Headlines

Video: ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ, ಫುಕೆಟ್​ನ ರನ್​ವೇನಲ್ಲಿ ಸಿಲುಕಿದ ಏರ್ ಇಂಡಿಯಾ

ಫುಕೆಟ್, ಮಾರ್ಚ್​ 11:ಹೈದರಾಬಾದ್‌ನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಇಂದು ಥೈಲ್ಯಾಂಡ್‌ನ ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರ್ಡ್ ಲ್ಯಾಂಡಿಂಗ್ ಮಾಡಿದೆ. ಇದರ ಪರಿಣಾಮವಾಗಿ ಚಕ್ರ ಪುಡಿ ಪುಡಿಯಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳೀಯ ಸಮಯ ಸಂಜೆ 6 ಗಂಟೆಯವರೆಗೆ ರನ್‌ವೇ ಮುಚ್ಚುವಂತೆ NOTAM (ವಾಯು ಕಾರ್ಯಾಚರಣೆಗೆ ಸೂಚನೆ) ಹೊರಡಿಸಿದ್ದಾರೆ. ಬೋಯಿಂಗ್ 737 MAX 8 ವಿಮಾನದಲ್ಲಿ 133 ಪ್ರಯಾಣಿಕರಿದ್ದರು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಮತ್ತು ಪ್ರಯಾಣಿಕರ ಕಾಯುವ ಪ್ರದೇಶಕ್ಕೆ ಕರೆದೊಯ್ಯಲಾಯಿತು. ವಿಮಾನವು…

Read More

ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ನಿಂತಲ್ಲೇ ನಿಂತ ಆಟೋಗಳು

ಬೆಂಗಳೂರು, (ಮಾರ್ಚ್ 11): ಅಮೆರಿಕ –ಇಸ್ರೇಲ್‌ ಮತ್ತು ಇರಾನ್‌ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ಇದರಿಂದ ಭಾರತದಾದ್ಯಂತ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನು ಹೋಟೆಲ್ ಉದ್ಯಮಕ್ಕೆ ಭಾರಿ ಸಮಸ್ಯೆಯಾಗುತ್ತಿದೆ. ಇನ್ನು ಎಲ್​​ಪಿಜಿ ಗ್ಯಾಸ್ ಆಟೋಗೂ ಸಹ ಇದರ ಬಿಸಿ ತಟ್ಟಿದ್ದು, ಬೆಂಗಳೂರಿನ ಹಲವು ಗ್ಯಾಸ್ ಬಂಕ್​ಗಳು ಬಂದ್ ಆಗಿವೆ. ಇನ್ನೊಂದೆಡೆ ಗ್ಯಾಸ್…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ

2026ರ ಪರಾಭವ ನಾಮ ಸಂವತ್ಸರದ ಯುಗಾದಿಯು ಮಕರ ರಾಶಿಯವರಿಗೆ ಹಲವು ಶುಭ ಫಲಗಳನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಶನಿ ಗ್ರಹವು ಮೂರನೇ ಮನೆಯಲ್ಲಿ ಸಂಚಾರ ಮಾಡುತ್ತಿದ್ದು, ಶ್ರಮಕ್ಕೆ ತಕ್ಕ ಫಲ ಹಾಗೂ ನ್ಯಾಯ, ನೀತಿ, ಧರ್ಮಕ್ಕೆ ಪ್ರಾಶಸ್ತ್ಯ ಸಿಗಲಿದೆ. ಈ ರಾಶಿಯವರ ಆದಾಯ ಖರ್ಚಿಗಿಂತ ಹೆಚ್ಚಾಗಲಿದ್ದು, ಆರ್ಥಿಕವಾಗಿ ಲಾಭವಾಗಲಿದೆ. ತಾಳ್ಮೆ, ಸಹನೆ, ಒಳ್ಳೆಯತನ ಮತ್ತು ಕರುಣೆ ಹೆಚ್ಚಾಗಿರುತ್ತದೆ. ಈ ವರ್ಷ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಇರುತ್ತದೆ ಮತ್ತು ಸ್ವಲ್ಪ…

Read More

ಯಾರೂ ಸಹ ನನಗೆ ಕರೆ ಮಾಡಿಲ್ಲ… ಗೌತಮ್ ಗಂಭೀರ್ ಬೇಸರ

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಚಾಂಪಿಯನ್ ಪಟ್ಟದ ಹಿಂದಿನ ರೂವಾರಿ ಕೋಚ್ ಗೌತಮ್ ಗಂಭೀರ್. ಚಾಂಪಿಯನ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್​ಗಾಗಿ ಹೊಸ ಪಡೆ ಕಟ್ಟಿದ್ದ ಗಂಭೀರ್ ಇದೀಗ ತಮ್ಮ ರಣತಂತ್ರದೊಂದಿಗೆ ಭಾರತ ತಂಡಕ್ಕೆ ವಿಶ್ವಕಪ್ ತಂದುಕೊಟ್ಟಿದ್ದಾರೆ. ಈ ವಿಶ್ವಕಪ್ ಗೆಲುವಿನ ಖುಷಿಯಲ್ಲಿರುವ ಗಂಭೀರ್ ಈ ಹಿಂದಿನ ಸೋಲುಗಳ ಬಗ್ಗೆ ಮಾತನಾಡಿದ್ದಾರೆ. ಈ ಸೋಲುಗಳ ನಡುವೆ ತನ್ನ ಜೊತೆ ನಿಂತ ಏಕೈಕ ವ್ಯಕ್ತಿ ಜಯ್​ ಶಾ ಎಂದಿದ್ದಾರೆ….

Read More

NCERT ಪುಸ್ತಕ ವಿವಾದ; ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರಿಗೆ ಸುಪ್ರೀಂ ಕೋರ್ಟ್ ನಿಷೇಧ

ನವದೆಹಲಿ, ಮಾರ್ಚ್ 11: 8ನೇ ತರಗತಿಯ NCERT ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ (NCERT Row) ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಕುರಿತು ಅಧ್ಯಾಯವನ್ನು ಬರೆದ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಮಹತ್ವದ ಆದೇಶ ಹೊರಡಿಸಲಾಗಿದ್ದು, ಈ ರೀತಿಯ ವಿವಾದಾತ್ಮಕ ವಿಷಯವನ್ನು ಸಿದ್ಧಪಡಿಸುವಲ್ಲಿ ಭಾಗಿಯಾಗಿರುವ ವ್ಯಕ್ತಿಗಳಿಂದ ದೂರವಿರಲು ಕೇಂದ್ರ, ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಸಾರ್ವಜನಿಕವಾಗಿ ಅನುದಾನ ಪಡೆದ ಶಿಕ್ಷಣ ಸಂಸ್ಥೆಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಅಧ್ಯಾಯದ ಲೇಖಕರು ಮುಂದಿನ ಪೀಳಿಗೆಗೆ ಎಂದಿಗೂ…

Read More

ಗರ್ಲ್​​​ಫ್ರೆಂಡ್​​ನ ಅಭಿಮಾನಿಗಳಿಗೆ ಪರಿಚಯಿಸಿದ ಸ್ಟಾರ್ ನಟ

ತೆಲುಗು ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. ಅವರು ತಮ್ಮ ಗರ್ಲ್​​​ಫ್ರೆಂಡ್​​ನ ಅಭಿಮಾನಿಗಳ ಎದುರು ಪರಿಚಯಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಅವರಿಂದ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸಿದ್ದರು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಅವರು ಗರ್ಲ್​​ಫ್ರೆಂಡ್ ಫೋಟೋ ಪೋಸ್ಟ್ ಮಾಡಿದ್ದಾರೆ. ಶ್ರೀನಿವಾಸ್ ಅವರ ಗೆಳತಿ ಹೆಸರು ಕಾವ್ಯಾ ರೆಡ್ಡಿ. ನಿಶ್ಚಿತಾರ್ಥ ಹಾಗೂ ಮದುವೆ…

Read More

ರಿಯಲ್ ಎಸ್ಟೇಟ್ ಏಜೆಂಟ್​ನನ್ನು ಅಪಹರಿಸಿ ಹತ್ಯೆ ಕೇಸ್​: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್, ಮಾರ್ಚ್​ 11: ಆನೇಕಲ್‌ನಲ್ಲಿ ಕಿಡ್ನ್ಯಾಪ್ (kidnapped) ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್​ ತಮಿಳುನಾಡಿನಲ್ಲಿ ಶವವಾಗಿ ಪತ್ತೆ ಪ್ರಕರಣಕ್ಕೆ ಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಠಾಣೆ ಪೊಲೀಸರಿಂದ ಓರ್ವ ಅಪ್ರಾಪ್ತ ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಮೋಹನ್ ಬಾಬು, ತೇಜಸ್, ದರ್ಶನ್, ಲಿಖಿತ್, ನಿಖಿಲ್, ಆನಂದ್​, ಪ್ರಶಾಂತ್ ಮತ್ತು ಓರ್ವ ಅಪ್ರಾಪ್ತ ಬಂಧಿತರು. ಆರೋಪಿಗಳು ಕಿಡ್ನ್ಯಾಪ್ ಮಾಡಲು ಬಳಸಿದ್ದ ಹುಂಡೈ ಕಾರನ್ನು ವಶಕ್ಕೆ ಪಡೆಯಲಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿ ಕೋರ್ಟ್​ಗೆ…

Read More

ಪಿಜಿಗಳಲ್ಲಿಲ್ಲ ಮಧ್ಯಾಹ್ನದ ಊಟ, ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ: ಸಿಲಿಂಡರ್​​ ಕೊರತೆ ಮತ್ತಷ್ಟು ಉಲ್ಬಣ

ಬೆಂಗಳೂರು, ಮಾರ್ಚ್​​ 11: ಎಲ್​​ಪಿಜಿ ಸಿಲಿಂಡರ್​​ಗಳ ಅಭಾವ ಕರ್ನಾಟಕದಲ್ಲಿ ಮತ್ತಷ್ಟು ಉಲ್ಬಣಿಸಿದ್ದು, ಬೆಂಗಳೂರಿನ ಕೆಲ ಪೇಯಿಂಗ್ ಗೆಸ್ಟ್‌ಗಳಲ್ಲಿ (ಪಿಜಿ) ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯಿಂದಾಗಿ ಮಧ್ಯಾಹ್ನದ ಊಟದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.  ಗ್ಯಾಸ್ ಸಿಲಿಂಡರ್ ಸಮಸ್ಯೆ ಬಗೆಹರಿಯುವವರೆಗೂ ಊಟ ನೀಡದಿರಲು ನಿರ್ಧರಿಸಲಾಗಿದೆ ಎಂದು ಪಿಜಿ ಮಾಲೀಕರು ಘೋಷಿಸಿದ್ದು, ಎಲೆಕ್ಟ್ರಿಕ್ ಸ್ಟವ್ ಅಥವಾ ಸೌದೆ ಬಳಕೆಯಂತಹ ಪರ್ಯಾಯ ವ್ಯವಸ್ಥೆಗಳನ್ನು ರಾತ್ರೋರಾತ್ರಿ ಜಾರಿಗೊಳಿಸುವುದು ಸಾಧ್ಯವಿಲ್ಲ ಎಂದು ಅಲವತ್ತುಕೊಂಡಿದ್ದಾರೆ. ಇನ್ನು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರಕ್ಕೆ ಬ್ರೇಕ್​​ ಹಾಕಿ ಬೆಂಗಳೂರಿನ ಪಿಜಿಗಳ…

Read More

ಶುಕ್ರಾದಿತ್ಯ ಸಂಯೋಗ: ಈ 6 ರಾಶಿಯವರು ಹೇಳಿದ್ದೇ ನಡೆಯುವುದು, ಆದ್ರೆ ಇದೊಂದು ಕೆಲಸ ಮಾಡಬೇಡಿ

ಮಾರ್ಚ್ 15 ರಿಂದ ಮಾರ್ಚ್ 25ರವೆರಗೆ ಮೀನ ರಾಶಿಯಲ್ಲಿ ಶುಕ್ರ ಮತ್ತು ಸೂರ್ಯನ ಸಂಯೋಜನೆಯಿಂದ ಉಂಟಾಗುವ ಶುಕ್ರಾದಿತ್ಯ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪ್ರಭಾವವನ್ನು ಬೀರುತ್ತದೆ. ಸೂರ್ಯನು ಆತ್ಮಕಾರಕನಾದರೆ, ಶುಕ್ರನು ಸುಖ ಮತ್ತು ಸಂಪತ್ತಿನ ಕಾರಕ. ಮೀನ ರಾಶಿಯು ಶುಕ್ರನಿಗೆ ಉಚ್ಚ ಸ್ಥಾನವಾದರೆ, ಸೂರ್ಯನಿಗೆ ಇದು ಮಿತ್ರ ರಾಶಿಯಾಗಿದೆ. ​ಈ ಸಂಯೋಜನೆಯಿಂದ ವಿವಿಧ ರಾಶಿಗಳಿಗೆ ಲಭಿಸುವ ಫಲಗಳು ಈ ಕೆಳಗಿನಂತಿವೆ. ​ಶುಭ ಫಲ ಪಡೆಯುವ ರಾಶಿಗಳು ​ವೃಷಭ ರಾಶಿ: ಈ ಯೋಗವು ನಿಮ್ಮ ಲಾಭ ಸ್ಥಾನದಲ್ಲಿ…

Read More

ವಿಧಾನಸಭೆಯಲ್ಲೂ ಸಿಲಿಂಡರ್​​ ಕೊರತೆ ಗದ್ದಲ: ಆಡಳಿತ ಮತ್ತು ವಿಕ್ಷದ ನಡುವೆ ವಾಕ್ಸಮರ

ಬೆಂಗಳೂರು, ಮಾರ್ಚ್​​ 11: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್​​ ಪೂರೈಕೆ ವ್ಯತ್ಯಯದಿಂದಾಗಿ ರಾಜ್ಯದಲ್ಲಿ ಹೋಟೆಲ್​​ ಉದ್ಯಮಗಳು, ಜನ ಸಾಮಾನ್ಯರು ವಿಪರೀತ ಸಂಕಷ್ಟಕ್ಕೆ ಸಿಲುಕಿರುವ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಸಿಲಿಂಡರ್​ ಕೊರತೆ ಬಗ್ಗೆ ಚರ್ಚೆಗೆ ಸ್ಪೀಕರ್​​ ಅವಕಾಶ ನೀಡಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಸದನದ ರಣಾಂಗಣವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್​​ ಶಾಸಕರು ಪರಸ್ಪರ ದೂಷಿಸಿಕೊಂಡಿದ್ದಾರೆ. ಚರ್ಚೆ ಮಧ್ಯೆ ಪ್ರಧಾನಿ ಮೋದಿ ಅವರ ಹೆಸರು ಪ್ರಸ್ತಾಪವಾಗಿರೋದು ಉರಿಯುವ…

Read More