ಅಸಮಾಧಾನ ಸ್ಫೋಟ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ
ಹುಬ್ಬಳ್ಳಿ (ಮಾರ್ಚ್ 11): ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ (Lingaraj Patil) ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ (Karnataka BJP disciplinary committee chairman ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, …