Headlines

ವಿಜಯಲಕ್ಷ್ಮೀಗೆ ಅವಾಚ್ಯವಾಗಿ ಬೈದವರಲ್ಲಿದ್ದಾರೆ ಸುದೀಪ್ ಫ್ಯಾನ್ಸ್; ಚಾರ್ಜ್​​ಶೀಟ್​​ನಲ್ಲಿ ಶಾಕಿಂಗ್ ವಿಷಯ

ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು (Vijayalaxmi) ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಸಮರ ಸಾರಿದ್ದಾರೆ. ಈ ಸಂಬಂಧ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಪೊಲೀಸರು, ಹಲವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಶಾಕಿಂಗ್ ವಿಷಯಗಳು ಬೆಳಕಿಗೆ ಬಂದಿದೆ. ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು…

Read More

Bengaluru Air Quality: ಮೈಸೂರಿನ ಏರ್ ಕ್ವಾಲಿಟಿಯಲ್ಲಿ ತೀವ್ರ ಕುಸಿತ

ಬೆಂಗಳೂರು, ಮಾರ್ಚ್​ 12: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ  (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಒಣ ಹವೆ

ಬೆಂಗಳೂರು, ಮಾರ್ಚ್​ 12: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿದ್ದು, ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ…

Read More

ಬೆಸ್ಟ್​ಫ್ರೆಂಡ್ ಪತಿಯನ್ನೇ ಮದುವೆ ಆಗಿದ್ದ ಹನ್ಸಿಕಾ; ನಟಿಯ ಸ್ಪಷ್ಟನೆ ಏನಾಗಿತ್ತು?

ಪುನೀತ್ ರಾಜ್ಕುಮಾರ್ ನಟನೆಯ ‘ಬಿಂದಾಸ್’ ಚಿತ್ರದಲ್ಲಿ ನಟಿಸಿದ್ದ ಹನ್ಸಿಕಾ ಮೋಟ್ವಾನಿ (Hansika) ಈಗ ಸುದ್ದಿಯಲ್ಲಿದ್ದಾರೆ. ಅವರು ಉದ್ಯಮಿ ಸೊಹೈಲ್ ಕತುರಿಯಾ ಜತೆ ಡಿವೋರ್ಸ್ ಪಡೆದಿದ್ದಾರೆ. ಕೋರ್ಟ್ ಅವರಿಗೆ ಡಿವೋರ್ಸ್ ನೀಡಲು ಒಪ್ಪಿಗೆ ಕೊಟ್ಟಿದೆ 2022ರಲ್ಲಿ ಸಾಕಷ್ಟು ಅದ್ದೂರಿಯಾಗಿ ಈ ಮದುವೆ ಕಾರ್ಯ ನಡೆದಿತ್ತು. ಸೋಹೈಲ್ ಈ ಮೊದಲು ಮದುವೆ ಆಗಿದ್ದರು. ಅವರ ಮಾಜಿ ಪತ್ನಿಯ ಹೆಸರು ರಿಂಕಿ. ರಿಂಕಿ ಮತ್ತು ಹನ್ಸಿಕಾ ಫ್ರೆಂಡ್ಸ್ ಆಗಿದ್ದರು. ಸೋಹೈಲ್ ಹಾಗೂ ರಿಂಕಿ ಮದುವೆಯಲ್ಲಿ ಹನ್ಸಿಕಾ ಕೂಡ ಭಾಗಿ ಆಗಿದ್ದರು. ಸೋಹೈಲ್…

Read More

IPL 2026: ಡಬಲ್ ಧಮಾಕಾ… 4 ದಿನಗಳಲ್ಲಿ 8 ಪಂದ್ಯಗಳು

IPL 2026: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ.  ಈ ಇಪ್ಪತ್ತು ಪಂದ್ಯಗಳಲ್ಲಿ 4 ಡಬಲ್ ಹೆಡ್ಡರ್ ಮ್ಯಾಚ್​ಗಳಿವೆ. ಅಂದರೆ 4 ದಿನಗಳಲ್ಲಿ ಒಟ್ಟು 8 ಮ್ಯಾಚ್​ಗಳು ನಡೆಯಲಿವೆ. ಇಲ್ಲಿ ಮೊದಲ ಮ್ಯಾಚ್ 3.30 ಕ್ಕೆ ಶುರುವಾದರೆ, ದ್ವಿತೀಯ ಪಂದ್ಯ 7.30 ಕ್ಕೆ ಆರಂಭವಾಗಲಿದೆ. ಅದರಂತೆ ಐಪಿಎಲ್​ನ ವೇಳಾಪಟ್ಟಿ ಈ ಕೆಳಗಿನಂತಿದೆ… ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು…

Read More

ಫಾರೂಕ್ ಅಬ್ದುಲ್ಲಾರನ್ನು ಕೊಲ್ಲಲು 20 ವರ್ಷಗಳಿಂದ ನಡೆದಿತ್ತು ಪ್ಲ್ಯಾನ್, ಆರೋಪಿ ಹೇಳಿದ್ದೇನು?

ಶ್ರೀನಗರ, ಮಾರ್ಚ್​ 12: ಜಮ್ಮುವಿನಲ್ಲಿ ಮಾರ್ಚ್​ 11ರ ರಾತ್ರಿ ನಡೆದ ವಿವಾಹ ಸಮಾರಂಭದಲ್ಲಿ ಬಂದೂಕುಧಾರಿಯೊಬ್ಬ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ(Farooq Abdullah) ಅವರತ್ತ ಗುಂಡು ಹಾರಿಸಿದ್ದ. ಆದರೆ ಫಾರೂಕ್ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು. ಜಮ್ಮುವಿನ ಗ್ರೇಟರ್ ಕೈಲಾಶ್‌ನ ರಾಯಲ್ ಪಾರ್ಕ್‌ನಲ್ಲಿ ಅಬ್ದುಲ್ಲಾ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿದೆ. ಕಮಲ್ ಸಿಂಗ್ ಎಂದು ಗುರುತಿಸಲಾದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ದಶಕಗಳಿಂದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲು ಯೋಜಿಸುತ್ತಿದ್ದೆ ಎಂದು…

Read More

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!

ಬೆಂಗಳೂರು, ಮಾರ್ಚ್​​ 12: ನಗರದ ಶಾಂಗ್ರೀಲಾ ಹೋಟೆಲ್​​ನಲ್ಲಿ ನಡೆದ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ಭಾರಿ ಹೈಡ್ರಾಮಾಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮತ್ತು ಪರಿಷತ್ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರು ಕೈಗೆ ಸಿಗುತ್ತಿಲ್ಲ ಸಿಗುತ್ತಿಲ್ಲ ಎಂದು  ಆಕ್ರೋಶ ಹೊರಹಾಕಿದ್ದಾರೆ. ಒಂದು ವೇಳೆ ಪರಿಸ್ಥಿತಿ ಹೀಗೆ ಮುಂದುವರಿದರೆ ಬಹಿರಂಗವಾಗಿ ಮಾತನಾಡುವುದಾಗಿಯೂ ಎಚ್ಚರಿಸಿದ್ದಾರೆ. ಮತ್ತೊಂದೆಡೆ ಪರಿಷತ್​​ ಸದಸ್ಯರು ಅನುದಾನಕ್ಕೆ ಬೇಡಿಕೆ ಇಟ್ಟ ಪ್ರಸಂಗವೂ ನಡೆದಿದೆ. ಶಾಸಕರ ನಡುವೆಯೇ ಕಿತ್ತಾಟ ಸಭೆಯಲ್ಲಿ ಶಾಸಕರಾದ ಎಸ್‌.ಎನ್.ನಾರಾಯಣಸ್ವಾಮಿ…

Read More

ಮತ್ತೆ ಬರ್ತಿದೆ ‘ಅಗ್ನಿ ಸಾಕ್ಷಿ’; ಧಾರಾವಾಹಿಗೆ ನಾಯಕ ಯಾರು?

ಕಲರ್ಸ್ ಕನ್ನಡದಲ್ಲಿ ‘ಅಗ್ನಿಸಾಕ್ಷಿ’ ಧಾರಾವಾಹಿ ಈ ಮೊದಲು ಪ್ರಸಾರ ಕಂಡು ಭಾರೀ ವೀಕ್ಷಣೆ ಕಂಡಿತ್ತು. ಹಲವು ವರ್ಷಗಳ ಕಾಲ ಈ ಸೀರಿಯಲ್ ಪ್ರಸಾರ ಆಯಿತು. ಈಗ ಧಾರಾವಾಹಿಯು ಮತ್ತೆ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದೆ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯು ಪ್ರೋಮೋ ಹಂಚಿಕೊಂಡಿದೆ. ಇದು ವೀಕ್ಷಕರಿಗೆ ಸಾಕಷ್ಟು ಗಮನ ಸೆಳೆದಿದೆ. ಹಳೆಯ ಮ್ಯೂಸಿಕ್ ಅನ್ನು ಬಳಸಲಾಗಿದೆ. ‘ಅಗ್ನಿಸಾಕ್ಷಿ’ ಧಾರವಾಹಿಯು 2013ರ ಡಿಸೆಂಬರ್ 2ರಂದು ಪ್ರಸಾರ ಆರಂಭಿಸಿತು. ಆ ಬಳಿಕ ಧಾರಾವಾಹಿ ಬರೋಬ್ಬರಿ 6 ವರ್ಷ…

Read More

ಬರೋಬ್ಬರಿ 209 ಎಸೆತಗಳು ಬಾಕಿ… ಹೀನಾಯ ಸೋಲುಂಡ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಅತ್ಯಂತ ಹೀನಾಯ ಸೋಲನುಭವಿಸಿದೆ. ಢಾಕಾದಲ್ಲಿ ನಡೆದ ಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 30.4 ಓವರ್‌ಗಳಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಕೇವಲ 15.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಅಂದರೆ ಬರೋಬ್ಬರಿ 209 ಎಸೆತಗಳನ್ನು ಬಾಕಿಯಿಸಿ ಬಾಂಗ್ಲಾ ಪಡೆ ಏಕದಿನ ಪಂದ್ಯ ಗೆದ್ದುಕೊಂಡಿದೆ.  ಇದು ಎಸೆತಗಳ ಆಧಾರದ ಮೇಲೆ…

Read More

ಹಾರರ್, ಸಸ್ಪೆನ್ಸ್ ಸಿನಿಮಾ ಮಾಡಿ ಫೇಮಸ್ ಆಗಿದ್ದ ನಿರ್ದೇಶಕ ಬೆಂಗಳೂರಲ್ಲಿ ನಿಧನ

ತಮಿಳಿನ ಹಿರಿಯ ನಿರ್ದೇಶಕ ಹಾಗೂ ಸಂಗೀತ ಸಂಯೋಜಕ ದಕ್ಕಳಿ ಶ್ರೀನಿವಾಸನ್ ಅವರು ನಿಧನ ಹೊಂದಿದ್ದಾರೆ. ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿ ಅವರು ಕೊನೆಯುಸಿರು ಎಳೆದಿದ್ದು, ಅವರಿಗೆ 72 ವರ್ಷ ವಯಸ್ಸಾಗಿತ್ತು. ಸುಮಾರು ಎರಡೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. 1987ರಲ್ಲಿ ರಿಲೀಸ್ ಆದ ‘ಇವರ್ಗಳ್ ವರುಂಗಳಾ ತೂಂಗಲ್’ ಸಿನಿಮಾದಲ್ಲಿ ಬರಹಗಾರನಾಗಿ ಕೆಲಸ ಮಾಡಿ ಚಿತ್ರರಂಗಕ್ಕೆ ಶ್ರೀನಿವಾಸ ಕಾಲಿಟ್ಟರು. ಈ ಚಿತ್ರವನ್ನು ಅವರು ನಿರ್ಮಾಣವನ್ನೂ ಮಾಡಿದ್ದರು. ಆ ಬಳಿಕ ಕಮಲ್ ಹಾಸನ್ ನಟನೆಯ…

Read More