Headlines

ಪಕ್ಷಪಾತ ಮಾಡಿಲ್ಲ, ಸದನಕ್ಕಿಂತ ವಿಪಕ್ಷ ನಾಯಕ ಮೇಲಲ್ಲ; ರಾಹುಲ್ ಗಾಂಧಿಗೆ ಸ್ಪೀಕರ್ ಓಂ ಬಿರ್ಲಾ ತಿರುಗೇಟು

ನವದೆಹಲಿ, ಮಾರ್ಚ್ 12: ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಸದನದಲ್ಲಿ ಸೋತ ನಂತರ ಇಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ. ನಾನು ಯಾವುದೇ ಪಕ್ಷಪಾತ ಮಾಡಿಲ್ಲ ಎಂದಿರುವ ಓಂ ಬಿರ್ಲಾ, ಪ್ರತಿ ಸಂಸದರಿಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ಸಿಗುವಂತೆ ನೋಡಿಕೊಳ್ಳಲು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ. ವಿರೋಧ ಪಕ್ಷದ ನಾಯಕರು ಸದನಕ್ಕಿಂತಲೂ ಎಂದು ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ. ನಿನ್ನೆ ವಿಪಕ್ಷದ ಅವಿಶ್ವಾಸ ನಿರ್ಣಯವು ಲೋಕಸಭೆಯಲ್ಲಿ ಸೋತಿತ್ತು. ಇದಾದ ಒಂದು ದಿನದ ನಂತರ,…

Read More

ಗ್ಯಾಸ್‌ ಉಳಿತಾಯ ಮಾಡಲು ಈ ಸಿಂಪಲ್‌ ಸಲಹೆ ಅನುಸರಿಸಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಾರಣದಿಂದಾಗಿ ಜಾಗತಿಕ ಅನಿಲ ಸರಬರಾಜಿನಲ್ಲಿ ಅಡಚಣೆ ಉಂಟಾಗಿದ್ದು,  ಭಾರತದಲ್ಲಿ ಕಮರ್ಷಿಯಲ್‌ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ತೀವ್ರವಾಗಿ ಕುಸಿದಿದೆ. ಇದರ ಪರಿಣಾಮ ದೇಶದ ಹಲವು ನಗರಗಳಲ್ಲಿ ವಾಣಿಜ್ಯ ಸಿಲಿಂಡರ್‌‌ (Gas cylinder) ಅಲಭ್ಯತೆಯಿಂದಾಗಿ  ಹೊಟೇಲ್‌ ಉದ್ಯಮಗಳಿಗೆ ಪೆಟ್ಟು ಬಿದ್ದಿದೆ. ಅಷ್ಟೇ ಅಲ್ಲದೆ ಜನರು ಸಹ ಕಮರ್ಷಿಯಲ್‌ ಗ್ಯಾಸ್‌ ಸಿಗದೆ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನೀವು ಮನೆಯಲ್ಲಿ ಉಪಯೋಗಿಸುತ್ತಿರುವಂತಹ ಗ್ಯಾಸ್‌ ಬೇಗ ಖಾಲಿಯಾಗಬಾರದು, ಹೆಚ್ಚು ಸಮಯದವರೆಗೆ ಬಾಳಿಕೆ ಬರಬೇಕು ಅಂತಾದ್ರೆ, ಅಡುಗೆ ಮಾಡುವ ಸಂದರ್ಭದಲ್ಲಿ ಈ…

Read More

BCCI Awards: ಗಿಲ್​ ವರ್ಷದ ಕ್ರಿಕೆಟಿಗ; ದ್ರಾವಿಡ್, ಮಿಥಾಲಿಗೆ ಜೀವಮಾನ ಸಾಧನೆ ಪ್ರಶಸ್ತಿ

2023 ರಲ್ಲಿ ಟಿ20 ವಿಶ್ವಕಪ್ (T20 World Cup) ಗೆದ್ದಿದ್ದ ಟೀಂ ಇಂಡಿಯಾ ಬಿಸಿಸಿಐನಿಂದ (BCCI) 125 ಕೋಟಿ ರೂ. ಬಹುಮಾನ ಪಡೆಯುವುದರ ಜೊತೆಗೆ ಮುಂಬೈನಲ್ಲಿ ವಿಕ್ಟರಿ ಪೆರೇಡ್‌ ಮಾಡಿತ್ತು. ಈ ಬಾರಿಯೂ ಚಾಂಪಿಯನ್ ಆದ ಭಾರತ ತಂಡಕ್ಕೆ ಬಿಸಿಸಿಐನಿಂದ 131 ಕೋಟಿ ರೂ. ಬಹುಮಾನ ಸಿಕ್ಕಿದೆ.ಆದರೆ ವಿಕ್ಟರಿ ಪೆರೇಡ್‌ ಮಾಡಲು ಅವಕಾಶ ಸಿಕ್ಕಿಲ್ಲ. ಹಾಗೆಯೇ ಆಟಗಾರರನ್ನು ಬಿಸಿಸಿಐನಿಂದ ಸನ್ಮಾನಿಸಲಾಗಿಲ್ಲ. ಇದೀಗ ಅದಕ್ಕೆ ವೇದಿಕೆ ಸಜ್ಜಾಗಿದ್ದು, ಬಿಸಿಸಿಐ ತನ್ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಾಂಪಿಯನ್ ತಂಡವನ್ನು…

Read More

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪುರಾತತ್ವ ತಜ್ಞರು

ಗದಗ, (ಮಾರ್ಚ್ 12): ಐತಿಹಾಸಿಕ ದೇವಾಲಯಗಳ ಸರ್ಗ, ಶಿಲ್ಪಕಲೆಗಳ ಬೀಡು, ಕಲ್ಯಾಣ ಚಾಲುಕ್ಯರ ನಾಡು ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ (Lakkundi Gold Treasure) ಸಿಕ್ಕ ಬಳಿಕ ಲಕ್ಕುಂಡಿ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಇಲ್ಲಿ ಸಿಕ್ಕ ನಿಧಿಗೆ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಇತಿಹಾಸ ಇದೆ. ಈ ಆಭರಣಗಳು ಅದ್ಭುತವಾದ ಕಸೂರಿ ನೋಡಿದ್ರೆ ಮೈ ರೋಮಾಂಚನವಾಗುತ್ತೆ. ಅಪರೂಪದ ನೀಲಮಣಿ ಲಕ್ಕುಂಡಿ ಗತವೈಭವ ಸಾರುತ್ತಿದೆ. ಆ್ಯಂಟಿಕ್ ಆಭರಣಗಳ ಅಂದಾಜು ಮೌಲ್ಯ 8 ಕೋಟಿಯಾಗಿದೆ. ಹೀಗಾಗಿ…

Read More

Video: ಆಹಾರ ತಲುಪಿಸಲು ಹೋದ ಡೆಲಿವರಿ ಬಾಯ್‌ಗೆ ಊಟ ಕೊಟ್ಟು ಹಸಿವು ನೀಗಿಸಿದ ಗ್ರಾಹಕರು

ದೆಹಲಿ, ಮಾರ್ಚ್ 12: ದುಡಿಮೆ ಅನಿವಾರ್ಯ, ಉದ್ಯೋಗ ಯಾವುದಾದರೆ ದುಡಿದು ತಿನ್ನುವುದು ಮುಖ್ಯ ಎನ್ನುತ್ತಾ ಕೆಲಸ ಮಾಡುತ್ತಾರೆ. ಫುಡ್ ಡೆಲಿವರಿ ಬಾಯ್ (delivery boy) ಆಗಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಕೆಲವೇ ಕೆಲವು ನಿಮಿಷಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಆರ್ಡರ್ ಮಾಡಿದ ಫುಡ್ ಬರುವುದರ ಹಿಂದೆ ಆಹಾರ ವಿತರಕರ ಶ್ರಮವಿರುತ್ತದೆ. ಸ್ವಲ್ಪ ಲೇಟ್ ಆದರೂ ರೇಗಾಡುತ್ತೇವೆ, ಆದರೆ ಕಷ್ಟವನ್ನು ಅರಿತುಕೊಳ್ಳುವ ಪ್ರಯತ್ನ ಯಾರು ಮಾಡಲ್ಲ. ಇದೀಗ ಫುಡ್ ಡೆಲಿವರಿ ಮಾಡಲು ಹೋದ ಡೆಲಿವರಿ ಬಾಯ್ ಗ್ರಾಹಕರ…

Read More

ಮನೆಯಲ್ಲೇ ಅಡುಗೆ ಮಾಡಿಕೊಳ್ಳಿ, ತಿನ್ನಿ, ಕೆಲಸ ಮಾಡಿ: ಎಲ್​ಪಿಜಿ ಸಮಸ್ಯೆಗೆ ಎಚ್​ಸಿಎಲ್​ನಿಂದ ವರ್ಕ್ ಫ್ರಂ ಹೋಮ್ ಪರಿಹಾರ

ನವದೆಹಲಿ, ಮಾರ್ಚ್ 12: ಅಡುಗೆ ಅನಿಲದ ಕೊರತೆ ಭಾರತಾದ್ಯಂತ ಕಾಡುತ್ತಿದೆ. ಅದರಲ್ಲೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳು (LPG cylinder) ದುಬಾರಿಯಾಗಿರುವುದು ಮಾತ್ರವಲ್ಲ, ಅವು ಸಿಗುವುದೇ ದುಸ್ತರವಾಗಿದೆ. ಬೆಂಗಳೂರಿನ ಅನೇಕ ಹೋಟೆಲ್​ಗಳು ಈ ಬಿಕ್ಕಟ್ಟು ಬಗೆಹರಿಯುವವರೆಗೂ ಬಾಗಿಲು ಬಂದ್ ಮಾಡಲು ನಿರ್ಧರಿಸಿವೆ. ಕಾರ್ಪೊರೇಟ್ ಸಂಸ್ಥೆಗಳೂ ಕೂಡ ಈ ಬಿಸಿ ತಾಕಿಸಿಕೊಂಡಿವೆ. ಉದ್ಯೋಗಿಗಳಿಗೆ ದಿನವೂ ಅಡುಗೆ ಮಾಡಿಕೊಡಬೇಕಾದ ಕಾರ್ಪೊರೇಟ್ ಕಂಪನಿಗಳ ಕೆಫೆಟೇರಿಯಾಗಳಿಗೆ ಕಮರ್ಷಿಯಲ್ ಗ್ಯಾಸ್ ಸಿಗುವುದು ಕಷ್ಟವಾಗಿದೆ. ಹೀಗಾಗಿ, ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅವಕಾಶ ಕಲ್ಪಿಸಲು…

Read More

ಯುವತಿಯರನ್ನು ಮನೆಯೊಳಗೆ ಕಳಿಸಿ , ಅತ್ಯಾಚಾರ ನಾಟಕವಾಡಿಸಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿ ಮದುವೆ ದಿನವೇ ಅರೆಸ್ಟ್

ಭೋಪಾಲ್, ಮಾರ್ಚ್​ 12: ಯುವತಿಯರನ್ನು ಯಾರ್ಯಾರದ್ದೋ ಮನೆಗೆ ಕಳುಹಿಸಿ, ಅತ್ಯಾಚಾರದ ನಾಟಕವಾಡಿಸಿ, ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಜನರನ್ನು ಬೆದರಿಸಿ ಅವರಿಂದ ಸುಲಿಗೆ ಮಾಡುವ ಗ್ಯಾಂಗ್ ಕಟ್ಟಿದ್ದ ಆಕಾಶ್ ನೀಲಕಂಠ್ ಎಂಬಾತನನ್ನು ಆತನ ಮದುವೆ(Marriage) ದಿನವೇ ಬಂಧಿಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​​ನಲ್ಲಿ ನಡೆದಿದೆ. ಈ ದಂಧೆಯ ಹಿಂದಿನ ಮಾಸ್ಟರ್ ಮೈಂಡ್ ಆಕಾಶ್ ಅಲಿಯಾಸ್ ಭೂರಾ ಹಡ್ಡಿ ಅಲಿಯಾಸ್ ಆಕಾಶ್ ನೀಲಕಂಠ, ಈತ ಇಲ್ಲೀಗಲ್ ಗ್ಯಾಂಗ್ ಎಂಬ ಗ್ಯಾಂಗ್ ಅನ್ನು ಕಟ್ಟಿಕೊಂಡಿದ್ದ, ಆತನ ಮದುವೆ ಮೆರವಣಿಗೆಗೆ ಸಿದ್ಧತೆಗಳು ನಡೆಯುತ್ತಿರುವಾಗ ಪೊಲೀಸರು…

Read More

NEET-UG opportunities: ವೈದ್ಯಕೀಯ ಆಕಾಂಕ್ಷಿಗಳಿಗೆ ಗುಡ್​ ನ್ಯೂಸ್​​; 11,000ಕ್ಕೂ ಹೆಚ್ಚು MBBS ಸೀಟುಗಳ ಭರ್ಜರಿ ಹೆಚ್ಚಳ!

ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ದೇಶದ ಸಾವಿರಾರು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಬಾರಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ಬರೆಯುವ ಪದವಿಪೂರ್ವ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ ಪಡೆಯಲು ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿಯು (NMC) ತನ್ನ ವೆಬ್‌ಸೈಟ್‌ನಲ್ಲಿ ನೀಡಿರುವ ಅಧಿಕೃತ ಮಾಹಿತಿಯಂತೆ, 2026ರ ಶೈಕ್ಷಣಿಕ ವರ್ಷದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸರಿಸುಮಾರು 11,000ಕ್ಕೂ ಹೆಚ್ಚು ಹೊಸ ಸೀಟುಗಳು ಸೇರ್ಪಡೆಯಾಗಿವೆ. ಈ ಮಹತ್ವದ ನಿರ್ಧಾರವನ್ನು…

Read More

ಮಡಿಕೇರಿ ಡಬಲ್ ಮರ್ಡರ್​​​​ ಕೇಸಿಗೆ ಬಿಗ್ ಟ್ವಿಸ್ಟ್:ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ

ಕೊಡಗು, (ಮಾರ್ಚ್ 12): ಮಡಿಕೇರಿ (Madikeri) ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ (Kodagu Double Murder case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಯಶೋಧಾ(45) ಹಾಗೂ ಕುಂಞರಾಮ(47) ಕೊಲೆಯಾದ ಜೋಡಿ. ಈ ಡಬಲ್ ಮರ್ಡರ್​​​ ಕುಂದಚೇರಿ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಪೊಲೀಸರ ಪ್ರಾಥನಿಕ ತನಿಖೆಯಲ್ಲಿ ಈ ಜೋಡಿ ಕೊಲೆ ರಹಸ್ಯ ಬಯಲಿಗೆ ಬಂದಿದೆ.  ಹೌದು.. ಸ್ವಂತ ಅಕ್ಕ ತಂಗಿಯರ ಮಕ್ಕಳ ಮಧ್ಯೆಯೇ ಅಕ್ರಮ ಸಂಬಂಧ ಬೆಳೆದಿದೆ. ಯಶೋಧಾ ಮತ್ತು ಕುಂಞರಾಮ…

Read More

ಆಸ್ಕರ್ ಅವಾರ್ಡ್​​​ಗೆ ಇರಾನ್ ಡ್ರೋನ್ ದಾಳಿ ಭೀತಿ; ಎಚ್ಚರಿಸಿದ ಪೊಲೀಸರು

ಆಸ್ಕರ್ ಅವಾರ್ಡ್ (Oscar Awards) ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆಯಲಿದೆ. ಈಗ ಈ ಶೋಗೆ ಇರಾನ್ ದಾಳಿಯ ಭಯ ಕಾಡುತ್ತಿದೆ. ಅಮೆರಿಕ, ಇಸ್ರೇಲ್ vs ಇರಾನ್ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ದಾಳಿ-ಪ್ರತಿದಾಳಿಗಳು ನಡೆಯುತ್ತಲೇ ಇವೆ. ಅಮೆರಿಕದ ಕ್ಯಾಲಿಫೋರ್ನಿಯಾ ಮೇಲೆ ದಾಳಿ ನಡೆಯುವ ಆತಂಕವೂ ಇದೆ. ಸದ್ಯ ಹಾಲಿವುಡ್ ಸ್ಟುಡಿಯೋದಲ್ಲಿ ಆಸ್ಕರ್​ ಅವಾರ್ಡ್​​ಗೆ ಸಿದ್ಧತೆಗಳು ನಡೆಯುತ್ತಿವೆ. ಸಿನಿಮಾ ಜಗತ್ತಿನ ದೊಡ್ಡ ಹಬ್ಬದ ಆಚರಣೆಗೆ ಎಲ್ಲರೂ ರೆಡಿ…

Read More