ಸಂಸತ್ ಹೊರಗೆ ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆಗೆ ಮಾಜಿ ಅಧಿಕಾರಿಗಳ ವಿರೋಧ; ಕ್ಷಮೆ ಯಾಚನೆಗೆ ಒತ್ತಾಯ

ಸಂಸತ್ ಹೊರಗೆ ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆಗೆ ಮಾಜಿ ಅಧಿಕಾರಿಗಳ ವಿರೋಧ; ಕ್ಷಮೆ ಯಾಚನೆಗೆ ಒತ್ತಾಯ

ನವದೆಹಲಿ, ಮಾರ್ಚ್ 17: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮಾರ್ಚ್ 12ರಂದು ಅಧಿವೇಶನದ (Parliament Session) ವೇಳೆ ಸಂಸತ್ತಿನ ಪ್ರವೇಶದ್ವಾರದಲ್ಲಿ ಕುಳಿತು ವಿಪಕ್ಷದ ಸಂಸದರೊಂದಿಗೆ ಚಹಾ ಮತ್ತು ಪಕೋಡ ಸೇವಿಸಿ ಪ್ರತಿಭಟನೆ ನಡೆಸಿದ ಘಟನೆಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು 204 ಮಾಜಿ ಅಧಿಕಾರಿಗಳು ಪತ್ರ ಬರೆದಿದ್ದಾರೆ. “ಮಾರ್ಚ್ 12ರ ಘಟನೆ ತೀವ್ರ ಕಳವಳಕಾರಿ ಮತ್ತು ಉದ್ದೇಶಪೂರ್ವಕವಾಗಿ ಸಂಸದೀಯ ಅಧಿಕಾರದ ನಿರ್ಲಕ್ಷ್ಯ ಮಾಡಲಾಗಿದೆ” ಎಂದು ಸಹಿದಾರರು ಆರೋಪಿಸಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಇತರೆ ವಿಪಕ್ಷ ನಾಯಕರ ಇತ್ತೀಚಿನ ನಡವಳಿಕೆಯನ್ನು ಖಂಡಿಸಿ 204 ಮಾಜಿ ಮಿಲಿಟರಿ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದ ಸಂಯೋಜಕರಾದ ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಎಸ್‌ಪಿ ವೈದ್, ಈ ಘಟನೆಯು ಭಾರತದ ಅತ್ಯುನ್ನತ ಪ್ರಜಾಪ್ರಭುತ್ವ ಸಂಸ್ಥೆಯ ಘನತೆ ಮತ್ತು ಸಾಂವಿಧಾನಿಕ ನೈತಿಕತೆಗೆ ಸವಾಲನ್ನು ಒಡ್ಡುತ್ತದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಪಕ್ಷಪಾತ ಮಾಡಿಲ್ಲ, ಸದನಕ್ಕಿಂತ ವಿಪಕ್ಷ ನಾಯಕ ಮೇಲಲ್ಲ; ರಾಹುಲ್ ಗಾಂಧಿಗೆ ಸ್ಪೀಕರ್ ಓಂ ಬಿರ್ಲಾ ತಿರುಗೇಟು

ಮಾರ್ಚ್ 12ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿ ಸ್ಪೀಕರ್ ಅವರ ಸ್ಪಷ್ಟ ಸೂಚನೆಗಳನ್ನು ನಿರ್ಲಕ್ಷಿಸಿದ್ದರು. ಅವರು ಸಂಸತ್ತಿನ ಮೆಟ್ಟಿಲುಗಳ ಮೇಲೆ ಕುಳಿತು ಚಹಾ ಮತ್ತು ಪಕೋಡ, ಬಿಸ್ಕತ್ ಸೇವಿಸಿದರು. ಇದು ರಾಷ್ಟ್ರದ ಅತ್ಯುನ್ನತ ಶಾಸಕಾಂಗ ಸಂಸ್ಥೆಯಲ್ಲಿ ಅನುಚಿತ ಮತ್ತು ಅಸಂಸದೀಯ ನಡವಳಿಕೆಯನ್ನು ಸೂಚಿಸುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ರಾಹುಲ್ ಗಾಂಧಿ ಈ ವರ್ತನೆಗಾಗಿ ರಾಷ್ಟ್ರದ ಕ್ಷಮೆಯಾಚಿಸಬೇಕು. ಸಂಸತ್ತಿನ ಘನತೆ, ಅಧಿಕಾರ ಮತ್ತು ಸಾಂಸ್ಥಿಕ ಪಾವಿತ್ರ್ಯವನ್ನು ಕಾಪಾಡಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಮಾಜಿ ಅಧಿಕಾರಿಗಳು ಮತ್ತು ನ್ಯಾಯಾಧೀಶರು ಸ್ಪಷ್ಟವಾಗಿ ಹೇಳಿದ್ದಾರೆ. ಪ್ರಜಾಪ್ರಭುತ್ವ ಸಂಸ್ಥೆಗಳಿಗೆ ಮಾಡಲಾಗುವ ಇಂತಹ ನಿರಂತರ ಅಗೌರವವು ಸಂಸತ್ತಿನ ವಿಶ್ವಾಸಾರ್ಹತೆಯನ್ನು ಹಾಳು ಮಾಡುವುದಲ್ಲದೆ, ಪ್ರಜಾಪ್ರಭುತ್ವದ ಅಡಿಪಾಯವನ್ನು ಅಲುಗಾಡಿಸುವ ಬೆದರಿಕೆ ಹಾಕುತ್ತದೆ ಎಂದು ಪತ್ರವು ಎಚ್ಚರಿಸಿದೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ, ಸಂಸತ್ ಹೊರಗೆ ಪ್ರತಿಭಟನೆ

ಈ ಬಗ್ಗೆ ANI ಜೊತೆ ಮಾತನಾಡಿದ ಎಸ್‌ಪಿ ವೈದ್, “ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರ ನಡವಳಿಕೆಯು ಹಕ್ಕು ಮತ್ತು ದುರಹಂಕಾರದ ಪ್ರಜ್ಞೆಯನ್ನು ತೋರಿಸುತ್ತದೆ. ರಾಹುಲ್ ಗಾಂಧಿಯವರ ಸಂಸತ್ತಿನಲ್ಲಿ ಅವರ ನಡವಳಿಕೆ ವಿರೋಧ ಪಕ್ಷದ ನಾಯಕನ ನಡವಳಿಕೆಗೆ ತಕ್ಕುದಲ್ಲ, ಇದು ತುಂಬಾ ಜವಾಬ್ದಾರಿಯುತ ಹುದ್ದೆ ಎಂಬುದನ್ನು ಅವರು ಅರಿಯಬೇಕು. ತಮ್ಮ ಸ್ಥಾನದ ಗೌರವಕ್ಕೆ ತಕ್ಕಂತೆ ನಡೆದುಕೊಳ್ಳಬೇಕು” ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಬಮೂಲ್​​ ಬೆನ್ನಲ್ಲೇ ಕೋಮುಲ್​​ನಿಂದ ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್‌

ಕೋಲಾರ, ಮಾರ್ಚ್​​ 17: ಇತ್ತೀಚೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಉಡುಗೊರೆ ನೀಡಿತ್ತು. ಇದೀಗ ಅದರಂತೆ ಕೋಲಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (komul) ಕೂಡ ಹಾಲು ಉತ್ಪಾದಕರಿಗೆ ಲೀಟರ್‌ಗೆ 2 ರೂಪಾಯಿ ಹೆಚ್ಚಿಸುವ ಮೂಲಕ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್‌ ನೀಡಿದೆ.

ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಳ

ಯುಗಾದಿ ಹಬ್ಬಕ್ಕೆ ಕೋಲಾರ ಜಿಲ್ಲಾ ಹಾಲು ಉತ್ಪಾದಕರಿಗೆ ಕೋಮುಲ್​ ಕೊಡುಗೆ ನೀಡಿದೆ. ಲೀಟರ್​ ಹಾಲಿಗೆ 2 ರೂಪಾಯಿ ಹೆಚ್ಚಿಸಿದೆ. ಈ ಹಿಂದೆ ಹಾಲು ಉತ್ಪಾದಕರಿಗೆ ಲೀಟರ್‌ಗೆ 35.40 ರೂ. ನೀಡಲಾಗುತ್ತಿತ್ತು. ಇದೀಗ ಪ್ರತಿ ಲೀಟರ್‌ಗೆ 37.40 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಇದನ್ನೂ ಓದಿ: ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್​​: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್

ಜೊತೆಗೆ ಹಸಿರು ಮೇವು ಬೆಳೆಯುವ ರೈತರಿಗೆ ಎಕರೆಗೆ 3 ಸಾವಿರ ರೂ ಪ್ರೋತ್ಸಾಹ ಧನ, ಹಸುಗಳಿಗೆ ವಿಮೆ 70 ಸಾವಿರದಿಂದ 80 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ ಎಂದು ಕೋಲಾರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕೆ.ವೈ.ನಂಜೇಗೌಡ ಮಾಹಿತಿ ನೀಡಿದ್ದಾರೆ.

ರೈತರು ಉತ್ಪಾದಿಸುವ 1 ಲೀಟರ್ ಹಾಲಿಗೆ ಕನಿಷ್ಟ 2 ರೂ. ಹೆಚ್ಚಳ ಮಾಡಬೇಕು ಎಂದು ಇತ್ತೀಚೆಗೆ ಒತ್ತಾಯ ಕೇಳಿಬಂದಿತ್ತು. ಪ್ರತಿ ಲೀಟರ್ ಹಾಲು ಉತ್ಪಾದಿಸಲು ಕನಿಷ್ಠ 50 ರೂ. ವೆಚ್ಚವಾಗುತ್ತದೆ. ಇತ್ತೀಚೆಗೆ ಹಿಂಡಿ ಮತ್ತು ಬೂಸಾ ದರ ಕೂಡ 50 ಕೆಜಿ ಚೀಲಕ್ಕೆ 100 ರೂ. ಏರಿಕೆಯಾಗಿದ್ದು, ರೈತರು ಪರದಾಡು ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು? ಹೊರ ದೇಶಕ್ಕೆ ಎಷ್ಟು ರಫ್ತು ಆಗ್ತಿತ್ತು?

ಕಳೆದ ವರ್ಷ ಬೇಸಿಗೆ ಆರಂಭದಲ್ಲಿ ಒಕ್ಕೂಟವು 2 ರೂ. ದರ ಹೆಚ್ಚಿಸಿದ್ದರೂ, ಸರ್ಕಾರ 4 ರೂ. ನೀಡಿದ ಬಳಿಕ ಅದರಲ್ಲಿ 2 ರೂ. ಮರುಪಡೆಯಲಾಗಿತ್ತು. ಬಳಿಕ ರೈತರು ಉತ್ಪಾದಿಸುವ ಪ್ರತಿ ಲೀಟರ್ ಹಾಲಿಗೆ ಕನಿಷ್ಠ 2 ರೂ. ಹೆಚ್ಚಳ ಮಾಡುವಂತೆ ಒತ್ತಾಯಿಸಲಾಗಿತ್ತು. ಜೊತೆಗೆ ಪಶು ಆಹಾರಕ್ಕಾಗಿ ಮೆಕ್ಕೆಜೋಳವನ್ನು ನೇರವಾಗಿ ರೈತರಿಂದಲೇ ಖರೀದಿಸಬೇಕು ಎಂದು ಆಗ್ರಹಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತದಲ್ಲಿ ಹಾರ್ಡ್ ರಾಕ್ ಕೆಫೆ ಯುಗ ಅಂತ್ಯ: ಬೆಂಗಳೂರು ಸೇರಿದಂತೆ 10 ನಗರಗಳ ಔಟ್‌ಲೆಟ್ ಬಂದ್, ಕಾರಣವೇನು?

ಬೆಂಗಳೂರು, ಮಾ.17: ದಶಕಗಳ ಕಾಲ ರಾಕ್ ಸಂಗೀತ ಮತ್ತು ಅಮೇರಿಕನ್ ಶೈಲಿಯ ಆಹಾರಕ್ಕೆ ಹೆಸರಾಗಿದ್ದ ‘ಹಾರ್ಡ್ ರಾಕ್ ಕೆಫೆ’ (HRC) ಭಾರತಕ್ಕೆ ಗುಡ್‌ಬೈ ಹೇಳುತ್ತಿದೆ. ಭಾರತದಲ್ಲಿ ಈ ಕೆಫೆಗಳನ್ನು ನಡೆಸುತ್ತಿದ್ದ JSM ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ಜೊತೆಗಿನ ಒಪ್ಪಂದವನ್ನು ಹಾರ್ಡ್ ರಾಕ್ ಇಂಟರ್ನ್ಯಾಷನಲ್ ಅಧಿಕೃತವಾಗಿ ಕೊನೆಗೊಳಿಸಿದೆ. ಅದರಲ್ಲೂ ಬೆಂಗಳೂರಿನಲ್ಲಿ ತನ್ನದೇ ಆಗಿರುವ ರುಚಿಯನ್ನು ಹಾಗೂ ವೈಶಿಷ್ಟವನ್ನು ಹೊಂದಿದ್ದ ಇದು, ಇದೀಗ ಬೆಂಗಳೂರಿಗರಿಗೆ ದೊಡ್ಡ ನಿರಾಶಿಯನ್ನು ಮೂಡಿಸಿದೆ. ಇನ್ನು ಈ ನಿರ್ಧಾರದಿಂದಾಗಿ ಭಾರತದ ಪ್ರಮುಖ ನಗರಗಳಲ್ಲಿದ್ದ 10 ಕೆಫೆಗಳು ಮುಚ್ಚಲಿವೆ.

ಅದರಲ್ಲಿ ಒಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ವೈಟ್‌ಫೀಲ್ಡ್ ಸೇಂಟ್ ಮಾರ್ಕ್ಸ್ ರೋಡ್ (ಐಕಾನಿಕ್) ಚಂಡೀಗಢ, ಚೆನ್ನೈ, ಹೈದರಾಬಾದ್ (ಹೈಟೆಕ್ ಸಿಟಿ ಸೇರಿದಂತೆ), ಕೋಲ್ಕತ್ತಾ, ನವದೆಹಲಿ ಮತ್ತು ಪುಣೆಯಲ್ಲೂ ಕೂಡ ತನ್ನ ಸೇವೆಯನ್ನು ಕೊನೆ ಮಾಡಲಿದೆ. ಆದರೆ ಗೋವಾದಲ್ಲಿರುವ ಹಾರ್ಡ್ ರಾಕ್ ಹೋಟೆಲ್ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಇದು ಪ್ರಸ್ತುತ ರದ್ದಾದ ಒಪ್ಪಂದದ ವ್ಯಾಪ್ತಿಗೆ ಬರುವುದಿಲ್ಲ.

ಈ ಸುದ್ದಿ ಹೊರಬೀಳುತ್ತಿದ್ದಂತೆಯೇ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಹಳೆಯ ನೆನಪುಗಳನ್ನು ಮೆಲುಕು ಹಾಕಿದರೆ, ಇನ್ನು ಕೆಲವರು ಕೆಫೆಯ ವೈಫಲ್ಯಕ್ಕೆ ಕಾರಣಗಳನ್ನು ಪಟ್ಟಿ ಮಾಡಿದ್ದಾರೆ “ಹಾರ್ಡ್ ರಾಕ್ ಕೆಫೆ ಒಳ್ಳೆಯದಾಗಿತ್ತು, ಆದರೆ ಬೆಲೆ ಮಾತ್ರ ಗಗನಕ್ಕೇರಿತ್ತು. ಇದೇ ಕಾನ್ಸೆಪ್ಟ್ ಇಟ್ಟುಕೊಂಡು ಕಡಿಮೆ ಬೆಲೆಗೆ ಸ್ಥಳೀಯ ಪಬ್‌ಗಳು ಭರ್ಜರಿ ಪೈಪೋಟಿ ನೀಡಿದವು” ಎಂದು ಒಬ್ಬರು ಹೇಳಿದ್ದಾರೆ. “ಇದು ಕೇವಲ ತಿನ್ನುವ ಜಾಗವಾಗಿರಲಿಲ್ಲ, ಸಂಗೀತದ ಅನುಭವ ನೀಡುವ ತಾಣವಾಗಿತ್ತು. ಆದರೆ ಇತ್ತೀಚೆಗೆ ಅಲ್ಲಿ ರಾಕ್ ಸಂಗೀತದ ಬದಲು ಜನರಿಕ್ ಪ್ಲೇಲಿಸ್ಟ್‌ಗಳು ಪ್ಲೇ ಆಗುತ್ತಿದ್ದವು” ಎಂದು ಸಂಗೀತ ಪ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಗಾದಿಗೆ ಮೈಸೂರು, ಧರ್ಮಸ್ಥಳ, ಕುಕ್ಕೆಗೆ ಹೋಗುವವರಿಗೆ ಬಿಗ್​​ ಶಾಕ್​​​​​ ನೀಡಿದ ಖಾಸಗಿ ಬಸ್​​​: ಟಿಕೆಟ್​​​​ ದರ ಏರಿಕೆ ಪಟ್ಟಿ ಇಲ್ಲಿದೆ

“ಬೆಂಗಳೂರಿನ ಸೇಂಟ್ ಮಾರ್ಕ್ಸ್ ರೋಡ್ ಕೆಫೆ ಒಂದು ಸಂಕೇತವಾಗಿತ್ತು. ಐಟಿ ಮಂದಿ ಈಗ ಕೇವಲ ಇಡಿಎಂ (EDM) ಮತ್ತು ಪಂಜಾಬಿ ಸಂಗೀತಕ್ಕೆ ಮಾರುಹೋಗುತ್ತಿದ್ದಾರೆ” ಎಂದು ಬೆಂಗಳೂರಿಗರು ಕಳವಳ ವ್ಯಕ್ತಪಡಿಸಿದ್ದಾರೆ. ಇದು 1971 ರಲ್ಲಿ ಐಸಾಕ್ ಟಿಗ್ರೆಟ್ ಮತ್ತು ಪೀಟರ್ ಮಾರ್ಟನ್ ಅವರಿಂದ ಲಂಡನ್‌ನಲ್ಲಿ ಆರಂಭವಾಯಿತು. ಅಮೇರಿಕನ್ ಶೈಲಿಯ ಆಹಾರ ಮತ್ತು ರಾಕ್ ಸಂಗೀತದ ಸ್ಮರಣಿಕೆಗಳು ಇಲ್ಲಿನ ವಿಶೇಷವಾಗಿತ್ತು. ಇಂದು 70 ಕ್ಕೂ ಹೆಚ್ಚು ದೇಶಗಳಲ್ಲಿ ಹೋಟೆಲ್, ಕ್ಯಾಸಿನೊ ಮತ್ತು ಮ್ಯೂಸಿಯಂಗಳನ್ನು ಈ ಸಂಸ್ಥೆ ಹೊಂದಿದೆ.

ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

SSLC ವಿದ್ಯಾರ್ಥಿಗಳೇ ಗಮನಿಸಿ: ಶಿಕ್ಷಣ ಇಲಾಖೆಯಿಂದ ಮಹತ್ವದ ಸಲಹೆ; ಇಲ್ಲಿದೆ ಮಾಹಿತಿ

ಬೆಂಗಳೂರು, ಮಾರ್ಚ್​​ 17: ನಾಳೆಯಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​​ಸಿ ಪರೀಕ್ಷೆ ಆರಂಭವಾಗಲಿದ್ದು, ಒಟ್ಟು 2871 ಕೇಂದ್ರಗಳಲ್ಲಿ ಎಕ್ಸಾಂ ನಡೆಯಲಿದೆ. ಈ ವರ್ಷ 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಆ ಪೈಕಿ 8,12,855 ಹೊಸಬರು ಪರೀಕ್ಷೆ ಬರೆಯಲಿದ್ದಾರೆ. 62,845 ರಿಪೀಟರ್ಸ್​ ಮತ್ತು 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕದ ಹಿನ್ನೆಲೆ ತಡೆಗೆ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಮಾರ್ಗಸೂಚಿಯಲ್ಲಿ ಇರೋದೇನು?

  • ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧ
  • ಸ್ಮಾಟ್ ವಾಚ್​, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ಪೂರ್ಣ ನಿಷೇಧ
  • ಪರೀಕ್ಷಾ ಕೇಂದ್ರದಲ್ಲಿ ಅನಧಿಕೃತ ವ್ಯಕ್ತಿಗಳಿಂದ ಚಿತ್ರೀಕರಣಕ್ಕೆ ನಿಷೇಧ
  • ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತು ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದು ನಿಷೇಧ
  • ಯಾವುದೇ ವಿಷಯಗಳ ಮಾಹಿತಿ ರವಾನಿಸುವುದು ನಿಷೇಧ
  • ಪರೀಕ್ಷೆಯನ್ನು ವೆಬ್ ಕಾಸ್ಟಿಂಗ್​​​​ ಮೂಲಕ ಮಾನಿಟರ್
  • ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ

ಇದನ್ನೂ ಓದಿ: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ

ವಿದ್ಯಾರ್ಥಿಗಳಿಗೆ ಸೂಚನೆ

ಈಗಾಗಲೇ ಬರೆದಿರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಮಂಡಳಿಯಿಂದ ನೀಡಲಾದ ನೀಲನಕ್ಷೆ (ಬ್ಲೂಪ್ರಿಂಟ್) ಮತ್ತು ಮಾದರಿ ಪ್ರಶ್ನೆಪತ್ರಿಕೆಗಳ ಮೇಲೆ ಹೆಚ್ಚು ಗಮನ ಹರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಯಾವುದೇ ತಪ್ಪು ಮಾಹಿತಿ ಅಥವಾ ವದಂತಿಗಳಿಗೆ ಕಿವಿಗೊಡಬಾರದು. ಇದರಿಂದ ತಮ್ಮ ಅಧ್ಯಯನದ ಗಮನ ಕೆಡಿಸಿಕೊಳ್ಳಬಾರದು. ಪರೀಕ್ಷೆ ಬರೆಯುವಾಗ ಶಾಂತಚಿತ್ತದಿಂದ ಇರಬೇಕು, ಪ್ರತಿ ಪ್ರಶ್ನೆಯನ್ನು ಒಂದು ಬಾರಿ ಓದಿ, ಅರ್ಥವಾಗದಿದ್ದರೆ ಮತ್ತೊಮ್ಮೆ ಓದಿ ಸರಿಯಾಗಿ ಅರ್ಥಮಾಡಿಕೊಂಡು ಉತ್ತರ ಬರೆಯಬೇಕು. ಮಾದರಿ ಪ್ರಶ್ನೆಪತ್ರಿಕೆಗಳು ಮತ್ತು ಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಆಧಾರದ ಮೇಲೆ ಸಿದ್ಧರಾಗಿರುವ ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಗಳಿಸುವ ಮತ್ತು ಸುಲಭವಾಗಿ ಪಾಸಾಗುವ ಹೆಚ್ಚಿನ ಅವಕಾಶಗಳಿವೆ ಎಂದು ಇಲಾಖೆ ತಿಳಿಸಿದೆ.

ಶುಭ ಹಾರೈಸಿದ ಸಿಎಂ, ವಿಪಕ್ಷ ನಾಯಕ

ಇನ್ನು ನಾಳೆಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಹಿನ್ನೆಲೆ ಎಕ್ಸಾಂ ಬರೆಯಲಿರುವ ವಿದ್ಯಾರ್ಥಿಗಳಿಗೆ ವಿಧಾನಸಭೆಯಲ್ಲಿ ಶುಭ ಹಾರೈಸಲಾಗಿದೆ. ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಅಶೋಕ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಲ್​​ ದಿ ಬೆಸ್ಟ್​​ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಕೆಡಿ’ ಹಾಡಿನ ಪರ ವಹಿಸಿ ರಕ್ಷಿತಾ ಪೋಸ್ಟ್: ಬೇರೆ ಭಾಷೆ ಹಾಡುಗಳ ಉದಾಹರಣೆ

ಪ್ರೇಮ್ (prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ ಸರ್ಸೆ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಕನ್ನಡದಲ್ಲಿ ಮಾತ್ರವೇ ಅಲ್ಲದೆ ಹಿಂದಿ ಸೇರಿದಂತೆ ಇನ್ನೂ ಹಲವು ಭಾಷೆಗಳಲ್ಲಿ ಸಿನಿಮಾದ ಹಾಡು ಬಿಡುಗಡೆ ಆಗಿದೆ. ಆದರೆ ಈ ಹಾಡಿನ ಸಾಹಿತ್ಯ ತೀರ ಅಶ್ಲೀಲವಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ದೆಹಲಿ, ಮುಂಬೈ ನಗರಗಳಲ್ಲಿ ಹಾಡಿನ ವಿರುದ್ಧ, ನಿರ್ದೇಶಕ ಪ್ರೇಮ್ ಸೇರಿದಂತೆ ಚಿತ್ರತಂಡದ ಇತರೆ ಸದಸ್ಯರ ವಿರುದ್ಧ ದೂರುಗಳು ದಾಖಲಾಗಿವೆ. ಇದೀಗ ಪ್ರೇಮ್ ಅವರ ಪತ್ನಿ ರಕ್ಷಿತಾ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

‘ಕೆಡಿ’ ಸಿನಿಮಾದ ಹಾಡು ‘ಸರಿ’ ಎಂದು ಹೇಳುತ್ತಿಲ್ಲ ಎಂದು ಹೇಳುತ್ತಲೇ ತಮ್ಮ ಪತಿ, ನಿರ್ದೇಶಕ ಪ್ರೇಮ್ ಅವರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದಿದ್ದಾರೆ ರಕ್ಷಿತಾ, ಪರ ಭಾಷೆ ಹಾಡುಗಳ ಉದಾಹರಣೆ ನೀಡಿರುವ ರಕ್ಷಿತಾ ಪ್ರೇಮ್, ‘ಡ್ರೀಮಂ ವೇಕಪಂ’ ಹಿಂದಿಯ ‘ಚೋಲಿ ಕೆ ಪೀಚೆ ಕ್ಯಾ ಹೈ’ ಅಂಥಹಾ ನೂರಾರು ಹಾಡುಗಳು ಚಿತ್ರರಂಗದಲ್ಲಿ ಬಂದಿವೆ. ಒಂದು ಸಿನಿಮಾದಲ್ಲಿಯಂತೂ ಇಡೀ ಸಿನಿಮಾನಲ್ಲಿಯೇ ಸೆಕ್ಸ್​ ಬಗ್ಗೆ ಮಾತನಾಡಲಾಗಿದೆ. ಆದರೆ ಅದೆಲ್ಲವನ್ನೂ ಬಿಟ್ಟು ಇದೀಗ ಒಂದು ಹಾಡನ್ನು ದೊಡ್ಡ ಸುದ್ದಿ ಮಾಡಲಾಗುತ್ತಿದೆ’ ಎಂದಿದ್ದಾರೆ ರಕ್ಷಿತಾ.

‘ಈ ಒಂದು ಹಾಡನ್ನು ಇರಿಸಿಕೊಂಡು ಪ್ರೇಮ್ ಅನ್ನು ದೂಷಿಸಲಾಗುತ್ತಿದೆ. ಅವರು ಹಿಂದೆ ಮಾಡಿರುವ ಸಿನಿಮಾ, ಬರೆದಿರುವ ಹಾಡುಗಳನ್ನು ನಿರ್ಲಕ್ಷಿಸಲಾಗುತ್ತಿದೆ ಅಲ್ಲದೆ, ಹಿಂದಿನ ಅವರ ಕೆಲಸಗಳ ಬಗ್ಗೆಯೂ ಟೀಕೆ ವ್ಯಕ್ತಪಡಿಸಲಾಗುತ್ತಿದೆ. ಅವರ ಸಿನಿಮಾ ಮತ್ತು ಪ್ರಚಾರ ಶೈಲಿಯನ್ನು ಗಿಮಿಕ್ ಎಂದು ಕರೆಯಲಾಗುತ್ತಿದೆ. ಕೆಲವು ಸಿನಿಮಾ ಸರಿಯಾಗಿ ಪ್ರದರ್ಶನ ಕಾಣಲಿಲ್ಲ ಎಂದ ಮಾತ್ರಕ್ಕೆ ಅವರು ಕೆಟ್ಟ ನಿರ್ದೇಶಕ ಎಂದಲ್ಲ. ನಿಮಗೆ ಅವರನ್ನು ಪ್ರಶ್ನೆ ಮಾಡುವ, ಟೀಕೆ ಮಾಡುವ ಹಕ್ಕು ಖಂಡಿತ ಇದೆ ಆದರೆ ಅವರನ್ನು ನಿಂದಿಸುವ ಹಕ್ಕು ಯಾರಿಗೂ ಇಲ್ಲ’ ಎಂದಿದ್ದಾರೆ ರಕ್ಷಿತಾ.

ಇದನ್ನೂ ಓದಿ:‘ಕೆಡಿ’ ಹಾಡು ವಿವಾದ: ಪ್ರೇಮ್ ವಿರುದ್ಧ ದೆಹಲಿ, ಮುಂಬೈನಲ್ಲಿ ದೂರು

‘ಈಗಿನ ಚಿತ್ರರಂಗದಲ್ಲಿ ಪ್ರತಿದಿನವೂ ಇಂಥಹಾ ಹಾಡುಗಳನ್ನು ಮಾಡಲಾಗುತ್ತಿದೆ. ಪ್ರತಿದಿನವೂ ಐಟಂ ಹಾಡುಗಳ ಚಿತ್ರೀಕರಣ ಆಗುತ್ತಿವೆ. ಬಹುಷಃ ಸಿನಿಮಾಗಳಲ್ಲಿ ಈಗಿನಷ್ಟು ರಕ್ತಪಾತವನ್ನು ಪ್ರೇಕ್ಷಕ ಎಂದೂ ನೋಡಿರಲಿಲ್ಲ. ಆದರೆ ಪ್ರೇಮ್ ಮಾಡಿದಾಗ ಅದು ತಪ್ಪಾಗಿ ಕಂಡಿದೆ. ಅವರ ಶೈಲಿಯಲ್ಲಿ ಗಿಮಿಕ್ ಎಂದು ಟೀಕಿಸಲಾಗುತ್ತದೆ. ನಾನು ಒಂದು ವಿಷಯ ಸ್ಪಷ್ಟಪಡಿಸುತ್ತೇನೆ. ಈಗಿನ ಕಾಲಘಟ್ಟದಲ್ಲಿ ಒಂದು ಸಿನಿಮಾವನ್ನು ಟಿವಿ, ಒಟಿಟಿಗೆ ಮಾರಾಟ ಮಾಡುವುದು ಬಹಳ ಕಷ್ಟ, ಅದಕ್ಕೆ ದೊಡ್ಡ ಮಟ್ಟದ ಪ್ರಚಾರ ಮಾಡಬೇಕು, ಆ ಕಾರ್ಯವನ್ನು ಪ್ರೇಮ್ ತಮ್ಮದೇ ಶೈಲಿಯಲ್ಲಿ ಮಾಡುತ್ತಾ ಬಂದಿದ್ದಾರೆ, ಯಶಸ್ಸು ಸಹ ಕಂಡಿದ್ದಾರೆ. ಅದು ನಿಮಗೆ ಗಿಮಿಕ್ ಎನಿಸಬಹುದು ಆದರೆ ಅದು ಪರಿಣಾಮಕಾರಿ ಆಗಿದೆ’ ಎಂದು ಪತಿಯನ್ನು ಕೊಂಡಾಡಿದ್ದಾರೆ ನಟಿ.

‘ನನ್ನ ದೇಹದ ತೂಕದ ಕಾರಣಕ್ಕೆ ನನ್ನನ್ನು ಪ್ರತಿದಿನ ಟ್ರೋಲ್ ಮಾಡಲಾಗುತ್ತದೆ. ಆದರೆ ಅಷ್ಟೇ ಪ್ರೀತಿಯೂ ಸಹ ನನಗೆ ಸಿಕ್ಕಿದೆ. ನಾವು ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಎಲ್ಲವನ್ನೂ ನಾವು ನಿಭಾಯಿಸುತ್ತೇವೆ. ನಾವು ಮಾನಸಿಕವಾಗಿ ಮತ್ತು ದೈಹಿಕವಾಗಿ ಶಕ್ತವಾಗಿದ್ದೇವೆ. ಇದು ಕೆಟ್ಟ ಸಮಯ ಅಷ್ಟೆ, ಎಲ್ಲವೂ ಸರಿ ಹೋಗಲಿದೆ, ನಾವು ಎಲ್ಲವನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳಲಿದ್ದೇವೆ’ ಎಂದಿದ್ದಾರೆ ನಟಿ ರಕ್ಷಿತಾ ಪ್ರೇಮ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು? ಹೊರ ದೇಶಕ್ಕೆ ಎಷ್ಟು ರಫ್ತು ಆಗ್ತಿತ್ತು?

ಬೆಂಗಳೂರು, (ಮಾರ್ಚ್ 17): ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೊಟ್ಟೆ ವ್ಯಾಪಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿವೆ. ಯುದ್ಧದ ಪರಿಣಾಮ, ಗ್ಯಾಸ್ ದರ ಏರಿಕೆ, ಹಾಗೂ ರಂಜಾನ್ ಸಮಯದಲ್ಲಿ ಹೋಟೆಲ್‌ಗಳ ಕಾರ್ಯಾಚರಣೆ ಕಡಿಮೆಯಾಗಿರುವುದು ಮೊಟ್ಟೆ ಮಾರುಕಟ್ಟೆಗೆ ನೇರ ಹೊಡೆತ ನೀಡಿದೆ. ಇದರಿಂದ ಮೊಟ್ಟೆ ಬೇಡಿಕೆ ಕುಸಿತ ಕಂಡಿದ್ದು, ಮೊಟ್ಟೆಯ ದರ ಕುಸಿತವಾಗಿದೆ. ಇದರಿಂದ ವ್ಯಾಪಾರಸ್ಥರು ಆತಂಕದಲ್ಲಿ ಮುಳುಗಿದ್ದಾರೆ. ಇನ್ನು ಈ ಬಗ್ಗೆ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ್ ಅವರು ಟಿವಿ9 ಜೊತೆ ಮಾತನಾಡಿ, ಕೋಳಿ ಮೊಟ್ಟೆ ಬೆಳೆಯ ರೈತರಿಗೆ ಆಗುತ್ತರುವ ಸಮಸ್ಯೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಯಾರಾಗಲಿದ್ದಾರೆ SRH ತಂಡದ ಹೊಸ ನಾಯಕ?

Source link

ಪಾಳು ಮನೆಯಲ್ಲಿ ಅಪ್ರಾಪ್ತೆಯ ಭೀಕರ ಕೊಲೆ: ಭಾವಿ ಪತಿಯಿಂದಲೇ ನಡೀತು ಹತ್ಯೆ!; ಕಾರಣ ನಿಗೂಢ

ಬೆಂಗಳೂರು/ ಗದಗ, ಮಾರ್ಚ್​ 17: ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನೇ ವ್ಯಕ್ತಿಯೋರ್ವ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಡೆದಿದೆ. ಯುವತಿ ಜೋಯಾಯಳ ಕತ್ತುಕೊಯ್ದು ಕೊಂದು ಶಬೀಲ್(20) ಪರಾರಿಯಾಗಿದ್ದು, ಬೆಳಗ್ಗೆ 6.30ರ ಸುಮಾರಿಗೆ ಘಟನೆ ನಡೆದಿದೆ. ಆರೋಪಿ ಶಬೀಲ್ ಕುಟುಂಬ ಸದಸ್ಯರಿಂದಲೇ ಪ್ರಕರಣ ಬೆಳಕಿಗೆ ಬಂದಿದ್ದು, ಡಿ.ಜೆ.ಹಳ್ಳಿ ಠಾಣೆ ಪೊಲೀಸರಿಂದ ಆರೋಪಿ ಶಬೀಲ್​ಗಾಗಿ ಶೋಧ ಮುಂದುವರಿದಿದೆ. ಬಾಲಕಿ ಹತ್ಯೆಯಾಗಿರುವ ಬಗ್ಗೆ ಬೆಳಗ್ಗೆ 11 ಗಂಟೆಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಅಮಟೆ, ಹತ್ಯೆಯಾದ ಸ್ಥಳದಲ್ಲಿ ಸೋಕೋ ಟೀಮ್ ಪರಿಶೀಲನೆ ನಡೆಸಿದೆ. ಕೊಲೆಮಾಡಿರುವುದು ಯಾರು ಎಂದು ಈಗಾಗಲೇ ಗೊತ್ತಾಗಿದ್ದು, ಆರೋಪಿ ಶಬೀಲ್ ಬಂಧಿಸಿದ ನಂತರ ಕೊಲೆಗೆ ಕಾರಣ ತಿಳಿಯಲಿದೆ. ಘಟನೆ ನಡೆದ ಸ್ಥಳ ಶಬೀಲ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಈ ಮನೆಯಲ್ಲಿ ಯಾರೂ ವಾಸ ಇರಲಿಲ್ಲ. ಆಗಾಗ ಇಬ್ಬರು ಇಲ್ಲಿ ಬಂದು ಸೇರುತ್ತಿದ್ದರೂ ಎಂಬ ಮಾಹಿತಿಯಿರೋದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ; ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು! ಆಡಿಯೋ ವೈರಲ್

ಮದುವೆ ವಿಚಾರಕ್ಕೆ ತಮ್ಮನನ್ನೇ ಕೊಲೆಗೈದ ಅಣ್ಣ

ಮೃತ ಫಕ್ಕೀರಪ್ಪ

ಯುವತಿ ಜೊತೆ ಮದುವೆ ವಿಚಾರಕ್ಕೆ ತಮ್ಮನನ್ನೇ ಅಣ್ಣ ಕೊಲೆಗೈದಿರುವ ಆಘಾತಕಾರಿ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಫಕ್ಕೀರಪ್ಪ(19) ಬರ್ಬರ ಹತ್ಯೆ ಮಾಡಲಾಗಿದ್ದು, ಆರೋಪಿ ಅಶೋಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚಿಕ್ಕಮೊಲಂಗಿ ನಿವಾಸಿಗಳಾಗಿದ್ದ ಸಹೋದರರು ಕುರಿ ಮೇಯಿಸಲು ಹಿರೇಕೊಪ್ಪ ಗ್ರಾಮಕ್ಕೆ ಬಂದಿದ್ದರು. ತಮ್ಮನಿಗೆ ಫಿಕ್ಸ್ ಆಗಿದ್ದ ಹುಡುಗಿ ಜತೆ ತಾನು ಮದುವೆ ಆಗಬೇಕೆಂದು ಬಯಸಿದ್ದ ಅಶೋಕ್‌, ಕುರಿದೊಡ್ಡಿಯಲ್ಲಿ ಮಲಗಿದ್ದ ಸಹೋದರನನ್ನು ಕೊಲೆಗೈದ್ದಾನೆ. ಬಳಿಕ ಬೇರೆಯವರು ಹತ್ಯೆ ಮಾಡಿರೋದು ಎಂದು ಕತೆ ಕಟ್ಟಿದ್ದ ಆರೋಪಿಯ ನಿಜ ಬಣ್ಣ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

9 ಮಂದಿ ಆರೋಪಿಗಳ ಬಂಧನ

ಹಫ್ತಾ ಕೊಡದಿದ್ದಕ್ಕೆ ಬೆಂಗಳೂರಿನ ಸಿದ್ದಯ್ಯ ರಸ್ತೆ ಸಮೀಪದ ಬಡಮಕಾನ್ ಬಳಿ ಪುಡಿರೌಡಿಗಳಿಂದ ಮೆಕ್ಯಾನಿಕ್ ಹತ್ಯೆ ಪ್ರಕರಣ ಸಂಬಂಧ 9 ಆರೋಪಿಗಳನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರ್ವೇಜ್, ಅಫ್ರಿದಿ, ಸಮೀರ್, ಶಬ್ಬೀರ್, ಮುನ್ನಾವರ್, ಸಾದಿಕ್ ಸೇರಿದಂತೆ 9 ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದೆ. ಎರಡು ದಿನಗಳ ಹಿಂದೆ ನಡೆದಿದ್ದ ರಶೀದ್​ ಕೊಲೆ ಪ್ರಕರಣ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಎಲ್​ಪಿಜಿ ಇಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ; ಈ ಗ್ರಾಹಕರಿಗೆ ಮಾತ್ರ ಅನ್ವಯ, ಗಮನಿಸಿ

ನವದೆಹಲಿ, ಮಾರ್ಚ್ 17: ಎಲ್​ಪಿಜಿ ಗ್ರಾಹಕರು ಇಕೆವೈಸಿ (Biometric Aadhaar Authentication) ಮಾಡುವುದು ಕಡ್ಡಾಯ ಎನ್ನುವಂತಹ ಸುದ್ದಿ ಎರಡು ದಿನಗಳಿಂದ ಕೇಳಿಬರುತ್ತಿದೆ. ಇದೇ ವೇಳೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಆಧಾರ್ ಬಯೋಮೆಟ್ರಿಲ್ ದೃಢೀಕರಣ ಅಥವಾ ಇಕೆವೈಸಿಯು ಎಲ್ಲಾ ಎಲ್​ಪಿಜಿ ಗ್ರಾಹಕರಿಗೂ ಕಡ್ಡಾಯವೇನಲ್ಲ. ಇಕೆವೈಸಿ ಮಾಡಿಸಿಲ್ಲದ ಎಲ್​ಪಿಜಿ ಗ್ರಾಹಕರು ಮಾತ್ರ ಈ ಗ್ಯಾಸ್ ಪಡೆಯಲು ಇಕೆವೈಸಿ ಮಾಡುವುದು ಕಡ್ಡಾಯ ಎಂದು ಸಚಿವಾಲಯವು ಹೇಳಿದೆ.

ಎಲ್​ಪಿಜಿ ಗ್ರಾಹಕರು ಆಧಾರ್ ದೃಢೀಕರಣ ಮಾಡುವ ವಿಚಾರದಲ್ಲಿ ಹೊಸದೇನೂ ನಿರ್ದೇಶನ ಹೊರಡಿಸಲಾಗಿಲ್ಲ. ಬಯೋಮೆಟ್ರಿಕ್ ಆಧಾರ್ ದೃಢೀಕರಣ ಪೂರ್ಣಗೊಳಿಸುವಂತೆ ಎಲ್​ಪಿಜಿ ಗ್ರಾಹಕರನ್ನು ಪ್ರೋತ್ಸಾಹಿಸುವ ಕ್ರಮ ಜಾರಿಯಲ್ಲಿದೆ.

ಎಲ್​ಪಿಜಿ ಇಕೆವೈಸಿ ವಿಚಾರದಲ್ಲಿ ತಿಳಿಯಬೇಕಾದ ಸಂಗತಿಗಳಿವು…

  • ಎಲ್​ಪಿಜಿ ಗ್ರಾಹಕರು ಇದೂವರೆಗೆ ಇಕೆವೈಸಿ ಮಾಡಿಸಿಲ್ಲದೇ ಇದ್ದರೆ ಅವರು ಈಗ ಮಾಡಿಸುವುದು ಕಡ್ಡಾಯ.
  • ಪಿಎಂ ಉಜ್ವಲ್ ಯೋಜನೆಯ ಫಲಾನುಭವಿಗಳು ಪ್ರತೀ ಹಣಕಾಸು ವರ್ಷಕ್ಕೆ ಒಮ್ಮೆ ಇಕೆವೈಸಿ ಅಪ್​ಡೇಟ್ ಮಾಡಬೇಕು. ಅದೂ 7 ಸಿಲಿಂಡರ್ ಪೂರೈಕೆಗೆ ಸಬ್ಸಿಡಿ ಪಡೆದು, 8 ಮತ್ತು 9ನೇ ಸಿಲಿಂಡರ್ ಪಡೆಯುವಾಗ ಇಕೆವೈಸಿ ಅಪ್​ಡೇಟ್ ಮಾಡಬೇಕು.
  • ಪಿಎಂ ಉಜ್ವಲ್ ಯೋಜನೆಗೆ ಒಳಪಡದ ಇತರ ಎಲ್​ಪಿಜಿ ಗ್ರಾಹಕರು ಒಮ್ಮೆ ಇಕೆವೈಸಿ ಮಾಡಿಸಿದ್ದರೆ ಸಾಕು, ಮತ್ತೆ ಅಪ್​ಡೇಟ್ ಮಾಡುವ ಅಗತ್ಯ ಇಲ್ಲ.
  • ಮನೆಯಲ್ಲೇ ಕುಳಿತು, ಉಚಿತವಾಗಿ ಇಕೆವೈಸಿಯನ್ನು ಮಾಡಬಹುದು.

ಇದನ್ನೂ ಓದಿ: ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?
ಸರ್ಕಾರದಿಂದ ಬಂದ ಸ್ಪಷ್ಟನೆ

ಎಲ್​ಪಿಜಿ ಗ್ರಾಹಕರು ಇಕೆವೈಸಿ ಅಪ್​ಡೇಟ್ ಮಾಡುವುದು ಹೇಗೆ?

ಎಲ್​ಪಿಜಿ ಗ್ರಾಹಕರು ತಮ್ಮ ವಿತರಕರ ಕಚೇರಿಗೆ ಹೋಗಿ ಅಲ್ಲಿ ಬಯೋಮೆಟ್ರಿಕ್ ಆಧಾರ್ ಅಥೆಂಟಿಕೇಶನ್ ಕೊಡಬಹುದು. ಇದು ಒಂದು ವಿಧಾನ.

ಮತ್ತೊಂದು ವಿಧಾನ ಆನ್​ಲೈನ್​ನದ್ದು. ಆಧಾರ್ ಫೇಸ್​ಆರ್​ಡಿ ಆ್ಯಪ್ ಅನ್ನು ಡೌನ್​ಲೋಡ್ ಮಾಡಬೇಕು. ನಿಮ್ಮ ಗ್ಯಾಸ್​ನ ಕಂಪನಿಯ ಆ್ಯಪ್ ಅನ್ನೂ ಡೌನ್​ಲೋಡ್ ಮಾಡಬೇಕು. ಉದಾಹರಣೆಗೆ, ಇಂಡೇನ್ ಗ್ರಾಹಕರು ಐಒಸಿಎಲ್​ನ ಆ್ಯಪ್ ಡೌನ್​ಲೋಡ್ ಮಾಡಬೇಕು. ಹಾಗೆಯೇ, ಬಿಪಿಸಿಲ್ ಅಥವಾ ಎಚ್​ಪಿಸಿಎಲ್ ಬಳಕೆದಾರರು ಆಯಾ ಕಂಪನಿಗಳ ಆ್ಯಪ್​ಗಳನ್ನು ಬಳಸಿ ಬಯೋಮೆಟ್ರಿಕ್ ಆಧಾರ್ ಅಥೆಂಟಿಕೇಶನ್ ಮಾಡಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಮಾರ್ಗಸೂಚಿಗಳನ್ನು ಮುಂದಿಟ್ಟ ಬಿಸಿಸಿಐ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಬಿಸಿಸಿಐ ಎಲ್ಲಾ ತಂಡಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಿದೆ. ಈ ಮಾರ್ಗಸೂಚಿಗಳ ಪ್ರಕಾರವೇ ಅಭ್ಯಾಸ ನಡೆಸಬೇಕೆಂದು ತಿಳಿಸಲಾಗಿದೆ. ಬಿಸಿಸಿಐ ಮುಂದಿಟ್ಟಿರುವ ಮಾರ್ಗಸೂಚಿಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

  • ತಾಜಾ ಪಿಚ್‌ಗಳ ಬಳಕೆ: ಯಾವುದೇ ತಂಡವು ಅಭ್ಯಾಸದ ವೇಳೆ ತನ್ನ ಪ್ರತಿಸ್ಪರ್ಧಿ ತಂಡ ಬಳಸಿದ ಪಿಚ್ ಅಥವಾ ನೆಟ್‌ಗಳನ್ನು ಬಳಸುವಂತಿಲ್ಲ. ಪ್ರತಿ ಸೆಷನ್‌ಗೂ ಹೊಸದಾಗಿ ಸಿದ್ಧಪಡಿಸಿದ ಪಿಚ್‌ಗಳನ್ನೇ ನೀಡಬೇಕು. ಉದಾಹರಣೆಗೆ, ಬೆಳಿಗ್ಗೆ ‘ತಂಡ ಎ’ ಅಭ್ಯಾಸ ಮಾಡಿದ ಪಿಚ್‌ನಲ್ಲಿ ಸಂಜೆ ‘ತಂಡ ಬಿ’ ಅಭ್ಯಾಸ ಮಾಡುವಂತಿಲ್ಲ.
  • ನೆಟ್‌ಗಳ ಹಂಚಿಕೆಗೆ ನಿಷೇಧ: ಒಂದರ ನಂತರ ಒಂದರಂತೆ ತಂಡಗಳು ಅಭ್ಯಾಸ ನಡೆಸುತ್ತಿದ್ದರೂ ಸಹ, ಮೊದಲ ತಂಡ ಬಳಸಿದ ನೆಟ್‌ಗಳನ್ನು ಎರಡನೇ ತಂಡಕ್ಕೆ ನೀಡಲಾಗುವುದಿಲ್ಲ. ಇದು ‘ರೇಂಜ್ ಹಿಟ್ಟಿಂಗ್’ ಪಿಚ್‌ಗಳಿಗೂ ಅನ್ವಯಿಸುತ್ತದೆ.
  • ಅಭ್ಯಾಸ ಪಂದ್ಯಗಳ ಮಿತಿ: ಪ್ರತಿ ತಂಡವು ಗರಿಷ್ಠ 2 ಅಭ್ಯಾಸ ಪಂದ್ಯಗಳನ್ನು ಮಾತ್ರ ಆಡಬಹುದು ಮತ್ತು ಅದಕ್ಕಾಗಿ ಮಂಡಳಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ.
  • ಸಮಯದ ಮಿತಿ: ಫ್ಲಡ್‌ಲೈಟ್‌ಗಳ ಅಡಿಯಲ್ಲಿ ನಡೆಯುವ ಅಭ್ಯಾಸ ಪಂದ್ಯಗಳು 3.5 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಾರದು.
  • ಮುಖ್ಯ ಪಿಚ್‌ಗಳ ರಕ್ಷಣೆ: ತಂಡದ ಮೊದಲ ಹೋಮ್ ಮ್ಯಾಚ್‌ಗಿಂತ 4 ದಿನಗಳ ಮೊದಲು ಮುಖ್ಯ ಪಿಚ್ ಅಥವಾ ಸೆಂಟ್ರಲ್ ಸ್ಕ್ವೇರ್‌ನಲ್ಲಿ ಯಾವುದೇ ರೀತಿಯ ಅಭ್ಯಾಸ ಅಥವಾ ತರಬೇತಿ ಪಂದ್ಯಗಳನ್ನು ನಡೆಸುವಂತಿಲ್ಲ. ಈ ಅವಧಿಯಲ್ಲಿ ಹೋಮ್ ತಂಡಕ್ಕೆ ಬೇರೆ ಅಭ್ಯಾಸ ಮೈದಾನದ ಅಗತ್ಯವಿದ್ದರೆ, ರಾಜ್ಯ ಕ್ರಿಕೆಟ್ ಸಂಸ್ಥೆಗಳು ಅದನ್ನು ಉಚಿತವಾಗಿ ಒದಗಿಸಬೇಕು.
  • ಸಮಯ ಮತ್ತು ಆದ್ಯತೆ: ಅಭ್ಯಾಸದ ಸ್ಲಾಟ್‌ಗಳನ್ನು ಆರಿಸುವಾಗ ಹೋಮ್ ತಂಡಕ್ಕೆ ಮೊದಲ ಆದ್ಯತೆ ಇರುತ್ತದೆ.
    ಆದರೆ, ಹಿಂದಿನ ದಿನ ಪಂದ್ಯವಿದ್ದಲ್ಲಿ ಅಥವಾ ಪ್ರಯಾಣದ ಒತ್ತಡವಿದ್ದಲ್ಲಿ ಪ್ರವಾಸಿ ತಂಡಗಳ ವಿನಂತಿಯನ್ನೂ ಪರಿಗಣಿಸಲಾಗುತ್ತದೆ.
  • ಜವಾಬ್ದಾರಿಗಳು: ಅಭ್ಯಾಸದ ಸಮಯದಲ್ಲಿ ಊಟ, ವೈದ್ಯಕೀಯ ಸೇವೆ ಮತ್ತು ಸುರಕ್ಷತೆಯ ಸಂಪೂರ್ಣ ಜವಾಬ್ದಾರಿ ಆಯಾ ಹೋಮ್ ತಂಡದ್ದೇ ಆಗಿರುತ್ತದೆ.
  • ರೇಂಟ್ ಹಿಟ್ಟಿಂಗ್​ ಅಭ್ಯಾಸ: ಎಲ್ಲಾ ತಂಡಗಳಿಗೆ ನಿಗದಿತ ಮೈದಾನಗಳಲ್ಲಿ ಎರಡು ನೆಟ್ಸ್ ಅಭ್ಯಾಸ ಮತ್ತು ರೇಂಜ್-ಹಿಟ್ಟಿಂಗ್‌ಗಾಗಿ ಮುಖ್ಯ ಮೈದಾನದಲ್ಲಿ ಅವಕಾಶ ಒದಗಿಸಲು ಬಿಸಿಸಿಐ ಸೂಚಿಸಿದೆ.

ಇದನ್ನೂ ಓದಿ: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಅಲಭ್ಯ..!

ಯಾಕೆ ಈ ನಿಯಮ?

  • ಸಮಾನ ಅವಕಾಶ: ಮೊದಲು ಅಭ್ಯಾಸ ಮಾಡುವ ತಂಡಕ್ಕೆ ಪಿಚ್ ಚೆನ್ನಾಗಿರುತ್ತದೆ, ನಂತರ ಬರುವ ತಂಡಕ್ಕೆ ಪಿಚ್ ಹಾಳಾಗಿರುತ್ತದೆ . ಇದನ್ನು ತಡೆಗಟ್ಟಿ ಎರಡೂ ತಂಡಗಳಿಗೆ ಸಮಾನ ಗುಣಮಟ್ಟದ ಪಿಚ್ ಸಿಗಲಿ ಎಂಬುದು ಉದ್ದೇಶ.
  • ಗಾಯದ ಮುನ್ನೆಚ್ಚರಿಕೆ: ಬಳಸಿದ ಪಿಚ್‌ಗಳಲ್ಲಿ ಅಸಮತೋಲಿತ ಬೌನ್ಸ್ ಇರಬಹುದು, ಇದು ಬ್ಯಾಟರ್‌ಗಳಿಗೆ ಗಾಯ ಮಾಡುವ ಸಾಧ್ಯತೆ ಇರುತ್ತದೆ.
  • ನಿಖರ ಸಿದ್ಧತೆ: ಪಂದ್ಯದ ದಿನದ ಪಿಚ್ ಹೇಗಿರುತ್ತದೆ ಎಂಬ ನಿಖರ ಕಲ್ಪನೆ ಸಿಗಲು ತಾಜಾ ಪಿಚ್‌ಗಳ ಅಗತ್ಯವಿರುತ್ತದೆ.

 

Source link

Exit mobile version