ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಚಿತ್ರವು ವಿವಾದಗಳ ಸುಳಿಯಲ್ಲಿ ಸಿಲುಕಿದೆ. ಸೆನ್ಸಾರ್ ಮಂಡಳಿಯ ಜೊತೆಗಿನ ಸಂಘರ್ಷದಿಂದಾಗಿ ಸಿನಿಮಾ ಬಿಡುಗಡೆ ವಿಳಂಬವಾಗುತ್ತಿದೆ. ಅಲ್ಲದೇ, ಚಿತ್ರದ ಡಿಜಿಟಲ್ ಪ್ರಸಾರ ಹಕ್ಕುಗಳನ್ನು ಹೊಂದಿದ್ದ ಪ್ರಮುಖ ಒಟಿಟಿ ಸಂಸ್ಥೆ ‘ಅಮೇಜಾನ್ ಪ್ರೈಮ್ ವಿಡಿಯೋ’ (Amazon Prime Video) ತನ್ನ ಒಪ್ಪಂದದಿಂದ ಹಿಂದೆ ಸರಿದಿದೆ ಎಂಬ ವದಂತಿಗಳು ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ. ಇದರಿಂದಾಗಿ ದಳಪತಿ ವಿಜಯ್ (Thalapathy Vijay) ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.
ಮಾಧ್ಯಮಗಳ ವರದಿಗಳ ಪ್ರಕಾರ, ‘ಅಮೇಜಾನ್ ಪ್ರೈಮ್ ವಿಡಿಯೋ’ ಈ ಹಿಂದೆ ‘ಜನ ನಾಯಗನ್’ ಸಿನಿಮಾದ ಪೋಸ್ಟ್-ಥಿಯೇಟ್ರಿಕಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಬರೋಬ್ಬರಿ 120 ಕೋಟಿ ರೂಪಾಯಿ ನೀಡಿ ಖರೀದಿಸಿತ್ತು. ಆದರೆ, ಚಿತ್ರದ ಬಿಡುಗಡೆಯ ಬಗ್ಗೆ ಸ್ಪಷ್ಟತೆ ಇಲ್ಲದ ಕಾರಣ ಹಾಗೂ ಪದೇ ಪದೇ ಮುಂದೂಡಲ್ಪಡುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆಯು ಒಪ್ಪಂದ ರದ್ದು ಮಾಡಿಕೊಂಡಿದೆ ಎನ್ನಲಾಗಿದೆ.
2026ರ ಸಂಕ್ರಾಂತಿ ಹಬ್ಬಕ್ಕೆ ತೆರೆಕಾಣಬೇಕಿದ್ದ ‘ಜನ ನಾಯಗನ್’ ಸಿನಿಮಾ ಸೆನ್ಸಾರ್ ಕಾರಣಕ್ಕೆ ಅತಂತ್ರ ಸ್ಥಿತಿಯಲ್ಲಿದೆ. ಸೆನ್ಸಾರ್ ಮಂಡಳಿ ಸದಸ್ಯರ ಪ್ರಕಾರ, ಈ ಚಿತ್ರದ ಕೆಲವು ದೃಶ್ಯಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿದೆ. ಸಶಸ್ತ್ರ ಪಡೆಗಳನ್ನು ಚಿತ್ರಿಸಿರುವ ರೀತಿ ಆಕ್ಷೇಪಾರ್ಹವಾಗಿದೆ. ಸದ್ಯ ಸಿನಿಮಾವು ರಿವೈಸಿಂಗ್ ಕಮಿಟಿಯ ಮುಂದಿದ್ದು, ಸಮಿತಿಯು ಮುಂಬರುವ ದಿನಗಳಲ್ಲಿ ಚಿತ್ರವನ್ನು ವೀಕ್ಷಿಸಿ ತೀರ್ಪು ನೀಡಲಿದೆ.
ಒಟಿಟಿ ಡೀಲ್ ಕ್ಯಾನ್ಸಲ್ ಆಗಿದೆ ಎಂಬ ಸುದ್ದಿಯನ್ನು ಚಿತ್ರೋದ್ಯಮದ ವಿಶ್ಲೇಷಕರು ಸಂಪೂರ್ಣವಾಗಿ ನಂಬಲು ಸಿದ್ಧರಿಲ್ಲ. ಸಿನಿಮಾ ಬಿಡುಗಡೆ ವಿಳಂಬವಾದಾಗ ಇಂತಹ ವದಂತಿಗಳು ಸಹಜ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದೆ ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ವಿಷಯದಲ್ಲೂ ಇಂತಹದ್ದೇ ವರದಿಗಳು ಬಂದಿದ್ದವು. ಆದರೆ ಒಟಿಟಿ ಸಂಸ್ಥೆಯು ಕೇವಲ ದರವನ್ನು ಮರುನಿಗದಿ ಮಾಡಿಕೊಂಡಿತ್ತೇ ಹೊರತು, ಒಪ್ಪಂದವನ್ನು ರದ್ದುಗೊಳಿಸಿರಲಿಲ್ಲ ಎಂಬುದು ನಂತರ ತಿಳಿಯಿತು.
‘ಜನ ನಾಯಗನ್’ ಸಿನಿಮಾದ ವಿಷಯದಲ್ಲೂ ‘ಅಮೇಜಾನ್ ಪ್ರೈಮ್ ವಿಡಿಯೋ’ ಸಂಸ್ಥೆ ಇದೇ ಹಾದಿ ತುಳಿಯುವ ಸಾಧ್ಯತೆಯಿದೆ. ಒಟ್ಟಾರೆಯಾಗಿ, ಚಿತ್ರತಂಡ ಅಥವಾ ‘ಅಮೇಜಾನ್ ಪ್ರೈಮ್ ವಿಡಿಯೋ’ ಕಡೆಯಿಂದ ಅಧಿಕೃತವಾಗಿ ಹೇಳಿಕೆ ನೀಡುವವರೆಗೆ ಈ ಗೊಂದಲ ಮುಂದುವರಿಯಲಿದೆ.
ಬೆಂಗಳೂರು, (ಮಾರ್ಚ್ 12): ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಯಾವುದೇ ಆಸ್ತಿ ವಹಿವಾಟು ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಿದೆ. ಇದರಿಂದ ಹಲವು ಸಮಸ್ಯೆಗಳು ಸಹ ಉಂಟಾಗಿದ್ದು, ಇ ಖಾತಾಕ್ಕಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಜಿಬಿಎ ಅಧಿಕಾರಿಗಳು ಮಾತ್ರ ಜನರ ಸಮಸ್ಯೆ ಏನು ಎನ್ನುವುದನ್ನೂ ತಿಳಿದುಕೊಳ್ಳುವ ಗೋಚಿಗೂ ಹೋಗಲ್ಲ. ಇದಕ್ಕೆ ಪೂರಕವೆಂಬಂತೆ ಬೆಂಗಳೂರಿನ ರಂಗನಾಯಕಿ ಮಹಿಳೆಯೊಬ್ಬರು ಇ ಖಾತಾಕ್ಕಾಗಿ ಇಪ್ಪತ್ತು ವರ್ಷಗಳಿಂದ ಹಿಂದೆ ಅಂದ್ರೆ 2006ರಲ್ಲಿ 16,700 ರೂಪಾಯಿ ಶುಲ್ಕ ಕಟ್ಟಿದ್ದಾರೆ. ಆದ್ರೆ, ಇಪ್ಪತ್ತು ವರ್ಷವಾದರೂ ಸಹ ರಂಗನಾಯಕಿಗೆ ಇ ಖಾತಾ ಸಿಕ್ಕಿಲ್ಲ. ಇದು ಅಧಿಕಾರಗಳು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಾರೆ ಎನ್ನುವುದನ್ನು ತೋರಿಸಿಕೊಡುತ್ತದೆ. ಇನ್ನು ಈ ಬಗ್ಗೆ ಸ್ವತಃ ರಂಗನಾಯಕಿ ಅವರೇ ಜಿಬಿಎ ಆಯುಕ್ತರಿಗೂ ಸಹ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಇನ್ನು ಇ ಖಾತಾಕ್ಕಾಗಿ ಪಟ್ಟ ಕಷ್ಟ, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಮಹಿಳೆ ಎಳೆ ಎಳೆಯಾಗಿ ಬಿಟ್ಟಿದ್ದು, ಅದು ಈ ಕೆಳಗಿನಂತಿದೆ ಓದಿ.
ನಾನು ಸಮಸ್ಯೆ ಹೇಳಿಕೊಳ್ಳಲು ವೇದಿಕೆ ಹಾಗೂ ನನ್ನ ಸಮಸ್ಯೆಯನ್ನು ಕೇಳಿಸಿಕೊಳ್ಳಲು ಎರಡು ಕಿವಿಗಳು ಸಿಗದ ಕಾರಣಕ್ಕೆ ಇದನ್ನು ಎಲ್ಲರೆದುರು ಹೇಳಿಕೊಳ್ಳಲು ಮಾಧ್ಯಮವೊಂದನ್ನು ಆಯ್ಕೆ ಮಾಡಿಕೊಂಡೆ. ನನ್ನ ಹೆಸರು ರಂಗನಾಯಕಿ. ಅಗತ್ಯಕ್ಕೆ ತಕ್ಕಷ್ಟು ಸ್ವಲ್ಪ ಓದು, ಸಾಸಿವೆ ಡಬ್ಬಿ, ಮನೆ ವ್ಯವಹಾರಕ್ಕೆ ಬೇಕಾದಷ್ಟು ತಿಳಿವಳಿಕೆ ಇರುವ ವ್ಯಕ್ತಿ ನಾನು. ಬೆಂಗಳೂರಿನ, ಬನಶಂಕರಿ ಮೂರನೇ ಹಂತದ, ಹೊಸಕೆರೆಹಳ್ಳಿಯ, ದತ್ತಾತ್ರೇಯನಗರದ ಮೂರನೇ ಮುಖ್ಯರಸ್ತೆಯಲ್ಲಿ ನನ್ನ ಮನೆ ಇದೆ; ಸ್ವಂತದ್ದು. ಆ ನಿವೇಶನ ‘ಬಿ’ ಖಾತಾ ಹೊಂದಿದೆ. ಇತ್ತೀಚೆಗೆ ಬಿ ಖಾತಾಗಳನ್ನು ಎ ಖಾತಾಗೆ ಮಾಡಿಕೊಡುವ ಬಗ್ಗೆ ಡಿಕೆ ಶಿವಕುಮಾರ್ ಅವರು ಹೇಳಿದರಲ್ಲ, ಅದಕ್ಕೆ ಅರ್ಜಿ ಹಾಕಿಕೊಳ್ಳಬೇಕು ಎಂಬಷ್ಟರಲ್ಲಿ ನನಗೆ ನೆನಪಾದ ಸಂಗತಿ ಏನೆಂದರೆ, 2006ನೇ ಇಸವಿಯ ಆಗಸ್ಟ್ ತಿಂಗಳಿನಲ್ಲಿಯೇ ಅಭಿವೃದ್ಧಿ ಶುಲ್ಕ 16,700 ರೂಪಾಯಿ ಪಾವತಿ ಮಾಡಿಯಾಗಿದೆ, ಆಗ ಹಣ ಕಟ್ಟಿದ್ದಕ್ಕೆ ನನ್ನ ಬಳಿ ರಸೀದಿಯೂ ಇದೆ.
ಹಣ ಪಾವತಿ ಮಾಡಿದ ಮೇಲೆ ನಮಗೆ ಎ ಖಾತಾ ಮಾಡಿಕೊಡಲೇ ಇಲ್ಲ. ನಿರಂತರವಾಗಿ ನಮ್ಮ ವಾರ್ಡ್ ವ್ಯಾಪ್ತಿಯ ಅಧಿಕಾರಿಗಳನ್ನೆಲ್ಲ ಭೇಟಿ ಮಾಡಿದೆ, ಅವರಿಗೆ ನಾನು ಹಣ ಪಾವತಿ ಮಾಡಿದ್ದ ರಸೀದಿ ತೋರಿಸಿದೆ, ಎ ಖಾತಾ ಮಾಡಿಕೊಡಿ ಎಂದು ಕೇಳಿಕೊಂಡೆ. ನನ್ನ ಅಕ್ಕ-ಪಕ್ಕದ ಮನೆಯೆಲ್ಲ ಎ ಖಾತಾ ಆಸ್ತಿಗಳಿವೆ. ನಾನು ಹೀಗೆ 16,700 ರೂಪಾಯಿ ಅಭಿವೃದ್ಧಿ ಶುಲ್ಕ ಪಾವತಿ ಸಹ ಮಾಡಿಯಾಗಿದೆ ಎಂದು ಹೇಳಿದೆ. ಹೀಗೆ ನನ್ನ ಮನವಿ ಹೇಗೆ ಒಂದೇ ಥರ ಇರುತ್ತಿತ್ತೋ ಅಧಿಕಾರಿಗಳ ಉತ್ತರವೂ ಒಂದೇ ಇರುತ್ತಿತ್ತು: ಇನ್ನೂ ಎ ಖಾತಾ ಬಿಟ್ಟಿಲ್ಲ, ಬಿಟ್ಟಾಗ ಮಾಡಿಕೊಡ್ತೀವಿ. ಹೀಗೆ ವರ್ಷ ಇಪ್ಪತ್ತು ಕಳೆದುಹೋಗಿದೆ.
ಒಂದು ವೇಳೆ ಆಸ್ತಿ ಕಂದಾಯ ಬಾಕಿ ಉಳಿಸಿಕೊಂಡರೆ ವರ್ಷಕ್ಕೆ ಹನ್ನೆರಡು ಪರ್ಸೆಂಟ್ ಬಡ್ಡಿ ಹಾಕಿ, ಬಿಬಿಎಂಪಿಗೆ ಹಣ ಕಟ್ಟಿಸಿಕೊಳ್ಳುವ ಪರಿಪಾಠ ಇದೆ. ಆದರೆ ನಾವು ಕಟ್ಟಿದ ಹಣ ಮತ್ತು ಹಾಗೆ ಕಟ್ಟಿಸಿಕೊಂಡಿದ್ದಕ್ಕೆ ಮಾಡಿಕೊಡಬೇಕಾದ ಕೆಲಸದ ಬಗ್ಗೆ ಯಾರಿಂದಲೂ ನೆಟ್ಟಗಿನ ಉತ್ತರ ಇಲ್ಲ.
ಈಚೆಗೆ, ಮಾರ್ಚ್ ಆರನೇ ತಾರೀಕು ಬೆಂಗಳೂರು ಪಶ್ಚಿಮ ವಿಭಾಗದ ಆಯಕ್ತರಾದ ರಾಜೇಂದ್ರ ಅವರ ಕಚೇರಿಗೆ ನನ್ನ ಮನವಿ ಪತ್ರವನ್ನು ಮಗನ ಕೈಲಿ ಕೊಟ್ಟು ಕಳಿಸಿದೆ. ಆ ನಂತರ ಮಾರ್ಚ್ ಹನ್ನೊಂದನೇ ತಾರೀಕು ಆ ಅರ್ಜಿ ಸ್ಥಿತಿ ಏನು ಅಂತ ಕೇಳಿದಾಗ, ರಾಜರಾಜೇಶ್ವರಿ ನಗರದ ಆಫೀಸ್ ಗೆ ಕಳಿಸಿದ್ದೀವಿ ಅಂತ ಹೇಳಿದರು. ಓಹ್, ನಮಗೆ ಉತ್ತರ ಸಿಗಬಹುದು ಅಂದುಕೊಂಡು, ಆರ್ಆರ್ ನಗರದಲ್ಲಿ ಇರುವ ಆಫೀಸ್ ಗೆ ಮಗನನ್ನು ಕಳಿಸಿದರೆ, ಅಲ್ಲಿ ಇದ್ದವರು ಆರತಿ ಆನಂದ್ ಅನ್ನೋ ಮೇಡಂ ಅಂತೆ.
ಆಗ ಕಟ್ಟಿರೋ ಹದಿನಾರು ಸಾವಿರಕ್ಕೆ ಈಗ ನಾನೇನು ಮಾಡಬೇಕು? ಕಮಿಷನರ್ ಆಫೀಸಿಂದ ನನಗೆ ನೀವು ಕೊಟ್ಟ ಪತ್ರ ಬರಲಿ, ಆಗ ನಿಮಗೆ ನ್ಯಾಯ ಕೊಡಿಸ್ತೀನಿ ಅಂತ ಹೇಳಿ, ಆ ನಂತರ ಕ್ಷಣವೂ ಅಲ್ಲಿ ನಿಲ್ಲದೆ, ತಮ್ಮ ಮನೆಗೆ ಹೊರಟರಂತೆ. ನಾವು ಸಲ್ಲಿಸಿದ್ದ ಅರ್ಜಿಯ ನಕಲನ್ನು, ನಾವು ಏನು ಹೇಳುತ್ತೇವೆ ಎಂದು ಕೇಳಿಸಿಕೊಳ್ಳುವ ವ್ಯವಧಾನವ ತೋರದ ಆರಂತಿ ಆನಂದ್ ಅವರಿಂದ ‘ನ್ಯಾಯ’ ಸಿಗುವುದು ಹೇಗೋ ನನಗಂತೂ ಗೊತ್ತಾಗಲಿಲ್ಲ. ನಮ್ಮ ಕುಟುಂಬದಲ್ಲಿಯೇ ಓದಿಕೊಂಡಿರುವ ಒಬ್ಬೇಒಬ್ಬ, ಅದೂ ನನ್ನ ಮಗನಿಗೆ ಗೊತ್ತಾಗಬಹುದಾ? ಗೊತ್ತಿಲ್ಲ.
ಕೊನೆ ಪ್ರಯತ್ನ ಅನ್ನೋ ಹಾಗೆ ಮಾಧ್ಯಮಗಳ ಮೂಲಕ ಜನರಿಗೆ ನನ್ನ ಸಮಸ್ಯೆ ಹೇಳಿಕೊಂಡು ಬಿಡೋಣ ಎಂದು ಇದನ್ನೆಲ್ಲ ನನ್ನ ಮಗನಿಗೇ ಹೇಳಿ ಬರೆಸಿದೆ. ನಾನು ಹಣ ಪಾವತಿ ಮಾಡಿದ ರಸೀದಿ ನಿಮ್ಮೆದುರು ಇಡುತ್ತಿದ್ದೇನೆ. ದಯವಿಟ್ಟು ಕರುಣೆಯ ಕಣ್ಣುಗಳಿಂದ ನೀವಾದರೂ ಇದನ್ನು ನೋಡಿ.
ಈಗ ಬಿ ಖಾತಾದಿಂದ ಎ ಖಾತಾಗೆ ಮಾಡಿಕೊಡುವುದಕ್ಕೆ ಶೇಕಡಾ ಐದರಷ್ಟು ಹಣ ಕಟ್ಟಬೇಕಂತೆ. ನಾನು ಇರುವ ಸೈಟಿನ ಅಳತೆಗೆ ಒಂದೂಮುಕ್ಕಾಲು ಲಕ್ಷದಿಂದ ಎರಡು ಲಕ್ಷ ರೂಪಾಯಿ ಕಟ್ಟಬೇಕಂತೆ. ಇಪ್ಪತ್ತು ವರ್ಷಗಳ ಹಿಂದೆ ಬೆಂಗಳೂರು ಮಹಾನಗರ ಪಾಲಿಗೆ ಎಂದಿದ್ದಾಗ ಕಟ್ಟಿದ್ದ 16,700 ರೂಪಾಯಿ ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ದಾಟಿ, ಗ್ರೇಟರ್ ಬೆಂಗಳೂರು ಅಥಾರಿಟಿ ತನಕ ಬಂದಿದೆ. ಈಗ ಶೇಕಡಾ ಐದರಷ್ಟು ಕಟ್ಟಬೇಕಾದ ಮೊತ್ತಕ್ಕೆ ಈ ಹಿಂದೆ ನಾನು ಕಟ್ಟಿದ್ದ ಹಣವನ್ನು ಪರಿಗಣಿಸಿ, ಸಂಪೂರ್ಣ ಮನ್ನಾ ಮಾಡಬೇಕು ಎಂಬುದು ನನ್ನ ಪ್ರಾರ್ಥನೆ.
ಇಪ್ಪತ್ತು ವರ್ಷದ ಹಿಂದಿನ 16,700 ರೂಪಾಯಿಯ ಇವತ್ತಿನ ಮೌಲ್ಯ ಏನು ಎಂಬುದನ್ನು ಡಿಕೆ ಶಿವಕುಮಾರ್ ಅವರಂಥ ದೊಡ್ಡ ಸಾಹೇಬ್ರು, ಕಮಿಷನರ್ ಸಾಹೇಬ್ರು ಎಲ್ಲ ಸೇರಿ ತೀರ್ಮಾನ ಮಾಡಲಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.
ನಮ್ಮ ಆಸ್ತಿಯ ಇಪಿಐಡಿ ಸಂಖ್ಯೆ: 8849715443
ಆಸ್ತಿ ತೆರಿಗೆ ಪಾವತಿ ಅರ್ಜಿ ಸಂಖ್ಯೆ: 1600592919
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕಳೆದ ಭಾನುವಾರ ನಡೆದ 2026 ರ ಟಿ20 ವಿಶ್ವಕಪ್ (T20 World Cup) ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್ಗಳಿಂದ ಸೋಲಿಸುವ ಮೂಲಕ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದುಕೊಂಡಿತು. ಈ ಗೆಲುವಿನ ನಂತರ ಭಾರತದಲ್ಲಿ ಭಾರಿ ಸಂಭ್ರಮಾಚರಣೆ ನಡೆಯಿತು. ಇದೀಗ ವಿಶ್ವಕಪ್ ಮುಗಿದ ನಾಲ್ಕು ದಿನಗಳ ನಂತರ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ತಂಡದ ಉಪನಾಯಕ ಅಕ್ಷರ್ ಪಟೇಲ್ (Axar Patel) ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ತಾನು ಮಾಡಿದ ಆ ತಪ್ಪಿನಿಂದ ಅಕ್ಷರ್ ಪಟೇಲ್ ತುಂಬಾ ಕೋಪಗೊಂಡಿದ್ದರು. ಅಲ್ಲದೆ ನಾವು ಆ ಪಂದ್ಯದಲ್ಲಿ ಸೋತಿದ್ದು,ಉರಿಯುವ ಬೆಂಕಿಗೆ ತುಪ್ಪ ಸುರಿದಂತ್ತಾಗಿತ್ತು ಎಂದು ಸೂರ್ಯಕುಮಾರ್ ಯಾದವ್ ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಅಕ್ಷರ್ ಪಟೇಲ್ ಕೋಪಗೊಂಡಿದ್ಯಾಕೆ? ಸೂರ್ಯಕುಮಾರ್ ಅವರ ಬಳಿ ಕ್ಷಮೆಯಾಚಿಸಿದ್ದು ಏಕೆ ಎಂಬುದನ್ನು ನೋಡುವುದಾದರೆ..
ಮಾಡಿದ ತಪ್ಪಿಗೆ ಸೋಲಿನ ಬೆಲೆ
ವಾಸ್ತವವಾಗಿ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಫೈನಲ್ ಪಂದ್ಯವನ್ನು ಸೇರಿದಂತೆ ಒಟ್ಟು ಒಂಬತ್ತು ಪಂದ್ಯಗಳನ್ನು ಆಡಿತ್ತು. ಆದರೆ ಈ 9 ಪಂದ್ಯಗಳಲ್ಲಿ ಎರಡು ಪಂದ್ಯಗಳಿಂದ ತಂಡದ ಉಪನಾಯಕ ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ 11ನಿಂದ ಕೈಬಿಡಲಾಗಿತ್ತು. ಅದರಲ್ಲೂ ಸೂಪರ್-8 ಸುತ್ತಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮಹತ್ವದ ಪಂದ್ಯಕ್ಕೂ ಅಕ್ಷರ್ ಪಟೇಲ್ ಅವರನ್ನು ತಂಡದಿಂದ ಕೈಬಿಡಲಾಯಿತು. ಇದರ ಪರಿಣಾಮವಾಗಿ ಟೀಂ ಇಂಡಿಯಾ ಈ ಪಂದ್ಯವನ್ನು 76 ರನ್ಗಳಿಂದ ಸೋತಿತು. ಈ ಸೋಲಿಗೆ ಅಕ್ಷರ್ ಪಟೇಲ್ರನ್ನು ತಂಡದಿಂದ ಕೈಬಿಟ್ಟಿದ್ದು, ಪ್ರಮುಖ ಕಾರಣವಾಗಿತ್ತು. ಏಕೆಂದರೆ ಅಕ್ಷರ್ ಬದಲಿಯಾಗಿ ಬಂದಿದ್ದ ವಾಷಿಂಗ್ಟನ್ ಸುಂದರ್ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ವಿಫಲರಾಗಿದ್ದರು. ಹೀಗಾಗಿ ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರು ನಾಯಕ ಸೂರ್ಯ ಹಾಗೂ ಗಂಭೀರ್ ವಿರುದ್ಧ ಗರಂ ಆಗಿದ್ದರು.
ಅಕ್ಷರ್ ತುಂಬಾ ಕೋಪಗೊಂಡಿದ್ದರು
ಇತ್ತ ಅಕ್ಷರ್ ಪಟೇಲ್ ಕೂಡ ತನ್ನನ್ನು ಆ ಪಂದ್ಯದಿಂದ ಹೊರಗಿಟ್ಟಿದಕ್ಕೆ ಬೇಸರಗೊಂಡಿದ್ದರು. ಇದೀಗ ವಿಶ್ವಕಪ್ ಗೆದ್ದ ಬಳಿಕ ಆ ಘಟನೆಯ ಬಗ್ಗೆ ಮಾತನಾಡಿರುವ ಸೂರ್ಯಕುಮಾರ್ ಯಾದವ್, ತಮ್ಮ ತಪ್ಪನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಮಾತ್ರವಲ್ಲದೆ ಅಕ್ಷರ್ ಪಟೇಲ್ ಬಳಿ ಕ್ಷಮೆಯಾಚಿಸಿರುವುದಾಗಿ ಹೇಳಿದ್ದಾರೆ. ನಾನು ಮಾಡಿದ ಆ ತೀರ್ಮಾನಿಂದ ಅಕ್ಷರ್ ತುಂಬಾ ಕೋಪಗೊಂಡಿದ್ದರು. ಅವರು ಕೋಪ ಮಾಡಿಕೊಂಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಏಕೆಂದರೆ ಅಕ್ಷರ್ ಅನುಭವಿ ಆಟಗಾರ ಮತ್ತು ಐಪಿಎಲ್ ಫ್ರಾಂಚೈಸಿಯನ್ನು ಮುನ್ನಡೆಸುತ್ತಿದ್ದಾರೆ. ಅಂತಹ ಆಟಗಾರನನ್ನು ಕೈಬಿಟ್ಟಿದ್ದರಿಂದ ಅವರಿಗೆ ನೋವಾಗುವುದು ಸಹಜ.
ಹೀಗಾಗಿ ಪಂದ್ಯದ ನಂತರ ಅಕ್ಷರ್ ಪಟೇಲ್ ಅವರೊಂದಿಗೆ ಮಾತನಾಡಿ ನನ್ನ ನಿರ್ಧಾರಕ್ಕೆ ಕ್ಷಮೆಯಾಚಿಸಿದ್ದೆ. ತಂಡದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದರೂ, ಅದು ಸರಿಯಾದ ನಿರ್ಧಾರವಲ್ಲ. ಹೀಗಾಗಿ ನಾನು ಅಕ್ಷರ್ ಬಳಿ ಕ್ಷಮೆಯಾಚಿಸಿದೆ. ಆದರೆ ಅಕ್ಷರ್ ಬಹಳ ಪ್ರಬುದ್ಧವಾಗಿ ಪ್ರತಿಕ್ರಿಯಿಸಿದರು ಎಂದು ಸೂರ್ಯ ದಿ ಇಂಡಿಯನ್ ಎಕ್ಸ್ಪ್ರೆಸ್ಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನವದೆಹಲಿ, ಮಾರ್ಚ್ 12: ಕಳೆದ ಕೆಲವು ವರ್ಷಗಳಿಂದ ಪ್ರಪಂಚದಾದ್ಯಂತ ಮೊಬೈಲ್ ಫೋನ್ ಸ್ಫೋಟಗೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಚಾರ್ಜ್ ಮಾಡುವಾಗ ಅಥವಾ ಬಳಸುತ್ತಿರುವಾಗಲೇ ಮೊಬೈಲ್ ಅತಿಯಾಗಿ ಬಿಸಿಯಾಗುವುದು ಅಥವಾ ಸ್ಫೋಟಗೊಳ್ಳುವ ಘಟನೆಗಳು ಆನ್ಲೈನ್ನಲ್ಲಿ ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಚೀನಾದಲ್ಲಿ ಅಂತಹ ಒಂದು ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ (Viral Video) ಬಾಲಕಿಯೊಬ್ಬಳು ಫೋನ್ ಹಿಡಿದಿದ್ದಾಗ ಮೊಬೈಲ್ ಸ್ಫೋಟವಾಗಿದೆ. ಅದೃಷ್ಟವಶಾತ್ ಆಕೆ ತೀವ್ರ ಗಾಯಗಳಿಂದ ಪಾರಾಗಿದ್ದಾಳೆ. ಆಕೆಯ ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸಿಬಿಎಫ್ಸಿ (CBFC) ಯಿಂದ ಇತ್ತೀಚೆಗೆ ಕೆಲವು ನಿರ್ಮಾಪಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಲವು ನಿರ್ಮಾಪಕರು ಇತ್ತೀಚೆಗಿನ ದಿನಗಳಲ್ಲಿ ಸಿಬಿಎಫ್ಸಿ ಬಗ್ಗೆ ಅಸಮಾಧಾನ ಸಹ ಹೊರಹಾಕಿದ್ದಾರೆ. ಕೆಲವರು ಕೇಸುಗಳನ್ನು ಸಹ ದಾಖಲಿಸಿದ್ದಿದೆ. ಇದೀಗ ಸಿಬಿಎಫ್ಸಿ ಹೊರ ನಿಯಮವೊಂದನ್ನು ಜಾರಿ ಮಾಡಿದ್ದು, ಈ ನಿಯಮ ನಿರ್ಮಾಪಕರಿಗೆ ಇನ್ನಷ್ಟು ತಲೆನೋವು ತರಲಿದೆ. ಆದರೆ ಇದೊಂದು ಉಪಯುಕ್ತ ನಿಯಮವಾಗಿದ್ದು, ನಿರ್ಮಾಪಕರುಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂದು ನೋಡಬೇಕಿದೆ.
ಸಿಬಿಎಫ್ಸಿಯ ನಿಯಮದ ಪ್ರಕಾರ, ಈ ಭಾನುವಾರದ (ಮಾರ್ಚ್ 15) ಪ್ರಮಾಣ ಪತ್ರಕ್ಕೆ ಸಲ್ಲಿಕೆ ಆಗುವ ಎಲ್ಲ ಸಿನಿಮಾಗಳು ಕಡ್ಡಾಯವಾಗಿ ಕ್ಯಾಪ್ಷನ್ಸ್ (ಕ್ಲೋಸ್ಡ್ ಕ್ಯಾಪ್ಷನ್ಸ್ ಅಥವಾ ಓಪನ್ ಕ್ಯಾಪ್ಷನ್ಸ್) ಅಥವಾ ಸಬ್ಟೈಟಲ್ಸ್ ಹಾಗೂ ಆಡಿಯೋ ಡಿಸ್ಕ್ರಿಪ್ಷನ್ ಅನ್ನು ಹೊಂದಿರಲೇ ಬೇಕಾಗಿದೆ. ಒಂದೊಮ್ಮೆ ಈ ಕ್ಯಾಪ್ಷನ್ಗಳು ಇಲ್ಲದೇ ಇದ್ದಲ್ಲಿ ಸಿನಿಮಾವನ್ನು ಪ್ರಮಾಣ ಪತ್ರಕ್ಕೆ ಪರಿಗಣಿಸಲಾಗುವುದಿಲ್ಲ ಎಂದಿದೆ.
ಸಿನಿಮಾಗಳಿಗೆ ಸಿಸಿ, ಓಸಿ (ಸಬ್ಟೈಟಲ್ಸ್) ಮತ್ತು ಆಡಿಯೋ ಡಿಸ್ಕ್ರಿಪ್ಷನ್ಗಳು ಹಾಕುವುದು ನಿರ್ಮಾಪಕರಿಗೆ ಹೆಚ್ಚಿನ ಬಾಬತ್ತಾಗಲಿದೆ. ಭಾರಿ ದೊಡ್ಡ ಮೊತ್ತ ಇದಕ್ಕೆ ಖರ್ಚಾಗದಿದ್ದರೂ ಸಹ ಇದು ಹೆಚ್ಚುವರಿ ಖರ್ಚಂತೂ ಖಂಡಿತ ಎನಿಸಿಕೊಳ್ಳಲಿದೆ. ಅಲ್ಲದೆ, ಆಡಿಯೋ ಡಿಸ್ಕ್ರಿಪ್ಷನ್ ಸಹ ಸೇರಿಸಬೇಕಾಗಿರುವದರಿಂದ ಡಬ್ಬಿಂಗ್ ಅವಧಿ ಹೆಚ್ಚಾಗಲಿದೆ. ಪ್ರತ್ಯೇಕ ಧ್ವನಿ ಕಲಾವಿದರ ನೆರವು ಪಡೆಯಬೇಕಾಗುತ್ತದೆ. ಇದೆಲ್ಲವೂ ಖರ್ಚಿನ ವಿಷಯವೇ ಆಗಿದೆ.
ಒಟಿಟಿ ಜಮಾನಾನಲ್ಲಿ ಈ ಕ್ಯಾಪ್ಷನ್ಗಳು ಬಹುತೇಕ ಎಲ್ಲ ಸಿನಿಮಾಗಳು ಕಡ್ಡಾಯವಾಗಿ ಅಳವಡಿಸಿಕೊಳ್ಳುತ್ತವೆ. ಕೆಲವು ಸಿನಿಮಾಗಳಿಗೆ ಒಟಿಟಿಗಳೇ ಕ್ಯಾಪ್ಷನ್ ನೀಡುತ್ತವೆ. ಆದರೆ ಭಾರತೀಯ ಸಿನಿಮಾಗಳು ಆಡಿಯೋ ಡಿಸ್ಕ್ರಿಪ್ಷನ್ಗಳು ಸೇರಿಸುವುದು ಕಡಿಮೆ. ಆದರೆ ಇನ್ನು ಮುಂದೆ ಇದೂ ಸಹ ಕಡ್ಡಾಯ ಆಗಲಿದೆ. ಅಲ್ಲದೆ, ಸಬ್ಟೈಟಲ್ಗಳ ಗಾತ್ರದ ಬಗ್ಗೆಯೂ ಸಿಬಿಎಫ್ಸಿ ನಿಯಮ ಮಾಡಿದ್ದು, ಇದು ಕೆಲವು ನಿರ್ದೇಶಕರ ಅಸಮಾಧಾನಕ್ಕೆ ಕಾರಣವಾಗಿದೆ.
ನವದೆಹಲಿ, ಮಾರ್ಚ್ 12: ಭಾರತದ ರೀಟೇಲ್ ಹಣದುಬ್ಬರ (Retail Inflation) ಫೆಬ್ರುವರಿಯಲ್ಲಿ ಶೇ. 3.21ರಷ್ಟಿರುವುದು ದಾಖಲಾಗಿದೆ. ಜನವರಿಯಲ್ಲಿ ಹಣದುಬ್ಬರ ಶೇ. 2.74ರಷ್ಟಿತ್ತು. ಫೆಬ್ರುವರಿಯಲ್ಲಿ ಸ್ವಲ್ಪ ಮಟ್ಟಿಗೆ ಬೆಲೆ ಏರಿಕೆ ಆಗಿದೆ. ಶೇ. 3.2 ದರವು ಆರ್ಬಿಐನ ಶೇ. 4ರ ಹಣದುಬ್ಬರ ಮಿತಿಯ ಗುರಿಯೊಳಗೆಯೇ ಇದೆ. ಗ್ರಾಮೀಣ ಭಾಗದಲ್ಲಿ ಫೆಬ್ರುವರಿಯಲ್ಲಿ ಹಣದುಬ್ಬರ ಶೇ. 3.37 ಇದ್ದರೆ, ನಗರ ಭಾಗದಲ್ಲಿ ಅದು ಶೇ. 3.02ರಷ್ಟಿದೆ.
ಗ್ರಾಹಕ ಆಹಾರ ಬೆಲೆ ಅನುಸೂಚಿ ಆಧಾರಿತವಾದ ಹಣದುಬ್ಬರವು ಜನವರಿಯಲ್ಲಿ ಶೇ. 2.13ರಷ್ಟಿತ್ತು. ಫೆಬ್ರುವರಿಯಲ್ಲಿ ಅದು ಶೇ. 3.47ರಷ್ಟಾಗಿದೆ. ಆಹಾರ ಹಣದುಬ್ಬರದಲ್ಲಿ ಗ್ರಾಮ ಮತ್ತು ನಗರ ಭಾಗಗಳಲ್ಲಿ ಅಷ್ಟೇನೂ ವ್ಯತ್ಯಾಸ ಇಲ್ಲ.
ಫೆಬ್ರುವರಿಯಲ್ಲಿ ಅಧಿಕ ಹಣದುಬ್ಬರ ಕಂಡಿರುವ ಪ್ರಮುಖ ಸರಕುಗಳೆಂದರೆ ಚಿನ್ನ, ಬೆಳ್ಳಿ ಇತ್ಯಾದಿ ಅಮೂಲ್ಯ ವಸ್ತುಗಳು, ಹಾಗೂ ಕೆಲ ತರಕಾರಿಗಳು. ಬೆಳ್ಳಿ ಬೆಲೆ ಶೇ. 161ರಷ್ಟು ಹೆಚ್ಚಿದೆ. ಚಿನ್ನ, ಬೆಳ್ಳಿ, ಪ್ಲಾಟಿನಂ ಆಭರಣಗಳ ಬೆಲೆ ಶೇ. 48ರಷ್ಟು ಹೆಚ್ಚಿದೆ. ಕೊಬ್ಬರಿ ಬೆಲೆ ಶೇ. 46, ಟೊಮೆಟೋ ಶೇ. 45 ಮತ್ತು ಕೋಸು ಶೇ. 44ರಷ್ಟು ಬೆಲೆ ಹೆಚ್ಚಳ ಹೊಂದಿವೆ.
ಈ ಮೇಲಿನ ವಸ್ತುಗಳ ಬೆಲೆ ಏರಿಕೆಯು ವರ್ಷದ ಹಿಂದಿನ ಇದೇ ಅವಧಿಯಲ್ಲಿ ಇದ್ದ ಬೆಲೆಗೆ ಹೋಲಿಸಿದ್ದಾಗಿದೆ. ಜನವರಿಯ ಬೆಲೆಗೆ ಹೋಲಿಸಿದರೆ ಟೊಮೆಟೋ, ಬಟಾಣಿ, ಕೋಸು ತರಕಾರಿಗಳ ಬೆಲೆ ಶೇ. 10ಕ್ಕಿಂತಲೂ ಹೆಚ್ಚು ತಗ್ಗಿದೆ. ಅತಿಹೆಚ್ಚು ಹಣದುಬ್ಬರ ಹೊಂದಿರುವ ಐದು ರಾಜ್ಯಗಳಲ್ಲಿ ತೆಲಂಗಾಣ, ರಾಜಸ್ಥಾನ, ಕೇರಳ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ಇವೆ.
ಹಣದುಬ್ಬರ ಎಣಿಕೆ ಮಾಡುವ ಕೆಲ ಲೆಕ್ಕಾಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಅದರಲ್ಲಿ ಪ್ರಮುಖವಾದುದು ಬೇಸ್ ವರ್ಷವನ್ನು 2012ರ ಬದಲು 2024 ಅನ್ನು ಮಾಡಿಕೊಳ್ಳಲಾಗಿದೆ. ಹಾಗೆಯೇ, ಬೆಲೆ ಏರಿಕೆಗೆ ಪರಿಗಣಿಸಲಾಗುವ ಸರಕುಗಳ ಸಂಖ್ಯೆಯನ್ನು 299ರಿಂದ 358ಕ್ಕೆ ಏರಿಸಲಾಗಿದೆ. ಹೊಸ ಲೆಕ್ಕಾಚಾರದಲ್ಲಿ ಹಣದುಬ್ಬರವನ್ನು ಜನವರಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಈಗ ಫೆಬ್ರುವರಿಯ ದತ್ತಾಂಶ ಬಿಡುಗಡೆ ಆಗಿದೆ.
ನೆಲಮಂಗಲ, ಮಾರ್ಚ್ 12: ಸಂಪ್ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಅಣ್ಣಯ್ಯ ಮತ್ತು ಋತು ದಂಪತಿಯ ಎರಡೂವರೆ ವರ್ಷದ ಚಿರಾಗ್ ಮೃತ ಮಗು. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಮೃತ ಮಗುವನ್ನು ನೆಲಮಂಗಲ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ.
ನಡೆದಿದ್ದೇನು?
ಬೆಂಗಳೂರು ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಡರಹಳ್ಳಿಯ ನಿವಾಸಿಗಳಾದ ಅಣ್ಣಯ್ಯ ಮತ್ತು ಋತು ದಂಪತಿ ನಿನ್ನೆ ಮದುವೆ ಹಿನ್ನೆಲೆ ಕುಟುಂಬಸ್ಥರು ರೆಡಿಯಾಗುತ್ತಿದ್ದರು. ಚಿರಾಗ್ನಿಗೆ ಕೂಡ ಸ್ನಾನ ಮಾಡಿಸಿ ತಾಯಿ ರೆಡಿ ಮಾಡಿಸಿದ್ದರು. ಈ ವೇಳೆ ಅಣ್ಣಯ್ಯ ಕಾರ್ ವಾಶ್ ಮಾಡುತ್ತಿದ್ದರು. ಸಂಪ್ ಕ್ಯಾಪ್ ಓಪನ್ ಮಾಡಿ ನೀರು ತೆಗೆದುಕೊಂಡಿದ್ದಾರೆ. ಕಾರ್ ವಾಶ್ ಮಾಡಿದ ನಂತರ ಕ್ಯಾಪ್ ಮುಚ್ಚಲು ಮರೆತ ಅಣ್ಣಯ್ಯ ಮನೆ ಒಳಗೆ ಹೋಗಿದ್ದಾರೆ. ವಾಪಸ್ ಬಂದು ನೋಡುವಷ್ಟರಲ್ಲಿ ಚಿರಾಗ್ ಸಂಪ್ನಲ್ಲಿ ಬಿದ್ದು ಮೃತಪಟ್ಟಿದ್ದ.
ಸ್ನೇಹಿತನಿಗೆ ಮೆಸೇಜ್ ಮಾಡಿ ನೇಣಿಗೆ ಶರಣಾದ ಯುವಕ
ಆತ 19ರ ಹದಿಹರೆಯದ ಯುವಕ, ಹುಟ್ಟು ಕೋಪಿಷ್ಟ. ಓದಿಗೆ ವಿದಾಯ ಹೇಳಿ ಜೀವನಕ್ಕಾಗಿ ಡ್ರೈವರ್ ಕೆಲಸ ಮಾಡುತ್ತಿದ್ದ. ತಂದೆ ಕಳೆದುಕೊಂಡಿದ್ದ ಆತ ಮನೆಯ ಜವಾಬ್ದಾರಿ ಹೊತ್ತಿದ್ದ. ತನ್ನ ತಾಯಿಗೆ ನೆರವಾಗಲು ಕೆಲಸಕ್ಕೆ ತೆರಳುತ್ತಿದ್ದವನು ನಿನ್ನೆ ಸಂಜೆ ಅದೇನಾಯ್ತೋ ಗೊತ್ತಿಲ್ಲ ನೇಣಿಗೆ ಶರಣಾಗಿ ಬಿಟ್ಟಿದ್ದಾನೆ.
ಚೇತನ್ (19) ಆತ್ಮಹತ್ಯೆ ಮಾಡಿಕೊಂಡ ಹುಡುಗ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾವ್ಯಾಪ್ತಿ ಗೌಡಹಳ್ಳಿಯ ನಿವಾಸಿ. ಹಲವು ವರ್ಷಗಳ ಹಿಂದೆ ತನ್ನ ತಂದೆಯನ್ನ ಕಳೆದುಕೊಂಡಿದ್ದ. ಎಸ್ಎಸ್ಎಲ್ಸಿ ಮುಗಿಸಿ ಪಿಯುಸಿ ಓದುತ್ತಿದ್ದವನು ದ್ವಿತಿಯ ಪಿಯುಸಿ ಮುಗಿಸಿ ಅರ್ಧಕ್ಕೆ ಬಿಟ್ಟಿದ್ದ. ಮನೆಯಲ್ಲಿದ್ದವನು ತಾಯಿಗೆ ನೆರವಾಗಲು ಪರಿಶ್ರಮ ಅಕಾಡೆಮಿಯಲ್ಲಿ ಕಾಲೇಜು ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ.
ಎಂದಿನಂತೆ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದ ಚೇತನ್, ತಾಯಿ ಹಾಲು ಕರೆಯಲು ಹಸುವಿನ ಶೆಡ್ಗೆ ಹೋಗಿದ್ದಾರೆ. ಈ ವೇಳೆ ಅದೇನಾಯ್ತೋ ಗೊತ್ತಿಲ್ಲ ಸ್ನೇಹಿತನಿಗೆ ನಾನು ಮನೆ ಬಿಟ್ಟು ಹೋಗ್ತಿನಿ, ಇಲ್ಲವಾದರೆ ಸಾಯ್ತೀನಿ, ನೀನು ಮನೆ ಬಳಿ ಬಾ ಎಂದು ಮೆಸೇಜ್ ಮಾಡಿದ್ದ. ಈ ವೇಳೆ ಸ್ನೇಹಿತ ಮನೆ ಬಳಿ ಬರುವಷ್ಟರಲ್ಲಿ ಚೇತನ್ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಸದ್ಯ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಆದರೆ ಚೇತನ್ ಸಾವಿಗೆ ಅಸಲಿ ಕಾರಣ ಏನು ಎಂಬುದು ನಿಗೂಢವಾಗಿದೆ.
19ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಸಿಸಿಐ ನಿನ್ನೆಯಷ್ಟೆ ಈ ಮಿಲಿಯನ್ ಡಾಲರ್ ಟೂರ್ನಿಯ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. 15 ದಿನಗಳ ಕಾಲ ನಡೆಯಲಿರುವ ಈ 20 ಪಂದ್ಯಗಳಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ 4 ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಉದ್ಘಾಟನಾ ಪಂದ್ಯವೂ ಸೇರಿದೆ. ಹಾಗಿದ್ದರೆ, ಆರ್ಸಿಬಿ ಇದುವರೆಗೆ ಎಷ್ಟು ಉದ್ಘಾಟನಾ ಪಂದ್ಯಗಳನ್ನಾಡಿದೆ? ಅದರಲ್ಲಿ ತಂಡದ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..
ಆರ್ಸಿಬಿ ಹಾಲಿ ಚಾಂಪಿಯನ್ ಆಗಿರುವ ಕಾರಣ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಚಾಂಪಿಯನ್ ಆಗದ ಹೊರತಾಗಿಯೂ ಆರ್ಸಿಬಿ ಈ ಹಿಂದೆ ಉದ್ಘಾಟನಾ ಪಂದ್ಯಗಳನ್ನು ಆಡಿದೆ. ಮುಗಿದಿರುವ 18 ಆವೃತ್ತಿಗಳಲ್ಲಿ ಆರ್ಸಿಬಿ ಇದುವರೆಗೆ 6 ಬಾರಿ ಉದ್ಘಾಟನಾ ಪಂದ್ಯವನ್ನು ಆಡಿದೆ. ಆದರೆ ಈ ಉದ್ಘಾಟನಾ ಪಂದ್ಯಗಳಲ್ಲಿ ಆರ್ಸಿಬಿ ಗೆದ್ದಿದ್ದಕ್ಕಿಂತ ಸೋತಿದ್ದೆ ಹೆಚ್ಚು. ಕೇವಲ 2 ಪಂದ್ಯಗಳನ್ನು ಗೆದ್ದಿರುವ ಆರ್ಸಿಬಿ, ಉಳಿದ 4 ಪಂದ್ಯಗಳಲ್ಲಿ ಸೋತಿದೆ.
ಆರ್ಸಿಬಿ ಮೊಟ್ಟ ಮೊದಲ ಬಾರಿಗೆ ಮೊದಲ ಆವೃತ್ತಿಯ ಐಪಿಎಲ್ನ ಮೊದಲ ಪಂದ್ಯದಲ್ಲೇ ಕಣಕ್ಕಿಳಿದಿತ್ತು. ಕೆಕೆಆರ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಆರ್ಸಿಬಿ 140 ರನ್ಗಳಿಂದ ಸೋತಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೆಕೆಆರ್ 222 ರನ್ ಬಾರಿಸಿದರೆ, ಗುರಿ ಬೆನ್ನಟ್ಟಿದ ಆರ್ಸಿಬಿ ಕೇವಲ 82 ರನ್ಗಳಿಗೆ ಆಲೌಟ್ ಆಗಿತ್ತು.
ಆ ಬಳಿಕ 2017 ರ ಆವೃತ್ತಿಯಲ್ಲಿ ಆರ್ಸಿಬಿ ಉದ್ಘಾಟನಾ ಪಂದ್ಯವನ್ನಾಡಿತ್ತು. ಆ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿದ್ದ ಆರ್ಸಿಬಿ 35 ರನ್ಗಳಿಂದ ಸೋತಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ರೈಸರ್ಸ್ ಹೈದರಾಬಾದ್ 207 ರನ್ ಬಾರಿಸಿದರೆ, ಆರ್ಸಿಬಿ 172 ರನ್ ಕಲೆಹಾಕಲಷ್ಟೇ ಶಕ್ತವಾಗಿತ್ತು.
2019 ರಲ್ಲಿ ಮೂರನೇ ಬಾರಿಗೆ ಉದ್ಘಾಟನಾ ಪಂದ್ಯವನ್ನಾಡಿದ್ದ ಆರ್ಸಿಬಿ, ಸಿಎಸ್ಕೆ ವಿರುದ್ಧ 7 ವಿಕೆಟ್ಗಳಿಂದ ಸೋತಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ಸಿಬಿ ಕೇವಲ 70 ರನ್ಗಳಿಗೆ ಆಲೌಟ್ ಆದರೆ, ಈ ಗುರಿ ಬೆನ್ನಟ್ಟಿದ ಸಿಎಸ್ಕೆ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತ್ತು.
2021 ರ ಆವೃತ್ತಿಯಲ್ಲಿ ಉದ್ಘಾಟನಾ ಪಂದ್ಯವನ್ನಾಡಿದ್ದ ಆರ್ಸಿಬಿ, ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ಗಳಿಂದ ಗೆಲುವು ಸಾಧಿಸಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ 159 ರನ್ ಬಾರಿಸಿತು. ಈ ಗುರಿ ಬೆನ್ನಟ್ಟಿದ ಆರ್ಸಿಬಿ ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿತ್ತು.
2024 ರ ಐಪಿಎಲ್ ಆವೃತ್ತಿಯಲ್ಲಿ ಆರ್ಸಿಬಿ ಹಾಗೂ ಸಿಎಸ್ಕೆ ನಡುವೆ ಉದ್ಘಾಟನಾ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ಸಿಬಿ 173 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸಿಎಸ್ಕೆ 6 ವಿಕೆಟ್ಗಳ ಜಯ ಸಾಧಿಸಿತ್ತು.
ಇನ್ನು 2025 ರ ಆವೃತ್ತಿಯಲ್ಲೂ ಆರ್ಸಿಬಿ, ಕೆಕೆಆರ್ ವಿರುದ್ಧ ಉದ್ಘಾಟನಾ ಪಂದ್ಯವನ್ನಾಡಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೆಕೆಆರ್ 174 ರನ್ ಬಾರಿಸಿದರೆ, ಗುರಿ ಬೆನ್ನಟ್ಟಿದ ಆರ್ಸಿಬಿ 16.2 ಓವರ್ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತ್ತು.
ದಳಪತಿ ವಿಜಯ್ (Thalapathy Vijay) ಪತ್ನಿ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದು, ನಟ ವಿಜಯ್ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ, ಇದೇ ಆಧಾರದ ಮೇಲೆ ತಮಗೆ ಜೀವನಾಂಶದ ಜೊತೆಗೆ ವಿಚ್ಛೇದನ ಕೊಡಿಸಬೇಕು ಎಂದು ನ್ಯಾಯಾಲಯದಲ್ಲಿ ಕೇಳಿಕೊಂಡಿದ್ದಾರೆ. ಅದರ ಬೆನ್ನಲ್ಲೆ, ವಿಜಯ್ ಸಹ ನಟಿ ತ್ರಿಷಾ ಜೊತೆಗೆ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ತಮ್ಮ ವಿಚ್ಛೇದನ ವಿಷಯವನ್ನು ಖಾತ್ರಿ ಪಡಿಸಿದ್ದಾರೆ. ವಿಜಯ್ ವಿಚ್ಛೇದನ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಾಟ್ ಟಾಪಿಕ್ ಆಗಿದೆ. ಹೀಗಿರುವಾಗಲೇ ವಿಜಯ್ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ವಿಪರೀತ ಟ್ರೋಲ್ ಮಾಡಲಾಗುತ್ತಿದೆ.
ವಿಜಯ್ ಅವರ ಹಳೆಯ ಸಿನಿಮಾ ಒಂದರ ವಿಡಿಯೋ ತುಣುಕೊಂದನ್ನು ವೈರಲ್ ಮಾಡಲಾಗಿದ್ದು, ವಿಡಿಯೋನಲ್ಲಿ ವಿಜಯ್, ವಿಚ್ಛೇದನವನ್ನು ವಿರೋಧಿಸಿ ಮಾತನಾಡಿದ್ದಾರೆ. ವಿಚ್ಛೇದನ ಪಡೆದುಕೊಳ್ಳುತ್ತಿರುವ ಮಹಿಳೆಯನ್ನು ಟೀಕಿಸಿ ಆಕೆಗೆ ಬುದ್ಧಿ ಹೇಳುವ ಸೀನ್ ಅದಾಗಿದೆ. ಇದೀಗ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿರುವ ನೆಟ್ಟಿಗರು, ವಿಜಯ್, ವಿಚ್ಛೇದನದ ಬಗ್ಗೆ ಹೀಗೆಲ್ಲ ಹೇಳಿ, ಈಗ ಅವರೇ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ವಿಜಯ್ ಅವರ ಹಳೆ ಸಿನಿಮಾದ ದೃಶ್ಯ ಇದಾಗಿದ್ದು, ವಿದೇಶದಲ್ಲಿ ನಡೆಯುವ ಆ ದೃಶ್ಯದಲ್ಲಿ ನಾಯಕಿ, ತನ್ನ ಗೆಳತಿಯೊಂದಿಗೆ ಮಾತನಾಡುತ್ತಿರುತ್ತಾಳೆ, ಗೆಳತಿ, ತಾನು ವಿಚ್ಛೇದನ ಪಡೆದಿದ್ದು, ಈಗ ಮತ್ತೊಂದು ಮದುವೆ ಆಗುತ್ತಿದ್ದೇನೆ ಎನ್ನುತ್ತಾಳೆ ಆಗ ನಾಯಕಿ, ‘ಮುಂದಿನ ಜೀವನಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸುತ್ತಾಳೆ. ಆಗ ಅಲ್ಲಿಯೇ ಇದ್ದ ನಾಯಕ ವಿಜಯ್, ನಾಯಕಿಯ ಗೆಳತಿಯನ್ನುದ್ದೇಶಿಸಿ, ‘ನೀವು ಭಾರತೀಯರು ತಾನೆ?’ ಎನ್ನುತ್ತಾರೆ. ಅದಕ್ಕೆ ಗೆಳತಿ, ‘ಹೌದು, ಆದರೆ ನಾವು ವಿದೇಶದಲ್ಲಿ ಸೆಟಲ್ ಆಗಿ ಹಲವು ವರ್ಷಗಳೇ ಆಯ್ತು’ ಎನ್ನುತ್ತಾರೆ. ಆಗ ವಿಜಯ್ ತಮ್ಮ ಭಾಷಣ ಆರಂಭಿಸುತ್ತಾರೆ.
‘ವಿದೇಶದಲ್ಲಿ ಸೆಟಲ್ ಆಗಿರುವುದಕ್ಕೆ ನೀವು ನಮ್ಮ ಭಾರತೀಯ ಸಂಸ್ಕೃತಿಯನ್ನು ಮರೆತು, ಪ್ರೀತಿ ಮತ್ತು ಬಾಂಧವ್ಯದ ಬಗ್ಗೆ ಬಹಳ ಕೀಳಾಗಿ ಮಾತನಾಡುತ್ತಿದ್ದೀರಿ. ಮಹಿಳೆ ಅಥವಾ ಪುರುಷನ ಜೀವನದಲ್ಲಿ ಪ್ರೀತಿ ಮತ್ತು ಮದುವೆ ಕೇವಲ ಒಂದು ಬಾರಿ ಆಗಬೇಕು. ಮದುವೆ ಆದವನು ಒಳ್ಳೆಯವನೋ, ಕೆಟ್ಟವನೊ ಜೀವನ ಪರ್ಯಂತ ಅವನ ಜೊತೆಯಲ್ಲಿಯೇ ಇರಬೇಕು ಅದೇ ತಮಿಳು ಸಂಸ್ಕೃತಿ. ನೀವು ಒಬ್ಬ ತಮಿಳು ಮಹಿಳೆಯಾಗಿ, ವಿಚ್ಛೇದನ ನೀಡಿ ಇನ್ನೊಬ್ಬನ ಮದುವೆ ಆಗುವುದಕ್ಕೆ ನಾಚಿಕೆ ಆಗುವುದಿಲ್ಲವೇ’ ಎನ್ನುತ್ತಾರೆ ವಿಜಯ್.
ಅಸಲಿಗೆ ವಿಜಯ್ ಆ ಸಿನಿಮಾದಲ್ಲಿ ಹೇಳಿದ್ದಕ್ಕೆ ವಿರುದ್ಧವೇ ಮಾಡುತ್ತಿದ್ದಾರೆ. ಪ್ರೀತಿ, ಮದುವೆ ಒಂದೇ ಬಾರಿ ಆಗಬೇಕು ಎಂದು ಹೇಳಿದ್ದ ವಿಜಯ್ ಇದೀಗ ಮದುವೆ ಆಗಿ, ಮಕ್ಕಳಾದ ಮೇಲೆ ನಟಿ ತ್ರಿಷಾ ಅವರನ್ನು ಪ್ರೀತಿಸಿದ್ದಾರೆ. ಈಗ ವಿಚ್ಛೇದನ ಆದ ಬಳಿಕ ಅವರೊಂದಿಗೆ ಮದುವೆ ಸಹ ಆಗಲಿದ್ದಾರೆ. ಇದು ತಮಿಳು ಸಂಸ್ಕೃತಿ ಅಲ್ಲ ಎಂದಿದ್ದರು. ಅದು ನಿಜವೇ ಆಗಿದ್ದರೆ ಈಗ ವಿಜಯ್ ಅವರೇ ಆ ಸಂಸ್ಕೃತಿಯ ವಿರುದ್ಧ ಹೊರಟಿದ್ದಾರೆ.
ನವದೆಹಲಿ, ಮಾರ್ಚ್ 12: ಭಾರತೀಯ ಹಡಗುಗಳ ಸುರಕ್ಷಿತ ಸಾಗಣೆ, ಇಂಧನ ಭದ್ರತೆ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಇರಾನಿನ ವಿದೇಶಾಂಗ ಸಚಿವರೊಂದಿಗೆ ಮೂರು ಕರೆಗಳನ್ನು ನಡೆಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನಿನ ಸಚಿವರು ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮೂರು ಸುತ್ತಿನ ಮಾತುಕತೆ ನಡೆಸಿದ್ದಾರೆ. ಭಾರತಕ್ಕೆ ಹೋಗುವ ಹಡಗುಗಳ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಭಾರತದ ಧ್ವಜ ಹೊತ್ತ ತೈಲ ಟ್ಯಾಂಕರ್ಗಳು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಇರಾನ್ ಅನುಮತಿ ನೀಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಈ ವಿಷಯದ ಬಗ್ಗೆ ಹೆಚ್ಚಿನ ಮಾತನಾಡಲು ಇದು ಸರಿಯಾದ ಸಮಯವಲ್ಲ ಎಂದು ಹೇಳಿದರು. “ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ಇರಾನ್ ದೇಶದ ವಿದೇಶಾಂಗ ಸಚಿವರು ಇತ್ತೀಚಿನ ದಿನಗಳಲ್ಲಿ ಮೂರು ಬಾರಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಹಡಗುಗಳ ಸುರಕ್ಷತೆ ಮತ್ತು ಭಾರತದ ಇಂಧನ ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಅದನ್ನು ಮೀರಿ, ನಾನು ಏನೂ ಹೇಳುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.
ಯುದ್ಧಪೀಡಿತ ಪ್ರದೇಶದಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಕುರಿತು ಮಾತನಾಡಿದ ರಣಧೀರ್ ಜೈಸ್ವಾಲ್, ಮನೆಗೆ ಮರಳಲು ಬಯಸುವ ಜನರಿಗೆ ವಿದೇಶಾಂಗ ಸಚಿವಾಲಯ ಸಹಾಯ ಮಾಡುತ್ತಿದೆ. ಇರಾನ್ನಿಂದ ಹಲವಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇರಾನ್ನಲ್ಲಿ ಸುಮಾರು 9,000 ಭಾರತೀಯ ಪ್ರಜೆಗಳಿದ್ದಾರೆ. ಈ 9,000 ಭಾರತೀಯ ಪ್ರಜೆಗಳಲ್ಲಿ ವಿದ್ಯಾರ್ಥಿಗಳು, ನಾವಿಕರು, ವ್ಯಾಪಾರಸ್ಥರು, ವೃತ್ತಿಪರರು ಮತ್ತು ಕೆಲವು ಯಾತ್ರಿಕರು ಸೇರಿದ್ದಾರೆ. ಹಲವಾರು ಭಾರತೀಯ ಪ್ರಜೆಗಳು, ಅದರಲ್ಲೂ ಹೆಚ್ಚಾಗಿ ವಿದ್ಯಾರ್ಥಿಗಳು ಆ ದೇಶವನ್ನು ತೊರೆದು ಮನೆಗೆ ತಲುಪಿದ್ದಾರೆ. ಟೆಹ್ರಾನ್ನಲ್ಲಿ ನೆಲೆಸಿದ್ದ ವಿದ್ಯಾರ್ಥಿಗಳು ಮತ್ತು ಯಾತ್ರಿಕರು ಸೇರಿದಂತೆ ಹಲವಾರು ಭಾರತೀಯ ಪ್ರಜೆಗಳನ್ನು ನಾವು ದೇಶದ ಇತರ ಸುರಕ್ಷಿತ ಸ್ಥಳಗಳು ಮತ್ತು ನಗರಗಳಿಗೆ ಸ್ಥಳಾಂತರಿಸಿದ್ದೇವೆ. ಅಜೆರ್ಬೈಜಾನ್ ಮತ್ತು ಅರ್ಮೇನಿಯಾಗೆ ಪ್ರಯಾಣಿಸಲು ಮತ್ತು ಅಲ್ಲಿಂದ ಮನೆಗೆ ಮರಳಲು ವಾಣಿಜ್ಯ ವಿಮಾನಗಳನ್ನು ತೆರಳಲು ಬಯಸುವ ಭಾರತೀಯ ಪ್ರಜೆಗಳಿಗೆ ನಾವು ಸಹಾಯ ಮಾಡುತ್ತಿದ್ದೇವೆ. ನಾವು ಅವರಿಗೆ ವೀಸಾಗಳ ವ್ಯವಸ್ಥೆ ಮಾಡುತ್ತಿದ್ದೇವೆ. ಭೂ ಗಡಿ ದಾಟುವಿಕೆಯಲ್ಲೂ ನಾವು ಅವರಿಗೆ ಸಹಾಯ ಮಾಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
#WATCH | Delhi | MEA spokesperson Randhir Jaiswal says, “External Affairs Minister Dr S Jaishankar and Foreign Minister of Iran have had three conversations in the recent days. The last one discussed issues pertaining to the safety of shipping and India’s energy security. Beyond… pic.twitter.com/xkwCJ1nq1U
“ಇರಾನ್ನಿಂದ ಭೂ ಗಡಿಗಳ ಮೂಲಕ ಹೊರಹೋಗಲು ಬಯಸುವ ಎಲ್ಲಾ ಭಾರತೀಯ ಪ್ರಜೆಗಳಿಗೆ ನಾನು ಸಲಹೆ ನೀಡುವುದೇನೆಂದರೆ ಅವರು ನಮ್ಮ ರಾಯಭಾರ ಕಚೇರಿ ನೀಡಿರುವ ಸಲಹೆಯನ್ನು ಪಾಲಿಸಬೇಕು” ಎಂದು ಅವರು ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ