ವಿಧಾನಸಭೆಯಲ್ಲೂ ಸಿಲಿಂಡರ್ ಕೊರತೆ ಗದ್ದಲ: ಆಡಳಿತ ಮತ್ತು ವಿಕ್ಷದ ನಡುವೆ ವಾಕ್ಸಮರ
ಬೆಂಗಳೂರು, ಮಾರ್ಚ್ 11: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್ ಪೂರೈಕೆ ವ್ಯತ್ಯಯದಿಂದಾಗಿ ರಾಜ್ಯದಲ್ಲಿ ಹೋಟೆಲ್ ಉದ್ಯಮಗಳು, ಜನ ಸಾಮಾನ್ಯರು ವಿಪರೀತ ಸಂಕಷ್ಟಕ್ಕೆ ಸಿಲುಕಿರುವ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಸಿಲಿಂಡರ್ ಕೊರತೆ ಬಗ್ಗೆ ಚರ್ಚೆಗೆ ಸ್ಪೀಕರ್ ಅವಕಾಶ ನೀಡಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಸದನದ ರಣಾಂಗಣವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಪರಸ್ಪರ ದೂಷಿಸಿಕೊಂಡಿದ್ದಾರೆ. ಚರ್ಚೆ ಮಧ್ಯೆ ಪ್ರಧಾನಿ ಮೋದಿ ಅವರ ಹೆಸರು ಪ್ರಸ್ತಾಪವಾಗಿರೋದು ಉರಿಯುವ…