ಸುಪ್ರೀಂಕೋರ್ಟ್​ ಆದೇಶದಿಂದ ದರ್ಶನ್​​ಗೆ ಹೆಚ್ಚಿತು ಸಂಕಷ್ಟ; 2028ರವರೆಗೂ ಬರಲ್ಲ ಡಿ ಬಾಸ್ ಸಿನಿಮಾ? – Kannada News | Darshan Bail Plea Rejected: Renukaswamy Case Delays Career, Future Films at Risk

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಸಾಕ್ಷಿ ವಿಚಾರಣೆ ವಿಳಂಬ ಆಗುತ್ತಿದೆ ಎಂದು ನಟ ದರ್ಶನ್ ಅವರು ಆರೋಪಿಸಿದ್ದರು. ಇದೇ ಕಾರಣ ನೀಡಿ ಸುಪ್ರೀಂಕೋರ್ಟ್​​​ನಲ್ಲಿ ಜಾಮೀನು ಅರ್ಜಿ ಕೂಡ ಸಲ್ಲಿಕೆ ಮಾಡಿದ್ದರು. ಇದೇ ವೇಳೆ ಅವರು ಸುದೀರ್ಘ ಜೈಲುವಾಸದಿಂದ ಜೀವನೋಪಾಯಕ್ಕೂ ಸಮಸ್ಯೆ ಆಗುತ್ತಿದೆ ಎಂದು ಆರೋಪಿಸಿದ್ದರು. ಏನೇ ಹೇಳಿದರೂ ಕೋರ್ಟ್ ಮಾತ್ರ ದರ್ಶನ್ ಮನವಿಯನ್ನು ಪರುಸ್ಕರಿಸಿಲ್ಲ. ಮುಂದಿನ ಒಂದು ವರ್ಷ ದರ್ಶನ್ (Darshan)​​ ಜಾಮೀನು ಕೇಳುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದರಿಂದ ದರ್ಶನ್ ವೃತ್ತಿ ಜೀವನಕ್ಕೆ ಸಂಕಷ್ಟ ಎದುರಾಗಿದೆ.

ಜಾಮೀನು ಅರ್ಜಿವಿಳಂಬ ಆಗುತ್ತಿದೆ ಎಂದು ಹೇಳುವುದರ ಜೊತೆಗೆ ತಮ್ಮ ಸಿನಿಮಾಗಳ ಬಗ್ಗೆಯೂ ಸ್ಪಷ್ಟವಾಗಿ ಬರೆದಿದ್ದರು. ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ತಮ್ಮ ವೃತ್ತಿಜೀವನದ ಸಂಕಷ್ಟಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು. ‘ನಾನು ಪ್ರತಿ ವರ್ಷ ಸರಾಸರಿ 2 ರಿಂದ 3 ಸಿನಿಮಾಗಳನ್ನು ಮಾಡುತ್ತಿದ್ದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮೀಡಿಯಾ ಹೌಸ್ ಸ್ಟೂಡಿಯೋಸ್ ಅಂತಹ ದೊಡ್ಡ ಸಂಸ್ಥೆಗಳ ಚಿತ್ರಗಳಿಗೆ ಈಗಾಗಲೇ ಸಹಿ ಮಾಡಿದ್ದೇನೆ. ನಿರ್ಮಾಪಕರು ಸುಮಾರು 6 ಕೋಟಿ ರೂಪಾಯಿ ಬಂಡವಾಳ ಹೂಡಿದ್ದಾರೆ. ಸುದೀರ್ಘ ಜೈಲುವಾಸವು ನನ್ನ ಸಿನೆಮಾ ಭವಿಷ್ಯಕ್ಕೆ ಮರಣಗಂಟೆಯಾಗಲಿದೆ’ ಎಂದು ಅವರು ಅಲವತ್ತುಕೊಂಡಿದ್ದರು. ಆದರೆ ಕೋರ್ಟ್ ಈ ವಾದವನ್ನು ಪುರಸ್ಕರಿಸಿಲ್ಲ.

2028ರವರೆಗೂ ಸಿನಿಮಾ ಬರುವುದು ಅನುಮಾನ?

ಕೋರ್ಟ್ ಆದೇಶದ ಪ್ರಕಾರ ದರ್ಶನ್ ಇನ್ನೂ ಒಂದು ವರ್ಷ ಜೈಲಿನಲ್ಲೇ ಇರಬೇಕು. ಒಂದು ವೇಳೆ ಮುಂದಿನ ವರ್ಷ ಅವರು ಬಿಡುಗಡೆಯಾದರೂ, ಅವರು ಮತ್ತೆ ಫಿಟ್ ಆಗಿ, ಶೂಟಿಂಗ್ ಆರಂಭಿಸಿ, ಪೋಸ್ಟ್ ಪ್ರೊಡಕ್ಷನ್ ಮುಗಿಸಿ ಸಿನಿಮಾ ತೆರೆಗೆ ಬರಲು ಕನಿಷ್ಠ ಒಂದು ವರ್ಷ ಬೇಕಾಗುತ್ತದೆ. ಈ ಲೆಕ್ಕಾಚಾರದ ಪ್ರಕಾರ, ಮುಂದಿನ ಎರಡು ವರ್ಷಗಳ ಕಾಲ ದರ್ಶನ್ ಅವರ ಯಾವುದೇ ಹೊಸ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಗಳಿಲ್ಲ. ಇದು ಅವರ ವೃತ್ತಿಜೀವನಕ್ಕೆ ಮತ್ತು ಅವರ ಮೇಲೆ ಕೋಟಿಗಟ್ಟಲೆ ಹಣ ಹೂಡಿರುವ ನಿರ್ಮಾಪಕರಿಗೆ ಭಾರಿ ಹೊಡೆತ ನೀಡಿದೆ.

ಇದನ್ನೂ ಓದಿ: ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ

ಈ ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದಾರೆ. ಕಳೆದ 8 ತಿಂಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಇಷ್ಟು ನಿಧಾನಗತಿಯಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಪ್ರಕರಣ ಶೀಘ್ರವಾಗಿ ಮುಕ್ತಾಯಗೊಳ್ಳುವ ಲಕ್ಷಣಗಳಿಲ್ಲ. ಇದೇ ಅಂಶವನ್ನು ದರ್ಶನ್ ಅವರು ಜಾಮೀನು ಪಡೆಯಲು ಪ್ರಮುಖ ಅಸ್ತ್ರವಾಗಿ ಬಳಸಿದ್ದರು. ‘ಒಂದು ವರ್ಷದ ಒಳಗೆ 60 ಸಾಕ್ಷ್ಯಗಳ ವಿಚಾರಣೆ ಮುಗಿಸಿ, ಆ ಬಳಿಕ ವಿಚಾರಣಾ ನ್ಯಾಯಾಲಯದಲ್ಲಿಯೇ ಆರೋಪಿ (ದರ್ಶನ್) ಜಾಮೀನಿಗೆ ಅರ್ಜಿ ಸಲ್ಲಿಸಬಹುದು’ ಎಂದು ಕೋರ್ಟ್ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒಟಿಟಿಯಲ್ಲಿ ಬಿಡುಗಡೆ ಆಯ್ತು ‘ಧುರಂಧರ್ 2’ ಆದರೆ ಭಾರತೀಯರಿಗಲ್ಲ – Kannada News | Dhurandhar 2 movie released on Netflix but not in India

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ಅಬ್ಬರದ ಬಳಿಕ ಇದೀಗ ಒಟಿಟಿಗೆ ಬಂದಿದೆ. ‘ಧುರಂಧರ್ 2’ ಸಿನಿಮಾದ ಒಟಿಟಿ ಬಿಡುಗಡೆ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದವು. ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಲಿದೆ, ಜಿಯೋ ಹಾಟ್​​ಸ್ಟಾರ್​​ನಲ್ಲಿ ಮಾತ್ರವೇ ಬರಲಿದೆ ಎಂಬೆಲ್ಲ ಸುದ್ದಿಗಳು ಹಬ್ಬಿದ್ದವು. ಇದೀಗ ಕೊನೆಗೂ ‘ಧುರಂಧರ್ 2’ ಸಿನಿಮಾ ಒಟಿಟಿಗೆ ಬಂದಿದೆ. ಆದರೆ ಭಾರತೀಯರು ‘ಧುರಂಧರ್ 2’ ಸಿನಿಮಾ ವೀಕ್ಷಿಸಲು ಇನ್ನೂ ಸ್ವಲ್ಪ ಸಮಯ ಕಾಯಬೇಕಿದೆ. ಆದರೆ ಸದ್ಯಕ್ಕೆ ವಿದೇಶಿಗರು ಮಾತ್ರವೇ ರಣ್ವೀರ್ ಸಿಂಗ್ ನಟನೆಯ ಈ ಬ್ಲಾಕ್ ಬಸ್ಟರ್ ಸಿನಿಮಾ ವೀಕ್ಷಿಸಬಹುದಾಗಿದೆ.

‘ಧುರಂಧರ್ 2’ ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ. ಆದರೆ ಭಾರತದ ಹೊರತು ಇತರೆ ದೇಶಗಳಲ್ಲಿ ಮಾತ್ರವೇ ಈ ಸಿನಿಮಾವನ್ನು ನೆಟ್​​ಫ್ಲಿಕ್ಸ್​ ಬಳಕೆದಾರರು ವೀಕ್ಷಿಸಬಹುದಾಗಿದೆ. ಆದರೆ ಭಾರತದಲ್ಲಿ ಈ ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಬಿಡುಗಡೆಗೆ ಇನ್ನೂ ಕೆಲ ದಿನಗಳು ಭಾರತೀಯ ಪ್ರೇಕ್ಷಕರು ಕಾಯಬೇಕಿದೆ. ಈ ಹಿಂದೆ ‘ಆರ್​​ಆರ್​​ಆರ್’ ಸಹ ಇದೇ ತಂತ್ರವನ್ನು ಅನುಸರಿಸಿತ್ತು. ಈಗ ‘ಧುರಂಧರ್ 2’ ಸಹ ವಿದೇಶಕ್ಕೆ ನೆಟ್​​ಫ್ಲಿಕ್ಸ್ ಅನ್ನು ಭಾರತಕ್ಕೆ ಜಿಯೋ ಹಾಟ್​​ಸ್ಟಾರ್ ಅನ್ನು ಅವಲಂಬಿಸಿದೆ.

ಇದನ್ನೂ ಓದಿ: ಥಿಯೇಟರ್​ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು?

‘ಧುರಂಧರ್ 2’ ಸಿನಿಮಾ ಸೌದಿ ರಾಷ್ಟ್ರಗಳಲ್ಲಿ ನಿಷೇಧಕ್ಕೆ ಒಳಪಟ್ಟಿತ್ತು. ಅಲ್ಲಿನ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿರಲಿಲ್ಲ. ಪಾಕಿಸ್ತಾನದಲ್ಲಂತೂ ಭಾರತದ ಯಾವ ಸಿನಿಮಾ ಸಹ ಬಿಡುಗಡೆ ಆಗುವುದಿಲ್ಲ. ಆದರೆ ಈಗ ಸೌದಿ ರಾಷ್ಟ್ರಗಳು ಹಾಗೂ ಪಾಕಿಸ್ತಾನದಲ್ಲೂ ಸಹ ನೆಟ್​​ಫ್ಲಿಕ್ಸ್​ನಲ್ಲಿ ‘ಧುರಂಧರ್ 2’ ಸಿನಿಮಾ ವೀಕ್ಷಿಸಬಹುದಾಗಿದೆ. ವಿಶ್ವದಾದ್ಯಂತ ನೆಲೆಸಿರುವ ಭಾರತೀಯರು ಮತ್ತು ವಿಶ್ವ ಸಿನಿಮಾ ಪ್ರೇಮಿಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚು ಜನರಿಗೆ ತಲುಪಲೆಂದು ‘ಧುರಂಧರ್ 2’ ಸಿನಿಮಾವನ್ನು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಮಾಡಲಾಗಿದೆ.

ಇನ್ನು ‘ಧರುಂಧರ್ 2’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​ನಲ್ಲಿ ದಾಖಲೆಗಳನ್ನೇ ಬರೆದಿದೆ. ಇದೀಗ ಸಿನಿಮಾದ ಬಾಕ್ಸ್ ಆಫೀಸ್ ಓಟ ಮುಗಿದಿದ್ದು, ಸುಮಾರು 1800 ಕೋಟಿ ಮೊತ್ತವನ್ನು ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದೆ. ಆ ಮೂಲಕ ಹಲವು ಹಳೆಯ ದಾಖಲೆಗಳನ್ನು ಸಿನಿಮಾ ಮುರಿದು ಹಾಕಿದೆ. ಭಾರತದಲ್ಲಿ ಜಿಯೋ ಹಾಟ್​​ಸ್ಟಾರ್ ಅದ್ಧೂರಿಯಾಗಿ ‘ಧುರಂಧರ್ 2’ ಸಿನಿಮಾವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ‘ಧುರಂಧರ್ 2’ ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶನ ಮಾಡಿದ್ದು, ಸಿನಿಮಾನಲ್ಲಿ ರಣ್ವೀರ್ ಸಿಂಗ್ ಜೊತೆಗೆ ಮಾಧವನ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಂಪಾಲ್ ಇನ್ನೂ ಹಲವರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ತಾಯಿ ಆಸ್ತಿ ಬೇಕು, ಆಕೆ ಬೇಡ ಎಂದ ಮಗಳಿಗೆ ಹೈಕೋರ್ಟ್​​ ತಪರಾಕಿ: ಮಹತ್ವದ ಆದೇಶ ನೀಡಿದ ಕೋರ್ಟ್​ – Kannada News | Wanted Mother’s Property, Not Her Care: Karnataka High Court Issues Order Against Daughter

ಕರ್ನಾಟಕ ಹೈಕೋರ್ಟ್​​Image Credit source: dinamalar.com

ಬೆಂಗಳೂರು, ಮೇ 15: ಕಾನೂನುಬದ್ಧ, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್ (High Court of Karnataka)​​, ತಾಯಿಯಿಂದ ಉಡುಗೊರೆಯಾಗಿ ಪಡೆದಿದ್ದ ಆಸ್ತಿಯನ್ನು ಹಿಂತಿರುಗಿಸುವಂತೆ 44 ವರ್ಷದ ಮಹಿಳೆಗೆ ಆದೇಶಿಸಿದ್ದ ತೀರ್ಪನ್ನು ಎತ್ತಿಹಿಡಿದಿದೆ. ತಾಯಿ ನೀಡಿದ್ದ ಗಿಫ್ಟ್ ಡೀಡ್ ರದ್ದುಗೊಳಿಸಿದ್ದ ಹಿರಿಯ ನಾಗರಿಕ ನಿರ್ವಹಣಾ ನ್ಯಾಮಂಡಳಿ ಮತ್ತು ಉಪವಿಭಾಗಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ಪವಿತ್ರಾ ಎಂಬ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಮೂರ್ತಿ ಸಚಿನ್ ಎಸ್. ಮಗದುಮ್ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಸ್ವಂತ ಆಸ್ತಿ ಹೊಂದಿದ್ದರೂ, ಅದನ್ನು ಮಕ್ಕಳಿಗೆ ವರ್ಗಾಯಿಸಿದ ಬಳಿಕ ಬಾಡಿಗೆ ಮನೆಯಲ್ಲಿ ವಾಸಿಸಲು ಒತ್ತಾಯಿತಳಾದ ಹಿರಿಯ ನಾಗರಿಕರ ಅಸಹಾಯಕ ಸ್ಥಿತಿಯನ್ನು ಈ ಪ್ರಕರಣ ಸ್ಪಷ್ಟವಾಗಿ ತೋರಿಸುತ್ತದೆ ಎಂದು ಆದೇಶದಲ್ಲಿ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. ಪತಿ ಜೊತೆಗಿನ ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಹೇಮಾ ಸುಮಾರು ಮೂರುವರೆ ವರ್ಷಗಳ ಕಾಲ ತಮ್ಮ ಮಗಳು ಪವಿತ್ರಾ ಜೊತೆ ತಮ್ಮದೇ ಮನೆಯಲ್ಲಿ ವಾಸಿಸುತ್ತಿದ್ದರು. ಈ ವೇಳೆ, ಬಾಡಿಗೆ ಆದಾಯವನ್ನು ಅವರ ಹಿತಕ್ಕಾಗಿ ಬಳಸಲಾಗುತ್ತದೆ ಎಂಬ ಭರವಸೆಯೊಂದಿಗೆ ಆಸ್ತಿಯನ್ನು ಗಿಫ್ಟ್ ಡೀಡ್ ಮೂಲಕ ತಮ್ಮ ಹೆಸರಿಗೆ ವರ್ಗಾಯಿಸಲು ಮಕ್ಕಳು ಸಲಹೆ ನೀಡಿದ್ದರು.

ಇದನ್ನೂ ಓದಿ: ಮೋದಿ ಮನವಿಗೆ ಸ್ಪಂದನೆ; ಪೆಟ್ರೋಲ್ ಉಳಿಸಲು ಸೈಕಲ್​ನಲ್ಲೇ ನ್ಯಾಯಾಲಯಕ್ಕೆ ಬಂದ ಹೈಕೋರ್ಟ್ ನ್ಯಾಯಮೂರ್ತಿ

ಹೇಮಾ ಇದಕ್ಕೆ ಒಪ್ಪಿಕೊಂಡು ಗಿಫ್ಟ್ ಡೀಡ್ ಮಾಡಿಕೊಟ್ಟ ಬಳಿಕ, ಮಗಳು ಪವಿತ್ರಾ ಮತ್ತು ಮಗ ಆರ್. ವೇಣುಗೋಪಾಲ್ ಆಸ್ತಿಯ ವಿವಿಧ ಭಾಗಗಳಿಂದ ಬಾಡಿಗೆ ಹಣ ಸಂಗ್ರಹಿಸಲು ಆರಂಭಿಸಿದ್ದರು. ಆದರೆ, ನಂತರ ಮಕ್ಕಳು ಮಾನಸಿಕ ಕಿರುಕುಳ ನೀಡಿದರು ಹಾಗೂ ಮೂಲಭೂತ ಅಗತ್ಯಗಳನ್ನು ಪೂರೈಸಲಿಲ್ಲ ಎಂದು ಹೇಮಾ ಆರೋಪಿಸಿದ್ದರು. ಅಲ್ಲದೆ ಇದರಿಂದ ತಾವು ಬಾಡಿಗೆ ಮನೆಯಲ್ಲಿ ವಾಸಿಸಬೇಕಾದ ಸ್ಥಿತಿ ಎದುರಾದರೂ, ಮಕ್ಕಳೇ ಆಸ್ತಿಯ ಬಾಡಿಗೆ ಹಣ ಪಡೆದುಕೊಳ್ಳುತ್ತಿದ್ದರು ಎಂದು ಅವರು ದೂರಿದ್ದರು. ಈ ಸಂಬಂಧ ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ಕಾಯ್ದೆ-2007ರ ಸೆಕ್ಷನ್ 23(1) ಅಡಿಯಲ್ಲಿ ಗಿಫ್ಟ್ ಡೀಡ್ ರದ್ದುಪಡಿಸಲು ಮೆಂಟಿನನ್ಸ್ ಟ್ರಿಬ್ಯೂನಲ್‌ಗೆ ಹೇಮಾ ಅರ್ಜಿ ಸಲ್ಲಿಸಿದರು. ದಾಖಲೆಗಳನ್ನು ಪರಿಶೀಲಿಸಿದ ಟ್ರಿಬ್ಯೂನಲ್, ಗಿಫ್ಟ್ ಡೀಡ್ ರದ್ದುಪಡಿಸಿ ಆಸ್ತಿಯನ್ನು ಹೇಮಾಗೆ ಮರು ಹಸ್ತಾಂತರಿಸಲು ಆದೇಶಿಸಿತ್ತು. ಈ ಆದೇಶವನ್ನು ಉಪಆಯುಕ್ತರೂ ಮಾನ್ಯಗೊಳಿಸಿದ ಬಳಿಕ, ಮಗಳು ಪವಿತ್ರಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಗಿಫ್ಟ್ ಡೀಡ್‌ನಲ್ಲಿ ತಾಯಿಯನ್ನು ನೋಡಿಕೊಳ್ಳಬೇಕೆಂಬ ಸ್ಪಷ್ಟ ಷರತ್ತು ಇಲ್ಲ ಎಂದು ವಾದಿಸಿದ್ದ ಪವಿತ್ರಾ ಪರ ವಕೀಲರು, ಆಸ್ತಿ ಪ್ರೀತಿ ಮತ್ತು ಸ್ನೇಹದಿಂದ ನೀಡಲಾಗಿದೆ. ಹೀಗಾಗಿ ಸೆಕ್ಷನ್ 23(1) ಅನ್ವಯಿಸುವುದಿಲ್ಲ ಎಂಬ ವಾದ ಮುಂದಿಟ್ಟಿದ್ದರು. ಇದಕ್ಕೆ ಪ್ರತಿಯಾಗಿ, ಹಿರಿಯ ನಾಗರಿಕರನ್ನು ನೋಡಿಕೊಳ್ಳುವ ಷರತ್ತು ಗಿಫ್ಟ್ ಡೀಡ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿರಬೇಕೆಂಬ ಅವಶ್ಯಕತೆ ಇಲ್ಲ. ಪರಿಸ್ಥಿತಿ, ನಡೆನುಡಿ ಮತ್ತು ಪ್ರಕರಣದ ಸನ್ನಿವೇಶಗಳಿಂದ ಅದನ್ನು ಅರ್ಥಮಾಡಿಕೊಳ್ಳಬಹುದು ಎಂಬುದನ್ನು ಹೇಮಾ ಪರ ವಕೀಲರು ನ್ಯಾಯಾಲದ ಗಮನಕ್ಕೆ ತಂದಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ಕಾಯ್ದೆ ಒಂದು ಕಲ್ಯಾಣಮುಖಿ ಕಾನೂನು ಎಂದು ಹೇಳಿ, ಪ್ರತಿ ಪ್ರಕರಣದಲ್ಲೂ ಕಡ್ಡಾಯವಾಗಿ ಲಿಖಿತ ಷರತ್ತು ಬೇಕೆಂದು ಒತ್ತಾಯಿಸಿದರೆ ಕಾನೂನಿನ ಉದ್ದೇಶವೇ ವಿಫಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿತು. ಹೇಮಾ ಅವರು ನಿವೃತ್ತ ಸರ್ಕಾರಿ ಶಾಲಾ ಶಿಕ್ಷಕಿಯಾಗಿದ್ದು, ತಮ್ಮ ಸ್ವಂತ ಆಸ್ತಿಯನ್ನು ಮಗ ಮತ್ತು ಮಗಳ ಹೆಸರಿಗೆ ವರ್ಗಾಯಿಸುವ ಮೂಲಕ ಮಕ್ಕಳ ಮೇಲಿನ ನಂಬಿಕೆ ಮತ್ತು ಭದ್ರತೆಯ ನಿರೀಕ್ಷೆ ಇಟ್ಟಿದ್ದರು. ಈಗ ಅವರು ಬಾಡಿಗೆ ಮನೆಯಲ್ಲಿ ವಾಸಿಸುವಂತಾಗಿದೆ. ತಮ್ಮ ಸ್ವಂತ ಆಸ್ತಿಯ ಆಶ್ರಯವನ್ನೂ, ಅದರಿಂದ ದೊರೆಯುವ ಆದಾಯವನ್ನೂ ಕಳೆದುಕೊಂಡಿದ್ದಾರೆ. ಈ ಎಲ್ಲ ಸನ್ನಿವೇಶಗಳನ್ನು ಪರಿಶೀಲಿಸಿದಾಗ, ಆಸ್ತಿ ವರ್ಗಾವಣೆ ಕಾಳಜಿ ಮತ್ತು ಪಾಲನೆ ಎಂಬ ಅಪ್ರತ್ಯಕ್ಷ ಭರವಸೆಯ ಮೇಲೆ ನಡೆದಿತ್ತು ಎಂಬುದು ಸ್ಪಷ್ಟವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಪವಿತ್ರಾ ಸ್ವಂತ ಮನೆ ಹೊಂದಿದ್ದರೂ, ತಮ್ಮ ವಯೋವೃದ್ಧ ತಾಯಿಯನ್ನು ಬಾಡಿಗೆ ಮನೆಯಲ್ಲಿ ವಾಸಿಸಲು ಬಿಟ್ಟಿರುವುದು ನೈತಿಕ ಮತ್ತು ಕಾನೂನುಬದ್ಧ ಕರ್ತವ್ಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:43 am, Fri, 15 May 26

Source link

‘ಜೈಲರ್ 2’ ಸೆಟ್​​​ನಲ್ಲಿ ಭೀಕರ ಅವಘಡ; ತಂಡದ ಸಿಬ್ಬಂದಿ ಸಾವು – Kannada News | Jailer 2 Set Tragedy: Crew Member Dies From Electrocution; Shivanna’s Role and Release Info

ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡರೂ ಸಿನಿಮಾ ಸೆಟ್​​​ನಲ್ಲಿ ಸಂಭವಿಸುವ ಅವಘಡಗಳು ಕಡಿಮೆ ಆಗೋದಿಲ್ಲ. ಈಗ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ (Jailer 2 Movie) ಸೆಟ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಚಿತ್ರದ ಕಲಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಕಾರ್ತಿಕೇಯನ್ ಎಂಬ ಯುವಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಇದು ಇಡೀ ತಂಡವನ್ನು ಶಾಕ್​​ಗೆ ತಳ್ಳಿದೆ.

1. ಜೈಲರ್ 2 ಸೆಟ್​​​ನಲ್ಲಿ ಅವಘಢ

2. ಯುವ ಆರ್ಟ್ ಕಲಾವಿದನ ಸಾವು

3. ವಿದ್ಯುತ್ ತಂತಿ ತಾಗಿ ಸಾವು

ಚೆನ್ನೈನ ಪಣಯೂರ್‌ನಲ್ಲಿರುವ ಖಾಸಗಿ ಸ್ಟುಡಿಯೋವೊಂದರಲ್ಲಿ ಚಿತ್ರದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದವು. ಮನೆಯ ಮಾದರಿಯ ಸೆಟ್ ನಿರ್ಮಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಕಾರ್ತಿಕೇಯನ್‌ಗೆ ತೀವ್ರವಾಗಿ ಶಾಕ್ ಹೊಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಈ ಕುರಿತು ಕಾನತ್ತೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕನ್ನಡಿಗರಿಗೆ ಈ ಸಿನಿಮಾ ಕೇವಲ ರಜನಿಕಾಂತ್ ಚಿತ್ರವಲ್ಲ, ಬದಲಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಸಿನಿಮಾ ಕೂಡ ಹೌದು. ‘ಜೈಲರ್’ ಮೊದಲ ಭಾಗದಲ್ಲಿ ಶಿವಣ್ಣ ಅವರ ಅತಿಥಿ ಪಾತ್ರ ಇಡೀ ಸಿನಿಮಾಕ್ಕೆ ಒಂದು ದೊಡ್ಡ ಮೈಲೇಜ್ ನೀಡಿತ್ತು. ಥಿಯೇಟರ್‌ನಲ್ಲಿ ಶಿವಣ್ಣನ ಎಂಟ್ರಿಗೆ ಸಿಕ್ಕ ರೆಸ್ಪಾನ್ಸ್ ನೋಡಿ ಚಿತ್ರತಂಡ ಬೆರಗಾಗಿತ್ತು. ಹೀಗಾಗಿ, ‘ಜೈಲರ್ 2’ ಚಿತ್ರದಲ್ಲೂ ಶಿವಣ್ಣ ಅವರ ಪಾತ್ರ ಮುಂದುವರಿಯಲಿದ್ದು, ಸೀಕ್ವೆಲ್‌ನಲ್ಲಿ ಅವರ ಪಾತ್ರ ಇನ್ನಷ್ಟು ಹೈಲೈಟ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗ ಸಂಭವಿಸಿದ ಈ ಸಾವು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಇದನ್ನೂ ಓದಿ: ‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್?

ಇತ್ತೀಚಿನ ವರದಿಗಳ ಪ್ರಕಾರ ‘ಜೈಲರ್ 2’ ಸಿನಿಮಾ ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆಯಂತೆ. ಸನ್ ಪಿಕ್ಚರ್ಸ್ ಸಂಸ್ಥೆಯು ಶೀಘ್ರದಲ್ಲೇ ರಿಲೀಸ್ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ರಮ್ಯಾ ಕೃಷ್ಣನ್, ಯೋಗಿ ಬಾಬು ಮೊದಲಾದವರು ನಟಿಸುತ್ತಿದ್ದಾರೆ. ಮೊದಲ ಭಾಗವು ಜಾಗತಿಕವಾಗಿ 600 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಅಬ್ಬರಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಡಿ.ಕೆ. ಶಿವಕುಮಾರ್ 64ನೇ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು! – Kannada News | DCM DK Shivakumar Celebrates 64th Birthday: Vedic Chants and Celebrations at Sadashivanagar Residence

ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಸದಾಶಿವನಗರದ ನಿವಾಸದಲ್ಲಿ ಸಂಭ್ರಮ ಮನೆಮಾಡಿದೆ. ಮುಂಜಾನೆಯೇ ಡಿಸಿಎಂ ಮನೆ ಮುಂದೆ ಆಗಮಿಸಿದ ವೇದ ವಿದ್ವಾಂಸರು ಹಾಗೂ ಋತ್ವಿಕರು ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ, ವೇದಘೋಷದೊಂದಿಗೆ ಡಿ ಕೆ ಶಿವಕುಮಾರ್ ಅವರಿಗೆ ಆಯುಷ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಅವರು, ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Darshan Thoogudeepa bail : ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ – Kannada News | Darshan Thoogudeepa’s bail application rejected by Supreme Court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್​​ನಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್​​ರ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ.

ಜಾಮೀನು ಅರ್ಜಿಯ ವಿಚಾರಣೆ ಆಲಿಸಿದ ಸುಪ್ರೀಂಕೋರ್ಟ್, ಪ್ರಕರಣದ ವಿಚಾರಣೆಗೆ ಒಂದು ವರ್ಷದ ಕಾಲಾವಧಿ ನೀಡಿದ್ದು, ಅಷ್ಟರಲ್ಲಿ ಸಾಕ್ಷ್ಯಗಳ ವಿಚಾರಣೆ ಮುಗಿಯದಿದ್ದಲ್ಲಿ, ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ಹೇಳಿದೆ. ಅಲ್ಲಿಗೆ, ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ವಾಸ ಖಾಯಂ ಆದಂತಾಗಿದೆ. ಒಂದು ವರ್ಷದ ಬಳಿಕವಷ್ಟೆ ಅವರು ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್​​ಪಿಪಿ ಪ್ರಸನ್ನ ತಿರುಗೇಟು

ಸುಪ್ರೀಂ ಕೋರ್ಟ್​​ನಲ್ಲಿ ಇಂದು ನಟ ದರ್ಶನ್ ಪರ ವಾದ ಮಂಡಿಸಿದ ಖ್ಯಾತ ವಕೀಲ ಮುಕುಲ್ ರೊಹ್ಟಗಿ, ‘272ಕ್ಕೂ ಹೆಚ್ಚು ಸಾಕ್ಷಿಗಳು ಪ್ರಕರಣದಲ್ಲಿದ್ದು, ಈ ವರೆಗೆ 10 ಸಾಕ್ಷ್ಯಗಳನ್ನು ಮಾತ್ರವೇ ವಿಚಾರಣೆ ಮಾಡಲಾಗಿದೆ. ಮುಖ್ಯ ಸಾಕ್ಷಿಗಳ ವಿಚಾರಣೆಯನ್ನಾದರೂ ಮುಗಿಸುವಂತೆ ನಾವು ಕೇಳಿದ್ದೆವು ಆದರೆ ಅದು ಸಹ ಸಾಧ್ಯವಾಗಿಲ್ಲ’ ಎಂದರು. ಆದರೆ ರೊಹ್ಟಗಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿದ್ಧಾರ್ಥ್ ಲೂತ್ರಾ, ‘ನೀವು (ಆರೋಪಿಗಳು) ಸಾಕ್ಷ್ಯಗಳಿಗೆ ಏನೇನು ಮಾಡಿದ್ದೀರೆಂದು ಹೇಳಿದರೆ ನಿಮ್ಮ ಜಾಮೀನು ಅರ್ಜಿಯೇ ರದ್ದಾಗಲಿದೆ’ ಎಂದರು. ಬಳಿಕ ನ್ಯಾಯಾಲಯಕ್ಕೆ ಮಾಹಿತಿ ನೀಡಿದ ವಕೀಲರು, ‘ಮುಂದಿನ ಒಂದು ವರ್ಷದಲ್ಲಿ ಸಾಕ್ಷ್ಯಗಳ ವಿಚಾರಣೆ ಮುಗಿಸುವುದಾಗಿ ಮಾಹಿತಿ ನೀಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 11:26 am, Fri, 15 May 26

Source link

Vasthu Tips: ಮನೆಯಲ್ಲಿ ಹಾವಿನ ಫೋಟೋ ಇಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Naga Devata Photo at Home: Vastu Tips, Benefits and Right Direction for Prosperity

ಮನೆಯಲ್ಲಿ ಹಾವಿನ ಫೋಟೋ ಇಡುವುದು ಶುಭವೇ?Image Credit source: Pinterest

ಅನೇಕರು ತಮ್ಮ ಮನೆಯ ಅಂದವನ್ನು ಹೆಚ್ಚಿಸಲು ಅಥವಾ ಧಾರ್ಮಿಕ ನಂಬಿಕೆಯಿಂದ ವಿವಿಧ ಫೋಟೋಗಳನ್ನು ಗೋಡೆಗೆ ನೇತುಹಾಕುತ್ತಾರೆ. ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ಹಾವಿನ ಅಥವಾ ನಾಗದೇವತೆಯ ಫೋಟೋ ಇರಿಸುವ ಬಗ್ಗೆ ಅನೇಕರಲ್ಲಿ ಗೊಂದಲವಿದೆ. ಆದ್ದರಿಂದ ಶಾಸ್ತ್ರಗಳ ಪ್ರಕಾರ ಮನೆಯಲ್ಲಿ ಹಾವಿನ ಫೋಟೋ ಇಡಬಹುದೇ? ಇಟ್ಟರೆ ಯಾವ ದಿಕ್ಕಿನಲ್ಲಿಡಬೇಕು? ಎಂಬದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಸನಾತನ ಧರ್ಮದಲ್ಲಿ ಹಾವಿನ ಮಹತ್ವ:

ಹಿಂದೂ ಧರ್ಮದಲ್ಲಿ ಹಾವುಗಳನ್ನು ಕೇವಲ ಪ್ರಾಣಿಗಳಾಗಿ ನೋಡದೆ, ದೈವಿಕ ಶಕ್ತಿಯ ಸಂಕೇತವಾಗಿ ಪೂಜಿಸಲಾಗುತ್ತದೆ. ಶಿವನ ಆಭರಣ ಹಾಗೂ ಶ್ರೀಕೃಷ್ಣನು ಹಾವಿನ ಮೇಲೆ ನೃತ್ಯ ಮಾಡುವ ಮೂಲಕ ಅದರ ದೈವಿಕ ಸಂಬಂಧವನ್ನು ಸಾರಿದ್ದಾನೆ. ಹೀಗಾಗಿ, ಹಾವನ್ನು ದೇವತೆಯ ರೂಪದಲ್ಲಿ ಮನೆಯಲ್ಲಿ ಆರಾಧಿಸುವುದು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ.

ಯಾವ ದಿಕ್ಕಿನಲ್ಲಿ ಇರಿಸುವುದು ಉತ್ತಮ?

ವಾಸ್ತು ಶಾಸ್ತ್ರದ ಪ್ರಕಾರ, ಯಾವುದೇ ಫೋಟೋವನ್ನು ತಪ್ಪು ದಿಕ್ಕಿನಲ್ಲಿ ಇರಿಸಿದರೆ ಅದು ನಕಾರಾತ್ಮಕ ಪರಿಣಾಮ ಬೀರಬಹುದು. ಆದ್ದರಿಂದ ಮನೆಯ ಪೂರ್ವ ದಿಕ್ಕಿನಲ್ಲಿ ಹಾವಿನ ಫೋಟೋ ಇರಿಸುವುದು ಶುಭ ಫಲಿತಾಂಶಗಳನ್ನು ನೀಡುತ್ತದೆ. ಇದಲ್ಲದೇ ಉತ್ತರ ದಿಕ್ಕಿನಲ್ಲಿ ಇರಿಸುವುದರಿಂದ ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆ ಎಂದು ಜ್ಯೋತಿಷ್ಯ ತಜ್ಞರು ಅಭಿಪ್ರಾಯಪಡುತ್ತಾರೆ.

ಮನೆಯಲ್ಲಿ ಹಾವಿನ ಫೋಟೋ ಇರಿಸುವುದರಿಂದಾಗುವ ಪ್ರಯೋಜನಗಳು:

ಮನೆಯಲ್ಲಿ ನಾಗದೇವತೆಯ ಅಥವಾ ಹಾವಿನ ಫೋಟೋವನ್ನು ಸರಿಯಾದ ನಿಯಮದಂತೆ ಇರಿಸುವುದರಿಂದ ಹಲವು ಲಾಭಗಳಿವೆ. ಇದು ಮನೆಗೆ ಪ್ರವೇಶಿಸುವ ದುಷ್ಟ ಶಕ್ತಿಗಳನ್ನು ಮತ್ತು ನಕಾರಾತ್ಮಕ ಕಂಪನಗಳನ್ನು ತಡೆಯುತ್ತದೆ. ಕೆಟ್ಟ ದೃಷ್ಟಿಯಿಂದ (Evil Eye) ಮನೆಯನ್ನು ರಕ್ಷಿಸುವ ಕವಚದಂತೆ ಇದು ಕೆಲಸ ಮಾಡುತ್ತದೆ. ವೃತ್ತಿ ಜೀವನದಲ್ಲಿ ಏಳಿಗೆ, ಆರ್ಥಿಕ ಸುಧಾರಣೆ ಮತ್ತು ಉತ್ತಮ ಆರೋಗ್ಯ ಲಭಿಸುತ್ತದೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಕೆಲಸಗಳು ತ್ವರಿತವಾಗಿ ಪೂರ್ಣಗೊಳ್ಳಲು ಇದು ಪೂರಕವಾಗಿದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಗಮನಿಸಬೇಕಾದ ಎಚ್ಚರಿಕೆಗಳು ಮತ್ತು ನಿಯಮಗಳು:

ಹಾವಿನ ಫೋಟೋ ಇಡುವಾಗ ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸುವುದು ಅತ್ಯಗತ್ಯ. ಮನೆಯಲ್ಲಿ ತುಂಬಾ ದೊಡ್ಡದಾದ ಅಥವಾ ಭಯ ಹುಟ್ಟಿಸುವಂತಹ ಹಾವಿನ ಚಿತ್ರಗಳನ್ನು ಇಡಬಾರದು. ಇದು ಮನಸ್ಸಿನಲ್ಲಿ ಆತಂಕವನ್ನು ಮೂಡಿಸಬಹುದು. ಒಂದು ವೇಳೆ ಹಾವಿನ ಫೋಟೋವನ್ನು ತಪ್ಪು ದಿಕ್ಕಿನಲ್ಲಿ ಇರಿಸಿದರೆ, ಕನಸಿನಲ್ಲಿ ಹಾವು ಬೆನ್ನಟ್ಟುವಂತೆ ಭಾಸವಾಗುವುದು ಅಥವಾ ಆರ್ಥಿಕ ಮತ್ತು ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುತ್ತದೆ. ಶಾಂತವಾಗಿರುವ ಅಥವಾ ದೈವಿಕ ಕಳೆ ಇರುವ ನಾಗದೇವತೆಯ ಫೋಟೋ ಆಯ್ಕೆ ಮಾಡುವುದು ಉತ್ತಮ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಖೈಬರ್ ಪಖ್ತುಂಖ್ವಾದಲ್ಲಿ ಭಾರಿ ಉಗ್ರ ದಾಳಿ: ಪಾಕಿಸ್ತಾನದ 18 ಮಂದಿ ಭದ್ರತಾ ಸಿಬ್ಬಂದಿ ಸಾವು – Kannada News | 18 Pakistan Security Personnel Killed in Coordinated TTP Terror Attacks in Khyber Pakhtunkhwa

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI

ಇಸ್ಲಾಮಾಬಾದ್, ಮೇ 15: ಪಾಕಿಸ್ತಾನದ (Pakistan) ವಾಯವ್ಯ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದಲ್ಲಿ (Khyber Pakhtunkhwa) ಉಗ್ರರು ನಡೆಸಿದ ಸರಣಿ ದಾಳಿಯಲ್ಲಿ ಕನಿಷ್ಠ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ನಿಷೇಧಿತ ಸಂಘಟನೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP) ಉಗ್ರರು ಸೇನಾ ಶಿಬಿರಗಳು ಮತ್ತು ಪೊಲೀಸ್ ಚೌಕಿಗಳನ್ನು ಗುರಿಯಾಗಿಸಿಕೊಂಡು ಈ ಭೀಕರ ದಾಳಿ ನಡೆಸಿದ್ದಾರೆ.

ಮುಖ್ಯಾಂಶಗಳು

  • ಬಜೌರ್ ಜಿಲ್ಲೆಯ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ.
  • ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಕನಿಷ್ಠ 9 ಉಗ್ರರ ಸಾವು.
  • ಪ್ರಾಂತ್ಯದ ಇತರ ಭಾಗಗಳಲ್ಲಿ ನಡೆದ ದಾಳಿಗಳಲ್ಲಿ ನಾಲ್ವರು ಪೊಲೀಸರ ಸಾವು.

ಘಟನೆಯ ವಿವರ

ಪಾಕಿಸ್ತಾನದ ಬಜೌರ್ ಜಿಲ್ಲೆಯ ದಮಂಗಿ ಸ್ಕೌಟ್ಸ್ ಕ್ಯಾಂಪ್‌ನ ಮುಖ್ಯ ದ್ವಾರದ ಬಳಿ ಉಗ್ರನೊಬ್ಬ ಆತ್ಮಹತ್ಯಾ ಸ್ಫೋಟ ನಡೆಸುವ ಮೂಲಕ ದಾಳಿಯನ್ನು ಆರಂಭಿಸಿದ್ದಾನೆ. ಸ್ಫೋಟದ ಬೆನ್ನಲ್ಲೇ ಸುಮಾರು 20ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಉಗ್ರರು ಶಿಬಿರಕ್ಕೆ ನುಗ್ಗಿ ಮನಬಂದಂತೆ ಗುಂಡಿನ ಮಳೆಗರೆದಿದ್ದಾರೆ. ಈ ಗುಂಡಿನ ಕಾಳಗದಲ್ಲಿ 14 ಸಿಬ್ಬಂದಿ ಹತರಾಗಿದ್ದಾರೆ. ಇದೇ ವೇಳೆ ಐನಾಯಿ ಕಿಲೆ ಮತ್ತು ಮಾಮಂಡ್ ಪ್ರದೇಶಗಳಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ನಾಲ್ವರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಘಟನಾ ಸ್ಥಳವನ್ನು ಸೇನೆಯು ಸುತ್ತುವರೆದಿದೆ. ಅಡಗಿಕೊಂಡಿರುವ ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ. ಪಾಕಿಸ್ತಾನದಲ್ಲಿ ಆಗಾಗ್ಗೆ ನಡೆಯುತ್ತಿರುವ ಈ ದಾಳಿಗಳು ಅಲ್ಲಿನ ಭದ್ರತಾ ಲೋಪಗಳನ್ನು ಬಹಿರಂಗಪಡಿಸಿವೆ. ಆಗಾಗ್ಗೆ ಸಂಭವಿಸುವ ಸ್ಫೋಟಗಳಿಂದಾಗಿ ಸೇನೆ ಮತ್ತು ನಾಗರಿಕರು ತೀವ್ರ ಆತಂಕದಲ್ಲಿ ದಿನಕಳೆಯುವಂತಾಗಿದೆ.

ಇದನ್ನೂ ಓದಿ: ಹಾರ್ಮುಜ್‌ ಸುತ್ತಲಿನ ಪ್ರದೇಶವೂ ಸುರಕ್ಷಿತವಲ್ಲ! ಮತ್ತೆ ಭಾರತದ ಹಡಗಿನ ಮೇಲೆ ದಾಳಿ

ಕಳೆದ ಮಂಗಳವಾರವಷ್ಟೇ ಖೈಬರ್ ಪಖ್ತುಂಖ್ವಾದ ನೌರಂಗ್ ಬಜಾರ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದ ವಾಯವ್ಯ ಭಾಗದಲ್ಲಿ ಉಗ್ರರ ಚಟುವಟಿಕೆಗಳು ಗಣನೀಯವಾಗಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಸದ್ಯ ಘಟನಾ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Hantavirus Cases: ಮನುಷ್ಯರಿಂದ ಮನುಷ್ಯರಿಗೆ ಹರಡುವ ‘ಆಂಡಿಸ್ ವೈರಸ್’ ಸೋಂಕು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ! – Kannada News | WHO Warns of Andes Virus Spread on MV Hondius: Hantavirus Transmits Human to Human

ಜಿನಿವಾ, ಮೇ.15: ಅಟ್ಲಾಂಟಿಕ್ ಸಾಗರದಲ್ಲಿ ಸಂಚರಿಸುತ್ತಿದ್ದ MV Hondius ಕ್ರೂಸ್ ಹಡಗಿನಲ್ಲಿ ಕಾಣಿಸಿಕೊಂಡಿದ್ದ ಹಂಟಾವೈರಸ್ ಸೋಂಕು ಈಗ ಹೊಸ ರೂಪ ಪಡೆದುಕೊಂಡಿದೆ. ಸೋಂಕಿತರಲ್ಲಿ ಎಂಟು ಮಂದಿಗೆ ‘ಆಂಡಿಸ್ ವೈರಸ್’ ತಗುಲಿರುವುದು ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಇದು ಹಂಟಾವೈರಸ್‌ನ ಅತ್ಯಂತ ಅಪಾಯಕಾರಿ ತಳಿಯಾಗಿದ್ದು, ಸೋಂಕಿತ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡುವ ಸಾಮರ್ಥ್ಯ ಹೊಂದಿದೆ.

ಏಪ್ರಿಲ್ 1 ರಂದು ಅರ್ಜೆಂಟೀನಾದಿಂದ ಹೊರಟಿದ್ದ ಈ ಹಡಗಿನಲ್ಲಿ ಇದುವರೆಗೆ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರಿಗೆ ಆಂಡಿಸ್ ವೈರಸ್ ಇರುವುದು ದೃಢಪಟ್ಟಿದ್ದರೆ, ಮತ್ತೊಬ್ಬರ ಸಾವು ಕೂಡ ಇದೇ ಸೋಂಕಿನಿಂದ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.ಎಂಟು ಮಂದಿಯಲ್ಲಿ ಸೋಂಕು ಖಚಿತವಾಗಿದ್ದು, ಇಬ್ಬರಲ್ಲಿ ಸೋಂಕಿನ ಲಕ್ಷಣಗಳು ಹೆಚ್ಚಿದೆ ಎಂದು ಹೇಳಲಾಗಿದೆ. ಇನ್ನು ಈ ಸೋಂಕಿಗೆ ಸಂಬಂಧಿಸಿದಂತೆ ಅಮೆರಿಕದ ಪ್ರಯಾಣಿಕರೊಬ್ಬರಿಗೆ ಈ ಬಗ್ಗೆ ಪರೀಕ್ಷೆ ಮಾಡಲಾಗಿತ್ತು. ಇದೀಗ ಆರೋಗ್ಯ ಇಲಾಖೆ ನೀಡಿದ ವರದಿಯಲ್ಲಿ ಹಲವು ಗೊಂದಲಗಳು ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ.

ಸಾಮಾನ್ಯವಾಗಿ ಹಂಟಾವೈರಸ್ ಸೋಂಕು ಇಲಿಗಳ ಮೂತ್ರ, ಮಲ ಮತ್ತು ಜೊಲ್ಲಿನ ಮೂಲಕ ಹರಡುತ್ತದೆ. ಆದರೆ ಆಂಡಿಸ್ ವೈರಸ್ ಮನುಷ್ಯರ ನಡುವಿನ ನಿಕಟ ಸಂಪರ್ಕದಿಂದಲೂ ಹರಡಬಲ್ಲದು. ತನಿಖೆಯ ಪ್ರಕಾರ, ಮೊದಲು ಸೋಂಕಿಗೆ ಒಳಗಾದ ಪ್ರಯಾಣಿಕರು ಅರ್ಜೆಂಟೀನಾ ಮತ್ತು ಚಿಲಿಯಲ್ಲಿ ಪ್ರವಾಸ ಮಾಡುವಾಗ ಸೋಂಕಿತ ಇಲಿಗಳ ಸಂಪರ್ಕಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ರಮ್ಮಿ ಆಟಗಾರರಿಗೆ ದೊಡ್ಡ ಶಾಕ್! ಗೇಮ್ಸ್‌ಕ್ರಾಫ್ಟ್‌ನಿಂದ 526 ಕೋಟಿ ರೂ. ವಂಚನೆ? ಇಡಿಯಿಂದ ಮೂವರು ಬಿಗ್ ಬಾಸ್‌ಗಳ ಬಂಧನ

ವಿಶ್ವ ಆರೋಗ್ಯ ಸಂಸ್ಥೆಯು ಈ ಸೋಂಕಿನ ಅಪಾಯದ ಮಟ್ಟವನ್ನು ಹಡಗಿನಲ್ಲಿದ್ದವರಿಗೆ ‘ಮಧ್ಯಮ’ (Moderate) ಮತ್ತು ಉಳಿದ ಜಗತ್ತಿಗೆ ‘ಕಡಿಮೆ’ (Low) ಎಂದು ವರ್ಗೀಕರಿಸಿದೆ. ಹಡಗು ಈಗ ನೆದರ್ಲ್ಯಾಂಡ್ಸ್‌ನತ್ತ ಸಾಗುತ್ತಿದ್ದು, ಸಂಪೂರ್ಣವಾಗಿ ಸೋಂಕುಮುಕ್ತಗೊಳಿಸುವ (Disinfection) ಪ್ರಕ್ರಿಯೆ ನಡೆಯಲಿದೆ.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:10 am, Fri, 15 May 26

Source link

ಪ್ರಧಾನಿ ಮೋದಿ ಪಂಚರಾಷ್ಟ್ರಗಳ ಪ್ರವಾಸ: ಯುದ್ಧದ ಭೀತಿಯ ನಡುವೆ ಭಾರತದ ಬಲಿಷ್ಠ ರಾಜತಾಂತ್ರಿಕ ನಡೆ! – Kannada News | PM Modi’s 5 Nation Tour: UAE Visit and India Nordic Summit to Boost Global Ties

ಪ್ರಧಾನಿ ಮೋದಿ ಪಂಚರಾಷ್ಟ್ರಗಳ ಪ್ರವಾಸ ಇಂದಿನಿಂದ ಆರಂಭ

ನವದೆಹಲಿ, ಮೇ 15: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದಿನಿಂದ ಐದು ದೇಶಗಳ ಐತಿಹಾಸಿಕ ರಾಜತಾಂತ್ರಿಕ ಪ್ರವಾಸವನ್ನು ಆರಂಭಿಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಮೋದಿಯ ಈ ಭೇಟಿ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪ್ರವಾಸದ ಮೊದಲ ಹಂತವಾಗಿ ಇಂದು ಯುಎಇಗೆ (UAE) ಭೇಟಿ ನೀಡಲಿರುವ ಅವರು, ನಂತರ ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

ಮುಖ್ಯಾಂಶಗಳು

  • ಪ್ರಧಾನಿ ಮೋದಿ ಅವರಿಂದ ಯುಎಇ ಮತ್ತು ನಾಲ್ಕು ಯುರೋಪ್ ರಾಷ್ಟ್ರಗಳ ಐತಿಹಾಸಿಕ ಪ್ರವಾಸ.
  •  ನಾರ್ವೆಯಲ್ಲಿ ನಡೆಯಲಿರುವ ಮೂರನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಲಿರುವ ಮೋದಿ.
  • ಇಂಧನ ಭದ್ರತೆ, ರಕ್ಷಣೆ ಮತ್ತು ತಂತ್ರಜ್ಞಾನ ವಲಯದಲ್ಲಿ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಆದ್ಯತೆ.

ಯುಎಇ ಭೇಟಿ, ಯಾವುದರ ಕುರಿತು ಚರ್ಚೆ?

ಇಂದು ಯುಎಇ ತಲುಪಲಿರುವ ಮೋದಿ, ಯುಎಇಯ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಲಿದ್ದಾರೆ. ಇತ್ತೀಚೆಗೆ ಫುಜೈರಾದ ಪೆಟ್ರೋಲಿಯಂ ಸಂಕೀರ್ಣದ ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿರುವ ಬೆನ್ನಲ್ಲೇ ಈ ಭೇಟಿ ಮಹತ್ವ ಪಡೆದಿದೆ. ಯುಎಇ ಒಪೆಕ್‌ನಿಂದ (OPEC) ಹೊರಬಂದಿರುವ ಹಿನ್ನೆಲೆಯಲ್ಲಿ, ಭಾರತಕ್ಕೆ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಸ್ಥಿರ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ಉಭಯ ನಾಯಕರು ಚರ್ಚಿಸಲಿದ್ದಾರೆ.

ಯುರೋಪ್ ರಾಷ್ಟ್ರಗಳ ಪ್ರವಾಸದ ಮುಖ್ಯಾಂಶಗಳು

  • ನೆದರ್ಲ್ಯಾಂಡ್ಸ್ (ಮೇ 15-17): ಪ್ರಧಾನಿ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ ಮೋದಿ ಅಲ್ಲಿನ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಭಾರತ-ಯುರೋಪಿಯನ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದದ (FTA) ಬಗ್ಗೆ ಚರ್ಚೆ ನಡೆಯಲಿದೆ.
  • ಸ್ವೀಡನ್ (ಮೇ 17): ಗೋಥೆನ್‌ಬರ್ಗ್‌ನಲ್ಲಿ ಸ್ವೀಡನ್ ಪ್ರಧಾನಿಯವರೊಂದಿಗೆ ವ್ಯಾಪಾರ, ಹಸಿರು ತಂತ್ರಜ್ಞಾನ ಮತ್ತು ಎಐ (AI) ಕುರಿತು ಮೋದಿ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ‘ಯುರೋಪಿಯನ್ ರೌಂಡ್‌ಟೇಬಲ್ ಫಾರ್ ಇಂಡಸ್ಟ್ರಿ’ಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
  • ನಾರ್ವೆ (ಮೇ 18-19): ಕಳೆದ ನಾಲ್ಕು ದಶಕಗಳಲ್ಲಿ ನಾರ್ವೆಗೆ ಭೇಟಿ ನೀಡುತ್ತಿರುವ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಲಿದ್ದಾರೆ. ಓಸ್ಲೋದಲ್ಲಿ ನಡೆಯಲಿರುವ 3ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಬ್ಲೂ ಎಕಾನಮಿ (ಸಮುದ್ರ ಚಟುವಟಿಕೆಗಳ ಕುರಿತ ಆರ್ಥಿಕತೆ) ಮತ್ತು ಬಾಹ್ಯಾಕಾಶ ಸಂಶೋಧನೆಯ ಬಗ್ಗೆ ಇಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.
  • ಇಟಲಿ (ಮೇ 19-20): ಪ್ರವಾಸದ ಅಂತಿಮ ಹಂತವಾಗಿ ರೋಮ್‌ಗೆ ಭೇಟಿ ನೀಡಲಿರುವ ಮೋದಿ, ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (FAO) ಪ್ರಧಾನ ಕಚೇರಿಗೂ ಅವರು ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ ಮೋದಿ ಅವರ ಯುಎಇ-ಯೂರೋಪ್ ಪ್ರವಾಸ; 70 ಬಿಲಿಯನ್ ಡಾಲರ್ ವ್ಯಾಪಾರ ಪುಷ್ಟಿ ನಿರೀಕ್ಷೆ

ವ್ಯಾಪಾರ ಮತ್ತು ರಕ್ಷಣೆ

ಈ ಇಡೀ ಪ್ರವಾಸದ ಪ್ರಮುಖ ಉದ್ದೇಶ ರಕ್ಷಣೆ, ತಂತ್ರಜ್ಞಾನ ಮತ್ತು ಇಂಧನ ವಲಯದಲ್ಲಿ ಸಹಕಾರವನ್ನು ಹೆಚ್ಚಿಸುವುದಾಗಿದೆ. 2025ರಲ್ಲಿ ಸಹಿ ಹಾಕಲಾದ ಭಾರತ-EFTA TEPA ಒಪ್ಪಂದದ ನಂತರ ನಡೆಯುತ್ತಿರುವ ಈ ಭೇಟಿಯು ಭಾರತದ ಆರ್ಥಿಕತೆಗೆ ಹೊಸ ವೇಗ ನೀಡುವ ನಿರೀಕ್ಷೆಯಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:57 am, Fri, 15 May 26

Source link

Exit mobile version