ಅರ್ಧ ಕೆಜಿ ಚಿನ್ನದ ನಿಧಿ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರನ ಅಳಲು – Kannada News | Gadag Lakkundi Gold Treasure Found case: Family That Handed Over Half Kg Gold to Government Has No House

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯದ ಕೆಲಸದ ವೇಳೆ ಅರ್ಧ ಕೆಜಿ ಚಿನ್ನದ ನಿಧಿ ದೊರೆತ ವಿಚಾರ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಕುಟುಂಬದ ಪರಿಸ್ಥಿತಿ ಈಗ ಸಂಕಷ್ಟದಲ್ಲಿದೆ. ನಿಧಿ ಪತ್ತೆಯಾದ ಸ್ಥಳದ ಮಾಲೀಕರಾಗಿರುವ ಮಹಿಳೆಯ ಸಹೋದರ ಗುಡದಪ್ಪ ಮಾತನಾಡಿ, ತಂಗಿ ಗಂಡನನ್ನು ಕಳೆದುಕೊಂಡು ಮನೆಯಿಲ್ಲದೆ ತಮ್ಮೊಂದಿಗೆ ವಾಸಿಸುತ್ತಿದ್ದಾಳೆ. ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಇಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾಳೆ ಎಂದರು.

ಗುಡದಪ್ಪ ಪ್ರಕಾರ, ನಿಧಿ ಹಸ್ತಾಂತರ ಮಾಡಿದ ಬಳಿಕವೂ ಅಧಿಕಾರಿಗಳಿಂದ ಯಾವುದೇ ಸ್ಪಷ್ಟವಾದ ಭರವಸೆ ಸಿಕ್ಕಿಲ್ಲ. ಅಧಿಕಾರಿಗಳು ಭೇಟಿ ನೀಡಿದ್ದರೂ ನಂತರ ಹಿರಿಯ ಅಧಿಕಾರಿಗಳು ಅವರ ಕಡೆಗೆ ತಿರುಗಿಯೂ ನೋಡಿಲ್ಲ. ಆರ್ಥಿಕವಾಗಿ ದುರ್ಬಲವಾಗಿರುವ ಆ ಕುಟುಂಬಕ್ಕೆ ಚಿನ್ನದ ಆಸೆ ಇಲ್ಲ. ತಂಗಿ ಮತ್ತು ಅವರ ಮಗನಿಗೆ ಒಂದು ಮನೆ ಮತ್ತು ನಿವೇಶನ ದೊರಕಿಸಿಕೊಡಬೇಕೆಂದು ಸರ್ಕಾರಕ್ಕೆ ಗುಡದಪ್ಪ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ ‘ರಾಷ್ಟ್ರಭಾಷೆ’ಯ ಚರ್ಚೆ! – Kannada News | Sanjay Bangar Sparks ‘Rashtrabhasha’ Debate on KL Rahul

ವಡೋದರಾದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್​ಗೆ ತಮಿಳಿನಲ್ಲಿ ಸಲಹೆಗಳನ್ನು ನೀಡುತ್ತಿದ್ದರು. ಸುಂದರ್​ಗೆ ಚೆಂಡನ್ನು ಹೇಗೆ ಎಸೆಯಬೇಕೆಂದು ತಮಿಳಿನಲ್ಲಿ ಹೇಳುತ್ತಿರುವ ಕೆಎಲ್ ರಾಹುಲ್ ಧ್ವನಿ ಸ್ಟಂಪ್ ಮೈಕ್​ನಲ್ಲಿ ಸೆರೆಯಾಗಿದೆ.

ಅತ್ತ ಕೆಎಲ್ ರಾಹುಲ್​ಗೆ ತಮಿಳು ಬರುತ್ತಿದ್ದು, ಇತ್ತ ತಮಿಳುನಾಡು ಮೂಲದ ಕ್ರಿಕೆಟಿಗನೊಂದಿಗೆ ತಮಿಳಿನಲ್ಲೇ ಸಂಬೋಧಿಸುತ್ತಿದ್ದರು. ಇದನ್ನು ಕೇಳಿದ ಕಾಮೆಂಟೇಟರ್ ವರುಣ್ ಆರೋನ್, ಸುಂದರ್​ ಜೊತೆ ಕೆಎಲ್ ರಾಹುಲ್ ತಮಿಳಿನಲ್ಲಿ ಮಾತನಾಡಬೇಕಾಗುತ್ತದೆ. ಇದರಿಂದ ಅವರಿಗೆ ಬೇಗ ಅರ್ಥವಾಗುತ್ತಿದೆ ಎಂದರು.

ಅಲ್ಲದೆ ಸಹ ಕಾಮೆಂಟೇಟರ್ ಆಗಿದ್ದ ಸಂಜಯ್ ಬಂಗಾರ್​ಗೆ ಕೆಎಲ್ ರಾಹುಲ್ ಸುಂದರ್​​ ಜೊತೆ ತಮಿಳಿನಲ್ಲಿ ಮಾತನಾಡುತ್ತಿರುವುದರಿಂದ ಹೆಚ್ಚು ಸಹಕಾರಿಯಾಗುತ್ತಿದೆಯಲ್ಲವೇ ಎಂದು ಪ್ರಶ್ನಿಸಿದರು.

ಈ ವೇಳೆ ಸಂಜಯ್ ಬಂಗಾರ್, ನಾನು ರಾಷ್ಟ್ರ ಭಾಷೆಯನ್ನು ನಂಬುತ್ತೇನೆ ಎನ್ನುವ ಮೂಲಕ ಹೊಸ ಚರ್ಚೆಯನ್ನು ಹುಟ್ಟುಹಾಕಿದರು. ಅಂದರೆ ಇಲ್ಲಿ ಸಂಜಯ್ ಬಂಗಾರ್ ಈಗಲೂ ಹಿಂದಿ ರಾಷ್ಟ್ರ ಭಾಷೆ ಎಂಬ ಗುಂಗಿನಲ್ಲಿರುವುದು ಸ್ಪಷ್ಟ.

ಆದರೆ ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆ ಇಲ್ಲ ಎಂಬ ಸಾಮಾನ್ಯ ಅರಿವು ಸಂಜಯ್ ಬಂಗಾರ್​ಗೆ ಇದ್ದಂತಿಲ್ಲ. 2010 ರಲ್ಲಿ ಗುಜರಾತ್ ಹೈಕೋರ್ಟ್, ಹಿಂದಿ ರಾಷ್ಟ್ರೀಯ ಭಾಷೆ ಎಂದು ಹೇಳಲು ಯಾವುದೇ ಅಧಿಕೃತ ದಾಖಲೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಇದಾಗ್ಯೂ ಲೈವ್ ಕಾಮೆಂಟ್ರಿಯಲ್ಲಿ ರಾಷ್ಟ್ರಭಾಷೆ ಮೇಲೆ ನಂಬಿಕೆಯಿದೆ ಎನ್ನುವ ಮೂಲಕ ಸಂಜಯ್ ಬಂಗಾರ್ ತಮ್ಮ ಅಜ್ಞಾನವನ್ನು ತೆರೆದಿಟ್ಟಿದ್ದಾರೆ.

 

 

Source link

ಮೊಬೈಲ್, ಇಂಟರ್ನೆಟ್ ಬಳಸೋದೆ ಇಲ್ವಂತೆ ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ – Kannada News | Silence as Strategy: Why NSA Ajit Doval Keeps His Phone Switched Off

ನವದೆಹಲಿ, ಜನವರಿ 12: ಭಾರತದ ಭದ್ರತಾ ಸಲಹೆಗಾರ(NSA) ಅಜಿತ್ ದೋವಲ್(Ajit Doval) ಮೊಬೈಲ್, ಇಂಟರ್ನೆಟ್ ಬಳಸುವುದೇ ಇಲ್ವಂತೆ. ಭದ್ರತಾ ಸಲಹೆಗಾರರಾಗಿ ಮೊಬೈಲ್ ಅನ್ನೇ ಬಳಸುವುದಿಲ್ಲ ಎಂದರೆ ಹೇಗೆ ಸಂವಹನ ನಡೆಸುತ್ತಾರೆ ಎನ್ನುವ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜ. ಆದರೆ ಸಾಮಾನ್ಯ ಜನರಿಗೆ ತಿಳಿದಿಲ್ಲದ ಇತರ ಸಂವಹನ ವಿಧಾನಗಳಿವೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಡೆವಲಾಪ್ ಇಂಡಿಯಾ ಯುವ ನಾಯಕರ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವೈಯಕ್ತಿಕ ಅಗತ್ಯಗಳನ್ನು ಹೊರತುಪಡಿಸಿ ನಾನು ಇಂಟರ್ನೆಟ್ ಅಥವಾ ಫೋನ್ ಬಳಸುವುದಿಲ್ಲ ಎಂಬುದು ನಿಜ. ನಾನು ಅವುಗಳಿಲ್ಲದೆ ಕಾರ್ಯ ನಿರ್ವಹಿಸುತ್ತೇನೆ. ವಿದೇಶದಲ್ಲಿ ಯಾರನ್ನಾದರೂ ಸಂಪರ್ಕಿಸಬೇಕಾದಾಗ ನಾನು ಸಾಂದರ್ಭಿಕವಾಗಿ ಅವುಗಳನ್ನು ಬಳಸುತ್ತೇನೆ, ಇದರ ಹೊರತಾಗಿ, ಸಾಮಾನ್ಯ ಜನರಿಗೆ ತಿಳಿದಿಲ್ಲದ ಇತರ ಸಂವಹನ ಸಾಧನಗಳಿವೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಸ್ಮರಿಸಿದ ದೋವಲ್, ಸ್ವತಂತ್ರ ಭಾರತದಲ್ಲಿ ಜನಿಸಿರುವ ನೀವು ಅದೃಷ್ಟವಂತರು. ನಾನು ಗುಲಾಮ ಭಾರತದಲ್ಲಿ ಜನಿಸಿದ್ದೇನೆ. ನಮ್ಮ ಪೂರ್ವಜರು ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ಲೆಕ್ಕವಿಲ್ಲದಷ್ಟು ಕಷ್ಟಗಳನ್ನು ಸಹಿಸಿಕೊಂಡರು ಎಂದು ಹೇಳಿದರು. ಭಗತ್ ಸಿಂಗ್ ಅವರನ್ನು ಗಲ್ಲಿಗೇರಿಸಲಾಯಿತು, ಸುಭಾಷ್ ಚಂದ್ರ ಬೋಸ್ ತಮ್ಮ ಜೀವನದುದ್ದಕ್ಕೂ ಹೋರಾಡಿದರು ಮತ್ತು ದೇಶ ಸ್ವತಂತ್ರವಾಗುವ ಮೊದಲು ಮಹಾತ್ಮ ಗಾಂಧಿಯವರು ಸತ್ಯಾಗ್ರಹವನ್ನು ಆಶ್ರಯಿಸಬೇಕಾಯಿತು ಎಂದು ಅವರು ಹೇಳಿದರು.

ನಾವು ನಮ್ಮ ಇತಿಹಾಸಕ್ಕೆ ಉತ್ತರಿಸಬೇಕು ಮತ್ತು ದೇಶವನ್ನು ಮತ್ತೆ ಶ್ರೇಷ್ಠವನ್ನಾಗಿ ಮಾಡಬೇಕು, ಗಡಿ ಭದ್ರತೆಯ ವಿಷಯದಲ್ಲಿ ಮಾತ್ರವಲ್ಲ, ಆರ್ಥಿಕತೆ, ಸಾಮಾಜಿಕ ಅಭಿವೃದ್ಧಿ ಮತ್ತು ಪ್ರತಿಯೊಂದು ಅಂಶದಲ್ಲೂ ಕೂಡ ಎಂದು ಅವರು ಹೇಳಿದರು. ಯುವಕರನ್ನು ಭವಿಷ್ಯದ ನಾಯಕರು ಎಂದು ಬಣ್ಣಿಸಿದ ಅವರು, ಬಲವಾದ ನಾಯಕತ್ವದ ಅಗತ್ಯವನ್ನು ಒತ್ತಿ ಹೇಳಿದರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಉದಾಹರಣೆಯನ್ನು ಉಲ್ಲೇಖಿಸಿದರು.

ಮತ್ತಷ್ಟು ಓದಿ: ಗಡಿಯಾಚೆಗಿನ ಭಯೋತ್ಪಾದನೆ ಮಾನವೀಯತೆಯ ವಿರುದ್ಧದ ಅಪರಾಧ; SCO ಸಭೆಯಲ್ಲಿ ಅಜಿತ್ ದೋವಲ್ ಕಳವಳ

ಜಗತ್ತಿನಲ್ಲಿ ಹೆಚ್ಚಿನ ಸಂಘರ್ಷಗಳು ಭದ್ರತೆಗೆ ಸಂಬಂಧಿಸಿದ ಕಾರಣಗಳಿಂದ ಉಂಟಾಗುತ್ತವೆ,ಪ್ರತಿಯೊಬ್ಬರ ಜೀವನವೂ ಸ್ಮಾರ್ಟ್‌ಫೋನ್‌ಗಳು ಮತ್ತು ಇಂಟರ್ನೆಟ್‌ನ ಸುತ್ತ ಸುತ್ತುತ್ತಿರುವ ಈ ಡಿಜಿಟಲ್ ಯುಗದಲ್ಲಿ, ದೇಶದ ಅತ್ಯಂತ ಶಕ್ತಿಶಾಲಿ ಭದ್ರತಾ ಹುದ್ದೆಯನ್ನು ಹೊಂದಿರುವ ವ್ಯಕ್ತಿಯ ಈ ಹೇಳಿಕೆ ಆಘಾತಕಾರಿಯಾಗಿದೆ.

ಇದು ಉದ್ದೇಶಪೂರ್ವಕ ಭದ್ರತಾ ನೀತಿಯಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರರಿಗೆ ಭಯೋತ್ಪಾದನೆ, ರಹಸ್ಯ ಕಾರ್ಯಾಚರಣೆಗಳು, ಕಾರ್ಯತಂತ್ರದ ನಿರ್ಧಾರಗಳು ಮತ್ತು ಅಂತಾರಾಷ್ಟ್ರೀಯ ರಾಜತಾಂತ್ರಿಕತೆಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ಕಾರ್ಯಾಚರಣೆಗಳಿರುತ್ತವೆ. ಮೊಬೈಲ್ ಫೋನ್‌ಗಳನ್ನು ಹ್ಯಾಕ್ ಮಾಡಬಹುದು, ಸ್ಥಳಗಳನ್ನು ಟ್ರ್ಯಾಕ್ ಮಾಡಬಹುದು ಮತ್ತು ಸಂಭಾಷಣೆಗಳನ್ನು ತಡೆಹಿಡಿಯಬಹುದು. ಅಂತಹ ಪರಿಸ್ಥಿತಿಯಲ್ಲಿ, ಸಣ್ಣದೊಂದು ನಿರ್ಲಕ್ಷ್ಯವೂ ಸಹ ರಾಷ್ಟ್ರೀಯ ಭದ್ರತೆಗೆ ದೊಡ್ಡ ಬೆದರಿಕೆಯನ್ನುಂಟುಮಾಡಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ದಶಕದ ಹಿಂದಿನ ದಾಖಲೆ ಉಡೀಸ್; ಒಮ್ಮೆಲೆ ನಾಲ್ಕು ಸಿನಿಮಾ ಹಿಂದಿಕ್ಕಿದ ‘ಧುರಂಧರ್’ – Kannada News | Dhurandhar Movie Shatters Baahubali 2’s North America Record: Box Office Triumph

ಸಿನಿಮಾಗಳು ರಿಲೀಸ್ ಆದ ಮೊದಲ ವಾರ ಅಬ್ಬರಿಸಿ ನಂತರದ ವಾರಗಳಲ್ಲಿ ಮುಗ್ಗರಿಸುತ್ತವೆ. ಮೂರನೇ ವಾರಕ್ಕೆ ಬರೋವರೆಗೆ ಸಿನಿಮಾ ಸುಸ್ತಾಗಿ ಬಿಡುತ್ತದೆ. ಆದರೆ, ‘ಧುರಂಧರ್’ ಹಾಗಲ್ಲ. ರಿಲೀಸ್ ಆಗಿ ಆರು ವಾರ ಕಳೆದರೂ ಸಿನಿಮಾ ಮುನ್ನುಗ್ಗುತ್ತಿದೆ. ಈಗ ಈ ಚಿತ್ರ 10 ವರ್ಷಗಳ ಹಿಂದೆ ಬರೆದಿದ್ದ ದಾಖಲೆಯನ್ನು ಉಡೀಸ್ ಮಾಡಿದೆ.

‘ಬಾಹುಬಲಿ 2’ ಸಿನಿಮಾ 2016ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬರೆದ ದಾಖಲೆ ಒಂದೆರಡಲ್ಲ. ಇದನ್ನು ಅಳಿಸಲು ಅನೇಕ ಸಿನಿಮಾಗಳ ಬಳಿ ಸಾಧ್ಯವೇ ಆಗಿಲ್ಲ. ಆದರೆ, ದಶಕಗಳ ಬಳಿಕ ಬಂದ ‘ಧುರಂದರ್’ ಸಿನಿಮಾ ಈ ದಾಖಲೆಗಳನ್ನು ಉಡೀಸ್ ಮಾಡುತ್ತಿದೆ.

ಉತ್ತರ ಅಮೇರಿಕದಲ್ಲಿ ‘ಬಾಹುಬಲಿ 2’ ಚಿತ್ರವನ್ನು 20 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದರು. ಇದಾದ ಬಳಿಕ ಯಾವ ಭಾರತೀಯ ಸಿನಿಮಾಗೂ 20 ಲಕ್ಷಕ್ಕೂ ಹೆಚ್ಚು ಜನರು ಬಂದಿರಲಿಲ್ಲ. ಆದರೆ, ‘ಧರುಂಧರ್ 2’ ಚಿತ್ರಕ್ಕೆ ಉತ್ತರ ಅಮೆರಿಕದಲ್ಲಿ 2 ಲಕ್ಷಕ್ಕೂ ಹೆಚ್ಚಿನ ಪ್ರೇಕ್ಷಕರ ಆಗಮನ ಆಗಿದೆ. ಈ ಮೂಲಕ ದಶಕದ ಹಿಂದಿನ ದಾಖಲೆ ಮುರಿದು ಬಿದ್ದಿದೆ.

ಭಾರತಾದ್ಯಂತ ಈ ಸಿನಿಮಾ 800 ಕೋಟಿ ರೂಪಾಯಿ ಬಾಚಿಕೊಂಡಿದೆ. ವಿಶ್ವ ಮಟ್ಟದಲ್ಲಿ ಸಿನಿಮಾ 1254 ಕೋಟಿ ರೂಪಾಯಿ ಗಳಿಸಿದೆ. ‘ಧುರಂಧರ್’ ಸಿನಿಮಾ 38ನೇ ದಿನ 6.15 ಕೋಟಿ ರೂಪಾಯಿ ಬಾಚಿಕೊಂಡಿದೆ. ಇದು ಚಿತ್ರದ ಹೆಚ್ಚುಗಾರಿಕೆ.

ಇದನ್ನೂ ಓದಿ: ‘ನನಗೆ ಧುರಂಧರ್ 2, ಟಾಕ್ಸಿಕ್ ಬಗ್ಗೆ ಭಯವಿಲ್ಲ’; ನೇರವಾಗಿ ಹೇಳಿದ ನಿರ್ಮಾಪಕ

ಈ ಸಿನಿಮಾ ನಾಲ್ಕು ಹಿಟ್ ಸಿನಿಮಾಗಳ ಗಳಿಕೆಯನ್ನು ಹಿಂದಿಕ್ಕಿದೆ. ‘ಕೆಜಿಎಫ್ ಚಾಪ್ಟರ್ 2’, ‘ಆರ್​​ಆರ್​​ಆರ್​’, ‘ಜವಾನ್’ ಹಾಗೂ ‘ಪಠಾಣ್’ ಚಿತ್ರಗಳ ಕಲೆಕ್ಷನ್​ ಮೀರಿ ‘ಧುರಂಧರ್’ ಚಿತ್ರದ ಕಲೆಕ್ಷನ್ ನಿಂತಿದೆ. ಇನ್ನಷ್ಟು ದಾಖಲೆಗಳು ಚಿತ್ರದಿಂದ ನಿರೀಕ್ಷಿಸಬಹುದಾಗಿದೆ.

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈ ವೇಳೆ ‘ಟಾಕ್ಸಿಕ್’ ಸಿನಿಮಾ ಕೂಡ ತೆರೆಗೆ ಬರಲಿದೆ. ಎರಡೂ ಚಿತ್ರಗಳ ಮಧ್ಯೆ ದೊಡ್ಡ ಕ್ಲ್ಯಾಶ್ ಏರ್ಪಡುತ್ತಾ ಇದೆ. ಈ ಕ್ಲ್ಯಾಶ್ ತುಂಬಾನೇ ದೊಡ್ಡ ಮಟ್ಟದಲ್ಲಿರೋ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಿಎಸ್​ಎಲ್​ವಿ ರಾಕೆಟ್ ವೈಫಲ್ಯ; ನಾಶಗೊಂಡ ಸೆಟಿಲೈಟ್​ಗಳ ನಷ್ಟ ಯಾರು ಭರಿಸೋದು? – Kannada News | PSLV rocket mission failure, who bears the loss for lost satellites

ನವದೆಹಲಿ, ಜನವರಿ 12: ಹದಿನಾರು ಸೆಟಿಲೈಟ್​ಗಳನ್ನು ಹೊತ್ತ ಪಿಎಸ್​ಎಲ್​ವಿ ರಾಕೆಟ್ ಉಡಾವಣೆ (PSLV rocket launch) ವಿಫಲವಾಗಿದೆ. ಇಸ್ರೋದಿಂದ ಉಡಾವಣೆಗೊಂಡ ಪಿಎಸ್​ಎಲ್​ವಿ-ಸಿ62 ರಾಕೆಟ್ ತಾಂತ್ರಿಕ ವೈಫಲ್ಯ ಕಂಡು, ಗುರಿ ತಪ್ಪಿದೆ. ಇದರೊಂದಿಗೆ, ರಾಕೆಟ್ ಜೊತೆಗೆ ಅದರಲ್ಲಿದ್ದ ಭೂ ವೀಕ್ಷಣಾ ಉಪಗ್ರಹವಾದ ಇಒಎಸ್-ಎನ್1 ಸೇರಿದಂತೆ 16 ಸೆಟಿಲೈಟ್​ಗಳೂ ನಾಶವಾಗಲಿವೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಸ್ಪೇಸ್ ಸೆಂಟರ್​ನಲ್ಲಿ ಬೆಳಗ್ಗೆ 10:18ಕ್ಕೆ ಈ ರಾಕೆಟ್ ಉಡಾವಣೆ ಆಗಿತ್ತು. ಇಒಎಸ್-ಎನ್1 ಸೇರಿದಂತೆ 15 ಸೆಟಿಲೈಟ್​ಗಳನ್ನು ಸೂರ್ಯ ಸಂಬದ್ಧ ಕಕ್ಷೆಗೆ (Sun Synchronous Orbit) ತಲುಪಿಸುವ ಮಿಷನ್ ಇತ್ತು. ಕೆಐಡಿ ಎನ್ನುವ ಮತ್ತೊಂದು ಕ್ಯಾಪ್ಸೂಲ್ ಅನ್ನು ಭೂಮಿಗೆ ವಾಪಸ್ ತರುವ ಯೋಜನೆ ಇತ್ತು.

ಇದನ್ನೂ ಓದಿ: PSLV-C62: 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಕೆಐಡಿ ಅಥವಾ ಕೆಸ್ಟ್ರೆಲ್ ಇನಿಶಿಯಲ್ ಟೆಕ್ನಾಲಜಿ ಡೆಮಾನ್ಸ್​ಟ್ರೇಟರ್ ಅನ್ನು ಸ್ಪೇನ್ ದೇಶದ ಕಂಪನಿಯೊಂದು ಅಭಿವೃದ್ಧಿಪಡಿಸಿದೆ. ಇದು 25 ಕಿಲೋ ಕ್ಯಾಪ್ಸೂಲ್ ಆಗಿದ್ದು, ಭೂಮಿಗೆ ಮರಳಿ ಬರುವುದಕ್ಕೆಂದೇ ರೂಪಿಸಿದಂತಾಗಿತ್ತು. ಇನ್ನು, ಈ ಮಿಷನ್​ನ ಪ್ರಮುಖ ಉಪಗ್ರಹವಾದ ಇಒಎಸ್-ಎನ್1 ಅನ್ನು ಬ್ರಿಟನ್ ಮತ್ತು ಥಾಯ್ಲೆಂಡ್ ಜಂಟಿಯಾಗಿ ಅಭಿವೃದ್ಧಿಪಡಿಸಿದ್ದವು. ಇವುಗಳೂ ಸೇರಿ ಒಟ್ಟು 16 ಸೆಟಿಲೈಟ್​ಗಳು ಕಳೆದುಹೋದಂತಾಗಿದೆ.

ನಷ್ಟಗೊಂಡ ಸೆಟಿಲೈಟ್​ಗಳಿಗೆ ಯಾರು ಹೊಣೆ?

ಸೆಟಿಲೈಟ್ ಉಡಾವಣೆ ವೇಳೆ ರಾಕೆಟ್ ವೈಫಲ್ಯವಾಗಿ, ಅದರಲ್ಲಿದ್ದ ಸೆಟಿಲೈಟ್​ಗಳು ನಾಶಗೊಂಡರೆ ಅದಕ್ಕೆ ಹೊಣೆ ಯಾರೆಂದು ಇರುವುದಿಲ್ಲ. ಬಸ್ ಅಪಘಾತವಾಗಿ ಪ್ರಯಾಣಿಕರು ಸಾವನ್ನಪ್ಪಿದರೆ ಬಸ್ ಮಾಲೀಕರು ಪರಿಹಾರ ಕೊಡಬೇಕೆಂದಿಲ್ಲ. ಹಾಗೆಯೇ, ರಾಕೆಟ್ ವಿಫಲವಾಗಿ ಸೆಟಿಲೈಟ್ ನಾಶವಾದರೆ, ಅದಕ್ಕೆ ರಾಕೆಟ್ ಉಡಾಯಿಸಿದ ಅಥವಾ ಅದನ್ನು ನಿರ್ಮಿಸಿದ ಇಸ್ರೋ ಹೊಣೆಯಾಗುವುದಿಲ್ಲ.

ಸೆಟಿಲೈಟ್ ತಯಾರಿಸಿದವರು ಅದಕ್ಕೆ ಇನ್ಷೂರೆನ್ಸ್ ಮಾಡಿಸುವ ಅವಕಾಶ ಇರುತ್ತದೆ. ಹಾಗೆ ಇನ್ಷೂರೆನ್ಸ್ ಮಾಡಿಸಿದ್ದರೆ ಒಂದಷ್ಟು ಪರಿಹಾರ ಪಡೆಯಬಹುದು. ಬ್ರೆಜಿಲ್, ನೇಪಾಳ ಮೊದಲಾದ ಇತರ ಕೆಲ ದೇಶಗಳ ಸೆಟಿಲೈಟ್​ಗಳೂ ಈ ಮಿಷನ್​ನಲ್ಲಿ ಇದ್ದವು. ಆಯಾ ಕಂಪನಿಗಳು ವಿಮೆ ಮಾಡಿಸಿರುವ ಸಾಧ್ಯತೆ ಇರುತ್ತದೆ. ಇಸ್ರೋದಿಂದಾಗಲೀ, ಅಥವಾ ಸರ್ಕಾರದಿಂದಲಾಗಲೀ ಆ ಸೆಟಿಲೈಟ್ ತಯಾರಕರಿಗೆ ಪರಿಹಾರ ಕೊಡಲಾಗುವುದಿಲ್ಲ.

ಇದನ್ನೂ ಓದಿ: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ

ಇಸ್ರೋಗೆ ಇದು ಐದನೇ ಪಿಎಸ್​ಎಲ್​ವಿ ವೈಫಲ್ಯ…

ಇಸ್ರೋ ಇಲ್ಲಿಯವರೆಗೆ 64 ಬಾರಿ ಪಿಎಸ್​ಎಲ್​ವಿ ರಾಕೆಟ್ ಅನ್ನು ಆಗಸಕ್ಕೆ ಕಳುಹಿಸಿದೆ. ಇವತ್ತಿನದೂ ಸೇರಿ ಐದು ಬಾರಿ ವೈಫಲ್ಯವಾಗಿದೆ. 2025ರಲ್ಲೂ ಪಿಎಸ್​ಎಲ್​ವಿ ಮಿಷನ್ ಫೇಲ್ಯೂರ್ ಆಗಿತ್ತು. ಕಳೆದ ಒಂದು ವರ್ಷದಲ್ಲಿ ಸತತ ಎರಡು ಬಾರಿ ಪಿಎಸ್​ಎಲ್​ವಿ ವೈಫಲ್ಯ ಕಂಡಿದೆ. ಆದರೆ, 64 ಮಿಷನ್​ನಲ್ಲಿ 5 ವೈಫಲ್ಯ ಎಂಬುದು ಕಳಪೆ ಸಾಧನೆಯಲ್ಲ. ಇಲಾನ್ ಮಸ್ಕ್ ಅವರ ರಾಕೆಟ್ ಮಿಷನ್​ಗಳೂ ಕೂಡ ಬಾರಿ ಬಾರಿ ವಿಫಲವಾಗಿರುವುದುಂಟು.

ಸೆಟಿಲೈಟ್​ಗಳು ಏನಾಗುತ್ತವೆ?

ರಾಕೆಟ್ ಉಡಾವಣೆ ವಿಫಲವಾದಾಗ ಅದರಲ್ಲಿದ್ದ ಸೆಟಿಲೈಟ್​ಗಳು ಹೆಚ್ಚಿನವು ಭೂಮಿ ವಾತಾವರಣಕ್ಕೆ ವೇಗವಾಗಿ ಬರುವಾಗ ಸುಟ್ಟು ಹೋಗಬಹುದು. ಕೆಲವು ಆಗಸದಲ್ಲಿ ಕೆಲ ಕಾಲ ಸ್ಪೇಸ್ ತ್ಯಾಜ್ಯಗಳಾಗಿ ಉಳಿಯಬಹುದು. ಇನ್ನು ರಾಕೆಟ್ ಅನ್ನು ಸಮುದ್ರದ ಮೇಲೆ ಉಡಾವಣೆ ಮಾಡುವುದರಿಂದ ಅದು ಸಮುದ್ರಕ್ಕೆ ಉದುರಿ ಬೀಳುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಿಂಗ್ ಕೊಹ್ಲಿಯ ದಾಖಲೆ ಮೇಲೆ ಕಣ್ಣಿಟ್ಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi Eyes On Virat Kohli and Gill’s Record

ಟೀಮ್ ಇಂಡಿಯಾ ಅಂಡರ್​-19 ವಿಶ್ವಕಪ್​ಗಾಗಿ ಸಜ್ಜಾಗಿದೆ. ಜನವರಿ 15 ರಿಂದ ಶುರುವಾಗಲಿರುವ ಈ ಟೂರ್ನಿಗೂ ಮುನ್ನವೇ ವೈಭವ್ ಸೂರ್ಯವಂಶಿಯ ಅಬ್ಬರ ಆರಂಭವಾಗಲಿದೆ. ಸ್ಕಾಟ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿರುವ ವೈಭವ್ ಕೇವಲ 50 ಎಸೆತಗಳಲ್ಲಿ 7 ಸಿಕ್ಸರ್​ಗಳೊಂದಿಗೆ 96 ರನ್​ಗಳಿಸಿದ್ದಾರೆ.

ಇದೇ ಫಾರ್ಮ್​ ಅನ್ನು ವಿಶ್ವಕಪ್​ನ ಮೊದಲ ಪಂದ್ಯದಲ್ಲೂ ವೈಭವ್ ಸೂರ್ಯವಂಶಿ ಮುಂದುವರೆಸುವ ನಿರೀಕ್ಷೆಯಿದೆ. ಈ ನಿರೀಕ್ಷೆ ನಿಜವಾದರೆ ಹೊಸ ಇತಿಹಾಸ ನಿರ್ಮಾಣವಾಗುವುದು ಖಚಿತ. ಏಕೆಂದರೆ ಈ ಬಾರಿ ಅಂಡರ್-19 ವಿಶ್ವಕಪ್ ಮೂಲಕ ಹೊಸ ಇತಿಹಾಸ ನಿರ್ಮಿಸುವ ಅವಕಾಶ ವೈಭವ್ ಸೂರ್ಯವಂಶಿ ಮುಂದಿದೆ.

ಅಂದರೆ ಅಂಡರ್-19 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ 1000+ ರನ್ ಕಲೆಹಾಕಿರುವುದು ಕೇವಲ ಇಬ್ಬರು ಮಾತ್ರ. ಇದೀಗ ಈ ಪಟ್ಟಿಗೆ ಎಂಟ್ರಿ ಕೊಡುವ ಹೊಸ್ತಿಲಲ್ಲಿದ್ದಾರೆ ವೈಭವ್ ಸೂರ್ಯವಂಶಿ. ಅದು ಕೂಡ ಕೇವಲ 27 ರನ್​ ಕಲೆಹಾಕುವ ಮೂಲಕ ಎಂಬುದು ವಿಶೇಷ.

ವೈಭವ್ ಸೂರ್ಯವಂಶಿ ಯುಎಸ್​ಎ ವಿರುದ್ಧದ ಮೊದಲ ಪಂದ್ಯದಲ್ಲಿ 27 ರನ್​ಗಳಿಸಿದರೆ ಅಂಡರ್-19 ಏಕದಿನ ಪಂದ್ಯಗಳಲ್ಲಿ 1000 ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಯೂತ್ ಒಡಿಐ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ದಾಖಲೆಯನ್ನು ಸಹ ಮುರಿಯಲಿದ್ದಾರೆ.

ಅಂಡರ್-19 ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಕಲೆಹಾಕಿದ ಒಟ್ಟು ಸ್ಕೋರ್ 978 ರನ್​ಗಳು. ಈ ದಾಖಲೆಯನ್ನು ಮುರಿಯಲು ವೈಭವ್​ಗೆ ಬೇಕಿರುವುದು ಕೇವಲ 6 ರನ್​ ಮಾತ್ರ. ಅಂದರೆ ಈ ಬಾರಿಯ ಅಂಡರ್-19 ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲೇ ವೈಭವ್ ಸೂರ್ಯವಂಶಿ ಕಿಂಗ್ ಕೊಹ್ಲಿಯ ದಾಖಲೆ ಮುರಿಯುವುದನ್ನು ಎದುರು ನೋಡಬಹುದು.

ಹಾಗೆಯೇ ಅಂಡರ್-19 ಏಕದಿನ ಪಂದ್ಯಗಳಲ್ಲಿ 1149 ರನ್​ ಕಲೆಹಾಕಿರುವ ಶುಭ್​​ಮನ್ ಗಿಲ್ ಅವರ ದಾಖಲೆಯನ್ನು ಸಹ ಮುರಿಯುವ ಅವಕಾಶ ವೈಭವ್ ಸೂರ್ಯವಂಶಿ ಮುಂದಿದೆ. ಇದಕ್ಕಾಗಿ ಅವರು ಒಟ್ಟು 177 ರನ್​ಗಳಿಸಿದರೆ ಸಾಕು. ಈ ಮೂಲಕ ಅಂಡರ್-19 ಏಕದಿನ ಪಂದ್ಯಗಳಲ್ಲಿ ಅತ್ಯಧಿಕ ರನ್ ಗಳಿಸಿದ 2ನೇ ಭಾರತೀಯ ಎನಿಸಿಕೊಳ್ಳಬಹುದು.

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ವಿಜಯ್ ಝೊಲ್. ಅಂಡರ್ -19 ಏಕದಿನ ಪಂದ್ಯಗಳಲ್ಲಿ ಬರೋಬ್ಬರಿ 1404 ರನ್​ ಗಳಿಸುವ ಮೂಲಕ ಝೊಲ್ ಟೀಮ್ ಇಂಡಿಯಾ ಪರ ಯೂತ್ ಓಡಿಐ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ದಾಖಲೆ ಮುರಿಯಲು ವೈಭವ್ ಸೂರ್ಯವಂಶಿ ಈ ಬಾರಿಯ ಟೂರ್ನಿಯ ಮೂಲಕ ಬರೋಬ್ಬರಿ 432 ರನ್​ಗಳನ್ನು ಕಲೆಹಾಕಬೇಕಿದೆ.

ಇದನ್ನೂ ಓದಿ: ಟೀಮ್ ಇಂಡಿಯಾದಿಂದ ಮತ್ತೋರ್ವ ಆಟಗಾರ ಔಟ್..!

ಇತ್ತ ಈಗಾಗಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿರುವ ವೈಭವ್ ಸೂರ್ಯವಂಶಿ ಕಡೆಯಿಂದ ಈ ಬಾರಿ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಈ ಪ್ರದರ್ಶನದೊಂದಿಗೆ ಅಂಡರ್-19 ಏಕದಿನ ಪಂದ್ಯಗಳಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ನಿರ್ಮಿಸಲಿದ್ದಾರಾ ಕಾದು ನೋಡಬೇಕಿದೆ.

Source link

ಮನೆ ಊಟದ ವಿಷಯದಲ್ಲಿ ತೀರ್ಪು ಮಾರ್ಪಾಡು ಮಾಡಿದ ಕೋರ್ಟ್; ಪವಿತ್ರಾಗೆ ಶಾಕ್ – Kannada News | Renukaswamy Case: Pavithra Gowda’s Jail Home Food Restricted by Court

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಜೈಲಿನಲ್ಲಿರೋ ಪವಿತ್ರಾ ಗೌಡಗೆ (Pavithra Gowda) ಮನೆ ಊಟ ನೀಡುವಂತೆ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಈ ಮೊದಲು ಆದೇಶ ನೀಡಿತ್ತು. ಈ ಆದೇಶವನ್ನು ಜೈಲಧಿಕಾರಿಗಳು ಪ್ರಶ್ನೆ ಮಾಡಿದ್ದರು. ಈ ವಿಷಯದಲ್ಲಿ ಕೋರ್ಟ್ ತನ್ನದೇ ತೀರ್ಪನ್ನು ಮಾರ್ಪಾಡು ಮಾಡಿದೆ. ವಾರದಲ್ಲಿ ಒಮ್ಮೆ ಮಾತ್ರ ಊಟ ನೀಡಲು ಅವಕಾಶ ನೀಡಿದೆ. ಇದರಿಂದ ಪವಿತ್ರಾಗೆ ಹಿನ್ನಡೆ ಆಗಿದೆ.

ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಜೈಲೂಟದಿಂದ ಸಮಸ್ಯೆ ಆಗುತ್ತಿದೆ ಎಂಬುದನ್ನು ಹೈಲೈಟ್ ಮಾಡಿದ್ದರು. ಜೈಲೂಟದಿಂದ ಚರ್ಮರೋಗ ಉಂಟಾಗಿದೆ, ಮೈಮೇಲೆ ಗುಳ್ಳೆಗಳು ಆಗುತ್ತಿವೆ ಎಂದು ವಾದ ಮಂಡಿಸಿದ್ದರು. ಜೈಲೂಟದಿಂದ ಫುಡ್‌ಪಾಯಿಸನ್ ಕೂಡ ಆಗುತ್ತಿದೆ ಎಂದು ಕೋರ್ಟ್ ಎದುರು ಹೇಳಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ್ದ ಕೋರ್ಟ್ ಮನೆ ಊಟಕ್ಕೆ ಅವಕಾಶ ನೀಡಿತ್ತು.

ಆದರೆ, ಇದನ್ನು ಜೈಲಾಧಿಕಾರಿಗಳು ವಿರೋಧಿಸಿದ್ದರು. ಜೈಲಿನ ಊಟ ಉತ್ತಮವಾಗಿದೆ, ಶುಚಿಯಾಗಿದೆ ಎಂದು ವಾದಿಸಿದ್ದರು. ‘ಈ ವರೆಗೆ ಜೈಲಿನಲ್ಲಿ ಊಟ ತಿಂದು ಪವಿತ್ರಾ ಸೇರಿದಂತೆ ಇನ್ಯಾರೂ ಸಹ ಅಸ್ವಸ್ತಗೊಂಡಿಲ್ಲ. ಹೀಗಿರುವಾಗ ಪ್ರತ್ಯೇಕವಾಗಿ ಮನೆ ಊಟದ ಅವಶ್ಯಕತೆ ಇಲ್ಲ’ ಎಂಬುದು ಪೊಲೀಸರ ವಾದ ಆಗಿತ್ತು.

ಇದನ್ನೂ ಓದಿ: ಕೊಲೆ ಕೇಸ್ ವಿಚಾರಣೆ: ಪವಿತ್ರಾ ಗೌಡ ಮುಖದಲ್ಲಿ ಕಾಣಿಸಿತು ಸಿಕ್ಕಾಪಟ್ಟೆ ಟೆನ್ಷನ್

ಜೈಲಧಿಕಾರಿಗಳ ವಾದವು ನ್ಯಾಯಾಲಯಕ್ಕೆ ಸರಿ ಎನಿಸಿದೆ. ಹೀಗಾಗಿ, 57 ನೇ ಸಿಸಿಹೆಚ್ ಕೋರ್ಟ್ ಆದೇಶವನ್ನು ಮಾರ್ಪಾಡು ಮಾಡಿದೆ. ವಾರಕ್ಕೆ ಒಮ್ಮೆ ಮಾತ್ರ ಊಟ ನೀಡಲು ಆದೇಶ ಕೊಟ್ಟಿದೆ. ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ. ದರ್ಶನ್ ಅವರು ಎ2 ಆರೋಪಿ ಆಗಿದ್ದಾರೆ. ಈ ಪ್ರಕರಣದಲ್ಲಿ ಒಟ್ಟೂ 17 ಆರೋಪಿಗಳು ಇದ್ದಾರೆ. ಸದ್ಯ ಕೆಳ ಹಂತದ ಕೋರ್ಟ್​​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಿ: ಸುಪ್ರೀಂಕೋರ್ಟ್ ನಿರ್ದೇಶನ – Kannada News | GBA Elections to Be Held in June 2026: Supreme Court Orders

ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಬೆಂಗಳೂರು, ಜನವರಿ 12: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಅಡಿ ರಚನೆಯಾಗಿರುವ 5 ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸುದೀರ್ಘ ಸಮಯದಿಂದ ಚಿಂತನೆ ನಡೆಯುತ್ತಲೇ ಇದೆ. ಸುಮಾರು ವರ್ಷಗಳಿಂದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆಯೇ ನಡೆಯದೆ ಪದೇ ಪದೇ ಮುಂದೂಡಿಕೊಂಡು ಬರಲಾಗುತ್ತಿತ್ತು. ಆದರೀಗ ನಗರದ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಮಾರ್ಚ್​ 16ರೊಳಗೆ ಮತದಾರರ ಪಟ್ಟಿ ಅಂತಿಮ, ಜೂನ್ 30ರೊಳಗೆ ಚುನಾವಣೆ

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್​​ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿತ್ತು. ಈ ಕುರಿತು ವಿಚಾರಣೆ ವೇಳೆ, ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿ, ಈಗಾಗಲೇ ಮೀಸಲಾತಿಯ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು. ಫೆಬ್ರವರಿ 20ರೊಳಗೆ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ಕೋರ್ಟ್ ಸೂಚನೆ ನೀಡಿದೆ.

ಮಾರ್ಚ್ 16ರೊಳಗೆ ಮತದಾರರ ಪಟ್ಟಿ ಅಂತಿಮಗೊಳ್ಳಲಿದ್ದು, ಮಾರ್ಚ್‌ನಲ್ಲಿ ಎಸ್ಎಸ್ಎಲ್‌ಸಿ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಮೇ 26ರೊಳಗೆ ಚುನಾವಣಾ ದಿನಾಂಕ ಘೋಷಿಸಿ, ಜೂನ್ ತಿಂಗಳೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಕೋರ್ಟ್‌ಗೆ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 1:17 pm, Mon, 12 January 26

Source link

ಸಿದ್ದರಾಮಯ್ಯಗೆ ಉತ್ತರ ಕರ್ನಾಟಕದಲ್ಲೂ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಏಕಾಏಕಿ ಸಿಎಂ ಪರ ಯತ್ನಾಳ್ ಬ್ಯಾಟಿಂಗ್ – Kannada News | Siddaramaiah Has Strong Support, What Does DK Shivakumar Have? Basanagouda Yatnal’s Surprise Backing Sparks Buzz

ವಿಜಯಪುರ, ಜನವರಿ 12: ರಾಜಕಾರಣ ಹೇಗಿದೆ ಎಂದರೆ, ಶಕ್ತಿ ಪ್ರದರ್ಶನ ಇಂದು ಅನಿವಾರ್ಯವಾಗಿದೆ. ಅದನ್ನು ಮಾಡದಿದ್ದರೆ ನಾಯಕತ್ವವನ್ನು ಗುರುತಿಸುವುದು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಕ್ತಿ ಪ್ರದರ್ಶನ ಮಾಡಲು ಅಧಿಕಾರವಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರಿಗೆ, ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರಲ್ಲ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.

ಡಿಕೆ ಶಿವಕುಮಾರ್ ಅವರಿಗೂ ಶಕ್ತಿ ಇದ್ದರೆ ಪ್ರದರ್ಶಿಸಲಿ. ಉತ್ತರ ಕರ್ನಾಟಕದಲ್ಲಿ ಡಿಕೆಶಿ ಶಕ್ತಿ ಪ್ರದರ್ಶನ ಮಾಡಲಿ ನೋಡೋಣ ಎಂದು ಯತ್ನಾಳ್ ಸವಾಲೆಸೆದರು. ಅಲ್ಲದೆ, ವಿಜಯಪುರಕ್ಕೆ ಬಂದು ಅವಮಾನ ಮಾಡಿಸಿಕೊಂಡು ಹೋಗಿದ್ದಾರೆ ಪುಣ್ಯಾತ್ಮ ಎಂದು ವ್ಯಂಗ್ಯವಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸತತ ಆರನೇ ದಿನ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ ನಷ್ಟ – Kannada News | Indian Stock Market crash, 3pc down in 6 trading sessions, investors lose Rs 17 trillion

ನವದೆಹಲಿ, ಜನವರಿ 12: ಭಾರತದ ಷೇರು ಮಾರುಕಟ್ಟೆ (Stock Market) ಸತತವಾಗಿ ಕುಸಿಯುತ್ತಿದೆ. ಆರು ಟ್ರೇಡಿಂಗ್ ದಿನಗಳಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಭಾರೀ ನಷ್ಟ ಕಂಡಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಆರು ಸೆಷನ್​ಗಳಲ್ಲಿ 2,700 ಅಂಕಗಳನ್ನು ಕಳೆದುಕೊಂಡಿದೆ. ಅದು ಕಂಡ ನಷ್ಟ ಶೇ. 3. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ ಸೂಚ್ಯಂಕ ಕೂಡ ಈ ಆರು ಸೆಷನ್​ನಲ್ಲಿ ಶೇ. 3 ಹಿನ್ನಡೆ ಕಂಡಿದೆ. ಈ ಅವಧಿಯಲ್ಲಿ ಹೂಡಿಕೆದಾರರಿಗೆ 16-17 ಲಕ್ಷ ಕೋಟಿ ರೂ ನಷ್ಟವಾಗಿದೆ. ಭಾರತದ ಷೇರು ಮಾರುಕಟ್ಟೆ ನಿರಂತರವಾಗಿ ಕುಸಿಯುತ್ತಿರುವುದು ಯಾಕೆ? ಸಂಭಾವ್ಯ ಕಾರಣಗಳು ಈ ಕೆಳಕಂಡಂತಿವೆ:

ಅಮೆರಿಕದೊಂದಿಗೆ ಇನ್ನೂ ಕೈಗೂಡದ ಟ್ರೇಡ್ ಡೀಲ್

ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ ಒಪ್ಪಂದಕ್ಕಾಗಿ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಆದರೂ ಕೂಡ ಅಂತಿಮಗೊಳ್ಳಲು ಸಾಧ್ಯವಾಗಿಲ್ಲ. ಶೇ 50 ಟ್ಯಾರಿಫ್ ಅನ್ನು ಸಹಿಸಿಕೊಳ್ಳಲು ಭಾರತಕ್ಕೆ ಹೆಚ್ಚು ದಿನ ಸಾಧ್ಯವಾಗದು. ಗಾಯದ ಮೇಲೆ ಬರೆ ಎಂಬಂತೆ ಅಮೆರಿಕವು ರಷ್ಯಾ ನಿಷೇಧ ಮಸೂದೆ ತರುತ್ತಿದೆ. ಇದು ಜಾರಿಯಾದರೆ ಭಾರತಕ್ಕೆ ವಿಧಿಸುವ ಟ್ಯಾರಿಫ್ ಶೇ. 500ಕ್ಕೆ ಏರಬಹುದು. ಇದು ಭಾರತೀಯ ಮಾರುಕಟ್ಟೆಯ ಉತ್ಸಾಹವನ್ನು ಕುಂದಿಸಲು ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ

ವಿದೇಶೀ ಹೂಡಿಕೆಗಳ ನಿರಂತರ ಹೊರಹರಿವು

ಎಫ್​ಐಐ ಅಥವಾ ವಿದೇಶೀ ಸಾಂಸ್ಥಿಕ ಹೂಡಿಕೆದಾರರು ಕಳೆದ ಆರೇಳು ತಿಂಗಳಿಂದ ಹೊರಬೀಳುತ್ತಿರುವ ಟ್ರೆಂಡ್ ಇದೆ. 2025ರ ಜುಲೈನಿಂದ ಡಿಸೆಂಬರ್​ವರೆಗೆ ಎಫ್​ಐಐಗಳ ಹೊರಹರಿವು ಬರೋಬ್ಬರಿ 1.85 ಲಕ್ಷ ಕೋಟಿ ರೂ. ಜನವರಿಯಲ್ಲಿ ಈಗಾಗಲೇ 12,000 ಕೋಟಿ ರೂ ವಿದೇಶೀ ಹೂಡಿಕೆಗಳು ಹೊರಹೋಗಿವೆ. ಅಂದರೆ, ಆರೇಳು ತಿಂಗಳಲ್ಲಿ ಬಹುತೇಕ 2 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳು ಷೇರು ಮಾರುಕಟ್ಟೆಯಿಂದ ಹೊರಹೋಗಿವೆ.

ಜಾಗತಿಕ ರಾಜಕೀಯ ಅನಿಶ್ಚಿತತೆ

ರಷ್ಯಾ ಉಕ್ರೇನ್ ಯುದ್ಧ, ಇಸ್ರೇಲ್ ಇರಾನ್ ಸಂಘರ್ಷದ ನಂತರ ಈಗ ಅಮೆರಿಕದ ಆಕ್ರಮಣಕಾರಿ ವರ್ತನೆ ವಿಶ್ವವನ್ನು ತಲ್ಲಣಗೊಳಿಸುತ್ತಿದೆ. ವೆನಿಜುವೆಲಾದ ಅಧ್ಯಕ್ಷರನ್ನು ಸೆರೆ ಹಿಡಿದು, ಆ ದೇಶದ ನಿಯಂತ್ರಣ ತೆಗೆದುಕೊಳ್ಳಲು ಯತ್ನಿಸಿದೆ ಟ್ರಂಪ್ ಸರ್ಕಾರ. ಇದರ ಬೆನ್ನಲ್ಲೇ ಗ್ರೀನ್ ಲ್ಯಾಂಡ್ ಅನ್ನು ವಶಪಡಿಸಿಕೊಳ್ಳಲು ಹೊರಟಿದೆ. ಇರಾನ್ ಮೇಲೂ ದಾಳಿ ನಡೆಸಲು ಯೋಜಿಸಿದೆ. ಇದು ಮಾರುಕಟ್ಟೆಯನ್ನು ಭಯಗೊಳಿಸಿರಬಹುದು.

ಇದನ್ನೂ ಓದಿ: ಶೇ 4.4ರ ವಿತ್ತೀಯ ಕೊರತೆ ಗುರಿ ಮುಟ್ಟುವುದು ಸರ್ಕಾರಕ್ಕೆ ಸಲೀಸು: ಏಜೆನ್ಸಿ ವರದಿ

ಈ ಜಾಗತಿಕ ರಾಜಕೀಯ ಅಭದ್ರ ಸ್ಥಿತಿ ಸಂದರ್ಭದಲ್ಲಿ ಹೂಡಿಕೆದಾರರು ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳ ಮೇಲೆ ಹೂಡಿಕೆ ಮಾಡುವುದುಂಟು. ಅಂತೆಯೇ, ಚಿನ್ನ, ಬೆಳ್ಳಿ ಬೆಲೆ ಸಿಕ್ಕಾಪಟ್ಟೆ ಏರಲು ಇದೇ ಪ್ರಮುಖ ಕಾರಣ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version