ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಿ: ಸುಪ್ರೀಂಕೋರ್ಟ್ ನಿರ್ದೇಶನ – Kannada News | GBA Elections to Be Held in June 2026: Supreme Court Orders

ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಬೆಂಗಳೂರು, ಜನವರಿ 12: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಅಡಿ ರಚನೆಯಾಗಿರುವ 5 ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸುದೀರ್ಘ ಸಮಯದಿಂದ ಚಿಂತನೆ ನಡೆಯುತ್ತಲೇ ಇದೆ. ಸುಮಾರು ವರ್ಷಗಳಿಂದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆಯೇ ನಡೆಯದೆ ಪದೇ ಪದೇ ಮುಂದೂಡಿಕೊಂಡು ಬರಲಾಗುತ್ತಿತ್ತು. ಆದರೀಗ ನಗರದ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಮಾರ್ಚ್​ 16ರೊಳಗೆ ಮತದಾರರ ಪಟ್ಟಿ ಅಂತಿಮ, ಜೂನ್ 30ರೊಳಗೆ ಚುನಾವಣೆ

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್​​ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿತ್ತು. ಈ ಕುರಿತು ವಿಚಾರಣೆ ವೇಳೆ, ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿ, ಈಗಾಗಲೇ ಮೀಸಲಾತಿಯ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು. ಫೆಬ್ರವರಿ 20ರೊಳಗೆ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ಕೋರ್ಟ್ ಸೂಚನೆ ನೀಡಿದೆ.

ಮಾರ್ಚ್ 16ರೊಳಗೆ ಮತದಾರರ ಪಟ್ಟಿ ಅಂತಿಮಗೊಳ್ಳಲಿದ್ದು, ಮಾರ್ಚ್‌ನಲ್ಲಿ ಎಸ್ಎಸ್ಎಲ್‌ಸಿ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಮೇ 26ರೊಳಗೆ ಚುನಾವಣಾ ದಿನಾಂಕ ಘೋಷಿಸಿ, ಜೂನ್ ತಿಂಗಳೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಕೋರ್ಟ್‌ಗೆ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 1:17 pm, Mon, 12 January 26

Source link

ಸಿದ್ದರಾಮಯ್ಯಗೆ ಉತ್ತರ ಕರ್ನಾಟಕದಲ್ಲೂ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಏಕಾಏಕಿ ಸಿಎಂ ಪರ ಯತ್ನಾಳ್ ಬ್ಯಾಟಿಂಗ್ – Kannada News | Siddaramaiah Has Strong Support, What Does DK Shivakumar Have? Basanagouda Yatnal’s Surprise Backing Sparks Buzz

ವಿಜಯಪುರ, ಜನವರಿ 12: ರಾಜಕಾರಣ ಹೇಗಿದೆ ಎಂದರೆ, ಶಕ್ತಿ ಪ್ರದರ್ಶನ ಇಂದು ಅನಿವಾರ್ಯವಾಗಿದೆ. ಅದನ್ನು ಮಾಡದಿದ್ದರೆ ನಾಯಕತ್ವವನ್ನು ಗುರುತಿಸುವುದು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಕ್ತಿ ಪ್ರದರ್ಶನ ಮಾಡಲು ಅಧಿಕಾರವಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರಿಗೆ, ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರಲ್ಲ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.

ಡಿಕೆ ಶಿವಕುಮಾರ್ ಅವರಿಗೂ ಶಕ್ತಿ ಇದ್ದರೆ ಪ್ರದರ್ಶಿಸಲಿ. ಉತ್ತರ ಕರ್ನಾಟಕದಲ್ಲಿ ಡಿಕೆಶಿ ಶಕ್ತಿ ಪ್ರದರ್ಶನ ಮಾಡಲಿ ನೋಡೋಣ ಎಂದು ಯತ್ನಾಳ್ ಸವಾಲೆಸೆದರು. ಅಲ್ಲದೆ, ವಿಜಯಪುರಕ್ಕೆ ಬಂದು ಅವಮಾನ ಮಾಡಿಸಿಕೊಂಡು ಹೋಗಿದ್ದಾರೆ ಪುಣ್ಯಾತ್ಮ ಎಂದು ವ್ಯಂಗ್ಯವಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸತತ ಆರನೇ ದಿನ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ ನಷ್ಟ – Kannada News | Indian Stock Market crash, 3pc down in 6 trading sessions, investors lose Rs 17 trillion

ನವದೆಹಲಿ, ಜನವರಿ 12: ಭಾರತದ ಷೇರು ಮಾರುಕಟ್ಟೆ (Stock Market) ಸತತವಾಗಿ ಕುಸಿಯುತ್ತಿದೆ. ಆರು ಟ್ರೇಡಿಂಗ್ ದಿನಗಳಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಭಾರೀ ನಷ್ಟ ಕಂಡಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಆರು ಸೆಷನ್​ಗಳಲ್ಲಿ 2,700 ಅಂಕಗಳನ್ನು ಕಳೆದುಕೊಂಡಿದೆ. ಅದು ಕಂಡ ನಷ್ಟ ಶೇ. 3. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ ಸೂಚ್ಯಂಕ ಕೂಡ ಈ ಆರು ಸೆಷನ್​ನಲ್ಲಿ ಶೇ. 3 ಹಿನ್ನಡೆ ಕಂಡಿದೆ. ಈ ಅವಧಿಯಲ್ಲಿ ಹೂಡಿಕೆದಾರರಿಗೆ 16-17 ಲಕ್ಷ ಕೋಟಿ ರೂ ನಷ್ಟವಾಗಿದೆ. ಭಾರತದ ಷೇರು ಮಾರುಕಟ್ಟೆ ನಿರಂತರವಾಗಿ ಕುಸಿಯುತ್ತಿರುವುದು ಯಾಕೆ? ಸಂಭಾವ್ಯ ಕಾರಣಗಳು ಈ ಕೆಳಕಂಡಂತಿವೆ:

ಅಮೆರಿಕದೊಂದಿಗೆ ಇನ್ನೂ ಕೈಗೂಡದ ಟ್ರೇಡ್ ಡೀಲ್

ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ ಒಪ್ಪಂದಕ್ಕಾಗಿ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಆದರೂ ಕೂಡ ಅಂತಿಮಗೊಳ್ಳಲು ಸಾಧ್ಯವಾಗಿಲ್ಲ. ಶೇ 50 ಟ್ಯಾರಿಫ್ ಅನ್ನು ಸಹಿಸಿಕೊಳ್ಳಲು ಭಾರತಕ್ಕೆ ಹೆಚ್ಚು ದಿನ ಸಾಧ್ಯವಾಗದು. ಗಾಯದ ಮೇಲೆ ಬರೆ ಎಂಬಂತೆ ಅಮೆರಿಕವು ರಷ್ಯಾ ನಿಷೇಧ ಮಸೂದೆ ತರುತ್ತಿದೆ. ಇದು ಜಾರಿಯಾದರೆ ಭಾರತಕ್ಕೆ ವಿಧಿಸುವ ಟ್ಯಾರಿಫ್ ಶೇ. 500ಕ್ಕೆ ಏರಬಹುದು. ಇದು ಭಾರತೀಯ ಮಾರುಕಟ್ಟೆಯ ಉತ್ಸಾಹವನ್ನು ಕುಂದಿಸಲು ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ

ವಿದೇಶೀ ಹೂಡಿಕೆಗಳ ನಿರಂತರ ಹೊರಹರಿವು

ಎಫ್​ಐಐ ಅಥವಾ ವಿದೇಶೀ ಸಾಂಸ್ಥಿಕ ಹೂಡಿಕೆದಾರರು ಕಳೆದ ಆರೇಳು ತಿಂಗಳಿಂದ ಹೊರಬೀಳುತ್ತಿರುವ ಟ್ರೆಂಡ್ ಇದೆ. 2025ರ ಜುಲೈನಿಂದ ಡಿಸೆಂಬರ್​ವರೆಗೆ ಎಫ್​ಐಐಗಳ ಹೊರಹರಿವು ಬರೋಬ್ಬರಿ 1.85 ಲಕ್ಷ ಕೋಟಿ ರೂ. ಜನವರಿಯಲ್ಲಿ ಈಗಾಗಲೇ 12,000 ಕೋಟಿ ರೂ ವಿದೇಶೀ ಹೂಡಿಕೆಗಳು ಹೊರಹೋಗಿವೆ. ಅಂದರೆ, ಆರೇಳು ತಿಂಗಳಲ್ಲಿ ಬಹುತೇಕ 2 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳು ಷೇರು ಮಾರುಕಟ್ಟೆಯಿಂದ ಹೊರಹೋಗಿವೆ.

ಜಾಗತಿಕ ರಾಜಕೀಯ ಅನಿಶ್ಚಿತತೆ

ರಷ್ಯಾ ಉಕ್ರೇನ್ ಯುದ್ಧ, ಇಸ್ರೇಲ್ ಇರಾನ್ ಸಂಘರ್ಷದ ನಂತರ ಈಗ ಅಮೆರಿಕದ ಆಕ್ರಮಣಕಾರಿ ವರ್ತನೆ ವಿಶ್ವವನ್ನು ತಲ್ಲಣಗೊಳಿಸುತ್ತಿದೆ. ವೆನಿಜುವೆಲಾದ ಅಧ್ಯಕ್ಷರನ್ನು ಸೆರೆ ಹಿಡಿದು, ಆ ದೇಶದ ನಿಯಂತ್ರಣ ತೆಗೆದುಕೊಳ್ಳಲು ಯತ್ನಿಸಿದೆ ಟ್ರಂಪ್ ಸರ್ಕಾರ. ಇದರ ಬೆನ್ನಲ್ಲೇ ಗ್ರೀನ್ ಲ್ಯಾಂಡ್ ಅನ್ನು ವಶಪಡಿಸಿಕೊಳ್ಳಲು ಹೊರಟಿದೆ. ಇರಾನ್ ಮೇಲೂ ದಾಳಿ ನಡೆಸಲು ಯೋಜಿಸಿದೆ. ಇದು ಮಾರುಕಟ್ಟೆಯನ್ನು ಭಯಗೊಳಿಸಿರಬಹುದು.

ಇದನ್ನೂ ಓದಿ: ಶೇ 4.4ರ ವಿತ್ತೀಯ ಕೊರತೆ ಗುರಿ ಮುಟ್ಟುವುದು ಸರ್ಕಾರಕ್ಕೆ ಸಲೀಸು: ಏಜೆನ್ಸಿ ವರದಿ

ಈ ಜಾಗತಿಕ ರಾಜಕೀಯ ಅಭದ್ರ ಸ್ಥಿತಿ ಸಂದರ್ಭದಲ್ಲಿ ಹೂಡಿಕೆದಾರರು ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳ ಮೇಲೆ ಹೂಡಿಕೆ ಮಾಡುವುದುಂಟು. ಅಂತೆಯೇ, ಚಿನ್ನ, ಬೆಳ್ಳಿ ಬೆಲೆ ಸಿಕ್ಕಾಪಟ್ಟೆ ಏರಲು ಇದೇ ಪ್ರಮುಖ ಕಾರಣ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: ಇದು ವೃದ್ಧ ದಂಪತಿಯ ಶುದ್ಧ ಪ್ರೀತಿ; ಮಡದಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ವೃದ್ಧ ವ್ಯಕ್ತಿ – Kannada News | Elderly woman gets emotional after seeing surprise birthday gift from husband

ಪ್ರತಿಯೊಬ್ಬ ಹೆಣ್ಣು ತನ್ನ ಉಸಿರು ಇರುವ ತನಕ ತನ್ನ ಗಂಡ ತನ್ನನ್ನು ಕಣ್ಣರೆಪ್ಪೆಯ ಹಾಗೆ ನೋಡಿಕೊಳ್ಳಲಿ ಎಂದು ಬಯಸುತ್ತಾಳೆ. ಅಂತಹ ಜೀವನ ಸಂಗಾತಿ ಸಿಕ್ಕರೆ ಆಕೆಗಿಂತ ಅದೃಷ್ಟವಂತೆ ಬೇರೆ ಯಾರಿಲ್ಲ. ಆದರೆ ಈ ಹೃದಯಸ್ಪರ್ಶಿ ದೃಶ್ಯ ನೋಡಿದಾಗ ಈ ವೃದ್ಧ ದಂಪತಿಯೂ (Elderly couple) ಯುವ ಜೋಡಿಗಳಿಗೆ ಮಾದರಿ  ಎಂದೆನಿಸುತ್ತದೆ. ವಯಸ್ಸಾದ ವ್ಯಕ್ತಿ (Old man) ತನ್ನ ಪತ್ನಿಯನ್ನು ಸಂತೋಷವಾಗಿರಿಸುವ ಸಣ್ಣ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ವೃದ್ಧರೊಬ್ಬರು ತಮ್ಮ ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ್ದಾರೆ. ಭಾವುಕ ಕ್ಷಣದ ಈ ವಿಡಿಯೋ ವೈರಲ್ ಆಗಿದ್ದು, ಈ ದೃಶ್ಯವನ್ನು ನೆಟ್ಟಿಗರು ಕಣ್ತುಂಬಿಸಿಕೊಂಡಿದ್ದಾರೆ.

Little Letters Linked ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ವೃದ್ಧ ವ್ಯಕ್ತಿಯೊಬ್ಬರು ಮಡದಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡುತ್ತಿರುವುದನ್ನು ಕಾಣಬಹುದು. ವಯಸ್ಸಾದ ವ್ಯಕ್ತಿಯೂ ಪುಟ್ಟದಾದ ಕೇಕ್ ಮೇಲೆ ಕ್ಯಾಂಡಲ್ ಇಟ್ಟುಕೊಂಡು ಮೆಲ್ಲನೆ ನಡೆದುಕೊಂಡು ಬಂದು ಪತ್ನಿಯ ಮುಂದೆ ಇರಿಸುತ್ತಾರೆ. ಇದನ್ನು ನೋಡುತ್ತಿದ್ದಂತೆ ವೃದ್ಧೆಯ ಮುಖವು ಖುಷಿಯಲ್ಲಿ ಅರಳುತ್ತದೆ. ಕೈ ಮುಗಿದು ಕ್ಯಾಂಡಲ್ ಆರಿಸಿ ಕೇಕ್ ಕತ್ತರಿಸಿ ಪತಿಗೂ ಕೇಕ್ ತಿನ್ನಿಸುತ್ತಾರೆ. ಈ ವೇಳೆಯಲ್ಲಿ ತನ್ನ ಮಡದಿಗಾಗಿ ತನ್ನ ಸರ್ಪ್ರೈಸ್ ಉಡುಗೊರೆಯನ್ನು ನೀಡುತ್ತಾರೆ. ಪತಿ ನೀಡಿದ ಉಡುಗೊರೆ ಬಾಕ್ಸ್ ತೆರೆಯುತ್ತಿದ್ದಂತೆ ಮೇಕಪ್ ಕಿಟ್‌ ಎನ್ನುವುದು ವೃದ್ಧೆಗೆ ತಿಳಿಯುತ್ತದೆ. ಪತಿ ನೀಡಿದ ಉಡುಗೊರೆ ನೋಡಿ ವೃದ್ಧೆಯೂ ಖುಷಿಯಾಗಿದ್ದು ಮುಖದಲ್ಲೇ ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಮೊದಲ ಬಾರಿಗೆ ಕಡಲ ತೀರಕ್ಕೆ ಭೇಟಿ ನೀಡಿ ಸೌಂದರ್ಯ ಸವಿದ ವೃದ್ಧ ದಂಪತಿ

ಈ ವಿಡಿಯೋ ನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಆದರ್ಶ ದಂಪತಿಗಳು ಎಂದಿದ್ದಾರೆ. ಇನ್ನೊಬ್ಬರು, ಇಂತಹ ಮಾದರಿ ಜೋಡಿಗಳು ಕಾಣಸಿಗುವುದೇ ವಿರಳ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಮತ್ತೆ ಮತ್ತೆ ನೋಡಬೇಕೇನಿಸುವ ವಿಡಿಯೋ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:46 pm, Mon, 12 January 26

Source link

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​​ ಖರ್ಗೆ ಭೇಟಿಯಾಗಿದ್ದೇಕೆ ಡಿ.ಕೆ. ಶಿವಕುಮಾರ್​? – Kannada News | DCM DK Shivakumar Meets AICC President Mallikarjun Kharge Amidst Karnataka Political Speculation

ಬೆಂಗಳೂರು, ಜನವರಿ 12: ಡಿಸಿಎಂ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ದಿಢೀರ್ ಭೇಟಿಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮುಖ್ಯವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್​​ನ ನಾಯಕತ್ವ ಬದಲಾವಣೆ ಕುರಿತು ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ನವೆಂಬರ್, ಡಿಸೆಂಬರ್ ಮತ್ತು ಈಗ ಜನವರಿ ತಿಂಗಳಲ್ಲೂ ಈ ಚರ್ಚೆ ಮುಂದುವರಿದಿದೆ. ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರ ದಾಖಲೆಯನ್ನು ಮುರಿದ ನಂತರ ಏನಾದರೂ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆಗಳಿದ್ದವು. ಒಕ್ಕಲಿಗ ಸಮುದಾಯದ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಹೇಳಿಕೆಗಳು ಹಾಗೂ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿಯನ್ನು ಲೀಸ್ ಆಧಾರಿತ ಸಿಎಂ ಎಂದು ಟೀಕಿಸಿದ್ದು ಇಂತಹ ರಾಜಕೀಯ ಬೆಳವಣಿಗೆಗಳಿಗೆ ಮತ್ತಷ್ಟು ಇಂಬು ನೀಡಿದ್ದವು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ: ಡಾ.ಶೆಲ್ವಪಿಳೈ ಅಯ್ಯಂಗಾರ್ – Kannada News | What Happens When Gold Treasure is Found in Lakkundi? Dr. Shalvapillai Iyengar Explains Legalities

ಗದಗ, ಜ.12: ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಕುರಿತು ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್ ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಅವರು ಭಾರತದ ನಿಧಿ ಕಾನೂನುಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಒಂದು ವೇಳೆ ಖಾಸಗಿ ಸ್ಥಳದಲ್ಲಿ ಚಿನ್ನ ದೊರೆತರೆ ಮತ್ತು ಅದು 100 ವರ್ಷಕ್ಕಿಂತ ಹಳೆಯದಾಗಿದ್ದರೆ ಅಥವಾ ಪಾರಂಪರಿಕ ಮೌಲ್ಯವನ್ನು ಹೊಂದಿದ್ದರೆ, ಅದನ್ನು ಭಾರತ ಸರ್ಕಾರ ವಶಪಡಿಸಿಕೊಳ್ಳುತ್ತದೆ. ದೇಶದ ಸಂವಿಧಾನವು ಇತಿಹಾಸ ಮತ್ತು ಪರಂಪರೆಯನ್ನು ಉಳಿಸುವ ಕುರಿತು ವಿಧಿಗಳನ್ನು ಹೊಂದಿರುವುದರಿಂದ, ಇಂತಹ ಐತಿಹಾಸಿಕ ಮೌಲ್ಯದ ವಸ್ತುಗಳು ಸರ್ಕಾರಕ್ಕೆ ಸೇರುತ್ತವೆ. ಯಾವುದೇ ನಿಧಿಯನ್ನು ಪತ್ತೆ ಮಾಡಿದವರು ಪ್ರಾಮಾಣಿಕವಾಗಿ ಅದನ್ನು ಸರ್ಕಾರಕ್ಕೆ ಒಪ್ಪಿಸಿದರೆ, ಅದರ ಮೌಲ್ಯದ ಆಧಾರದ ಮೇಲೆ ಅವರಿಗೆ ಬಹುಮಾನ ನೀಡುವ ಅವಕಾಶ ಕಾನೂನಿನಲ್ಲಿ ಇದೆ. ಜಿಲ್ಲಾಧಿಕಾರಿಗಳು ಮೊದಲು ನೋಟಿಸ್ ಹೊರಡಿಸಿ, ಯಾರಿಗಾದರೂ ಮಾಲೀಕತ್ವದ ಹಕ್ಕುಗಳಿದ್ದರೆ ಅದನ್ನು ಸಾಬೀತುಪಡಿಸಲು ಅವಕಾಶ ನೀಡುತ್ತಾರೆ. ಆದರೆ, 100 ವರ್ಷಕ್ಕಿಂತ ಹಳೆಯದಾದ ನಿಧಿಗೆ ಮಾಲೀಕತ್ವ ಸಾಧಿಸುವುದು ಅಸಾಧ್ಯ. ಪುರಾತತ್ವಶಾಸ್ತ್ರಜ್ಞರು, ನಾಣ್ಯಶಾಸ್ತ್ರಜ್ಞರು ಮತ್ತು ಚಿನ್ನದ ಮೌಲ್ಯಮಾಪಕರು ಇದರ ಪ್ರಾಚೀನತೆ ಮತ್ತು ಮೌಲ್ಯವನ್ನು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್ – Kannada News | Bangalore Woman’s Incomplete Ejipura Flyover Magnet Sparks humor, X post goes viral

ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್

ಬೆಂಗಳೂರು, ಜನವರಿ 12: ಎಂಟು ವರ್ಷಗಳ ನಂತರವೂ ನಿರ್ಮಾಣ ಹಂತದಲ್ಲಿರುವ ಬೆಂಗಳೂರಿನ ಈಜಿಪುರ ಫ್ಲೈಓವರ್ ಕುರಿತ ಎಕ್ಸ್ ಪೋಸ್ಟ್ ಒಂದು ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ. ಬೆಂಗಳೂರಿನ ಮಹಿಳೆಯೊಬ್ಬರು ಅಪೂರ್ಣ ಫ್ಲೈಓವರ್ ಅನ್ನು ಚಿತ್ರಿಸುವ ಕಸ್ಟಮ್ ಫ್ರಿಡ್ಜ್ ಮ್ಯಾಗ್ನೆಟ್ ಅನ್ನು ಖರೀದಿಸಿದ್ದು, ಅದರ ಫೋಟೋವನ್ನು X ನಲ್ಲಿ ಹಂಚಿಕೊಂಡಿದ್ದಾರೆ.

ಮಹಿಳೆ ತಮ್ಮ ಎಕ್ಸ್ ಖಾತೆಯಲ್ಲಿ ಬಸವನಗುಡಿ ಮತ್ತು ಅರ್ಧಂಬರ್ಧ ನಿರ್ಮಾಣವಾದ ಈಜಿಪುರ ಫ್ಲೈಓವರ್​ನ ಕಸ್ಟಮ್ ಮ್ಯಾಗ್ನೆಟ್​ನ ಫೋಟೋವನ್ನು ಹಂಚಿಕೊಂಡಿರುವುದು ಸೋಶಿಯಲ್ ಮೀಡಿಯಾದಲ್ಲಿ ಹಾಸ್ಯದ ಅಲೆಯೆಬ್ಬಿಸದೆ. ನಾನು ಬಸವನಗುಡಿ , ಜಯನಗರ ಮತ್ತು ಬೆಂಗಳೂರು ಇವುಗಳ ನಡುವೆ ಯಾವ ಮ್ಯಾಗ್ನೆಟ್ ತೆಗೆದುಕೊಳ್ಳಲಿ ಎಂದು ಸ್ವಲ್ಪ ಯೋಚನೆ ಮಾಡಿ, ಕೊನೆಗೆ ಬಸವನಗುಡಿ ಎಂದು ನಿರ್ಧರಿಸಿದೆ ಎಂದು ಪೋಸ್ಟ್ ಮಾಡಿರುವ ಮಹಿಳೆ, ನನಗೂ ಈಜಿಪುರ ಫ್ಲೈಓವರ್‌ಗೂ ತುಂಬಾ ಹತ್ತಿರದ ಸಂಬಂಧವಿದೆ. ಹಾಗಾಗಿ ಈ ಮ್ಯಾಗ್ನೇಟ್ ಮಾಡಿಸಬೇಕಾಯಿತು ಎಂದು ಹಾಸ್ಯಭರಿತವಾಗಿ ಬರೆದುಕೊಂಡಿದ್ದಾರೆ.

ಮಹಿಳೆಯ ಎಕ್ಸ್ ಪೋಸ್​ಟ್ನಲ್ಲೇನಿದೆ?

ಆಕೆಯ ಪೋಸ್ಟ್​ಗೆ ಕಾಮೆಂಟ್​ಗಳ ಸುರಿಮಳೆಯೇ ಸುರಿದಿದ್ದು, ಕೆಲವರು ‘ಈಜಿಪುರ ಅಪೂರ್ಣ ಫ್ಲೈಓವರ್ ಅನ್ನು ರಕ್ಷಿಸಬೇಕಾಗಿದೆ. ಅದು ಬೆಂಗಳೂರಿನ ನಿಧಿ’ ಎಂದು ಬರೆದರೆ, ಇನ್ನೂ ಕೆಲವರು ‘ಒಂದು ದಿನ ಜನರು ಹಂಪಿಗೆ ಭೇಟಿ ನೀಡುವಂತೆಯೇ ಈಜಿಪುರವನ್ನು ನೋಡಲು ಬರುತ್ತಾರೆ’ ಎಂದು ತಮಾಷೆ ಮಾಡಿದ್ದಾರೆ. ಒಬ್ಬರಂತೂ ಈಜಿಪುರ ಮ್ಯಾಗ್ನೆಟ್‌ನಲ್ಲಿರುವ ಗುಂಡಿಗಳ ವಿವರವನ್ನೂ ಹೊಗಳಿದ್ದಾರೆ.

ಎರಡೇ ವರ್ಷಗಳಲ್ಲಿ ಪೂರ್ಣಗೊಳ್ಳಬೇಕಿದ್ದ ಯೋಜನೆ

ಬೆಂಗಳೂರಿನಲ್ಲಿರುವ ಈಜಿಪುರ ಮೇಲ್ಸೇತುವೆಯು ಈಜಿಪುರ ಮುಖ್ಯ ರಸ್ತೆಯ ಉದ್ದಕ್ಕೂ ಇರುವ ಎತ್ತರದ ಕಾರಿಡಾರ್ ಆಗಿದ್ದು, ಇನ್ನರ್ ರಿಂಗ್ ರಸ್ತೆ, ಕೋರಮಂಗಲ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಡುವಿನ ಸಂಚಾರವನ್ನು ಸುಗಮಗೊಳಿಸುವ ಉದ್ದೇಶವನ್ನು ಹೊಂದಿದೆ. ನಗರದ ಅತ್ಯಂತ ಜನನಿಬಿಡ ಜಂಕ್ಷನ್‌ಗಳಲ್ಲಿ ಸಿಗ್ನಲ್-ಮುಕ್ತ ಮಾರ್ಗವಾಗಿ ಯೋಜಿಸಲಾಗಿದ್ದು, ಇದು ದಟ್ಟಣೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ಭಾವಿಸಲಾಗಿತ್ತು.

ಬದಲಾಗಿ, ಇದು ಬೆಂಗಳೂರಿನಲ್ಲೇ ಅತ್ಯಂತ ವಿಳಂಬವಾದ ಯೋಜನೆಯಾಗಿ ಮಾರ್ಪಟ್ಟಿದೆ. 2017 ರಲ್ಲಿ ಇದರ ನಿರ್ಮಾಣ ಪ್ರಾರಂಭವಾಗಿತ್ತು. ಆರಂಭದಲ್ಲಿ ಈ ಯೋಜನೆಯು ಒಂದೆರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿತ್ತು. ಆದರೆ ಈ ನಿರೀಕ್ಷೆಗಳ ಮೇಲೆ ತಣ್ಣೀರು ಬಿದ್ದಿರುವುದು ಬೆಂಗಳೂರಿಗರ ಬೇಸರಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ! – Kannada News | Mangaluru: A fatal attack on a laborer accused of being a Bangladeshi citizen! FIR Filed Against Four Youths

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಮಂಗಳೂರು, ಜನವರಿ 12: ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ.

ದಾಖಲೆ ತೋರಿಸುವಂತೆ ಒತ್ತಾಯ

ದಿಲ್ಶಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವರ್ಷಕ್ಕೆ 4–5 ತಿಂಗಳುಗಳ ಕಾಲ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಕಾವೂರಿನ ಬಳಿ ಸ್ಥಳೀಯರಾದ ಸಾಗರ್, ಧನುಷ್, ಲಾಲು ಅಲಿಯಾಸ್ ರತೀಶ್ ಹಾಗೂ ಮೋಹನ್ ಎಂಬ ನಾಲ್ವರು ಯುವಕರು ದಿಲ್ಶಾನ್​ನನ್ನು ತಡೆದು ನಿಲ್ಲಿಸಿ, ತಾನು ಭಾರತೀಯ ಪ್ರಜೆ ಎಂಬುದಕ್ಕೆ ದಾಖಲೆ ತೋರಿಸುವಂತೆ ಒತ್ತಾಯಿಸಿದ್ದಾರೆ. ದಿಲ್ಶಾನ್ ತಕ್ಷಣ ದಾಖಲೆ ತೋರಿಸದ ಹಿನ್ನೆಲೆಯಲ್ಲಿ ಆರೋಪಿಗಳು ಆತನ ಮೇಲೆ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಪರಿಣಾಮವಾಗಿ ದಿಲ್ಶಾನ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ರಕ್ತಸ್ರಾವ ಉಂಟಾಗಿದೆ.

ನಾಲ್ವರ ವಿರುದ್ಧ FIR

ಹಲ್ಲೆಯ ವೇಳೆ ಸ್ಥಳದಲ್ಲಿದ್ದ ಒಬ್ಬ ಹಿಂದು ಮಹಿಳೆ ಮಧ್ಯ ಪ್ರವೇಶಿಸಿ ದಿಲ್ಶಾನ್ ಅವರನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯ ಬಳಿಕ ದಿಲ್ಶಾನ್ ಮನೆಗೆ ತೆರಳಿದ್ದು, ನಂತರ ಕಾವೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ನಾಲ್ವರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಘಟನೆ ಕುರಿತು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?, ಗ್ರಾಮಸ್ಥರಲ್ಲಿ ಗೊಂದಲ – Kannada News | Lakkundi Gold Discovery Sparks Confusion: Villagers Demand Clarity from District Collector

ಗದಗ, ಜನವರಿ 12: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನ ಪತ್ತೆಯಾದ ಪ್ರಕರಣದಲ್ಲಿ ಹಲವು ಗೊಂದಲಗಳು ಉಂಟಾಗಿವೆ. ಮನೆ ನಿರ್ಮಾಣದ ಅಡಿಪಾಯದ ಕೆಲಸದ ವೇಳೆ ಸುಮಾರು 1 ಕೆ.ಜಿ. ಚಿನ್ನ ಪತ್ತೆಯಾದ ಬಳಿಕ, ಪುರಾತತ್ವ ಇಲಾಖೆಯ ಅಧಿಕಾರಿಗಳು ಇದು ನಿಧಿ ಅಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಇದು ನಿಧಿ ಅಲ್ಲದಿದ್ದರೆ ನಮ್ಮ ಬಂಗಾರ ನಮಗೆ ವಾಪಸ್ ಕೊಡಿ ಎಂದು ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಈ ವಿಷಯ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರೂ ಜಿಲ್ಲಾಡಳಿತ, ವಿಶೇಷವಾಗಿ ಗದಗ ಜಿಲ್ಲಾಧಿಕಾರಿಗಳು ಈವರೆಗೂ ಗ್ರಾಮಕ್ಕೆ ಭೇಟಿ ನೀಡಿಲ್ಲ ಅಥವಾ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಇದು ನಿಧಿಯೋ ಅಥವಾ ಪೂರ್ವಜರ ಆಸ್ತಿಯೋ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

PSLV-C62: 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ – Kannada News | ISRO PSLV C62 Launch: Anomaly Detected in Third Stage, Data Analysis Underway

ಶ್ರೀಹರಿಕೋಟ, ಜನವರಿ 12: ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇಸ್ರೋದ ಮಹತ್ವಾಕಾಂಕ್ಷೆಯ ಪಿಎಸ್‌ಎಲ್‌ವಿ ಸಿ-62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರಾಕೆಟ್ ಪಥ ಬದಲಾಯಿಸಿದೆ.

16 ಉಪಗ್ರಹಗಳನ್ನು ಹೊತ್ತೊಯ್ದಿದ್ದ ಈ ರಾಕೆಟ್‌ನ ದತ್ತಾಂಶವನ್ನು ಇಸ್ರೋ ವಿಶ್ಲೇಷಿಸುತ್ತಿದೆ. ಡಿಆರ್​ಡಿಒ ನಿರ್ಮಿತ ಅನ್ವೇಷ ಉಪಗ್ರಹ ಸೇರಿದಂತೆ ಈ ವರ್ಷದ ಇಸ್ರೋದ ಮೊದಲ ಉಡಾವಣೆ ಇದಾಗಿದೆ. ಬೆಳಗ್ಗೆ 10:17ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಗೊಂಡ ಈ ರಾಕೆಟ್ 16 ಉಪಗ್ರಹಗಳನ್ನು ಹೊತ್ತೊಯ್ಯುತ್ತಿತ್ತು. ಡಿಆರ್‌ಡಿಒ ನಿರ್ಮಿತ ಅನ್ವೇಷ ಹೆಸರಿನ ಭೂ ವೀಕ್ಷಣಾ ಉಪಗ್ರಹ (EOS-N) ಮತ್ತು ವಿವಿಧ ದೇಶಗಳಿಗೆ ಸೇರಿದ ಒಟ್ಟು 15 ಉಪಗ್ರಹಗಳು ಈ ರಾಕೆಟ್‌ನಲ್ಲಿ ಅಂತರಿಕ್ಷಕ್ಕೆ ಸೇರ್ಪಡೆಯಾಗಬೇಕಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version