ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಈ ಮಾರ್ಗದ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ – Kannada News | BMRCL Announces Temporary Suspension of Purple Line Metro Services for 2 Hours on May 17

ನೇರಳೆ ಮಾರ್ಗದ ಮೆಟ್ರೋImage Credit source: bmrc.co.in

ಬೆಂಗಳೂರು, ಮೇ 15: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ (Purple Line) ಪ್ರಯಾಣಿಸುವ ಸಾರ್ವಜನಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ​ 17ರಂದು ಅಂದರೆ ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.

ಮುಖ್ಯಾಂಶಗಳು

  • ಮೈಸೂರು ರಸ್ತೆಯಲ್ಲಿ ಪ್ರಯಾಣ ಮಾಡುವವರಿಗೆ ಸಂಡೇ ಶಾಕ್​​
  • 17ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
  • ಅಗತ್ಯ ನಿರ್ವಹಣೆ ಕಾಮಗಾರಿ ಹಿನ್ನೆಲೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

ನಮ್ಮ ಮೆಟ್ರೋ ಟ್ವೀಟ್​

Temporary Suspension of Metro Services on Purple Line for 2 hours on 17.05.2026

ದಿನಾಂಕ 17.05.2026 ರಂದು ನೇರಳೆ ಮಾರ್ಗ ಮೆಟ್ರೋ ಸೇವೆ 2 ರಡು ಗಂಟೆ ಅವಧಿಗೆ ತಾತ್ಕಾಲಿಕ ಸ್ಥಗಿತ. ಹೆಚ್ಚಿನ ವಿವರಗಳಿಗೆ ಮಾಧ್ಯಮ ಪ್ರಕಟಣೆಯನ್ನು ವೀಕ್ಷಿಸಿ@srivasrbmrccoi1 @Secretary_MoHUA @mlkhattar @officeofmlk pic.twitter.com/EypWaXblqy

— ನಮ್ಮ ಮೆಟ್ರೋ (@OfficialBMRCL) May 15, 2026

ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ (ಸೆಂಟ್ರಲ್ ಕಾಲೇಜ್) ನಡುವೆ ಅತ್ಯಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ 07 ಗಂಟೆಯಿಂದ 09 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ.

ಎಲ್ಲೆಲ್ಲಿ ಮೆಟ್ರೋ ಲಭ್ಯವಿರಲಿದೆ?

ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 07 ಗಂಟೆಯಿಂದ 09 ಗಂಟೆ ಅವಧಿಯಲ್ಲಿ ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.

  • ಚಲ್ಲಘಟ್ಟ – ವಿಜಯನಗರ
  • ಎಂ.ಜಿ. ರಸ್ತೆ – ವೈಟ್ ಫೀಲ್ಡ್, ಕಾಡುಗೋಡಿ
  • ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್
  • ಆರ್.ವಿ. ರಸ್ತೆ – ಬೊಮ್ಮಸಂದ್ರ

ಇದನ್ನೂ ಓದಿ: ಬೆಂಗಳೂರಿನ ಕನಸಿನ ಯೋಜನೆಗೆ ಸಿಕ್ತು ವೇಗ: 153 ಮೆಟ್ರೋ ಕೋಚ್‌ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ

ಭಾನುವಾರ ಬೆಳಗ್ಗೆ 09 ಗಂಟೆಯ ನಂತರ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು, ತಮ್ಮ ಪ್ರಯಾಣವನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭೋಜಶಾಲಾ ಇನ್ಮುಂದೆ ದೇವಾಲಯ; ಮಧ್ಯಪ್ರದೇಶದ ಹೈಕೋರ್ಟ್ ಮಹತ್ವದ ತೀರ್ಪು – Kannada News | Bhojshala complex is a temple Madhya Pradesh High Court delivers verdict on disputed site

ನವದೆಹಲಿ, ಮೇ 15: ಮಧ್ಯಪ್ರದೇಶದ ಹೈಕೋರ್ಟ್ (Madhya Pradesh High Court) ಹಿಂದೂಗಳ ಪರವಾಗಿ ತೀರ್ಪು ನೀಡುವ ಮೂಲಕ ಭೋಜಶಾಲಾವನ್ನು (Bhojshala) ದೇವಾಲಯವೆಂದು ಘೋಷಿಸಿದೆ. ಈ ಸ್ಥಳದ ಐತಿಹಾಸಿಕ ಸಾಹಿತ್ಯವು ಇದು ರಾಜ ಭೋಜನಿಗೆ ಸಂಬಂಧಿಸಿದ ಸಂಸ್ಕೃತ ಕಲಿಕೆಯ ಕೇಂದ್ರವಾಗಿತ್ತು ಎಂದು ತಿಳಿಸಿದೆ. ಇದು ಧಾರ್‌ನಲ್ಲಿ ವಾಗ್ದೇವಿ ಸರಸ್ವತಿ ದೇವಿಗೆ ಮೀಸಲಾಗಿರುವ ದೇವಾಲಯದ ಅಸ್ತಿತ್ವವನ್ನು ಸೂಚಿಸುತ್ತದೆ. ಆದ್ದರಿಂದ, ಈ ಪ್ರದೇಶ ವಾಗ್ದೇವಿ ಸರಸ್ವತಿಯ ದೇವಾಲಯವಾಗಿತ್ತು ಎಂಬುದಕ್ಕೆ ಪುರಾವೆ ಸಿಕ್ಕಿದಂತಾಗಿದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.

ಈ ಸಂರಕ್ಷಿತ ಸ್ಮಾರಕದಲ್ಲಿ ಹಿಂದೂಗಳು ಮಂಗಳವಾರ ಪೂಜೆ ಸಲ್ಲಿಸಬಹುದು ಮತ್ತು ಮುಸ್ಲಿಮರು ಶುಕ್ರವಾರದ ನಮಾಜ್ ಮಾಡಬಹುದು ಎಂಬ ASIನ 2003ರ ಸುತ್ತೋಲೆಯನ್ನು ಕೂಡ ಈ ಹೈಕೋರ್ಟ್ ರದ್ದುಗೊಳಿಸಿದೆ. ಈ ಸ್ಥಳದ ಗುರುತಿನ ಕುರಿತು ಹಿಂದೂ ಮತ್ತು ಮುಸ್ಲಿಂ ಗುಂಪುಗಳ ನಡುವಿನ ದೀರ್ಘಕಾಲೀನ ವಿವಾದಕ್ಕೆ ಈ ಅಂಶ ಕೂಡ ಕಾರಣವಾಗಿತ್ತು. ಇದೀಗ ಕೊನೆಗೂ ಹೈಕೋರ್ಟ್ ಈ ವಿವಾದಕ್ಕೆ ಪೂರ್ಣ ವಿರಾಮವನ್ನು ಇಟ್ಟಿದೆ.

ಈ ತೀರ್ಪು ನೀಡಿದ ನ್ಯಾಯಮೂರ್ತಿ ವಿಜಯ್ ಕುಮಾರ್ ಶುಕ್ಲಾ ಮತ್ತು ನ್ಯಾಯಮೂರ್ತಿ ಅಲೋಕ್ ಅವಸ್ಥಿ ಅವರ ವಿಭಾಗೀಯ ಪೀಠವು ಈ ಪ್ರದೇಶಕ್ಕೆ ಸಂಬಂಧಿಸಿದ ಐತಿಹಾಸಿಕ ದಾಖಲೆಗಳು, ಪುರಾತತ್ತ್ವ ಶಾಸ್ತ್ರದ ವಸ್ತುಗಳು ಮತ್ತು ಸಾಹಿತ್ಯಿಕ ಪುರಾವೆಗಳು ಧಾರ್​ನ ಭೋಜಶಾಲಾವನ್ನು ಸಂಸ್ಕೃತ ಕಲಿಕೆಯ ಕೇಂದ್ರವನ್ನಾಗಿ ಮಾಡಿದ ಪರ್ಮಾರ್ ಆಡಳಿತಗಾರ ರಾಜ ಭೋಜನಿಗೆ ಸಂಬಂಧಿಸಿದ ಸರಸ್ವತಿ ದೇವಾಲಯವಾಗಿತ್ತು ಎಂದು ತಿಳಿಸುತ್ತಿವೆ ಎಂದು ಹೇಳಿದೆ.

ಲಂಡನ್‌ನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿದೆ ಎನ್ನಲಾದ ಸರಸ್ವತಿ ದೇವಿಯ ವಿಗ್ರಹವನ್ನು ಹಿಂದಿರುಗಿಸುವಂತೆ ಕೋರಿ ಹಿಂದೂ ಅರ್ಜಿದಾರರ ಬೇಡಿಕೆಗಳನ್ನು ಸಹ ಪೀಠವು ಗಮನಿಸಿತು. ಈ ವಿಗ್ರಹವನ್ನು ಹಿಂದಿರುಗಿಸುವುದು ಮತ್ತು ಭೋಜಶಾಲಾ ಸಂಕೀರ್ಣದೊಳಗೆ ಈ ಮೂರ್ತಿಯ ಸ್ಥಾಪನೆಯನ್ನು ಮಾಡುವ ಬಗ್ಗೆಯೂ ಸರ್ಕಾರ ನಿರ್ಧರಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: Puri Jagannath Temple: ಪುರಿ ಜಗನ್ನಾಥ ದೇವಾಲಯದಲ್ಲಿ ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಜಾರಿಗೆ ಸಿದ್ಧತೆ

ಮಧ್ಯಪ್ರದೇಶದ ಹೈಕೋರ್ಟ್‌ನ ಇಂದೋರ್ ಪೀಠವು ಇಂದು ಹಿಂದೂ ಕಡೆಯ ವಾದವನ್ನು ಆಲಿಸಿ, ಇದು ಭೋಜಶಾಲಾವನ್ನು ದೇವಾಲಯವೆಂದು ಘೋಷಿಸಿತು. ಪ್ರಾಚೀನ ಸ್ಮಾರಕಗಳು ಅಥವಾ ರಚನೆಗಳು, ಪುರಾತತ್ವ ಮತ್ತು ಐತಿಹಾಸಿಕ ಮಹತ್ವದ ದೇವಾಲಯಗಳನ್ನು ಮಾತ್ರವಲ್ಲದೆ ಎಲ್ಲಾ ರೀತಿಯ ಧಾರ್ಮಿಕ ಸ್ಥಳಗಳ ಸಂರಕ್ಷಣೆಯನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಂದು ಸರ್ಕಾರದ ಸಾಂವಿಧಾನಿಕ ಬಾಧ್ಯತೆಯಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಯಾತ್ರಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು, ಕೆಲವು ಸ್ಥಳಗಳಲ್ಲಿ ಸರಿಯಾದ ವ್ಯವಸ್ಥೆಗಳನ್ನು ಮಾಡುವುದು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಸಾಂವಿಧಾನಿಕ ಕರ್ತವ್ಯವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ. ಇದಲ್ಲದೆ, ಈ ಸ್ಥಳದ ಪಾವಿತ್ರ್ಯವನ್ನು ಕಾಪಾಡುವುದು ಮತ್ತು ದೇವತೆಯ ಸ್ವರೂಪವನ್ನು ಕಾಪಾಡುವುದು ಸಹ ಅತ್ಯಗತ್ಯ ಎಂದು ಕೋರ್ಟ್ ಹೇಳಿದೆ.

ಏನಿದು ವಿವಾದ?:

ಭೋಜಶಾಲಾ ವಿವಾದವು ದಶಕಗಳಷ್ಟು ಹಿಂದಿನದು. ಹಿಂದೂಗಳು ಈ ಸ್ಥಳವನ್ನು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವೆಂದು ಪರಿಗಣಿಸುತ್ತಾರೆ. ಆದರೆ ಮುಸ್ಲಿಮರು ಇದನ್ನು ಕಮಲ್ ಮೌಲಾ ಮಸೀದಿ ಎಂದು ನಂಬುತ್ತಾರೆ. ಇದರ ಜೊತೆಗೆ ಜೈನರು ಇದು ಜೈನ ಗುರುಕುಲವಾಗಿತ್ತು ಎಂದು  ಕೋರ್ಟ್​ನಲ್ಲಿ ಹಲವು ಮೊಕದ್ದಮೆಗಳನ್ನು ಸಲ್ಲಿಸಿದ್ದರು. ಇದರಲ್ಲಿ ವಿಶೇಷ ಹಿಂದೂ ಪೂಜಾ ಹಕ್ಕುಗಳು ಮತ್ತು ಸ್ಥಳದಲ್ಲಿ ನಮಾಜ್ ಮೇಲಿನ ನಿರ್ಬಂಧಗಳನ್ನು ಕೋರುವ ಮನವಿಗಳು ಕೂಡ ಸೇರಿವೆ. ವಿಚಾರಣೆಯ ಸಮಯದಲ್ಲಿ ಹೈಕೋರ್ಟ್ ಸ್ಮಾರಕದ ವೈಜ್ಞಾನಿಕ ASI ಸಮೀಕ್ಷೆಗೆ ಆದೇಶಿಸಿತ್ತು.

ಹಿಂದೂ ಅರ್ಜಿದಾರರನ್ನು ಪ್ರತಿನಿಧಿಸುವ ವಕೀಲರು ಭೋಜಶಾಲ ಮೂಲತಃ ರಾಜ ಭೋಜನ ಆಳ್ವಿಕೆಯ ಹಿಂದಿನ ಸರಸ್ವತಿ ದೇವಾಲಯವಾಗಿತ್ತು ಎಂದು ಹೇಳಿದ್ದಾರೆ. ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ಧಾರ್ಮಿಕ ಸ್ಥಳದ ಪುರಾವೆಯಾಗಿ ಶಾಸನಗಳು, ಪುರಾತತ್ತ್ವ ಶಾಸ್ತ್ರದ ಅವಶೇಷಗಳನ್ನು ತೋರಿಸಿದರು. ಆದರೆ, ಮುಸ್ಲಿಂ ಅರ್ಜಿದಾರರು ಖಿಲ್ಜಿ ಯುಗದ ಐತಿಹಾಸಿಕ ದಾಖಲೆಗಳು ಸರಸ್ವತಿ ದೇವಾಲಯದ ನಾಶದ ಬಗ್ಗೆ ಯಾವುದೇ ಉಲ್ಲೇಖವನ್ನು ಹೊಂದಿಲ್ಲ ಎಂದು ವಾದಿಸಿದ್ದರು. ಹಿಂದಿನ ಧಾರ್ ಆಡಳಿತಗಾರ ಆ ಸ್ಥಳದಲ್ಲಿ ನಮಾಜ್‌ಗೆ ಅನುಮತಿ ನೀಡಿ 1935ರಲ್ಲಿ ಹೊರಡಿಸಿದ “ಅಲಾನ್” ಅನ್ನು ಉಲ್ಲೇಖಿಸಿದ್ದರು. ಜೈನ ಅರ್ಜಿದಾರರು ಸಹ ಈ ಸ್ಥಳಕ್ಕೆ ಸಂಬಂಧಿಸಿದ ವಿಗ್ರಹವು ಜೈನ ದೇವತೆ ಅಂಬಿಕೆಗೆ ಸೇರಿದ್ದು ಮತ್ತು ಮೌಂಟ್ ಅಬುವಿನಲ್ಲಿ ದೇವಾಲಯದ ವಾಸ್ತುಶಿಲ್ಪದೊಂದಿಗೆ ಇದರ ಹೋಲಿಕೆಯಿದೆ ಎಂದು ವಾದಿಸಿದ್ದರು.

ಇದನ್ನೂ ಓದಿ: Hanuman Temples: ಸ್ತ್ರೀ ರೂಪದ ಹನುಮ, ತಲೆಕೆಳಗಾದ ಆಂಜನೇಯ; ಅಚ್ಚರಿ ಮೂಡಿಸುವ 5 ಅಪರೂಪದ ದೇವಾಲಯಗಳಿವು

ವಿಚಾರಣೆಯ ಸಮಯದಲ್ಲಿ, ಹಿಂದೂ, ಮುಸ್ಲಿಂ ಮತ್ತು ಜೈನ ಸಮುದಾಯಗಳ ಅರ್ಜಿದಾರರು ವಿವರವಾದ ವಾದಗಳನ್ನು ಮಂಡಿಸಿದರು ಮತ್ತು ಸ್ಮಾರಕದಲ್ಲಿ ತಮ್ಮ ಸಮುದಾಯಗಳಿಗೆ ವಿಶೇಷ ಪೂಜಾ ಹಕ್ಕುಗಳನ್ನು ಕೋರಿದರು. ಈ ಸ್ಮಾರಕದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿದ ನಂತರ, ASI ತನ್ನ 2,000ಕ್ಕೂ ಹೆಚ್ಚು ಪುಟಗಳ ವರದಿಯಲ್ಲಿ ಧಾರ್‌ನ ಪರ್ಮಾರ್ ರಾಜರ ಆಳ್ವಿಕೆಯ ಹಿಂದಿನ ಬೃಹತ್ ರಚನೆಯು ಮಸೀದಿಗಿಂತ ಹಿಂದಿನದು ಎಂದು ಸೂಚಿಸಿದೆ.

ನ್ಯಾಯಾಲಯದ ಮುಂದಿದ್ದ ಮುಖ್ಯವಾದ ಪ್ರಶ್ನೆಯೆಂದರೆ ಅದು ಹಿಂದೂ ದೇವಸ್ಥಾನವೇ (ವಾಗ್ದೇವಿ ದೇವಸ್ಥಾನ) ಅಥವಾ ಮುಸ್ಲಿಂ ಮಸೀದಿಯೇ (ಕಮಲ್ ಮೌಲಾ ಮಸೀದಿ) ಎಂಬುದು. “ಇದು ಸಂರಕ್ಷಿತ ಕಟ್ಟಡ ಎಂಬುದು ಸ್ಪಷ್ಟವಾಗಿದೆ. ASI ಇದರ ಮೇಲ್ವಿಚಾರಣೆ ಮತ್ತು ಇದರ ಸಂರಕ್ಷಣೆಯ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದೆ” ಎಂದು ನ್ಯಾಯಾಲಯ ಹೇಳಿದೆ. ಹಾಗೇ, ಮುಸ್ಲಿಂ ಕಡೆಯವರು ಮಸೀದಿಗಾಗಿ ಬೇರೆ ಜಾಗಕ್ಕೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಹೈಕೋರ್ಟ್ ಆದೇಶದ ಮೇರೆಗೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ವಿವರವಾದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿತು. ಈ ಸಮೀಕ್ಷೆಯು 98 ದಿನಗಳ ಕಾಲ ನಡೆಯಿತು. ಇದಾದ ಬಳಿಕ ASI ಜುಲೈ 15, 2024ರಂದು ಸುಮಾರು 2,000 ಪುಟಗಳ ವಿವರವಾದ ವರದಿಯನ್ನು ಸಲ್ಲಿಸಿತು. ಈ ವರದಿಯ ಪ್ರಕಾರ, ಪ್ರಸ್ತುತ ರಚನೆಯನ್ನು ಮೊದಲೇ ಅಸ್ತಿತ್ವದಲ್ಲಿರುವ ದೇವಾಲಯದ ಅವಶೇಷಗಳು ಮತ್ತು ಕಂಬಗಳನ್ನು ಬಳಸಿ ನಿರ್ಮಿಸಲಾಗಿದೆ ಮತ್ತು ಪರ್ಮಾರ್ ಅವಧಿಯ ಶಿಲ್ಪಗಳು, ಕೆತ್ತಿದ ಕಲ್ಲುಗಳು ಮತ್ತು ಶಾಸನಗಳು ಅಲ್ಲಿ ಕಂಡುಬಂದಿವೆ ಎಂದು ತಿಳಿಸಲಾಗಿದೆ.

2003ರ ASI ಆದೇಶದ ಪ್ರಕಾರ, ಹಿಂದೂಗಳು ಪ್ರತಿ ಮಂಗಳವಾರ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪೂಜೆ ಸಲ್ಲಿಸಲು ಅವಕಾಶವಿದೆ ಮತ್ತು ಮುಸ್ಲಿಮರು ಪ್ರತಿ ಶುಕ್ರವಾರ ಮಧ್ಯಾಹ್ನ 1ರಿಂದ 3ರವರೆಗೆ ನಮಾಜ್ ಮಾಡಲು ಅವಕಾಶವಿದೆ. ಇತರ ದಿನಗಳಲ್ಲಿ ಈ ಸ್ಥಳ ಪ್ರವಾಸಿಗರಿಗೆ ತೆರೆದಿರುತ್ತದೆ. ಈ ಆದೇಶವನ್ನು ಕೂಡ ಹೈಕೋರ್ಟ್ ರದ್ದಗೊಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:49 pm, Fri, 15 May 26

Source link

ಪ್ರಧಾನಿ ಮೋದಿ ಯುಎಇ ಭೇಟಿಯಲ್ಲಿ ಹಲವು ಒಪ್ಪಂದಗಳಿಗೆ ಸಹಿ – Kannada News | Narendra Modi UAE visit, Energy security, defence and other major pacts between 2 countries

ಯುಎಇ ಅಧ್ಯಕ್ಷ ಶೇಖ್ ಜೊತೆ ನರೇಂದ್ರ ಮೋದಿImage Credit source: PTI

ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಯುಎಇಗೆ (UAE) ನೀಡಿರುವ ಭೇಟಿಯಿಂದ ಹಲವು ನಿರೀಕ್ಷೆಗಳಿವೆ. ಭಾರತದ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಪ್ರಧಾನಿ ಭೇಟಿಯ ಪ್ರಮುಖ ಕಾರ್ಯಸೂಚಿಯಾಗಿದೆ. ಇಂಧನ ಭದ್ರತೆ, ರಕ್ಷಣಾ ಕ್ಷೇತ್ರ ಹಾಗೂ ವ್ಯಾಪಾರದಲ್ಲಿ ಎರಡೂ ದೇಶಗಳ ಮಧ್ಯೆ ಪ್ರಮುಖ ಒಪ್ಪಂದ ಏರ್ಪಟ್ಟಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಪ್ರತಿ ಲೀಟರ್‌ಗೆ ಸುಮಾರು 3 ರೂಪಾಯಿಗಳಷ್ಟು ಏರಿಕೆಯಾಗಿವೆ. ಯುಎಇ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿಯವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಪ್ರಮುಖ ಮಾತುಕತೆ ನಡೆಸಿದ್ದಾರೆ. ಭಾರತಕ್ಕೆ ಎಲ್‌ಪಿಜಿ (LPG) ಪೂರೈಕೆ ಮತ್ತು ಪೆಟ್ರೋಲಿಯಂ ಮೀಸಲು (Strategic Petroleum Reserves) ಕುರಿತು ಪ್ರಮುಖ ಒಪ್ಪಂದಗಳಿಗೆ ಸಹಿ (ಎಂಒಯು) ಹಾಕಲಾಗಿದೆ.

ಇದನ್ನೂ ಓದಿ: ಖೈಬರ್ ಪಖ್ತುಂಖ್ವಾದಲ್ಲಿ ಭಾರಿ ಉಗ್ರ ದಾಳಿ: ಪಾಕಿಸ್ತಾನದ 18 ಮಂದಿ ಭದ್ರತಾ ಸಿಬ್ಬಂದಿ ಸಾವು

ಭಾರತದ ಮೂಲಸೌಕರ್ಯ, ಆರ್​ಬಿಎಲ್ ಬ್ಯಾಂಕ್ ಮತ್ತು ಸಮ್ಮಾನ್ ಕ್ಯಾಪಿಟಲ್​ನಲ್ಲಿ ಯುಎಇಯಿಂದ 5 ಬಿಲಿಯನ್ ಡಾಲರ್​ನಷ್ಟು ಹೂಡಿಕೆ ಬರಲಿದೆ. ಗುಜರಾತ್​ನ ದ್ವಾರಕಾದಲ್ಲಿರುವ ವಾದಿನಾರ್​ನಲ್ಲಿ ಹಡಗು ದುರಸ್ತಿ ಕೇಂದ್ರವನ್ನು ಸ್ಥಾಪಿಸಲೂ ಸಹಿ ಹಾಕಲಾಗಿದೆ.

ಯಾವುದೇ ಪರಿಸ್ಥಿತಿಯಲ್ಲೂ ಯುಎಇಗೆ ಬೆಂಬಲ: ಮೋದಿ

ನಿಯೋಗ ಮಟ್ಟದ ಮಾತುಕತೆ ವೇಳೆ ಮಾತನಾಡಿದ ನರೇಂದ್ರ ಮೋದಿ, ಯುಎಇಗೆ ಎಲ್ಲಾ ರೀತಿಯಲ್ಲೂ ಸಹಕಾರ ಕೊಡುವುದಾಗಿ ಭರವಸೆ ನೀಡಿದ್ದಾರೆ. ಎಲ್ಲಾ ಪರಿಸ್ಥಿತಿಯಲ್ಲೂ ಯುಎಇಯೊಂದಿಗೆ ಭಾರತ ಹೆಗಲಿಗೆ ಹೆಗಲು ಕೊಡುತ್ತಾ ಬಂದಿದೆ. ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮರಳಿ ತರಲು ಭಾರತ ಸಾಧ್ಯವಾದ ಎಲ್ಲಾ ಸಹಕಾರ ಕೊಡುತ್ತದೆ ಎಂದೂ ಮೋದಿ ತಿಳಿಸಿದ್ದಾರೆ. ಹಾಗೆಯೇ, ಇರಾನ್, ಅಮೆರಿಕ ಯುದ್ಧದ ಮಧ್ಯೆ ಯುಎಇಯ ಸ್ಥಳಗಳ ಮೇಲೆ ನಡೆದ ದಾಳಿಯನ್ನೂ ಮೋದಿ ಇದೇ ವೇಳೆ ಖಂಡಿಸಿದ್ದಾರೆ.

ಭಾರತದ ಇಂಧನ ಭದ್ರತೆಗೆ ಸರ್ಕಾರದ ಪ್ರಯತ್ನಗಳು

ಯುದ್ಧದಿಂದಾಗಿ ವಿದೇಶಿ ವಿನಿಮಯ ಮೀಸಲು ಮೇಲೆ ಒತ್ತಡ ಬೀಳುತ್ತಿರುವುದರಿಂದ, ಪ್ರಧಾನಿಯವರು ದೇಶದ ಜನರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡಲು ಮತ್ತು ಮಿತವ್ಯಯದ ಕ್ರಮಗಳನ್ನು ಅನುಸರಿಸಲು ಕರೆ ನೀಡಿದ್ದಾರೆ. ಭಾರತೀಯ ತೈಲ ನಿಗಮ (IOC) ಮತ್ತು ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿ (ADNOC) ನಡುವೆ ಎಲ್‌ಪಿಜಿ ಪೂರೈಕೆಗಾಗಿ ಒಪ್ಪಂದ.

ಇದನ್ನೂ ಓದಿ: ಹಾರ್ಮುಜ್‌ ಸುತ್ತಲಿನ ಪ್ರದೇಶವೂ ಸುರಕ್ಷಿತವಲ್ಲ! ಮತ್ತೆ ಭಾರತದ ಹಡಗಿನ ಮೇಲೆ ದಾಳಿ

ತೈಲ ಸಂಗ್ರಹಣೆಯನ್ನು ಹೆಚ್ಚಿಸಲು ಭಾರತೀಯ ಆಯಕಟ್ಟಿನ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (ISPRL) ನೊಂದಿಗೆ ಸಹಯೋಗ ಪಡೆಯಲಾಗಿದೆ.

ಭಾರತವು ತನ್ನ ಕಚ್ಚಾ ತೈಲ ಅಗತ್ಯದ ಶೇ. 88 ರಷ್ಟು ಭಾಗವನ್ನು ಆಮದು ಮಾಡಿಕೊಳ್ಳುತ್ತದೆ. ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ತೈಲ ಸಾಗಣೆಗೆ ಅಡ್ಡಿಯಾಗಿರುವುದು ಭಾರತದ ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ.

ಜಾಗತಿಕ ಅಸ್ಥಿರತೆಯ ನಡುವೆ ಭಾರತದ ಇಂಧನ ಅಗತ್ಯಗಳನ್ನು ಪೂರೈಸಲು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಈ ಯುಎಇ ಭೇಟಿ ಅತ್ಯಂತ ನಿರ್ಣಾಯಕವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

RRB ALP Recruitment 2026: ರೈಲ್ವೆಯಲ್ಲಿ 11,127 ಹುದ್ದೆಗಳಿಗೆ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – Kannada News | RRB ALP Recruitment 2026: 11,127 Assistant Loco Pilot Vacancies! Apply by June 14

ರೈಲ್ವೆ ನೇಮಕಾತಿ ಮಂಡಳಿಯು (RRB) ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ ನೀಡಿದೆ. ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಸುಮಾರು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಭಾರತೀಯ ರೈಲ್ವೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ತಾಂತ್ರಿಕ ಪದವೀಧರರಿಗೆ ಉತ್ತಮ ಅವಕಾಶವನ್ನು ಒದಗಿಸಲಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳು:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಇಂದು, ಮೇ 15 ರಿಂದಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಮಂಡಳಿಯ ಅಧಿಕೃತ ಪೋರ್ಟಲ್ rrbapply.gov.in ಗೆ ಭೇಟಿ ನೀಡಿ ತಮ್ಮ ಆದ್ಯತೆಯ ರೈಲ್ವೆ ವಲಯವನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರುವುದರ ಜೊತೆಗೆ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ (ITI) ಪದವಿ ಅಥವಾ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ/ಬಿಇ/ಬಿ.ಟೆಕ್ ಪದವಿಯನ್ನು ಹೊಂದಿರಬೇಕು. ವಯೋಮಿತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 30 ವರ್ಷದೊಳಗಿರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ಆಯ್ಕೆ ವಿಧಾನ ಮತ್ತು ಪರೀಕ್ಷಾ ಮಾದರಿ:

ಒಟ್ಟು ಐದು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೊದಲಿಗೆ ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು (CBT-1 ಮತ್ತು CBT-2) ನಡೆಯುತ್ತವೆ, ನಂತರ ಆಪ್ಟಿಟ್ಯೂಡ್ ಪರೀಕ್ಷೆ (CBAT), ದಾಖಲೆ ಪರಿಶೀಲನೆ ಮತ್ತು ಕಟ್ಟುನಿಟ್ಟಾದ ವೈದ್ಯಕೀಯ ತಪಾಸಣೆ ಇರುತ್ತದೆ. ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ 1/3 ಅಂಕಗಳನ್ನು ಕಡಿತಗೊಳಿಸುವ (Negative Marking) ವ್ಯವಸ್ಥೆ ಇರುವುದರಿಂದ ಅಭ್ಯರ್ಥಿಗಳು ಎಚ್ಚರಿಕೆಯಿಂದ ಉತ್ತರಿಸಬೇಕಾಗುತ್ತದೆ. ಅಂತಿಮ ಮೆರಿಟ್ ಪಟ್ಟಿಯನ್ನು CBT-2 ಮತ್ತು ಆಪ್ಟಿಟ್ಯೂಡ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಸಿದ್ಧಪಡಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Forecast: ಬಂಗಾಳಕೊಲ್ಲಿ ವಾಯುಭಾರ ಕುಸಿತ, ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ? – Kannada News | Low Pressure Over Bay of Bengal, 3 Days Heavy Rain Karnataka Said By Meteorological director CS Patil

ಬೆಂಗಳೂರು (ಮೇ 15): ಬಿಸಿಲಿನ ಬೇಗೆಯ ನಡುವೆಯೇ ಕರ್ನಾಟಕದಲ್ಲಿ (Karnataka) ಹಲವೆಡೆ ವರುಣ (Rain) ತಂಪೆರೆಯುತ್ತಿದ್ದಾನೆ. ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಈ ಮಳೆ ಇನ್ನಷ್ಟು ದಿನ ಮುಂದುವರೆಯಲಿದೆ. ಹೌದು…ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದರಿಂದ 50% ಗಿಂತ ಹೆಚ್ಚಿನ ಪ್ರದೇಶದಲ್ಲಿ 3 ದಿನ ಗುಡುಗು ಮಿಂಚಿನ ಸಮೇತ ಮಳೆಯಾಗುವ ಸಾಧ್ಯತೆಗಳಿವೆ. ಗಂಟೆಗೆ 30ರಿಂದ 40 ಕಿ.ಮೀ ವೇಗ ದಲ್ಲಿ ಗಾಳಿ ಬಿಸಲಿದೆ. ಹೀಗಾಗಿ ಮುಕ್ಕಾಲು ಭಾಗ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆ?

ಇನ್ನು ಈ ಬಗ್ಗೆ ಹವಾಮಾನ ತಜ್ಞರಾದ CS ಪಾಟೀಲ್ ಅವರು ಟಿವಿ9 ಜತೆ ಮಾತನಾಡಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವ ಭಾರಿ ಮಳೆಯಾಗುವ ಸಾಧ್ಯತೆ ಇದೆ. 50% ಗಿಂತ ಹೆಚ್ಚಿನ ಪ್ರದೇಶದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಗುಡುಗು ಮಿಂಚಿನ ಸಮೇತ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ , ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ , ಚಿಕ್ಕಮಗಳೂರು ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಪಾಟೀಲ್ ಹೇಳಿದ್ದಾರೆ.

ಈ ಬಾರಿಯ ಮಳೆಯ ಮೇಲೆ ಎಲ್ ನಿನೋ ಪರಿಣಾಮ ದೊಡ್ಡಮಟ್ಟದಲ್ಲಿ ಬೀರಲಿದೆ. ಇದರಿಂದ ಈ ವರ್ಷವು ನೈರುತ್ಯ ಮಾನ್ಸೂನ್ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗಲಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್​​: ಆರೋಪಿಗಳ ಸಂಚು ಬಯಲು – Kannada News | Gelatin Stick Found on PM Route; Accused Tried to Stop Narendra Modi’s Visit to Art of Living Foundation Event

ಬೆಂಗಳೂರು, ಮೇ 15: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣ ಸಂಬಂಧ ಆರೋಪಿಗಳ ಸಂಚು ಏನಾಗಿತ್ತು ಎಂಬುದೀಗ ಬಹಿರಂಗಗೊಂಡಿದೆ. ಆರ್ಟ್​ ಆಫ್​ ಲಿವಿಂಗ್​​ ಸ್ಥಳಕ್ಕೆ ಮೋದಿ ಬರಲೇಬಾರದು ಎಂದು ಆರೋಪಿಗಳು ಪ್ಲ್ಯಾನ್​​ ಮಾಡಿದ್ದರು. ಅಲ್ಲದೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಲೀಡ್​​ ಸಿಗದ ಹಾಗೆ ಸಂಚು ರೂಪಿಸಿದ್ದರು ಎಂದು ಟಿವಿ9ಗೆ ಪೊಲೀಸ್​​ ಉನ್ನತ ಮೂಲಗಳು ತಿಳಿಸಿವೆ. ಇನ್ನು ಪ್ರಕರಣ ಸಂಬಂಧ ಈವರೆಗೂ ಬೆಂಗಳೂರು ದಕ್ಷಿಣ ಪೊಲೀಸರು ನೂರಾರು ಜನರ ವಿಚಾರಣೆ ನಡೆಸಿದ್ದು, ಆರೋಪಿಗಳ ಪತ್ತೆಯೇ ಪೊಲೀಸರಿಗೆ ಸವಾಲಾಗಿ ಮಾರ್ಪಟ್ಟಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 7 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ – Kannada News | 7 Killed After Tractor Falls Off Tungabhadra Bridge in Koppal Following Tanker Collision

ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್Image Credit source: Tv9 Kannada

ಕೊಪ್ಪಳ, ಮೇ 15: ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಕೆಳಗೆಬಿದ್ದ ಪರಿಣಾಮ 7 ಜನರು ದುರ್ಮಣ ಹೊಂದಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಮೃತರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾಹಿತಿ ಇದೆ.

ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಟ್ಯಾಂಕರ್​ ಗುದ್ದಿದೆ ಎನ್ನಲಾಗಿದ್ದು, ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬುದು ತಿಳಿದುಬಂದಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ಬ್ಯಾಟಿ ಮಾಡಲು ತೆರಳುತ್ತಿದ್ದ ವೇಳೆ ಭೀಕರ ಅಪಘಾತ ನಡೆದಿದ್ದು, ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಹೊಸಪೇಟೆ ಮತ್ತು ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದೆ)

Source link

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್ – Kannada News | Karnataka Voter List Revision: Election Officer Anbukumar Shares Important Updates

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada

ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್​​ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ (anbukumar)​ ಮಾಹಿತಿ ನೀಡಿದರು.

ಮುಖ್ಯಾಂಶಗಳು

  • ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ
  • ಮನೆ ಮನೆಗೆ BLO ಭೇಟಿ: ಗಣತಿ ನಮೂನೆ ಮತ್ತು QR ಕೋಡ್ ವೈಶಿಷ್ಟ್ಯಗಳು
  • ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್​ ಮಾಹಿತಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್, ಕರ್ನಾಟಕದಲ್ಲಿ ಮತದಾರರ ಮ್ಯಾಪಿಂಗ್ ಕೆಲಸವು ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಶೇಕಡಾ 86 ರಷ್ಟು ಪ್ರಗತಿ ಸಾಧಿಸಿದೆ ಎಂದರು. ಇನ್ನು ಜಿಲ್ಲಾವಾರು ಮತ್ತು ಕ್ಷೇತ್ರವಾರು ಪ್ರಗತಿಯನ್ನು ಹಂಚಿಕೊಂಡ ಅವರು, ಕೊಡಗು ಜಿಲ್ಲೆಯಲ್ಲಿ ಶೇ. 96 ರಷ್ಟು ಹಾಗೂ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ ಶೇ. 99 ರಷ್ಟು ಮ್ಯಾಪಿಂಗ್ ಕೆಲಸ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ, ಮ್ಯಾಪಿಂಗ್ ಕೆಲಸದ ಪ್ರಗತಿಯನ್ನು ಪರಿಶೀಲಿಸಲು ಮತ್ತು ಮುಂದಿನ ಹಂತದ ಕುರಿತು ಚರ್ಚಿಸಲು ಇಂದು ಸಂಜೆ ಎಲ್ಲಾ ಜಿಲ್ಲಾಧಿಕಾರಿಗಳ (ಡಿಸಿ) ಜೊತೆ ಮಹತ್ವದ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಮತದಾರರ ಗಣತಿ ಪ್ರಕ್ರಿಯೆ ಮತ್ತು ಕ್ಯೂಆರ್ ಕೋಡ್ ವೈಶಿಷ್ಟ್ಯ

ಚುನಾವಣಾ ಪ್ರಕ್ರಿಯೆಯ ಮುಂದಿನ ಹಂತಗಳ ಕುರಿತು ಮಾತನಾಡಿದ ಅನ್ಬುಕುಮಾರ್, ಎಸ್ಐಆರ್ ಫಾರಂನಲ್ಲಿ ಗಣತಿ ನಮೂನೆಯೇ ಅತ್ಯಂತ ಮುಖ್ಯ. ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ 2 ಸೆಟ್ ಗಣತಿ ನಮೂನೆಗಳನ್ನು ತಲುಪಿಸಲಿದ್ದಾರೆ. ವಿಶೇಷವೆಂದರೆ, ಗಣತಿ ನಮೂನೆಯಲ್ಲಿರುವ ಪ್ರತಿ ಮತದಾರರಿಗೂ ಪ್ರತ್ಯೇಕ ಕ್ಯೂಆರ್ ಕೋಡ್ ಇರಲಿದೆ ಎಂದು ವಿವರಿಸಿದರು.

ಮತದಾರರ ಗಮನಕ್ಕೆ

ಬೂತ್ ಮಟ್ಟದ ಅಧಿಕಾರಿಗಳು ಗಣತಿ ನಮೂನೆಯನ್ನು ಮನೆಗೆ ತಂದಾಗ ಸಾರ್ವಜನಿಕರು ಅದರಲ್ಲಿ 1 ಸೆಟ್ ಅನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಅಧಿಕಾರಿಗಳಿಗೆ ಮರಳಿ ನೀಡಬೇಕು. ಮತ್ತೊಂದು ಸೆಟ್ ಗಣತಿ ನಮೂನೆಯನ್ನು ಭವಿಷ್ಯದ ಸಾಕ್ಷಿಗಾಗಿ ಮತದಾರರೇ ತಮ್ಮ ಬಳಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಇನ್ನು 2002ರ ಮತದಾರರ ಪಟ್ಟಿಯಲ್ಲಿ ಯಾರ ಹೆಸರು ದಾಖಲಾಗಿದೆಯೋ, ಅಂತಹವರ ಹೆಸರುಗಳನ್ನು ಕಡ್ಡಾಯವಾಗಿ ಪರಿಶೀಲನೆಗೆ ಒಳಪಡಿಸಲಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Karnataka SIR: ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಎಂದಿನಿಂದ? ಹೇಗೆಲ್ಲಾ ನಡೆಯುತ್ತೆ? ಇಲ್ಲಿದೆ ವಿವರ

ರಾಜ್ಯದ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿ ಸಭೆ ನಡೆಸಲಾಗಿದೆ. ರಾಜಕೀಯ ಪಕ್ಷಗಳು ಬಿಎಲ್​ಎಗಳನ್ನು ನೇಮಕ ಮಾಡಬಹುದು. ಮಾಧ್ಯಮಗಳಿಗೂ ಸಹ ತರಬೇತಿ ಕಾರ್ಯಾಗಾರ ನಡೆಸಲಾಗುವುದು. ಗ್ರಾ.ಪಂ. ಮಟ್ಟದಲ್ಲಿ ವೋಟರ್ ಫೆಸಿಲಿಟೇಷನ್ ಸೆಂಟರ್​ಗಳ ಓಪನ್​​ ಮಾಡಲಾಗುತ್ತದೆ. ಎಸ್​ಐಆರ್​ ಪ್ರಕ್ರಿಯೆಗೆ 25,284 ಬಿಎಲ್​ಎಗಳ ನೇಮಕ ಮಾಡಲಾಗಿದೆ ಎಂದು ಅನ್ಬುಕುಮಾರ್​ ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

“ಬ್ರಿಟನ್‌ಗಿಂತಲೂ ದುಬಾರಿಯಾಯಿತೇ ಬೆಂಗಳೂರು? ಒಬ್ಬರ ಸಂಬಳಕ್ಕೆ ವಿದೇಶದಲ್ಲಿ ಮನೆ ಸಿಗುತ್ತೆ, ಇಲ್ಲಿ ಇಬ್ಬರದ್ದೂ ಸಾಲಲ್ಲ! – Kannada News | “One Salary, One House: Viral Post Sparks Debate on India’s Skyrocketing Property Prices

ಬೆಂಗಳೂರು, ಮೇ,15: ಭಾರತದ ಐಟಿ ಹಬ್ ಬೆಂಗಳೂರಿನಲ್ಲಿ ಮನೆ ಖರೀದಿಸುವುದು ಎಷ್ಟು ಕಷ್ಟ ಎಂಬ ಬಗ್ಗೆ ಮಹಿಳೆಯೊಬ್ಬರು ಹಂಚಿಕೊಂಡಿರುವ ಪೋಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಇಬ್ಬರ ಸಂಬಳವಿದ್ದರೂ ಮನೆ ಖರೀದಿಸಲು ಸಾಧ್ಯವಾಗದ ಮಹಿಳೆ, ಯುಕೆ (UK) ಗೆ ತೆರಳಿದ ಕೇವಲ ಎರಡು ವರ್ಷದಲ್ಲಿ ಅಲ್ಲಿ ಸ್ವಂತ ಮನೆ ಖರೀದಿಸಿರುವುದಾಗಿ ತಿಳಿಸಿದ್ದಾರೆ.

“ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಾವು ಇಬ್ಬರು ದುಡಿಯುತ್ತಿದ್ದರೂ ಒಂದು ಫ್ಲಾಟ್ ಖರೀದಿಸಲು ಹರಸಾಹಸ ಪಡಬೇಕಾಯಿತು. ಕೊನೆಗೆ ಬೆಂಗಳೂರಿನಲ್ಲಿ ನಮ್ಮಿಂದ ಮನೆ ಖರೀದಿ ಮಾಡಲು ಸಾಧ್ಯವಿಲ್ಲ ಎಂದು ಪ್ಲಾನ್​​ನ್ನು ಕೈಬಿಟ್ಟೆವು” ಎಂದು ಎಂದು ನೇಹಾ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಆದರೆ ಬ್ರಿಟನ್‌ಗೆ ತೆರಳಿದ ಎರಡೇ ವರ್ಷಗಳಲ್ಲಿ, ಕೇವಲ ಒಬ್ಬರ ಸಂಬಳದಲ್ಲಿ ಮೂರು ಬೆಡ್‌ರೂಂನ ಸ್ವತಂತ್ರ ಮನೆ ಖರೀದಿಸಿರುವುದಾಗಿ ಅವರು ಹೇಳಿದ್ದಾರೆ. ಇದರಲ್ಲಿ ಎಲ್ಲಾ ಆಧುನಿಕ ಗೃಹೋಪಕರಣಗಳು, ಪಾರ್ಕಿಂಗ್ ಮತ್ತು ಸುಂದರವಾದ ವ್ಯೂ (View) ಕೂಡ ಇದೆ ಎಂದು ಅವರು ಖುಷಿಯಿಂದ ಹೇಳಿಕೊಂಡಿದ್ದಾರೆ.

ಭಾರತದ ರಿಯಲ್ ಎಸ್ಟೇಟ್‌ನಲ್ಲಿ ಹೆಚ್ಚಾಗಿ ಕಂಡುಬರುವ ‘ಬ್ಲ್ಯಾಕ್ ಮನಿ’ (ಕಪ್ಪು ಹಣ) ಬೇಡಿಕೆ ಅಲ್ಲಿಲ್ಲ. 100% ಪಾರದರ್ಶಕತೆ ಮತ್ತು ಮೊದಲ ಬಾರಿ ಮನೆ ಖರೀದಿಸುವವರಿಗೆ ಸಿಗುವ ವಿಶೇಷ ರಿಯಾಯಿತಿಗಳು ಅಲ್ಲಿನ ವ್ಯವಸ್ಥೆಯನ್ನು ಸುಲಭಗೊಳಿಸಿವೆ ಎಂದು ಅವರು ಹೊಗಳಿದ್ದಾರೆ.

ಇದನ್ನೂ ಓದಿ: ಮಗಳ ಮದುವೆಯಲ್ಲಿ ಕನ್ಯಾದಾನ ಮಾಡುವಾಗಲೇ ಹೃದಯಾಘಾತದಿಂದ ಅಪ್ಪ ಸಾವು!

ಈ ಪೋಸ್ಟ್ ಸುಮಾರು 4.3 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದ್ದು, ಅನೇಕರು ಬೆಂಗಳೂರಿನ ರಿಯಲ್ ಎಸ್ಟೇಟ್ ಬೆಲೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇಲ್ಲಿ ಬಿಸಿನೆಸ್‌ಮನ್‌ಗಳು ಮತ್ತು ಅಧಿಕಾರಿಗಳ ಬಳಿ ಹಣವಿರಬಹುದು, ಆದರೆ ಮಧ್ಯಮ ವರ್ಗದ ಐಟಿ ಉದ್ಯೋಗಿಗಳಿಗೆ ಮನೆ ಖರೀದಿಸುವುದು ಇಂದಿಗೂ ಸವಾಲೇ” ಎಂದು ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲು

Source link

Exit mobile version