Headlines

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ; 47 ಜನ ಮಂದಿ ಸಾವು – Kannada News | 47 people killed several buildings collapsed as massive earthquake of 7.4 magnitude jolts Colombia

ಕೊಲಂಬಿಯಾ, ಆಗಸ್ಟ್ 10: ದಕ್ಷಿಣ ಅಮೆರಿಕದ ಕೊಲಂಬಿಯಾದಲ್ಲಿ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ (Earthquake) 47 ಜನರು ಮೃತಪಟ್ಟಿದ್ದಾರೆ. ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಸ್ಥಿತಿ ತೀವ್ರ ಆತಂಕಕಾರಿಯಾಗಿದೆ. ಭೂಕಂಪದ ಕೇಂದ್ರಬಿಂದು ಕೊಲಂಬಿಯಾದ ಚೊಕೊ ಪ್ರದೇಶದ ‘ಸ್ಯಾನ್ ಜೋಸ್ ಡೆಲ್ ಪಾಲ್ಮಾರ್’ ಬಳಿ ದಾಖಲಾಗಿದೆ. ಇದರ ತೀವ್ರತೆ ರಾಜಧಾನಿ ಬೊಗೋಟಾ ಹಾಗೂ ನೆರೆರಾಷ್ಟ್ರಗಳಿಗೂ ಹಬ್ಬಿದೆ. ಅಮೆರಿಕದ ಸ್ಥಳೀಯ ಸಮಯ ಬೆಳಿಗ್ಗೆ 7.34ಕ್ಕೆ ಸಂಭವಿಸಿದ ಈ ಭೂಕಂಪದ ಕೇಂದ್ರಬಿಂದು ಸ್ಯಾನ್ ಜೋಸ್ ಡೆಲ್ ಪಾಲ್ಮಾರ್‌ನಿಂದ ಪೂರ್ವಕ್ಕೆ ಸುಮಾರು 3 ಮೈಲಿ…

Read More

Happy Life Tips: ಜೀವನದಲ್ಲಿ ಸಂತೋಷವಾಗಿರಲು ಈ ಸಿಂಪಲ್‌ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | These good habits will bring happiness into your life

ಇಂದಿನ ಈ ಕಾರ್ಯನಿರತ ಜೀವನದಲ್ಲಿ ಹೆಚ್ಚಿನವರು ಒತ್ತಡಕ್ಕೊಳಗಾಗಿದ್ದಾರೆ. ಕೆಲಸ, ಕುಟುಂಬದ ಜವಾಬ್ದಾರಿಯ ಚಿಂತೆಯಿಂದಾಗಿ ಸಂತೋಷವಾಗಿರುವುದನ್ನೇ (Happy) ಮರೆತುಬಿಟ್ಟಿದ್ದಾರೆ. ಇನ್ನೂ ಅನೇಕರು ಸಂತೋಷವವನ್ನು ಕಂಡುಕೊಳ್ಳುವುದು ಸವಾಲಿನ ಕೆಲಸವೇ ಸರಿ ಎಂಬು ಭಾವಿಸುತ್ತಾರೆ. ಆದರೆ ಹ್ಯಾಪಿ ಆಗಿರೋದು ಅಷ್ಟು ಕಷ್ಟದ ಕೆಲಸವೇನಲ್ಲ, ಕೆಲವು ಸರಳ ಅಭ್ಯಾಸಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಂತೋಷವಾಗಿರಬಹುದು. ಸಂತೋಷದಾಯಕ ಜೀವನಕ್ಕೆ ಸಹಕಾರಿಯಾದ ಆ ಅಭ್ಯಾಸಗಳು ಯಾವುವು ಎಂಬ ಸಂಪೂರ್ಣ ವಿವರ ಇಲ್ಲಿದೆ. ಸಂತೋಷವಾಗಿರಲು ಏನು ಮಾಡಬೇಕು? ಸಕಾರಾತ್ಮಕ ಮನಸ್ಥಿತಿಯನ್ನು ಇಟ್ಟುಕೊಳ್ಳಿ: ಸಂತೋಷದ ಮೊದಲ ಹೆಜ್ಜೆ…

Read More

ಶಾರುಖ್ ನಟಿಸಿದ ಆ ಸಿನಿಮಾ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಸ್ಪಷ್ಟನೆ – Kannada News | Kabhi Alvida Naa Kehna 20 Years Karan Johar says film did not endorse infidelity

ಕರಣ್ ಜೋಹರ್ ನಿರ್ದೇಶನದ 2006ರ ಹಿಟ್ ಸಿನಿಮಾ ‘ಕಭಿ ಅಲ್ವಿದಾ ನಾ ಕೆಹನಾ’ (Kabhi Alvida Naa Kehna) ಬಿಡುಗಡೆಯಾಗಿ ಈಗ ಎರಡು ದಶಕಗಳನ್ನು ಪೂರೈಸಿದೆ. ಬಿಡುಗಡೆಯ ಸಮಯದಲ್ಲಿ ವಿಭಿನ್ನ ಹಾಗೂ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದ್ದ ಈ ಚಿತ್ರ, ಕಾಲಕ್ರಮೇಣ ಪ್ರೇಕ್ಷಕರ ನೆಚ್ಚಿನ ಕ್ಲಾಸಿಕ್ ಸಿನಿಮಾವಾಗಿ ಹೊರಹೊಮ್ಮಿತು. 20 ವರ್ಷ ಕಳೆದಿರುವ ಈ ಸಂದರ್ಭದಲ್ಲಿ ನಿರ್ದೇಶಕ ಕರಣ್ ಜೋಹರ್ (Karan Johar) ಅವರು ಇನ್‌ಸ್ಟಾಗ್ರಾಮ್‌ನಲ್ಲಿ ದೀರ್ಘವಾದ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಂದು ತಮಗೆ ಎದುರಾದ ವಿಚಿತ್ರ ಅನುಭವಗಳನ್ನು…

Read More

ಮಂಡ್ಯ: ಬಾಂಗ್ಲಾ ವಲಸಿಗರೆಂಬ ಶಂಕೆ; ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು – Kannada News | Mandya: Hindu Activists Intercept KSRTC Bus Over Suspected Bangladeshi Migrants

ಮಂಡ್ಯ, ಆಗಸ್ಟ್​​​ 10: ಮಂಡ್ಯದ ಬಸ್ ನಿಲ್ದಾಣದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪ್ರಯಾಣಿಸುತ್ತಿದ್ದಾರೆಂಬ ಶಂಕೆ ಮೇಲೆ ಹಿಂದೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್‌ ತಡೆದು ಪರಿಶೀಲನೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಸುಮಾರು 30 ಜನರು ಬಾಂಗ್ಲಾ ಮೂಲದವರೆಂದು ಶಂಕಿಸಿ ಕಾರ್ಯಕರ್ತರು ಅಡ್ಡಗಟ್ಟಿದ್ದರಿಂದ ಸ್ಥಳಕ್ಕೆ ಪೊಲೀಸರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ತಪಾಸಣೆ ವೇಳೆ ಇವರು ಕೊಡಗಿನ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕರು ಎಂಬುವುದು ಮೇಲ್ನೋಟಕ್ಕೆ ಕಂಡುಬಂದಿದೆ….

Read More

IND vs SL: ಸಚಿನ್ ದಾಖಲೆ ಮೇಲೆ ಗಿಲ್ ಕಣ್ಣು; ಕುಲ್ದೀಪ್, ಜಡೇಜಾಗೂ ಇದು ವಿಶೇಷ ಸರಣಿ – Kannada News | India vs SL Test: Gill’s Captaincy, Jadeja’s Wickets and Kuldeep’s Milestones Await

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ (India vs Sri Lanka ) ಹಲವು ದಾಖಲೆಗಳನ್ನು ಬರೆಯಲಿದೆ. ಇತ್ತ ಆಟಗಾರರು ಕೂಡ ವೈಯಕ್ತಿಕವಾಗಿ ವಿಶೇಷ ಮೈಲಿಗಲ್ಲುಗಳನ್ನು ದಾಟಲಿದ್ದಾರೆ. ಅಂತಹವರಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ (Shubman Gill), ರವೀಂದ್ರ ಜಡೇಜಾ ಮತ್ತು ಕುಲ್ದೀಪ್ ಯಾದವ್ ಕೂಡ ಸೇರಿದ್ದಾರೆ. ಅದರಲ್ಲೂ ನಾಯಕ ಗಿಲ್ ಈ ಸರಣಿಯಲ್ಲಿ 3 ಪ್ರಮುಖ ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಗಿಲ್ ಪ್ರಸ್ತುತ ಡಬ್ಲ್ಯೂಟಿಸಿ ಆವೃತ್ತಿಯಲ್ಲಿ ಈಗಾಗಲೇ ಐದು ಶತಕಗಳನ್ನು…

Read More

‘ಜಂತರ್ ಮಂತರ್‌ನಲ್ಲಿ ಯಾವ ಗುಂಡಿನ ದಾಳಿಯೂ ನಡೆದಿಲ್ಲ’; ರಾಹುಲ್ ಗಾಂಧಿಗೆ ಸಚಿವ ಜೆ.ಪಿ. ನಡ್ಡಾ ತಿರುಗೇಟು – Kannada News | No firing at Jantar Mantar JP Nadda counters Rahul Gandhi

ನವದೆಹಲಿ, ಆಗಸ್ಟ್ 10: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯಾವುದೇ ಗುಂಡಿನ ದಾಳಿ ಅಥವಾ ಪೆಲೆಟ್ ಗನ್ ಪ್ರಯೋಗ ನಡೆದಿಲ್ಲ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda) ಸ್ಪಷ್ಟಪಡಿಸಿದ್ದು, ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ದೇಶದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿವೇಶನದ ಆರಂಭದಲ್ಲಿ ರಾಹುಲ್ ಗಾಂಧಿ ನೀಟ್ (NEET) ಕುರಿತು ಚರ್ಚೆಗೆ ಪಟ್ಟು ಹಿಡಿದಿದ್ದರು. ಸರ್ಕಾರ ಅದಕ್ಕೆ ಒಪ್ಪಿಕೊಂಡಾಗ ರಾಮಮಂದಿರ ಟ್ರಸ್ಟ್ ವಿಷಯ ಎತ್ತಿದರು….

Read More

ತಾಯಿ ಕಣ್ಣೆದುರೇ ಹತ್ಯೆ: ಒಂದು ಎಕರೆ ಜಮೀನಿಗಾಗಿ ಅಣ್ಣನನ್ನೇ ಕೊಂದು ಜೈಲು ಸೇರಿದ ತಮ್ಮ – Kannada News | Haveri Land Dispute: Brother Allegedly Kills Sibling Over One Acre Property

ಹಾವೇರಿ, ಆಗಸ್ಟ್​​ 10: ದೂರದ ಊರಿಗೆ ಕೂಲಿ ಕೆಲಸ ಮಾಡಲು ಹೋಗಿದ್ದ ಅಣ್ಣ ಮನೆಗೆ ಬರುತ್ತಿದ್ದಂತೆ ತಮ್ಮನ ಪಿತ್ತ ನೆತ್ತಿಗೇರಿತ್ತು. ಪ್ರಯಾಣ ಮಾಡಿ ಸುಸ್ತಾಗಿದ್ದ ಅಣ್ಣ, ಅಮ್ಮನ ಕೈ ತುತ್ತು ತಿಂದು ಮಲಗಿದ್ದ. ಆತ ಮಲಗುವುದನ್ನೇ ಕಾಯುತ್ತಿದ್ದ ತಮ್ಮ, ತಾಯಿ ಎದುರೇ ಕಲ್ಲು ಎತ್ತಿಹಾಕಿ ಅಣ್ಣನನ್ನು ಕೊಲೆ ಮಾಡಿದ್ದಾನೆ. ಆ ಮೂಲಕ ಒಂದು ಎಕರೆ ಜಮೀನು ವಿವಾದ ಕೊಲೆಯಲ್ಲಿ (kill) ಅಂತ್ಯವಾಗಿದೆ. ಹಾವೇರಿ (haveri) ಜಿಲ್ಲೆಯ ಹಾನಗಲ್ ತಾಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ನಡೆದಿದ್ದೇನು? ಹತ್ಯೆಯಾದ…

Read More

ಆರ್​ಬಿಐ ಅಂದಾಜಿಗಿಂತಲೂ ಹೆಚ್ಚು ವೇಗದಲ್ಲಿ ಭಾರತದ ಆರ್ಥಿಕತೆ ಬೆಳೆಯಲಿದೆ: ಅರವಿಂದ್ ಪನಗರಿಯಾ – Kannada News | Indian economy to grow by atleast 7pc says arvind panagariya

ನವದೆಹಲಿ, ಆಗಸ್ಟ್ 10: ಭಾರತದ ಆರ್ಥಿಕತೆಯ ಬೆಳವಣಿಗೆಯ ವೇಗದ ವಿಚಾರದಲ್ಲಿ ಅರವಿಂದ್ ಪನಗರಿಯಾ (Arvind Panagariya) ಹೆಚ್ಚು ಆಶಾವಾದಿಯಾಗಿದ್ದಾರೆ. ಭಾರತದ ಜಿಡಿಪಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ. 6.7ರಷ್ಟು ಬೆಳೆಯಬಹುದು ಎಂದು ಆರ್​ಬಿಐ ತನ್ನ ಇತ್ತೀಚಿನ ಎಂಪಿಸಿ ಸಭೆಯಲ್ಲಿ ಅಂದಾಜು ಮಾಡಿದೆ. ಆದರೆ, ಭಾರತದ ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಹಾಗೂ ಈಗಿನ 16ನೇ ಹಣಕಾಸು ಆಯೋಗದ ಅಧ್ಯಕ್ಷರೂ ಆಗಿರುವ ಅರವಿಂದ್ ಪನಗರಿಯಾ ಅವರು ಭಾರತದ ಜಿಡಿಪಿಯ ಬೆಳವಣಿಗೆ ಶೇ. 7ಕ್ಕಿಂತ ಹೆಚ್ಚಿನ ದರದಲ್ಲಿ ಮುಂದುವರಿಯುತ್ತದೆ ಎಂದಿದ್ದಾರೆ….

Read More

‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಈ ವಿಡಿಯೋದಲ್ಲಿದೆ ಪೂರ್ತಿ ವಿವರ – Kannada News | Geetu Mohandas background and Biography Yash starrer Toxic Movie Director career details

‘ಟಾಕ್ಸಿಕ್’ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಹಿನ್ನೆಲೆ ಏನು ಎಂಬ ಕುತೂಹಲ ಹಲವರಿಗೆ ಇದೆ. ಆ ಪ್ರಶ್ನೆಗೆ ಈ ವಿಡಿಯೋದಲ್ಲಿದೆ ಉತ್ತರ. ಗೀತು ಮೋಹನ್​ದಾಸ್ (Geetu Mohandas) ಅವರಿಗೆ ಚಿತ್ರರಂಗದ ನಂಟು ಬಾಲ್ಯದಿಂದಲೇ ಇದೆ. ಮೊದಲು ಅವರು ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಆಗ ಅವರಿಗೆ ಕೇವಲ 5 ವರ್ಷ ವಯಸ್ಸು. ಬಳಿಕ ಅವರು ಹೀರೋಯಿನ್ ಆಗಿ ಮಿಂಚಿದರು. ನಂತರ ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಈಗ ಅವರು ‘ಟಾಕ್ಸಿಕ್’ ಸಿನಿಮಾಗೆ ನಿರ್ದೇಶನ…

Read More

IND vs SL: ಟೆಸ್ಟ್‌ ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ಟೀಂ ಇಂಡಿಯಾ

ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಶುಭ್​ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರಿಂದ ಆರಂಭವಾಗಲಿದೆ. ಇದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 23 ರಿಂದ ಶುರುವಾಗಲಿದೆ. ಈ ಎರಡೂ ಪಂದ್ಯಗಳನ್ನು ಗೆದ್ದರೆ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಮಹತ್ವದ ಮೈಲಿಗಲ್ಲು ದಾಟಲಿದೆ(PC-PTI). ಟೀಂ ಇಂಡಿಯಾದ1932 ರಿಂದ ಟೆಸ್ಟ್ ಕ್ರಿಕೆಟ್ ಆಡುತ್ತಿದೆ. ಅಲ್ಲಿಂದ ಇಲ್ಲಿಯವರೆಗೆ ಟೀಂ ಇಂಡಿಯಾ 599 ಟೆಸ್ಟ್ ಪಂದ್ಯಗಳನ್ನು ಆಡಿದೆ….

Read More