Headlines

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ…

Read More

Money9 Summit: 2047ರೊಳಗೆ ಮಹಾರಾಷ್ಟ್ರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ: ಮಹಾರಾಷ್ಟ್ರ ಸಿಎಂ ಫಡ್ನವಿಸ್

Money9 Financial Freedom Summit 2026: Money9 ನ ನಾಲ್ಕನೇ ಆವೃತ್ತಿಯ ಹಣಕಾಸು ಸ್ವಾತಂತ್ರ್ಯ ಶೃಂಗಸಭೆ (ಫೈನಾನ್ಷಿಯಲ್ ಫ್ರೀಡಂ ಸಮಿಟ್ 2026) ಪ್ರಾರಂಭವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ಣವೀಸ್ ಈ ಶೃಂಗಸಭೆಯಲ್ಲಿ ತಮ್ಮ ಸಂದೇಶವನ್ನು ಹಂಚಿಕೊಂಡರು. TV9 ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಬರುಣ್ ದಾಸ್ (Barun Das) ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ವೀಡಿಯೊ ಸಂದೇಶದ ಮೂಲಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಮಹಾರಾಷ್ಟ್ರ ವೇಗವಾಗಿ ಅಭಿವೃದ್ಧಿ…

Read More

ಕರ್ನಾಟಕದ ಜನಗಳೇ ಗ್ಯಾಸ್ ಸಿಲಿಂಡರ್ ಚಿಂತೆ ಬಿಡಿ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಕೇಳಿ

​ಬೆಂಗಳೂರು, (ಮಾರ್ಚ್ 12): ಕರ್ನಾಟಕದಲ್ಲಿ (Karnataka) ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ (gas cylinder) ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟನೆಯನ್ನು ನೀಡಿದೆ. ರಾಜ್ಯದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸುಗಮ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಬಗ್ಗೆ ಹರಡುತ್ತಿರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಸಾಕಷ್ಟು ದಾಸ್ತಾನು ಲಭ್ಯತೆ ರಾಜ್ಯ ಸರ್ಕಾರವು ಪ್ರಮುಖ ತೈಲ…

Read More

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಅವರು ಆಹಾರಪ್ರಿಯೆ ಕೂಡ ಹೌದು. ದೆಹಲಿಗೆ ತೆರಳಿದ ಅವರು ಡಯೆಟ್ ಮರೆತು ತಮ್ಮ ಇಷ್ಟದ ತಿಂಡಿ ಸೇವಿಸಿದ್ದಾರೆ. ತಟ್ಟೆ ತುಂಬ ಊಟ ಹಾಕಿಸಿಕೊಂಡಿರುವ ಈ ವಿಡಿಯೋವನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ಮೇಘಾಲಯದ ಮೋಮೋಸ್ (Meghalaya Momos) ತಿಂದು ಅವರು ಎಂಜಾಯ್ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆ ಸಿನಿಮಾಗಳಲ್ಲಿ ಕೂಡ ರಾಗಿಣಿ ದ್ವಿವೇದಿ ಅವರು ಬ್ಯುಸಿ ಆಗಿದ್ದಾರೆ. ಸೋಶಿಯಲ್…

Read More

ಮೌಲಾನಾ ಆಜಾದ್ ಆಂಗ್ಲ ಶಾಲೆ ಉನ್ನತೀಕರಣ: ಮಂಡ್ಯ ಮೈಶುಗರ್ ಕಾರ್ಖಾನೆ ದುರಸ್ತಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು, ಮಾರ್ಚ್​ 12: ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಒಟ್ಟು 28 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮಂಡ್ಯದ ಮೈಶುಗರ್ ಕಾರ್ಖಾನೆ ದುರಸ್ತಿ ಸೇರಿದಂತೆ 76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳನ್ನ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಗೊಳಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 813 ಕೋಟಿ ರೂ. ವೆಚ್ಚದಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ ಕೆಎಚ್‌ಬಿ ಸೂರ್ಯಸಿಟಿಯಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮಹತ್ವದ ಅನುಮೋದನೆ…

Read More

ಹಾರ್ಮುಜ್ ಜಲಸಂಧಿ ಮುಚ್ಚಿರುತ್ತದೆ; ಮುಯ್ಯಿ ತೀರಿಸಲು ಮರೆಯಲ್ಲ: ಇರಾನ್ ಮುಖ್ಯಸ್ಥ

ನವದೆಹಲಿ, ಮಾರ್ಚ್ 12: ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಿಗೆ ಇಂಧನ ಪೂರೈಕೆಗೆ ಆಯಕಟ್ಟಿನ ಸ್ಥಳವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಇರಾನ್​ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೆನೈ ಅವರು ಕರೆ ನೀಡಿದ್ದಾರೆ. ಹಾಗೆಯೇ, ಅಮೆರಿಕದ ಎಲ್ಲಾ ಮಿಲಿಟರಿ ನೆಲೆಗಳನ್ನು ತತ್​ಕ್ಷಣವೇ ಮುಚ್ಚಬೇಕೆಂದೂ ಗಲ್ಫ್ ದೇಶಗಳಿಗೆ ಅವರು ಅಪ್ಪಣೆ ಮಾಡಿದ್ದಾರೆ. ‘ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಕ್ರಮ ಮುಂದುವರಿಯುತ್ತದೆ’ ಎಂದು ಮೊಜ್ತಬಾ ಹೇಳಿದ್ದಾರೆ. ವೈರಿಗಳಿಗೆ ಹೊಸ ಶಾಕ್ ಕೊಡಲು ಇರಾನ್ ಅಣಿ… ಇದೇ ವೇಳೆ, ಇರಾನ್ ಮುಖ್ಯಸ್ಥರು ಅಮೆರಿಕ…

Read More

ಮೊನಾಲಿಸಾ ಭೋಸ್ಲೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗ್ತಾರಾ? ಪತಿ ಫರ್ಮಾನ್ ಖಾನ್ ಸ್ಪಷ್ಟನೆ

ಪ್ರಯಾಗ್‌ರಾಜ್ ಕುಂಭಮೇಳದ ಸಂದರ್ಭದಲ್ಲಿ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆಗಿ ಹೊರಹೊಮ್ಮಿದ್ದ 18 ವರ್ಷದ ಮೊನಾಲಿಸಾ ಭೋಸ್ಲೆ (Monalisa Bhosle) ತಮ್ಮ ಪ್ರಿಯಕರ ಫರ್ಮಾನ್ ಖಾನ್ ಅವರೊಂದಿಗೆ ಕೇರಳದಲ್ಲಿ ವಿವಾಹವಾಗಿದ್ದಾರೆ. ಕೇರಳದ ಪೂವಾರ್ ಸಮೀಪದ ಅರುಮನೂರಿನ ನಯನಾರ್ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ಈ ಜೋಡಿ ಮದುವೆಯಾಗಿದೆ. ಈ ಮದುವೆ ಬಳಿಕ ಮೊನಾಲಿಸಾ ಬೋಸ್ಲೆ ಅವರು ಇಸ್ಲಾಂ (Islam) ಧರ್ಮಕ್ಕೆ ಮತಾಂತರ ಆಗುತ್ತಾರಾ ಎಂಬ ಪ್ರಶ್ನೆಗೆ ಕೆಲವರಿಗೆ ಮೂಡಿದೆ. ಅದಕ್ಕೆ ಈ ಜೋಡಿ ಉತ್ತರ ನೀಡಿದೆ. ಮದುವೆಯ ನಂತರ ನಡೆದ…

Read More

ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷಿತರ ಬಿಡುಗಡೆ: ಹೊಸ ಬದುಕಿನತ್ತ 31 ಕೈದಿಗಳು

ಬೆಂಗಳೂರು, (ಮಾರ್ಚ್ 12): ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕರ್ನಾಟಕದ (Karnataka) ವಿವಿಧ ಜೈಲಿನಲ್ಲಿರುವ ಒಟ್ಟು 31 ಕೈದಿಗಳ (Prisoners) ಬಿಡುಗಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೈದಿಗಳನ್ನು ಅವರ ‘ಸನ್ನಡತೆ’ಯ ಆಧಾರದ ಮೇಲೆ ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ ಇಂದು (ಮಾರ್ಚ್ 12) ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದ ಕೈದಿಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಅವರಿಗೆ ಹೊಸ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸುವ ಮಾನವೀಯ ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ನಾಳೆ (ಮಾರ್ಚ್ 13)…

Read More

ರಾಜ್ಯದ ಪ್ರತಿಷ್ಠಿತ ಮಠದಲ್ಲಿ ಲೆಕ್ಕ ಪತ್ರ ವಿಚಾರಕ್ಕೆ ಗಲಾಟೆ: ಕೋಟ್ಯಂತರ ರೂ ಅವ್ಯವಹಾರ ಆರೋಪ

ದಾವಣಗೆರೆ, ಮಾರ್ಚ್​​ 12: ಹರಿಹರದ ಪಂಚಮಸಾಲಿ ಮಠ (harihara panchamasali peetha) ರಾಜ್ಯದ ಪ್ರತಿಷ್ಠಿತ ಮಠ. ಈ ಮಠಕ್ಕೆ ಕೋಟ್ಯಂತರ ಭಕ್ತರಿದ್ದಾರೆ. ನಿತ್ಯ ದಾಸೋಹ ಕೂಡ ಶುರುವಾಗಿದೆ. ರಾಜ್ಯದ ಬಹುತೇಕ ಕಡೆ ಈ ಮಠದ ಆಸ್ತಿ ಇದೆ. ಇಂತಹ ಮಠದಲ್ಲಿ ಇದೀಗ ಲೆಕ್ಕ ಪತ್ರ ವಿಚಾರಕ್ಕೆ ಗಲಾಟೆ ಶುರುವಾಗಿದೆ. ಕೋಟ್ಯಂತರ ರೂ ಅವ್ಯವಹಾರ ನಡೆದಿದೆ. ಮಾತಿನ ಚಕಮಕಿ ವೇಳೆ ನೂಕಾಟ ತಳ್ಳಾಟ ಕೂಡ ನಡೆದಿದೆ. ಮೇಲಾಗಿ ಸರ್ಕಾರದಿಂದ ಬಂದ ಹಣವಾದರೂ ಎಲ್ಲಿ ಎಂಬ ಹತ್ತು ಹಲವಾರು ಪ್ರಶ್ನೆಗೆ…

Read More

Chanakya Niti: ಜೀವನದಲ್ಲಿ ಹಣ, ಶ್ರೀಮಂತಿಕೆ ಗಳಿಸಲು ಚಾಣಕ್ಯರ ಈ ಮಾತುಗಳನ್ನು ಪಾಲಿಸಿ

ಶ್ರೀಮಂತರಾಗಬೇಕು, ಜೀವನದಲ್ಲಿ ದುಡ್ಡು ಗಳಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಕಠಿಣ ಪರಿಶ್ರಮ ಪಡುತ್ತಾರೆ. ಹಣ ಗಳಿಸಲು ಕಠಿಣ ಪರಿಶ್ರಮ ಒಂದೇ ಸಾಲಲ್ಲ, ಈ ಕೆಲವೊಂದು ಸಲಹೆಗಳನ್ನೂ ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಹಾಗಿದ್ರೆ ಆಚರ್ಯ ಚಾಣಕ್ಯರು ಹೇಳಿರುವಂತೆ  ಜೀವನದಲ್ಲಿ ಆರ್ಥಿಕ ಸ್ಥಿರತೆ ಮತ್ತು ಸಮೃದ್ಧಿ ಲಭಿಸಲು ಯಾವ ವಿಷಯಗಳಿಗೆ ಗಮನ ಕೊಡಬೇಕು ಎಂಬುದನ್ನು ನೋಡೋಣ ಬನ್ನಿ. ಹಣ, ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು? ದುಂದುವೆಚ್ಚವನ್ನು ತಪ್ಪಿಸಿ: ಹಣವು…

Read More