ವೈಯುಕ್ತಿಕ ದಾಖಲೆಗಾಗಿ ಆಡುವುದನ್ನು ನಿಲ್ಲಿಸಿ… ಗಂಭೀರ್ ಖಡಕ್ ಸೂಚನೆ
ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲುವಿನ ಅಲೆಯಲ್ಲಿ ತೇಲುತ್ತಿದೆ. ಈ ವಿಶ್ವಕಪ್ ಗೆದ್ದ ಬೆನ್ನಲ್ಲೇ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ನೀಡಿದ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಗಂಭೀರ್, ಭಾರತ ತಂಡದಲ್ಲಿರುವ ಆಟಗಾರರು ವೈಯುಕ್ತಿಕ ದಾಖಲೆಗಾಗಿ ಆಡುವುದನ್ನು ನಿಲ್ಲಿಸಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಭಾರತೀಯ ಕ್ರಿಕೆಟ್ನಲ್ಲಿ ವೈಯಕ್ತಿಕ ಮೈಲಿಗಲ್ಲುಗಳ ಯುಗ ಮುಗಿದಿದೆ. ತಮ್ಮ ದಾಖಲೆಗಳಿಗಾಗಿ ಆಡುವುದನ್ನು ನಿಲ್ಲಿಸಬೇಕು. ಶತಕ ಅಥವಾ ಅರ್ಧಶತಕಕ್ಕಾಗಿ ಆಡಿ ಸಂಭ್ರಮಿಸುವುದನ್ನು ನಿಲ್ಲಿಸಿ, ಟ್ರೋಫಿಗಳನ್ನು ಗೆದ್ದು…