೆಗಳು ಮತ್ತು ಕಾಲೇಜುಗಳ ಬಿಸಿಯೂಟ ಯೋಜನೆಗಳು ಮತ್ತು ಕಾರಾಗೃಹಗಳು ಮತ್ತು ಇತರ ಸರ್ಕಾರಿ ಸಂಸ್ಥೆಗಳಿಗೆ , ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಹಾಗೂ ವ್ಯತ್ಯಯವಾಗದಂತೆ ಕ್ರಮ ವಹಿಸಲು ತೈಲ ಕಂಪನಿಗಳಿಗೆ ಸೂಚಿಸಿದೆ.

ಕಾನೂನು ಕ್ರಮದ ಎಚ್ಚರಿಕೆ

ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿಡುವುದು, ಕಾಳಸಂತೆಯಲ್ಲಿ ಮಾರಾಟ ಮಾಡುವುದು ಅಥವಾ ರೀಫಿಲ್ಲಿಂಗ್ (Refilling) ದಂಧೆಯಲ್ಲಿ ತೊಡಗುವುದು ಕಂಡುಬಂದಲ್ಲಿ Essential Commodities Act 1955 (ಅಗತ್ಯ ವಸ್ತುಗಳ ಕಾಯ್ದೆ), LPG Control Order 2000 ಮತ್ತು​ Petroleum Products Order 1999 ರ ಕಾಯ್ದೆಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಡಳಿತಕ್ಕೆ ಸೂಚನೆ

ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಎಲ್‌ಪಿಜಿ ವಿತರಣಾ ಕೇಂದ್ರಗಳ ಮೇಲೆ ನಿಗಾ ಇಡಲು ಮತ್ತು ಸುಗಮ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಅವರು ಆಹಾರಪ್ರಿಯೆ ಕೂಡ ಹೌದು. ದೆಹಲಿಗೆ ತೆರಳಿದ ಅವರು ಡಯೆಟ್ ಮರೆತು ತಮ್ಮ ಇಷ್ಟದ ತಿಂಡಿ ಸೇವಿಸಿದ್ದಾರೆ. ತಟ್ಟೆ ತುಂಬ ಊಟ ಹಾಕಿಸಿಕೊಂಡಿರುವ ಈ ವಿಡಿಯೋವನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ಮೇಘಾಲಯದ ಮೋಮೋಸ್ (Meghalaya Momos) ತಿಂದು ಅವರು ಎಂಜಾಯ್ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆ ಸಿನಿಮಾಗಳಲ್ಲಿ ಕೂಡ ರಾಗಿಣಿ ದ್ವಿವೇದಿ ಅವರು ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಅವರು ಸಕ್ರಿಯರಾಗಿದ್ದಾರೆ. ಈ ರೀತಿಯ ಅನೇಕ ವಿಡಿಯೋಗಳನ್ನು ಅವರು ಅಭಿಮಾನಿಗಳಿಗಾಗಿ ಪೋಸ್ಟ್ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version