Headlines

Video: ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ಹರಸಾಹಸ

ಕೆಲವರಂತೂ ಎಂತೆಂಥಾ ಸಾಹಸಗಳನ್ನು ಮಾಡ್ತಾರಪ್ಪ, ರೈಲಿನ ಮೆಟ್ಟಿಲುಗಳ ಮೇಲೆ ನಿಲ್ಲುವುದು, ರೈಲಿನ ಮೇಲೆ ಹತ್ತಿ ಅಲ್ಲಿ ವಿಡಿಯೋ ಮಾಡುವುದು, ದುಸ್ಸಾಹಸಗಳೇ ಹೆಚ್ಚು. ಆದರೆ ಈ ವಿಡಿಯೋ ಅಂತಾ ಅಪಾಯಕಾರಿಸಾಹಸವೇನಲ್ಲ. ರೈಲಿನ ಕಿಟಕಿಯಿಂದ ಎಳನೀರು ಒಳಗೆಳೆಯಲು ವ್ಯಕ್ತಿಯೊಬ್ಬ ಹರಸಾಹಸಪಟ್ಟಿರುವ ವಿಡಿಯೋ ವೈರಲ್ ಆಗಿದೆ. ಸೀಟಿನಲ್ಲಿ ವ್ಯಕ್ತಿ ಮತ್ತೆ ಅವರ ಪತ್ನಿ ಕುಳಿತಿದ್ದಾರೆ, ರೈಲಿನ ಕಿಟಕಿಯ ಹೊರಭಾಗದಿಂದ ಸ್ಟ್ರಾ ಹಾಕಿರುವ ಎಳನೀರನ್ನು ಕಿಟಕಿಯ ಸರಳುಗಳ ಮಧ್ಯೆ ಒಳಗೆಳೆದುಕೊಳ್ಳುವ ಭಾರಿ ಸಾಹಸ ಮಾಡಿ ಗೆದ್ದಿದ್ದಾರೆ. ಆದರೆ ಸ್ಟ್ರಾ ಇದ್ದ ಕಾರಣ ಅಲ್ಲಿಂದಲೇ…

Read More

ಪ್ರತ್ಯೇಕ ರಸ್ತೆ ಅಪಘಾತ: ವೈದ್ಯ ವಿದ್ಯಾರ್ಥಿನಿ ಸೇರಿ ಮೂವರು ಸಾವು; ಮತ್ತೋರ್ವಳ ಸ್ಥಿತಿ ಗಂಭೀರ

ಯಾದಗಿರಿ/ಬೆಂಗಳೂರು, ಮಾರ್ಚ್​​ 12: ರಾಜ್ಯದ ಯಾದಗಿರಿ ಮತ್ತು ಬೆಂಗಳೂರಿನಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ವೈದ್ಯ ವಿದ್ಯಾರ್ಥಿನಿ ಸೇರಿ ಮೂವರು ಮೃತಪಟ್ಟಿದ್ದು, ಮತ್ತೋರ್ವಳು ಗಂಭೀರ ಗಾಯಗೊಂಡಿದ್ದಾಳೆ. ಯಾದಗಿರಿಯಲ್ಲಿ ಕ್ರೂಸರ್​ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್​​ ಸವಾರರು ಮೃತಪಟ್ಟಿದ್ದರೆ, ಇತ್ತ ಬೆಂಗಳೂರಲ್ಲಿ ಟಿಪ್ಪರ್​ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಓರ್ವ ಯುವತಿ ಮೃತಪಟ್ಟಿದ್ದಾಳೆ. ಸಹ ಸವಾರಳ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಗಳಿಗೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬೈಕ್​​ಗೆ ಡಿಕ್ಕಿಯಾಗಿ ಕ್ರೂಸರ್​​…

Read More

Ugadi 2026: ಈ ವರ್ಷ ಯುಗಾದಿ ಹಬ್ಬ ಯಾವಾಗ ? ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು?

ಹಿಂದೂ ಧರ್ಮದ ನಂಬಿಕೆಯಂತೆ ಯುಗಾದಿಯು ಸೃಷ್ಟಿಯ ಆರಂಭದ ದಿನ ಹಾಗೂ ಹೊಸ ವರ್ಷದ ಮುನ್ನುಡಿ. ಈ ಬಾರಿ ಅಂದರೆ 2026ರಲ್ಲಿ ಯುಗಾದಿ ಹಬ್ಬವನ್ನು ಮಾರ್ಚ್ 19, ಗುರುವಾರದಂದು ಆಚರಿಸಲಾಗುತ್ತಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಬಹುತೇಕ ಭಾಗಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತದೆ. ಅಂದು ಮುಂಜಾನೆಯ ಶುಭ ಮುಹೂರ್ತಗಳಾದ ಬೆಳಿಗ್ಗೆ 5:00 ರಿಂದ 7:30 ಅಥವಾ 9:00 ರಿಂದ 11:30 ರ ಅವಧಿಯಲ್ಲಿ ದೈವಿಕ ಆರಾಧನೆಗೆ ಅತ್ಯಂತ ಪ್ರಶಸ್ತವಾದ ಸಮಯವಾಗಿದೆ. ಯುಗಾದಿ ಹಬ್ಬದಂದು ಏನು ಮಾಡಬೇಕು? ಈ…

Read More

ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷದ ಜೈಲು ಶಿಕ್ಷೆ ಭೀತಿ

ಟೀಮ್ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿದೆ.  ಮಾರ್ಚ್ 8 ರಂದು  ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧ ಗೆಲುವು ದಾಖಲಿಸಿತ್ತು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜವನ್ನು ಬಳಸಿದ ರೀತಿ ವಿವಾದಕ್ಕೆ ಕಾರಣವಾಗಿದೆ. ದೂರು ನೀಡಿದ್ದು ಯಾರು? ಫೈನಲ್​ ಪಂದ್ಯದ ಬಳಿಕ ಹಾರ್ದಿಕ್ ಪಾಂಡ್ಯ ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ್ದಾರೆ. ಈ ಹಿನ್ನಲೆಯಲ್ಲಿ  ಪುಣೆಯ…

Read More

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಮಾದರಿಯ ರೋಗದ ಸೋಂಕು! ಬಚಾವಾಗೋದು ಹೇಗೆ?

ಬೆಂಗಳೂರು, ಮಾರ್ಚ್​ 12: ರಾಜ್ಯದಲ್ಲಿ ಲೆಪ್ಟೋಸ್ಪೈರೋಸಿಸ್ (Leptospirosis) ಸೋಂಕಿನ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿವೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸುಮಾರು 30 ಮಂದಿ ಮೃತಪಟ್ಟಿದ್ದಾರೆ. ಪ್ರತಿ ವರ್ಷವೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಎಬ್ಬಿಸಿದೆ. ವರ್ಷವಾರು ಅಂಕಿಅಂಶಗಳನ್ನು ಗಮನಿಸಿದರೆ 2020ರಲ್ಲಿ 544 ಪ್ರಕರಣಗಳು ದಾಖಲಾಗಿದ್ದರೆ, 2021ರಲ್ಲಿ 906 ಪ್ರಕರಣಗಳು ಕಂಡುಬಂದಿವೆ. ಬಳಿಕ 2022ರಲ್ಲಿ 3,174 ಪ್ರಕರಣಗಳು, 2023ರಲ್ಲಿ 5,404 ಪ್ರಕರಣಗಳು…

Read More

ಕೌಟಿಂಬಿಕ ಕಲಹ: ಬೆಂಕಿ ಹಚ್ಚಿಕೊಂಡು ರಾಮನಗರದಲ್ಲಿ 5 ತಿಂಗಳ ಗರ್ಭಿಣಿ ಆತ್ಮಹತ್ಯೆ

ರಾಮನಗರ, ಮಾರ್ಚ್​​ 12: ಕೌಟಿಂಬಿಕ ಕಲಹ ಹಿನ್ನೆಲೆ ಐದು ತಿಂಗಳ ಗರ್ಭಿಣಿ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯ ರೂಮ್​​ನಲ್ಲಿಯೇ ನಯನಾ (19) ಮೃತಪಟ್ಟಿದ್ದಾರೆ. ಕಳೆದ 9 ತಿಂಗಳ ಹಿಂದೆ ಸುನೀಲ್​​ ಜೊತೆ ನಯನಾ ಅವರ ವಿವಾಹವಾಗಿತ್ತು ಎನ್ನಲಾಗಿದೆ. ಪತಿ ಸುನೀಲ್, ಅತ್ತೆ ಹಾಗೂ ಮಾವನ ವಿರುದ್ಧ ಯುವತಿಯ ಪೋಷಕರು ದೂರು ನೀಡಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ…

Read More

ಫೋನ್ ರಿಪೇರಿಯಿಂದ ಬಯಲಾಗಿತ್ತು ಪಾಕ್ ಆಟಗಾರರ ಕಳ್ಳಾಟ!

2010 ರಲ್ಲಿ ಪಾಕಿಸ್ತಾನ್ ಆಟಗಾರರು ಆಡಿದ ಕಳ್ಳಾಟವು ಹೊಸ ಸಂಚಲನ ಸೃಷ್ಟಿಸಿತ್ತು. ಈ ಸಂಚಲನಕ್ಕೆ ಕಾರಣವಾಗಿದ್ದು ಅಂದಿನ ಪಾಕ್ ತಂಡದ ನಾಯಕ ಸಲ್ಮಾನ್ ಬಟ್, ಮೊಹಮ್ಮದ್ ಅಮಿರ್ ಹಾಗೂ ಮೊಹಮ್ಮದ್ ಆಸಿಫ್. ಈ ಮೂವರು ಸೇರಿ ಲಾರ್ಡ್ಸ್ ಮೈದಾನದಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದರು. ಈ ಫಿಕ್ಸಿಂಗ್ ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ ಎಂಬ ಸ್ಫೋಟಕ ಮಾಹಿತಿಯನ್ನು ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಅಬ್ದುಲ್ ರಝಾಕ್ ಬಹಿರಂಗ ಪಡಿಸಿದ್ದಾರೆ. ಆಗಸ್ಟ್ 26, 2010 ರಂದು ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

Read More

ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ

ಮುಂಬೈ, ಮಾರ್ಚ್​ 12: ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನಭವನಕ್ಕೆ ಬಾಂಬ್ ಬೆದರಿಕೆ(Bomb Threat) ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ತಕ್ಷಣದ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ಸೇರಿದಂತೆ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿವೆ. ಇಂದು(ಮಾರ್ಚ್​​12) ಬೆಳಗ್ಗೆ ಬಿಎಸ್‌ಇ, ವಿಧಾನ ಭವನ ಮತ್ತು ಬಾಂಬೆ ಹೈಕೋರ್ಟ್‌ಗೆ ಬೆದರಿಕೆ ಇ-ಮೇಲ್‌ಗಳು ಬಂದಿವೆ. ಎಲ್ಲಾ ಸ್ಥಳಗಳಲ್ಲಿ ಸಾಕಷ್ಟು ಭದ್ರತಾ ಕ್ರಮಗಳನ್ನು ಅಳವಡಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ, ಆಯಾ ಪೊಲೀಸ್ ಠಾಣೆಗಳಲ್ಲಿ ಸಂಬಂಧಿತ ಕಾನೂನು ಕ್ರಮಗಳನ್ನು…

Read More

ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಸಾಗಣೆಗೆ ಇರಾನ್ ಒಪ್ಪಿಗೆ

ನವದೆಹಲಿ, ಮಾರ್ಚ್ 12: ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಅವರ ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಜೊತೆ ಮಾತುಕತೆ ನಡೆಸಿದ್ದಾರೆ. ಇದಾದ ಬಳಿಕ ಇರಾನ್ ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅನುಮತಿ ನೀಡಿದೆ. ಇದರಿಂದ ಭಾರತಕ್ಕೆ ತೈಲ ಪೂರೈಕೆಯ ಸಮಸ್ಯೆಗೆ ಕೊಂಚ ಪರಿಹಾರ ಸಿಕ್ಕಂತಾಗಿದೆ. ಯುನೈಟೆಡ್ ಸ್ಟೇಟ್ಸ್, ಯುರೋಪ್ ಮತ್ತು ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳನ್ನು ಟಾರ್ಗೆಟ್ ಮಾಡುತ್ತಿರುವ ಇರಾನ್ ಅನೇಕ ತೈಲ ಟ್ಯಾಂಕರ್​ಗಳ…

Read More

‘ನಾನು ಸುದೀಪ್ ಸರ್ ಬಗ್ಗೆ ಹಗುರವಾಗಿ ಮಾತನಾಡಿಲ್ಲ’; ಉಲ್ಟಾ ಹೊಡೆದ ಸತೀಶ್

ಸತೀಶ್ (Satish) ಅವರು ಸದಾ ಸುದ್ದಿಯಲ್ಲಿರಲು ಬಯಸುತ್ತಾರೆ. ಇತ್ತೀಚೆಗೆ ಅವರು ಸುದೀಪ್ ಬಗ್ಗೆ ಆಡಿದ ಮಾತು ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ಈ ವಿಷಯದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದವು. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆಗಳು ಬಂದವು. ಈಗ ತಾವು ಆ ರೀತಿ ಹೇಳಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂಬರ್ಥದಲ್ಲಿ ಮಾತನಾಡಿದ್ದಾರೆ. ‘ನಾನು, ಸರ್ ಬಗ್ಗೆ ಎಲ್ಲಿ ಹಗುರವಾಗಿ ಮಾತನಾಡಿದ್ದೇನೆ. ನಟರಿಗೆ ಕೊಂಬಿರುತ್ತದೆಯೇ ಎಂದು ನಾನು ಕೇಳಿದೆನೇ ಹೊರತು, ಸುದೀಪ್ ಸರ್​​ಗೆ ಕೇಳಿದ್ದಲ್ಲ. ಈ ಬಗ್ಗೆ ನಾನು…

Read More