World Liver Day 2026: ಲಿವರ್‌ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು – Kannada News | World Liver Day 2026: Know the history and significance of World Liver Day

ಯಕೃತ್ತು (Liver) ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ಇದನ್ನು ದೇಹದ ಶಕ್ತಿಕೇಂದ್ರ ಎಂದೂ ಕರೆಯಲಾಗುತ್ತದೆ. ಇದು ದೇಹದಲ್ಲಿನ ವಿಷಕಾರಿ ವಸ್ತುಗಳನ್ನು ತೆಗೆದು ಹಾಕುವುದು, ರಕ್ತವನ್ನು ಶುದ್ಧೀಕರಿಸುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಸೇರಿದಂತೆ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.  ಹಾಗಾಗಿ ಲಿವರ್‌ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಇಂದಿನ ಕಳಪೆ ಜೀವನಶೈಲಿ, ಆನಾರೋಗ್ಯಕ ಆಹಾರ ಪದ್ಧತಿ ಯಕೃತ್ತಿನ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿವೆ. ಹಾಗಾಗಿ ಲಿವರ್‌ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 19 ವಿಶ್ವ ಯಕೃತ್ತು ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ವಿಶ್ವ ಯಕೃತ್ತಿನ ದಿನದ ಇತಿಹಾಸವೇನು?

2010 ರಲ್ಲಿ, ಯುರೋಪಿಯನ್ ಅಸೋಸಿಯೇಷನ್ ​​ಫಾರ್ ದಿ ಸ್ಟಡಿ ಆಫ್ ದಿ ಲಿವರ್ (EASL) 1966 ರಲ್ಲಿ ಪ್ರಾರಂಭವಾದ EASL ನ ಸ್ಥಾಪನಾ ವಾರ್ಷಿಕೋತ್ಸವದ ಗೌರವಾರ್ಥವಾಗಿ ಮೊದಲ ಬಾರಿಗೆ ವಿಶ್ವ ಲಿವರ್ ದಿನವನ್ನು ಆಚರಿಸಿತು. ಅಂದಿನಿಂದ ಯಕೃತ್ತಿನ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಏಪ್ರಿಲ್ 19 ರಂದು ವಿಶ್ವ ಲಿವರ್ ದಿನವನ್ನಾಗಿ ಆಚರಿಸಲಾಗುತ್ತದೆ.

ವಿಶ್ವ ಯಕೃತ್ತಿನ ದಿನದ ಮಹತ್ವವೇನು?

  • ವಿಶ್ವ ಯಕೃತ್ತಿನ ದಿನದ ವಿಶೇಷ ಸಂದರ್ಭದಲ್ಲಿ, ಜನರಿಗೆ ಯಕೃತ್ತಿಗೆ ಸಂಬಂಧಿಸಿದ ವಿವಿಧ ಕಾಯಿಲೆಗಳು ಹಾಗೂ ಅದರ ಚಿಕಿತ್ಸೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.
  • ಒಮ್ಮೆ ಲಿವರ್ ಹಾನಿಗೊಳಗಾದರೆ, ಅದಕ್ಕೆ ಚಿಕಿತ್ಸೆ ನೀಡುವುದು ಕಷ್ಟಕರ ಮತ್ತು ದುಬಾರಿಯಾಗಬಹುದು. ಆದ್ದರಿಂದ, ಇಂದಿನಿಂದ ನಾವು ನಮ್ಮ ಲಿವರ್ ಆರೋಗ್ಯವನ್ನು ನೋಡಿಕೊಳ್ಳುವುದು ಬಹಳ ಮುಖ್ಯ. ಒಂದು ಸಣ್ಣ ಬದಲಾವಣೆಯೂ ಸಹ ನಮ್ಮ ಜೀವನವನ್ನು ದೀರ್ಘ ಮತ್ತು ಉತ್ತಮಗೊಳಿಸುತ್ತದೆ ಎಂದು ವಿಶ್ವ ಲಿವರ್ ದಿನ ನಮಗೆ ನೆನಪಿಸುತ್ತದೆ.
  • ಈ ದಿನ ಆರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಜನರಿಗೆ ಪ್ರೋತ್ಸಾಹ ನೀಡಲಾಗುತ್ತದೆ.

ಇದನ್ನೂ ಓದಿ: ಲಿವರ್ ಡಿಟಾಕ್ಸ್ ಡ್ರಿಂಕ್ಸ್: ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಕೇವಲ ಟ್ರೆಂಡಿ ಪಾನೀಯವೇ?

ಲಿವರ್‌ ಆರೋಗ್ಯವನ್ನು ಕಾಪಾಡಿಕೊಳ್ಳಲು ಸೇವಿಸಬೇಕಾದ ಆಹಾರಗಳು:

ಹಸಿರು ಎಲೆ ತರಕಾರಿಗಳು: ಪಾಲಕ್ ಮತ್ತು ಎಲೆಕೋಸು ಸೇರಿದಂತೆ ಹೆಚ್ಚಿನ ಹಸಿರು ತರಕಾರಿಗಳು ಯಕೃತ್ತಿಗೆ ಬಹಳ ಪ್ರಯೋಜನಕಾರಿ. ಅವು ಫೈಬರ್, ಉತ್ಕರ್ಷಣ ನಿರೋಧಕಗಳು ಮತ್ತು ಪೋಷಕಾಂಶಗಳ ಉತ್ತಮ ಮೂಲವಾಗಿದ್ದು, ಇವು ಯಕೃತ್ತಿನಲ್ಲಿ ಸಂಗ್ರಹವಾಗಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿ: ಬೆಳ್ಳುಳ್ಳಿಯಲ್ಲಿರುವ ಸಲ್ಫರ್ ಸಂಯುಕ್ತಗಳು ಯಕೃತ್ತಿನ ಕಿಣ್ವಗಳನ್ನು ಸಕ್ರಿಯಗೊಳಿಸುತ್ತವೆ, ಇದು ದೇಹದ ನಿರ್ವಿಶೀಕರಣ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದು ಹಾನಿಕಾರಕ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ ಮತ್ತು ಯಕೃತ್ತನ್ನು ಸೋಂಕುಗಳಿಂದ ರಕ್ಷಿಸುತ್ತದೆ.

ನಿಂಬೆಹಣ್ಣು: ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಆಮ್ಲಾ, ಕಿತ್ತಳೆ ಮತ್ತು ನಿಂಬೆಹಣ್ಣಿನಂತಹ ಸಿಟ್ರಸ್ ಹಣ್ಣುಗಳು ಯಕೃತ್ತಿಗೆ ಅತ್ಯುತ್ತಮವಾಗಿವೆ. ಇವು ಯಕೃತ್ತನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ. ಯಕೃತ್ತಿನಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಅರಿಶಿನ: ಅರಿಶಿನದಲ್ಲಿರುವ ಅಂಶಗಳು ಉರಿಯೂತವನ್ನು ಕಡಿಮೆ ಮಾಡಲು ಮತ್ತು ಯಕೃತ್ತಿನ ಕೋಶಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ಇದು ಯಕೃತ್ತನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ.ಅರಿಶಿನವು ದೀರ್ಘಕಾಲದವರೆಗೆ ಯಕೃತ್ತಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಬೀಟ್ರೂಟ್ ರಸ: ಬೀಟ್ರೂಟ್ ರಸವು ನೈಟ್ರೇಟ್‌ಗಳು ಮತ್ತು ಬೀಟಾಲೈನ್‌ಗಳು ಎಂದು ಕರೆಯಲ್ಪಡುವ ಉತ್ಕರ್ಷಣ ನಿರೋಧಕಗಳ ಮೂಲವಾಗಿದೆ. ಬೀಟ್ರೂಟ್ ರಸವು ಯಕೃತ್ತನ್ನು ಆಕ್ಸಿಡೇಟಿವ್ ಹಾನಿ ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಟೊಮೆಟೊ: ಟೊಮೆಟೊಗಳು ಜೀರ್ಣಕಾರಿ ಕಿಣ್ವಗಳು ಮತ್ತು ಯಕೃತ್ತಿನ ಕಿಣ್ವಗಳ ಚಟುವಟಿಕೆಯನ್ನು ಉತ್ತೇಜಿಸಿ ಉತ್ತಮ ಯಕೃತ್ತಿನ ಕಾರ್ಯವನ್ನು ಕಾಪಾಡಿಕೊಳ್ಳಲು ಮತ್ತು ಯಕೃತ್ತನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ.

ಗ್ರೀನ್‌ ಟೀ ಚಹಾ: ಗ್ರೀನ್‌ ಟೀಯಲ್ಲಿರುವ ಕ್ಯಾಟೆಚಿನ್‌ಗಳು ಯಕೃತ್ತನ್ನು ನಿರ್ವಿಷಗೊಳಿಸಲು ಮತ್ತು ಫ್ಯಾಟಿ ಲಿವರ್‌ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ದೇಹದಲ್ಲಿನ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ, ಇದರಿಂದಾಗಿ ಯಕೃತ್ತಿನ ಮೇಲೆ ಹೆಚ್ಚುವರಿ ಕೊಬ್ಬು ಸಂಗ್ರಹವಾಗುವ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ.

ದಾಳಿಂಬೆ: ದಾಳಿಂಬೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಯಕೃತ್ತಿನ ಕೋಶಗಳನ್ನು ಹಾನಿಯಿಂದ ರಕ್ಷಿಸುತ್ತವೆ ಮತ್ತು ರಕ್ತವನ್ನು ಶುದ್ಧವಾಗಿಡಲು ಸಹಾಯ ಮಾಡುತ್ತದೆ.

ವಿಷಯಗಳನ್ನು ನೆನಪಿನಲ್ಲಿಡಿ:

ಕರಿದ ಆಹಾರಗಳು, ಜಂಕ್ ಫುಡ್ ಮತ್ತು ಆಲ್ಕೋಹಾಲ್ ನಿಂದ ದೂರವಿರುವುದು ಮುಖ್ಯ. ನಿಯಮಿತ ವ್ಯಾಯಾಮ ಮತ್ತು ಸಾಕಷ್ಟು ನಿದ್ರೆ ಕೂಡ ಯಕೃತ್ತಿಗೆ ಅತ್ಯಗತ್ಯ. ಹೀಗೆ ಆರೋಗ್ಯಕರ ಆಹಾರ ಪದ್ಧತಿ, ಉತ್ತಮ ಜೀವನಶೈಲಿಯನ್ನು ಅನುಸರಿಸುವ ಮೂಲಕ ಯಕೃತ್ತನ್ನು ದೀರ್ಘಕಾಲದವರೆಗೆ ಆರೋಗ್ಯವಾಗಿಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL Black Ticket: ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್! – Kannada News | Bengaluru IPL Ticket Racket: DNA Organization got Notice as CCB Uncovers Black Market Link

ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್!
Image Credit source: dnanetworks.com

ಬೆಂಗಳೂರು, ಏಪ್ರಿಲ್ 19: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL) ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಸದಸ್ಯನೋರ್ವ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆ ಆರ್​ಸಿಬಿ ಟಿಕೆಟ್ ನಿರ್ವಹಣೆ ಮಾಡುವ ಡಿಎನ್ಎ (DNA) ಸಂಸ್ಥೆಗೆ ಸಂಕಷ್ಟ ಬಂದೊದಗಿದೆ. ಕೆಎಸ್​ಸಿಎ (KSCA) ಸದಸ್ಯ ಗಣೇಶ್ ಹರಿಕೇಶ್ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿಸಿಬಿ ಪೊಲೀಸರು ಡಿಎನ್ಎ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದಾರೆ.

ಕ್ಯಾಂಟೀನ್‌ ಕೆಲಸಗಾರನ ಮೂಲಕವೇ ದಂಧೆ

ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದಾಗ ವಿಚಾರಣೆ ವೇಳೆ ಆತ ಕೆಎಸ್​ಸಿಎ ಸದಸ್ಯ ಹರಿಕೇಶ್ ಹೆಸರನ್ನು ಬಹಿರಂಗಪಡಿಸಿದ್ದ. ಚಂದ್ರಶೇಖರ್ ಚಿನ್ನಸ್ವಾಮಿ ಸ್ಟೇಡಿಯಂನ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಾಗಿದ್ದು, ಅವನ ಮೂಲಕವೇ ಟಿಕೆಟ್‌ಗಳನ್ನು ಬ್ಲ್ಯಾಕ್​ನಲ್ಲಿ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಹೊರಬಂದಿದೆ.

ಈ ಬಗ್ಗೆ ತನಿಖೆ ನಡೆಸಿದಾಗ ಗಣೇಶ್ ಹರಿಕೇಶ್ ಸ್ವಸ್ತಿಕ್ ಹೆವಿ ಇಂಜಿನಿಯರಿಂಗ್ ಆ್ಯಂಡ್ ಇಂಡಸ್ಟ್ರಿಯಲ್ ಆಟೋಮೋಟಿವ್ ಹಾಗೂ ಧರಣಿ ಕಂಪ್ಯೂಟರ್ಸ್ ಎಂಬ ಎರಡು ಖಾಸಗಿ ಕಂಪನಿಗಳ ಹೆಸರಿನಲ್ಲಿ ಆನ್‌ಲೈನ್ ಮೂಲಕ ದೊಡ್ಡ ಪ್ರಮಾಣದಲ್ಲಿ ಟಿಕೆಟ್‌ಗಳನ್ನು ಖರೀದಿಸುತ್ತಿದ್ದನು ಎಂಬುದು ತಿಳಿದುಬಂದಿದೆ. ಈ ಕಂಪನಿಗಳ ಮೂಲಕ ಟಿಕೆಟ್‌ಗಳನ್ನು ಪಡೆಯುತ್ತಿದ್ದ ಗಣೇಶ್, ಬಳಿಕ ಅವುಗಳನ್ನು ಚಂದ್ರಶೇಖರ್​ನಿಂದ ಹೆಚ್ಚಿನ ಬೆಲೆಗೆ ಮಾರಾಟ ಮಾಡಿಸುತ್ತಿದ್ದ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ KSCA ಸದಸ್ಯನಿಂದಲೇ IPL ಬ್ಲಾಕ್ ಟಿಕೆಟ್ ದಂಧೆ! ಚಿನ್ನಸ್ವಾಮಿ ಸ್ಟೇಡಿಯಂ ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ ಕೃತ್ಯ

ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್ವರ್ಕ್ಸ್ ಸಂಸ್ಥೆಯ ಮೇಲೂ ಅನುಮಾನ

ಪ್ರಾಥಮಿಕ ತನಿಖೆಯಲ್ಲಿ ಆರ್‌ಸಿಬಿಯ ಮೊದಲ ಪಂದ್ಯದಲ್ಲಿ 81 ಟಿಕೆಟ್‌ಗಳನ್ನು ಬ್ಲ್ಯಾಕ್​ನಲ್ಲಿ ಮಾರಾಟ ಮಾಡಿರುವುದು ಪತ್ತೆಯಾಗಿದೆ. ನಂತರದ ಪಂದ್ಯಕ್ಕಾಗಿ 100 ಟಿಕೆಟ್‌ಗಳನ್ನು ಸಿದ್ಧಪಡಿಸಿಕೊಂಡಿದ್ದರು. ಒಟ್ಟಾರೆ ಸುಮಾರು 17 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 181 ಟಿಕೆಟ್‌ಗಳನ್ನು ಖರೀದಿಸಲಾಗಿದ್ದು, ಅವುಗಳ ಪೈಕಿ ಕನಿಷ್ಠ 100 ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ನಡುವೆ ಟಿಕೆಟ್ ನಿರ್ವಹಣೆಯನ್ನು ಹೊತ್ತಿರುವ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್ವರ್ಕ್ಸ್ ಸಂಸ್ಥೆಯ ಮೇಲೂ ಅನುಮಾನ ವ್ಯಕ್ತವಾಗಿದೆ. ಟಿಕೆಟ್‌ಗಳು ಆರೋಪಿಗಳ ಕೈಗೆ ಹೇಗೆ ತಲುಪಿದವು ಎಂಬುದನ್ನು ತಿಳಿದುಕೊಳ್ಳಲು ಹೊಟ ಸಿಸಿಬಿ ಪೊಲೀಸರು ಡಿಎನ್‌ಎ ಸಂಸ್ಥೆಗೆ ನೋಟಿಸ್ ನೀಡಿದ್ದಾರೆ. ಎರಡು ಖಾಸಗಿ ಕಂಪನಿಗಳಿಗೆ ಟಿಕೆಟ್ ನೀಡಿದ ಹಿನ್ನೆಲೆ, ಅವುಗಳ ಮ್ಯಾನೇಜಿಂಗ್ ಡೈರೆಕ್ಟರ್‌ಗಳ ಮೇಲೂ ಅನುಮಾನ ವ್ಯಕ್ತವಾಗಿದ್ದು, ಪ್ರಕರಣದ ಮೂಲವನ್ನು ಪತ್ತೆಹಚ್ಚಲು ಪೊಲೀಸರು ಮುಂದುವರಿದ ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಇಲ್ಲಿವೆ ಕೆಲ ಇಂಟರೆಸ್ಟಿಂಗ್​​ ವಿಚಾರಗಳು – Kannada News | How CBI Cracked the Yogesh Gowda Murder Case: Key Twists and Revelations

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ?

ಬೆಂಗಳೂರು, ಏಪ್ರಿಲ್​​ 19: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿತ್ತೆಂಬ ವಿಚಾರವೀಗ ಬಯಲಾಗಿದೆ. ಎ1 ಬಸವರಾಜ್ ಮುತ್ತಗಿ ಜೊತೆಗೆ ಮಾತಾಡಲೆಂದು ವಿನಯ್ ಕುಲಕರ್ಣಿ ಪತ್ನಿ ಹೆಸರಿನಲ್ಲಿ ಸಿಮ್ ಖರೀದಿ ಮಾಡಿದ್ದರು. ಅದೇ ಸಿಮ್ ಕಾರ್ಡ್ ಬಳಸಿ 94 ಬಾರಿ ಮುತ್ತಗಿ ಜೊತೆಗೆ ವಿನಯ್​ ಮಾತಾಡಿದ್ದರು. ಅಲ್ಲದೇ ಯೋಗಿಶ್ ಗೌಡ ಕೊಲೆಯಾದ ನಂತರ ಆರು ತಿಂಗಳಲ್ಲಿ ಬಸವರಾಜ್ ಮುತ್ತಗಿಯನ್ನು 57 ಬಾರಿ ವಿನಯ್ ಕುಲಕರ್ಣಿ ಸಂಪರ್ಕಿಸಿದ್ದರು. ಈ ಪೈಕಿ ಆರು ಬಾರಿ ಇಬ್ಬರೂ ಇಂದೇ ಪ್ರದೇಶದಲ್ಲಿ ಇರೋದು ತನಿಖೆ ವೇಳೆ ಗೊತ್ತಾಗಿದೆ ಎನ್ನಲಾಗಿದೆ

ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇ ಯೋಗಿಶ್ ಗೌಡ ಕೊಲೆಗೆ ಕಾರಣವಾಗಿದ್ದು, ಬಸವರಾಜ್ ಮುತ್ತಗಿ ಮತ್ತು ಆತನ ಬಾವ ಚಂದ್ರಶೇಖರ ಇಂಡಿಗೆ ವಿನಯ್ ಕುಲಕರ್ಣಿ ಸುಪಾರಿ ನೀಡಿದ್ದರು. ಆದರೆ ಬಸವರಾಜ್ ಮುತ್ತಗಿ ಮಾಫಿ ಸಾಕ್ಷ್ಯ ಆಗಿದ್ದೇ ಈಗ ವಿನಯ್ ಕುಲಕರ್ಣಿಗೆ ಕಂಟಕವಾಗಿದೆ. ಯೋಗಿಶ್ ಗೌಡ ಹತ್ಯೆ ವೇಳೆ ಎ7 ರಿಂದ ಎ14ರ ವರೆಗಿನ ಆರೋಪಿಗಳು ಆಯುಧ ಬಳಸಿ ಕೊಲೆ ಮಾಡಿರುವ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿತ್ತು. ಆದರೆ ಪೊಲೀಸರು ಎ1 ರಿಂದ ಎ6 ಆರೋಪಿಗಳನ್ನು ಬಂಧಿಸಿ, ಆಯುಧಗಳು ವಶಕ್ಕೆ ಅಂತಾ ಉಲ್ಲೇಖಿಸಿದ್ದರು. ಬಸವರಾಜ್ ಮುತ್ತಗಿ ಮತ್ತು ಯೋಗಿಶ್ ಗೌಡ ನಡುವಿನ ಭೂ ವ್ಯಾಜ್ಯ ಕೊಲೆ ಗೆ ಕಾರಣ ಎಂದು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ಆದ್ರೆ ಧಾರವಾಡ ಪೊಲೀಸರ ತನಿಖೆಯ ತಪ್ಪುಗಳನ್ನು ಸಿಬಿಐ ಎಳೆ ಏಳೆಯಾಗಿ ಬಿಚ್ಚಿಟ್ಟಿದೆ.

ಇದನ್ನೂ ಓದಿ: ಯೋಗೀಶ್ ಗೌಡ ಕೊಲೆ ಕೇಸ್; ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಜೈಲಲ್ಲಿ ಚಿಂತೆಗೀಡಾದ ವಿನಯ್​​ ಕುಲಕರ್ಣಿ

ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿನಲ್ಲಿ ಒಬ್ಬರೇ ಕುಳಿತು ಚಿಂತೆಗೀಡಾಗಿದ್ದಾರೆ. ರಾತ್ರಿ ಇಡೀ ನಿದ್ದರೆ ಮಾಡದೆ ಸಿಬ್ಬಂದಿ ನೀಡಿದ ಊಟವನ್ನೂ ಮಾಡದೆ ಅವರು ಹಾಗೇ ಇದ್ದಾರೆ ಎಂಬುದು ಗೊತ್ತಾಗಿದೆ. ಜೈಲಿನ ಮೆನುವಿನಂತೆ ಮುದ್ದೆ, ಚಪಾತಿ, ಅನ್ನ ಸಾಂಬರ್ ನೀಡಲಾಗಿತ್ತು. ಸಹಕೈದಿಗಳು ಹೇಳಿದರೂ ಸಹ ಊಟ ಮಾಡದ ವಿನಯ್ ಕುಲಕರ್ಣಿ, ಏಕಾಂಗಿಯಾಗಿ ಕುಳಿತು ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ. ಇನ್ನು ಸೆರೆವಾಸದಲ್ಲಿರುವ ವಿನಯ್ ಕುಲಕರ್ಣಿ, ವಿನಯ್ ಸೇರಿ 17 ಅಪರಾಧಿಗಳಿಗೆ ಜೈಲು ಸಿಬ್ಬಂದಿ ಸಜಾಕೈದಿ ನಂಬರ್ ನೀಡಿದ್ದಾರೆ. ವಿನಯ್ ಕುಲಕರ್ಣಿ ಸಜಾಬಂಧಿ ನಂಬರ್ 16110 ಆಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ – Kannada News | Kolar KGF Police Raid Rowdy Sheeters Homes, Seize Weapons

ಕೋಲಾರ, ಏಪ್ರಿಲ್​​ 19: ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದೆ. ದಾಳಿ ನಡೆಸಲು ಐದು ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು ಐದು ಇನ್ಸ್‌ಪೆಕ್ಟರ್‌ಗಳ ತಂಡವನ್ನು ರಚಿಸಲಾಗಿತ್ತು. ಪ್ರತಿಯೊಬ್ಬ ರೌಡಿಶೀಟರ್‌ಗಳಿಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿತ್ತು. ಈ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ರೌಡಿಗಳ ಮನೆಗಳಲ್ಲಿ ಲಾಂಗ್ ಮತ್ತು ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಧುರಂಧರ್ 2’ ಬಾಕ್ಸ್ ಆಫೀಸ್ ಅಬ್ಬರಕ್ಕೆ ಬ್ರೇಕ್ ಹಾಕಿದ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News | Ranveer Singh Dhurandhar 2 Box Office Collection slows down after Bhooth Bangla release

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್‌ನ ಸ್ಪೈ ಥ್ರಿಲ್ಲರ್ ‘ಧುರಂಧರ್ 2’ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ಇತಿಹಾಸ ಬರೆದಿದೆ. ಆದರೆ ಬಿಡುಗಡೆಯಾದ ಮೊದಲ ನಾಲ್ಕು ವಾರಗಳ ಕಾಲ ಅಡೆತಡೆಯಿಲ್ಲದೆ ಸಾಗಿದ್ದ ಈ ಚಿತ್ರದ ಓಟಕ್ಕೆ ಈಗ ಅಕ್ಷಯ್ ಕುಮಾರ್ ಅವರ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಅಡ್ಡಿಯಾದಂತೆ ತೋರುತ್ತಿದೆ. ಹೌದು, ‘ಭೂತ್ ಬಂಗ್ಲ’ ಬಿಡುಗಡೆ ಆದ ಬಳಿಕ ‘ಧುರಂಧರ್ 2’ (Dhurandhar 2) ಸಿನಿಮಾದ ಕಲೆಕ್ಷನ್ ಗಣನೀಯವಾಗಿ ಕುಸಿದಿದೆ.

ಭಾರತೀಯ ಚಿತ್ರರಂಗದ ದೈತ್ಯ ಸಿನಿಮಾಗಳ ದಾಖಲೆಗಳನ್ನು ‘ಧುರಂಧರ್ 2’ ಸಿನಿಮಾ ಮುರಿದಿದೆ. Sacnilk ವರದಿಯ ಪ್ರಕಾರ, ಈ ಸಿನಿಮಾ ಭಾರತದಲ್ಲಿ ಇದುವರೆಗೆ ದಾಖಲೆಯ 1110.47 ಕೋಟಿ ರೂಪಾಯಿ (Net) ಕಲೆಕ್ಷನ್ ಮಾಡಿದೆ. ಈ ಮೂಲಕ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂಪಾಯಿ ಗಳಿಸಿದ ಮೊದಲ ಬಾಲಿವುಡ್ ಸಿನಿಮಾ ಎಂಬ ಕೀರ್ತಿಗೆ ಇದು ಪಾತ್ರವಾಗಿದೆ.

ಕೆಜಿಎಫ್: ಚಾಪ್ಟರ್ 2 (859.70 ಕೋಟಿ), ಆರ್​ಆರ್​ಆರ್ ( 782.20 ಕೋಟಿ), ಕಲ್ಕಿ 2898 ಎಡಿ (646 ಕೋಟಿ) ಜೊತೆಗೆ ‘ಜವಾನ್’, ‘ಪಠಾಣ್’ ಮತ್ತು ‘ಅನಿಮಲ್’ ಚಿತ್ರಗಳ ದಾಖಲೆಗಳನ್ನೂ ‘ಧುರಂಧರ್ 2’ ಅಳಿಸಿಹಾಕಿದೆ. ಇಷ್ಟೆಲ್ಲ ಸಿನಿಮಾಗಳನ್ನು ಹಿಂದಿಕ್ಕಿ ಮುಂದೆ ಸಾಗುತ್ತಿದ್ದ ಈ ಸಿನಿಮಾದ ನಾಗಾಲೋಟಕ್ಕೆ ಈಗ ಬ್ರೇಕ್ ಬಿದ್ದಿದೆ.

ಕಳೆದ ನಾಲ್ಕು ವಾರಗಳಿಂದ ಅಬ್ಬರಿಸುತ್ತಿದ್ದ ‘ಧುರಂಧರ್ 2’ ವೇಗ ಈಗ ಕುಂಠಿತವಾಗಿದೆ. ಅಕ್ಷಯ್ ಕುಮಾರ್ ಮತ್ತು ಟಬು ನಟನೆಯ ಹಾರರ್-ಕಾಮಿಡಿ ‘ಭೂತ್ ಬಂಗ್ಲ’ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಓಪನಿಂಗ್ ಪಡೆದುಕೊಂಡಿದೆ. ಶನಿವಾರದಂದು ‘ಭೂತ್ ಬಂಗ್ಲ’ 15 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದರೆ, ‘ಧುರಂಧರ್ 2’ ಕೇವಲ 4.65 ಕೋಟಿ ರೂಪಾಯಿ ಸಂಗ್ರಹಿಸಿದೆ. ಇದು ಶುಕ್ರವಾರದ ಕಲೆಕ್ಷನ್‌ಗಿಂತ (2.70 ಕೋಟಿ) ಸ್ವಲ್ಪ ಸುಧಾರಣೆಯಾಗಿದ್ದರೂ, ನಿರೀಕ್ಷಿತ ಮಟ್ಟದಲ್ಲಿಲ್ಲ.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾದಲ್ಲಿ ಅದು ಸರಿಯಿಲ್ಲ: ಮೊದಲ ಬಾರಿ ಟೀಕಿಸಿದ ರಾಮ್ ಗೋಪಾಲ್ ವರ್ಮಾ

ಒಂದು ವೇಳೆ ‘ಭೂತ್ ಬಂಗ್ಲ’ ಸಿನಿಮಾಗೆ ಜನಬೆಂಬಲ ಮುಂದುವರಿದರೆ ಈ ಚಿತ್ರ ಹೆಚ್ಚು ಪರದೆಗಳನ್ನು ಪಡೆದುಕೊಳ್ಳಲಿದೆ. ಇದರಿಂದಾಗಿ ‘ಧುರಂಧರ್ 2’ ಕಲೆಕ್ಷನ್ ಇನ್ನಷ್ಟು ಕುಸಿಯುವ ಸಾಧ್ಯತೆ ಇರುತ್ತದೆ. ‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ಜೊತೆ ಆರ್. ಮಾಧವನ್, ಸಂಜಯ್ ದತ್, ಸಾರಾ ಅರ್ಜುನ್ ಮತ್ತು ರಾಕೇಶ್ ಬೇಡಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು… ಸೋಲಿನ ಬಳಿಕ ರಜತ್ ಪಾಟಿದಾರ್ ಖಡಕ್ ಸೂಚನೆ – Kannada News | Rajat patidar post match interview after RCB Vs DC Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ಕೇವಲ ಒಂದು ಎಸೆತ ಬಾಕಿ ಇರುವಂತೆ ಸೋಲೊಪ್ಪಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.5 ಓವರ್​ಗಳಲ್ಲಿ 178 ರನ್​ಗಳಿಸಿ ರೋಚಕ ಜಯ ಸಾಧಿಸಿದೆ. ಈ ಮೂಲಕ ಆರ್​ಸಿಬಿ ಪಡೆ ತವರಿನಲ್ಲಿ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ತಂಡದ ಬ್ಯಾಟಿಂಗ್ ವೈಫಲ್ಯವೇ ಈ ಸೋಲಿಗೆ ಪ್ರಮುಖ ಕಾರಣ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಖಂಡಿತವಾಗಿಯೂ ಇದು ಗೆಲ್ಲುವಂತಹ ಪಂದ್ಯವಾಗಿತ್ತು. ಆದರೆ ನಾವು ಬ್ಯಾಟಿಂಗ್‌ನಲ್ಲಿ 15-20 ರನ್ ಕಡಿಮೆ ಗಳಿಸಿದೆವು ಎಂದು ನನಗನ್ನಿಸುತ್ತದೆ. ಆರಂಭದಲ್ಲಿ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು. ಆದರೆ 12-13ನೇ ಓವರ್ ನಂತರ ದಿಢೀರ್ ವಿಕೆಟ್ ಕಳೆದುಕೊಂಡಿದ್ದು ನಮಗೆ ಹಿನ್ನಡೆಯಾಯಿತು.

ಮುಂದಿನ ಪಂದ್ಯಕ್ಕೂ ಮುನ್ನ ಈ ತಪ್ಪುಗಳನ್ನು ನಾವು ಸರಿಪಡಿಸಿಕೊಳ್ಳಬೇಕಿದೆ. ಮಧ್ಯಮ ಕ್ರಮಾಂಕದಲ್ಲಿ ಬೇಗನೆ ವಿಕೆಟ್ ಕಳೆದುಕೊಳ್ಳುತ್ತಿರುವುದು ಆರ್​ಸಿಬಿ ಪಾಲಿಗೆ ಹಿನ್ನಡೆಯಾಗುತ್ತಿದೆ. ಹೀಗಾಗಿ ನಮ್ಮ ಮಿಡಲ್ ಆರ್ಡರ್ ಬ್ಯಾಟರ್​ಗಳು ಶೀಘ್ರವೇ ಈ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ನಾವು ಉತ್ತಮ ಆರಂಭ ಪಡೆದರೂ, ಮಧ್ಯೆದಲ್ಲಿ ಒಂದೆಡರಡು ವಿಕೆಟ್​ಗಳನ್ನು ಬೇಗನೆ ಕಳೆದುಕೊಂಡರೂ ಅದು ತಂಡಕ್ಕೆ ಹಿನ್ನಡೆಯನ್ನು ಉಂಟು ಮಾಡುತ್ತದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೂಡ ಆಗಿದ್ದು ಅದೇ. ಸಾಲ್ಟ್, ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೂ ನಾವು ಮಧ್ಯಮ ಕ್ರಮಾಂಕದಲ್ಲಿ ಎಡವಿದೆವು. ಹೀಗಾಗಿ ಈ ಸೋಲಿಗೆ ಬ್ಯಾಟರ್​ಗಳು ಕಾರಣ ಎಂದು ರಜತ್ ಪಾಟಿದಾರ್ ಅಭಿಪ್ರಾಯಪಟ್ಟಿದ್ದಾರೆ.

ಈ ಸೋಲಿನ ಹೊರತಾಗಿಯೂ ನಾವು ಪಂದ್ಯವನ್ನು ಕೊನೆಯ ಓವರ್​ ತನಕ ಕೊಂಡೊಯ್ದಿರುವುದು ಸಕಾರಾತ್ಮಕ ಅಂಶ. ಬೌಲರ್​ಗಳು ತಮ್ಮ ಕಾರ್ಯತೆಯ ಬಗ್ಗೆ ಸ್ಪಷ್ಟತೆ ಹೊಂದಿದ್ದರು. ಇದು ದೀರ್ಘಾವಧಿಯ ಟೂರ್ನಿ. ಹೀಗಾಗಿ ನಾವು ಎಲ್ಲಿ ತಪ್ಪುಗಳನ್ನು ಮಾಡಿದ್ದೇವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲು ಅವಕಾಶವಿದೆ. ಆ ತಪ್ಪುಗಳನ್ನು  ಸರಿಪಡಿಸಿ ಮುಂದಿನ ಪಂದ್ಯಗಳಲ್ಲಿ ಕಂಬ್ಯಾಕ್ ಮಾಡುತ್ತೇವೆ ಎಂಬ ವಿಶ್ವಾಸವಿದೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಸಂಕ್ಷಿಪ್ತ ಸ್ಕೋರ್ ಕಾರ್ಡ್:

  • RCB: 175/8 (20 ಓವರ್) – ಫಿಲ್ ಸಾಲ್ಟ್ 63, ಅಕ್ಷರ್ ಪಟೇಲ್ 2/18.
  • DC: 179/4 (19.5 ಓವರ್) – ಟ್ರಿಸ್ಟನ್ ಸ್ಟಬ್ಸ್ 60*, ಭುವನೇಶ್ವರ್ ಕುಮಾರ್ 3/26.
  •  ಫಲಿತಾಂಶ: ಡೆಲ್ಲಿ ಕ್ಯಾಪಿಟಲ್ಸ್‌ಗೆ 6 ವಿಕೆಟ್ ಜಯ.

ಇದನ್ನೂ ಓದಿ: IPL 2026: ಹೀಗೊಂದು ‘ಅವಮಾನಕರ’ ದಾಖಲೆ ಬರೆದ RCB

ಈ ಸೋಲಿನ ಹೊರತಾಗಿಯೂ ಆರ್​ಸಿಬಿ ತನ್ನ ಮುಂದಿನ ಪಂದ್ಯಗಳಲ್ಲಿ ಪುಟಿದೇಳುವ ವಿಶ್ವಾಸದಲ್ಲಿದೆ. ಅದರಂತೆ ಏಪ್ರಿಲ್ 24 ರಂದು ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಗೆಲುವಿನ ಲಯಕ್ಕೆ ಮರಳಲಿದೆಯಾ ಕಾದು ನೋಡಬೇಕಿದೆ.

Source link

ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಮಂಡ್ಯ ಜಿಲ್ಲಾಡಳಿತ: ಕಾರಣ ಇಲ್ಲಿದೆ – Kannada News | Balamuri Edamuri: Mandya District Administration Restricts Tourist Entry Due to Drowning Incidents

ಮಂಡ್ಯ, ಏಪ್ರಿಲ್​​ 19: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಪ್ರದೇಶಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, ನೀರಿನಲ್ಲಿ ಈಜಾಡಲು ಹೋಗಿ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಜನರು ಇಲ್ಲಿ ಜೀವ ಕಳೆದುಕೊಂಡಿದ್ದಾರೆ. ಈಗ ಬೇಸಿಗೆ ರಜೆ ಇರುವ ಕಾರಣ ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವ ಹಿನ್ನೆಲೆ, ಮುಂಜಾಗೃತಾ ಕ್ರಮವಾಗಿ ಮಂಡ್ಯ ಜಿಲ್ಲಾಡಳಿತವು ಮುಂದಿನ ಆದೇಶದವರೆಗೆ ಬಲಮುರಿ ಮತ್ತು ಎಡಮುರಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ, ಯಾರೂ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜಮೀನಿನ ಕಾಗದಗಳು ಮಿಸ್ಸಿಂಗ್, ನಿಮ್ಮ ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿಯ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ – Kannada News | Almond Protest: Man Targets Officer Over Missing File in Unusual Way

ಛತ್ತೀಸ್​ಗಢ, ಏಪ್ರಿಲ್ 19: ಸರ್ಕಾರಿ ಕಚೇರಿಗಳಲ್ಲಿ ಫೈಲ್ ಕಳೆದುಹೋಗಿದೆ ಅಥವಾ ನಾಳೆ ಬನ್ನಿ ಎಂಬ ಮಾತುಗಳು ಅದೆಷ್ಟು ಜನಸಾಮಾನ್ಯರ ನಿದ್ದೆ ಗೆಡಿಸಿವೆಯೋ ಗೊತ್ತಿಲ್ಲ. ಆದರೆ ಬಿಲಾಸ್‌ಪುರದ ಟಿಫ್ರಾ ಹೌಸಿಂಗ್ ಬೋರ್ಡ್ ಕಚೇರಿಯಲ್ಲಿ ತರುಣ್ ಸಾಹು ಎಂಬ ಯುವಕ ಈ ನಿರ್ಲಕ್ಷ್ಯಕ್ಕೆ ನೀಡಿದ ಉತ್ತರ ಮಾತ್ರ ಅತ್ಯಂತ ಸೃಜನಶೀಲ ಮತ್ತು ಖಾರವಾಗಿತ್ತು. ತರುಣ್ ಸಾಹು ಒಂದು ವರ್ಷದ ಹಿಂದೆ ಮ ಒಂದು ಫ್ಲಾಟ್ ಖರೀದಿಸಿದ್ದರು. ಆಸ್ತಿಯ ಮಾಲೀಕತ್ವ ಅವರ ಹೆಸರಿಗೆ ಬದಲಾಗಬೇಕಾದರೆ (Mutation) ಹೌಸಿಂಗ್ ಬೋರ್ಡ್‌ನ ಫೈಲ್ ಅತ್ಯಗತ್ಯ. ಆದರೆ ಕಳೆದ ಒಂದು ವರ್ಷದಿಂದ ಅವರು ಕಚೇರಿಗೆ ಅಲೆದರೂ ಸಿಕ್ಕ ಉತ್ತರ ಮಾತ್ರ ಒಂದೇ ನಿಮ್ಮ ಫೈಲ್ ಕಾಣೆಯಾಗಿದೆ.

ಅಧಿಕಾರಿಗಳ ಬೇಜವಾಬ್ದಾರಿಯಿಂದ ಬೇಸತ್ತ ತರುಣ್, ಅವರು ಅದೆಷ್ಟು ಬಾರಿ ಕೇಳಿದರೂ ನೆನಪಿಲ್ಲ ಎಂದು ಹೇಳುತ್ತಿದ್ದುದ್ದನ್ನು ಕಂಡು ಒಂದು ಉಪಾಯ ಮಾಡಿದರು. ಕಚೇರಿಗೆ ಬಂದ ತರುಣ್ ನೇರವಾಗಿ ಡೆಪ್ಯೂಟಿ ರಿಜಿಸ್ಟ್ರಾರ್ ಅವರ ಕೋಣೆಗೆ ನುಗ್ಗಿದರು. ಆದರೆ ಅಲ್ಲಿ ಅವರು ಕೂಗಾಡಲಿಲ್ಲ, ಗಲಾಟೆ ಮಾಡಲಿಲ್ಲ. ಬದಲಿಗೆ, ತಮ್ಮ ಕೈಯಲ್ಲಿದ್ದ ಬಾದಾಮಿಯ ಪೊಟ್ಟಣವನ್ನು ಬಿಚ್ಚಿ ಅಧಿಕಾರಿಯ ಮೇಜಿನ ಮೇಲೆ ಹರಡಿದರು.

ಬಾದಾಮಿ ತಿಂದರೆ ನೆನಪಿನ ಶಕ್ತಿ ಹೆಚ್ಚಾಗುತ್ತದೆ ಎಂಬುದು ನಂಬಿಕೆ. ಅದನ್ನೇ ಅಸ್ತ್ರವಾಗಿ ಬಳಸಿದ ತರುಣ್, ಅಧಿಕಾರಿಗಳೇ, ನಿಮ್ಮ ಸ್ಮರಣಶಕ್ತಿ ತುಂಬಾ ಕಡಿಮೆಯಾಗಿದೆ ಎಂದು ಕಾಣುತ್ತದೆ. ಈ ಬಾದಾಮಿ ತಿನ್ನಿ, ಬಹುಶಃ ಆಗಲಾದರೂ ನನ್ನ ಫೈಲ್ ಎಲ್ಲಿದೆ ಎಂದು ನಿಮಗೆ ನೆನಪಾಗಬಹುದು ಎಂದು ಹೇಳಿದ್ದಾರೆ.

ತರುಣ್ ಸಾಹು ಈ ಇಡೀ ಘಟನೆಯನ್ನು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರು. ಕೆಲವೇ ಗಂಟೆಗಳಲ್ಲಿ ಈ ವೀಡಿಯೊ ಲಕ್ಷಾಂತರ ಜನರನ್ನು ತಲುಪಿತು. ಸಾಮಾನ್ಯ ನಾಗರಿಕನೊಬ್ಬ ಅಧಿಕಾರಶಾಹಿಯ ವಿಳಂಬ ನೀತಿಗೆ ನೀಡಬಹುದಾದ ಅತ್ಯುತ್ತಮ ಉತ್ತರ ಇದೇ ಎಂದು ನೆಟ್ಟಿಗರು ತರುಣ್ ಪರವಾಗಿ ಬ್ಯಾಟ್ ಬೀಸಿದ್ದಾರೆ.
ಈ ವೀಡಿಯೊದ ನಂತರ ಜಿಲ್ಲಾ ಆಡಳಿತದಲ್ಲಿ ಸಂಚಲನ ಮೂಡಿದ್ದು, ಕಾಣೆಯಾದ ದಾಖಲೆಗಳನ್ನು ಪತ್ತೆಹಚ್ಚಲು ಮತ್ತು ಕೂಡಲೇ ರೂಪಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳು ಈಗ ಒತ್ತಡಕ್ಕೆ ಸಿಲುಕಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

IPL 2026: CSK ವಿರುದ್ಧ ಇಷ್ಟು ಸ್ಕೋರ್ ​ಗಳಿಸಿದರೆ ಗೆಲುವು ಖಚಿತ..! – Kannada News | 14th Consecutive loss for CSK while chasing 180+ total in IPL

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಅದರಲ್ಲೂ ಸಿಎಸ್​ಕೆ ವಿರುದ್ಧ ಗೆಲ್ಲಬೇಕಿದ್ದರೆ 180+ ರನ್​ಗಳಿಸಿದರೆ ಸಾಕು ಎಂಬಂತಾಗಿದೆ. ಏಕೆಂದರೆ ಚೆನ್ನೈ ಪಡೆಯು 2019 ರಿಂದ ಒಂದು ಬಾರಿ ಕೂಡ 180 ಕ್ಕಿಂತ ಹೆಚ್ಚಿನ ಮೊತ್ತವನ್ನು ಚೇಸ್ ಮಾಡಿ ಗೆದ್ದಿಲ್ಲ.

ಸತತ 14ನೇ ಸೋಲಿನ ಆಘಾತ:

ಏಪ್ರಿಲ್ 18, 2026 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಮ್ಮೆ ಮುಗ್ಗರಿಸಿದೆ. ಎಸ್​ಆರ್​ಹೆಚ್ ನೀಡಿದ್ದ 195 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸಿಎಸ್​ಕೆ, ಕೊನೆಯವರೆಗೂ ಹೋರಾಡಿದರೂ 184 ರನ್‌ಗಳಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 10 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಇದು 180+ ರನ್‌ ಬೆನ್ನಟ್ಟುವಾಗ ತಂಡಕ್ಕೆ ಎದುರಾದ ಸತತ 14ನೇ ಸೋಲು ಎಂಬುದೇ ಅಚ್ಚರಿ. ಅಂದರೆ ಸಿಎಸ್​ಕೆ ತಂಡಕ್ಕೆ ಕಳೆದ 14 ಪಂದ್ಯಗಳಲ್ಲಿ 180+ ಸ್ಕೋರ್​ ಅನ್ನು ಚೇಸ್ ಮಾಡಲು ಸಾಧ್ಯವಾಗಿಲ್ಲ.

ಕೊನೆಯ ಬಾರಿ ಗೆದ್ದಿದ್ದು ಯಾವಾಗ?

ಒಂದು ಕಾಲದಲ್ಲಿ CSK ಎಂತಹ ದೊಡ್ಡ ಮೊತ್ತವನ್ನಾದರೂ ಸಲೀಸಾಗಿ ಚೇಸ್ ಮಾಡುತ್ತಿತ್ತು. ಆದರೆ 2018ರಲ್ಲಿ ಪುಣೆಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 180+ ರನ್ ಗುರಿಯನ್ನು ಯಶಸ್ವಿಯಾಗಿ ತಲುಪಿದ್ದೇ ಕೊನೆ. ಅಲ್ಲಿಂದ ಇಲ್ಲಿಯವರೆಗೆ ಅಂದರೆ ಸುಮಾರು ಏಳು ವರ್ಷಗಳಿಂದ ತಂಡಕ್ಕೆ ಈ ಮೈಲಿಗಲ್ಲು ತಲುಪಲು ಸಾಧ್ಯವಾಗಿಲ್ಲ.

ಹಿನ್ನಡೆಗೆ ಪ್ರಮುಖ ಕಾರಣಗಳೇನು?

  •  ನಿಧಾನಗತಿಯ ಆರಂಭ: ಪವರ್‌ಪ್ಲೇ ಅವಧಿಯಲ್ಲಿ ರನ್‌ ಗಳಿಸಲು ವಿಫಲವಾಗುವುದು ಅಥವಾ ವಿಕೆಟ್ ಕಳೆದುಕೊಳ್ಳುವುದು ತಂಡದ ಮೇಲೆ ಒತ್ತಡ ಹೇರುತ್ತಿದೆ.
  • ಮಧ್ಯಮ ಕ್ರಮಾಂಕದ ವೈಫಲ್ಯ: ಆರಂಭಿಕರು ಉತ್ತಮ ಅಡಿಪಾಯ ಹಾಕಿದರೂ, ಮಧ್ಯಮ ಕ್ರಮಾಂಕದಲ್ಲಿ ದೊಡ್ಡ ಹೊಡೆತಗಳನ್ನು ಹೊಡೆಯುವಲ್ಲಿ ಎಡವುತ್ತಿದ್ದಾರೆ.
  • ಹೆಚ್ಚುತ್ತಿರುವ ಗುರಿಗಳು: ಟಿ20 ಕ್ರಿಕೆಟ್ ಬದಲಾಗುತ್ತಿದ್ದು, ಈಗ 180-200 ರನ್‌ಗಳು ಸಾಮಾನ್ಯ ಮೊತ್ತಗಳಾಗಿವೆ. ಆದರೆ CSK ತಂಡದ ಬ್ಯಾಟಿಂಗ್ ಶೈಲಿ ಇನ್ನೂ ಹಳೆಯ ಮಾದರಿಯಲ್ಲೇ ಇರುವುದು ಈ ಸೋಲಿಗೆ ಕಾರಣವಿರಬಹುದು.

14 ಸೋಲುಗಳ ಪಟ್ಟಿ:

ಸೀಸನ್ ಎದುರಾಳಿ ತಂಡ ಗುರಿ CSK ಗಳಿಸಿದ ರನ್ ಫಲಿತಾಂಶ
2026 SRH 195 184/8 10 ರನ್‌ಗಳ ಸೋಲು
2026 RCB 251 207 43 ರನ್‌ಗಳ ಸೋಲು
2025 PBKS 220 170 50 ರನ್‌ಗಳ ಸೋಲು
2025 DC 184 159/9 25 ರನ್‌ಗಳ ಸೋಲು
2025 RCB 197 146/8 51 ರನ್‌ಗಳ ಸೋಲು
2025 RR 183 176/6 7 ರನ್‌ಗಳ ಸೋಲು
2024 RCB 219 191/7 28 ರನ್‌ಗಳ ಸೋಲು
2024 GT 232 196/8 36 ರನ್‌ಗಳ ಸೋಲು
2024 DC 192 171/6 21 ರನ್‌ಗಳ ಸೋಲು
2023 RR 203 170/6 33 ರನ್‌ಗಳ ಸೋಲು
2023 RR 176* 172/6 3 ರನ್‌ಗಳ ಸೋಲು
2022 PBKS 188 176/6 11 ರನ್‌ಗಳ ಸೋಲು
2022 PBKS 181 126 54 ರನ್‌ಗಳ ಸೋಲು
2021 MI 219 218/4 4 ವಿಕೆಟ್‌ಗಳ ಸೋಲು

ಇದನ್ನೂ ಓದಿ: ‘ಇದು ನನ್ನ ಮೈದಾನ’ ಸೆಲೆಬ್ರೇಷನ್ ಪ್ಲ್ಯಾನ್ ಇತ್ತಾ? ಕೆಎಲ್ ರಾಹುಲ್ ಹೇಳಿದ್ದೇನು?

2019 ರಿಂದ 180+ ಗುರಿಯನ್ನು ಬೆನ್ನತ್ತಲು ವಿಫಲವಾಗಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಈ ಅಂಕಿಅಂಶ ಖಂಡಿತವಾಗಿಯೂ ಗೌರವ ತರುವಂತದ್ದಲ್ಲ. ಮುಂಬರುವ ಪಂದ್ಯಗಳಲ್ಲಿ ತಂಡವು ತನ್ನ ತಂತ್ರಗಾರಿಕೆಯನ್ನು ಬದಲಿಸಿಕೊಂಡು, ಈ ‘ಸೋಲಿನ ಸರಣಿ’ಗೆ ಬ್ರೇಕ್ ಹಾಕುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Published On – 8:43 am, Sun, 19 April 26

Source link

‘ಇದು ನನ್ನ ಮೈದಾನ’ ಸೆಲೆಬ್ರೇಷನ್ ಪ್ಲ್ಯಾನ್ ಇತ್ತಾ? ಕೆಎಲ್ ರಾಹುಲ್ ಹೇಳಿದ್ದೇನು? – Kannada News | “This is my ground”: KL Rahul Talked About iconic statement at Chinnaswamy.

ಐಪಿಎಲ್ 2025, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡ 20 ಓವರ್​ಗಳಲ್ಲಿ 163 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಘಾತಕ್ಕೆ ಒಳಗಾದರೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ (KL Rahul) ಏಕಾಂಗಿ ಹೋರಾಟ ನಡೆಸಿದರು.

ಈ ಏಕಾಂಗಿ ಹೋರಾಟದೊಂದಿಗೆ ಅಜೇಯ 93 ರನ್​ ಬಾರಿಸಿ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಜಯ ತಂದು ಕೊಟ್ಟಿದ್ದರು. ಈ ಗೆಲುವಿನ ಬಳಿಕ ತಮ್ಮ ಬ್ಯಾಟ್ ಅನ್ನು ಮಣ್ಣಿನಲ್ಲಿ ಬಲವಾಗಿ ಊರಿ, “ಇದು ನನ್ನ ಮೈದಾನ”ಎಂದು ಕಾಂತಾರಾ ಸ್ಟ್ರೈಲ್​ನಲ್ಲಿ  ಸಂಭ್ರಮಿಸಿದ್ದರು.

ಇದೀಗ ಮತ್ತೊಮ್ಮೆ ಆರ್​ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ದಾಖಲಿಸಿದೆ. ಈ ಬಾರಿ ಕೂಡ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ್ದು ಕೆಎಲ್ ರಾಹುಲ್. ಆರ್​ಸಿಬಿ ನೀಡಿದ 176 ರನ್​ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ರಾಹುಲ್ 34 ಎಸೆತಗಳಲ್ಲಿ 57 ರನ್​ ಬಾರಿಸಿದ್ದಾರೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವಿನಲ್ಲಿ ತನ್ನದೆಯಾದ ಕೊಡುಗೆ ನೀಡಿದ್ದಾರೆ.

ಈ ಗೆಲುವಿನ ಬಳಿಕ ಮಾತನಾಡಿದ ಕೆಎಲ್ ರಾಹುಲ್​​ಗೆ ಈ ಬಾರಿ ಕಾಂತಾರಾ ಸ್ಟೈಲ್​ನಲ್ಲಿ ಸೆಲೆಬ್ರೇಷನ್ ಮಾಡುವ ಪ್ಲ್ಯಾನ್ ಇತ್ತಾ ಎಂದು ಕೇಳಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ರಾಹುಲ್, ಇಲ್ಲಾ, “ಅದು ಕೇವಲ ಒಂದು ಬಾರಿ ಮಾಡಿದ ಆಚರಣೆಯಷ್ಟೇ, ಇಂದಿನ ಪಂದ್ಯದಲ್ಲಿ ಆ ರೀತಿ ಮಾಡಲು ಯಾವುದೇ ಪ್ಲ್ಯಾನ್ ಇರಲಿಲ್ಲ,” ಎಂದಿದ್ದಾರೆ.

ಇದೇ ವೇಳೆ ಈ ಬಾರಿ ಬ್ಯಾಟಿಂಗ್ ಕಠಿಣವಾಗಿತ್ತು ಎಂದು ಒಪ್ಪಿಕೊಂಡಿರುವ ಕೆಎಲ್ ರಾಹುಲ್, ಆರಂಭದಲ್ಲಿ ಪಿಚ್ ಸ್ವಲ್ಪ ಭಿನ್ನವಾಗಿ ವರ್ತಿಸುತ್ತಿತ್ತು. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಕೂಡ ಚೆಂಡು ಬರುತ್ತಿದ್ದ ರೀತಿಯ ಬಗ್ಗೆ ಅಸಮಾಧಾನಗೊಂಡಿರುವುದನ್ನು ನಾನು ಗಮನಿಸಿದೆ.

ನಾವು ಮೊದಲ ಆರು ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡಿದ್ದು ನಮಗೆ ಹಿನ್ನಡೆಯಾಯಿತು. ಆದರೆ ನಾವು ಗಳಿಸಬೇಕಾದ ರನ್ ಗತಿ ಏರದಂತೆ ತಡೆಯುವುದು ನಮ್ಮ ಮುಖ್ಯ ಗುರಿಯಾಗಿತ್ತು. ಹೀಗಾಗಿ ನಾನು ಬಿರುಸಿನ ಬ್ಯಾಟಿಂಗ್ ಮುಂದುವರೆಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಇನ್ನು ಟ್ರಿಸ್ಟನ್ ಸ್ಟಬ್ಸ್ ಅವರೊಂದಿಗೆ ಜೊತೆಯಾಟದ ಬಗ್ಗೆ ಮಾತನಾಡಿದ ರಾಹುಲ್, ನಾವಿಬ್ಬರು ನಮ್ಮ ಆಟದ ಶೈಲಿಯನ್ನು ಬದಲಿಸದೆ, ಉತ್ತಮ ಕ್ರಿಕೆಟ್ ಶಾಟ್‌ಗಳನ್ನು ಆಡಲು ನಿರ್ಧರಿಸಿದೆವು. ಬೌಲರ್‌ಗಳ ಮೇಲೆ ಒತ್ತಡ ಹೇರುವುದು ಮುಖ್ಯವಾಗಿತ್ತು. ಕೊನೆಯ ಹಂತದವರೆಗೆ ಪಂದ್ಯವನ್ನು ಕೊಂಡೊಯ್ದರೆ ಗೆಲುವು ಕಷ್ಟವಾಗುತ್ತದೆ ಎಂಬುದು ನಮಗೆ ತಿಳಿದಿತ್ತು.

ಇದಾಗ್ಯೂ ಕೊನೆಯ ಹಂತದಲ್ಲಿ ಪಂದ್ಯ ರೋಚಕ ಹಂತ ತಲುಪಿದರೂ ನಾನು ಗಾಬರಿಗೊಂಡಿರಲಿಲ್ಲ. ಏಕೆಂದರೆ ನನಗೆ ಸ್ಟಬ್ಸ್ ಮತ್ತು ಮಿಲ್ಲರ್ ಮೇಲೆ ಸಂಪೂರ್ಣ ನಂಬಿಕೆ ಇತ್ತು. ಅವರು ಸೌತ್ ಆಫ್ರಿಕಾ ಮತ್ತು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹಲವು ಪಂದ್ಯಗಳನ್ನು ಫಿನಿಶ್ ಮಾಡಿದ್ದಾರೆ.

ಇದನ್ನೂ ಓದಿ: IPL 2026: ಹೀಗೊಂದು ‘ಅವಮಾನಕರ’ ದಾಖಲೆ ಬರೆದ RCB

ಅಲ್ಲದೆ ಕೊನೆಯ ಓವರ್​ ಅನ್ನು ರೊಮಾರಿಯೋ ಶೆಫರ್ಡ್ ಅಥವಾ ಸುಯಶ್ ಶರ್ಮಾ ಎಸೆಯುತ್ತಾರೆ ಎಂಬುದು ನಮಗೆ ತಿಳಿದಿತ್ತು. ಈ ವೇಳೆ ಬಿಗ್ ಹಿಟ್ ಬಾರಿಸಲು ಅವಕಾಶ ದೊರೆಯಲಿದೆ ಎಂಬುದು ಗೊತ್ತಿತ್ತು. ಹೀಗಾಗಿ ಪಂದ್ಯವು ಕೊನೆಯ ಓವರ್​ನತ್ತ ಸಾಗಿದರೂ ನಾನು ಚಿಂತಿತನಾಗಿರಲಿಲ್ಲ ಎಂದು ಕೆಎಲ್ ರಾಹುಲ್ ತಿಳಿಸಿದ್ದಾರೆ.

Source link

Exit mobile version