Headlines

ಎಲ್​ಪಿಜಿ ಕೊರತೆ: ರಿಲಯನ್ಸ್‌ನಿಂದ ಜಾಮ್‌ನಗರದಲ್ಲಿ ಅನಿಲ ಉತ್ಪಾದನೆ ಹೆಚ್ಚಳದ ಬಗ್ಗೆ ಘೋಷಣೆ

ಮುಂಬೈ, ಮಾರ್ಚ್ 11: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮವಾಗಿ ಕರ್ನಾಟಕ ಸೇರಿ ಭಾರತದ ಹಲವೆಡೆ ಎಲ್​​ಪಿಜಿ ಸಿಲಿಂಡರ್​​ಗಳ ಅಭಾವ ತಲೆದೋರಿದೆ. ಈ ಹೊತ್ತಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮಹತ್ತರವಾದ ಘೋಷಣೆ ಮಾಡಿದ್ದು, ಜಾಮ್ ನಗರದಲ್ಲಿನ ಸಂಸ್ಕರಣಾಗಾರ ಹಾಗೂ ಪೆಟ್ರೋಕೆಮಿಕಲ್ಸ್ ಸಮುಚ್ಚಯದಿಂದ ಎಲ್​​ಪಿಜಿ ಉತ್ಪಾದನೆಯನ್ನು ಸ್ವಯಂಪ್ರೇರಿತವಾಗಿ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸುವುದಕ್ಕೆ ನಿರ್ಧಾರ ಕೈಗೊಂಡಿರೋದಾಗಿ ತಿಳಿಸಿದೆ. ಜಾಮ್ ನಗರದಲ್ಲಿ ಇರುವ ಈ ಘಟಕ ವಿಶ್ವದಲ್ಲಿಯೇ ಅತಿದೊಡ್ಡ ಸಂಯೋಜಿತ ಸಂಸ್ಕರಣೆ ಹಬ್ ಎಂಬ ದಾಖಲೆಗೆ ಪಾತ್ರವಾಗಿದೆ ಎಂದು ಕಂಪನಿಯ ಹೇಳಿದ್ದು,  KG- D6 ಬ್ಲಾಕ್​​ನಲ್ಲಿ…

Read More

Video: ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ, ಓಡಿಹೋಗಲು ಗಾಡಿಯಲ್ಲಿ ಪೆಟ್ರೋಲ್ ಇಲ್ಲದೆ ಸಿಕ್ಕಾಕ್ಕೊಂಡ

ವೆನ್ನಪ್ಪುವಾ, ಮಾರ್ಚ್​ 11: ಬೈಕ್​​ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ಥಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಘಟನೆಯನ್ನು ಸೆರೆಹಿಡಿದಿದೆ.ಆರೋಪಿಯು ಬೈಕ್​ನಲ್ಲಿ ಬಂದು ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಆಕೆಯನ್ನು ಬೀಳಿಸಿ ಸರ ಕದ್ದು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಬೈಕ್​​ನಲ್ಲಿ ಪೆಟ್ರೋಲ್ ಇಲ್ಲದ ಕಾರಣ ಸಾರ್ವಜನಿಕರ ಕೈಗೆ ಸಿಕ್ಕಿ ಒದೆ ತಿಂದಿದ್ದಾನೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

‘ಆಸೆ’ ಧಾರಾವಾಹಿಯಲ್ಲಿ ಭಾವನೆಗಳ ಪಯಣ; ಸೂರ್ಯ ಪಾತ್ರಧಾರಿ ನಿನಾದ್ ಏನಂತಾರೆ?

ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ ‘ಆಸೆ’ ಧಾರಾವಾಹಿಗೆ (Serial) ದೊಡ್ಡ ವೀಕ್ಷಕರ ಬಳಗ ಇದೆ. ವೀಕ್ಷಕರಿಗೆ ಹೆಚ್ಚು ಇಷ್ಟ ಆಗಿದ್ದು, ಈ ಸೀರಿಯಲ್​ನ ನಿನಾದ್ ಹರಿತ್ಸ ಮಾಡುತ್ತಿರುವ ಸೂರ್ಯ ಪಾತ್ರ. ಅವರ ಸ್ಮೈಲ್, ಸ್ಟೈಲ್, ಡೈಲಾಗ್ ಎಲ್ಲರಿಗೂ ಇಷ್ಟ ಆಗಿದೆ. ಒಂದು ಸೀರಿಯಲ್ 800 ಪ್ರಸಾರ ಕಾಣುತ್ತದೆ ಎಂದರೆ ಅದು ಸಣ್ಣ ವಿಷಯ ಅಲ್ಲವೇ ಅಲ್ಲ. ನಿನಾದ್ ಅವರು ಈ ಜರ್ನಿಯನ್ನು ನೆನೆದಿದ್ದಾರೆ. ‘ಆಸೆ’ ಧಾರಾವಾಹಿಯಲ್ಲಿ ಹಲವು ಭಾವನೆಗಳನ್ನು ಬೆರೆಸಲಾಗಿದೆ. ಇಲ್ಲಿ ಮಧ್ಯಮ ವರ್ಗದವರ ಒದ್ದಾಟ ಇದೆ,…

Read More

ಭಾರತ ತಂಡ ಸೂರ್ಯಕುಮಾರ್, ಜಯ್ ಶಾ ಅವರ ಕುಟುಂಬ ಸ್ವತ್ತಲ್ಲ!

ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಗೌತಮ್ ಗಂಭೀರ್ ಹಾಗೂ ಐಸಿಸಿ ಅಧ್ಯಕ್ಷ ಜಯ್ ಶಾ ಟ್ರೋಫಿಯನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯೂಝಿಲೆಂಡ್​ ವಿರುದ್ಧದ ಗೆಲುವಿನ ಐಸಿಸಿ ಅಧ್ಯಕ್ಷ ಜಯ್​ ಶಾ, ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಕೋಚ್ ಗೌತಮ್ ಗಂಭೀರ್ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ಟೆಕ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ನಡೆಗೆ ಆಕ್ರೋಶ ಹೊರಹಾಕಿರುವ ಕೀರ್ತಿ…

Read More

ವೇತನ‌ ಸಿಗದೆ ಪೊಲೀಸ್ ಸಿಬ್ಬಂದಿ ಪರದಾಟ: ಸಂಬಳ ನೀಡಲೂ ಸರ್ಕಾರದ ಬಳಿ ಇಲ್ವಾ ಹಣ?

ಹುಬ್ಬಳ್ಳಿ, ಮಾರ್ಚ್​​ 11: ಕಳೆದ ಫೆಬ್ರವರಿ ತಿಂಗಳ ವೇತನ ಇನ್ನೂ ಪಾವತಿ ಆಗದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಪರದಾಟ ನಡೆಸಬೇಕಾದ ಪ್ರಸಂಗ ಉದ್ಭವಿಸಿದೆ. ತಿಂಗಳ ಆರಂಭದಲ್ಲಿಯೇ ಜಮೆ ಆಗುತ್ತಿದ್ದ ವೇತನ‌ ಇಲ್ಲಿಯವರೆಗೂ ಜಮೆ ಆಗಿಲ್ಲ. ಹೀಗಾಗಿ ಸಾವಿರಾರು ಮಂದಿ ಪೊಲೀಸ್​​ ಸಿಬ್ಬಂದಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಬಳ ವಿಳಂಬದಿಂದ ಮನೆ ಬಾಡಿಗೆ, ಬ್ಯಾಂಕ್ ಸಾಲದ ಕಂತುಗಳು, ಮಕ್ಕಳ ಶಿಕ್ಷಣ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಮತ್ತು ಎಸ್‌ಪಿ ವ್ಯಾಪ್ತಿಯಲ್ಲಿರುವ 3,200 ಸಿಬ್ಬಂದಿಗೂ ಇನ್ನೂ…

Read More

13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್​ ಅನುಮತಿ

ನವದೆಹಲಿ, ಮಾರ್ಚ್​ 11: ಕಳೆದ ಹದಿಮೂರು ವರ್ಷಗಳಿಂದ ಕೋಮಾ(Coma)ದಲ್ಲಿರುವ ಹರೀಶ್ ರಾಣಾ ದಯಾಮರಣ( Euthanasia)Supreme Court passive euthanasia verdict, India passive euthanasia ruling, Supreme Court end of life decision, right to die case India, Harish Rana 13 years coma verdict, ಕ್ಕೆ ಸುಪ್ರೀಂಕೋರ್ಟ್​ ಇಂದು(ಮಾರ್ಚ್​ 11) ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು ಸಾಧ್ಯವಾಗದೆ ಜೀವಂತ ಶವದಂತಾಗಿದ್ದಾನೆ. ಆತನ ವೃದ್ಧ ಪೋಷಕರು, ಅವರ ಚೇತರಿಕೆಯ ಭರವಸೆಯನ್ನು ತ್ಯಜಿಸಿ,…

Read More

Unibrow Astrology: ಎರಡು ಹುಬ್ಬುಗಳು ಪರಸ್ಪರ ಸಂಧಿಸಿದ್ದರೆ ಅಶುಭವೇ? ಶಾಸ್ತ್ರಗಳು ಹೇಳುವುದೇನು?

ಸಮಾಜದಲ್ಲಿ ದೈಹಿಕ ಲಕ್ಷಣಗಳ ಆಧಾರದ ಮೇಲೆ ವ್ಯಕ್ತಿಯ ಗುಣಲಕ್ಷಣ ಅಥವಾ ಭವಿಷ್ಯವನ್ನು ಅಳೆಯುವ ಸಂಪ್ರದಾಯ ಬಹಳ ಹಳೆಯದು. ತಲೆಯ ಮೇಲಿನ ಸುಳಿ, ಅಂಗೈ ರೇಖೆಗಳಂತೆಯೇ ‘ಜೋಡು ಹುಬ್ಬು’ (Unibrow) ಅಥವಾ ಹುಬ್ಬುಗಳ ರಚನೆಯ ಬಗ್ಗೆಯೂ ವಿಭಿನ್ನ ನಂಬಿಕೆಗಳು ಚಾಲ್ತಿಯಲ್ಲಿವೆ. ಹಿರಿಯರ ಅನುಭವ ಮತ್ತು ಜ್ಯೋತಿಷ್ಯ ಶಾಸ್ತ್ರದ ಹಿನ್ನೆಲೆಯಲ್ಲಿ ಇವುಗಳನ್ನು ನೋಡುವುದಾದರೆ ಕುತೂಹಲಕಾರಿ ವಿಷಯಗಳು ಬೆಳಕಿಗೆ ಬರುತ್ತವೆ. ವಿವಾಹ ಮತ್ತು ಜೀವನದ ಬಗೆಗಿನ ನಂಬಿಕೆಗಳು: ಜೋಡು ಹುಬ್ಬು ಹೊಂದಿರುವವರ ಬಗ್ಗೆ ಜನರಲ್ಲಿ ಭಿನ್ನಾಭಿಪ್ರಾಯಗಳಿವೆ. ಕೆಲವು ಹಿರಿಯರ ಪ್ರಕಾರ, ಎರಡು…

Read More

ಹೊಸ ಉದ್ಯಮಕ್ಕೆ ಕೈ ಹಾಕಿದ ಅಲ್ಲು ಅರ್ಜುನ್, ಮಹೇಶ್ ಬಾಬುಗೆ ಠಕ್ಕರ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅಲ್ಲು ಕುಟುಂಬ ಹಲವು ದಶಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವುದು ಮಾತ್ರವೇ ಅಲ್ಲದೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕಿದ್ದಾರೆ. ಅಲ್ಲು ಅರ್ಜುನ್ ಅವರು ಮಲ್ಟಿಪ್ಲೆಕ್ಸ್ ಒಂದನ್ನು ನಿರ್ಮಿಸಿದ್ದು, ಹೈದರಾಬಾದ್​​ನ ಈ…

Read More

LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂಪಾಯಿಗೆ ಏರಿಕೆ?

ಹುಬ್ಬಳ್ಳಿ, ಮಾರ್ಚ್​​ 11: ಹೋಟೆಲ್ ಉದ್ಯಮವು ತೀವ್ರ LPG ಸಿಲಿಂಡರ್ ಕೊರತೆಯಿಂದ ತತ್ತರಿಸಿದೆ. ವಾಣಿಜ್ಯ ಸಿಲಿಂಡರ್‌ಗಳು ಲಭ್ಯವಿಲ್ಲದೆ ಹೋಟೆಲ್ ಮಾಲೀಕರು ಪರದಾಡುತ್ತಿದ್ದಾರೆ. ಒಂದು ಸಿಲಿಂಡರ್‌ಗೆ 4,000-5,000 ನೀಡಲು ಸಿದ್ಧರಿದ್ದರೂ ಸಿಲಿಂಡರ್‌ಗಳು ಸಿಗುತ್ತಿಲ್ಲ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆಯಿಂದಾಗಿ ಹೋಟೆಲ್‌ಗಳು ದೋಸೆ, ಪೂರಿ ಸೇರಿದಂತೆ ಹಲವು ಖಾದ್ಯಗಳ ತಯಾರಿಕೆಯನ್ನು ನಿಲ್ಲಿಸಿವೆ. ಸಿಲಿಂಡರ್ ಕೊರತೆಯು ಕಾರ್ಮಿಕರ ಬದುಕಿನ ಮೇಲೆ ನೇರ ಪರಿಣಾಮ ಬೀರಿದೆ. ಹಲವು ಹೋಟೆಲ್‌ಗಳು ಈಗಾಗಲೇ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಿವೆ, ಇನ್ನೂ ಕೆಲವು ಹೋಟೆಲ್‌ಗಳು ಮುಚ್ಚುವ…

Read More

ಅಕ್ಕ-ತಂಗಿ ಅಂದು, ಇಂದು; ರಶ್ಮಿಕಾ-ಶಿಮನ್ ಕ್ಯೂಟ್ ಫೋಟೋ ವೈರಲ್

ರಶ್ಮಿಕಾ ಮಂದಣ್ಣ (Rashmika Mandanna) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರ ವಿವಾಹದ ಫೋಟೋಗಳು ವೈರಲ್ ಆಗಿವೆ. ವಿವಾಹ ಪೂರ್ವ ಕಾರ್ಯಕ್ರಮ, ವಿವಾಹ ಶಾಸ್ತ್ರಗಳು ರಾಜಸ್ಥಾನದ ಉದಯಪುರದಲ್ಲಿ ಅದ್ದೂರಿಯಾಗಿ ನಡೆದವು. ಹೀಗಿರುವಾಗಲೇ ರಶ್ಮಿಕಾ ಮಂದಣ್ಣ ಹಾಗೂ ಅವರ ಸಹೋದರಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ. ಅಂದು ಹೇಗಿದ್ದರು ಹಾಗೂ ಈಗ ಹೇಗಿದ್ದಾರೆ ಎಂಬ ಕೊಲ್ಯಾಜ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ರಶ್ಮಿಕಾ ಮಂದಣ್ಣ ಸಹೋದರಿ ಹೆಸರು ಶಿಮನ್. ಇಬ್ಬರ ಮಧ್ಯೆ ಸುಮಾರು 16 ವರ್ಷಗಳ ವಯಸ್ಸಿನ ಅಂತರ ಇದೆ….

Read More