ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ – Kannada News | Venus Transit into Capricorn: What Today’s Horoscope Holds for all zodiac sign

ಇಂದಿನ ದಿನ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸದ ಕೃಷ್ಣಪಕ್ಷದ ದಶಮಿ ತಿಥಿಯಾಗಿದೆ. ಚಂದ್ರನು ವಿಶಾಖ ನಕ್ಷತ್ರದ ತುಲಾ ರಾಶಿಯಲ್ಲಿ ಸಂಚರಿಸುತ್ತಾನೆ. ಇಂದು ಬೆಳಗಿನ ಜಾವ 4:02ಕ್ಕೆ ಶುಕ್ರ ಗ್ರಹವು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸಿರುವುದು ವಿಶೇಷವಾಗಿದೆ. ಸಂಕ್ರಾಂತಿಯ ಪೂರ್ವಭಾವಿಯಾಗಿರುವ ಈ ದಿನವು ಸೂರ್ಯ ಭಗವಾನರು ಉತ್ತರಾಯಣಕ್ಕೆ ಪ್ರವೇಶಿಸುವ ಶುಭ ಕಾಲವನ್ನು ಸೂಚಿಸುತ್ತದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ.

ಇಂದು ರಾಹುಕಾಲವು ಮಧ್ಯಾಹ್ನ 3:19 ರಿಂದ 4:45 ರವರೆಗೆ ಇರುತ್ತದೆ. ಸರ್ವ ಸಿದ್ಧಿ ಕಾಲ, ಸಂಕಲ್ಪಕಾಲ ಮತ್ತು ಶುಭಕಾಲವು ಮಧ್ಯಾಹ್ನ 12:28 ರಿಂದ 1:54 ರವರೆಗೆ ಇರುತ್ತದೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 13ರ ದಿನಭವಿಷ್ಯ – Kannada News | Birth Number 7, 8, 9: Jan 13 Numerology Forecast and Horoscope

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಸಂಶೋಧನೆ ಮತ್ತು ಆಳವಾದ ಚಿಂತನೆಗೆಸೂಕ್ತ ದಿನ. ನೀವು ಇತರರಿಗೆ ಈ ಹಿಂದೆ ಮಾಡಿದ ಸಹಾಯದಿಂದ ನಿಮಗೆ ಪ್ರತಿಫಲ ದೊರೆಯಲಿದೆ. ಸರ್ಕಾರಿ ಉದ್ಯೋಗದಲ್ಲಿ ಇರುವವರಿಗೆ ವರ್ಗಾವಣೆಯ ಅಥವಾ ಬಡ್ತಿಯ ಸೂಚನೆಗಳು ಸಿಗಬಹುದು. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಇರುವವರಿಗೆ ದೂರ ಪ್ರಯಾಣದ ಯೋಗ ಇದೆ. ಧ್ಯಾನ ಮತ್ತು ಯೋಗಕ್ಕಾಗಿ ಸಮಯ ಮೀಸಲಿಡುವಿರಿ. ಸಾಲದ ಬಾಕಿ ವಸೂಲಿ ಮಾಡುವಲ್ಲಿ ಈ ದಿ ನೀವು ಯಶಸ್ವಿಯಾಗಲಿದ್ದೀರಿ. ನಿಮ್ಮ ಗುಪ್ತ ಪ್ರತಿಭೆಯು ಇಂದು ಹೊರಜಗತ್ತಿಗೆ ತಿಳಿಯುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸುವ ಕಾಲವಿದು. ನ್ಯಾಯಾಲಯದ ವ್ಯವಹಾರಗಳಲ್ಲಿ ಜಯ ಸಿಗಲಿದೆ. ಕೃಷಿ ಅಥವಾ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಇರುವವರಿಗೆ ದೊಡ್ಡ ಒಪ್ಪಂದಗಳು ಕೈಗೂಡಲಿವೆ. ಮನೆಯಲ್ಲಿ ಶುಭ ಸಮಾರಂಭಗಳ ಬಗ್ಗೆ ಚರ್ಚೆ ನಡೆಯಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ವಿಶೇಷವಾಗಿ ಮೂಳೆ ಸಂಬಂಧಿತ ಸಮಸ್ಯೆಗಳಿರುವವರು ಎಚ್ಚರದಿಂದಿರಿ. ಶತ್ರುಗಳು ನಿಮ್ಮ ಕೆಲಸಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದರೂ, ನಿಮ್ಮ ದೃಢ ನಿರ್ಧಾರಗಳು ಅವರನ್ನು ವಿಫಲಗೊಳಿಸಲಿವೆ.

ಇದನ್ನೂ ಓದಿ: ನವಪಂಚಮ ಯೋಗ: ಯಾರಿಗೆಲ್ಲಾ ಅದೃಷ್ಟ? ಇಲ್ಲಿದೆ ನೋಡಿ

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಬಾಕಿ ಉಳಿದಿದ್ದ ಆಡಳಿತಾತ್ಮಕ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿವೆ. ದಾನ-ಧರ್ಮದ ಕಡೆಗೆ ನಿಮ್ಮ ಗಮನ ಹರಿಯಲಿದ್ದು, ಇದರಿಂದ ಮನಸ್ಸಿಗೆ ಅಪಾರ ತೃಪ್ತಿ ಸಿಗಲಿದೆ. ಕ್ರೀಡಾಪಟುಗಳಿಗೆ ಮತ್ತು ಸಾಹಸ ಪ್ರವೃತ್ತಿಯ ಜನರಿಗೆ ಅತ್ಯುತ್ತಮ ದಿನವಾಗಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಮೇಲಧಿಕಾರಿಗಳ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗುವಿರಿ. ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡುವ ಮುನ್ನ ಅನುಭವಿಗಳ ಸಲಹೆ ಪಡೆಯಿರಿ. ಹಳೆಯ ಕಹಿ ಘಟನೆಗಳನ್ನು ಮರೆತು ಹೊಸ ಜೀವನದತ್ತ ಹೆಜ್ಜೆ ಇಡಲು ಪೂರಕವಾದ ವಾತಾವರಣ ಇರಲಿದೆ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 13ರ ದಿನಭವಿಷ್ಯ – Kannada News | Numerology Daily Horoscope: January 13, 2024 Predictions for 4, 5, 6

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ವಿದೇಶಕ್ಕೆ ಸಂಬಂಧಿಸಿ ವ್ಯವಹಾರಗಳಲ್ಲಿ ತೊಡಗಿರುವವರಿಗೆ ಈ ದಿನ ಶುಭ ಸುದ್ದಿ ಸಿಗಲಿದೆ. ಆಸ್ತಿ ವಿವಾದಗಳು ಸುದೀರ್ಘ ಕಾಲದಿಂದ ನಡೆಯುತ್ತಿದ್ದರೆ ಮಧ್ಯಸ್ಥಿಕೆಯ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನಿಸಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಬಯಸುವವರಿಗೆ ಒಳ್ಳೆಯ ಅವಕಾಶಗಳು ಲಭ್ಯವಾಗಬಹುದು. ವಾಹನ ಚಾಲನೆ ಮಾಡುವಾಗ ಅತಿಯಾದ ವೇಗ ಬೇಡ, ಸಂಚಾರ ನಿಯಮಗಳನ್ನು ಪಾಲಿಸಿ. ಹಳೆಯ ಮಿತ್ರರ ಭೇಟಿಯಿಂದ ಬಾಕಿ ಉಳಿದಿದ್ದ ಕೆಲಸವೊಂದು ಪೂರ್ಣಗೊಳ್ಳಲು ದಾರಿ ಸುಗಮವಾಗಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಇದನ್ನೂ ಓದಿ: ನವಪಂಚಮ ಯೋಗ: ಯಾರಿಗೆಲ್ಲಾ ಅದೃಷ್ಟ? ಇಲ್ಲಿದೆ ನೋಡಿ

ಸಂವಹನ ಮತ್ತು ತಾಂತ್ರಿಕ ವಲಯದಲ್ಲಿ ಇರುವವರಿಗೆ ಅತ್ಯಂತ ಯಶಸ್ವಿ ದಿನ ಇದಾಗಿರುತ್ತದೆ. ನೀವು ನೀಡುವ ಸಲಹೆಗಳು ಕಚೇರಿಯಲ್ಲಿ ಮೆಚ್ಚುಗೆಗೆ ಪಾತ್ರವಾಗಲಿವೆ. ಹಣಕಾಸಿನ ಹರಿವು ಉತ್ತಮವಾಗಿದ್ದರೂ ಅನವಶ್ಯಕ ಐಷಾರಾಮಿ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಜೆ ವೇಳೆ ಪ್ರೀತಿಪಾತ್ರರ ಜೊತೆ ಸುಂದರ ಸಮಯ ಕಳೆಯುವಿರಿ. ದೂರದ ಊರಿನಿಂದ ಬರಬೇಕಿದ್ದ ಶುಭ ವಾರ್ತೆಯು ನಿಮ್ಮನ್ನು ತಲುಪಲಿದೆ. ಹವಾಮಾನ ಬದಲಾವಣೆಯಿಂದಾಗಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಬಹುದು, ಎಚ್ಚರಿಕೆ ಇರಲಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಕಲಾತ್ಮಕ ಮತ್ತು ಸೃಜನಶೀಲ ಕೆಲಸಗಳಲ್ಲಿ ತೊಡಗಿರುವವರಿಗೆ ಈ ದಿನ ಪ್ರಶಸ್ತಿ ಅಥವಾ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಆಭರಣ ಮತ್ತು ಜವಳಿ ವ್ಯಾಪಾರಿಗಳಿಗೆ ನಿರೀಕ್ಷೆಗೂ ಮೀರಿ ಲಾಭವಾಗಲಿದೆ. ಕುಟುಂಬದ ಸದಸ್ಯರೊಂದಿಗೆ ಪ್ರವಾಸದ ಯೋಜನೆ ರೂಪಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಸಕಾರಾತ್ಮಕ ಸ್ಪಂದನೆ ದೊರೆಯಲಿದೆ. ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಸುಂದರವಾಗಿಟ್ಟುಕೊಳ್ಳುವ ಆಸೆ ಮೂಡಲಿದೆ. ಅಪರಿಚಿತ ವ್ಯಕ್ತಿಗಳೊಂದಿಗೆ ವ್ಯವಹಾರ ಮಾಡುವಾಗ ಅವರ ಹಿನ್ನೆಲೆಯನ್ನು ಒಮ್ಮೆ ಪರಿಶೀಲಿಸುವುದು ಉತ್ತಮ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 13ರ ದಿನಭವಿಷ್ಯ – Kannada News | Janmasankhye 1 Predictions: Career Growth, Old Investments and Family Peace Today

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನೀವು ಹಾಕಿದ ಯೋಜನೆಗಳಿಗಿಂತ ಅನಿರೀಕ್ಷಿತವಾಗಿ ಎದುರಾಗುವ ಸವಾಲುಗಳೇ ನಿಮಗೆ ಹೆಚ್ಚಿನ ಲಾಭ ತಂದುಕೊಡಲಿವೆ. ಕಚೇರಿಯಲ್ಲಿ ಕೇವಲ ನಿಮ್ಮ ಕೆಲಸದ ಮೇಲೆ ಗಮನಹರಿಸದೆ, ಸಹೋದ್ಯೋಗಿಗಳ ಸಮಸ್ಯೆಗಳಿಗೂ ಸ್ಪಂದಿಸುವುದು ನಿಮ್ಮ ವ್ಯಕ್ತಿತ್ವವನ್ನು ಎತ್ತಿ ಹಿಡಿಯಲಿದೆ. ಆರ್ಥಿಕವಾಗಿ ಈ ದಿನ ಸ್ಥಿರತೆ ಇರಲಿದ್ದರೂ, ಸಂಜೆ ವೇಳೆಗೆ ಹಳೆಯ ಹೂಡಿಕೆಗಳಿಂದ ಸಣ್ಣ ಮಟ್ಟದ ಲಾಭಾಂಶ ಹರಿದು ಬರಲಿದೆ. ಕುಟುಂಬದಲ್ಲಿ ಹಿರಿಯರ ಮಾತಿಗೆ ಬೆಲೆ ನೀಡುವುದು ಸಂಘರ್ಷಗಳನ್ನು ತಪ್ಪಿಸಲಿದೆ. ನಿಮ್ಮ ಮೌನವೇ ದೊಡ್ಡ ಶಸ್ತ್ರವಾಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮ್ಮ ಮನಸ್ಸು ಹೊಸ ತಾಣಗಳತ್ತ ಅಥವಾ ಹೊಸ ಆಲೋಚನೆಗಳತ್ತ ಹರಿಯಲಿದೆ. ಯಾವುದೇ ಕೆಲಸವನ್ನು ಆರಂಭಿಸುವ ಮುನ್ನ ಅದರ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಿ. ವ್ಯಾಪಾರಸ್ಥರಿಗೆ ಹೊಸ ಪಾಲುದಾರಿಕೆ ಒಪ್ಪಂದಗಳು ಸಿಗುವ ಸಾಧ್ಯತೆ ಇದೆ, ಆದರೆ ಸಹಿ ಹಾಕುವ ಮುನ್ನ ಪಾರದರ್ಶಕತೆಗೆ ಒತ್ತು ನೀಡಿ. ಮನೆಯಲ್ಲಿ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಆದರೆ ಅದನ್ನು ದೊಡ್ಡದು ಮಾಡದೆ ಸಮಾಧಾನದಿಂದ ವರ್ತಿಸಿ. ವಿದ್ಯಾರ್ಥಿಗಳಿಗೆ ಸಂಶೋಧನಾತ್ಮಕ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ.

ಇದನ್ನೂ ಓದಿ: ನವಪಂಚಮ ಯೋಗ: ಯಾರಿಗೆಲ್ಲಾ ಅದೃಷ್ಟ? ಇಲ್ಲಿದೆ ನೋಡಿ

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚುವ ದಿನವಿದು. ಸಾರ್ವಜನಿಕ ಕೆಲಸಗಳಲ್ಲಿ ತೊಡಗಿರುವವರಿಗೆ ದೊಡ್ಡ ಜವಾಬ್ದಾರಿಗಳು ಎದುರಾಗಲಿವೆ. ಹಣಕಾಸಿನ ವಿಚಾರದಲ್ಲಿ ಯಾರನ್ನೂ ಅಂಧವಾಗಿ ನಂಬಬೇಡಿ; ವ್ಯವಹಾರದಲ್ಲಿ ದಾಖಲೆಗಳು ಸರಿಯಾಗಿರುವಂತೆ ನೋಡಿಕೊಳ್ಳಿ. ಆರೋಗ್ಯದ ದೃಷ್ಟಿಯಿಂದ ಅತಿಯಾದ ಕೆಲಸದ ಒತ್ತಡವು ಆಯಾಸಕ್ಕೆ ಕಾರಣವಾಗಬಹುದು, ಹೀಗಾಗಿ ವಿಶ್ರಾಂತಿಗೆ ಸಮಯ ಮೀಸಲಿಡಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಶಾಂತಿ ಲಭಿಸಲಿದೆ. ಮಕ್ಕಳ ಪ್ರಗತಿಯಿಂದ ಮನೆಯಲ್ಲಿ ಸಂತೋಷದ ವಾತಾವರಣವಿರುತ್ತದೆ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 13 January: ಇಂದು ಈ ರಾಶಿಯವರಿಗೆ ಆಸೆಗಳ ಅಪೂರ್ಣತೆಯಿಂದ ಬೇಸರ – Kannada News | Horoscope Today 13 January: Today, these zodiac signs will be bored with the unfulfilled desires

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ದಶಮೀ ತಿಥಿ ಮಂಗಳವಾರ ಹೋಲಿಕೆ, ಹೊಸ ಸಂಪರ್ಕ, ಮನೋರಂಜನೆ, ಆದಾಯ ಸ್ಥಿರ, ಗೆಲವು, ತಾಳ್ಮೆ, ನಿಂದನೆಗೆ ಕೋಪ ಇವೆಲ್ಲ ಇಂದಿನ ಭವಿಷ್ಯ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ವಿಶಾಖಾ ಯೋಗ : ಶೂಲಿ, ಕರಣ : ಭದ್ರ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 12 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16-23 – 16:48, ಯಮಗಂಡ ಕಾಲ 09:43 – 11:08, ಗುಳಿಕ ಕಾಲ 12:33 – 13:58

ಮೇಷ ರಾಶಿ :

ಶತ್ರುಗಳು ಅನ್ಯ ಕಾರ್ಯದಲ್ಲಿ ತೊಡಗಿರುವ ಕಾರಣ ನಿಮಗೆ ಬಾಧೆ ಇರದು. ಕಲಾವಿದರು ಅವಕಾಶದ ಕದ ತಟ್ಟುವಿರಿ. ಎದುರಿಸಬಹುದಾದ ಸಮಸ್ಯೆಯನ್ನು ಧೈರ್ಯದಿಂದ ಮುನ್ನುಗ್ಗಿ. ಇಂದು ನಿಮಗೆ ಕೆಲಸವು ಆಗಬೇಕಾಗಿದ್ದು ಪ್ರಯಾಣವು ಅನಿವಾರ್ಯವಾಗುವುದು. ವಾಹನ ಸೌಕರ್ಯದಿಂದ ನಿಮಗೆ ಸಮಾಧನ. ಒಂದೇ ಸಾರಿ ಖರ್ಚಿನ ಎಲ್ಲ ಯೋಜನೆ ಇಟ್ಟುಕೊಳ್ಳಬೇಡಿ. ನಿಮ್ಮ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚು ಸ್ವಲ್ಪ ಕಡಿಮೆ‌ ಆಗಿದ್ದು ಸಂತಸದ ಸಮಾಚಾರವಾಗಲಿದೆ. ‌ವಿವಾದಕ್ಕೆ ಹೋಗಿ ಮೂರ್ಖರಾಗುವುದು ಬೇಡ. ದೈವಾನುಕೂಲದಿಂದ ನಿಮಗೆ ಸಿಗಬೇಕಾದ ಸಂಪತ್ತು ಬರಲಿದೆ.

ವೃಷಭ ರಾಶಿ :

ಅಧಿಕ ಆದಾಯ ಕೆಲಸವನ್ನು ಇಂದು ಹುಡುಕುವಿರಿ. ಸಣ್ಣ ವಿಚಾರಕ್ಕೆ ಆದ ಅಪಮಾನವನ್ನು ಎಲ್ಲಿಯೂ ಹೇಳಲಾರಿರಿ. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಹೆಚ್ಚುಕೇಳಲಾರಿರಿ. ಎಲ್ಲೊ ಸಿಕ್ಕ ಬಂಧುಗಳ ಒಡನಾಟವು ಹಿತವೆನಿಸುವುದು. ಸ್ನೇಹಿತರಿಗೋಸ್ಕರ ನೀವು ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ‌ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ನೀವು ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ನಿಮ್ಮೊಳಗೇ ಸಂಕಟಪಡುವಿರಿ. ನಿಮ್ಮ ಸಹನೆಯನ್ನು ಬಿಡದೇ ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಿ. ಧಾರ್ಮಿಕ ಕಾರ್ಯದಲ್ಲಿ ನಂಬಿಕೆ ಹೆಚ್ಚಾಗುವುದು.

ಮಿಥುನ ರಾಶಿ :

ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ. ಧಾರ್ಮಿಕ‌ಚಿಂತನೆಗಳು ನಿಮ್ಮ ಮನಸ್ಸಿನಲ್ಲಿ ಓಡಬಹುದು. ನೀವು ಇಂದು ಹಳೆಯ ಸ್ನೇಹಿತನ ಜೊತೆ ಸೇರಿ ಹೊಸ ಉದ್ಯೋಗವನ್ನು ಆರಂಭಿಸುವ ಯೋಚನೆ ಮಾಡುವಿರಿ. ಆದಾಯವು ಕುಗ್ಗಬಹುದು. ತಂದೆ ಹಾಗೂ ತಾಯಿಯರ ಜೊತೆ ಬಹಳ ದಿನಗಳ ಅನಂತರ ಹರಟೆ ಹೊಡೆಯುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಕ್ಕಳ ಜೊತೆ ಮಾಡುವಿರಿ. ಚಂಚಲವಾದ ಮನಸ್ಸನ್ನು ಏಕಾಗ್ರವಾಗಿ ಇಡಲು ಪ್ರಯತ್ನಿಸುವಿರಿ. ತಿಳಿದವರ ಜೊತೆ ಸಂದೇಹವನ್ನು ಪರಿಹರಿಸಿಕೊಳ್ಳುವಿರಿ. ಎಲ್ಲರಿಂದ ಗೌರವವನ್ನು ಪಡೆಯುವ ಬಯಕೆ ಇರಲಿದೆ. ನಿಮಗೆ ಕೊಟ್ಟ ಜವಾಬ್ದಾರಿಗಳನ್ನು ನೀವು ಇತರರಿಗೆ ಹಂಚಿ ನಿರಾಳರಾಗುವಿರಿ.

ಕರ್ಕಾಟಕ ರಾಶಿ :

ಸಾಕೆನಿಸುವಷ್ಟು ಯಾವ ಆಹಾರವನ್ನೂ ಸೇವಿಸುವುದು ಬೇಡ. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಸಾವಾಗಿದ್ದು ತುರ್ತು ಚಿಕಿತ್ಸೆಯ ಅವಶ್ಯಕತೆ ಇರಲಿದೆ. ಹಲವು ದಿನಗಳ ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಸಣ್ಣ ವ್ಯಾಪಾರದಲ್ಲಿ ಲಾಭವನ್ನು ಕಾಣುವಿರಿ. ಉನ್ನತ ಹುದ್ದೆಗೆ ಆಯ್ಕೆಯಾದವರ ಪಟ್ಟಿಯಲ್ಲಿ ನಿಮ್ಮ ಹೆಸರೂ ಇರಲಿದೆ. ಮಕ್ಕಳ ಭವಿಷ್ಯಕ್ಕೆ ಹಣವನ್ನು ಉಳಿತಾಯ ಮಾಡವಿರಿ. ಇಂದಿನ ಸಮಯ ಮಿತಿಯನ್ನು ಅರಿತು ಕಾರ್ಯವನ್ನು ಮಾಡುವಿರಿ. ನಂಬಿಕೆಯನ್ನು ಪ್ರಯತ್ನಪೂರ್ವಕವಾಗಿ ಇರಿಸಿಕೊಳ್ಳುಬಿರಿ.

ಸಿಂಹ ರಾಶಿ :

ಮಾತಿನಿಂದ ಜೊತೆಗಾರರೇ ನಿಮ್ಮನ್ನು ದ್ವೇಷಿಸುವರು. ಸಾಧಿಸುವ ವಿಧಾನವವನ್ನು ಹೇಳಿಕೊಳ್ಳುವುದು ಬೇಡ.‌ ವಾಹನ ಚಾಲನೆಗೆ ಅತ್ಯುತ್ಸಾಹವಿದ್ದರೂ ಎಚ್ಚರಿಕೆಯನ್ನು ಹೆಚ್ಚು ಇಟ್ಟುಕೊಳ್ಳುವುದು ಮುಖ್ಯ. ಖಾಸಗಿ ಉದ್ಯೋಗ ಸಾಕೆನಿಸಿ, ಮನೆಯಲ್ಲಿ ಇರುವ ಯೋಚನೆ ಬರುವುದು. ಬಹಳ ಪ್ರಯತ್ನದ ಫಲವಾಗಿ ಅವಿವಾಹಿತರಿಗೆ ಯೋಗ್ಯವಾದ ಸಂಬಂಧವು ಬರಲಿದೆ. ಅತಿಯಾದ ಉದ್ಯೋಗದ ಬದಲಾವಣೆಯನ್ನು ಮಾಡುವುದು ಬೇಡ. ಮಾತ್ಸರ್ಯದಿಂದ ಸುಖವನ್ನು ನಾಶಮಾಡಿಕೊಳ್ಳುವಿರಿ. ಸಂಗಾತಿಯ ಜೊತೆ ಕೆಲವು ಸಮಯವನ್ನು ಕಳೆಯುವ ಮನಸ್ಸಾಗುವುದು. ದೂರಪ್ರಯಾಣವನ್ನು ಇಂದು ರದ್ದು ಮಾಡಿರಿ.

ಕನ್ಯಾ ರಾಶಿ :

ನಿಮ್ಮ ತಪ್ಪಿಗೆ ಯಾರನ್ನೋ‌ ದೂರಿ ಕಲಹವಾಗುವುದು. ಬಾಲಿಶವಾಗಿ ವರ್ತಿಸುವುದರಿಂದ ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು. ಅವಶ್ಯಕ ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ‌. ಸಾಲ ಪಡೆದವರ ಹುಡುಕಾಟವನ್ನು ಕಷ್ಟ. ಶ್ರಮವಹಿಸಿದಷ್ಟು ಫಲವು ಸಿಗಲಿಲ್ಲ ಎಂಬ ಬೇಸರವಿದ್ದರೂ ತಕ್ಕಮಟ್ಟಿನ ಖುಷಿಯು ಇರಲಿದೆ. ಇಂದು ದೈವಾನುಕೂಲವನ್ನು ನಿರೀಕ್ಷಿಸದೇ ಪುರುಷ ಪ್ರಯತ್ನವು ಹೆಚ್ಚಿರಬೇಕಾಗುವುದು. ಹೇಳಬೇಕಾದ್ದನ್ನು ಹೇಳದೇ ‌ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ. ಪ್ರೇಮಿಯನ್ನು ನೀವು ಬಹಳ ಜೋಪಾನವಾಗಿ ನೋಡಿಕೊಳ್ಳಬೇಕಾಗುವುದು. ಆಪ್ತರಿಂದ ಸಣ್ಣ ನಿರ್ಲಕ್ಷ್ಯವನ್ನೂ ಸಹಿಸಲಾರಿರಿ. ಸ್ನೇಹಿತರು ನೆಚ್ಚುವ ಕಾರ್ಯವನ್ನು ಮಾಡುವಿರಿ.

ತುಲಾ ರಾಶಿ :

ಜವಾಬ್ದಾರಿಯ ಮಾತುಗಳಿಂದ ಅಚ್ಚರಿಯಾದೀತು. ಕೃಷಿಗೆ ಸಂಬಂಧಿಸಿದ ನೂತನ ಅನ್ವೇಷಣೆಯನ್ನು ಮಾಡುವ ಹೊಸ ಆಲೋಚನೆಯನ್ನು ಮಾಡುವಿರಿ. ಸಾಮಾಜಿಕ ಕಾರ್ಯದಿಂದ ಪ್ರೇರಣೆ ಪಡೆದು ಸಂಸ್ಥೆಯನ್ನು ಆರಂಭಿಸುವಿರಿ. ಹೇಳಿಕೊಟ್ಟ ಮಾತು ಎಲ್ಲಿಯವರೆಗೆ ಇದ್ದೀತು. ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ ನಡೆಸುವಿರಿ. ನಿಮ್ಮ ದುಃಖಕ್ಕೆ ಬಂಧುಗಳಿಂದ ಸಾಂತ್ವನವು ಸಿಗುವುದು. ಸಿಕ್ಕಿದ್ದರಲ್ಲಿ ಸುಖ ಪಡುವುದನ್ನು ಬೆಳೆಸಿಕೊಳ್ಳುವಿರಿ. ಮಕ್ಕಳನ್ನು ಸ್ವತಂತ್ರವಾಗಿ ಬಿಡುವುದು ಬೇಡ. ಸಣ್ಣ ವಿರಸವೂ ದೂರಾಗಲು ಕಾರಣವಾಗಬಹುದು. ದುಃಸ್ವಪ್ನವು ನಿಮ್ಮನ್ನು ಕಾಡಬಹುದು.

ವೃಶ್ಚಿಕ ರಾಶಿ :

ಯಾವುದೋ ಆಲೋಚನೆಯಲ್ಲಿ ಮುಖ್ಯ ಕೆಲಸವನ್ನು ಮರೆಯಬಹುದು. ನಿಮ್ಮ ಉತ್ಪಾದನೆಯು ಆದಾಯಕ್ಕಿಂತ ನೆಮ್ಮದಿಯನ್ನು ಹೆಚ್ಚು ಕೊಡುವುದು. ಪ್ರಭಾವಿ ಜನರ ಸಂಸರ್ಗದಿಂದ ಹೊಸ ಆಯಾಮವು ತೆರೆದುಕೊಳ್ಳುವುದು. ಯಾವ ಮಾರ್ಗದಿಂದ ಹಣ ಬಂದರೂ ಸ್ವೀಕರಿಸುವಿರಿ. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು. ರಕ್ಷಣಾ ವ್ಯವಸ್ಥೆಯಲ್ಲಿ ಇರುವವರಿಗೆ ಕಾರ್ಯದ ಒತ್ತಡ ಹೆಚ್ಚಿರುವುದು. ಕಾರ್ಯವನ್ನೇ ಸರಿಯಾಗಿ ಮಾಡಿ ಆದಾಯವು ಹೆಚ್ಚಾಗುವಂತೆ ಮಾಡಿಕೊಳ್ಳಿ. ಇಂದು ಕೋಪವು ಬಂದರೂ ವ್ಯಕ್ತಪಡಿಸದೇ ಸುಮ್ಮನಿದ್ದು ನುಂಗಿಕೊಳ್ಳುವಿರಿ.

ಧನು ರಾಶಿ :

ಅನಿರೀಕ್ಷಿತವಾಗಿ ಕುಟುಂಬದ ಜವಾಬ್ದಾರಿಯು ನಿಮ್ಮ ಮೇಲೇ ಬರಬಹುದು‌. ಇಂದು ನಿಮ್ಮ ಮಾತಿನ ಮಾರ್ಗಗಳು ಎಲ್ಲವೂ ಮುಚ್ಚಿದಂತೆ ಅನ್ನಿಸಬಹುದು. ವೇಗದ ನಡಿಗೆಯಿಂದ ಬೀಳುವಿರಿ. ನಿಮಗೆ ಆರ್ಥಿಕ ನೆರವನ್ನು ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸುವಿರಿ. ಸ್ತ್ರೀಯರಿಂದ ನಿಮಗೆ ಬೈಗುಳವು ಬರಲಿದೆ. ಅವಿವಾಹಿತರು ವಿವಾಹದ ಬಗ್ಗೆ ಮಾಡಿ ಪ್ರಯೋಜನವಾಗದು, ಕಾರ್ಯದಲ್ಲು ಪ್ರವೃತ್ತರಾಗಿ.‌ ಉದ್ಯೋಗದಲ್ಲಿ ಪ್ರಾಮಾಣಿಕರಾಗಿದ್ದರೂ ಅಪವಾದವು ಬರಬಹುದು. ಸಾಮಾಜಿಕ ಕಾರ್ಯಕ್ಕೆ ಜನಬೆಂಬಲವು ಸಿಗಬಹುದು. ಸಂಗಾತಿಯಿಂದ ಸಿಗಬೇಕಾದ ಪ್ರೀತಿಯು ಕಡಿಮೆ ಆಗಲಿದೆ. ಇಂದಿನ ಸಮಯ ಮಿತಿಯನ್ನು ಅರಿತು ಕಾರ್ಯವನ್ನು ಮಾಡುವಿರಿ.

ಮಕರ ರಾಶಿ :

ಸರ್ಕಾರಿ ಉದ್ಯೋಗದ ಕಡೆ ನಿಮ್ಮ ಮನಸ್ಸು ಹೊರಳುವುದು. ನಿಶ್ಚಿತ ಕಾರ್ಯವು ನಿಮ್ಮಿಂದ ಆಗದೇ ಹೋಗಬಹುದು. ಪ್ರಯಾಣದ ಅನಿವಾರ್ಯತೆ ಇದ್ದರೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿ. ವಿದ್ಯಾಭ್ಯಾಸದ ಗೊಂದಲವನ್ನು ನೀವು ಸರಿಮಾಡಿಕೊಳ್ಳುವುದು ಕಷ್ಟವಾದೀತು. ಶತ್ರುಗಳನ್ನು ಹಿಮ್ಮೆಟ್ಟಿಸುವ ಕಾರ್ಯವು ನಿಮ್ಮ ಕಡೆಯಿಂದ ಆಗುವುದು. ಮತ್ತೆ ಮತ್ತೆ ನಿಮಗೆ ಆಗದ ವಿಚಾರಗಳೇ ಕಿವಿಗೆ ಬೀಳಬಹುದು. ಒತ್ತಡಗಳು ನಿಮ್ಮ ಕೆಲಸದ ವಿಧಾನವನ್ನು ಬದಲಿಸುವುದು. ಇಂದು ಹೊಂದಾಣಿಕೆಯ ಸ್ವಭಾವವನ್ನು ಬಿಡಬಹುದು. ಎಲ್ಲರಿಂದ ಗೌರವವನ್ನು ಪಡೆಯುವ ಬಯಕೆ ಇರಲಿದೆ. ಸಹೋದ್ಯೋಗಿಗಳ ಅನಾದರವನ್ನು ನೀವು ಲೆಕ್ಕಿಸದೇ ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ.

ಇದನ್ನೂ ಓದಿ:ಶುಕ್ರ ಹಾಗೂ ರವಿಯ ಅಪರೂಪದ ಸಂಯೋಗ, ಗುರುದೃಷ್ಟಿಯ ಯೋಗ

ಕುಂಭ ರಾಶಿ :

ಆರ್ಥಿಕತೆಯು ದುರ್ಬಲವಾಗಗುತ್ತಿದ್ದು ಇದೇ ದೊಡ್ಡ ಚಿಂತೆಯಾಗಬಹುದು. ಏಕಕಾಲಕ್ಕೆ ಹತ್ತಾರು ಚಿಂತನೆಯನ್ನು ಮನಸ್ಸು ಮಾಡಲಿದೆ. ಯಾರ ಬೆಂಬಲವನ್ನು ಬಯಸದೇ ಸ್ವತಂತ್ರವಾಗಿ ಕೆಲಸವನ್ನು ಮಾಡುವಿರಿ. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣವಿದ್ದರೂ ಸಂತೋಷವು ಇರದು. ಇಂದು ನಿಮ್ಮ ಬಗ್ಗೆಯೇ ನಿಮಗೆ ಅಸಮಾಧಾನವಿರಬಹುದು. ಬರಬೇಕಿದ್ದ ಹಣವು ಬಹಳ ದಿನವಾದರೂ ಬಾರದೇ ಇದ್ದುದು ಚಿಂತೆಯಾಗುವುದು. ಇಂದು ಎಲ್ಲರಿಂದ ದೂರವಿರುವುದು ನಿಮಗೆ ಇಷ್ಟವಾಗುವುದು. ಹೊಸ ಸ್ಥಳವು ನೀವು ಒಗ್ಗಿಕೊಳ್ಳುವುದು ಕಷ್ಟವಾದೀತು. ದೇವರಲ್ಲಿ ನಂಬಿಕೆ ಕಡಿಮೆಯಾಗುವುದು. ನೀವು ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ನಿಮ್ಮೊಳಗೇ ಸಂಕಟಪಡುವಿರಿ.

ಮೀನ ರಾಶಿ :

ನಂಬಿಕೆಯನ್ನು ಗಳಿಸುವುದು ನಿಮಗೆ ಸವಾಲಾಗಬಹುದು. ನಿರೀಕ್ಷಿತ ಉಡುಗೊರೆಯಿಂದ ಸಂತೋಷವಾಗಲಿದೆ. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ಆಭರಣ ಪ್ರಿಯರಿಗೆ ಸಂತೋಷವಾಗುವುದು. ಹಳೆಯ ವ್ಯವಹಾರವು ಪುನಃ ಮುನ್ನೆಲೆಗೆ ಬಂದು ಕಲಹದಲ್ಲಿ ಅಂತ್ಯವಾಗಬಹುದು. ನಿಮ್ಮ ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ಮಾತಿನಲ್ಲಿ ಮಿತಿ ಇರಲಿದ್ದು ಎಲ್ಲರಿಗೂ ಅಚ್ಚರಿಯಾದೀತು. ಆಲಸ್ಯದಿಂದ ದೂರವಿದ್ದರೂ ಸೋಮಾರಿ ಬಿರುದು ಬರಬಹುದು. ‌ವಿವಾದಕ್ಕೆ ಹೋಗಿ ಮೂರ್ಖರಾಗುವುದು ಬೇಡ. ಆಲಸ್ಯವನ್ನು ಬಿಡುವುದು ಅನಿವಾರ್ಯವಾದೀತು.

-ಲೋಹಿತ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಒಂದೇ ಓವರ್​ನಲ್ಲಿ 32 ರನ್..! 22 ಎಸೆತಗಳಲ್ಲಿ 50 ರನ್ ಚಚ್ಚಿದ ಹ್ಯಾರಿಸ್; ವಿಡಿಯೋ

ಯುಪಿ ವಾರಿಯರ್ಸ್​ ತಂಡ ನೀಡಿರುವ 144 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಭರ್ಜರಿ ಆರಂಭ ಕಂಡಿತು. ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಸ್ಫೋಟಕ ಬ್ಯಾಟರ್ ಗ್ರೇಸ್ ಹ್ಯಾರಿಸ್ ಅಜೇಯ ಶತಕದ ಜೊತೆಯಾಟ ಕಟ್ಟಿದ್ದಾರೆ. ಅದರಲ್ಲೂ ಕೇವಲ 8 ಓವರ್​ಗಳಲ್ಲಿ ತಂಡ ಶತಕದ ಗಡಿ ದಾಟಿತು. ಈ ವೇಳೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಗ್ರೇಸ್ ಹ್ಯಾರಿಸ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಅದರಲ್ಲೂ ವೆಸ್ಟ್ ಇಂಡೀಸ್​ನ ಸ್ಟಾರ್ ಆಲ್‌ರೌಂಡರ್ ಡಿಯಾಂಡ್ರಾ ಡಾಟಿನ್ ಬೌಲ್​ ಮಾಡಿದ ಪವರ್​ ಪ್ಲೇನ ಕೊನೆಯ ಓವರ್​ನಲ್ಲಿ ಅಂದರೆ 6ನೇ ಓವರ್​ನಲ್ಲಿ ಉಗ್ರರೂಪ ತಾಳಿದ ಹ್ಯಾರಿಸ್ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದು ಬರೋಬ್ಬರಿ 32 ರನ್ ಕಲೆಹಾಕಿದರು. ಈ ಮೂಲಕ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಜಂಟಿ ದಾಖಲೆ ನಿರ್ಮಿಸಿದರು. ನಿನ್ನೆಯಷ್ಟೇ ಮಾಜಿ ಆರ್​ಸಿಬಿ ಆಟಗಾರ್ತಿ ಸೋಫಿ ಡಿವೈನ್ ಒಂದೇ ಓವರ್​ನಲ್ಲಿ 32 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದರು.

Source link

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ – Kannada News | AAP MP Raghav Chadha Turns Blinkit delivery agent Amid Row Over Gig Workers Demands

ನವದೆಹಲಿ, ಜನವರಿ 12: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ (Raghav Chadha) ಇಂದು ಒಂದು ದಿನದ ಮಟ್ಟಿಗೆ ಡೆಲಿವರಿ ಬಾಯ್ ಆಗಿ ಬದಲಾಗಿದ್ದರು. ಡೆಲಿವರಿ ಬಾಯ್​​ಗಳು ಎದುರಿಸುತ್ತಿರುವ ತೊಂದರೆಗಳನ್ನು ಅರ್ಥಮಾಡಿಕೊಳ್ಳಲು ಅವರು ವೈಯಕ್ತಿಕವಾಗಿ ಜನರ ಮನೆಗಳಿಗೆ ದಿನಸಿ ಮತ್ತಿತರ ಪದಾರ್ಥಗಳನ್ನು ತಲುಪಿಸಿದರು. ಅವರು ಇದರ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರಾಘವ್ ಚಡ್ಡಾ ಅವರು ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರ ವಿಷಯವನ್ನು ಎತ್ತಿದ್ದರು. ಈ ಕಾರ್ಮಿಕರ ಪರಿಸ್ಥಿತಿ ದಿನಗೂಲಿ ಕಾರ್ಮಿಕರಿಗಿಂತ ಕೆಟ್ಟದಾಗಿದೆ ಎಂದು ಅವರು ಹೇಳಿದ್ದರು. 10 ನಿಮಿಷದಲ್ಲಿ ಡೆಲಿವರಿ ಎಂಬ ಆಯ್ಕೆಯನ್ನು ತೆಗೆದುಹಾಕಬೇಕೆಂದು ಅವರು ಒತ್ತಾಯಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಹ್ಯಾರಿಸ್ ಆರ್ಭಟ; ಏಕಪಕ್ಷೀಯ ಗೆಲುವು ಸಾಧಿಸಿದ ಆರ್​ಸಿಬಿ

ಮಹಿಳಾ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿಯಲ್ಲಿ ಆರ್​ಸಿಬಿ ಅದ್ಭುತ ಆರಂಭ ಪಡೆದುಕೊಂಡಿದೆ. ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಸ್ಮೃತಿ ಮಂಧಾನ ಪಡೆ 4 ಪಾಯಿಂಟ್​ಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಸೋಲಿಸಿದ್ದ ಆರ್​ಸಿಬಿ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು 9 ವಿಕೆಟ್​ಗಳಿಂದ ಮಣಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡ 144 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 12.1 ಓವರ್​ಗಳಲ್ಲಿ ಕೇವಲ 1 ವಿಕೆಟ್​ ಕಳೆದುಕೊಂಡು ಜಯದ ನಗೆ ಬೀರಿತು.

Source link

ಮತ್ತೆ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ ಮಾಡಿದ ಮಲ್ಲಮ್ಮ: ಕಾರಣ ಏನು? – Kannada News | Mallamma performs Urulu Seve in Bigg Boss Kannada Season 12 house

ಸೋಶಿಯಲ್ ಮೀಡಿಯಾ ಮೂಲಕ ಫೇಮಸ್ ಆಗಿ, ನಂತರ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬಂದಿದ್ದ ಮಲ್ಲಮ್ಮ ಅವರು ಜನಪ್ರಿಯತೆ ಹೆಚ್ಚಿಸಿಕೊಂಡರು. ಒಂದಷ್ಟು ವಾರಗಳ ಬಳಿಕ ಅವರು ಎಲಿಮಿನೇಟ್ ಆದರು. ಆದರೆ ಕೊನೆಯ ವಾರದಲ್ಲಿ ಮಲ್ಲಮ್ಮ (Mallamma) ಅವರು ಮತ್ತೆ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಬಂದಿದ್ದು ಎಲ್ಲರಿಗೂ ಖುಷಿ ಆಗಿದೆ. ಆದರೆ ಮಲ್ಲಮ್ಮ ಅವರು ಏಕಾಏಕಿ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ (Urulu Seve) ಮಾಡಿದ್ದಾರೆ! ಯಾಕೆ ಎಂದು ಎಲ್ಲರಿಗೂ ಅಚ್ಚರಿ ಆಗಿದೆ. ಬಳಿಕ ಸ್ವತಃ ಮಲ್ಲಮ್ಮ ಅವರು ಕಾರಣ ತಿಳಿಸಿದರು.

ಮಲ್ಲಮ್ಮ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಒಂದು ಹರಕೆ ಮಾಡಿಕೊಂಡಿದ್ದರು. ‘ಸೊಸೆಗೆ ನಾರ್ಮಲ್ ಹೆರಿಗೆ ಆಗಬೇಕು’ ಎಂದು ಅವರು ಬೇಡಿಕೊಂಡಿದ್ದರು. ಮಲ್ಲಮ್ಮ ಅವರ ಕೋರಿಕೆ ಈಡೇರಿದೆ. ಅವರ ಪ್ರಾರ್ಥನೆಯಂತೆಯೇ ಸೊಸೆಗೆ ನಾರ್ಮಲ್ ಡೆಲಿವರಿ ಆಗಿದೆ. ಅದಕ್ಕಾಗಿ ಅವರು ಬಿಗ್ ಬಾಸ್ ಮನೆಗೆ ಮರಳಿಬಂದು ಹರಕೆ ತೀರಿಸಿದ್ದಾರೆ.

‘ನಾವು ಬಡವರು. ಕೆಲಸ ಮಾಡಬೇಕಲ್ಲವಾ? ಹಾಗಾಗಿ ನಾರ್ಮಲ್ ಡೆಲಿವರಿ ಆಗಲಿ ಅಂತ ಬೇಡಿಕೊಂಡಿದ್ದೆ. ದೇವರು ನಮ್ಮ ಆಸೆ ಈಡೇರಿಸಿದ ಮೇಲೆ ನಾವು ಹರಕೆ ತೀರಿಸಬೇಕಲ್ಲವೇ’ ಎಂದು ಮಲ್ಲಮ್ಮ ಅವರು ಹೇಳಿದ್ದಾರೆ. ಈ ಕ್ಷಣದಲ್ಲಿ ಎಲ್ಲರೂ ಮಲ್ಲಮ್ಮ ಅವರಿಗೆ ವಿಶ್ ಮಾಡಿದರು. ಆದರೆ ಮಲ್ಲಮ್ಮ ಯಾಕೋ ಮೊದಲಿನ ರೀತಿ ಮಾತನಾಡುತ್ತಿಲ್ಲ ಎಂದು ಧ್ರುವಂತ್ ಹೇಳಿದರು.

ಮೊಮ್ಮಗನಿಗೆ ಯಾವ ಹೆಸರು ಇಡಬೇಕು ಎಂಬುದನ್ನು ಬಿಗ್ ಬಾಸ್ ಮನೆಯಲ್ಲೇ ನಿರ್ಧರಿಸಲಾಯಿತು. ಗಣೇಶ ಎಂದು ಮೊಮ್ಮಗನಿಗೆ ಬಿಗ್ ಬಾಸ್ ಮನೆಯಲ್ಲಿ ನಾಮಕರಣ ಮಾಡಲಾಯಿತು. ಇದರಿಂದ ಮಲ್ಲಮ್ಮ ಖುಷಿಪಟ್ಟರು. ತಾವು ಎಂದೆಂದಿಗೂ ಬಿಗ್ ಬಾಸ್ ಮನೆಗೆ ಚಿರಋಣಿ ಆಗಿರುವುದಾಗಿ ಮಲ್ಲಮ್ಮ ಅವರು ಹೇಳಿದರು. ಸ್ವಲ್ಪ ಹೊತ್ತು ಬಿಗ್ ಬಾಸ್ ಮನೆಯಲ್ಲಿ ಇದ್ದ ಅವರು ನಂತರ ಹೊರಬಂದರು.

ಇದನ್ನೂ ಓದಿ: ಈ ಬಾರಿ ಬಿಗ್​​ಬಾಸ್ ಯಾರು ಗೆಲ್ಲಬೇಕು? ಮಲ್ಲಮ್ಮನ ಫೇವರೇಟ್ ಸ್ಪರ್ಧಿ ಯಾರು?

ಕೊನೆಯ ವಾರದಲ್ಲಿ ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯ ಶೈವ, ಗಿಲ್ಲಿ ನಟ, ಧ್ರುವಂತ್, ಮ್ಯೂಟೆಂಟ್ ರಘು ಅವರು ಪೈಪೋಟಿ ನೀಡುತ್ತಿದ್ದಾರೆ. ಈ ವಾರ ಒಬ್ಬರು ಮಿಡ್ ವೀಕ್ ಎಲಿಮಿನೇಷನ್ ಮೂಲಕ ಔಟ್ ಆಗಲಿದ್ದಾರೆ. ಧನುಷ್ ಅವರು ನೇರವಾಗಿ ಫಿನಾಲೆ ತಲುಪಿದ್ದಾರೆ. ಅಂತಿಮವಾಗಿ ಯಾರು ವಿನ್ ಆಗುತ್ತಾರೆ ಎಂಬುದನ್ನು ನೋಡುವ ಕೌತುಕ ನಿರ್ಮಾಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒರಿಜಿನಲ್ ಅಂತ ನಕಲಿ 2nd PU ಪ್ರಶ್ನೆಪತ್ರಿಕೆ ಹರಿಬಿಟ್ಟಿದ್ದ ಕಿಡಿಗೇಡಿಗಳು: ಯೂಟ್ಯೂಬ್ ಖಾತೆ ವಿರುದ್ಧ ದೂರು – Kannada News | Complaint Filed Against YouTube Over Miscreants Who Leaked Fake 2nd PUC Question Paper Claiming It Was Original

ಬೆಂಗಳೂರು, ಜನವರಿ 12: ದ್ವೀತಿಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಪ್ರಿಪರೇಟರಿ ಎಕ್ಸಾಂ ನಡೆಸಲಾಗುತ್ತಿದೆ. ಪರೀಕ್ಷೆ ಆರಂಭ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಲೀಕ್​ ಹಾವಳಿ ಕೂಡ ಜೋರಾಗಿದೆ. ಶಿಕ್ಷಣ ಇಲಾಖೆ ವೈಫಲ್ಯವನ್ನೇ ಖದೀಮರು ಬಂಡವಾಳ ಮಾಡಿಕೊಂಡಿದ್ದಾರೆ. ಕೆಎಸ್​​ಇಎಬಿ (KSEAB) ತಯಾರು ಮಾಡಿದ ಪ್ರಶ್ನೆ ಪತ್ರಿಕೆ ರೀತಿಯೇ ಹೋಲುವಂತೆ ಪ್ರಶ್ನೆಪತ್ರಿಕೆ ತಯಾರಿಸಿದ್ದಾರೆ. ಆ ಮೂಲಕ ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ಇದೇ ಒರಿಜಿನಲ್ ಅಂತ ಬಿಂಬಿಸಿದ್ದಾರೆ. ಸದ್ಯ ಈ ಬಗ್ಗೆ ಬೆಂಗಳೂರು ನಾರ್ತ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯೂಟ್ಯೂಬ್ ಖಾತೆ ವಿರುದ್ಧ ದೂರು

ಪಿಯು ಮಂಡಳಿಯ ಜಂಟಿ ನಿರ್ದೇಶಕರು NiranjanShetty@NiranjanShetty9581 ಯೂಟ್ಯೂಬ್ ಖಾತೆ ವಿರುದ್ಧ ಬೆಂಗಳೂರು ನಾರ್ತ್ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎಫ್​ಐಆರ್​ ದಾಖಲಾಗಿದೆ. ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ಇದು ಒರಿಜಿನಲ್​​, ಇದರ ಪ್ರತಿ ಬೇಕಾದಲ್ಲಿ ಫಾಲೋ, ಸಬ್ಸ್ಕ್ರೈಬ್ ಮಾಡಿ ಅಂತ ಲಿಂಕ್ ಶೇರ್ ಮಾಡಿದ್ದಾರೆ. ಕೇವಲ ಯೂಟ್ಯೂಬ್ ಸಬ್ಸ್ಕ್ರೈಬ್ ಗೋಸ್ಕರ ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ ಅಂತ ಬಿಂಬಿಸಿದ್ದಾರೆ. ಈ ರೀತಿ ಸುಳ್ಳು ಸುದ್ದಿ ಹರಡಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಲಾಗಿದೆ.

ಪೋಷಕರಿಗೆ ಆತಂಕ ಬೇಡ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ: ಭರತ್. ಎಸ್

ದ್ವಿತೀಯ ಪಿಯು ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ ಭರತ್. ಎಸ್​ ಪ್ರತಿಕ್ರಿಯಿಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಯಾರು ಲೀಕ್ ಮಾಡಿದ್ದಾರೆಂದು ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್: ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಅರೆಸ್ಟ್

ಕೆಲವೊಂದು ಹಳೆಯ ಪ್ರಶ್ನೆ ಪತ್ರಿಕೆಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಫೇಕಾಗಿ ಲೀಕ್‌ ಮಾಡುತ್ತಿದ್ದಾರೆ. ಅವರ ಬಗ್ಗೆಯೂ ಹದ್ದಿನ ಕಣ್ಣಿಟ್ಟಿದ್ದೇವೆ. ಪೋಷಕರಿಗೆ ಆತಂಕ ಬೇಡ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ತನಿಖೆ ನಡೆಯುತ್ತಿರುವ ಹಿನ್ನೆಲೆ ನಾವು ಏನೂ ಮಾತನಾಡಲ್ಲ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version